Homeಮುಖಪುಟ'ಹೇಡಿತನದ, ಅವಿವೇಕದ ಹಿಂಸಾಚಾರ': 400 ಜನರನ್ನು ಬಲಿತೆಗೆದುಕೊಂಡ ಕಾಬೂಲ್ ಆಸ್ಪತ್ರೆಯ ಮೇಲಿನ ಪಾಕ್ ದಾಳಿ ಖಂಡಿಸಿದ...

‘ಹೇಡಿತನದ, ಅವಿವೇಕದ ಹಿಂಸಾಚಾರ’: 400 ಜನರನ್ನು ಬಲಿತೆಗೆದುಕೊಂಡ ಕಾಬೂಲ್ ಆಸ್ಪತ್ರೆಯ ಮೇಲಿನ ಪಾಕ್ ದಾಳಿ ಖಂಡಿಸಿದ ಭಾರತ 

- Advertisement -
- Advertisement -

ಕಾಬೂಲ್‌ನ ಆಸ್ಪತ್ರೆಯ ಮೇಲೆ ಪಾಕಿಸ್ತಾನ ನಡೆಸಿದ ವಾಯುದಾಳಿಯನ್ನು ಭಾರತ ಮಂಗಳವಾರ ಖಂಡಿಸಿದೆ. ಈ ದಾಳಿಯಲ್ಲಿ ಕನಿಷ್ಠ 400 ಜನರು ಅಸ್ವಸ್ಥರಾಗಿ 250 ಜನರು ಗಾಯಗೊಂಡಿದ್ದರು. ಈ ಬಗ್ಗೆ ವಿದೇಶಾಂಗ ವ್ಯವಹಾರಗಳ ಸಚಿವಾಲಯ (MEA) ಹೇಳಿಕೆಯೊಂದರಲ್ಲಿ ಈ ಕೃತ್ಯವನ್ನು “ಹೇಡಿತನ ಮತ್ತು ಅವಿವೇಕಿ” ಎಂದು ಕರೆದಿದ್ದು, ಪಾಕಿಸ್ತಾನವು “ಹತ್ಯಾಕಾಂಡವನ್ನು ಮಿಲಿಟರಿ ಕಾರ್ಯಾಚರಣೆಯಂತೆ ಬಿಂಬಿಸಲು ಪ್ರಯತ್ನಿಸುತ್ತಿದೆ” ಎಂದು ಆರೋಪಿಸಿದೆ.

“ಇದು ಹೇಡಿತನ ಮತ್ತು ವಿವೇಚನೆಯಿಲ್ಲದ ಹಿಂಸಾಚಾರವಾಗಿದ್ದು, ಮಿಲಿಟರಿ ಗುರಿಯಾಗಿ ಸಮರ್ಥಿಸಲಾಗದ ಸೌಲಭ್ಯದಲ್ಲಿ ಹೆಚ್ಚಿನ ಸಂಖ್ಯೆಯ ನಾಗರಿಕರ ಜೀವಗಳನ್ನು ಬಲಿ ತೆಗೆದುಕೊಂಡಿದೆ. ಪಾಕಿಸ್ತಾನ ಈಗ ಹತ್ಯಾಕಾಂಡವನ್ನು ಮಿಲಿಟರಿ ಕಾರ್ಯಾಚರಣೆಯಂತೆ ಬಿಂಬಿಸಲು ಪ್ರಯತ್ನಿಸುತ್ತಿದೆ” ಎಂದು ಹೇಳಿಕೆಯಲ್ಲಿ ತಿಳಿಸಲಾಗಿದೆ.

ನೆರೆಹೊರೆಯವರ ನಡುವಿನ ಸಂಘರ್ಷದಲ್ಲಿ ತೀವ್ರ ಏರಿಕೆ ಕಂಡುಬರುತ್ತಿರುವಂತೆ ಕಂಡುಬರುತ್ತಿರುವಂತೆ, ಅಫ್ಘಾನ್ ತಾಲಿಬಾನ್ ಸರ್ಕಾರದ ವಕ್ತಾರರು ಮಂಗಳವಾರ, ಕಾಬೂಲ್‌ನ ಆಸ್ಪತ್ರೆಯ ಮೇಲೆ ಪಾಕಿಸ್ತಾನ ನಡೆಸಿದ ವಾಯುದಾಳಿಯಲ್ಲಿ ಕನಿಷ್ಠ 400 ಜನರು ಸಾವನ್ನಪ್ಪಿದ್ದಾರೆ ಮತ್ತು 250 ಜನರು ಗಾಯಗೊಂಡಿದ್ದಾರೆ ಎಂದು ಹೇಳಿದರು.

ಆದರೆ ಕೃತ್ಯವನ್ನು ಸಮರ್ಥಿಸಿಕೊಂಡಿರುವ ಪಾಕಿಸ್ತಾನ ಈ ಹೇಳಿಕೆಯನ್ನು ಸುಳ್ಳು ಮತ್ತು ದಾರಿತಪ್ಪಿಸುವಂತದ್ದು ಎಂದು ತಿರಸ್ಕರಿಸಿದೆ. ಸೋಮವಾರ ರಾತ್ರಿ “ಮಿಲಿಟರಿ ಸ್ಥಾಪನೆಗಳು ಮತ್ತು ಭಯೋತ್ಪಾದಕ ಬೆಂಬಲಿಸುವ ಮೂಲಸೌಕರ್ಯಗಳನ್ನು ನಿಖರವಾಗಿ ಗುರಿಯಾಗಿಸಿಕೊಂಡು ದಾಳಿ ಮಾಡಲಾಗಿದೆ” ಎಂದು ಹೇಳಿಕೊಂಡಿದೆ. 

ಅಫ್ಘಾನಿಸ್ತಾನದ ಆಸ್ಪತ್ರೆ ಮೇಲೆ ಪಾಕಿಸ್ತಾನದಿಂದ ವಾಯುದಾಳಿ ; ಕನಿಷ್ಠ 400 ಸಾವು 

ರಾಜಧಾನಿ ಕಾಬೂಲ್‌ನಲ್ಲಿ ಮಾದಕ ವ್ಯಸನಿಗಳಿಗೆ ಚಿಕಿತ್ಸೆ ನೀಡುತ್ತಿದ್ದ ಆಸ್ಪತ್ರೆಯ ಮೇಲೆ ಪಾಕಿಸ್ತಾನದ ಮಿಲಿಟರಿ ವಾಯು ದಾಳಿ ನಡೆಸಿದ್ದು, ಕನಿಷ್ಠ 400 ಜನರು ಸಾವನ್ನಪ್ಪಿದ್ದಾರೆ ಎಂದು ಅಫ್ಘಾನಿಸ್ತಾನ ಆರೋಪಿಸಿದೆ.

ಅಲ್‌-ಜಝೀರಾ ವರದಿಯ ಪ್ರಕಾರ, ಅಫ್ಘಾನಿಸ್ತಾನದ ಆರೋಪವನ್ನು ಪಾಕಿಸ್ತಾನ ತಳ್ಳಿ ಹಾಕಿದೆ. ಇದು ಸುಳ್ಳು ಮತ್ತು ಜನರನ್ನು ದಾರಿ ತಪ್ಪಿಸುವ ಹೇಳಿಕೆ ಎಂದಿದೆ. ಸೋಮವಾರ (ಮಾ.16) ಕೇವಲ ಕಾಬೂಲ್ ಮತ್ತು ನಂಗಹಾರ್ ಪ್ರಾಂತ್ಯದ ಮಿಲಿಟರಿ ನೆಲೆಗಳನ್ನು ಮಾತ್ರ ಗುರಿಯಾಗಿಸಿಕೊಂಡಿರುವುದಾಗಿ ಅದು ತಿಳಿಸಿದೆ.

ಅಫ್ಘಾನಿಸ್ತಾನದ ತಾಲಿಬಾನ್ ಸರ್ಕಾರದ ಉಪ ವಕ್ತಾರ ಹಮ್ದುಲ್ಲಾ ಫಿತ್ರತ್ ಅವರ ಪ್ರಕಾರ, ಕಾಬೂಲ್‌ನ ‘ಉಮರ್ ವ್ಯಸನ ಮುಕ್ತಿ ಆಸ್ಪತ್ರೆ’ಯ (Omar Addiction Treatment Hospital) ಮೇಲೆ ಸ್ಥಳೀಯ ಕಾಲಮಾನ ಸೋಮವಾರ ರಾತ್ರಿ ಸುಮಾರು 9 ಗಂಟೆಗೆ ಪಾಕಿಸ್ತಾನ ದಾಳಿ ನಡೆಸಿದೆ.

ಆಸ್ಪತ್ರೆಯು 2,000 ಹಾಸಿಗೆಗಳ ಸಾಮರ್ಥ್ಯದ ಬೃಹತ್ ಆರೋಗ್ಯ ಸೌಲಭ್ಯವಾಗಿದ್ದು, ದಾಳಿಯಿಂದ ಆಸ್ಪತ್ರೆ ಕಟ್ಟಡದ ದೊಡ್ಡ ಭಾಗ ಸಂಪೂರ್ಣವಾಗಿ ಧ್ವಂಸಗೊಂಡಿದೆ ಎಂದು ಫಿತ್ರತ್ ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಬರೆದುಕೊಂಡಿದ್ದಾರೆ.

“ದುರದೃಷ್ಟವಶಾತ್, ಸಾವಿನ ಸಂಖ್ಯೆ ಇದುವರೆಗೆ 400ಕ್ಕೆ ತಲುಪಿದೆ. ಸುಮಾರು 250 ಜನರು ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ. 

ರಕ್ಷಣಾ ತಂಡಗಳು ಪ್ರಸ್ತುತ ಸ್ಥಳದಲ್ಲಿದ್ದು, ಬೆಂಕಿ ನಂದಿಸಲು ಮತ್ತು ಬಲಿಪಶುಗಳ ಉಳಿದ ಮೃತದೇಹಗಳನ್ನು ಹೊರತೆಗೆಯಲು ಕೆಲಸ ಮಾಡುತ್ತಿವೆ” ಎಂದು ಫಿತ್ರತ್ ತಮ್ಮ ಪೋಸ್ಟ್‌ನಲ್ಲಿ ಹೇಳಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR: 43ಲಕ್ಷದಲ್ಲಿ ನೋಟಿಸ್ ತಲುಪಿರುವುದು 25ಲಕ್ಷ ಜನರಿಗೆ ಮಾತ್ರ, ಬಾಕಿ 18ಲಕ್ಷ ಜನರಿಗೆ ಇನ್ನು ನೋಟಿಸ್ಸೇ ತಲುಪಿಲ್ಲ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ಆಡಳಿತಾತ್ಮಕ ಗೊಂದಲ ಹಾಗೂ ಯಾಂತ್ರಿಕ ಲೋಪಗಳ ಜಾಲದಲ್ಲಿ ಸಿಲುಕಿಬಿದ್ದಿದೆ. ಮುಖ್ಯ ಚುನಾವಣಾಧಿಕಾರಿಗಳ ಕಚೇರಿ ಬಿಡುಗಡೆ ಮಾಡಿರುವ ಇತ್ತೀಚಿನ ದತ್ತಾಂಶವೇ ಆಯೋಗದ...

ಕಾಳಿಘಾಟ್‌ನಲ್ಲಿ ‘ಮೀನಿನ ಪ್ರಸಾದ’ ಸ್ವೀಕರಿಸಿದ ಸುವೇಂದು ಅಧಿಕಾರಿ; ಬಾಗೇಶ್ವರ್ ಬಾಬಾ ‘ಮಾಂಸಾಹಾರ’ ವಿವಾದಕ್ಕೆ ಹೊಸ ತಿರುವು!

ದುರ್ಗಾ ಪೂಜೆ ಸಂದರ್ಭದಲ್ಲಿ ಮೀನು–ಮಾಂಸ ಸೇವನೆ ಕುರಿತು ಬಾಗೇಶ್ವರ್ ಧಾಮದ ಧೀರೇಂದ್ರ ಕೃಷ್ಣ ಶಾಸ್ತ್ರಿ ನೀಡಿರುವ ಹೇಳಿಕೆ ಪಶ್ಚಿಮ ಬಂಗಾಳದಲ್ಲಿ ವಿವಾದಕ್ಕೆ ಕಾರಣವಾಗಿರುವ ನಡುವೆಯೇ, ಮುಖ್ಯಮಂತ್ರಿ ಸುವೇಂದು ಅಧಿಕಾರಿ ಕಾಳಿಘಾಟ್ʼನ ಕಾಳಿ ದೇವಸ್ಥಾನದಲ್ಲಿ...

ಎಸ್‌ಐಆರ್‌: ಹೈದರಾಬಾದ್, ಸಿಕಂದರಾಬಾದ್‌ನಲ್ಲಿ ಲಕ್ಷಾಂತರ ಮತದಾರರ ಹೆಸರು ಅಳಿಸುವಿಕೆ; 2029ರ ಚುನಾವಣೆಗೂ ಮುನ್ನ ಗಂಭೀರ ಆತಂಕ

ಹೈದರಾಬಾದ್: ತೆಲಂಗಾಣದಲ್ಲಿ ನಡೆಯುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಡಿ ಮತದಾರರ ಪಟ್ಟಿಯಿಂದ ಭಾರೀ ಪ್ರಮಾಣದಲ್ಲಿ ಹೆಸರುಗಳನ್ನು ತೆಗೆದುಹಾಕಲಾಗಿರುವುದು ಮುಂದಿನ ಚುನಾವಣೆಯ ರಾಜಕೀಯ ಲೆಕ್ಕಾಚಾರಗಳ ಮೇಲೆ ಗಂಭೀರ ಪರಿಣಾಮ ಬೀರುವ ಸಾಧ್ಯತೆಯನ್ನು ಹುಟ್ಟುಹಾಕಿದೆ....

9/11 ದಾಳಿಗೆ 25 ವರ್ಷ: ‘ಭಯೋತ್ಪಾದನೆ ವಿರುದ್ಧದ ಯುದ್ಧ’ ಮತ್ತು ಕುಸಿದ ಪ್ರಜಾಪ್ರಭುತ್ವದ ಮೌಲ್ಯಗಳು

ನ್ಯೂಯಾರ್ಕ್‌ನ ಪ್ರತಿಷ್ಠಿತ ವರ್ಲ್ಡ್ ಟ್ರೇಡ್ ಸೆಂಟರ್ ಅವಳಿ ಗೋಪುರಗಳ ಮೇಲೆ ನಡೆದ ಭೀಕರ ಭಯೋತ್ಪಾದನಾ ದಾಳಿಗೆ ಇಂದಿಗೆ ಭರ್ತಿ 25 ವರ್ಷಗಳು ತುಂಬಿವೆ. ಈ ಕಾಲು ಶತಮಾನದ ಅವಧಿಯಲ್ಲಿ 'ಭಯೋತ್ಪಾದನೆ ವಿರುದ್ಧದ ಜಾಗತಿಕ...

‘ಈ ಪ್ರಕ್ರಿಯೆಯೇ ಶಿಕ್ಷೆಯಾಗಿದೆ’: ಉಮರ್ ಖಾಲಿದ್ ದೀರ್ಘ ಜೈಲುವಾಸದ ಬಗ್ಗೆ ಮಾಜಿ ನ್ಯಾಯಮೂರ್ತಿ ದೀಪಕ್ ಗುಪ್ತಾ ತೀವ್ರ ಟೀಕೆ

ನವದೆಹಲಿ: ಮಾನವ ಹಕ್ಕುಗಳ ಕಾರ್ಯಕರ್ತ, ವಿದ್ಯಾರ್ಥಿ ನಾಯಕ ಉಮರ್ ಖಾಲಿದ್ ಅವರ ದೀರ್ಘಕಾಲದ ವಿಚಾರಣಾಪೂರ್ವ ಬಂಧನ, ಎಲ್ಗರ್ ಪರಿಷತ್ ಪ್ರಕರಣದ ಆರೋಪಿಗಳ ವರ್ಷಗಳ ಜೈಲುವಾಸ ಹಾಗೂ ವೈಯಕ್ತಿಕ ಸ್ವಾತಂತ್ರ್ಯಕ್ಕೆ ಸಂಬಂಧಿಸಿದ ಪ್ರಕರಣಗಳಲ್ಲಿ ನ್ಯಾಯಾಂಗದ...

‘ದೇಶವಿರೋಧಿ ಮನಸ್ಥಿತಿಯಲ್ಲ’: ಜಿ.ಎನ್. ಸಾಯಿಬಾಬಾ ಸ್ಮರಣೆ ಪ್ರಕರಣದಲ್ಲಿ ‘ಟಿಸ್’ ಮಾಜಿ ವಿದ್ಯಾರ್ಥಿಗೆ ಜಾಮೀನು!

ದೆಹಲಿ ವಿಶ್ವವಿದ್ಯಾಲಯದ ಮಾಜಿ ಪ್ರಾಧ್ಯಾಪಕ ದಿವಂಗತ ಜಿ.ಎನ್. ಸಾಯಿಬಾಬಾ ಅವರ ಸ್ಮರಣಾರ್ಥ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (TISS) ಕ್ಯಾಂಪಸ್‌ನಲ್ಲಿ ನಡೆದ ಅನುಮತಿರಹಿತ ಕಾರ್ಯಕ್ರಮಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಂಧಿತರಾಗಿದ್ದ ಮಾಜಿ ವಿದ್ಯಾರ್ಥಿ...

ಜನಾಕ್ರೋಶದ ನಡುವೆಯೇ ಎಸ್ಐಆರ್ ಸಮರ್ಥಿಸಿಕೊಂಡ ಮುಖ್ಯ ಚುನಾವಣಾ ಆಯುಕ್ತ: ‘ರಾಜಕೀಯ ದಾಳಿಗಳಿಂದ ಆಯೋಗ ವಿಚಲಿತವಾಗದು’ ಎಂದ ಜ್ಞಾನೇಶ್ ಕುಮಾರ್

ಅಹಮದಾಬಾದ್: ದೇಶದ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆ (SIR) ಕುರಿತು ರಾಜಕೀಯ ಪಕ್ಷಗಳು, ನಾಗರಿಕ ಸಂಘಟನೆಗಳು ಹಾಗೂ ವಿವಿಧ ವಲಯಗಳಿಂದ ತೀವ್ರ ಟೀಕೆಗಳು ವ್ಯಕ್ತವಾಗುತ್ತಿರುವ ನಡುವೆಯೇ, ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್...

ಕರ್ನಾಟಕ ಎಸ್ಐಆರ್: ಹೆಸರಿನ ಸಣ್ಣ ವ್ಯತ್ಯಾಸಕ್ಕಾಗಿ ನಿವೃತ್ತ ಐಎಎಸ್ ಅಧಿಕಾರಿ ಎ.ಬಿ. ಇಬ್ರಾಹಿಂ ಅವರಿಗೆ ನೋಟಿಸ್; ‘ಸುಳ್ಳು ಮಾಹಿತಿ ನೀಡಿದರೆ ಜೈಲು’ ಎಂಬ ಬೆದರಿಕೆ

ಮೈಸೂರು: ಸುಮಾರು ಮೂರೂವರೆ ದಶಕಗಳ ಕಾಲ ರಾಜ್ಯದ ಆಡಳಿತ ವ್ಯವಸ್ಥೆಯಲ್ಲಿ ಸೇವೆ ಸಲ್ಲಿಸಿ, ಸ್ವತಃ ಚುನಾವಣಾ ಪ್ರಕ್ರಿಯೆಯ ಜವಾಬ್ದಾರಿಯುತ ಹುದ್ದೆಯಲ್ಲಿ ಕಾರ್ಯನಿರ್ವಹಿಸಿದ್ದ ನಿವೃತ್ತ ಐಎಎಸ್ ಅಧಿಕಾರಿ ಎ.ಬಿ. ಇಬ್ರಾಹಿಂ ಅವರೇ ಇದೀಗ ತಮ್ಮ...

SIR : ತಾಯಿಯೊಂದಿಗೆ ಮ್ಯಾಪಿಂಗ್ ಮಾಡಿದರೂ ಅಜ್ಜನ ವಯಸ್ಸಿನ ವ್ಯತ್ಯಾಸದ ನೆಪ ಹೇಳಿ ನೋಟಿಸ್ ನೀಡಿದ ಚುನಾವಣಾ ಆಯೋಗ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ದಿನಕ್ಕೊಂದು ವಿಲಕ್ಷಣ ಹಾಗೂ ಯಾಂತ್ರಿಕ ದೋಷಗಳನ್ನು ಹೊರಹಾಕುತ್ತಿದ್ದು, ಪ್ರಜಾಪ್ರಭುತ್ವದ ಹಕ್ಕನ್ನು ಚಲಾಯಿಸಲು ಬಯಸುವ ನೈಜ ಮತದಾರರನ್ನು ಆತಂಕಕ್ಕೆ ತಳ್ಳುತ್ತಿದೆ. ಬ್ಯಾಟರಾಯನಪುರ...

ಬ್ಯಾಂಕ್ ಮುಷ್ಕರ: ದೇಶಾದ್ಯಂತ ಶಾಖಾ ಸೇವೆಗಳಿಗೆ ಅಡಚಣೆ; ವಾರಾಂತ್ಯ, ಗಣೇಶ ಚತುರ್ಥಿಯಿಂದ ಹಲವು ದಿನ ಸೇವೆ ವ್ಯತ್ಯಯ 

ನವದೆಹಲಿ: ಯುನೈಟೆಡ್ ಫೋರಮ್ ಆಫ್ ಬ್ಯಾಂಕ್ ಯೂನಿಯನ್ಸ್ (UFBU) ಕರೆ ನೀಡಿರುವ ರಾಷ್ಟ್ರವ್ಯಾಪಿ ಬ್ಯಾಂಕ್ ಮುಷ್ಕರ ಸೆಪ್ಟೆಂಬರ್ 11ರಂದು (ಇಂದು) ನಡೆಯುತ್ತಿದ್ದು, ದೇಶದಾದ್ಯಂತ ಬ್ಯಾಂಕ್ ಗ್ರಾಹಕರ ಸಾಮಾನ್ಯ ಸೇವೆಗಳ ಮೇಲೆ ಪರಿಣಾಮ ಬೀರುವ...