Homeಮುಖಪುಟಹೇಡಿಗಳು ರೈತರೋ ಅಥವಾ ನಿಮ್ಮ ಸಂಸದರು, ಸರ್ಕಾರವೋ?: ಬಿ.ಸಿ ಪಾಟೀಲ್‌ಗೆ ಕಾಂಗ್ರೆಸ್ ಪ್ರಶ್ನೆ

ಹೇಡಿಗಳು ರೈತರೋ ಅಥವಾ ನಿಮ್ಮ ಸಂಸದರು, ಸರ್ಕಾರವೋ?: ಬಿ.ಸಿ ಪಾಟೀಲ್‌ಗೆ ಕಾಂಗ್ರೆಸ್ ಪ್ರಶ್ನೆ

ರೈತರ ಮೇಲೆ ಗುಂಡು ಹಾರಿಸಿ, ಲಾಠಿ ಚಾರ್ಜ್ ಮಾಡಿ, ಕರಾಳ ಕಾಯ್ದೆಗಳ ಮೂಲಕ ಅವರು ಆತ್ಮಹತ್ಯೆ ಮಾಡಿಕೊಳ್ಳುವ ಪರಿಸ್ಥಿತಿ ಸೃಷ್ಟಿಸಿರುವ ಬಿಜೆಪಿಗರು ದೊಡ್ಡ ಶೂರರೇ?’

- Advertisement -
- Advertisement -

ರೈತರನ್ನು ಹೇಡಿಗಳು ಎಂದಿರುವ ಕೃಷಿ ಸಚಿವ ಬಿ.ಸಿ.ಪಾಟೀಲ್ ಹೇಳಿಕೆಗೆ ವಿರೋಧ ಪಕ್ಷಗಳು ಭಾರಿ ಆಕ್ರೋಶ ವ್ಯಕ್ತಪಡಿಸಿವೆ. ರಾಜ್ಯ ಕಾಂಗ್ರೆಸ್ ಪಕ್ಷವು ತನ್ನ ಟ್ವಿಟರ್‌ ಖಾತೆಯಲ್ಲಿ ಸರಣಿ ಟ್ವೀಟ್‌‌ಗಳನ್ನು ಮಾಡಿ, ಹೇಡಿಗಳು ರೈತರೋ ಅಥವಾ ನಿಮ್ಮ ಸರ್ಕಾರ, ಸಂಸದರೋ ಎಂದು ಪ್ರಶ್ನಿಸಿದ್ದಾರೆ.

ಕೊಡಗಿನ ಕೃಷಿ ಕಾಲೇಜಿನಲ್ಲಿ ಬಿದಿರು ಸಂಪನ್ಮೂಲ ಕೇಂದ್ರ ಉದ್ಘಾಟನಾ ಕಾರ್ಯಕ್ರಮದಲ್ಲಿ ಕೃಷಿ ಸಚಿವ ಬಿ.ಸಿ. ಪಾಟೀಲ್, ಸಾಲ ಮತ್ತಿತರ ಸಮಸ್ಯೆಗಳಿಗೆ ಹೆದರಿ ಆತ್ಮಹತ್ಯೆ ಮಾಡಿಕೊಳ್ಳುವ ರೈತರು ಹೇಡಿಗಳು ಎಂದಿದ್ದರು.

ಕೃಷಿ ಸಚಿವರ ಹೇಳಿಕೆಗೆ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಕುಡ ಆಕ್ರೋಶ ವ್ಯಕ್ತಪಡಿಸಿದ್ದು, ಬಹಿರಂಗವಾಗಿ ರೈತ ಸಮುದಾಯದ ಕ್ಷಮೆ ಕೂರಲು ಆಗ್ರಹಿಸಿದ್ದಾರೆ.

ಕಾಂಗ್ರೆಸ್ ಪಕ್ಷ, ರೈತರ ಮೇಲೆ ಗುಂಡು ಹಾರಿಸಿ ಗೋಲಿಬಾರ್ ಮಾಡುವ, ಲಾಠಿ ಚಾರ್ಜ್ ಮಾಡುವ, ಕರಾಳ ಕಾಯ್ದೆಗಳ ಮೂಲಕ ರೈತರ ಬದುಕಿಗೆ ಕೊಳ್ಳಿ ಇಡುತ್ತಿರುವ ಬಿಜೆಪಿಗರು ದೊಡ್ಡ ಶೂರರೇ ಎಂದು ಬಿ.ಸಿ.ಪಾಟೀಲ್ ಅವರನ್ನು ಪ್ರಶ್ನಿಸಿದೆ.

ಇದನ್ನೂ ಓದಿ: ರೈತರನ್ನು ಹೇಡಿಗಳು ಎಂದ ಬಿ.ಸಿ.ಪಾಟೀಲ್: ಎಚ್.ಡಿ. ಕುಮಾರಸ್ವಾಮಿ ತಿರುಗೇಟು

’ಪ್ರವಾಹದಿಂದ ನಷ್ಟಕ್ಕೆ ಒಳಗಾದ ರೈತರು, ಸಂಸದರನ್ನು ಪರಿಹಾರ ಕೇಳಿದ್ದಕ್ಕೆ ಪ್ರತಿಯಾಗಿ ಅವರ ಮೇಲೆ ಸುಳ್ಳು ಕೇಸು ದಾಖಲಿಸಿ ವಿಚಾರಣೆ ಹೆಸರಲ್ಲಿ ಕಿರುಕುಳ ನೀಡಲಾಗುತ್ತಿದೆ. ಕೃಷಿ ಸಚಿವ ಬಿ.ಸಿ.ಪಾಟೀಲ್ ಅವರೇ ಈಗ ಹೇಳಿ ಹೇಡಿಗಳು ರೈತರೋ? ಅಥವಾ ನಿಮ್ಮ ಸಂಸದ ಹಾಗು ಸರ್ಕಾರವೋ?’ ಎಂದು ಬಿಜೆಪಿ ಸರ್ಕಾರದ ಪಲಾಯನವಾದವನ್ನು, ಸುದ್ದಿ ಪತ್ರಿಕೆಯ ತುಣಿಕಿನೊಂದಿಗೆ ಕಾಂಗ್ರೆಸ್ ಟ್ವೀಟ್ ಮಾಡಿದೆ.

ಪೋಸ್ಟರ್‌ ಒಂದನ್ನು ಬಿಡುಗಡೆ ಮಾಡಿರುವ ಕಾಂಗ್ರೆಸ್, ಹೇಡಿಗಳು ಯಾರು ಎಂದು ಉತ್ತರಿಸಿ ಎಂದು ಆರು ಪ್ರಶ್ನೆಗಳನ್ನು ಕೃಷಿ ಸಚಿವರ ಮುಂದಿಟ್ಟಿದೆ.

ಇದನ್ನೂ ಓದಿ: ಕೇಂದ್ರ ಸರ್ಕಾರ ರೈತರಿಗೆ ದ್ರೋಹ ಬಗೆಯುತ್ತಿದೆ: ಪದ್ಮವಿಭೂಷಣ ವಾಪಸ್ ಮಾಡಿದ ಪಂಜಾಬ್ ಮಾಜಿ ಸಿಎಂ

೧.ರಾತ್ರೋರಾತ್ರಿ ಮುಂಬೈಗೆ ಹಾರಿಹೋದವರು ಹೇಡಿಗಳೇ ಇಲ್ಲ ರೈತರೋ..?

೨. ಕೊರೊನಾ ಸಮಯದಲ್ಲಿ ರೈತರ ಬೆಳೆಗೆ ಮಾರುಕಟ್ಟೆ ಕಲ್ಪಿಸದ ಸರ್ಕಾರವೋ..?

೩.ನೆರೆ ಬಂದಾಗ ಸಂತ್ರಸ್ತರ ನೆರವಿಗೆ ನಿಲ್ಲದ ಬಿಜೆಪಿ ನಾಯಕರೋ..?

೪.ಪರಿಹಾರ ಕೇಳಿದ್ದಕ್ಕೆ ರೈತನ ಮೇಲೆ ಸುಳ್ಳು ಪ್ರಕರಣ ದಾಖಲಿಸಿರುವವರೋ?

೫. ಕೇಂದ್ರದಿಂದ ರಾಜ್ಯಕ್ಕೆ ಬರಬೇಕಾದ ಜಿಎಸ್‌ಟಿ ಪಾಲು ಕೇಳದವರೋ?

೬. ರಾಜ್ಯದ ಸಮಸ್ಯೆ ಬಗ್ಗೆ ಕೇಂದ್ರದ ಮೇಲೆ ಒತ್ತಡ ಹಾಕದ ಬಿಜೆಪಿ ಸಂಸದರೋ? ಎಂದು ಪ್ರಶ್ನಿಸಿದ್ದಾರೆ.

‘ಕೃಷಿ ಸಚಿವರಾಗಿ ರೈತರ ಸಂಕಷ್ಟಕ್ಕೆ ಸ್ಪಂದಿಸದ ಬಿ.ಸಿ.ಪಾಟೀಲ್ ಅವರೇ, ರೈತರನ್ನು ಹೇಡಿ ಎಂದು ಕರೆಯುವ ನೈತಿಕತೆ ನಿಮಗೇನಿದೆ? ರೈತರ ಜೀವನ ಹಸನಾಗಿಸುವ ಒಂದೇ ಒಂದು ಯೋಜನೆಯನ್ನೂ ರೂಪಿಸದೆ ಇಂತಹ ಹೇಳಿಕೆ ನೀಡಿದ್ದಲ್ಲದೆ, ಅದನ್ನು ಸಮರ್ಥಿಸಿ ಅಹಂಕಾರವನ್ನು ತೋರುತ್ತಿದ್ದೀರಿ. ಕೃಷಿ ಸಚಿವ ಸ್ಥಾನಕ್ಕೆ ನೀವು ಅನರ್ಹರು. ಕೂಡಲೇ ರಾಜೀನಾಮೆ ಕೊಡಿ’ ಎಂದು ಕಾಂಗ್ರೆಸ್ ಆಗ್ರಹಿಸಿದೆ.

’ನೆರೆಯಿಂದ ಬೆಳೆ ನೀರುಪಾಲಾದಾಗ, ಲಾಕ್‌ಡೌನ್‌ನಿಂದ ರೈತ ಬೆಳೆದ ಬೆಳೆ ಜಮೀನಿನಲ್ಲೇ ಕೊಳೆತಾಗ, ಬೆಲೆ ಇಲ್ಲದಾದಾಗ, ಸಾಲಗಾರರು ಮನೆ ಬಾಗಿಲಿಗೆ ಬಂದಾಗ ನೀವೆಲ್ಲಿದ್ದಿರಿ? ರೈತರ ಮೇಲೆ ಗುಂಡು ಹಾರಿಸಿ, ಲಾಠಿ ಚಾರ್ಜ್ ಮಾಡಿ, ಕರಾಳ ಕಾಯ್ದೆಗಳ ಮೂಲಕ ಅವರು ಆತ್ಮಹತ್ಯೆ ಮಾಡಿಕೊಳ್ಳುವ ಪರಿಸ್ಥಿತಿ ಸೃಷ್ಟಿಸಿರುವ ಬಿಜೆಪಿಗರು ದೊಡ್ಡ ಶೂರರೇ?’ ಎಂದು ಕೃಷಿ ಸಚಿವರು ಮತ್ತು ಬಿಜೆಪಿ ಸರ್ಕಾರವನ್ನು ಕಾಂಗ್ರೆಸ್ ಟೀಕಿಸಿದೆ.


ಇದನ್ನೂ ಓದಿ: ಇಂದಿರಾ ಕ್ಯಾಂಟಿನ್ ಮುಚ್ಚದಂತೆ ಸಿಎಂಗೆ ಸಿದ್ದರಾಮಯ್ಯ ಆಗ್ರಹ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದಲಿತ ವಿದ್ಯಾರ್ಥಿನಿ ಕೊಲೆ ಪ್ರಕರಣ: ಪ್ರತಿಭಟನಾಕಾರರ ಮೇಲೆ ಪೊಲೀಸ್ ಲಾಠಿಚಾರ್ಜ್; ಯೋಗಿ ಸರ್ಕಾರದ ವಿರುದ್ಧ ತೀವ್ರ ಆಕ್ರೋಶ

ನವದೆಹಲಿ: ಜುಲೈ 8 ರಂದು ಮೀರತ್‌ನಲ್ಲಿ ನಡೆದ ದಲಿತ ವಿದ್ಯಾರ್ಥಿನಿಯ ಹತ್ಯೆಯನ್ನು ಖಂಡಿಸಿ ಪ್ರತಿಭಟನೆ ನಡೆಸುತ್ತಿದ್ದ ದಲಿತ ಕಾರ್ಯಕರ್ತರು ಮತ್ತು ಮೃತರ ಕುಟುಂಬ ಸದಸ್ಯರ ಮೇಲೆ ಉತ್ತರ ಪ್ರದೇಶ ಪೊಲೀಸರು ಭೀಕರ ಹಲ್ಲೆ,...

ಒಮಾನ್ ಕರಾವಳಿಯಲ್ಲಿ ಮತ್ತೊಂದು ಹಡಗಿನ ಮೇಲೆ ದಾಳಿ: ಭಾರತೀಯ ಪ್ರಜೆ ನಾಪತ್ತೆ, 10 ಜನರ ರಕ್ಷಣೆ: ವಿದೇಶಾಂಗ ಸಚಿವಾಲಯ ಮಾಹಿತಿ

ನವದೆಹಲಿ: ಜುಲೈ 12 ರಂದು ಒಮಾನ್ ಕರಾವಳಿಯ ಅಂತರರಾಷ್ಟ್ರೀಯ ಜಲಮಾರ್ಗದಲ್ಲಿ ಸಾಗುತ್ತಿದ್ದ ‘ಜಿಎಫ್‌ಎಸ್ ಗ್ಯಾಲಕ್ಸಿ’ (GFS Galaxy) ಎಂಬ ವಾಣಿಜ್ಯ ಹಡಗಿನ ಮೇಲೆ ನಡೆದ ದಾಳಿಯನ್ನು ಭಾರತ ಸರ್ಕಾರ ತೀವ್ರವಾಗಿ ಖಂಡಿಸಿದೆ. ಭೀಕರ...

SIR ಪ್ರಕ್ರಿಯೆಯಲ್ಲಿ ಎಐ ಬಳಕೆ, ಭಾರೀ ಪ್ರಮಾಣದಲ್ಲಿ ಮತದಾರರ ಹೆಸರು ಡಿಲೀಟ್ : ಕಳವಳ ವ್ಯಕ್ತಪಡಿಸಿದ ವಿಶ್ವಸಂಸ್ಥೆಯ ವಿಶೇಷ ವರದಿಗಾರರು

ಭಾರತೀಯ ಚುನಾವಣಾ ಆಯೋಗ (ಇಸಿಐ) ಕೈಗೊಂಡ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಯು (ಎಸ್‌ಐಆರ್) ವ್ಯಾಪಕ ಪ್ರಮಾಣದಲ್ಲಿ ಮತದಾರರ ಹೆಸರುಗಳ ಅಳಿಸುವಿಕೆಗೆ ಕಾರಣವಾಗಿದೆ ಮತ್ತು ಇದು ಮುಸ್ಲಿಮರು ಹಾಗೂ ಇತರ ಅಲ್ಪಸಂಖ್ಯಾತ ಸಮುದಾಯಗಳ...

ಮಹಾರಾಷ್ಟ್ರ: ನಂದೂರ್ಬಾರ್‌ನ ಸರ್ಕಾರಿ ಹಾಸ್ಟೆಲ್‌ನಲ್ಲಿ ಕಲುಷಿತ ಆಹಾರ ಸೇವಿಸಿ 40 ವಿದ್ಯಾರ್ಥಿಗಳು ಅಸ್ವಸ್ಥ; ತೀವ್ರಗೊಂಡ ತನಿಖೆ 

ನಂದೂರ್ಬಾರ್ (ಮಹಾರಾಷ್ಟ್ರ): ಮಹಾರಾಷ್ಟ್ರದ ನಂದೂರ್ಬಾರ್ ಜಿಲ್ಲೆಯ ಶಹಾಡಾ ತಾಲೂಕಿನಲ್ಲಿರುವ ಸರ್ಕಾರಿ ಸಮಾಜ ಕಲ್ಯಾಣ ಇಲಾಖೆಯ ವಸತಿನಿಲಯದಲ್ಲಿ ಶಂಕಿತ ವಿಷಪೂರಿತ ಆಹಾರ ಸೇವಿಸಿ ಸುಮಾರು 40 ವಿದ್ಯಾರ್ಥಿಗಳು ತೀವ್ರವಾಗಿ ಅಸ್ವಸ್ಥಗೊಂಡಿರುವ ಕಳವಳಕಾರಿ ಘಟನೆ ವರದಿಯಾಗಿದೆ.  ಹಾಸ್ಟೆಲ್‌ನಲ್ಲಿ...

ಇರಾನ್‌ನ 140 ಸ್ಥಳಗಳನ್ನು ಗುರಿಯಾಗಿಸಿ ಅಮೆರಿಕದಿಂದ ದಾಳಿ : ಬಹ್ರೇನ್, ಕತಾರ್, ಯುಎಇ ಮೇಲೆ ಇರಾನ್‌ನಿಂದ ಪ್ರತಿದಾಳಿ

ಹಾರ್ಮುಝ್ ಜಲಸಂಧಿಯಲ್ಲಿ ಇರಾನ್ ನಡೆಸಿದ ದಾಳಿಯಿಂದಾಗಿ ಸರಕು ಸಾಗಣೆ ಹಡಗೊಂದು ಹೊತ್ತಿ ಉರಿದು, ಅದರಲ್ಲಿದ್ದ ಸಿಬ್ಬಂದಿ ಹಡಗು ಬಿಟ್ಟು ಹೊರಡುವಂತಾಗಿತ್ತು. ಈ ಘಟನೆಯನ್ನು ಖಂಡಿಸಿ ಅಮೆರಿಕ ಭಾನುವಾರ (ಜು.12) ಮುಂಜಾನೆ ಇರಾನ್ ಮೇಲೆ...

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...