Homeಮುಖಪುಟಗೋ ಕಳ್ಳಸಾಗಣೆ ಆರೋಪ: ಎರಡು ವಾರಗಳ ಹಿಂದೆ ಹಲ್ಲೆಗೊಳಗಾಗಿದ್ದ ಜುನೈದ್ ಸಾವು

ಗೋ ಕಳ್ಳಸಾಗಣೆ ಆರೋಪ: ಎರಡು ವಾರಗಳ ಹಿಂದೆ ಹಲ್ಲೆಗೊಳಗಾಗಿದ್ದ ಜುನೈದ್ ಸಾವು

- Advertisement -
- Advertisement -

ಭೋಪಾಲ್: ಸುಮಾರು ಎರಡು ವಾರಗಳ ಹಿಂದೆ ಗೋ ಕಳ್ಳಸಾಗಣೆ ಆರೋಪದಡಿ ಗೋ ರಕ್ಷಕರಿಂದ ಮಾರಣಾಂತಿಕವಾಗಿ ಹಲ್ಲೆಗೊಳಗಾಗಿದ್ದ ಜುನೈದ್ ಶಹಜಾದ್ (21) ಮಂಗಳವಾರ ಸಾವನ್ನಪ್ಪಿದ್ದಾನೆ.  ಇದೇ ಸಂದರ್ಭದಲ್ಲಿ ಹಲ್ಲೆಗೊಳಗಾಗಿದ್ದ ಅರ್ಮಾನ್ ಕೂಡ ಭೋಪಾಲ್‌ನ ಹಮೀದಿಯಾ ಆಸ್ಪತ್ರೆಯಲ್ಲಿ ಜೀವನ್ಮರಣ ಹೋರಾಟ ನಡೆಸುತ್ತಿದ್ದಾನೆ.

ಇದೇ ಜೂನ್ 5ರಂದು ಜುನೈದ್ ಮತ್ತು ಅರ್ಮಾನ್ ಅವರು ರಾಯ್ಸೇನ್ ಜಿಲ್ಲೆಯ ಸਾਂಚಿಯ ಮೆಹ್‌ಗಾವ್ ಗ್ರಾಮದ ಬಳಿ ಗೋ ಕಳ್ಳಸಾಗಣೆ ಆರೋಪದಡಿ ಗೋ ರಕ್ಷಕರಿಗೆ ಸಿಕ್ಕಿಬಿದ್ದಿದ್ದರು. ಆಗ ಇವರಿಂದ ಥಳಿಸಲ್ಪಟ್ಟರು ಎಂದು ರಾಯ್ಸೇನ್ ಪೊಲೀಸ್ ವರಿಷ್ಠಾಧಿಕಾರಿ ಪಂಕಜ್ ಪಾಂಡೆ ಹೇಳಿದ್ದಾರೆ.

ನಾವು ಜುನೈದ್ ಮತ್ತು ಹಮೀದಿಯಾ ವಿರುದ್ಧ ಗೋ ಕಳ್ಳಸಾಗಣೆ ಪ್ರಕರಣ ದಾಖಲಿಸಿದ್ದೇವೆ. ಹಾಗೆಯೇ ಇವರನ್ನು ಥಳಿಸಿದ ಮೂರು ವ್ಯಕ್ತಿಗಳ ವಿರುದ್ಧ ಜೂನ್ 9ರಂದು ಕೊಲೆ ಯತ್ನ ಪ್ರಕರಣ ದಾಖಲಿಸಿದ್ದೇವೆ. ಇದುವರೆಗಿನ ನಮ್ಮ ತನಿಖೆಯಲ್ಲಿ ಬಂಧಿತ ಮೂವರು ಬಜರಂಗದಳದೊಂದಿಗೆ ಯಾವುದೇ ಸಂಬಂಧ ಹೊಂದಿದ್ದಾರೆ ಎಂದು ಬೆಳಕಿಗೆ ಬಂದಿಲ್ಲ ಎಂದು ಪಾಂಡೆ ದಿ ಪ್ರಿಂಟ್‌ಗೆ ತಿಳಿಸಿದ್ದಾರೆ.

ನಾವು ಈಗ ಸಾವನ್ನಪ್ಪಿರುವ ಜುನೈದ್‌ನ ಮರಣೋತ್ತರ ಪರೀಕ್ಷೆಯ ವರದಿಗಾಗಿ ಕಾಯುತ್ತಿದ್ದೇವೆ. ಅದು ದೊರೆತ ಕೂಡಲೇ ಕೊಲೆ ಆರೋಪಗಳನ್ನು ಅನ್ವಯಿಸಲಾಗುವುದು. ಈಗ ಸಾವನ್ನಪ್ಪಿರುವ ಜುನೈದ್ ವಿರುದ್ಧ ಈ ಹಿಂದೆ ಗೋ ಕಳ್ಳಸಾಗಣೆಯ ಎರಡು ಪ್ರಕರಣಗಳು ದಾಖಲಾಗಿದ್ದವು ಎಂದು ಪಾಂಡೆ ಹೇಳಿದ್ದಾರೆ.

ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಅರ್ಮಾನ್ ಡೈರಿ ನಡೆಸುತ್ತಿದ್ದಾನೆ. ನನ್ನ ಮಗ ಜುನೈದ್ ಪೊಲೀಸರು ಆರೋಪಿಸಿರುವಂತೆ ಗೋ ಕಳ್ಳಸಾಗಣೆ ಮಾಡುತ್ತಿರಲಿಲ್ಲ. ಬದಲಾಗಿ ಜಾನುವಾರು ವ್ಯಾಪಾರ ಮಾಡುತ್ತಿದ್ದನು ಎಂದು ಅರ್ಮಾನ್ ತಂದೆ ಜಾಫರುದ್ದೀನ್ ಹೇಳಿದ್ದಾರೆ.

ಜೂನ್ 5ರಂದು ಸುಮಾರು 2:30 ಕ್ಕೆ ಅರ್ಮಾನ್ ಮತ್ತು ನಾನು ವಿದಿಶಾದ ಧನೋರಾ ಗ್ರಾಮದಲ್ಲಿದ್ದೆವು. ಅಲ್ಲಿ ನಾವು ಅವನ ವ್ಯಾನಿಗೆ ಜಾನುವಾರುಗಳನ್ನು ತುಂಬಿಸಿ ಭೋಪಾಲ್‌ಗೆ ಹಿಂತಿರುಗುತ್ತಿದ್ದೆವು. ಮೆಹ್‌ಗಾವ್ ಬಳಿಯ ವಿದಿಶಾ-ಕೌಡಿ ರಸ್ತೆಯಲ್ಲಿರುವ ಶಾಲೆಯನ್ನು ದಾಟುತ್ತಿದ್ದಾಗ, ಸುಮಾರು 10-15 ಜನರು ನಮ್ಮ ವಾಹನವನ್ನು ಹಿಂದಿಕ್ಕಿ ನಿಲ್ಲಿಸಿದರು ಎಂದು ಘಟನೆಯ ನಂತರ ಸಾಂಚಿ ಪೊಲೀಸರಿಗೆ ನೀಡಿದ ಹೇಳಿಕೆಯಲ್ಲಿ ಜುನೈದ್ ಹೇಳಿದ್ದರು.

ಈ ಜನರು ನಮ್ಮನ್ನು ನಿಂದಿಸಲು ಪ್ರಾರಂಭಿಸಿದರು. ಅವರಲ್ಲಿ ಕೆಲವರು ಅವರ ವಾಹನಗಳಲ್ಲಿ ದೊಣ್ಣೆಗಳನ್ನು ಸಹ ಇಟ್ಟುಕೊಂಡಿದ್ದರು. ಅವರು ಅರ್ಮಾನ್ ಮತ್ತು ನನ್ನನ್ನು ನಮ್ಮ ವಾಹನದಿಂದ ಹೊರಗೆ ಎಳೆದು, ಗೋವುಗಳನ್ನು ಕಳ್ಳಸಾಗಣೆ ಮಾಡುತ್ತಿದ್ದೀರಿ ಎಂದು ಆರೋಪಿಸಿ, ಥಳಿಸಿದರು. ನಮ್ಮನ್ನು ಗುಂಪು ಥಳಿಸುತ್ತಲೇ ಘಟನೆಯನ್ನು ಚಿತ್ರೀಕರಿಸಿದೆ.  ಆ ನಂತರ ಗುಂಪು ನಮ್ಮನ್ನು ಅವರ ವ್ಯಾನಿನಲ್ಲಿ ಪೊಲೀಸ್ ಠಾಣೆಗೆ ಕರೆದೊಯ್ದರು ಎಂದು ಜುನೈದ್ ಹೇಳಿಕೆಯಲ್ಲಿ ತಿಳಿಸಿದ್ದರು.

ಈ ಘಟನೆಯ ವಿಡಿಯೋ ತುಣುಕುಗಳು ನಂತರ ಸಾಮಾಜಿಕ ಮಾಧ್ಯಮ ವೇದಿಕೆಗಳಲ್ಲಿ ವ್ಯಾಪಕವಾಗಿ ಹರಿದಾಡಿದ್ದವು. ವಿಡಿಯೋ ತುಣುಕುಗಳಲ್ಲಿ ಜುನೈದ್ ಮತ್ತು ಅರ್ಮಾನ್ ಅವರನ್ನು ಗುಂಪೊಂದು ಥಳಿಸುತ್ತಿರುವುದು ಸ್ಪಷ್ಟವಾಗಿ ಕಾಣುತ್ತಿದ್ದರೂ ಮತ್ತು ಜುನೈದ್‌ನ ಹೇಳಿಕೆಯಲ್ಲಿ “ಜನರ ಗುಂಪು” ಎಂದು ಉಲ್ಲೇಖಿಸಿದ್ದರೂ ಕೇವಲ ಮೂವರು ಆರೋಪಿಗಳು ಮಾತ್ರ ಭಾಗಿಯಾಗಿದ್ದಾರೆ ಎಂದು ಪೊಲೀಸರು ಹೇಳಿದ್ದಾರೆ.

ಇಸ್ರೇಲ್‌ನಲ್ಲಿರುವ ಭಾರತೀಯ ಕಾರ್ಮಿಕ ಕುಟುಂಬಗಳಿಗೆ ನಿದ್ದೆಯಿಲ್ಲದ ರಾತ್ರಿಗಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...