Homeಮುಖಪುಟಗೋ ಕಳ್ಳಸಾಗಣೆ ಆರೋಪ: ಎರಡು ವಾರಗಳ ಹಿಂದೆ ಹಲ್ಲೆಗೊಳಗಾಗಿದ್ದ ಜುನೈದ್ ಸಾವು

ಗೋ ಕಳ್ಳಸಾಗಣೆ ಆರೋಪ: ಎರಡು ವಾರಗಳ ಹಿಂದೆ ಹಲ್ಲೆಗೊಳಗಾಗಿದ್ದ ಜುನೈದ್ ಸಾವು

- Advertisement -
- Advertisement -

ಭೋಪಾಲ್: ಸುಮಾರು ಎರಡು ವಾರಗಳ ಹಿಂದೆ ಗೋ ಕಳ್ಳಸಾಗಣೆ ಆರೋಪದಡಿ ಗೋ ರಕ್ಷಕರಿಂದ ಮಾರಣಾಂತಿಕವಾಗಿ ಹಲ್ಲೆಗೊಳಗಾಗಿದ್ದ ಜುನೈದ್ ಶಹಜಾದ್ (21) ಮಂಗಳವಾರ ಸಾವನ್ನಪ್ಪಿದ್ದಾನೆ.  ಇದೇ ಸಂದರ್ಭದಲ್ಲಿ ಹಲ್ಲೆಗೊಳಗಾಗಿದ್ದ ಅರ್ಮಾನ್ ಕೂಡ ಭೋಪಾಲ್‌ನ ಹಮೀದಿಯಾ ಆಸ್ಪತ್ರೆಯಲ್ಲಿ ಜೀವನ್ಮರಣ ಹೋರಾಟ ನಡೆಸುತ್ತಿದ್ದಾನೆ.

ಇದೇ ಜೂನ್ 5ರಂದು ಜುನೈದ್ ಮತ್ತು ಅರ್ಮಾನ್ ಅವರು ರಾಯ್ಸೇನ್ ಜಿಲ್ಲೆಯ ಸਾਂಚಿಯ ಮೆಹ್‌ಗಾವ್ ಗ್ರಾಮದ ಬಳಿ ಗೋ ಕಳ್ಳಸಾಗಣೆ ಆರೋಪದಡಿ ಗೋ ರಕ್ಷಕರಿಗೆ ಸಿಕ್ಕಿಬಿದ್ದಿದ್ದರು. ಆಗ ಇವರಿಂದ ಥಳಿಸಲ್ಪಟ್ಟರು ಎಂದು ರಾಯ್ಸೇನ್ ಪೊಲೀಸ್ ವರಿಷ್ಠಾಧಿಕಾರಿ ಪಂಕಜ್ ಪಾಂಡೆ ಹೇಳಿದ್ದಾರೆ.

ನಾವು ಜುನೈದ್ ಮತ್ತು ಹಮೀದಿಯಾ ವಿರುದ್ಧ ಗೋ ಕಳ್ಳಸಾಗಣೆ ಪ್ರಕರಣ ದಾಖಲಿಸಿದ್ದೇವೆ. ಹಾಗೆಯೇ ಇವರನ್ನು ಥಳಿಸಿದ ಮೂರು ವ್ಯಕ್ತಿಗಳ ವಿರುದ್ಧ ಜೂನ್ 9ರಂದು ಕೊಲೆ ಯತ್ನ ಪ್ರಕರಣ ದಾಖಲಿಸಿದ್ದೇವೆ. ಇದುವರೆಗಿನ ನಮ್ಮ ತನಿಖೆಯಲ್ಲಿ ಬಂಧಿತ ಮೂವರು ಬಜರಂಗದಳದೊಂದಿಗೆ ಯಾವುದೇ ಸಂಬಂಧ ಹೊಂದಿದ್ದಾರೆ ಎಂದು ಬೆಳಕಿಗೆ ಬಂದಿಲ್ಲ ಎಂದು ಪಾಂಡೆ ದಿ ಪ್ರಿಂಟ್‌ಗೆ ತಿಳಿಸಿದ್ದಾರೆ.

ನಾವು ಈಗ ಸಾವನ್ನಪ್ಪಿರುವ ಜುನೈದ್‌ನ ಮರಣೋತ್ತರ ಪರೀಕ್ಷೆಯ ವರದಿಗಾಗಿ ಕಾಯುತ್ತಿದ್ದೇವೆ. ಅದು ದೊರೆತ ಕೂಡಲೇ ಕೊಲೆ ಆರೋಪಗಳನ್ನು ಅನ್ವಯಿಸಲಾಗುವುದು. ಈಗ ಸಾವನ್ನಪ್ಪಿರುವ ಜುನೈದ್ ವಿರುದ್ಧ ಈ ಹಿಂದೆ ಗೋ ಕಳ್ಳಸಾಗಣೆಯ ಎರಡು ಪ್ರಕರಣಗಳು ದಾಖಲಾಗಿದ್ದವು ಎಂದು ಪಾಂಡೆ ಹೇಳಿದ್ದಾರೆ.

ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಅರ್ಮಾನ್ ಡೈರಿ ನಡೆಸುತ್ತಿದ್ದಾನೆ. ನನ್ನ ಮಗ ಜುನೈದ್ ಪೊಲೀಸರು ಆರೋಪಿಸಿರುವಂತೆ ಗೋ ಕಳ್ಳಸಾಗಣೆ ಮಾಡುತ್ತಿರಲಿಲ್ಲ. ಬದಲಾಗಿ ಜಾನುವಾರು ವ್ಯಾಪಾರ ಮಾಡುತ್ತಿದ್ದನು ಎಂದು ಅರ್ಮಾನ್ ತಂದೆ ಜಾಫರುದ್ದೀನ್ ಹೇಳಿದ್ದಾರೆ.

ಜೂನ್ 5ರಂದು ಸುಮಾರು 2:30 ಕ್ಕೆ ಅರ್ಮಾನ್ ಮತ್ತು ನಾನು ವಿದಿಶಾದ ಧನೋರಾ ಗ್ರಾಮದಲ್ಲಿದ್ದೆವು. ಅಲ್ಲಿ ನಾವು ಅವನ ವ್ಯಾನಿಗೆ ಜಾನುವಾರುಗಳನ್ನು ತುಂಬಿಸಿ ಭೋಪಾಲ್‌ಗೆ ಹಿಂತಿರುಗುತ್ತಿದ್ದೆವು. ಮೆಹ್‌ಗಾವ್ ಬಳಿಯ ವಿದಿಶಾ-ಕೌಡಿ ರಸ್ತೆಯಲ್ಲಿರುವ ಶಾಲೆಯನ್ನು ದಾಟುತ್ತಿದ್ದಾಗ, ಸುಮಾರು 10-15 ಜನರು ನಮ್ಮ ವಾಹನವನ್ನು ಹಿಂದಿಕ್ಕಿ ನಿಲ್ಲಿಸಿದರು ಎಂದು ಘಟನೆಯ ನಂತರ ಸಾಂಚಿ ಪೊಲೀಸರಿಗೆ ನೀಡಿದ ಹೇಳಿಕೆಯಲ್ಲಿ ಜುನೈದ್ ಹೇಳಿದ್ದರು.

ಈ ಜನರು ನಮ್ಮನ್ನು ನಿಂದಿಸಲು ಪ್ರಾರಂಭಿಸಿದರು. ಅವರಲ್ಲಿ ಕೆಲವರು ಅವರ ವಾಹನಗಳಲ್ಲಿ ದೊಣ್ಣೆಗಳನ್ನು ಸಹ ಇಟ್ಟುಕೊಂಡಿದ್ದರು. ಅವರು ಅರ್ಮಾನ್ ಮತ್ತು ನನ್ನನ್ನು ನಮ್ಮ ವಾಹನದಿಂದ ಹೊರಗೆ ಎಳೆದು, ಗೋವುಗಳನ್ನು ಕಳ್ಳಸಾಗಣೆ ಮಾಡುತ್ತಿದ್ದೀರಿ ಎಂದು ಆರೋಪಿಸಿ, ಥಳಿಸಿದರು. ನಮ್ಮನ್ನು ಗುಂಪು ಥಳಿಸುತ್ತಲೇ ಘಟನೆಯನ್ನು ಚಿತ್ರೀಕರಿಸಿದೆ.  ಆ ನಂತರ ಗುಂಪು ನಮ್ಮನ್ನು ಅವರ ವ್ಯಾನಿನಲ್ಲಿ ಪೊಲೀಸ್ ಠಾಣೆಗೆ ಕರೆದೊಯ್ದರು ಎಂದು ಜುನೈದ್ ಹೇಳಿಕೆಯಲ್ಲಿ ತಿಳಿಸಿದ್ದರು.

ಈ ಘಟನೆಯ ವಿಡಿಯೋ ತುಣುಕುಗಳು ನಂತರ ಸಾಮಾಜಿಕ ಮಾಧ್ಯಮ ವೇದಿಕೆಗಳಲ್ಲಿ ವ್ಯಾಪಕವಾಗಿ ಹರಿದಾಡಿದ್ದವು. ವಿಡಿಯೋ ತುಣುಕುಗಳಲ್ಲಿ ಜುನೈದ್ ಮತ್ತು ಅರ್ಮಾನ್ ಅವರನ್ನು ಗುಂಪೊಂದು ಥಳಿಸುತ್ತಿರುವುದು ಸ್ಪಷ್ಟವಾಗಿ ಕಾಣುತ್ತಿದ್ದರೂ ಮತ್ತು ಜುನೈದ್‌ನ ಹೇಳಿಕೆಯಲ್ಲಿ “ಜನರ ಗುಂಪು” ಎಂದು ಉಲ್ಲೇಖಿಸಿದ್ದರೂ ಕೇವಲ ಮೂವರು ಆರೋಪಿಗಳು ಮಾತ್ರ ಭಾಗಿಯಾಗಿದ್ದಾರೆ ಎಂದು ಪೊಲೀಸರು ಹೇಳಿದ್ದಾರೆ.

ಇಸ್ರೇಲ್‌ನಲ್ಲಿರುವ ಭಾರತೀಯ ಕಾರ್ಮಿಕ ಕುಟುಂಬಗಳಿಗೆ ನಿದ್ದೆಯಿಲ್ಲದ ರಾತ್ರಿಗಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೋಗಿಲು ಬಡಾವಣೆ ಮನೆಗಳ ನೆಲಸಮ: ಹದಿನೈದು ದಿನಗಳೊಳಗೆ ಪುನರ್ವಸತಿ ಕಲ್ಪಿಸದಿದ್ದರೆ ತೀವ್ರ ಹೋರಾಟದ ಎಚ್ಚರಿಕೆ

ಬೆಂಗಳೂರು ಉತ್ತರ ತಾಲ್ಲೂಕಿನ ಯಲಹಂಕ ಪ್ರದೇಶದ ಕೋಗಿಲು ಲೇಔಟ್‌ನ ಫಕೀರ್ ಕಾಲೋನಿ ಮತ್ತು ಮಹಾನಾಯಕ ಅಂಬೇಡ್ಕರ್ ನಗರ (ವಾಸಿಂ ಲೇಔಟ್‌) ಪ್ರದೇಶದ ಬಡ ನಿವಾಸಿಗಳ ಮನೆಗಳನ್ನು 2025 ಡಿಸೆಂಬರ್ 20ರಂದು ಬೆಳಿಗ್ಗೆ ಸುಮಾರು...

ಡಾಲರ್ ಎದುರು ಸಾರ್ವಕಾಲಿಕ ಕನಿಷ್ಠ ಮಟ್ಟ 95.20 ರೂ.ಗೆ ಕುಸಿತ ಕಂಡ ಭಾರತೀಯ ರೂಪಾಯಿ ಮೌಲ್ಯ 

ನವದೆಹಲಿ: ಏಪ್ರಿಲ್ 30ರಂದು ಆರಂಭಿಕ ವಹಿವಾಟಿನಲ್ಲಿ ಭಾರತೀಯ ರೂಪಾಯಿ ಮೌಲ್ಯವು ಅಮೆರಿಕನ್ ಡಾಲರ್ ಎದುರು ಸಾರ್ವಕಾಲಿಕ ಕನಿಷ್ಠ ಮಟ್ಟವಾದ 95.07 ಕ್ಕೆ ಕುಸಿದಿದೆ. ಕರೆನ್ಸಿ 0.4% ಕುಸಿತದೊಂದಿಗೆ 95.2325 ಕ್ಕೆ ಇಳಿದಿದೆ. ಇದು ಮಾರ್ಚ್...

ತಮಿಳುನಾಡು| ದಲಿತ ಯುವಕನ ಶವ ಪತ್ತೆ; ‘ಜಾತಿ ಕಾರಣಕ್ಕೆ ಹತ್ಯೆಯಾಗಿದೆ’ ಎಂದು ಕುಟುಂಬದ ಆರೋಪ

ತಮಿಳುನಾಡಿನ ಪುದುಕ್ಕೊಟ್ಟೈ ಜಿಲ್ಲೆಯ ಕ್ವಾರಿ ಕೆರೆಯ ಬಳಿ 20 ವರ್ಷದ ದಲಿತ ಯುವಕನ ಶವ ಪತ್ತೆಯಾಗಿದ್ದು, ಹಿಂದುಳಿದ ವರ್ಗದ ಯುವತಿಯೊಂದಿಗಿನ ಸಂಬಂಧದಿಂದಾಗಿ ಆತನನ್ನು ಕೊಲ್ಲಲಾಗಿದೆ ಎಂದು ಆತನ ಕುಟುಂಬ ಆರೋಪಿಸಿದೆ. ಆದರೆ, ಈ...

‘ಬಾಲ ಕಾರ್ಮಿಕ’ ಶಂಕೆಯ ಮೇಲೆ 155 ಮುಸ್ಲಿಂ ವಿದ್ಯಾರ್ಥಿಗಳ ಬಂಧನ: ಧಾರ್ಮಿಕ ಗುರುತಿನ ಕಾರಣಕ್ಕೆ ಬಂಧಿಸಿರುವುದಾಗಿ ಪೋಷಕರ ಆರೋಪ

ಮಧ್ಯಪ್ರದೇಶದ ಕಟ್ನಿಯಲ್ಲಿ ಸರ್ಕಾರಿ ರೈಲ್ವೆ ಪೊಲೀಸರು (GRP) 155 ಮುಸ್ಲಿಂ ವಿದ್ಯಾರ್ಥಿಗಳು ಮತ್ತು ಎಂಟು ಶಿಕ್ಷಕರನ್ನು "ಬಾಲ ಕಾರ್ಮಿಕ" ಶಂಕೆಯ ಮೇಲೆ ಬಂಧಿಸಿದ ನಂತರ, ಪೋಷಕರು ಮುಸ್ಲಿಂ ವಿರೋಧಿ ಪಕ್ಷಪಾತವನ್ನು ಹೊಂದಿದ್ದಾರೆಂದು ಆರೋಪಿಸಿದ್ದಾರೆ....

ಜನಿವಾರದ ಹಿಂದೆ ಬಿದ್ದಿರುವ ವಿರೋಧ ಪಕ್ಷ ಮತ್ತು ಮಾಧ್ಯಮಗಳು

ಏಪ್ರಿಲ್ 23, 2026 ರಂದು ನಡೆದ ಕರ್ನಾಟಕ ಸಾಮಾನ್ಯ ಪ್ರವೇಶ ಪರೀಕ್ಷೆ (KCET) ವೇಳೆ ಬೆಂಗಳೂರಿನ ಕೋರಮಂಗಲದಲ್ಲಿರುವ ಕೃಪಾನಿಧಿ ಪಿಯು ಕಾಲೇಜಿನಲ್ಲಿ ಐವರು ಬ್ರಾಹ್ಮಣ ವಿದ್ಯಾರ್ಥಿಗಳ ಜನಿವಾರವನ್ನು ಬಲವಂತವಾಗಿ ತೆಗೆಸಿದ ಘಟನೆ ರಾಜಕೀಯ...

ಒಡಿಶಾ| ಸಾವಿನ ದಾಖಲೆ ಕೇಳಿದ ಬ್ಯಾಂಕ್‌ ಸಿಬ್ಬಂದಿ; ಸಮಾದಿ ಅಗೆದು ಸಹೋದರಿಯ ಅಸ್ಥಿಪಂಜರ ತಂದ ಬುಡಕಟ್ಟು ವ್ಯಕ್ತಿ

ಒಡಿಶಾದ ಕಿಯೋಂಜಾರ್ ಜಿಲ್ಲೆಯಲ್ಲಿ, ಬುಡಕಟ್ಟು ವ್ಯಕ್ತಿಯೊಬ್ಬ ತನ್ನ ಮೃತ ಸಹೋದರಿಯ ಅಸ್ಥಿಪಂಜರವನ್ನು ಅಗೆದು ಗ್ರಾಮೀಣ ಬ್ಯಾಂಕ್‌ಗೆ ತೆಗೆದುಕೊಂಡು ಹೋಗಿದ್ದಾನೆ. ಆಕೆಯ ಸಾವನ್ನು ಸಾಬೀತುಪಡಿಸುವ ಮೂಲಕ ಆಕೆಯ ಖಾತೆಯಲ್ಲಿ ಜಮಾ ಮಾಡಿದ ಹಣವನ್ನು ಪಡೆಯಲು...

ಜಾತಿ ಕಿರುಕುಳಕ್ಕೆ ದಲಿತ ವಿದ್ಯಾರ್ಥಿ ಸಾವು ಪ್ರಕರಣ: ಇಂದು ಸಂಜೆ 6 ರವರೆಗೆ ಕೇರಳ ಬಂದ್

ಜಾತಿ ಆಧಾರಿತ ಕಿರುಕುಳದಿಂದ ಮನನೊಂದಿದ್ದ ಕೇರಳದ ಅಂಚರಕಂಡಿಯ ಕಣ್ಣೂರು ದಂತ ಕಾಲೇಜಿನಲ್ಲಿ ಪ್ರಥಮ ವರ್ಷದ ಬಿಡಿಎಸ್ ವಿದ್ಯಾರ್ಥಿ ಆರ್.ಎಲ್. ನಿತಿನ್ ರಾಜ್ ಆತ್ಮಹತ್ಯೆಗೆ ರಾಜ್ಯದಾದ್ಯಂತ ಆಕ್ರೋಶ ವ್ಯಕ್ತವಾಗಿದೆ. ಕಾಲೇಜು ಕಟ್ಟಡದಿಂದ ಹಾರಿ ಆತ್ಮಹತ್ಯೆ...

‘ಹೊತ್ತಿ ಉರಿಯುತ್ತಿರುವ ಮಣಿಪುರ’: ಶತಮಾನದ ಬೆಂಕಿಗೆ ತುಪ್ಪ ಸುರಿದ ಬಿಜೆಪಿಯ ಕೋಮುರಾಜಕಾರಣ

ಭಾರತದ ಈಶಾನ್ಯ ರಾಜ್ಯ ಮಣಿಪುರ ಅಕ್ಷರಶಃ ಹೊತ್ತಿ ಉರಿಯುತ್ತಿದೆ. ಶತಮಾನಗಳಿಂದ ಹೊಗೆಯಾಡುತ್ತಿದ್ದ ಹಗೆತನಕ್ಕೆ ಕೋಮುರಾಜಕಾರಣದ ಬಣ್ಣ ಬಳಿದ ಬಿಜೆಪಿ ಮತ್ತು ಕೇಂದ್ರ ಸರ್ಕಾರ ಮಣಿಪುರದ ಜನರತ್ತ ತಿರುಗಿಯೂ ನೋಡುತ್ತಿಲ್ಲ. 2023ರಲ್ಲಿ ಭುಗಿಲೆದ್ದ ಉದ್ವಿಗ್ನತೆ...

ಮಧ್ಯಪ್ರದೇಶ| ದಲಿತ ದಂಪತಿಗೆ ಹನುಮಾನ್ ದೇಗುಲ ಪ್ರವೇಶ ನಿರಾಕರಣೆ; ಸಾಮಾಜಿಕ ಬಹಿಷ್ಕಾರ

ಮಧ್ಯಪ್ರದೇಶದ ಖಾರ್ಗೋನ್ ಜಿಲ್ಲೆಯ ಹನುಮಾನ್ ದೇವಸ್ಥಾನಕ್ಕೆ ನವವಿವಾಹಿತ ದಲಿತ ದಂಪತಿಗೆ ಪ್ರವೇಶ ನಿರಾಕರಿಸಲಾಗಿದೆ ಎಂಬ ಆರೋಪ ಕೇಳಿಬಂದಿದ್ದು, ಇದು ಗ್ರಾಮದಲ್ಲಿ ಉದ್ವಿಗ್ನತೆಯನ್ನು ಉಂಟುಮಾಡಿದೆ. ಈ ಘಟನೆಯು ಜಾತಿ ಆಧಾರಿತ ತಾರತಮ್ಯದ ಕುರಿತು ಕಳವಳ...

ಬಂಗಾಳ SIR : ನ್ಯಾಯಮಂಡಳಿಗಳಿಂದ ಪರಿಹಾರ ಪಡೆದವರು ಕೇವಲ 0.01% ಜನ

ಪಶ್ಚಿಮ ಬಂಗಾಳದಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಲ್ಲಿ ಉಂಟಾದ ವಿವಾದಗಳನ್ನು ಬಗೆಹರಿಸಲು ಮೇಲ್ಮನವಿ ನ್ಯಾಯಮಂಡಳಿಗಳನ್ನು ಸ್ಥಾಪಿಸಲಾಗಿದೆ. ಎಸ್‌ಐಆರ್ ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದರ ಅಥವಾ...