Homeಮುಖಪುಟಹೇಡಿಗಳು ರೈತರೋ ಅಥವಾ ನಿಮ್ಮ ಸಂಸದರು, ಸರ್ಕಾರವೋ?: ಬಿ.ಸಿ ಪಾಟೀಲ್‌ಗೆ ಕಾಂಗ್ರೆಸ್ ಪ್ರಶ್ನೆ

ಹೇಡಿಗಳು ರೈತರೋ ಅಥವಾ ನಿಮ್ಮ ಸಂಸದರು, ಸರ್ಕಾರವೋ?: ಬಿ.ಸಿ ಪಾಟೀಲ್‌ಗೆ ಕಾಂಗ್ರೆಸ್ ಪ್ರಶ್ನೆ

ರೈತರ ಮೇಲೆ ಗುಂಡು ಹಾರಿಸಿ, ಲಾಠಿ ಚಾರ್ಜ್ ಮಾಡಿ, ಕರಾಳ ಕಾಯ್ದೆಗಳ ಮೂಲಕ ಅವರು ಆತ್ಮಹತ್ಯೆ ಮಾಡಿಕೊಳ್ಳುವ ಪರಿಸ್ಥಿತಿ ಸೃಷ್ಟಿಸಿರುವ ಬಿಜೆಪಿಗರು ದೊಡ್ಡ ಶೂರರೇ?’

- Advertisement -
- Advertisement -

ರೈತರನ್ನು ಹೇಡಿಗಳು ಎಂದಿರುವ ಕೃಷಿ ಸಚಿವ ಬಿ.ಸಿ.ಪಾಟೀಲ್ ಹೇಳಿಕೆಗೆ ವಿರೋಧ ಪಕ್ಷಗಳು ಭಾರಿ ಆಕ್ರೋಶ ವ್ಯಕ್ತಪಡಿಸಿವೆ. ರಾಜ್ಯ ಕಾಂಗ್ರೆಸ್ ಪಕ್ಷವು ತನ್ನ ಟ್ವಿಟರ್‌ ಖಾತೆಯಲ್ಲಿ ಸರಣಿ ಟ್ವೀಟ್‌‌ಗಳನ್ನು ಮಾಡಿ, ಹೇಡಿಗಳು ರೈತರೋ ಅಥವಾ ನಿಮ್ಮ ಸರ್ಕಾರ, ಸಂಸದರೋ ಎಂದು ಪ್ರಶ್ನಿಸಿದ್ದಾರೆ.

ಕೊಡಗಿನ ಕೃಷಿ ಕಾಲೇಜಿನಲ್ಲಿ ಬಿದಿರು ಸಂಪನ್ಮೂಲ ಕೇಂದ್ರ ಉದ್ಘಾಟನಾ ಕಾರ್ಯಕ್ರಮದಲ್ಲಿ ಕೃಷಿ ಸಚಿವ ಬಿ.ಸಿ. ಪಾಟೀಲ್, ಸಾಲ ಮತ್ತಿತರ ಸಮಸ್ಯೆಗಳಿಗೆ ಹೆದರಿ ಆತ್ಮಹತ್ಯೆ ಮಾಡಿಕೊಳ್ಳುವ ರೈತರು ಹೇಡಿಗಳು ಎಂದಿದ್ದರು.

ಕೃಷಿ ಸಚಿವರ ಹೇಳಿಕೆಗೆ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಕುಡ ಆಕ್ರೋಶ ವ್ಯಕ್ತಪಡಿಸಿದ್ದು, ಬಹಿರಂಗವಾಗಿ ರೈತ ಸಮುದಾಯದ ಕ್ಷಮೆ ಕೂರಲು ಆಗ್ರಹಿಸಿದ್ದಾರೆ.

ಕಾಂಗ್ರೆಸ್ ಪಕ್ಷ, ರೈತರ ಮೇಲೆ ಗುಂಡು ಹಾರಿಸಿ ಗೋಲಿಬಾರ್ ಮಾಡುವ, ಲಾಠಿ ಚಾರ್ಜ್ ಮಾಡುವ, ಕರಾಳ ಕಾಯ್ದೆಗಳ ಮೂಲಕ ರೈತರ ಬದುಕಿಗೆ ಕೊಳ್ಳಿ ಇಡುತ್ತಿರುವ ಬಿಜೆಪಿಗರು ದೊಡ್ಡ ಶೂರರೇ ಎಂದು ಬಿ.ಸಿ.ಪಾಟೀಲ್ ಅವರನ್ನು ಪ್ರಶ್ನಿಸಿದೆ.

ಇದನ್ನೂ ಓದಿ: ರೈತರನ್ನು ಹೇಡಿಗಳು ಎಂದ ಬಿ.ಸಿ.ಪಾಟೀಲ್: ಎಚ್.ಡಿ. ಕುಮಾರಸ್ವಾಮಿ ತಿರುಗೇಟು

’ಪ್ರವಾಹದಿಂದ ನಷ್ಟಕ್ಕೆ ಒಳಗಾದ ರೈತರು, ಸಂಸದರನ್ನು ಪರಿಹಾರ ಕೇಳಿದ್ದಕ್ಕೆ ಪ್ರತಿಯಾಗಿ ಅವರ ಮೇಲೆ ಸುಳ್ಳು ಕೇಸು ದಾಖಲಿಸಿ ವಿಚಾರಣೆ ಹೆಸರಲ್ಲಿ ಕಿರುಕುಳ ನೀಡಲಾಗುತ್ತಿದೆ. ಕೃಷಿ ಸಚಿವ ಬಿ.ಸಿ.ಪಾಟೀಲ್ ಅವರೇ ಈಗ ಹೇಳಿ ಹೇಡಿಗಳು ರೈತರೋ? ಅಥವಾ ನಿಮ್ಮ ಸಂಸದ ಹಾಗು ಸರ್ಕಾರವೋ?’ ಎಂದು ಬಿಜೆಪಿ ಸರ್ಕಾರದ ಪಲಾಯನವಾದವನ್ನು, ಸುದ್ದಿ ಪತ್ರಿಕೆಯ ತುಣಿಕಿನೊಂದಿಗೆ ಕಾಂಗ್ರೆಸ್ ಟ್ವೀಟ್ ಮಾಡಿದೆ.

ಪೋಸ್ಟರ್‌ ಒಂದನ್ನು ಬಿಡುಗಡೆ ಮಾಡಿರುವ ಕಾಂಗ್ರೆಸ್, ಹೇಡಿಗಳು ಯಾರು ಎಂದು ಉತ್ತರಿಸಿ ಎಂದು ಆರು ಪ್ರಶ್ನೆಗಳನ್ನು ಕೃಷಿ ಸಚಿವರ ಮುಂದಿಟ್ಟಿದೆ.

ಇದನ್ನೂ ಓದಿ: ಕೇಂದ್ರ ಸರ್ಕಾರ ರೈತರಿಗೆ ದ್ರೋಹ ಬಗೆಯುತ್ತಿದೆ: ಪದ್ಮವಿಭೂಷಣ ವಾಪಸ್ ಮಾಡಿದ ಪಂಜಾಬ್ ಮಾಜಿ ಸಿಎಂ

೧.ರಾತ್ರೋರಾತ್ರಿ ಮುಂಬೈಗೆ ಹಾರಿಹೋದವರು ಹೇಡಿಗಳೇ ಇಲ್ಲ ರೈತರೋ..?

೨. ಕೊರೊನಾ ಸಮಯದಲ್ಲಿ ರೈತರ ಬೆಳೆಗೆ ಮಾರುಕಟ್ಟೆ ಕಲ್ಪಿಸದ ಸರ್ಕಾರವೋ..?

೩.ನೆರೆ ಬಂದಾಗ ಸಂತ್ರಸ್ತರ ನೆರವಿಗೆ ನಿಲ್ಲದ ಬಿಜೆಪಿ ನಾಯಕರೋ..?

೪.ಪರಿಹಾರ ಕೇಳಿದ್ದಕ್ಕೆ ರೈತನ ಮೇಲೆ ಸುಳ್ಳು ಪ್ರಕರಣ ದಾಖಲಿಸಿರುವವರೋ?

೫. ಕೇಂದ್ರದಿಂದ ರಾಜ್ಯಕ್ಕೆ ಬರಬೇಕಾದ ಜಿಎಸ್‌ಟಿ ಪಾಲು ಕೇಳದವರೋ?

೬. ರಾಜ್ಯದ ಸಮಸ್ಯೆ ಬಗ್ಗೆ ಕೇಂದ್ರದ ಮೇಲೆ ಒತ್ತಡ ಹಾಕದ ಬಿಜೆಪಿ ಸಂಸದರೋ? ಎಂದು ಪ್ರಶ್ನಿಸಿದ್ದಾರೆ.

‘ಕೃಷಿ ಸಚಿವರಾಗಿ ರೈತರ ಸಂಕಷ್ಟಕ್ಕೆ ಸ್ಪಂದಿಸದ ಬಿ.ಸಿ.ಪಾಟೀಲ್ ಅವರೇ, ರೈತರನ್ನು ಹೇಡಿ ಎಂದು ಕರೆಯುವ ನೈತಿಕತೆ ನಿಮಗೇನಿದೆ? ರೈತರ ಜೀವನ ಹಸನಾಗಿಸುವ ಒಂದೇ ಒಂದು ಯೋಜನೆಯನ್ನೂ ರೂಪಿಸದೆ ಇಂತಹ ಹೇಳಿಕೆ ನೀಡಿದ್ದಲ್ಲದೆ, ಅದನ್ನು ಸಮರ್ಥಿಸಿ ಅಹಂಕಾರವನ್ನು ತೋರುತ್ತಿದ್ದೀರಿ. ಕೃಷಿ ಸಚಿವ ಸ್ಥಾನಕ್ಕೆ ನೀವು ಅನರ್ಹರು. ಕೂಡಲೇ ರಾಜೀನಾಮೆ ಕೊಡಿ’ ಎಂದು ಕಾಂಗ್ರೆಸ್ ಆಗ್ರಹಿಸಿದೆ.

’ನೆರೆಯಿಂದ ಬೆಳೆ ನೀರುಪಾಲಾದಾಗ, ಲಾಕ್‌ಡೌನ್‌ನಿಂದ ರೈತ ಬೆಳೆದ ಬೆಳೆ ಜಮೀನಿನಲ್ಲೇ ಕೊಳೆತಾಗ, ಬೆಲೆ ಇಲ್ಲದಾದಾಗ, ಸಾಲಗಾರರು ಮನೆ ಬಾಗಿಲಿಗೆ ಬಂದಾಗ ನೀವೆಲ್ಲಿದ್ದಿರಿ? ರೈತರ ಮೇಲೆ ಗುಂಡು ಹಾರಿಸಿ, ಲಾಠಿ ಚಾರ್ಜ್ ಮಾಡಿ, ಕರಾಳ ಕಾಯ್ದೆಗಳ ಮೂಲಕ ಅವರು ಆತ್ಮಹತ್ಯೆ ಮಾಡಿಕೊಳ್ಳುವ ಪರಿಸ್ಥಿತಿ ಸೃಷ್ಟಿಸಿರುವ ಬಿಜೆಪಿಗರು ದೊಡ್ಡ ಶೂರರೇ?’ ಎಂದು ಕೃಷಿ ಸಚಿವರು ಮತ್ತು ಬಿಜೆಪಿ ಸರ್ಕಾರವನ್ನು ಕಾಂಗ್ರೆಸ್ ಟೀಕಿಸಿದೆ.


ಇದನ್ನೂ ಓದಿ: ಇಂದಿರಾ ಕ್ಯಾಂಟಿನ್ ಮುಚ್ಚದಂತೆ ಸಿಎಂಗೆ ಸಿದ್ದರಾಮಯ್ಯ ಆಗ್ರಹ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶ್ರೀಲಂಕಾ | 2019ರ ಈಸ್ಟರ್ ಬಾಂಬ್ ಸ್ಫೋಟ ಪ್ರಕರಣ: ಇಬ್ಬರು ಮಾಜಿ ಅಧಿಕಾರಿಗಳಿಗೆ ಮರಣದಂಡನೆ ವಿಧಿಸಿದ ಕೋರ್ಟ್

ಬರೋಬ್ಬರಿ 260ಕ್ಕೂ ಹೆಚ್ಚು ಜನರ ಸಾವಿಗೆ ಕಾರಣವಾಗಿದ್ದ 2019ರ ಶ್ರೀಲಂಕಾದ 'ಈಸ್ಟರ್ ಸಂಡೇ' ಬಾಂಬ್ ಸ್ಫೋಟ ಪ್ರಕರಣದಲ್ಲಿ ಕ್ರಿಮಿನಲ್ ನಿರ್ಲಕ್ಷ್ಯ ಆರೋಪ ಸಾಬೀತಾದ ಹಿನ್ನೆಲೆ, ಪೊಲೀಸ್ ಮಾಜಿ ಮುಖ್ಯಸ್ಥ ಮತ್ತು ರಕ್ಷಣಾ ಸಚಿವಾಲಯದ...

ಅಮೆರಿಕ ಓದಿಗೆ ಎಲ್ಲಿಂದ ಬಂತು ಹಣ? CJP ಸ್ಥಾಪಕ ಅಭಿಜೀತ್ ದೀಪ್ಕೆ ತಂದೆಯ ಆಸ್ತಿ ತನಿಖೆಗೆ RTI ಕಾರ್ಯಕರ್ತ ಆಗ್ರಹ

ಕಾಕ್ರೋಚ್ ಜನತಾ ಪಾರ್ಟಿ (CJP) ಸ್ಥಾಪಕ ಅಭಿಜೀತ್ ದೀಪ್ಕೆ ಅವರ ತಂದೆ, ಮಹಾರಾಷ್ಟ್ರ ಸರ್ಕಾರದ ನಿವೃತ್ತ ಉದ್ಯೋಗಿ ಭಗವಾನ್‌ರಾವ್ ದೀಪ್ಕೆ ಅವರ ಆದಾಯ ಮತ್ತು ಅಕ್ರಮ ಆಸ್ತಿ ಗಳಿಕೆ ಕುರಿತು ಸಮಗ್ರ ತನಿಖೆ...

ಕಾವೇರಿ ವಿಚಾರದಲ್ಲಿ ರಾಜಕೀಯ ಪಕ್ಕಕ್ಕಿಟ್ಟು ರಾಜ್ಯದ ಹಿತ ಕಾಯೋಣ: ಸರ್ವಪಕ್ಷ ಸಭೆಯಲ್ಲಿ ಸಿಎಂ ಡಿ.ಕೆ. ಶಿವಕುಮಾರ್ ಕರೆ

ಕಾವೇರಿ ನದಿ ನೀರು ಹಂಚಿಕೆ ವಿಚಾರವಾಗಿ ಪರಿಸ್ಥಿತಿ ಸುಧಾರಿಸುವ ಲಕ್ಷಣಗಳು ಕಂಡುಬರುತ್ತಿದ್ದು, ನದಿ ನೀರಿನ ಹಂಚಿಕೆಯಲ್ಲಿ ಸೌಹಾರ್ದಯುತವಾಗಿ ಸಮಸ್ಯೆ ನಿವಾರಿಸುವುದೇ ಸರ್ಕಾರದ ಮೊದಲ ಆದ್ಯತೆಯಾಗಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ. ಕಾವೇರಿ...

ಉತ್ತರ ಪ್ರದೇಶ : 33 ವರ್ಷಗಳ ಬಳಿಕ ದೇಶದ್ರೋಹ ಪ್ರಕರಣದಿಂದ ಮುಸ್ಲಿಂ ವ್ಯಕ್ತಿ ಖುಲಾಸೆ

ಪ್ರಾಸಿಕ್ಯೂಷನ್ ಆರೋಪಗಳನ್ನು ಸಾಂದರ್ಭಿಕ ಪುರಾವೆಗಳೊಂದಿಗೆ ಸಾಬೀತುಪಡಿಸಲು ವಿಫಲವಾಗಿದೆ ಮತ್ತು ಆರೋಪಿಯನ್ನು ಕೃತ್ಯಕ್ಕೆ ಲಿಂಕ್ ಮಾಡುವ ಪ್ರಮುಖ ಪುರಾವೆಗಳು ಕಾಣೆಯಾಗಿವೆ ಎಂದು ಅಭಿಪ್ರಾಯಪಟ್ಟ ಲಕ್ನೋದ ವಿಶೇಷ ರಾಷ್ಟ್ರೀಯ ತನಿಖಾ ದಳ (ಎನ್ಐಎ) ನ್ಯಾಯಾಲಯ, ದೇಶದ್ರೋಹ...

‘ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು’ ಎಂಬಂತೆ NTA ಯಿಂದ ₹7.5 ಕೋಟಿಯ ಬೃಹತ್ ಸೆಕ್ಯೂರಿಟಿ ಟೆಂಡರ್

ನೀಟ್ ಪ್ರಶ್ನೆಪತ್ರಿಕೆ ಸೋರಿಕೆಯಾಗಿ, ಅಮಾಯಕ ವಿದ್ಯಾರ್ಥಿಗಳ ಜೀವ-ಭವಿಷ್ಯ ಹಾಳಾದ ಮೇಲೆ, ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು ಎಂಬಂತೆ ಈಗ ಎನ್‌ಟಿಎ (NTA) ₹7.5 ಕೋಟಿ ವೆಚ್ಚದ ಭದ್ರತಾ ಟೆಂಡರ್...

SIR: ನಮೂನೆಯೂ ಇಲ್ಲ, ನೋಟಿಸ್‌ ಇಲ್ಲ ಸ್ವಂತ ಮನೆಯಲ್ಲಿದ್ದವರ ಹೆಸರನ್ನೇ ಅಳಿಸಿಹಾಕಿದ ಚುನಾವಣಾ ಆಯೋಗ

ರಾಜ್ಯದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಒಂದಾದ ಮೇಲೊಂದರಂತೆ ಆತಂಕಕಾರಿ ಪ್ರಕರಣಗಳು ಬೆಳಕಿಗೆ ಬರುತ್ತಿವೆ. ಮನೆಮನೆಗೆ ತೆರಳಿ ಎನ್ಯುಮರೇಷನ್ ನಮೂನೆ ವಿತರಿಸುವ ಮೊದಲ ಹಂತದ ಪ್ರಕ್ರಿಯೆ...

ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಅಮಾನತುಗೊಂಡಿದ್ದ ಯುಪಿ ಪೊಲೀಸ್ ಕಾನ್‌ಸ್ಟೇಬಲ್; ಮರುನೇಮಕದ ಬೆನ್ನಲ್ಲೇ ಬಾಲಕಿಯ ಅತ್ಯಾಚಾರ, ಕೊಲೆ!

ಹತ್ತು ವರ್ಷದ ಬಾಲಕಿಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿ, ಆಕೆಯ ಸಾವಿಗೆ ಕಾರಣನಾದ ಆರೋಪದ ಮೇಲೆ ಬಂಧಿತನಾದ ಉತ್ತರ ಪ್ರದೇಶದ ಪೊಲೀಸ್ ಕಾನ್‌ಸ್ಟೇಬಲ್ ಅಭಿಷೇಕ್ ಯಾದವ್‌ನನ್ನು ವೈದ್ಯಕೀಯ ತಪಾಸಣೆಗಾಗಿ ಗೋರಖ್‌ಪುರದ ಜಿಲ್ಲಾಸ್ಪತ್ರೆಗೆ ಕರೆತಂದಾಗ, ಅಲ್ಲಿನ...

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...