Homeಕರ್ನಾಟಕಗೋಹತ್ಯೆ ಮಸೂದೆಗೆ ಸುಗ್ರೀವಾಜ್ಞೆ: ರಾಜ್ಯ ಸರ್ಕಾರಕ್ಕೆ ನೋಟಿಸ್ ನೀಡಿದ ಹೈಕೋರ್ಟ್

ಗೋಹತ್ಯೆ ಮಸೂದೆಗೆ ಸುಗ್ರೀವಾಜ್ಞೆ: ರಾಜ್ಯ ಸರ್ಕಾರಕ್ಕೆ ನೋಟಿಸ್ ನೀಡಿದ ಹೈಕೋರ್ಟ್

- Advertisement -
- Advertisement -

ಗೋಹತ್ಯೆ ನಿಷೇಧ ಕಾಯ್ದೆಗೆ ಸುಗ್ರೀವಾಜ್ಞೆ ಹೊರಡಿಸಿರುವ ರಾಜ್ಯ ಸರ್ಕಾರದ ನಿರ್ಧಾರವನ್ನು ಪ್ರಶ್ನಿಸಿ ಹೈಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಲಾಗಿದ್ದು, ರಾಜ್ಯ ಸರ್ಕಾರಕ್ಕೆ ನೋಟಿಸ್ ನೀಡಲಾಗಿದೆ.

ಬೆಂಗಳೂರಿನ ಪಿಲ್ಲಣ್ಣ ಗಾರ್ಡನ್ ನಿವಾಸಿ ಮೊಹಮ್ಮದ್ ಆರಿಫ್ ಜಮೀಲ್ ಸಲ್ಲಿಸಿದ್ದ ಅರ್ಜಿಯನ್ನು ಆಲಿಸಿದ ನಂತರ, ಮುಖ್ಯ ನ್ಯಾಯಮೂರ್ತಿ ಅಭಯ್ ಶ್ರೀನಿವಾಸ್ ಒಕಾ ಮತ್ತು ನ್ಯಾಯಮೂರ್ತಿ ಸಚಿನ್ ಶಂಕರ್ ಮಗದಮ್ ಅವರ ವಿಭಾಗೀಯ ಪೀಠವು ರಾಜ್ಯ ಸರ್ಕಾರಕ್ಕೆ ನೋಟಿಸ್ ನೀಡಿದೆ.

ಇದನ್ನೂ ಓದಿ: ಗೋಹತ್ಯೆ ನಿಷೇಧ ಕಾಯ್ದೆ: ವ್ಯಕ್ತಿ ಮೇಲೆ ಮಾರಣಾಂತಿಕ ಹಲ್ಲೆ – ಶೃಂಗೇರಿಯಲ್ಲಿ ದಾಖಲಾದ ಮೊದಲ ಪ್ರಕರಣವೆ ಸುಳ್ಳು?

ಈ ಸುಗ್ರೀವಾಜ್ಞೆಯ ನಿಬಂಧನೆಗಳು, ಭಾರತದ ಸಂವಿಧಾನದ 21 ನೇ ಪರಿಚ್ಚೇದದ ಅಡಿಯಲ್ಲಿ ಜೀವನೋಪಾಯದ ಹಕ್ಕಿನ ಉಲ್ಲಂಘನೆ, ವ್ಯಾಪಾರ ಅಥವಾ ವ್ಯವಹಾರದ ಹಕ್ಕಿನ ಉಲ್ಲಂಘನೆ ಮತ್ತು ಸಂವಿಧಾನದ ಆರ್ಟಿಕಲ್ 19 (ಜಿ) ಪ್ರಕಾರ ಮೂಲಭೂತ ಹಕ್ಕಿನ ಉಲ್ಲಂಘನೆಯಾಗಿದೆ ಎಂದೂ ವಾದಿಸಿದ್ದಾರೆ.

ದೇಶದಲ್ಲಿ ಪ್ರಾಣಿಗಳ ವಧೆಯನ್ನು ನಿಷೇಧಿಸುವುದರಿಂದ ಕಸಾಯಿಖಾನೆಯಲ್ಲಿರುವವರ ಉದ್ಯೋಗ ಮತ್ತು ಅವರ ವ್ಯಾಪಾರದ ಮೇಲೆ ನೇರವಾಗಿ ಪರಿಣಾಮ ಬೀರುತ್ತದೆ. ನಾಗರಿಕರು ತಮ್ಮ ಆಯ್ಕೆಯ ಆಹಾರ ಪಡೆದುಕೊಳ್ಳುವುದರಿಂದ ವಂಚಿತರಾಗುತ್ತಾರೆ ಎಂದು ಅರ್ಜಿದಾರರು ಆತಂಕ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: ಗೋಹತ್ಯೆ ನಿಷೇಧ: ವಯಸ್ಸಾದ ದನಗಳನ್ನು ಸರ್ಕಾರವೇ ಖರೀದಿಸಲಿ – ಸಿದ್ದರಾಮಯ್ಯ ಸಲಹೆ

ರಾಜ್ಯದಾದ್ಯಂತ ಭಾರಿ ವಿವಾದವೆಬ್ಬಿಸಿದ್ದ “ಕರ್ನಾಟಕ ಜಾನುವಾರು ಹತ್ಯೆ ಪ್ರತಿಬಂಧಕ ಮತ್ತು ಸಂರಕ್ಷಣಾ ವಿಧೇಯಕ-2020” (ಗೋಹತ್ಯೆ ನಿಷೇಧ ಮಸೂದೆ)ಗೆ ಸುಗ್ರೀವಾಜ್ಞೆ ಹೊರಡಿಸಿ ಜಾರಿಗೆ ತರಲಾಗಿದೆ.

ಇತ್ತೀಚೆಗಷ್ಟೇ ವಿಧಾನಸಭೆಯಲ್ಲಿ ಪ್ರಸ್ತುತ ಮಸೂದೆ ಅಂಗೀಕಾರವಾಗಿದ್ದರೂ, ವಿಧಾನ ಪರಿಷತ್ತಿನಲ್ಲಿ ಅದಕ್ಕೆ ತಡೆಯಾಗಿತ್ತು. ಮಸೂದೆ ಜಾರಿಗೊಳಿಸುವ ನಿಟ್ಟಿನಲ್ಲಿ ವಿಧಾನ ಮಂಡಲ ಜಂಟಿ ಅಧಿವೇಶನಕ್ಕೆ ದಿನಾಂಕ ನಿಗದಿಯಾಗದ ಕಾರಣ ಸುಗ್ರೀವಾಜ್ಞೆ ಮೂಲಕ ಕಾನೂನು ಜಾರಿಗೆ ಸಚಿವ ಸಂಪುಟ ಅನುಮೋದನೆ ನೀಡಿತ್ತು.

ಇದನ್ನೂ ಓದಿ: ಗೋಹತ್ಯೆ ನಿಷೇಧ ಮಸೂದೆ: ಆತಂಕ ವ್ಯಕ್ತಪಡಿಸಿದ ಮೃಗಾಲಯದ ಅಧಿಕಾರಿಗಳು!

ಕಾನೂನು ಸಚಿವ ಜೆ ಸಿ ಮಾಧುಸ್ವಾಮಿ, “ರಾಜ್ಯದಲ್ಲಿ ಜಾನುವಾರು ಹತ್ಯೆ ಪ್ರತಿಬಂಧಕ ಮತ್ತು ಸಂರಕ್ಷಣೆಗೆ ಸಂಬಂಧಿಸಿದಂತೆ 1964ರ ಕಾಯ್ದೆಯಲ್ಲಿ ಲೋಪಗಳಿದ್ದ ಹಿನ್ನೆಲೆ, ಕೆಲ ತಿದ್ದುಪಡಿ ಮಾಡಲಾಗಿದೆ. 1964 ರ ಕಾಯ್ದೆಯನ್ವಯ 12 ವರ್ಷಕ್ಕಿಂತ ಹೆಚ್ಚು ವಯಸ್ಸಾದ ಹಸು, ಎಮ್ಮೆ, ಕೋಣಗಳನ್ನು ಮಾಂಸಕ್ಕಾಗಿ ವಧಿಸಲು ಅವಕಾಶವಿತ್ತು. ಈಗಿನ ತಿದ್ದುಪಡಿ ಮಸೂದೆಯ ಪ್ರಕಾರ, ಹಸು ಮತ್ತು ಎತ್ತುಗಳನ್ನು ಜೀವಿತಾವಧಿಯವರೆಗೂ ವಧಿಸಲು ನಿರ್ಬಂಧ ಹೇರಲಾಗಿದೆ. ಎಮ್ಮೆ ಮತ್ತು ಕೋಣಗಳನ್ನು 13 ವರ್ಷದ ಬಳಿಕ ವಧಿಸಲು ಅವಕಾಶ ನೀಡಲಾಗುತ್ತದೆ. ದನದ ಮಾಂಸ ತಿನ್ನುವುದಕ್ಕೆ ನಾವು ಯಾವುದೇ ನಿಷೇಧವನ್ನು ಹೇರುವುದಿಲ್ಲ” ಎಂದು ಸ್ಪಷ್ಟಪಡಿಸಿದ್ದರು.

“1964 ರ ಕಾಯ್ದೆಯಲ್ಲಿ ಜಾನುವಾರುಗಳ ಹತ್ಯೆ ಮತ್ತು ಸಂರಕ್ಷಣೆಗೆ ಸಂಬಂಧಿಸಿದಂತೆ ಶಿಕ್ಷೆಗೆ ಅವಕಾಶವಿರಲಿಲ್ಲ. ಇದೀಗ ಜಾನುವಾರು ಹತ್ಯೆಗೈದರೆ ಶಿಕ್ಷೆ ಹಾಗೂ ದಂಡ ವಿಧಿಸುವ ಅಧಿಕಾರವನ್ನು ತಹಶೀಲ್ದಾರ್ ಮತ್ತು ಸಂಬಂಧಪಟ್ಟ ಪೊಲೀಸರಿಗೆ ನೀಡಲಾಗಿದೆ. ಹಳೆಯ ಕಾನೂನು ಬಿಗಿಯಾಗಿರಲಿಲ್ಲ. ಈಗಿನ ಕಾಯ್ದೆಯಲ್ಲಿ ಅಕ್ರಮವಾಗಿ ಹಸುಗಳನ್ನು ಸಾಗಾಟ ಮಾಡಿದರೆ ಅದನ್ನು ವಶಕ್ಕೆ ಪಡೆಯಲಾಗುವುದು. ಅಲ್ಲದೆ, ವಾಹನವನ್ನು ಬ್ಯಾಂಕ್ ಗ್ಯಾರಂಟಿ ಮೂಲಕ ಹಿಂಪಡೆಯಬಹುದು” ಎಂದು ಮಾಧುಸ್ವಾಮಿ ತಿಳಿಸಿದ್ದರು.


ಇದನ್ನೂ ಓದಿ: ಗೋಹತ್ಯೆ ನಿಷೇಧ ಕಾಯ್ದೆ ದುರ್ಬಳಕೆ ಎಂದ ಹೈಕೋರ್ಟ್: ಮ‌ತ್ತೊಮ್ಮೆ ಗೋಹತ್ಯೆಗೆ ಜೈಲುಶಿಕ್ಷೆ ಎಂದ ಯೋಗಿ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಉತ್ತರ ಪ್ರದೇಶ| ರಸ್ತೆ ಗುಂಡಿಗೆ ಇಳಿದ ಆಂಬ್ಯುಲೆನ್ಸ್; ಮರುಜೀವ ಪಡೆದ ಮೆದುಳು ನಿಷ್ಕ್ರಿಯಗೊಂಡಿದ್ದ ಮಹಿಳೆ!

ಉತ್ತರ ಪ್ರದೇಶದ ಬರೇಲಿಯ ಖಾಸಗಿ ಆಸ್ಪತ್ರೆಯೊಂದರ ವೈದ್ಯರು ಮೆದುಳು ನಿಷ್ಕ್ರಿಯ ಎಂದು ಘೋಷಿಸಿದ್ದು, ಮಹಿಳೆಯೊಬ್ಬರ ಮೃತದೇಹವನ್ನು ಅಂತ್ಯಕ್ರಿಯೆಗಾಗಿ ಮನೆಗೆ ಸಾಗಿಸುತ್ತಿದ್ದಾಗ ಆಂಬ್ಯುಲೆನ್ಸ್ ರಸ್ತೆಯ ಗುಂಡಿಗೆ ಇಳಿದ ನಂತರ ಆಕೆ ಜೀವಂತವಾಗಿರುವ ಲಕ್ಷಣಗಳು ಕಂಡುಬಂದು...

ಪಶ್ಚಿಮ ಏಷ್ಯಾ ಸಂಘರ್ಷ: ದುಬೈ ವಿಮಾನ ನಿಲ್ದಾಣದ ಮೇಲೆ ಇರಾನ್​ ಡ್ರೋನ್​ ದಾಳಿ; ಭಾರತೀಯ ಪ್ರಜೆ ಸೇರಿ ನಾಲ್ವರಿಗೆ ಗಾಯ

ದುಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಇರಾನಿನ ಎರಡು ಡ್ರೋಣಗಳಿಂದ ದಾಳಿ ನಡೆದಿದೆ. ಈ ದಾಳಿಯಲ್ಲಿ ಓರ್ವ ಭಾರತೀಯ ಸೇರಿದಂತೆ ನಾಲ್ವರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಲ್ಲಿನ ಸರ್ಕಾರದ ಪರವಾಗಿ ಪ್ರಕಟಣೆ ಹೊರಡಿಸಿರುವ...

ಜಾರ್ಖಂಡ್| ಆಂಬ್ಯುಲೆನ್ಸ್ ನಿರಾಕರಿಸಿದ ಆಸ್ಪತ್ರೆ ಸಿಬ್ಬಂದಿ; ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿದ ತಂದೆ

ಆಸ್ಪತ್ರೆ ಸಿಬ್ಬಂದಿ ಆಂಬ್ಯುಲೆನ್ಸ್ ನಿರಾಕರಿಸಿದ್ದರಿಂದ ಕೂಲಿಕಾರ ತಂದೆಯೊಬ್ಬ ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿರುವ ಹೃದಯವಿದ್ರಾವಕ ಘಟನೆಯೊಂದು ಜಾರ್ಖಂಡ್‌ನ ಪಶ್ಚಿಮ ಸಿಂಗ್ಭೂಮ್ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ಕಳೆದ ಶನಿವಾರ ನಡೆದಿದೆ ಎನ್ನಲಾದ...

ಮಧುರಾಂತಕಂ ಬಳಿ 14 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ: ಪೋಕ್ಸೋ ಪ್ರಕರಣದಡಿ ಓರ್ವ ರೌಡಿ ಶೀಟರ್ ಬಂಧನ

ಚೆನ್ನೈ (ಚೆಂಗಲ್ಪಟ್ಟು): ಸೋಮವಾರ ರಾತ್ರಿ ಮಧುರಾಂಟಕಂ ಬಳಿಯ ಜಲಮೂಲದ ದಡದಲ್ಲಿ 14 ವರ್ಷದ ಬಾಲಕಿಯ ಮೇಲೆ ರೌಡಿ ಶೀಟರ್ ಮತ್ತು ಆತನ ಸಹಚರರು ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ವರದಿಯಾಗಿದೆ. ಪ್ರಕರಣ ಸಂಬಂಧ ಪೋಕ್ಸೋ...

ಮುಸ್ಲಿಂ ಮಹಿಳೆಯರ ವಿರುದ್ಧದ ಷರಿಯಾ ಕಾನೂನಿಗೆ ಏಕರೂಪ ನಾಗರಿಕ ಸಂಹಿತೆ ಪರಿಹಾರ: ಸುಪ್ರೀಂ ಕೋರ್ಟ್

"ಮುಸ್ಲಿಂ ವೈಯಕ್ತಿಕ ಕಾನೂನಿನಡಿಯಲ್ಲಿ ತಾರತಮ್ಯದ ಆನುವಂಶಿಕ ನಿಬಂಧನೆಗಳನ್ನು ಪರಿಹರಿಸಲು ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಅತ್ಯಂತ ಪರಿಣಾಮಕಾರಿ ಪರಿಹಾರ ಎಂದು ಸುಪ್ರೀಂ ಕೋರ್ಟ್ ಮಂಗಳವಾರ (ಮಾ.20) ಹೇಳಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯ...

ಮುಂಬೈ: ಬಜೆಟ್ ಅಧಿವೇಶನದ ನಡುವೆ ವಿಧಾನ ಭವನದ ಬಳಿ ವ್ಯಕ್ತಿಯೊಬ್ಬನಿಂದ ಆತ್ಮಹತ್ಯೆಗೆ ಯತ್ನ: ವಶಕ್ಕೆ ಪಡೆದ ಪೊಲೀಸರು

ಮುಂಬೈ: ಮಾರ್ಚ್ 11, ಬುಧವಾರ ಮಹಾರಾಷ್ಟ್ರ ವಿಧಾನ ಭವನದ ಹೊರಗೆ ವ್ಯಕ್ತಿಯೊಬ್ಬರು ಆತ್ಮಾಹುತಿ ಮಾಡಿಕೊಳ್ಳಲು ಯತ್ನಿಸಿರುವುದಾಗಿ ವರದಿಯಾಗಿದೆ. ತಕ್ಷಣವೇ ಮುಂಬೈ ಪೊಲೀಸರು ಆತನನ್ನು ಬಂಧಿಸಿದ್ದಾರೆ.  2026 ರ ಮಹಾರಾಷ್ಟ್ರ ಬಜೆಟ್ ಅಧಿವೇಶನ ವಿಧಾನ ಭವನದಲ್ಲಿ...

ಕೋವಿಡ್ ಲಸಿಕೆ ಕೆಲ ಸಾವುಗಳಿಗೆ ಕಾರಣವಾಗಿದೆ ಎಂದು ಅಧಿಕೃತ ದತ್ತಾಂಶ ತೋರಿಸಿದೆ, ಸರ್ಕಾರ ಜವಾಬ್ದಾರಿಯಿಂದ ನುಣುಚಿಕೊಳ್ಳಲು ಸಾಧ್ಯವಿಲ್ಲ : ಸುಪ್ರೀಂ ಕೋರ್ಟ್

ಸರ್ಕಾರದ ಅಧೀನದ ಸಾರ್ವಜನಿಕ ಆರೋಗ್ಯ ವ್ಯವಸ್ಥೆಯ ಮೂಲಕ ಕೋವಿಡ್ ಲಸಿಕೆಯನ್ನು ವಿತರಿಸಲಾಗಿದೆ. ಕೋವಿಡ್ ಲಸಿಕೆ ಪಡೆದ ಬಳಿಕ ಕೆಲ ಸಾವುಗಳು ಸಂಭವಿಸಿರುವುದನ್ನು ಅಧಿಕೃತ ದತ್ತಾಂಶಗಳೇ ದೃಢಪಡಿಸಿವೆ. ಹೀಗಿರುವಾಗ, ಲಸಿಕೆ ಹಾಕಿಸಿಕೊಂಡ ನಂತರ ಸಾವು...

ತಮಿಳುನಾಡು| ಪೊಲೀಸ್ ದೌರ್ಜನ್ಯದಿಂದ ಎರಡು ತಿಂಗಳಲ್ಲಿ ನಾಲ್ವರು ದಲಿತರು ಸಾವು

ವಿಧಾನಸಭೆ ಚುನಾವಣೆ ಹೊಸ್ತಿಲಲ್ಲಿರುವ ತಮಿಳುನಾಡಿನಲ್ಲಿ ಕಾನೂನು ಸುವ್ಯವಸ್ಥೆ ಹದಗೆಡುತ್ತಿರುವುದನ್ನು ಪ್ರತಿಬಿಂಬಿಸುವ ಆತಂಕಕಾರಿ ವಿಚಾರವೊಂದು ಮುನ್ನಲೆಗೆ ಬಂದಿದ್ದು, ಪೊಲೀಸ್ ಹಿಂಸಾಚಾರದಿಂದಾಗಿ ಎರಡು ತಿಂಗಳ ಅವಧಿಯಲ್ಲಿ ನಾಲ್ವರು ದಲಿತರು ಸಾವನ್ನಪ್ಪಿದ್ದಾರೆ. ಈ ಸಾವುಗಳಲ್ಲಿ, ಎರಡು ಪ್ರಕರಣಗಳನ್ನು...

ಪಶ್ಚಿಮ ಏಷ್ಯಾ ಸಂಘರ್ಷ| ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿದ್ದಾಗಿ ವಿಡಿಯೋ ಹಂಚಿಕೊಂಡ ಅಮೆರಿಕ ಸೇನೆ

ಪಶ್ಚಿಮ ಏಷ್ಯಾದಿಂದ ತೈಲ ರಫ್ತನ್ನು ತಡೆಯಲು ಇರಾನ್ ಪ್ರಯತ್ನಿಸುತ್ತಿರುವುದರಿಂದ ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿರುವುದಾಗಿ ಅಮೆರಿಕ ಸೇನೆ ಹೇಳಿಕೊಂಡಿದೆ.  ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಈ ಹಿಂದೆ ಇರಾನ್ ಜಲಸಂಧಿಯಲ್ಲಿ ಗಣಿಗಳನ್ನು...

13 ವರ್ಷಗಳಿಂದ ಕೋಮಾದಲ್ಲಿರುವ ಯುವಕನ ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಅನುಮತಿ

ಕಳೆದ 13 ವರ್ಷಗಳಿಂದ ಕೋಮಾದಲ್ಲಿರುವ 32 ವರ್ಷದ ಹರೀಶ್ ರಾಣಾ ಎಂಬ ಯುವಕನ ಪರೋಕ್ಷ (ನಿಷ್ಕ್ರಿಯ) ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಬುಧವಾರ (ಮಾ.11) ಅನುಮತಿ ನೀಡಿದೆ ಎಂದು livelaw.in ವರದಿ ಮಾಡಿದೆ. ದೆಹಲಿ ಮೂಲದ ಹರೀಶ್...