Homeಮುಖಪುಟಗೋ ಕಳ್ಳಸಾಗಣೆ ಆರೋಪ: ಎರಡು ವಾರಗಳ ಹಿಂದೆ ಹಲ್ಲೆಗೊಳಗಾಗಿದ್ದ ಜುನೈದ್ ಸಾವು

ಗೋ ಕಳ್ಳಸಾಗಣೆ ಆರೋಪ: ಎರಡು ವಾರಗಳ ಹಿಂದೆ ಹಲ್ಲೆಗೊಳಗಾಗಿದ್ದ ಜುನೈದ್ ಸಾವು

- Advertisement -
- Advertisement -

ಭೋಪಾಲ್: ಸುಮಾರು ಎರಡು ವಾರಗಳ ಹಿಂದೆ ಗೋ ಕಳ್ಳಸಾಗಣೆ ಆರೋಪದಡಿ ಗೋ ರಕ್ಷಕರಿಂದ ಮಾರಣಾಂತಿಕವಾಗಿ ಹಲ್ಲೆಗೊಳಗಾಗಿದ್ದ ಜುನೈದ್ ಶಹಜಾದ್ (21) ಮಂಗಳವಾರ ಸಾವನ್ನಪ್ಪಿದ್ದಾನೆ.  ಇದೇ ಸಂದರ್ಭದಲ್ಲಿ ಹಲ್ಲೆಗೊಳಗಾಗಿದ್ದ ಅರ್ಮಾನ್ ಕೂಡ ಭೋಪಾಲ್‌ನ ಹಮೀದಿಯಾ ಆಸ್ಪತ್ರೆಯಲ್ಲಿ ಜೀವನ್ಮರಣ ಹೋರಾಟ ನಡೆಸುತ್ತಿದ್ದಾನೆ.

ಇದೇ ಜೂನ್ 5ರಂದು ಜುನೈದ್ ಮತ್ತು ಅರ್ಮಾನ್ ಅವರು ರಾಯ್ಸೇನ್ ಜಿಲ್ಲೆಯ ಸਾਂಚಿಯ ಮೆಹ್‌ಗಾವ್ ಗ್ರಾಮದ ಬಳಿ ಗೋ ಕಳ್ಳಸಾಗಣೆ ಆರೋಪದಡಿ ಗೋ ರಕ್ಷಕರಿಗೆ ಸಿಕ್ಕಿಬಿದ್ದಿದ್ದರು. ಆಗ ಇವರಿಂದ ಥಳಿಸಲ್ಪಟ್ಟರು ಎಂದು ರಾಯ್ಸೇನ್ ಪೊಲೀಸ್ ವರಿಷ್ಠಾಧಿಕಾರಿ ಪಂಕಜ್ ಪಾಂಡೆ ಹೇಳಿದ್ದಾರೆ.

ನಾವು ಜುನೈದ್ ಮತ್ತು ಹಮೀದಿಯಾ ವಿರುದ್ಧ ಗೋ ಕಳ್ಳಸಾಗಣೆ ಪ್ರಕರಣ ದಾಖಲಿಸಿದ್ದೇವೆ. ಹಾಗೆಯೇ ಇವರನ್ನು ಥಳಿಸಿದ ಮೂರು ವ್ಯಕ್ತಿಗಳ ವಿರುದ್ಧ ಜೂನ್ 9ರಂದು ಕೊಲೆ ಯತ್ನ ಪ್ರಕರಣ ದಾಖಲಿಸಿದ್ದೇವೆ. ಇದುವರೆಗಿನ ನಮ್ಮ ತನಿಖೆಯಲ್ಲಿ ಬಂಧಿತ ಮೂವರು ಬಜರಂಗದಳದೊಂದಿಗೆ ಯಾವುದೇ ಸಂಬಂಧ ಹೊಂದಿದ್ದಾರೆ ಎಂದು ಬೆಳಕಿಗೆ ಬಂದಿಲ್ಲ ಎಂದು ಪಾಂಡೆ ದಿ ಪ್ರಿಂಟ್‌ಗೆ ತಿಳಿಸಿದ್ದಾರೆ.

ನಾವು ಈಗ ಸಾವನ್ನಪ್ಪಿರುವ ಜುನೈದ್‌ನ ಮರಣೋತ್ತರ ಪರೀಕ್ಷೆಯ ವರದಿಗಾಗಿ ಕಾಯುತ್ತಿದ್ದೇವೆ. ಅದು ದೊರೆತ ಕೂಡಲೇ ಕೊಲೆ ಆರೋಪಗಳನ್ನು ಅನ್ವಯಿಸಲಾಗುವುದು. ಈಗ ಸಾವನ್ನಪ್ಪಿರುವ ಜುನೈದ್ ವಿರುದ್ಧ ಈ ಹಿಂದೆ ಗೋ ಕಳ್ಳಸಾಗಣೆಯ ಎರಡು ಪ್ರಕರಣಗಳು ದಾಖಲಾಗಿದ್ದವು ಎಂದು ಪಾಂಡೆ ಹೇಳಿದ್ದಾರೆ.

ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಅರ್ಮಾನ್ ಡೈರಿ ನಡೆಸುತ್ತಿದ್ದಾನೆ. ನನ್ನ ಮಗ ಜುನೈದ್ ಪೊಲೀಸರು ಆರೋಪಿಸಿರುವಂತೆ ಗೋ ಕಳ್ಳಸಾಗಣೆ ಮಾಡುತ್ತಿರಲಿಲ್ಲ. ಬದಲಾಗಿ ಜಾನುವಾರು ವ್ಯಾಪಾರ ಮಾಡುತ್ತಿದ್ದನು ಎಂದು ಅರ್ಮಾನ್ ತಂದೆ ಜಾಫರುದ್ದೀನ್ ಹೇಳಿದ್ದಾರೆ.

ಜೂನ್ 5ರಂದು ಸುಮಾರು 2:30 ಕ್ಕೆ ಅರ್ಮಾನ್ ಮತ್ತು ನಾನು ವಿದಿಶಾದ ಧನೋರಾ ಗ್ರಾಮದಲ್ಲಿದ್ದೆವು. ಅಲ್ಲಿ ನಾವು ಅವನ ವ್ಯಾನಿಗೆ ಜಾನುವಾರುಗಳನ್ನು ತುಂಬಿಸಿ ಭೋಪಾಲ್‌ಗೆ ಹಿಂತಿರುಗುತ್ತಿದ್ದೆವು. ಮೆಹ್‌ಗಾವ್ ಬಳಿಯ ವಿದಿಶಾ-ಕೌಡಿ ರಸ್ತೆಯಲ್ಲಿರುವ ಶಾಲೆಯನ್ನು ದಾಟುತ್ತಿದ್ದಾಗ, ಸುಮಾರು 10-15 ಜನರು ನಮ್ಮ ವಾಹನವನ್ನು ಹಿಂದಿಕ್ಕಿ ನಿಲ್ಲಿಸಿದರು ಎಂದು ಘಟನೆಯ ನಂತರ ಸಾಂಚಿ ಪೊಲೀಸರಿಗೆ ನೀಡಿದ ಹೇಳಿಕೆಯಲ್ಲಿ ಜುನೈದ್ ಹೇಳಿದ್ದರು.

ಈ ಜನರು ನಮ್ಮನ್ನು ನಿಂದಿಸಲು ಪ್ರಾರಂಭಿಸಿದರು. ಅವರಲ್ಲಿ ಕೆಲವರು ಅವರ ವಾಹನಗಳಲ್ಲಿ ದೊಣ್ಣೆಗಳನ್ನು ಸಹ ಇಟ್ಟುಕೊಂಡಿದ್ದರು. ಅವರು ಅರ್ಮಾನ್ ಮತ್ತು ನನ್ನನ್ನು ನಮ್ಮ ವಾಹನದಿಂದ ಹೊರಗೆ ಎಳೆದು, ಗೋವುಗಳನ್ನು ಕಳ್ಳಸಾಗಣೆ ಮಾಡುತ್ತಿದ್ದೀರಿ ಎಂದು ಆರೋಪಿಸಿ, ಥಳಿಸಿದರು. ನಮ್ಮನ್ನು ಗುಂಪು ಥಳಿಸುತ್ತಲೇ ಘಟನೆಯನ್ನು ಚಿತ್ರೀಕರಿಸಿದೆ.  ಆ ನಂತರ ಗುಂಪು ನಮ್ಮನ್ನು ಅವರ ವ್ಯಾನಿನಲ್ಲಿ ಪೊಲೀಸ್ ಠಾಣೆಗೆ ಕರೆದೊಯ್ದರು ಎಂದು ಜುನೈದ್ ಹೇಳಿಕೆಯಲ್ಲಿ ತಿಳಿಸಿದ್ದರು.

ಈ ಘಟನೆಯ ವಿಡಿಯೋ ತುಣುಕುಗಳು ನಂತರ ಸಾಮಾಜಿಕ ಮಾಧ್ಯಮ ವೇದಿಕೆಗಳಲ್ಲಿ ವ್ಯಾಪಕವಾಗಿ ಹರಿದಾಡಿದ್ದವು. ವಿಡಿಯೋ ತುಣುಕುಗಳಲ್ಲಿ ಜುನೈದ್ ಮತ್ತು ಅರ್ಮಾನ್ ಅವರನ್ನು ಗುಂಪೊಂದು ಥಳಿಸುತ್ತಿರುವುದು ಸ್ಪಷ್ಟವಾಗಿ ಕಾಣುತ್ತಿದ್ದರೂ ಮತ್ತು ಜುನೈದ್‌ನ ಹೇಳಿಕೆಯಲ್ಲಿ “ಜನರ ಗುಂಪು” ಎಂದು ಉಲ್ಲೇಖಿಸಿದ್ದರೂ ಕೇವಲ ಮೂವರು ಆರೋಪಿಗಳು ಮಾತ್ರ ಭಾಗಿಯಾಗಿದ್ದಾರೆ ಎಂದು ಪೊಲೀಸರು ಹೇಳಿದ್ದಾರೆ.

ಇಸ್ರೇಲ್‌ನಲ್ಲಿರುವ ಭಾರತೀಯ ಕಾರ್ಮಿಕ ಕುಟುಂಬಗಳಿಗೆ ನಿದ್ದೆಯಿಲ್ಲದ ರಾತ್ರಿಗಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಛತ್ತೀಸ್‌ಗಢ| ಕ್ರಿಶ್ಚಿಯನ್ ಯುವಕನ ಮೇಲೆ ಹಿಂದುತ್ವವಾದಿ ಗುಂಪಿನಿಂದ ಹಲ್ಲೆ; ‘ಜೈ ಶ್ರೀ ರಾಮ್’ ಕೂಗುವಂತೆ ಒತ್ತಾಯ

ಛತ್ತೀಸ್‌ಗಢದ ಜಂಜ್‌ಗೀರ್-ಚಂಪಾ ಜಿಲ್ಲೆಯಲ್ಲಿ ಕ್ರಿಶ್ಚಿಯನ್ ಯುವಕನ ಮೇಲೆ ಹಿಂದುತ್ವವಾದಿಗಳ ಗುಂಪೊಂದು ಹಲ್ಲೆ ನಡೆಸಿ, ಜೈಶ್ರೀರಾಮ್ ಎಂದು ಘೋಷಣೆಗಳನ್ನು ಕೂಗುವಂತೆ ಒತ್ತಾಯಿಸಿದೆ ಎಂಬ ಆರೋಪ ಕೇಳಿಬಂದಿದೆ. ಇಂದು (ಮಾ.18) ನಡೆದಿದೆ ಎನ್ನಲಾದ ಈ ಘಟನೆಯ...

ಯುಪಿಎಸ್‌ಸಿ 440 ನೇ ರ‍್ಯಾಂಕ್ ಎಂದು ಸುಳ್ಳು ಹೇಳಿ ಸಂಭ್ರಮಾಚರಣೆ ಮಾಡಿದ್ದ ಬಿಹಾರದ ಯುವಕನ ಬಂಧನ

ಕೇಂದ್ರ ಲೋಕಸೇವಾ ಆಯೋಗ (ಯುಪಿಎಸ್‌ಸಿ) ನಾಗರಿಕ ಸೇವಾ ಪರೀಕ್ಷೆ (ಸಿಎಸ್‌ಇ) 2025 ರಲ್ಲಿ ಅಖಿಲ ಭಾರತ ರ‍್ಯಾಂಕ್ (ಎಐಆರ್) 440 ಗಳಿಸಿದ್ದೇನೆ ಎಂದು ಸುಳ್ಳು ಹೇಳಿಕೊಂಡ ಕೆಲವು ದಿನಗಳ ನಂತರ, ಬಿಹಾರದ ಶೇಖ್‌ಪುರ...

‘ಜೈ ಬಾಂಗ್ಲಾ’ ಘೋಷಣೆ ಕೂಗಿದ ಆರೋಪ: ಮಹಿಳೆಗೆ ಜಾಮೀನು ನೀಡಿದ ಹೈಕೋರ್ಟ್

ಬೆಂಗಳೂರಿನ ಹೆಬ್ಬಗೂಡಿಯಲ್ಲಿ ಅಕ್ರಮ ಎನ್ನಲಾದ ಶೆಡ್‌ಗಳ ತೆರವು ಕಾರ್ಯಾಚರಣೆ ವೇಳೆ 'ಜೈ ಬಾಂಗ್ಲಾ' ಘೋಷಣೆ ಕೂಗಿದ ಆರೋಪದ ಮೇಲೆ ಬಂಧಿತರಾದ ಪಶ್ಚಿಮ ಬಂಗಾಳದ ಮಹಿಳೆಗೆ ಹೈಕೋರ್ಟ್ ಜಾಮೀನು ಮಂಜೂರು ಮಾಡಿದೆ. ನ್ಯಾಯಮೂರ್ತಿ ಎಸ್.ರಾಚಯ್ಯ...

ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲಿ ಡಿಜೆ, ಐಟಂ ಹಾಡು ನಿಷೇಧಿಸಲು ಕರ್ನಾಟಕ ಯೋಜನೆ; ವಿಧಾನಸಭೆಯಲ್ಲಿ ಸಂತೋಷ್ ಲಾಡ್ ಪ್ರಸ್ತಾಪ

ಬೆಂಗಳೂರು: ಸಾಂಸ್ಕೃತಿಕ ಕಾರ್ಯಕ್ರಮಗಳು ಮತ್ತು ಧಾರ್ಮಿಕ ಮೆರವಣಿಗೆಗಳಲ್ಲಿ ಅಬ್ಬರದ ಸಂಗೀತ ಮತ್ತು "ಐಟಂ ಹಾಡುಗಳನ್ನು" ನುಡಿಸುವ ಡಿಸ್ಕ್ ಜಾಕಿಗಳನ್ನು (ಡಿಜೆ) ನಿಷೇಧಿಸುವ ಪರವಾಗಿ ಕರ್ನಾಟಕ ಸರ್ಕಾರವಿದೆ ಎಂದು ಕನ್ನಡ ಮತ್ತು ಸಂಸ್ಕೃತಿ ಸಚಿವ...

ದೆಹಲಿಯ ಪಾಲಂನಲ್ಲಿರುವ ಬಹುಮಹಡಿ ಕಟ್ಟಡದಲ್ಲಿ ಬೆಂಕಿ ಅವಘಡ: ಮೂವರು ಮಕ್ಕಳು ಸೇರಿ ಏಳು ಮಂದಿ ಸಾವು

ರಾಷ್ಟ್ರ ರಾಜಧಾನಿಯ ಪಾಲಂ ಪ್ರದೇಶದ ವಸತಿ ಕಟ್ಟಡದಲ್ಲಿ ಭಾರಿ ಬೆಂಕಿ ಕಾಣಿಸಿಕೊಂಡು ಮೂವರು ಮಕ್ಕಳು ಸೇರಿದಂತೆ ಕನಿಷ್ಠ ಏಳು ಜನರು ಸಾವನ್ನಪ್ಪಿದ್ದಾರೆ ಎಂದು ದೆಹಲಿ ಪೊಲೀಸರು ಬುಧವಾರ ತಿಳಿಸಿದ್ದಾರೆ. ಘಟನೆಯ ಮಾಹಿತಿ ತಿಳಿದ ತಕ್ಷಣ...

ವಾರಣಾಸಿ: ಗಂಗಾ ನದಿಯ ದೋಣಿಯಲ್ಲಿ ‘ಇಫ್ತಾರ್’ ಕೂಟ ಆಯೋಜಿಸಿದ್ದಕ್ಕಾಗಿ 14 ಜನರ ಬಂಧನ 

ವಾರಣಾಸಿಯಲ್ಲಿ ಗಂಗಾ ನದಿಯ ಮಧ್ಯದಲ್ಲಿ ದೋಣಿಯಲ್ಲಿ 'ಇಫ್ತಾರ್' (ರಂಜಾನ್ ಸಮಯದಲ್ಲಿ ಸೂರ್ಯಾಸ್ತದ ನಂತರ ತಿನ್ನುವ ಊಟ) ಕೂಟವನ್ನು ಆಯೋಜಿಸಿದ್ದಕ್ಕಾಗಿ ಹದಿನಾಲ್ಕು ಮುಸ್ಲಿಂ ಯುವಕರನ್ನು ಬಂಧಿಸಲಾಗಿದೆ.  ದೈನಂದಿನ ಮುಸ್ಲಿಂ ಜೀವನವನ್ನು ಅಪರಾಧೀಕರಿಸುವ ಮತ್ತೊಂದು ಪ್ರಕರಣ ಇದಾಗಿದ್ದು,...

ಚುನಾವಣೆ ಹೊಸ್ತಿಲಲ್ಲಿ ಅಸ್ಸಾಂ ಕಾಂಗ್ರೆಸ್‌ನ ಇಬ್ಬರು ಪ್ರಮುಖ ನಾಯಕರು ರಾಜೀನಾಮೆ

ಚುನಾವಣೆ ಹೊಸ್ತಿಲಲ್ಲಿ ಅಸ್ಸಾಂ ಕಾಂಗ್ರೆಸ್‌ನ ಇಬ್ಬರು ಪ್ರಮುಖ ನಾಯಕರು ತಮ್ಮ ಸ್ಥಾನಗಳಿಗೆ ಮಂಗಳವಾರ (ಮಾ.17) ರಾಜೀನಾಮೆ ಸಲ್ಲಿಸಿದ್ದಾರೆ. ಪಕ್ಷದ ಹಿರಿಯ ನಾಯಕ ಹಾಗೂ ನೌಗಾಂಗ್ ಲೋಕಸಭಾ ಕ್ಷೇತ್ರದ ಹಾಲಿ ಸಂಸದ ಪ್ರದ್ಯುತ್ ಬೋರ್ಡೊಲೊಯ್...

ರಾಜ್ಯಸಭೆ ಚುನಾವಣೆಯಲ್ಲಿ ಅಡ್ಡ ಮತದಾನ : ಮೂವರು ಶಾಸಕರನ್ನು ಅಮಾನತುಗೊಳಿಸಿದ ಒಡಿಶಾ ಕಾಂಗ್ರೆಸ್

ರಾಜ್ಯಸಭಾ ಚುನಾವಣೆಯಲ್ಲಿ ಅಡ್ಡ ಮತದಾನ ಮಾಡಿದ್ದಕ್ಕಾಗಿ ಒಡಿಶಾ ಕಾಂಗ್ರೆಸ್ ಮೂವರು ಶಾಸಕರಾದ ಸೋಫಿಯಾ ಫಿರ್ದೌಸ್, ರಮೇಶ್ ಜೆನಾ ಮತ್ತು ದಾಸರಥಿ ಗೊಮಾಂಗೊ ಅವರನ್ನು ಅಮಾನತುಗೊಳಿಸಿದೆ. ಒಡಿಶಾ ವಿಧಾನಸಭೆಯಲ್ಲಿ ಕಾಂಗ್ರೆಸ್ 14 ಶಾಸಕರನ್ನು ಹೊಂದಿದ್ದು, ನಾಲ್ಕನೇ...

ಅಮೆರಿಕ ರಾಷ್ಟ್ರೀಯ ಭಯೋತ್ಪಾದನಾ ನಿಗ್ರಹ ದಳದ ನಿರ್ದೇಶಕ ಜೋ ಕೆಂಟ್‌ ರಾಜೀನಾಮೆ

ಅಮೆರಿಕದ ರಾಷ್ಟ್ರೀಯ ಭಯೋತ್ಪಾದನಾ ನಿಗ್ರಹ ಕೇಂದ್ರದ (ಎನ್‌ಸಿಟಿಸಿ) ನಿರ್ದೇಶಕ ಜೋ ಕೆಂಟ್ ಅವರು ಇರಾನ್ ಜೊತೆಗಿನ ಯುದ್ಧಕ್ಕೆ ವಿರೋಧ ವ್ಯಕ್ತಪಡಿಸಿ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. "ಇರಾನ್‌ನಿಂದ ಅಮೆರಿಕಕ್ಕೆ ಯಾವುದೇ ತಕ್ಷಣದ ಅಪಾಯವಿರಲಿಲ್ಲ. ಇಸ್ರೇಲ್‌ನ ಒತ್ತಡದಿಂದಾಗಿ...

ಪಶ್ಚಿಮ ಏಷ್ಯಾ ಸಂಘರ್ಷ: ಇರಾನ್ ಭದ್ರತಾ ಮುಖ್ಯಸ್ಥ ಅಲಿ ಲಾರಿಜಾನಿ ಹತ್ಯೆ ಮಾಡಿರುವುದಾಗಿ ಹೇಳಿಕೊಂಡ ಇಸ್ರೇಲ್ 

ಇರಾನ್‌ನ ಭದ್ರತಾ ಮುಖ್ಯಸ್ಥ ಅಲಿ ಲಾರಿಜಾನಿ ವೈಮಾನಿಕ ದಾಳಿಯಲ್ಲಿ ಸಾವನ್ನಪ್ಪಿದ್ದಾರೆ ಎಂದು ಇಸ್ರೇಲ್ ರಕ್ಷಣಾ ಸಚಿವ ಕಾಟ್ಜ್ ಮಂಗಳವಾರ ಹೇಳಿದ್ದಾರೆ. ಆದರೆ ಟೆಹ್ರಾನ್‌ನಿಂದ ಯಾವುದೇ ಅಧಿಕೃತ ದೃಢೀಕರಣವಿಲ್ಲ. ಕಾಟ್ಜ್ ಪ್ರಕಾರ, ಜನರಲ್ ಘೋಲಮ್...