Homeಮುಖಪುಟಗೋ ಕಳ್ಳಸಾಗಣೆ ಆರೋಪ: ಎರಡು ವಾರಗಳ ಹಿಂದೆ ಹಲ್ಲೆಗೊಳಗಾಗಿದ್ದ ಜುನೈದ್ ಸಾವು

ಗೋ ಕಳ್ಳಸಾಗಣೆ ಆರೋಪ: ಎರಡು ವಾರಗಳ ಹಿಂದೆ ಹಲ್ಲೆಗೊಳಗಾಗಿದ್ದ ಜುನೈದ್ ಸಾವು

- Advertisement -
- Advertisement -

ಭೋಪಾಲ್: ಸುಮಾರು ಎರಡು ವಾರಗಳ ಹಿಂದೆ ಗೋ ಕಳ್ಳಸಾಗಣೆ ಆರೋಪದಡಿ ಗೋ ರಕ್ಷಕರಿಂದ ಮಾರಣಾಂತಿಕವಾಗಿ ಹಲ್ಲೆಗೊಳಗಾಗಿದ್ದ ಜುನೈದ್ ಶಹಜಾದ್ (21) ಮಂಗಳವಾರ ಸಾವನ್ನಪ್ಪಿದ್ದಾನೆ.  ಇದೇ ಸಂದರ್ಭದಲ್ಲಿ ಹಲ್ಲೆಗೊಳಗಾಗಿದ್ದ ಅರ್ಮಾನ್ ಕೂಡ ಭೋಪಾಲ್‌ನ ಹಮೀದಿಯಾ ಆಸ್ಪತ್ರೆಯಲ್ಲಿ ಜೀವನ್ಮರಣ ಹೋರಾಟ ನಡೆಸುತ್ತಿದ್ದಾನೆ.

ಇದೇ ಜೂನ್ 5ರಂದು ಜುನೈದ್ ಮತ್ತು ಅರ್ಮಾನ್ ಅವರು ರಾಯ್ಸೇನ್ ಜಿಲ್ಲೆಯ ಸਾਂಚಿಯ ಮೆಹ್‌ಗಾವ್ ಗ್ರಾಮದ ಬಳಿ ಗೋ ಕಳ್ಳಸಾಗಣೆ ಆರೋಪದಡಿ ಗೋ ರಕ್ಷಕರಿಗೆ ಸಿಕ್ಕಿಬಿದ್ದಿದ್ದರು. ಆಗ ಇವರಿಂದ ಥಳಿಸಲ್ಪಟ್ಟರು ಎಂದು ರಾಯ್ಸೇನ್ ಪೊಲೀಸ್ ವರಿಷ್ಠಾಧಿಕಾರಿ ಪಂಕಜ್ ಪಾಂಡೆ ಹೇಳಿದ್ದಾರೆ.

ನಾವು ಜುನೈದ್ ಮತ್ತು ಹಮೀದಿಯಾ ವಿರುದ್ಧ ಗೋ ಕಳ್ಳಸಾಗಣೆ ಪ್ರಕರಣ ದಾಖಲಿಸಿದ್ದೇವೆ. ಹಾಗೆಯೇ ಇವರನ್ನು ಥಳಿಸಿದ ಮೂರು ವ್ಯಕ್ತಿಗಳ ವಿರುದ್ಧ ಜೂನ್ 9ರಂದು ಕೊಲೆ ಯತ್ನ ಪ್ರಕರಣ ದಾಖಲಿಸಿದ್ದೇವೆ. ಇದುವರೆಗಿನ ನಮ್ಮ ತನಿಖೆಯಲ್ಲಿ ಬಂಧಿತ ಮೂವರು ಬಜರಂಗದಳದೊಂದಿಗೆ ಯಾವುದೇ ಸಂಬಂಧ ಹೊಂದಿದ್ದಾರೆ ಎಂದು ಬೆಳಕಿಗೆ ಬಂದಿಲ್ಲ ಎಂದು ಪಾಂಡೆ ದಿ ಪ್ರಿಂಟ್‌ಗೆ ತಿಳಿಸಿದ್ದಾರೆ.

ನಾವು ಈಗ ಸಾವನ್ನಪ್ಪಿರುವ ಜುನೈದ್‌ನ ಮರಣೋತ್ತರ ಪರೀಕ್ಷೆಯ ವರದಿಗಾಗಿ ಕಾಯುತ್ತಿದ್ದೇವೆ. ಅದು ದೊರೆತ ಕೂಡಲೇ ಕೊಲೆ ಆರೋಪಗಳನ್ನು ಅನ್ವಯಿಸಲಾಗುವುದು. ಈಗ ಸಾವನ್ನಪ್ಪಿರುವ ಜುನೈದ್ ವಿರುದ್ಧ ಈ ಹಿಂದೆ ಗೋ ಕಳ್ಳಸಾಗಣೆಯ ಎರಡು ಪ್ರಕರಣಗಳು ದಾಖಲಾಗಿದ್ದವು ಎಂದು ಪಾಂಡೆ ಹೇಳಿದ್ದಾರೆ.

ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಅರ್ಮಾನ್ ಡೈರಿ ನಡೆಸುತ್ತಿದ್ದಾನೆ. ನನ್ನ ಮಗ ಜುನೈದ್ ಪೊಲೀಸರು ಆರೋಪಿಸಿರುವಂತೆ ಗೋ ಕಳ್ಳಸಾಗಣೆ ಮಾಡುತ್ತಿರಲಿಲ್ಲ. ಬದಲಾಗಿ ಜಾನುವಾರು ವ್ಯಾಪಾರ ಮಾಡುತ್ತಿದ್ದನು ಎಂದು ಅರ್ಮಾನ್ ತಂದೆ ಜಾಫರುದ್ದೀನ್ ಹೇಳಿದ್ದಾರೆ.

ಜೂನ್ 5ರಂದು ಸುಮಾರು 2:30 ಕ್ಕೆ ಅರ್ಮಾನ್ ಮತ್ತು ನಾನು ವಿದಿಶಾದ ಧನೋರಾ ಗ್ರಾಮದಲ್ಲಿದ್ದೆವು. ಅಲ್ಲಿ ನಾವು ಅವನ ವ್ಯಾನಿಗೆ ಜಾನುವಾರುಗಳನ್ನು ತುಂಬಿಸಿ ಭೋಪಾಲ್‌ಗೆ ಹಿಂತಿರುಗುತ್ತಿದ್ದೆವು. ಮೆಹ್‌ಗಾವ್ ಬಳಿಯ ವಿದಿಶಾ-ಕೌಡಿ ರಸ್ತೆಯಲ್ಲಿರುವ ಶಾಲೆಯನ್ನು ದಾಟುತ್ತಿದ್ದಾಗ, ಸುಮಾರು 10-15 ಜನರು ನಮ್ಮ ವಾಹನವನ್ನು ಹಿಂದಿಕ್ಕಿ ನಿಲ್ಲಿಸಿದರು ಎಂದು ಘಟನೆಯ ನಂತರ ಸಾಂಚಿ ಪೊಲೀಸರಿಗೆ ನೀಡಿದ ಹೇಳಿಕೆಯಲ್ಲಿ ಜುನೈದ್ ಹೇಳಿದ್ದರು.

ಈ ಜನರು ನಮ್ಮನ್ನು ನಿಂದಿಸಲು ಪ್ರಾರಂಭಿಸಿದರು. ಅವರಲ್ಲಿ ಕೆಲವರು ಅವರ ವಾಹನಗಳಲ್ಲಿ ದೊಣ್ಣೆಗಳನ್ನು ಸಹ ಇಟ್ಟುಕೊಂಡಿದ್ದರು. ಅವರು ಅರ್ಮಾನ್ ಮತ್ತು ನನ್ನನ್ನು ನಮ್ಮ ವಾಹನದಿಂದ ಹೊರಗೆ ಎಳೆದು, ಗೋವುಗಳನ್ನು ಕಳ್ಳಸಾಗಣೆ ಮಾಡುತ್ತಿದ್ದೀರಿ ಎಂದು ಆರೋಪಿಸಿ, ಥಳಿಸಿದರು. ನಮ್ಮನ್ನು ಗುಂಪು ಥಳಿಸುತ್ತಲೇ ಘಟನೆಯನ್ನು ಚಿತ್ರೀಕರಿಸಿದೆ.  ಆ ನಂತರ ಗುಂಪು ನಮ್ಮನ್ನು ಅವರ ವ್ಯಾನಿನಲ್ಲಿ ಪೊಲೀಸ್ ಠಾಣೆಗೆ ಕರೆದೊಯ್ದರು ಎಂದು ಜುನೈದ್ ಹೇಳಿಕೆಯಲ್ಲಿ ತಿಳಿಸಿದ್ದರು.

ಈ ಘಟನೆಯ ವಿಡಿಯೋ ತುಣುಕುಗಳು ನಂತರ ಸಾಮಾಜಿಕ ಮಾಧ್ಯಮ ವೇದಿಕೆಗಳಲ್ಲಿ ವ್ಯಾಪಕವಾಗಿ ಹರಿದಾಡಿದ್ದವು. ವಿಡಿಯೋ ತುಣುಕುಗಳಲ್ಲಿ ಜುನೈದ್ ಮತ್ತು ಅರ್ಮಾನ್ ಅವರನ್ನು ಗುಂಪೊಂದು ಥಳಿಸುತ್ತಿರುವುದು ಸ್ಪಷ್ಟವಾಗಿ ಕಾಣುತ್ತಿದ್ದರೂ ಮತ್ತು ಜುನೈದ್‌ನ ಹೇಳಿಕೆಯಲ್ಲಿ “ಜನರ ಗುಂಪು” ಎಂದು ಉಲ್ಲೇಖಿಸಿದ್ದರೂ ಕೇವಲ ಮೂವರು ಆರೋಪಿಗಳು ಮಾತ್ರ ಭಾಗಿಯಾಗಿದ್ದಾರೆ ಎಂದು ಪೊಲೀಸರು ಹೇಳಿದ್ದಾರೆ.

ಇಸ್ರೇಲ್‌ನಲ್ಲಿರುವ ಭಾರತೀಯ ಕಾರ್ಮಿಕ ಕುಟುಂಬಗಳಿಗೆ ನಿದ್ದೆಯಿಲ್ಲದ ರಾತ್ರಿಗಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಉತ್ತರ ಪ್ರದೇಶ| ಪೊಲೀಸರಿಂದ ಬೈಕ್ ಸೀಝ್‌; ಠಾಣೆ ಮುಂದೆ ಬೆಂಕಿ ಹಚ್ಚಿಕೊಂಡ ‘ಗಿಗ್’ ಕಾರ್ಮಿಕ

ಪೊಲೀಸರು ತನ್ನ ಬೈಕ್‌ ವಶಪಡಿಸಿಕೊಂಡ ನಂತರ 32 ವರ್ಷದ ಗಿಗ್ ಕಾರ್ಮಿಕನೊಬ್ಬ ಠಾಣೆಯ ಹೊರಗೆ ಬೆಂಕಿಹಚ್ಚಿಕೊಂಡು ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಉತ್ತರ ಪ್ರದೇಶದ ಬರೇಲಿಯಲ್ಲಿ ನಡೆದಿದೆ. ಅಕ್ಷಯ್ ಕಶ್ಯಪ್ ಎಂದು ಗುರುತಿಸಲ್ಪಟ್ಟ ಯುವಕನಿಗೆ ದೇಹದ...

ಎಪ್‌ಸ್ಟೀನ್ ಫೈಲ್ಸ್ ನಲ್ಲಿ ಹೆಸರು ಪ್ರಸ್ತಾಪ; ಗೇಟ್ಸ್ ಫೌಂಡೇಶನ್ ಸಿಬ್ಬಂದಿಗೆ ಕ್ಷಮೆಯಾಚಿಸಿದ ಬಿಲ್ ಗೇಟ್ಸ್: ವರದಿ 

ನ್ಯೂಯಾರ್ಕ್: ಅಮೆರಿಕದ ತಂತ್ರಜ್ಞಾನ ಉದ್ಯಮಿ ಬಿಲ್ ಗೇಟ್ಸ್, ಲೈಂಗಿಕ ಅಪರಾಧಿ ಜೆಫ್ರಿ ಎಪ್‌ಸ್ಟೈನ್‌ನೊಂದಿಗಿನ ಹಳೆಯ ಸಂಪರ್ಕಕ್ಕಾಗಿ ಗೇಟ್ಸ್ ಫೌಂಡೇಶನ್ ಸಿಬ್ಬಂದಿಗೆ ಕ್ಷಮೆಯಾಚಿಸಿದ್ದಾರೆ ಎಂದು ವರದಿಯಾಗಿದೆ. ವಾಲ್ ಸ್ಟ್ರೀಟ್ ಜರ್ನಲ್ ವರದಿಯ ಪ್ರಕಾರ, ಫೌಂಡೇಶನ್‌ನ ಟೌನ್...

ಕೆಎಸ್‌ಯು-ಐಯುಎಂಎಲ್ ಪ್ರತಿಭಟನೆಯಲ್ಲಿ ಘರ್ಷಣೆ; ಗಾಯಗೊಂಡ ಕೇರಳ ಆರೋಗ್ಯ ಸಚಿವೆ ವೀಣಾ ಜಾರ್ಜ್

ಕಣ್ಣೂರು ರೈಲ್ವೆ ನಿಲ್ದಾಣದಲ್ಲಿ ಬುಧವಾರ ಪೊಲೀಸರು ಮತ್ತು ಕೇರಳ ವಿದ್ಯಾರ್ಥಿ ಸಂಘ (ಕೆಎಸ್‌ಯು)-ಐಯುಎಂಎಲ್ ಯುವ ಘಟಕದ ಪ್ರತಿಭಟನಾಕಾರರ ನಡುವೆ ನಡೆದ ಘರ್ಷಣೆಯಲ್ಲಿ ಆರೋಗ್ಯ ಸಚಿವೆ ವೀಣಾ ಜಾರ್ಜ್ ಕುತ್ತಿಗೆ ಮತ್ತು ಕೈಗೆ ಗಾಯಗಳಾಗಿದೆ. ಕಾಂಗ್ರೆಸ್-ಕೆಎಸ್‌ಯು...

ಉತ್ತರಾಖಂಡ| ದೇವಸ್ಥಾನದ ಸಮೀಪ ಖಾಲಿ ಜಾಗದಲ್ಲಿ ನಮಾಜ್; ವೃದ್ಧ ಮುಸ್ಲಿಂ ವ್ಯಕ್ತಿಯ ಮೇಲೆ ಹಲ್ಲೆ

ಉತ್ತರಾಖಂಡದ ಜಗತ್ಪುರದ ಅತ್ರಿಯ ದೇವಸ್ಥಾನದ ಮುಂಭಾಗದಲ್ಲಿರುವ ಖಾಲಿ ಜಾಗದಲ್ಲಿ ನಮಾಜ್ ಮಾಡಿದ ನಂತರ ಶಾಹಿದ್ ಎಂದು ಗುರುತಿಸಲಾದ ವೃದ್ಧ ಮುಸ್ಲಿಂ ವ್ಯಕ್ತಿಯ ಮೇಲೆ ಹಲ್ಲೆ ನಡೆಸಿ ಧಾರ್ಮಿಕ ಘೋಷಣೆಗಳನ್ನು ಪಠಿಸುವಂತೆ ಒತ್ತಾಯಿಸಲಾಗಿದೆ ಎಂದು...

ಮುಝಫ್ಫರ್‌ನಗರ ಗಲಭೆ ಪ್ರಕರಣ : 37 ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

ಉತ್ತರ ಪ್ರದೇಶದ ಮುಝಫ್ಫರ್‌ನಗರದ ನ್ಯಾಯಾಲಯ 2013ರ ಕೋಮು ಗಲಭೆಗೆ ಸಂಬಂಧಿಸಿದ ಎಂಟು ಜನರ ಹತ್ಯೆ ಪ್ರಕರಣದಲ್ಲಿ ಸಾಕ್ಷ್ಯಗಳ ಕೊರತೆಯನ್ನು ಉಲ್ಲೇಖಿಸಿ 37 ಆರೋಪಿಗಳನ್ನು ಮಂಗಳವಾರ (ಫೆ.25) ಖುಲಾಸೆಗೊಳಿಸಿದೆ ಎಂದು ವರದಿಯಾಗಿದೆ. ತೀರ್ಪು ಪ್ರಕಟಿಸಿದ ಹೆಚ್ಚುವರಿ...

ಇಸ್ರೇಲ್ ಸಂಸತ್ತಿನಲ್ಲಿ ಭಾಷಣದ ವೇಳೆ ಪ್ರಧಾನಿ ಮೋದಿ ಗಾಝಾ ನರಮೇಧ ಉಲ್ಲೇಖಿಸಲಿ : ಪ್ರಿಯಾಂಕಾ ಗಾಂಧಿ ಆಗ್ರಹ

ಇಸ್ರೇಲ್‌ಗೆ ಭೇಟಿ ನೀಡಿರುವ ಪ್ರಧಾನಿ ನರೇಂದ್ರ ಮೋದಿ, ಅಲ್ಲಿನ ಸಂಸತ್ತಾದ ನೆಸೆಟ್ ಅನ್ನು ಉದ್ದೇಶಿಸಿ ಮಾತನಾಡುವಾಗ ಗಾಝಾ ನರಮೇಧವನ್ನು ಉಲ್ಲೇಖಿಸಿ ನ್ಯಾಯಕ್ಕಾಗಿ ಆಗ್ರಹಿಸಬೇಕು ಎಂದು ಎಐಸಿಸಿ ಕಾರ್ಯದರ್ಶಿ ಹಾಗೂ ವಯನಾಡ್ ಸಂಸದೆ ಪ್ರಿಯಾಂಕಾ...

ಕೇಂದ್ರ ಸಚಿವರ ಸಮ್ಮುಖದಲ್ಲಿ ‘ಮುಸ್ಲಿಂ ವಿರೋಧಿ ಹೇಳಿಕೆ’ ನೀಡಿದ ಹಿಂದುತ್ವವಾದಿ ವ್ಯಕ್ತಿ

ಉತ್ತರಾಖಂಡದಲ್ಲಿ ನಡೆದ ಸಾರ್ವಜನಿಕ ಹಿಂದೂ ಧಾರ್ಮಿಕ ಕಾರ್ಯಕ್ರಮದಲ್ಲಿ, ಕೇಂದ್ರ ಸಚಿವರ ಸಮ್ಮುಖದಲ್ಲಿಯೇ ಹಿಂದುತ್ವವಾದಿ ಮುಖಂಡನೊಬ್ಬ ಮುಸ್ಲಿಮರ ವಿರುದ್ಧ ಪ್ರಚೋದನಕಾರಿ ಹೇಳಿಕೆ ನೀಡಿದ್ದು ರಾಜಕೀಯ ಮತ್ತು ಸಾಮಾಜಿಕ ವಿವಾದಕ್ಕೆ ಕಾರಣವಾಗಿದೆ. ಇದು ಪೊಲೀಸ್ ಕ್ರಮ...

ಎನ್‌ಸಿಇಆರ್‌ಟಿ ಪಠ್ಯಪುಸ್ತಕದ ‘ನ್ಯಾಯಾಂಗದಲ್ಲಿನ ಭ್ರಷ್ಟಾಚಾರ’ ವಿಷಯಕ್ಕೆ ಸುಪ್ರೀಂ ಕೋರ್ಟ್ ತೀವ್ರ ಆಕ್ಷೇಪ

ರಾಷ್ಟ್ರೀಯ ಶೈಕ್ಷಣಿಕ ಸಂಶೋಧನೆ ಮತ್ತು ತರಬೇತಿ ಮಂಡಳಿ (ಎನ್‌ಸಿಇಆರ್‌ಟಿ) ಪ್ರಕಟಿಸಿದ 8ನೇ ತರಗತಿಯ ಹೊಸ ಸಮಾಜ ವಿಜ್ಞಾನ ಪಠ್ಯಪುಸ್ತಕದಲ್ಲಿ "ನ್ಯಾಯಾಂಗದಲ್ಲಿನ ಭ್ರಷ್ಟಾಚಾರ" ಎಂಬ ವಿಷಯ ಉಲ್ಲೇಖಿಸಿರುವುದಕ್ಕೆ ಸುಪ್ರೀಂ ಕೋರ್ಟ್ ಬುಧವಾರ (ಫೆ.25) ತೀವ್ರ...

ಮಧ್ಯಪ್ರದೇಶ: ಡಾ. ಹರಿಸಿಂಗ್ ಗೌರ್ ವಿವಿಯಲ್ಲಿ ಎಬಿವಿಪಿ-ಆರ್‌ಎಸ್‌ಎಸ್‌ ದುಷ್ಕರ್ಮಿಗಳಿಂದ ವಿದ್ಯಾರ್ಥಿಗಳ ಮೇಲೆ ದಾಳಿ, ಜೀವಬೆದರಿಕೆ;  ಎಫ್‌ಐಆರ್ ದಾಖಲು

ಮಧ್ಯಪ್ರದೇಶದ ಸಾಗರ್‌ನಲ್ಲಿರುವ ಡಾ. ಹರಿ ಸಿಂಗ್ ಗೌರ್ ವಿಶ್ವವಿದ್ಯಾಲಯದಲ್ಲಿ ನಡೆದ ಸರಣಿ ಹಿಂಸಾತ್ಮಕ ಘಟನೆಗಳು ಕ್ಯಾಂಪಸ್ ಸುರಕ್ಷತೆಯ ಬಗ್ಗೆ ಗಂಭೀರ ಕಳವಳವನ್ನು ಉಂಟುಮಾಡಿವೆ. ಐದು ದಿನಗಳಲ್ಲಿ ಎಬಿವಿಪಿ-ಆರ್‌ಎಸ್‌ಎಸ್‌ಗೆ ಸಂಬಂಧಿಸಿದ ವ್ಯಕ್ತಿಗಳಿಂದ ಎರಡು ಜೀವ...

ಅಜೀಂ ಪ್ರೇಮ್‌ ಜಿ ವಿವಿಯಲ್ಲಿ ದಾಂಧಲೆ : ಎಬಿವಿಪಿ ಸದಸ್ಯರ ವಿರುದ್ಧ ಕಠಿಣ ಕ್ರಮಕ್ಕೆ ಕೆವಿಎಸ್‌ ಆಗ್ರಹ

ಅಜೀಂ ಪ್ರೇಮ್‌ ಜಿ ವಿಶ್ವವಿದ್ಯಾಲಯಕ್ಕೆ ನುಗ್ಗಿ ದಾಂಧಲೆ ನಡೆಸಿದ ಎಬಿವಿಪಿ ಸದಸ್ಯರ ವಿರುದ್ದ ಕಠಿಣ ಕ್ರಮ ಕೈಗೊಳ್ಳುವಂತೆ ಕರ್ನಾಟಕ ವಿದ್ಯಾರ್ಥಿ ಸಂಘಟನೆ (ಕೆವಿಎಸ್‌) ಆಗ್ರಹಿಸಿದೆ. ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಸಂಘಟನೆಯ ರಾಜ್ಯ...