Homeಮುಖಪುಟಸಿಲ್ಕ್ಯಾರಾ ಸುರಂಗ ಕುಸಿತ ಪ್ರಕರಣ: ರಾಜ್ಯಸಭೆಯಲ್ಲಿ ಪ್ರಸ್ತಾಪಿಸಿದ ಸಿಪಿಐಎಂ

ಸಿಲ್ಕ್ಯಾರಾ ಸುರಂಗ ಕುಸಿತ ಪ್ರಕರಣ: ರಾಜ್ಯಸಭೆಯಲ್ಲಿ ಪ್ರಸ್ತಾಪಿಸಿದ ಸಿಪಿಐಎಂ

- Advertisement -
- Advertisement -

ಉತ್ತರಾಖಂಡದ ಸಿಲ್ಕ್ಯಾರಾ ಸುರಂಗ ಕುಸಿತ ಪ್ರಕರಣವನ್ನು ಸಿಪಿಐಎಂ ಸಂಸದ ಪಿ ವಿ ಶಿವದಾಸನ್ ಅವರು ಸೋಮವಾರ ರಾಜ್ಯಸಭೆಯಲ್ಲಿ ಪ್ರಸ್ತಾಪಿಸಿದ್ದು, ಕಂಪನಿಯು ಸುರಕ್ಷತಾ ಕ್ರಮಗಳನ್ನು ತೆಗೆದುಕೊಂಡಿಲ್ಲ, ಈ ಕುರಿತು ಹೆಚ್ಚಿನ ತನಿಖೆಯನ್ನು ನಡೆಸಬೇಕು ಎಂದು ಆಗ್ರಹಿಸಿದ್ದಾರೆ.

ಉತ್ತರಖಂಡದ ಉತ್ತರಕಾಶಿಯ ಸಿಲ್ಕ್ಯಾರಾ ಸುರಂಗ ಪ್ರವೇಶದ್ವಾರದಿಂದ 200 ಮೀಟರ್‌ ದೂರದಲ್ಲಿ ನ.12 ರಂದು ಕುಸಿದಿದ್ದು ಈ ವೇಳೆ 41 ಕಾರ್ಮಿಕರು ಸುರಂಗದ ಒಳಗೆ ಸಿಲುಕಿದ್ದರು. ಘಟನೆ ನಡೆದ 17 ದಿನಗಳ ಬಳಿಕ  ಸಿಲ್ಕ್ಯಾರಾ ಸುರಂಗದಿಂದ ಕಾರ್ಮಿಕರನ್ನು ರಕ್ಷಿಸಲಾಗಿತ್ತು.

ಈ ಕುರಿತು ರಾಜ್ಯಸಭೆಯ ಶೂನ್ಯ ವೇಳೆಯಲ್ಲಿ ವಿಷಯ ಪ್ರಸ್ತಾಪಿಸಿದ ಶಿವದಾಸನ್, ಘಟನೆಯು ಅತ್ಯಂತ ನೋವಿನಿಂದ ಕೂಡಿದೆ ಮತ್ತು ಸುರಂಗ ಮಾರ್ಗ ನಿರ್ಮಾಣ ಕಂಪನಿಯು ಎಲ್ಲಾ ಭದ್ರತಾ ಕ್ರಮಗಳು, ನಿಯಮಗಳು ಮತ್ತು ಮಾನದಂಡಗಳನ್ನು ಉಲ್ಲಂಘಿಸಿದೆ ಎಂದು ಆರೋಪಿಸಿದ್ದಾರೆ. ಈ ಕುರಿತು ಪಾರದರ್ಶಕ ಮತ್ತು ನ್ಯಾಯೋಚಿತ ತನಿಖೆ ಬಹಳ ಅವಶ್ಯಕ. ಸಿಲ್ಕ್ಯಾರಾ ಸುರಂಗ ಕುಸಿತ ಪ್ರಕರಣ ಇದು ಒಂದೇ ಘಟನೆಯಲ್ಲ. ಇಂತಹ ಹಲವು ಘಟನೆಗಳು ಈ ಪ್ರದೇಶದಲ್ಲಿ ನಡೆದಿದೆ ಎಂದು ಸಿಪಿಐಎಂ ಸಂಸದರು ರಾಜ್ಯಸಭೆಯಲ್ಲಿ ಹೇಳಿದ್ದಾರೆ.

ಬಿಜೆಪಿಯ ಅಜಯ್ ಪ್ರತಾಪ್ ಸಿಂಗ್ ಅವರು ಈ ಬಗ್ಗೆ ಪ್ರತಿಕ್ರಿಯಿಸಿದ್ದು, ಘಟನೆಯ ಬಗ್ಗೆ ಶಿವದಾಸನ್ ತಮ್ಮದೇ ಆದ ಅಭಿಪ್ರಾಯವನ್ನು ಹೊಂದಿರಬಹುದು. ಆದರೆ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಸರ್ಕಾರವು ಬಡವರ ಯೋಗಕ್ಷೇಮಕ್ಕೆ ಬದ್ಧವಾಗಿದೆ. ಕಾರ್ಮಿಕರನ್ನು ಯಶಸ್ವಿಯಾಗಿ ಸ್ಥಳಾಂತರಿಸಿದ ಪ್ರಧಾನಿ, ಉತ್ತರಾಖಂಡ್ ಮುಖ್ಯಮಂತ್ರಿ ಪುಷ್ಕರ್ ಧಾಮಿ, ಕೇಂದ್ರ ಸಚಿವ ವಿ ಕೆ ಸಿಂಗ್ ಮತ್ತು ರಕ್ಷಣಾ ಕಾರ್ಯಾಚರಣೆಯಲ್ಲಿ ತೊಡಗಿರುವ ಎಲ್ಲರಿಗೂ ಕೃತಜ್ಞತೆಗಳು ಎಂದು ಹೇಳಿದ್ದಾರೆ.

NHIDCL ಹೈದರಾಬಾದ್ ಮೂಲದ ನವಯುಗ ಇಂಜಿನಿಯರಿಂಗ್ ಕಂಪನಿ ಲಿಮಿಟೆಡ್ ಮೂಲಕ ಸುರಂಗವನ್ನು ನಿರ್ಮಿಸುತ್ತಿದೆ. ಈ ವೇಳೆ AAP ಸಂಸದ ಸಂತ ಬಲ್ಬೀರ್ ಸಿಂಗ್ ವಾಯು ಮಾಲಿನ್ಯದ ವಿಷಯವನ್ನು ಪ್ರಸ್ತಾಪಿಸಿದ್ದು, ವಾಯು ಮಾಲಿನ್ಯದಿಂದ ಪ್ರತಿ ವರ್ಷ ಸುಮಾರು 21 ಲಕ್ಷ ಸಾವುಗಳು ಸಂಭವಿಸುತ್ತಿವೆ ಎಂದು ಹೇಳಿದ್ದಾರೆ.

ಒಂದು ವರ್ಷದಲ್ಲಿ ದೆಹಲಿಯಲ್ಲಿ ಒಂದು ದಿನ, ಮುಂಬೈನಲ್ಲಿ 5 ದಿನ ಮತ್ತು ಚೆನ್ನೈನಲ್ಲಿ 15 ದಿನ ಮಾತ್ರ ಗಾಳಿಯು ಶುದ್ಧವಾಗಿತ್ತು. ವಾಯುಮಾಲಿನ್ಯದ ಬಗ್ಗೆ ಮಾತನಾಡುವಾಗಲೆಲ್ಲಾ ಪಂಜಾಬ್‌ನ ರೈತರು ಹುಲ್ಲು ಸುಡುವುದು ಇದಕ್ಕೆ ಕಾರಣ ಎಂದು ಹೇಳಲಾಗುತ್ತದೆ. ಪಂಜಾಬ್‌ನ ಯಾವುದೇ ರೈತರು ಹುಲ್ಲು ಸುಡಲು ಬಯಸುವುದಿಲ್ಲ ಮತ್ತು ಸರಕಾರ ಅವರಿಗೆ ಆರ್ಥಿಕ ನೆರವನ್ನು ನೀಡಬೇಕು ಎಂದು ಸಂತ ಬಲ್ಬೀರ್ ಸಿಂಗ್ ಅವರು ಹೇಳಿದ್ದಾರೆ.

ಇದನ್ನು ಓದಿ: 3 ರಾಜ್ಯಗಳಲ್ಲಿ ಒಂದೇ ಒಂದು ಖಾತೆ ತೆರೆಯದ ಎಎಪಿ: ನೋಟಾಗಿಂತಲೂ ಅಲ್ಪ ಮತ

 

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜಾನಪದ ಕಲಾವಿದ ಡಿಂಗ್ರಿ ನರಸಪ್ಪ, ಬೆಂಗಳೂರಿನ ಚಂದ್ರಮ್ಮ ಸೇರಿದಂತೆ ಐದು ಜನರಿಗೆ ಬಾಬು ಜಗಜೀವನ್‌ ರಾಮ್‌ ಪ್ರಶಸ್ತಿ

ಹಿರಿಯ ಜಾನಪದ ಕಲಾವಿದ ಡಿಂಗ್ರಿ ನರಸಪ್ಪ, ಬೆಂಗಳೂರಿನ ಚಂದ್ರಮ್ಮ ಸೇರಿದಂತೆ ಐದು ಜನ ಹಿರಿಯ ಸಾಧಕರು 2026ನೇ ಸಾಲಿನ ಬಾಬು ಜಗಜೀವನ್‌ ರಾಮ್‌ ಪ್ರಶಸ್ತಿಗೆ ಭಾಜನರಾಗಿದ್ದಾರೆ. ರಾಯಚೂರು ಜಿಲ್ಲೆಯ ಹಿರಿಯ ದಲಿತ ಹೋರಾಟಗಾರ...

ಗಾಜಾ; ಗೊಂಬೆಯೊಂದಿಗೆ ‘ಅಂತ್ಯಕ್ರಿಯೆ’ ಆಟ ಆಡುವ ಎಳೆಯ ಮಕ್ಕಳ ವಿಡಿಯೋ ವೈರಲ್; ಸುತ್ತಲಿನ ಘಟನೆಯನ್ನು ಪುನರಾವರ್ತಿಸುವ ಮಕ್ಕಳು

ಅಕ್ಟೋಬರ್ 2023 ರಲ್ಲಿ ಇಸ್ರೇಲಿ ಮಿಲಿಟರಿ ದಾಳಿಯನ್ನು ಪ್ರಾರಂಭಿಸಿದ ನಂತರ ಗಾಜಾದಿಂದ ದುಃಖಕರ ದೃಶ್ಯಗಳು ಹೊರಹೊಮ್ಮುತ್ತಿವೆ. ಇತ್ತೀಚಿನ ಒಂದು ಘಟನೆಯಲ್ಲಿ, ಚಿಕ್ಕ ಮಕ್ಕಳು ಅಂತ್ಯಕ್ರಿಯೆಗಾಗಿ ಗೊಂಬೆಯನ್ನು ಹೊತ್ತುಕೊಂಡು ಹೋಗುವುದನ್ನು ಕಾಣಬಹುದು - ಇದು ಅವರು...

ದೆಹಲಿ| ಆಳವಾದ ಚರಂಡಿಗೆ ಬಿದ್ದು ನೈರ್ಮಲ್ಯ ಕಾರ್ಮಿಕ ಸಾವು; ನ್ಯಾಯಕ್ಕೆ ಆಗ್ರಹಿಸಿದ ಮೃತನ ಕುಟುಂಬ

ಮಾರ್ಚ್ 30 ರಂದು ಪೂರ್ವ ದೆಹಲಿಯ ದಿಲ್ಶಾದ್ ಗಾರ್ಡನ್ ಪ್ರದೇಶದಲ್ಲಿ ಸುರಕ್ಷತಾ ಸಾಧನಗಳಿಲ್ಲದೆ ಆಳವಾದ ಚರಂಡಿ ಸ್ವಚ್ಛಗೊಳಿಸುವ ಸಮಯದಲ್ಲಿ ಯುವ ನೈರ್ಮಲ್ಯ ಕಾರ್ಮಿಕ ರಾಹುಲ್ ಎಂಬುವವರು ಸಾವನ್ನಪ್ಪಿದ್ದಾರೆ. ಮಧ್ಯಾಹ್ನ 2:00 ರ ಸುಮಾರಿಗೆ...

ನಿವೃತ್ತ ನ್ಯಾಯಮೂರ್ತಿ ಸಂತೋಷ್‌ ಹೆಗ್ಡೆ ಆಸ್ಪತ್ರೆಗೆ ದಾಖಲು; ಕಾರ್ಯಕ್ರಮದಲ್ಲಿ ಏಕಾಏಕಿ ಕುಸಿದು ಬಿದ್ದು ಅಸ್ವಸ್ಥ

ಬೆಂಗಳೂರು: ಕರ್ನಾಟಕದ ನಿವೃತ್ತ ಲೋಕಾಯುಕ್ತ ಎನ್‌.ಸಂತೋಷ್‌ ಹೆಗ್ಡೆ ಅವರ ಆರೋಗ್ಯದಲ್ಲಿ ಏರುಪೇರು ಉಂಟಾಗಿದ್ದು, ಭಾಷಣದ ವೇಳೆ ಕುಸಿದು ಬಿದ್ದು ಅಸ್ವಸ್ಥರಾಗಿದ್ದ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಏಪ್ರಿಲ್ 4ರ, ಶುಕ್ರವಾರ ಬೆಂಗಳೂರಿನ ಕೊಂಡಜಿ ಬಸಪ್ಪ ಸಭಾಂಗಣದಲ್ಲಿ...

ಎಸ್‌ಎಸ್‌ಎಲ್‌ಸಿಯಲ್ಲಿ ತೃತೀಯ ಭಾಷೆಗೆ ಗ್ರೇಡ್: ನಿರ್ಧಾರ ಪರಿಶೀಲಿಸುವಂತೆ ರಾಜ್ಯ ಸರ್ಕಾರಕ್ಕೆ ಸೂಚಿಸಿದ ರಾಜ್ಯಪಾಲ ಗೆಹ್ಲೋಟ್ 

ಬೆಂಗಳೂರು: 10ನೇ ತರಗತಿ ಪರೀಕ್ಷೆಯಲ್ಲಿ ತೃತೀಯ ಭಾಷೆಯ ವಿಷಯಕ್ಕೆ ಅಂಕಗಳನ್ನು ಬದಲಿಸುವ ನಿರ್ಧಾರವನ್ನು ಮರುಪರಿಶೀಲಿಸುವಂತೆ ಕರ್ನಾಟಕ ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್ ರಾಜ್ಯ ಸರ್ಕಾರವನ್ನು ಕೇಳಿದ್ದಾರೆ. ಸರ್ಕಾರವು ಈ ನಿರ್ಧಾರವನ್ನು "ಸಮಗ್ರವಾಗಿ ಪರಿಶೀಲಿಸಬೇಕು" ಎಂದು ಲೋಕಭವನವು...

ತಿರುಚ್ಚಿ ಪೂರ್ವದ ಪೆರಂಬೂರಿನಲ್ಲಿ ಟಿವಿಕೆ ಸಂಸ್ಥಾಪಕ ವಿಜಯ್ ಸಲ್ಲಿಸಿದ ಅಫಿಡವಿಟ್‌ಗಳಲ್ಲಿ ಹಲವು ವ್ಯತ್ಯಾಸಗಳಿರುವುದಾಗಿ ವರದಿ  

ಚೆನ್ನೈ: ನಟ ಮತ್ತು ಟಿವಿಕೆ ಸಂಸ್ಥಾಪಕ ವಿಜಯ್ ಸಲ್ಲಿಸಿದ ಎರಡು ಪ್ರತ್ಯೇಕ ಚುನಾವಣಾ ಅಫಿಡವಿಟ್‌ಗಳಲ್ಲಿ ವ್ಯತ್ಯಾಸಗಳು ಕಾಣಿಸಿಕೊಂಡಿದ್ದು, ವಿಧಾನಸಭಾ ಚುನಾವಣೆಗೆ ಮುನ್ನ ಕಾನೂನು ಮತ್ತು ರಾಜಕೀಯ ಪರಿಶೀಲನೆಗೆ ಅವಕಾಶ ನೀಡುವ ಸಾಧ್ಯತೆಯಿದೆ. ಪೆರಂಬೂರು ಮತ್ತು...

ಉತ್ತಮ್ ನಗರದಲ್ಲಿ ಶಾಂತಿ ಕಾಪಾಡುವಲ್ಲಿ ದೆಹಲಿ ಪೊಲೀಸರ ಪ್ರಯತ್ನಗಳನ್ನು ಶ್ಲಾಘಿಸಿದ ಎಪಿಸಿಆರ್

ಈದ್ ಅಲ್-ಫಿತರ್, ರಾಮ ನವಮಿ ಮತ್ತು ಹನುಮಾನ್ ಜಯಂತಿ ಸೇರಿದಂತೆ ಧಾರ್ಮಿಕ ಹಬ್ಬಗಳ ಆಚರಣೆಯ ಸಂದರ್ಭದಲ್ಲಿ ರಾಷ್ಟ್ರ ರಾಜಧಾನಿಯ ಉತ್ತಮ್ ನಗರ ಪ್ರದೇಶದಲ್ಲಿ ಶಾಂತಿ ಮತ್ತು ಭದ್ರತೆಯನ್ನು ಕಾಪಾಡಿದ್ದಕ್ಕಾಗಿ ನಾಗರಿಕ ಹಕ್ಕುಗಳ ರಕ್ಷಣಾ...

ದಲಿತ ಸಮುದಾಯಕ್ಕೆ ಕ್ಷಮೆಯಾಚಿಸಿದ ನೇಪಾಳದ ಹೊಸ ಸರ್ಕಾರ

ಪ್ರಧಾನಿ ಬಾಲೇಂದ್ರ ಶಾ ಅವರ ನೇಪಾಳದ ಹೊಸ ಸರ್ಕಾರದ 100 ಅಂಶಗಳ ಸುಧಾರಣಾ ಕಾರ್ಯಸೂಚಿಯಡಿಯಲ್ಲಿ, ಮುಂದಿನ 15 ದಿನಗಳ ಒಳಗೆ ದಲಿತರು ಮತ್ತು ಐತಿಹಾಸಿಕವಾಗಿ ಹೊರಗಿಡಲ್ಪಟ್ಟ ಇತರೆ ಸಮುದಾಯಗಳಿಗೆ 'ಔಪಚಾರಿಕ ಕ್ಷಮೆಯಾಚನೆ' ಕೇಳುವುದಾಗಿ...

‘ಯಾರು ಹೆದರುತ್ತಾನೋ ಅವನು ಸತ್ತಂತೆ’: ರಾಘವ್ ಛಡ್ಡಾಗೆ ತೀವ್ರವಾಗಿ ಪ್ರತಿಕ್ರಿಯೆ ನೀಡಿದ ಎಎಪಿ ನಾಯಕ ಸೌರಭ್ ಭಾರದ್ವಾಜ್ 

ಆಮ್ ಆದ್ಮಿ ಪಕ್ಷದ (ಎಎಪಿ) ನಾಯಕ ಮತ್ತು ದೆಹಲಿ ಘಟಕದ ಮುಖ್ಯಸ್ಥ ಸೌರಭ್ ಭಾರದ್ವಾಜ್ ಅವರು ವೀಡಿಯೊ ಸಂದೇಶದಲ್ಲಿ ಆಪ್ ಸಂಸದ ರಾಘವ್ ಛಡ್ಡಾ ಅವರು ಸಂಸತ್ತಿನಲ್ಲಿ "ಸಾಫ್ಟ್ ಪಿಆರ್" ನಲ್ಲಿ ತೊಡಗಿದ್ದಾರೆ...

ಚಂಡೀಗಢ ಬಿಜೆಪಿ ಕಚೇರಿ ಸ್ಫೋಟ: ಪಂಜಾಬ್ ಕೌಂಟರ್ ಇಂಟೆಲಿಜೆನ್ಸ್ ಪಡೆಯಿಂದ ಇಬ್ಬರು ಶಂಕಿತರ ಮನೆಗಳ ಮೇಲೆ ದಾಳಿ

ಚಂಡೀಗಢದಲ್ಲಿರುವ ಪಂಜಾಬ್ ಬಿಜೆಪಿ ಕಚೇರಿಯ ಹೊರಗೆ ಸ್ಫೋಟ ನಡೆಸಿದ ಆರೋಪದ ಮೇಲೆ ಇಬ್ಬರು ಶಂಕಿತರ ಮನೆಗಳ ಮೇಲೆ  ಪಂಜಾಬ್ ಪೊಲೀಸರ ಗುಪ್ತಚರ ನಿಗ್ರಹ ದಳವು ಇಂದು ಮುಂಜಾನೆ ದಾಳಿ ನಡೆಸಿದೆ.  ರೋಪರ್ ಜಿಲ್ಲೆಯ ಮೊರಿಂಡಾ ಪ್ರದೇಶದ...