Homeಕರ್ನಾಟಕಬಿಜೆಪಿ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ಕೊಟ್ಟ ಸಿಪಿ ಯೋಗೇಶ್ವರ್; ಡಿಕೆಶಿ ಸಮ್ಮುಖದಲ್ಲಿ ಕಾಂಗ್ರೆಸ್ ಸೇರ್ಪಡೆ

ಬಿಜೆಪಿ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ಕೊಟ್ಟ ಸಿಪಿ ಯೋಗೇಶ್ವರ್; ಡಿಕೆಶಿ ಸಮ್ಮುಖದಲ್ಲಿ ಕಾಂಗ್ರೆಸ್ ಸೇರ್ಪಡೆ

- Advertisement -
- Advertisement -

ಬಿಜೆಪಿ ಪ್ರಾಥಮಿಕ ಸದಸ್ಯತ್ವಕ್ಕೆ ಇಂದು ರಾಜೀನಾಮೆ ನೀಡಿದ ಮಾಜಿ ಸಚಿವ ಸಿಪಿ ಯೋಗೇಶ್ವರ್, ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸಮ್ಮುಖದಲ್ಲಿ ಕಾಂಗ್ರೆಸ್‌ ಪಕ್ಷ ಸೇರಿದರು.

ಎಚ್‌ಡಿ ಕುಮಾರಸ್ವಾಮಿ ಅವರಿಂದ ತೆರವಾದ ಚನ್ನಪಟ್ಟಣ ವಿಧಾನಸಭೆ ಕ್ಷೇತ್ರದ ಉಪ ಚುನಾವಣೆ ‘ಟಿಕೆಟ್’ ಮೇಲೆ ಕಣ್ಣಿಟ್ಟಿದ್ದ ಮಾಜಿ ಸಚಿವ ಸಿಪಿ ಯೋಗೇಶ್ವರ್, ಕ್ಷೇತ್ರವನ್ನು ಜೆಡಿಎಸ್‌ಗೆ ಬಿಟ್ಟುಕೊಡುವ ಸುದ್ದಿ ಖಚಿತವಾಗುತ್ತಿದ್ದಂತೆಯೇ ಬಿಜೆಪಿ ನಾಯಕರ ವಿರುದ್ಧ ಮುನಿಸಿಕೊಂಡಿದ್ದರು. ತಮ್ಮ ವಿಧಾನ ಪರಿಷತ್ ಸದಸ್ಯ ಸ್ಥಾನಕ್ಕೆ ರಾಜೀನಾಮೆ ನೀಡಿದ ಬಳಿಕ ಅವರು ಇಂದು ಬಿಜೆಪಿ ಪ್ರಾಥಮಿಕ ಸದಸ್ಯತ್ವಕ್ಕೂ ರಾಜೀನಾಮೆ ನೀಡಿ ಕಾಂಗ್ರೆಸ್ ಸೇರಿದರು.

ಕೆಪಿಸಿಸಿ ಕಚೇರಿಯಲ್ಲಿ ಪಕ್ಷ ಸೇರ್ಪಡೆ ಬಳಿಕ ಮಾತನಾಡಿದ ಸಿಪಿ ಯೋಗೇಶ್ವರ್, “ನನ್ನ ರಾಜಕೀಯ ಜೀವನ ಪ್ರಾರಂಭಿಸಿದ್ದು ಡಿಕೆ ಶಿವಕುಮಾರ್ ನೇತೃತ್ವದಲ್ಲಿ, ಇಂದು ಮತ್ತೆ ಕಾಂಗ್ರೆಸ್ ಸೇರಿದ್ದೇನೆ. ನನ್ನ ಮುಂದಿನ ರಾಜಕೀಯ ಜೀವನ ಕಾಂಗ್ರೆಸ್‌ನಲ್ಲೆ. ಕಳೆದ ಹಲವಾರು ದಿನಗಳಿಂದ ನಡೆದ ರಾಜಕೀಯ ಬೆಳವಣಿಗೆ ಗಮನಿಸಿದರೆ, ನಾವು ಕಟ್ಟಿದ ಮನೆಯಲ್ಲಿ ನಾವೇ ವಾಸಿಸಲು ಸಾಧ್ಯವಿಲ್ಲ ಎನ್ನುವ ಪರಿಸ್ಥಿತಿ ಇದೆ” ಎಂದು ಬಿಜೆಪಿ ನಾಯಕರ ವಿರುದ್ಧದ ತಮ್ಮ ಅಸಮಾಧಾನ ಹೊರಹಾಕಿದರು.

“ಬಿಜೆಪಿ ಜೊತೆಗೆ ಜೆಡಿಎಸ್ ಸೇರಿದ ಬಳಿಕ ಅಲ್ಲಿ ನನ್ನ ರಾಜಕೀಯ ಬೆಳವಣಿಗೆಗೆ ಪೂರಕ ವಾತಾವರಣ ಇಲ್ಲ ಎಂದು ಅರಿವಾಯಿತು. ಸ್ವಯಂ ಪ್ರೇರಣೆಯಿಂದ, ಯಾವುದೇ ಆಕಾಂಕ್ಷೆ ಹಾಗೂ ಒತ್ತಡ ಇಲ್ಲದೆ ಕಾಂಗ್ರೆಸ್ ಸೇರಿದ್ದೇನೆ. ಸಿಎಂ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿದ್ದು, ಕಾಂಗ್ರೆಸ್ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ ಅವರ ಬಳಿ ಮಾತನಾಡಿ ಆಶೀರ್ವಾದ ಪಡೆದಿದ್ದೇನೆ” ಎಂದರು.

“ಕಾಂಗ್ರೆಸ್ ಸರ್ಕಾರದ ಕ್ರಿಯಾಶೀಲ ಅಭಿವೃದ್ಧಿ ಯೋಜನೆಗಳು ಸಾಕಷ್ಟು ಜಾರಿಯಲ್ಲಿವೆ. ಜನಸಾಮಾನ್ಯರ ಪರವಾಗಿರುವ ಕೆಲಸದಲ್ಲಿ ನಾನೂ ಕೂಡ ಕೈಜೋಡಿಸಬೇಕು ಎಂಬ ಕಾರಣಕ್ಕೆ ಕಾಂಗ್ರೆಸ್ ಸೇರಿದ್ದೇನೆ. ಕಾಂಗ್ರೆಸ್ ಸರ್ಕಾರದ ಅಭಿವೃದ್ಧಿಯಲ್ಲಿ ನಾನೂ ಪಾಲುದಾರನಾಗಬೇಕು ಎಂದು ನಿರ್ಧರಿಸಿದ್ದೇನೆ” ಎಂದು ಹೇಳಿದರು.

ನಿಮಗೆ ಪಕ್ಷ ನಿಷ್ಠೆ ಇಲ್ಲ ಎಂದು ಆರ್‌ ಅಶೋಕ್ ಹೇಳಿದ್ದಾರೆ ಎಂಬ ಪ್ರಶ್ನೆಗೆ ಉತ್ತರಿಸಿದ ಅವರು, “ನಾನು ಎಲ್ಲಿರುತ್ತೇನೋ ಅಷ್ಟು ದಿನ ನಿಷ್ಠೆಯಿಂದ ಇರುತ್ತೇನೆ” ಎಂದು ಹೇಳಿದರು. “ಡಿಕೆ ಶಿವಕುಮಾರ್, ಸುರೇಶ್ ನಾವೆಲ್ಲರೂ ಒಟ್ಟಿಗೆ ರಾಜಕೀಯ ಆರಂಭ ಮಾಡಿದ್ದೇವೆ. ಒಮ್ಮೆ ಅವರ ಸೋಲಿಗೆ ನಾನೂ ಕಾರಣ ಆಗಿದ್ದೇನೆ, ಮುಂದೆ ಅವರ ಗೆಲುವಿಗೆ ಶ್ರಮಿಸುತ್ತೇನೆ” ಎಂದರು.

ಯೋಗೇಶ್ವರ್ ಅವರನ್ನು ಕಾಂಗ್ರೆಸ್‌ಗೆ ಸೇರ್ಪಡೆ ಮಾಡಿಕೊಂಡ ಬಳಿಕ ಮಾತನಾಡಿದ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್, “ಯೋಗೇಶ್ವರ್ ರಾಜಕಾರಣ ಶುರು ಮಾಡಿದ್ದೇ ಕಾಂಗ್ರೆಸ್‌ನಿಂದ; ಅವರು ಬಿಜೆಪಿ ಸೇರಿದಂತೆ ಹಲವು ಪಕ್ಷಗಳನ್ನು ನೋಡಿದ್ದಾರೆ. ಸಹಜವಾಗಿಯೇ ಅವರು ಕಳೆದ ಚುನಾವಣೆಯಲ್ಲಿ ಎನ್‌ಡಿಎ ಅಭ್ಯರ್ಥಿ ಗೆಲುವಿಗೆ ಶ್ರಮಿಸಿದ್ದಾರೆ. ರಾಜಕೀಯದಲ್ಲಿ ಅನೇಕ ಭೀನ್ನಾಭಿಪ್ರಾಯ ಬರುತ್ತವೆ. ಅವರು ಇಂದು ಯಾವುದೇ ಷರತ್ತಿಲ್ಲದೆ ಪಕ್ಷಕ್ಕೆ ಸೇರಿದ್ದಾರೆ” ಎಂದರು.

“ನಮ್ಮ ಪಕ್ಷದ ನಾಯಕರ ಸಂಘಟನೆ ಬಳಿಕ ಜೆಡಿಎಸ್ ಮತ್ತು ಬಿಜೆಪಿಯಿಂದ ಹಲವು ನಾಯಕರು ಕಾಂಗ್ರೆಸ್ ಸೇರಿದ್ದಾರೆ. ಈಗ ಪಕ್ಷ ಸೇರಿರುವ ನಾಯಕರು ಯಾವುದೇ ರೀತಿಯ ಮುಜುಗರಕ್ಕೆ ಒಳಗಾಗುವುದಿಲ್ಲ; ನಮ್ಮ ನಾಯಕರು ನಿಮ್ಮನ್ನು ಗೌರವಿಸುತ್ತಾರೆ. ಎಲ್ಲರನ್ನೂ ವಿಶ್ವಾಸಕ್ಕೆ ತಗೆದುಕೊಂಡು ಕೆಲಸ ಮಾಡುತ್ತೇವೆ. ನಮ್ಮ ಸರ್ಕಾರ ಸುಭದ್ರವಾಗಿದೆ; ಐದು ವರ್ಷದ ನಂತರವೂ ನಮ್ಮದೇ ಸರ್ಕಾರ ಇರುತ್ತದೆ. ಚನ್ನಪಟ್ಟಣಕ್ಕೆ ವಿಶೇಷ ಆದ್ಯತೆ ಕೊಡುತ್ತೇವೆ” ಎಂದು ಇಂದು ಕಾಂಗ್ರೆಸ್ ಸೇರಿದ ಚನ್ನಪಟ್ಟಣ ಮುಖಂಡರುಗಳಿಗೆ ಭರವಸೆ ನೀಡಿದರು.

“ಈಗಾಗಲೇ ಯೋಗೇಶ್ವರ್ ತಮ್ಮ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ ಕೊಟ್ಟು ಕಾಂಗ್ರೆಸ್ ಸೇರಿದ್ದಾರೆ. ಅಭ್ಯರ್ಥಿ ಯಾರಾಗಬೇಕು ಎಂದು ಹೈಕಮಾಂಡ್ ನಿರ್ಧರಿಸುತ್ತದೆ. ನಾವು ಎರಡು ಹೆಸರುಗಳನ್ನು ಅವರಿಗೆ ಕಳುಹಿಸಿಕೊಡುತ್ತೇವೆ. ಒಮ್ಮತದ ಅಭ್ಯರ್ಥಿ ನಾಳೆ ಬೆಳಿಗ್ಗೆ ಚನ್ನಪಟ್ಟಣದಲ್ಲಿ ನಾಮಪತ್ರ ಸಲ್ಲಿಸುತ್ತಾರೆ” ಎಂದರು.

ಇದನ್ನೂ ಓದಿ; ಜಾತಿಗಣತಿ ವರದಿ ವಿರುದ್ಧ ವೀರಶೈವ-ಲಿಂಗಾಯತ ಮಹಾಸಭೆ ನಿರ್ಣಯ : ಸಚಿವರು, ಶಾಸಕರಿಂದ ಸಹಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜಾತಿ ಕಿರುಕುಳಕ್ಕೆ ದಲಿತ ವಿದ್ಯಾರ್ಥಿ ಸಾವು ಪ್ರಕರಣ: ಇಂದು ಸಂಜೆ 6 ರವರೆಗೆ ಕೇರಳ ಬಂದ್

ಜಾತಿ ಆಧಾರಿತ ಕಿರುಕುಳದಿಂದ ಮನನೊಂದಿದ್ದ ಕೇರಳದ ಅಂಚರಕಂಡಿಯ ಕಣ್ಣೂರು ದಂತ ಕಾಲೇಜಿನಲ್ಲಿ ಪ್ರಥಮ ವರ್ಷದ ಬಿಡಿಎಸ್ ವಿದ್ಯಾರ್ಥಿ ಆರ್.ಎಲ್. ನಿತಿನ್ ರಾಜ್ ಆತ್ಮಹತ್ಯೆಗೆ ರಾಜ್ಯದಾದ್ಯಂತ ಆಕ್ರೋಶ ವ್ಯಕ್ತವಾಗಿದೆ. ಕಾಲೇಜು ಕಟ್ಟಡದಿಂದ ಹಾರಿ ಆತ್ಮಹತ್ಯೆ...

‘ಹೊತ್ತಿ ಉರಿಯುತ್ತಿರುವ ಮಣಿಪುರ’: ಶತಮಾನದ ಬೆಂಕಿಗೆ ತುಪ್ಪ ಸುರಿದ ಬಿಜೆಪಿಯ ಕೋಮುರಾಜಕಾರಣ

ಭಾರತದ ಈಶಾನ್ಯ ರಾಜ್ಯ ಮಣಿಪುರ ಅಕ್ಷರಶಃ ಹೊತ್ತಿ ಉರಿಯುತ್ತಿದೆ. ಶತಮಾನಗಳಿಂದ ಹೊಗೆಯಾಡುತ್ತಿದ್ದ ಹಗೆತನಕ್ಕೆ ಕೋಮುರಾಜಕಾರಣದ ಬಣ್ಣ ಬಳಿದ ಬಿಜೆಪಿ ಮತ್ತು ಕೇಂದ್ರ ಸರ್ಕಾರ ಮಣಿಪುರದ ಜನರತ್ತ ತಿರುಗಿಯೂ ನೋಡುತ್ತಿಲ್ಲ. 2023ರಲ್ಲಿ ಭುಗಿಲೆದ್ದ ಉದ್ವಿಗ್ನತೆ...

ಮಧ್ಯಪ್ರದೇಶ| ದಲಿತ ದಂಪತಿಗೆ ಹನುಮಾನ್ ದೇಗುಲ ಪ್ರವೇಶ ನಿರಾಕರಣೆ; ಸಾಮಾಜಿಕ ಬಹಿಷ್ಕಾರ

ಮಧ್ಯಪ್ರದೇಶದ ಖಾರ್ಗೋನ್ ಜಿಲ್ಲೆಯ ಹನುಮಾನ್ ದೇವಸ್ಥಾನಕ್ಕೆ ನವವಿವಾಹಿತ ದಲಿತ ದಂಪತಿಗೆ ಪ್ರವೇಶ ನಿರಾಕರಿಸಲಾಗಿದೆ ಎಂಬ ಆರೋಪ ಕೇಳಿಬಂದಿದ್ದು, ಇದು ಗ್ರಾಮದಲ್ಲಿ ಉದ್ವಿಗ್ನತೆಯನ್ನು ಉಂಟುಮಾಡಿದೆ. ಈ ಘಟನೆಯು ಜಾತಿ ಆಧಾರಿತ ತಾರತಮ್ಯದ ಕುರಿತು ಕಳವಳ...

ಬಂಗಾಳ SIR : ನ್ಯಾಯಮಂಡಳಿಗಳಿಂದ ಪರಿಹಾರ ಪಡೆದವರು ಕೇವಲ 0.01% ಜನ

ಪಶ್ಚಿಮ ಬಂಗಾಳದಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಲ್ಲಿ ಉಂಟಾದ ವಿವಾದಗಳನ್ನು ಬಗೆಹರಿಸಲು ಮೇಲ್ಮನವಿ ನ್ಯಾಯಮಂಡಳಿಗಳನ್ನು ಸ್ಥಾಪಿಸಲಾಗಿದೆ. ಎಸ್‌ಐಆರ್ ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದರ ಅಥವಾ...

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...