Homeಮುಖಪುಟವಲಸೆ ಕಾಮಿ೯ಕರನ್ನು ಬಿಲ್ಡರ್‌ಗಳ ಜೀತದಾಳು ಮಾಡುತ್ತಿರುವ ಸಕಾ೯ರ : ಸಿಪಿಐ(ಎಂ) ಖಂಡನೆ

ವಲಸೆ ಕಾಮಿ೯ಕರನ್ನು ಬಿಲ್ಡರ್‌ಗಳ ಜೀತದಾಳು ಮಾಡುತ್ತಿರುವ ಸಕಾ೯ರ : ಸಿಪಿಐ(ಎಂ) ಖಂಡನೆ

- Advertisement -
- Advertisement -

ತಮ್ಮ ರಾಜ್ಯಗಳಿಗೆ ಹಿಂತಿರುಗಿ ಹೋಗಬಯಸುವ ಹೊರ ರಾಜ್ಯದ ವಲಸೆ ಕಾಮಿ೯ಕರನ್ನು ತಮ್ಮ ಊರುಗಳಿಗೆ ಹೋಗಲು ಬಿಡದೆ ರೈಲು ರದ್ದುಗೊಳಿಸುವ ಮೂಲಕ ಬಿಲ್ಡರ್‌ಗಳ ಜೀತದಾಳುಗಳನ್ನಾಗಿಸುತ್ತಿರುವ ರಾಜ್ಯ ಸಕಾ೯ರದ ಕ್ರಮವನ್ನು ಭಾರತ ಕಮ್ಯೂನಿಸ್ಟ್ ಪಕ್ಷ (ಮಾಕ್ಸ೯ವಾದಿ) ಬೆಂಗಳೂರು ಉತ್ತರ ಮತ್ತು ದಕ್ಷಿಣ ಜಿಲ್ಲಾ ಸಮಿತಿಗಳು ಖಂಡಿಸಿವೆ.

ಈ ಕುರಿತು ಬೆಂಗಳೂರು ದಕ್ಷಿಣ ಜಿಲ್ಲಾ ಸಮಿತಿಯ ಸಿಪಿಐ(ಎಂ) ಕಾರ್ಯದರ್ಶಿಯಾದ ಕೆ. ಎನ್.ಉಮೇಶ್ ಮತ್ತು ಬೆಂಗಳೂರು ಉತ್ತರ ಜಿಲ್ಲಾ ಸಮಿತಿಯ ಕಾರ್ಯದರ್ಶಿಯದ ಎನ್. ಪ್ರತಾಪ್ ಸಿಂಹರವರು ಜಂಟಿ ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿದ್ದು, ಈ ಅನಾಗರೀಕ ನಿರ್ಧಾರದಿಂದ ಕೂಡಲೇ ಸರ್ಕಾರ ಹಿಂದೆ ಸರಿಯಬೇಕೆಂದು ಒತ್ತಾಯಿಸಿದ್ದಾರೆ.


ಇದನ್ನೂ ಓದಿ: 2 ದಿನದಿಂದ ಊಟವಿಲ್ಲ, ದಯವಿಟ್ಟು ನಮ್ಮೂರಿಗೆ ಕಳಿಸಿಬಿಡಿ : ವಲಸೆ ಕಾರ್ಮಿಕರ ಅಳಲು 


ವಲಸೆ ಕಾರ್ಮಿಕರನ್ನು ಅವರ ಊರಿಗೆ ಕಳಿಸದೇ ದೂರದ ಮಾದಾವರ ಬಳಿಯ ಬಿಐಇಸಿಯಲ್ಲಿ ಕೂಡಿಹಾಕಲಾಗಿದೆ. ಮೊದಲಿಗೆ ಕಳುಹಿಸುವುದಾಗಿ ಹೇಳಿ, ಆನಂತರ ಸಚಿವರಾದ ಆರ್. ಅಶೋಕ್ ರವರು ಬಿಹಾರ ಮುಖ್ಯಮಂತ್ರಿಯವರು ಒಪ್ಪದ ಕಾರಣ ಕಳುಹಿಸಲು ಸಾಧ್ಯವಾಗುತ್ತಿಲ್ಲ ಎಂದು ಹೇಳಿಕೆ ನೀಡಿದ್ದಾರೆ. ‌ಆದರೆ ಅದೇ ಸಮಯದಲ್ಲಿ ಸರ್ಕಾರದ ಪ್ರಧಾನ ಕಾರ್ಯದರ್ಶಿ ಎನ್.ಮಂಜುನಾಥ್‌ ಪ್ರಸಾದ್‌ ಸುತ್ತೋಲೆ ಮೂಲಕ ರೈಲುಸೇವೆಯನ್ನು ರದ್ದುಗೊಳಿಸಿದ್ದಾರೆ. ಇದರ ಹಿಂದೆ ಬಿಲ್ಡರ್‌ಗಳ ಹಿತವೇ ರಾಜ್ಯ ಬಿಜೆಪಿ ಸಕಾ೯ರಕ್ಕೆ ಪ್ರಧಾನವಾಗಿದೆ ಎಂಬುದನ್ನು ಸಾಬೀತು ಮಾಡಿದೆ ಎಂದು ಹೇಳಿಕೆಯಲ್ಲಿ ಟೀಕಿಸಲಾಗಿದೆ.

ಕೂಲಿಯಿಲ್ಲದೆ ಹಸಿದಿದ್ದ ಅವರಿಗೆ ಬಿಜೆಪಿ ಬೆಂಬಲಿತ ಅದಮ್ಯ ಚೇತನ, ರವಿ ಶಂಕರ್ ಆಶ್ರಮ ಮುಂತಾದವರಿಗೆ ಸಿದ್ಧ ಆಹಾರ ಗುತ್ತಿಗೆ ನೀಡಿ ಉಪ್ಪು ಹುಳಿ ಈರುಳ್ಳಿ ಬೆಳ್ಳುಳ್ಳಿ ಇಲ್ಲದ ಆಹಾರ ನೀಡಿ ಅವರನ್ನು ಮತ್ತಷ್ಟು ಹತಾಶರನ್ನಾಗಿಸಿತ್ತು. ಈ ಎಲ್ಲದರ ಪರಿಣಾಮವಾಗಿ ವಲಸೆ ಕಾಮಿ೯ಕರು ಬೇಸತ್ತು ಪೋಲಿಸರ ವಿರುದ್ಧ ತಿರುಗಿ ಬಿದ್ದಿದ್ದರು. ಕನ್ನಡ ಇಂಗ್ಲಿಷ್ ಬಾರದ ಕಾಮಿ೯ಕರಿಗೆ ಸೇವಾ ಸಿಂಧು ಆಪ್ ಮೂಲಕವೇ ನೋಂದಾಯಿಸಲು ಹೇಳಿ ಅವರನ್ನು ವಂಚಿಸಿದ ಸಕಾ೯ರವು, ಇತರರ ಸಹಾಯ ಪಡೆದು ನೋಂದಾಯಿಸಲು ಮುಂದಾದಾಗ ಸವ೯ರ್ ಡೌನ್ ಮಾಡಿ ನೋಂದಾಯಿಸಿ ಕೊಳ್ಳಲು ಬಿಡದೆ ಇದೀಗ ರೈಲುಗಳನ್ನು ರದ್ದು ಪಡಿಸಿ ವಲಸೆ ಕಾಮಿ೯ಕರನ್ನು ಜೀತದಾಳುಗಳಂತೆ ನೆಡೆಸಿ ಕೊಳ್ಳುತ್ತಿದೆ ಎಂದು ಕೆ. ಎನ್.ಉಮೇಶ್ ರವರು ಆರೋಪಿಸಿದ್ದಾರೆ.

ಇದು ಕಾರ್ಮಿಕರನ್ನು ಹತಾಶ ಸ್ಥಿತಿಗೆ ತಳ್ಳಿದ್ದು ಮುಂದೆ ಕಾಮಿ೯ಕರಿಗೆ ಉಂಟಾಗುವ ಎಲ್ಲಾ ಅನಾಹುತಗಳಿಗೂ ರಾಜ್ಯ ಬಿಜೆಪಿ ಸಕಾ೯ರದ ದುರಾಡಳಿತವೇ ಕಾರಣವಾಗಿದೆ ಎಂದು ಅವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.


ಇದನ್ನೂ ಓದಿ: ಬಿಲ್ಡರ್‌ ಲಾಬಿಗೆ ಮಣಿದು ರೈಲುಸೇವೆ ರದ್ದುಗೊಳಿಸಿದ ರಾಜ್ಯಸರ್ಕಾರ: ಸಂಕಷ್ಟದಲ್ಲಿ ಕಾರ್ಮಿಕರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿಜೆಪಿ ತೊರೆದು ಪ್ರಾದೇಶಿಕ ಪಕ್ಷದತ್ತ ಅಣ್ಣಾಮಲೈ : ದ್ರಾವಿಡ ಮಣ್ಣಿನಲ್ಲಿ ವಿಫಲವಾದ ಹಿಂದುತ್ವ ರಾಜಕೀಯ

ಮಾಜಿ ಐಪಿಎಸ್‌ ಅಧಿಕಾರಿ ಹಾಗೂ ಬಿಜೆಪಿ ತಮಿಳುನಾಡು ರಾಜ್ಯ ಘಟಕದ ಮಾಜಿ ಅಧ್ಯಕ್ಷ ಕೆ. ಅಣ್ಣಾಮಲೈ ಬಿಜೆಪಿ ತೊರೆದಿದ್ದು, ಹೊಸ ಪ್ರಾದೇಶಿಕ ಪಕ್ಷ ಕಟ್ಟಲು ಮುಂದಾಗಿದ್ದಾರೆ ಎಂದು ವರದಿಯಾಗಿದೆ. ಮಂಗಳವಾರ...

45 ಲೀಟರ್ ಟ್ಯಾಂಕಿಗೆ 52 ಲೀಟರ್ ಬಿಲ್ ಕೊಟ್ಟ ಚತುರ ಕಳ್ಳರು: ಕಾನ್ಪುರದಲ್ಲಿ ಪೆಟ್ರೋಲ್ ಬಂಕ್ ವಂಚನೆ ಪತ್ತೆ

ಉತ್ತರ ಪ್ರದೇಶದ ಕಾನ್ಪುರದಲ್ಲಿ ಹೊಸ ಕಾರು ಖರೀದಿಸಿದ ಮಾಲೀಕರೊಬ್ಬರು ಸ್ಥಳೀಯ ಪೆಟ್ರೋಲ್ ಬಂಕ್‌ಗೆ ಹೋದಾಗ ಅವರಿಗೆ ಒಂದು ಶಾಕಿಂಗ್ ಅನುಭವವಾಗಿದೆ. ಅವರ ಕಾರಿನ ಗರಿಷ್ಠ ಇಂಧನ ಟ್ಯಾಂಕ್ ಸಾಮರ್ಥ್ಯ ಕೇವಲ 45 ಲೀಟರ್...

ಆರು ಮಕ್ಕಳಿದ್ದರೆ ನೀವು ಮತದಾನದ ಹಕ್ಕನ್ನು ಕಳೆದುಕೊಳ್ಳಬಹುದು: ಮತದಾರರ ಪಟ್ಟಿ ‘ಕ್ಲೀನ್’ ಮಾಡಲು ECI ಹೊಸ ಪ್ಲಾನ್!

ಭಾರತದಲ್ಲಿ 'ಆರು ಅಥವಾ ಅದಕ್ಕಿಂತ ಹೆಚ್ಚು ಮಕ್ಕಳನ್ನು ಹೊಂದಿದ್ದಾರೆ' ಎಂಬ ಕಾರಣಕ್ಕೆ ಯಾರಾದರೂ ಮತದಾನದ ಹಕ್ಕನ್ನು ಕಳೆದುಕೊಳ್ಳಲು ಸಾಧ್ಯವೇ? ಮೇಲ್ನೋಟಕ್ಕೆ ಹೌದು ಎನ್ನುವಂತಿದೆ ಉತ್ತರ ಪ್ರದೇಶದ ವಾರಾಣಸಿಯ ಕ್ಯಾಂಟೋನ್ಮೆಂಟ್ ಕ್ಷೇತ್ರದ ಮತದಾರ ಸೋನು...

ಕದನ ವಿರಾಮವೆಂಬ ಕಳ್ಳಾಟ : ಗಾಝಾದಿಂದ ಸಿರಿಯಾವರೆಗೆ ಮುಂದುವರಿದ ಇಸ್ರೇಲ್ ನರಮೇಧ

ಬರೋಬ್ಬರಿ ಎಪ್ಪತ್ತು ಸಾವಿರದಷ್ಟು (ವರದಿಗಳ ಪ್ರಕಾರ 67, 900) ಜನರನ್ನು ಹತ್ಯೆಗೈದು, ಶೇಕಡ 90ರಷ್ಟು ಜನರನ್ನು ನಿರಾಶ್ರಿತರನ್ನಾಗಿ ಮಾಡಿದ ಬಳಿಕ, ಅಕ್ಟೋಬರ್ 10, 2025ರಂದು ಗಾಝಾ ಮೇಲಿನ ಆಕ್ರಮಣಕ್ಕೆ ಸಂಬಂಧಿಸಿದಂತೆ ಇಸ್ರೇಲ್ ಕದನ...

ಚುನಾವಣಾ ಆಯೋಗಕ್ಕೆ ಪೌರತ್ವ ನಿರ್ಧಾರ ಮಾಡುವ ಹಕ್ಕಿದೆಯೇ? SIR ತೀರ್ಪಿನ ಬಗ್ಗೆ ಸುಪ್ರೀಂ ಕೋರ್ಟ್ ಹೇಳಿದ್ದೇನು?

ಮೇ 27 ರಂದು 'ಅಸೋಸಿಯೇಷನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ ಮತ್ತು ಭಾರತೀಯ ಚುನಾವಣಾ ಆಯೋಗ (ECI)' ನಡುವಿನ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದೆ. ಚುನಾವಣಾ ಪಟ್ಟಿಗಳ 'ವಿಶೇಷ ತೀವ್ರ ಪರಿಷ್ಕರಣೆ'...

ಮಹಾರಾಷ್ಟ್ರ: 80 ಲಕ್ಷ ಮಹಿಳೆಯರು ‘ಲಡ್ಕಿ ಬಹಿನ್’ ಯೋಜನೆಗೆ ಅನರ್ಹ: ಆರ್ಥಿಕ ಬಿಕ್ಕಟ್ಟಿಗೆ ಸಾಕ್ಷಿ ಎಂದು ವಿಪಕ್ಷಗಳ ಆರೋಪ

ಮುಂಬೈ: ಮಹಾರಾಷ್ಟ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾಗಿದ್ದ 'ಮುಖ್ಯಮಂತ್ರಿ ಮಾಝಿ ಲಡ್ಕಿ ಬಹಿನ್' ಇ-ಕೆವೈಸಿ (e-KYC) ಪ್ರಕ್ರಿಯೆ ಪೂರ್ಣಗೊಳಿಸಲು ನೀಡಿದ್ದ ಗಡುವು ಮುಗಿದಿದ್ದು, ಸುಮಾರು 80 ಲಕ್ಷ ಮಹಿಳೆಯರು ಯೋಜನೆಯಿಂದ ಅನರ್ಹರಾಗಿದ್ದಾರೆ. ರಾಜ್ಯ ಸರ್ಕಾರವು...

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...