Homeಮುಖಪುಟವಲಸೆ ಕಾಮಿ೯ಕರನ್ನು ಬಿಲ್ಡರ್‌ಗಳ ಜೀತದಾಳು ಮಾಡುತ್ತಿರುವ ಸಕಾ೯ರ : ಸಿಪಿಐ(ಎಂ) ಖಂಡನೆ

ವಲಸೆ ಕಾಮಿ೯ಕರನ್ನು ಬಿಲ್ಡರ್‌ಗಳ ಜೀತದಾಳು ಮಾಡುತ್ತಿರುವ ಸಕಾ೯ರ : ಸಿಪಿಐ(ಎಂ) ಖಂಡನೆ

- Advertisement -
- Advertisement -

ತಮ್ಮ ರಾಜ್ಯಗಳಿಗೆ ಹಿಂತಿರುಗಿ ಹೋಗಬಯಸುವ ಹೊರ ರಾಜ್ಯದ ವಲಸೆ ಕಾಮಿ೯ಕರನ್ನು ತಮ್ಮ ಊರುಗಳಿಗೆ ಹೋಗಲು ಬಿಡದೆ ರೈಲು ರದ್ದುಗೊಳಿಸುವ ಮೂಲಕ ಬಿಲ್ಡರ್‌ಗಳ ಜೀತದಾಳುಗಳನ್ನಾಗಿಸುತ್ತಿರುವ ರಾಜ್ಯ ಸಕಾ೯ರದ ಕ್ರಮವನ್ನು ಭಾರತ ಕಮ್ಯೂನಿಸ್ಟ್ ಪಕ್ಷ (ಮಾಕ್ಸ೯ವಾದಿ) ಬೆಂಗಳೂರು ಉತ್ತರ ಮತ್ತು ದಕ್ಷಿಣ ಜಿಲ್ಲಾ ಸಮಿತಿಗಳು ಖಂಡಿಸಿವೆ.

ಈ ಕುರಿತು ಬೆಂಗಳೂರು ದಕ್ಷಿಣ ಜಿಲ್ಲಾ ಸಮಿತಿಯ ಸಿಪಿಐ(ಎಂ) ಕಾರ್ಯದರ್ಶಿಯಾದ ಕೆ. ಎನ್.ಉಮೇಶ್ ಮತ್ತು ಬೆಂಗಳೂರು ಉತ್ತರ ಜಿಲ್ಲಾ ಸಮಿತಿಯ ಕಾರ್ಯದರ್ಶಿಯದ ಎನ್. ಪ್ರತಾಪ್ ಸಿಂಹರವರು ಜಂಟಿ ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿದ್ದು, ಈ ಅನಾಗರೀಕ ನಿರ್ಧಾರದಿಂದ ಕೂಡಲೇ ಸರ್ಕಾರ ಹಿಂದೆ ಸರಿಯಬೇಕೆಂದು ಒತ್ತಾಯಿಸಿದ್ದಾರೆ.


ಇದನ್ನೂ ಓದಿ: 2 ದಿನದಿಂದ ಊಟವಿಲ್ಲ, ದಯವಿಟ್ಟು ನಮ್ಮೂರಿಗೆ ಕಳಿಸಿಬಿಡಿ : ವಲಸೆ ಕಾರ್ಮಿಕರ ಅಳಲು 


ವಲಸೆ ಕಾರ್ಮಿಕರನ್ನು ಅವರ ಊರಿಗೆ ಕಳಿಸದೇ ದೂರದ ಮಾದಾವರ ಬಳಿಯ ಬಿಐಇಸಿಯಲ್ಲಿ ಕೂಡಿಹಾಕಲಾಗಿದೆ. ಮೊದಲಿಗೆ ಕಳುಹಿಸುವುದಾಗಿ ಹೇಳಿ, ಆನಂತರ ಸಚಿವರಾದ ಆರ್. ಅಶೋಕ್ ರವರು ಬಿಹಾರ ಮುಖ್ಯಮಂತ್ರಿಯವರು ಒಪ್ಪದ ಕಾರಣ ಕಳುಹಿಸಲು ಸಾಧ್ಯವಾಗುತ್ತಿಲ್ಲ ಎಂದು ಹೇಳಿಕೆ ನೀಡಿದ್ದಾರೆ. ‌ಆದರೆ ಅದೇ ಸಮಯದಲ್ಲಿ ಸರ್ಕಾರದ ಪ್ರಧಾನ ಕಾರ್ಯದರ್ಶಿ ಎನ್.ಮಂಜುನಾಥ್‌ ಪ್ರಸಾದ್‌ ಸುತ್ತೋಲೆ ಮೂಲಕ ರೈಲುಸೇವೆಯನ್ನು ರದ್ದುಗೊಳಿಸಿದ್ದಾರೆ. ಇದರ ಹಿಂದೆ ಬಿಲ್ಡರ್‌ಗಳ ಹಿತವೇ ರಾಜ್ಯ ಬಿಜೆಪಿ ಸಕಾ೯ರಕ್ಕೆ ಪ್ರಧಾನವಾಗಿದೆ ಎಂಬುದನ್ನು ಸಾಬೀತು ಮಾಡಿದೆ ಎಂದು ಹೇಳಿಕೆಯಲ್ಲಿ ಟೀಕಿಸಲಾಗಿದೆ.

ಕೂಲಿಯಿಲ್ಲದೆ ಹಸಿದಿದ್ದ ಅವರಿಗೆ ಬಿಜೆಪಿ ಬೆಂಬಲಿತ ಅದಮ್ಯ ಚೇತನ, ರವಿ ಶಂಕರ್ ಆಶ್ರಮ ಮುಂತಾದವರಿಗೆ ಸಿದ್ಧ ಆಹಾರ ಗುತ್ತಿಗೆ ನೀಡಿ ಉಪ್ಪು ಹುಳಿ ಈರುಳ್ಳಿ ಬೆಳ್ಳುಳ್ಳಿ ಇಲ್ಲದ ಆಹಾರ ನೀಡಿ ಅವರನ್ನು ಮತ್ತಷ್ಟು ಹತಾಶರನ್ನಾಗಿಸಿತ್ತು. ಈ ಎಲ್ಲದರ ಪರಿಣಾಮವಾಗಿ ವಲಸೆ ಕಾಮಿ೯ಕರು ಬೇಸತ್ತು ಪೋಲಿಸರ ವಿರುದ್ಧ ತಿರುಗಿ ಬಿದ್ದಿದ್ದರು. ಕನ್ನಡ ಇಂಗ್ಲಿಷ್ ಬಾರದ ಕಾಮಿ೯ಕರಿಗೆ ಸೇವಾ ಸಿಂಧು ಆಪ್ ಮೂಲಕವೇ ನೋಂದಾಯಿಸಲು ಹೇಳಿ ಅವರನ್ನು ವಂಚಿಸಿದ ಸಕಾ೯ರವು, ಇತರರ ಸಹಾಯ ಪಡೆದು ನೋಂದಾಯಿಸಲು ಮುಂದಾದಾಗ ಸವ೯ರ್ ಡೌನ್ ಮಾಡಿ ನೋಂದಾಯಿಸಿ ಕೊಳ್ಳಲು ಬಿಡದೆ ಇದೀಗ ರೈಲುಗಳನ್ನು ರದ್ದು ಪಡಿಸಿ ವಲಸೆ ಕಾಮಿ೯ಕರನ್ನು ಜೀತದಾಳುಗಳಂತೆ ನೆಡೆಸಿ ಕೊಳ್ಳುತ್ತಿದೆ ಎಂದು ಕೆ. ಎನ್.ಉಮೇಶ್ ರವರು ಆರೋಪಿಸಿದ್ದಾರೆ.

ಇದು ಕಾರ್ಮಿಕರನ್ನು ಹತಾಶ ಸ್ಥಿತಿಗೆ ತಳ್ಳಿದ್ದು ಮುಂದೆ ಕಾಮಿ೯ಕರಿಗೆ ಉಂಟಾಗುವ ಎಲ್ಲಾ ಅನಾಹುತಗಳಿಗೂ ರಾಜ್ಯ ಬಿಜೆಪಿ ಸಕಾ೯ರದ ದುರಾಡಳಿತವೇ ಕಾರಣವಾಗಿದೆ ಎಂದು ಅವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.


ಇದನ್ನೂ ಓದಿ: ಬಿಲ್ಡರ್‌ ಲಾಬಿಗೆ ಮಣಿದು ರೈಲುಸೇವೆ ರದ್ದುಗೊಳಿಸಿದ ರಾಜ್ಯಸರ್ಕಾರ: ಸಂಕಷ್ಟದಲ್ಲಿ ಕಾರ್ಮಿಕರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...