Homeಕರ್ನಾಟಕಮತ್ತೆ ಶುರುವಾಯಿತು ಗೋಹತ್ಯೆ ನಿಷೇಧ ಕಾನೂನು ಚರ್ಚೆ: ಗೋಹತ್ಯೆ ಅಪರಾಧವೆಂದ ಸಚಿವ ಸುಧಾಕರ್

ಮತ್ತೆ ಶುರುವಾಯಿತು ಗೋಹತ್ಯೆ ನಿಷೇಧ ಕಾನೂನು ಚರ್ಚೆ: ಗೋಹತ್ಯೆ ಅಪರಾಧವೆಂದ ಸಚಿವ ಸುಧಾಕರ್

ಕರ್ನಾಟಕದಲ್ಲಿ ಗೋಹತ್ಯೆ ನಿಷೇಧ ಕಾನೂನು ಸದ್ಯದಲ್ಲೇ ಜಾರಿಗೆ ತರಲು ಮುಖ್ಯಮಂತ್ರಿ ಯಡಿಯೂರಪ್ಪ ಅವರಲ್ಲಿ ಮನವಿ ಮಾಡುವುದಾಗಿ ಕೆ.ಸುಧಾಕರ್‌ ತಿಳಿಸಿದ್ದಾರೆ.

- Advertisement -
- Advertisement -

ಇಂದು ಚಿಕ್ಕಬಳ್ಳಾಪುರದಲ್ಲಿ ಗೋಶಾಲೆ ಉದ್ಘಾಟನೆ ಮಾಡಿ ಮಾತನಾಡಿರುವ ಸಚಿವ ಸುಧಾಕರ್‌ ರಾಜ್ಯದಲ್ಲಿ ಮತ್ತೆ ಗೋಹತ್ಯೆ ನಿಷೇಧ ಕಾನೂನು ಜಾರಿಗೆ ತರುವುದಾಗಿ ಘೋಷಿಸಿ, ಆ ಕುರಿತು ಚರ್ಚೆ ಹುಟ್ಟುಹಾಕಿದ್ದಾರೆ.

ಗೋವುಗಳು ನಮ್ಮ ಮನೆಯ ಸದಸ್ಯರಿದ್ದಂತೆ ಅವುಗಳನ್ನು ಹತ್ಯೆ ಮಾಡುವುದು ಅಪರಾಧ ಎಂದು ವೈದ್ಯಕೀಯ ಶಿಕ್ಷಣ ಸಚಿವ ಕೆ. ಸುಧಾಕರ್‌ ಹೇಳಿದ್ದಾರೆ. ಕರ್ನಾಟಕದಲ್ಲಿ ಗೋಹತ್ಯೆ ನಿಷೇಧ ಕಾನೂನು ಸದ್ಯದಲ್ಲೇ ಜಾರಿಗೆ ತರಲು ಮುಖ್ಯಮಂತ್ರಿ ಯಡಿಯೂರಪ್ಪ ಅವರಲ್ಲಿ ಮನವಿ ಮಾಡುವುದಾಗಿ ತಿಳಿಸಿದ್ದಾರೆ.

ಸರ್ಕಾರದ ಜೊತೆಗೆ ಜನರು ಸಹ ಗೋ ವಧೆ ತಡೆ ಬಗ್ಗೆ ಜಾಗೃತಿ ಮೂಡಿಸಬೇಕು. ಭಾರತೀಯರಾದ ನಾವು ಎಲ್ಲಾ ರಾಜ್ಯಗಳಲ್ಲೂ ಗೋಹತ್ಯೆ, ಗೋ ಮಾಂಸ ರಫ್ತು ನಿಲ್ಲಿಸಬೇಕು ಎಂದರು. ಎರಡು ಸದನದಲ್ಲಿ ಗೋಹತ್ಯೆ ನಿಷೇಧ ಕಾಯ್ದೆ ಬಗ್ಗೆ ಚರ್ಚೆಯಾಗಬೇಕು. ನಮ್ಮ ಪಕ್ಷ ಈ ಬಗ್ಗೆ ಸದ್ಯದಲ್ಲೇ ನಿರ್ಧಾರ ತೆಗೆದುಕೊಳ್ಳಲಿದೆ ಎಂದು ಪರೋಕ್ಷವಾಗಿ ಗೋಹತ್ಯೆ ನಿಷೇಧ ಕಾನೂನು ಜಾರಿಯಾಗುವ ಕುರಿತು ಸುಳಿವು ನೀಡಿದ್ದಾರೆ.

ಕಳೆದ ತಿಂಗಳು ಪಶುಸಂಗೋಪನಾ ಸಚಿವ ಪ್ರಭು ಚೌಹಾಣ್ ಕೂಡ ಶೀಘ್ರವೇ ಕರ್ನಾಟಕ ಗೋಹತ್ಯೆ ನಿಷೇಧ ಕಾನೂನು ಜಾರಿಗೆ ತರಲಿದೆ ಎಂದು ಹೇಳಿದ್ದರು. ಕೊರೋನಾ ಸೋಂಕು ಕಡಿಮೆಯಾದಾಗ ಅಧ್ಯಯನಕ್ಕಾಗಿ ದೇಶದಲ್ಲಿ ಈಗಾಗಲೇ ಕಾನೂನು ಜಾರಿಯಿರುವ ಗುಜರಾತ್, ಉತ್ತರಪ್ರದೇಶಗಳಿಗೆ ತಜ್ಞರ ಸಮಿತಿ ಕಳುಹಿಸಲಾಗುವುದು ಎಂದು ತಿಳಿಸಿದ್ದರು.

ಇನ್ನು, 2010ರಲ್ಲಿ ವಿಪಕ್ಷಗಳ ವಿರೋಧದ ನಡುವೆಯೂ ಸದನದಲ್ಲಿ ಯಡಿಯೂರಪ್ಪ ಗೋಹತ್ಯೆ ನಿಷೇಧ ಮಸೂದೆ ಮಂಡಿಸಿದ್ದರು.  ಆದರೆ ಕಾನೂನು ಜಾರಿಗೆ ಬರಲಿಲ್ಲ. 2013ರಲ್ಲಿ ಅಧಿಕಾರಕ್ಕೆ ಬಂದ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಇದು ಸಂವಿಧಾನ ವಿರೋಧಿ ಎಂದು ಕಾಯ್ದೆಯನ್ನು ಹಿಂಪಡೆದಿತ್ತು.

1964ರ ಜಾನುವಾರು ವಧೆ ಕಾಯ್ದೆಯನ್ನೇ ಕರ್ನಾಟಕದಲ್ಲಿ ಮುಂದುವರೆಸಲಾಗುತ್ತಿದೆ. ಈ ಕಾನೂನಿನ ಪ್ರಕಾರ 12 ವರ್ಷ ಮೇಲ್ಪಟ್ಟ ಮತ್ತು ಸಂತಾನೋತ್ಪತ್ತಿಗೆ ಅಶಕ್ತವಾಗಿರುವ, ಹಾಲು ನೀಡದ ಹಸು, ಎತ್ತು, ಎಮ್ಮೆ, ಕೋಣವನ್ನು ಮಾತ್ರ ವಧೆ ಮಾಡಬಹುದು.

2019ರಲ್ಲಿ ಮತ್ತೆ ಅಧಿಕಾರಕ್ಕೆ ಬಂದ ಬಿಎಸ್.ಯಡಿಯೂರಪ್ಪ ನೇತೃತ್ವದ ಬಿಜೆಪಿ ಸರ್ಕಾರದ ಮೇಲೆ ಗೋಹತ್ಯೆ ನಿಷೇಧ ಕಾನೂನು ಜಾರಿಗೆ ತರುವ ಒತ್ತಡವಿದೆ. ಪಕ್ಷದ ಹಲವು ನಾಯಕರು ಮುಖ್ಯಮಂತ್ರಿಗೆ ಮನವಿ ಪತ್ರವನ್ನು ನೀಡಿದ್ದಾರೆ. ಸದ್ಯ ಸಚಿವರಾದ ಪ್ರಭು ಚೌಹಾಣ್ ಮತ್ತು ಸುಧಾಕರ್‌ ಗೋಹತ್ಯೆ ನಿಷೇಧ ಚರ್ಚೆಗೆ ಮತ್ತೆ ಜೀವ ತುಂಬುತ್ತಿದ್ದಾರೆ.

ಇನ್ನು ಗೋಮಾಂಸ ರಫ್ತಿನಲ್ಲಿ ಭಾರತಕ್ಕೆ ಸಾಕಷ್ಟು ಆದಾಯ ಬರುತ್ತಿದ್ದು, ಗೋಹತ್ಯೆ ನಿಷೇಧವಷ್ಟೇ ಮಾಡುತ್ತಾರೆ, ರಫ್ತು ಅಲ್ಲ ಎಂದು ಹಲವರು ವ್ಯಂಗ್ಯವಾಡಿದ್ದಾರೆ.


ಇದನ್ನೂ ಓದಿ: ಭಾರತದಲ್ಲಿ ಗೋಹತ್ಯೆ ಏಕೆ? ಕಲ್ಲಡ್ಕ ಪ್ರಭಾಕರ್‌ ಭಟ್ಟರು ಕೇಳಿದ್ದು ಯಾರಿಗೆ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...