HomeಮುಖಪುಟCOWIN APP: ಕನ್ನಡ, ತಮಿಳು ಸೇರಿ 9 ಪ್ರಾದೇಶಿಕ ಭಾಷೆಗಳಲ್ಲಿ ಸೌಲಭ್ಯ ಲಭ್ಯ

COWIN APP: ಕನ್ನಡ, ತಮಿಳು ಸೇರಿ 9 ಪ್ರಾದೇಶಿಕ ಭಾಷೆಗಳಲ್ಲಿ ಸೌಲಭ್ಯ ಲಭ್ಯ

ಇಲ್ಲಿಯವರೆಗೆ, ಕೋವಿನ್ ವೆಬ್‌ಸೈಟ್ ಇಂಗ್ಲಿಷ್ ಮತ್ತು ಹಿಂದಿಯಲ್ಲಿ ಲಭ್ಯವಿತ್ತು. ಈ ಭಾಷೆಗಳನ್ನು ತಿಳಿದಿಲ್ಲದ ಅನೇಕರು ಲಸಿಕಾ ಅಭಿಯಾನಕ್ಕೆ ನೋಂದಾಯಿಸಿಕೊಳ್ಳುವುದು ಕಷ್ಟಕರವಾಗಿತ್ತು.

- Advertisement -
- Advertisement -

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ.ಸ್ಟಾಲಿನ್ ಅವರ ಮನವಿಯ ನಂತರ ಕೋವಿನ್ ಅಪ್ಲಿಕೇಶನ್ ಸೌಲಭ್ಯದಲ್ಲಿ ತಮಿಳು ಭಾಷೆಯನ್ನು ಸೇರಿಸುವುದಾಗಿ ಕೇಂದ್ರ ಭರವಸೆ ನೀಡಿದೆ.

ಶುಕ್ರವಾರ ಕೋವಿನ್ ಅಪ್ಲಿಕೇಶನ್‌ನಲ್ಲಿ ಸೇರಿಸಲಾಗಿರುವ ಒಂಬತ್ತು ಭಾಷೆಗಳ ಜೊತೆಗೆ, ತಮಿಳು ಭಾಷೆಯ ಸೌಲಭ್ಯವು ಒಂದು ಅಥವಾ ಎರಡು ದಿನಗಳಲ್ಲಿ ಲಭ್ಯವಾಗಲಿದೆ ಎಂದು ತಮಿಳುನಾಡು ಸರ್ಕಾರ ತಿಳಿಸಿದೆ.

ಭಾರತ ಸರ್ಕಾರದ ವೆಬ್‌ಸೈಟ್ ಮತ್ತು ಮೊಬೈಲ್ ಅಪ್ಲಿಕೇಶನ್ ಕೋವಿನ್ ಈಗ ತೆಲುಗಿನಲ್ಲಿ ಲಭ್ಯವಾಗುತ್ತಿದೆ ಮತ್ತು ಇತರ ಒಂಬತ್ತು ಭಾಷೆಗಳಲ್ಲಿ ಶುಕ್ರವಾರ ಪ್ರಕಟಿಸಲಾಗಿದೆ.

ಇಲ್ಲಿಯವರೆಗೆ, ಕೋವಿನ್ ವೆಬ್‌ಸೈಟ್ ಇಂಗ್ಲಿಷ್ ಮತ್ತು ಹಿಂದಿಯಲ್ಲಿ ಲಭ್ಯವಿತ್ತು. ಈ ಭಾಷೆಗಳನ್ನು ತಿಳಿದಿಲ್ಲದ ಅನೇಕರು ಲಸಿಕಾ ಅಭಿಯಾನಕ್ಕೆ ನೋಂದಾಯಿಸಿಕೊಳ್ಳುವುದು ಕಷ್ಟಕರವಾಗಿತ್ತು.

ಇನ್ನು ಮುಂದೆ ವೆಬ್‌ಸೈಟ್ ಅನ್ನು ತೆಲುಗು, ಮರಾಠಿ, ಮಲಯಾಳಂ, ಪಂಜಾಬಿ, ಗುಜರಾತಿ, ಅಸ್ಸಾಮೀಸ್, ಕನ್ನಡ, ಮತ್ತು ಒರಿಯಾಗಳಲ್ಲಿ ಪ್ರವೇಶಿಸಬಹುದು ಎಂದು ಕೇಂದ್ರ ಶುಕ್ರವಾರ ಪ್ರಕಟಿಸಿದೆ.

ವೆಬ್‍ಸೈಟಿನ ಯುಆರ್‍ಎಲ್ cowin.in ಮಾತ್ರ ಇಂಗ್ಲಿಷ್‌ನಲ್ಲಿ ಇರಲಿದೆ. ವೆಬ್‌ಸೈಟ್ ಪ್ರವೇಶಿಸಿದ ನಂತರ, ಬಳಕೆದಾರರು ವೆಬ್‌ಸೈಟ್‌ನ ಮೇಲ್ಭಾಗದಲ್ಲಿರುವ ಸಣ್ಣ ಪೆಟ್ಟಿಗೆಯಲ್ಲಿರುವ ‘ಎ’ ವರ್ಣಮಾಲೆಯನ್ನು ಕ್ಲಿಕ್‍ ಮಾಡಬೇಕಾಗುತ್ತದೆ. ನಂತರ ಬಲತುದಿಯಲ್ಲಿರುವ ಐಕಾನ್ ಕ್ಲಿಕ್ ಮಾಡಿದ ನಂತರ, ಬಳಕೆದಾರನು ಅವನ ಅಥವಾ ಅವಳ ಆಯ್ಕೆಯ ಭಾಷೆಯನ್ನು ಆಯ್ಕೆ ಮಾಡಬಹುದು. ಇದು ನೋಂದಣಿ / ಸೈನ್-ಇನ್ ಲಿಂಕ್ ಅನ್ನು ಆಯ್ಕೆ ಮಾಡಿದ ಭಾಷೆಗೆ ಅನುವಾದಿಸುತ್ತದೆ. ನಂತರ ಸ್ಲಾಟ್ ಅನ್ನು ಕಾಯ್ದಿರಿಸುವ ಲಿಂಕ್ ಆಯ್ಕೆಯ ಭಾಷೆಯಲ್ಲಿ ಲಭ್ಯವಾಗುತ್ತದೆ.

ಆದರೂ ಪ್ರಾದೇಶಿಕ ಭಾಷೆಗಳಲ್ಲಿ ಪ್ರವೇಶದ ವಿಷಯದಲ್ಲಿ ವೆಬ್‌ಸೈಟ್‌ನಲ್ಲಿ ಇನ್ನೂ ಕೆಲವು ಮಿತಿಗಳಿವೆ. ಏಕೆಂದರೆ ಸ್ಲಾಟ್ ಕಾಯ್ದಿರಿಸುವ ಲಿಂಕ್ ಅನ್ನು ಒಮ್ಮೆ ಕ್ಲಿಕ್ ಮಾಡಿದರೆ, ಆಯ್ಕೆಯ ಭಾಷೆಯಲ್ಲಿ  ಎಲ್ಲಾ ಮಾಹಿತಿಗಳು  ಲಭ್ಯವಿಲ್ಲ.  ಆಸ್ಪತ್ರೆಗಳು ರಾಜ್ಯ, ಜಿಲ್ಲೆ, ಆಸ್ಪತ್ರೆಗಳು ಮತ್ತು ಲಸಿಕಾಕೇಂದ್ರಗಗಳ ಹೆಸರುಗಳು  ಇನ್ನೂ ಇಂಗ್ಲಿಷ್‌ನಲ್ಲಿ ಉಳಿದಿವೆ.


ಇದನ್ನೂ ಓದಿ: ಬ್ಲ್ಯಾಕ್ ಫಂಗಸ್: ವಾಸ್ತವವೇನು? ವೈದ್ಯರೇನು ಹೇಳುತ್ತಿದ್ದಾರೆ?: ಡಾ. ವಾಸು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಅಯ್ಯೋಧ್ಯೆ ರಾಮ ಮಂದಿರ ಹಗರಣ: ಎಂಟು ಜನರ ವಿರುದ್ಧ ಎಫ್‌ಐಆರ್; ಪ್ರಭಾವಿ ವ್ಯಕ್ತಿಗಳನ್ನು ರಕ್ಷಿಸಲಾಗಿದೆ ಎಂದು ಪ್ರತಿಪಕ್ಷಗಳ ಆರೋಪ 

ಅಯೋಧ್ಯೆ: ವಿಶ್ವದಾದ್ಯಂತ ಕೋಟ್ಯಂತರ ಭಕ್ತರ ಆರಾಧ್ಯ ದೈವವಾಗಿರುವ ಅಯೋಧ್ಯೆಯ ಶ್ರೀ ರಾಮ ಮಂದಿರದಲ್ಲಿ ಭಕ್ತರು ಸಮರ್ಪಿಸಿದ ನಗದು, ಚಿನ್ನಾಭರಣ ಸೇರಿದಂತೆ ಇತರೆ ಬೆಲೆಬಾಳುವ ಕಾಣಿಕೆಗಳ ಕಳ್ಳತನ ಮತ್ತು ಹಣ ದುರುಪಯೋಗದ ಗಂಭೀರ ಹಗರಣವೊಂದು...

ಪೋಕ್ಸೋ ಕೇಸ್ : ವಚನಾನಂದ ಸ್ವಾಮಿಯ ನಿರೀಕ್ಷಣಾ ಜಾಮೀನು ರದ್ದು

ಪೋಕ್ಸೋ ಪ್ರಕರಣದಲ್ಲಿ ವಚನಾನಂದ ಸ್ವಾಮಿಗೆ ಸೆಷನ್ಸ್ ಕೋರ್ಟ್ ನೀಡಿದ್ದ ನಿರೀಕ್ಷಣಾ ಜಾಮೀನನ್ನು ಹೈಕೋರ್ಟ್ ಗುರುವಾರ (ಜೂನ್ 25) ರದ್ದುಗೊಳಿಸಿದೆ. ಅಲ್ಲದೆ, ಸೆಷನ್ಸ್ ಕೋರ್ಟ್ ಜಾಮೀನು ನೀಡಿದ ರೀತಿಯ ಬಗ್ಗೆ ತೀವ್ರ ಕಳವಳ ಮತ್ತು...

ಎಸ್‌ಐಆರ್‌ಗೂ ಸರ್ಕಾರಿ ಸೌಲಭ್ಯಕ್ಕೂ ಲಿಂಕ್; ಅರ್ಜಿ ವಿಚಾರಣೆಗೆ ಸುಪ್ರೀಂ ನಕಾರ : ನಿಜವಾದ ಆತಂಕ

ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳದ ಹೊಸ ಸರ್ಕಾರ ನೀಡಿರುವ ಆದೇಶಗಳ ವಿರುದ್ಧ ಸಲ್ಲಿಕೆಯಾಗಿದ್ದ ಅರ್ಜಿಯೊಂದರ ತುರ್ತು ವಿಚಾರಣೆಗೆ ಸುಪ್ರೀಂ ಕೋರ್ಟ್ 23 ಜೂನ್ 2026ರಂದು ನಿರಾಕರಿಸಿದೆ. ವಿಧಾನಸಭೆ ಚುನಾವಣೆಗೆ ಮುನ್ನ ನಡೆದ ವಿಶೇಷ...

ಒಂಬತ್ತನೇ ತರಗತಿ ಪಠ್ಯಪುಸ್ತಕದಲ್ಲಿ ತುರ್ತು ಪರಿಸ್ಥಿತಿ ಅಧ್ಯಾಯ ಸೇರಿಸಿದ ಎನ್‌ಸಿಇಆರ್‌ಟಿ

ಭಾರತದಲ್ಲಿ ತುರ್ತು ಪರಿಸ್ಥಿತಿ ಘೋಷಿಸಲ್ಪಟ್ಟ ಸುಮಾರು ಐದು ದಶಕಗಳ ನಂತರ, ರಾಷ್ಟ್ರೀಯ ಶೈಕ್ಷಣಿಕ ಸಂಶೋಧನೆ ಮತ್ತು ತರಬೇತಿ ಮಂಡಳಿ (ಎನ್‌ಸಿಇಆರ್‌ಟಿ) ಈ ವಿಷಯವನ್ನು 9 ನೇ ತರಗತಿಯ ಸಮಾಜ ವಿಜ್ಞಾನ ಪಠ್ಯಪುಸ್ತಕದಲ್ಲಿ ಮೊದಲ...

‘ಆರ್‌ಎಸ್‌ಎಸ್ ಗಲಿಬಿಲಿಗೊಂಡರೆ ಬಿಜೆಪಿ ಬುಸುಗುಡುತ್ತದೆ’: ಗೃಹ ಸಚಿವ ಪ್ರಿಯಾಂಕ್ ಖರ್ಗೆ ವಾಗ್ದಾಳಿ

ಬೆಂಗಳೂರು: ರಾಷ್ಟ್ರೀಯ ಸ್ವಯಂಸೇವಕ ಸಂಘ (RSS) ಹಾಗೂ ಆಡಳಿತಾರೂಢ ಬಿಜೆಪಿ ವಿರುದ್ಧ ಕರ್ನಾಟಕದ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಮತ್ತೊಮ್ಮೆ ತೀವ್ರ ಸ್ವರೂಪದ ಸೈದ್ಧಾಂತಿಕ ದಾಳಿ ನಡೆಸಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲಿ ಸರಣಿ ಪ್ರಶ್ನೆಗಳನ್ನು...

ಹೊಸ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ ಜಾರಿಯ ಜೊತೆಯಲ್ಲೆ ಸುಪ್ರೀಂ ಕೋರ್ಟ್‌ಗೆ ಹೋಗಲು ಕರ್ನಾಟಕ ಸಜ್ಜು

ಕೇಂದ್ರ ಸರ್ಕಾರದ ಹೊಸ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ ‘ವಿಕಸಿತ ಭಾರತ-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ)’ (VB-G RAM G) ಕಾಯ್ದೆಯ ಹಲವು ನಿಯಮಗಳಿಗೆ ತೀವ್ರ ವಿರೋಧ ವ್ಯಕ್ತಪಡಿಸಿದ್ದರೂ...

ಉತ್ತರ ಪ್ರದೇಶ: ಮದುವೆ ರಿಸೆಪ್ಷನ್‌ನಲ್ಲಿ ಗೋಮಾಂಸ ಬಡಿಸಿದ ಆರೋಪ; ವರನ ತಂದೆ ಸೇರಿ ಏಳು ಮಂದಿ ಬಂಧನ, ಮಂಟಪ ಸೀಲ್

ಶಾಮ್ಲಿ (ಉತ್ತರ ಪ್ರದೇಶ): ಉತ್ತರ ಪ್ರದೇಶದ ಶಾಮ್ಲಿ ಜಿಲ್ಲೆಯ ಕೈರಾನಾ ಪಟ್ಟಣದಲ್ಲಿ ನಡೆದ ಮದುವೆ ಆರತಕ್ಷತೆ (ವಲೀಮಾ) ಸಮಾರಂಭವೊಂದು ಈಗ ಭಾರೀ ವಿವಾದಕ್ಕೆ ಕಾರಣವಾಗಿದೆ. ಸಮಾರಂಭದಲ್ಲಿ ಅತಿಥಿಗಳಿಗೆ ಗೋಮಾಂಸವನ್ನು ಬೇಯಿಸಿ ಬಡಿಸಲಾಗಿದೆ ಎಂಬ...

ರಾಮ ಮಂದಿರ ದೇಣಿಗೆ ವಿವಾದ: ಎಫ್‌ಐಆರ್ ದಾಖಲಿಸಿ ತ್ವರಿತ ನ್ಯಾಯಾಲಯದ ವಿಚಾರಣೆಗೆ ವಿಶ್ವ ಹಿಂದೂ ಪರಿಷತ್ ಆಗ್ರಹ

ರಾಮ ದೇಣಿಗೆ ವಿವಾದ ದುರುಪಯೋಗ ಕುರಿತು ಎಸ್‌ಐಟಿ ತನ್ನ ಪ್ರಾಥಮಿಕ ವರದಿಯನ್ನು ಸಲ್ಲಿಸಿದ ಕೂಡಲೇ, ಬಲಪಂಥೀಯ ಹಿಂದುತ್ವ ಸಂಘಟನೆ ವಿಶ್ವ ಹಿಂದೂ ಪರಿಷತ್ (ವಿಎಚ್‌ಪಿ) ಪ್ರಕರಣದಲ್ಲಿ ಎಫ್‌ಐಆರ್ ದಾಖಲಿಸಬೇಕೆಂದು ಒತ್ತಾಯಿಸಿದೆ. ವಿಎಚ್‌ಪಿ ಅಂತರರಾಷ್ಟ್ರೀಯ...

ಪಾಸ್‌ಪೋರ್ಟ್ ಪೌರತ್ವದ ದಾಖಲೆಯಲ್ಲ: ವಿದೇಶಾಂಗ ಸಚಿವಾಲಯ

ಪಾಸ್‌ಪೋರ್ಟ್ ಒಂದು ಪ್ರಯಾಣದ ದಾಖಲೆಯಾಗಿದೆಯೇ ಹೊರತು, ಪೌರತ್ವದ ದಾಖಲೆಯಲ್ಲ ಎಂದು ವಿದೇಶಾಂಗ ವ್ಯವಹಾರಗಳ ಸಚಿವಾಲಯದ (ಎಂಇಎ) ಅಧಿಕಾರಿಗಳು ಬುಧವಾರ (ಜೂನ್ 24) ತಿಳಿಸಿದ್ದಾರೆ. ಈ ಮೂಲಕ ಅವರು ಭಾರತೀಯ ಪೌರತ್ವವನ್ನು ಖಚಿತವಾಗಿ ಸಾಬೀತುಪಡಿಸುವ...

90 ಪ್ರಶ್ನೆ ಪತ್ರಿಕೆ ಸೋರಿಕೆಯಾಗಿದೆ, ಲಕ್ಷಾಂತರ ವಿದ್ಯಾರ್ಥಿಗಳ ಭವಿಷ್ಯ ಹಾಳಾಗಿದೆ ಆದರೆ ಪ್ರಧಾನ್ ತಮ್ಮ ಕುರ್ಚಿಗೆ ಅಂಟಿಕೊಂಡಿದ್ದಾರೆ: ಮಲ್ಲಿಕಾರ್ಜುನ ಖರ್ಗೆ

ನವದೆಹಲಿ: ದೇಶಾದ್ಯಂತ ಭಾರಿ ಸಂಚಲನ ಮೂಡಿಸಿರುವ 'ನೀಟ್' (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರದ ವಿರುದ್ಧ ವಿರೋಧ ಪಕ್ಷಗಳು ತಮ್ಮ ಆಕ್ರೋಶವನ್ನು ಮತ್ತಷ್ಟು ತೀವ್ರಗೊಳಿಸಿವೆ. ಪರೀಕ್ಷಾ ಅಕ್ರಮಗಳನ್ನು ವಿರೋಧಿಸಿ...