Homeಮುಖಪುಟಸಿಲ್ಕ್ಯಾರಾ ಸುರಂಗ ಕುಸಿತ ಪ್ರಕರಣ: ರಾಜ್ಯಸಭೆಯಲ್ಲಿ ಪ್ರಸ್ತಾಪಿಸಿದ ಸಿಪಿಐಎಂ

ಸಿಲ್ಕ್ಯಾರಾ ಸುರಂಗ ಕುಸಿತ ಪ್ರಕರಣ: ರಾಜ್ಯಸಭೆಯಲ್ಲಿ ಪ್ರಸ್ತಾಪಿಸಿದ ಸಿಪಿಐಎಂ

- Advertisement -
- Advertisement -

ಉತ್ತರಾಖಂಡದ ಸಿಲ್ಕ್ಯಾರಾ ಸುರಂಗ ಕುಸಿತ ಪ್ರಕರಣವನ್ನು ಸಿಪಿಐಎಂ ಸಂಸದ ಪಿ ವಿ ಶಿವದಾಸನ್ ಅವರು ಸೋಮವಾರ ರಾಜ್ಯಸಭೆಯಲ್ಲಿ ಪ್ರಸ್ತಾಪಿಸಿದ್ದು, ಕಂಪನಿಯು ಸುರಕ್ಷತಾ ಕ್ರಮಗಳನ್ನು ತೆಗೆದುಕೊಂಡಿಲ್ಲ, ಈ ಕುರಿತು ಹೆಚ್ಚಿನ ತನಿಖೆಯನ್ನು ನಡೆಸಬೇಕು ಎಂದು ಆಗ್ರಹಿಸಿದ್ದಾರೆ.

ಉತ್ತರಖಂಡದ ಉತ್ತರಕಾಶಿಯ ಸಿಲ್ಕ್ಯಾರಾ ಸುರಂಗ ಪ್ರವೇಶದ್ವಾರದಿಂದ 200 ಮೀಟರ್‌ ದೂರದಲ್ಲಿ ನ.12 ರಂದು ಕುಸಿದಿದ್ದು ಈ ವೇಳೆ 41 ಕಾರ್ಮಿಕರು ಸುರಂಗದ ಒಳಗೆ ಸಿಲುಕಿದ್ದರು. ಘಟನೆ ನಡೆದ 17 ದಿನಗಳ ಬಳಿಕ  ಸಿಲ್ಕ್ಯಾರಾ ಸುರಂಗದಿಂದ ಕಾರ್ಮಿಕರನ್ನು ರಕ್ಷಿಸಲಾಗಿತ್ತು.

ಈ ಕುರಿತು ರಾಜ್ಯಸಭೆಯ ಶೂನ್ಯ ವೇಳೆಯಲ್ಲಿ ವಿಷಯ ಪ್ರಸ್ತಾಪಿಸಿದ ಶಿವದಾಸನ್, ಘಟನೆಯು ಅತ್ಯಂತ ನೋವಿನಿಂದ ಕೂಡಿದೆ ಮತ್ತು ಸುರಂಗ ಮಾರ್ಗ ನಿರ್ಮಾಣ ಕಂಪನಿಯು ಎಲ್ಲಾ ಭದ್ರತಾ ಕ್ರಮಗಳು, ನಿಯಮಗಳು ಮತ್ತು ಮಾನದಂಡಗಳನ್ನು ಉಲ್ಲಂಘಿಸಿದೆ ಎಂದು ಆರೋಪಿಸಿದ್ದಾರೆ. ಈ ಕುರಿತು ಪಾರದರ್ಶಕ ಮತ್ತು ನ್ಯಾಯೋಚಿತ ತನಿಖೆ ಬಹಳ ಅವಶ್ಯಕ. ಸಿಲ್ಕ್ಯಾರಾ ಸುರಂಗ ಕುಸಿತ ಪ್ರಕರಣ ಇದು ಒಂದೇ ಘಟನೆಯಲ್ಲ. ಇಂತಹ ಹಲವು ಘಟನೆಗಳು ಈ ಪ್ರದೇಶದಲ್ಲಿ ನಡೆದಿದೆ ಎಂದು ಸಿಪಿಐಎಂ ಸಂಸದರು ರಾಜ್ಯಸಭೆಯಲ್ಲಿ ಹೇಳಿದ್ದಾರೆ.

ಬಿಜೆಪಿಯ ಅಜಯ್ ಪ್ರತಾಪ್ ಸಿಂಗ್ ಅವರು ಈ ಬಗ್ಗೆ ಪ್ರತಿಕ್ರಿಯಿಸಿದ್ದು, ಘಟನೆಯ ಬಗ್ಗೆ ಶಿವದಾಸನ್ ತಮ್ಮದೇ ಆದ ಅಭಿಪ್ರಾಯವನ್ನು ಹೊಂದಿರಬಹುದು. ಆದರೆ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಸರ್ಕಾರವು ಬಡವರ ಯೋಗಕ್ಷೇಮಕ್ಕೆ ಬದ್ಧವಾಗಿದೆ. ಕಾರ್ಮಿಕರನ್ನು ಯಶಸ್ವಿಯಾಗಿ ಸ್ಥಳಾಂತರಿಸಿದ ಪ್ರಧಾನಿ, ಉತ್ತರಾಖಂಡ್ ಮುಖ್ಯಮಂತ್ರಿ ಪುಷ್ಕರ್ ಧಾಮಿ, ಕೇಂದ್ರ ಸಚಿವ ವಿ ಕೆ ಸಿಂಗ್ ಮತ್ತು ರಕ್ಷಣಾ ಕಾರ್ಯಾಚರಣೆಯಲ್ಲಿ ತೊಡಗಿರುವ ಎಲ್ಲರಿಗೂ ಕೃತಜ್ಞತೆಗಳು ಎಂದು ಹೇಳಿದ್ದಾರೆ.

NHIDCL ಹೈದರಾಬಾದ್ ಮೂಲದ ನವಯುಗ ಇಂಜಿನಿಯರಿಂಗ್ ಕಂಪನಿ ಲಿಮಿಟೆಡ್ ಮೂಲಕ ಸುರಂಗವನ್ನು ನಿರ್ಮಿಸುತ್ತಿದೆ. ಈ ವೇಳೆ AAP ಸಂಸದ ಸಂತ ಬಲ್ಬೀರ್ ಸಿಂಗ್ ವಾಯು ಮಾಲಿನ್ಯದ ವಿಷಯವನ್ನು ಪ್ರಸ್ತಾಪಿಸಿದ್ದು, ವಾಯು ಮಾಲಿನ್ಯದಿಂದ ಪ್ರತಿ ವರ್ಷ ಸುಮಾರು 21 ಲಕ್ಷ ಸಾವುಗಳು ಸಂಭವಿಸುತ್ತಿವೆ ಎಂದು ಹೇಳಿದ್ದಾರೆ.

ಒಂದು ವರ್ಷದಲ್ಲಿ ದೆಹಲಿಯಲ್ಲಿ ಒಂದು ದಿನ, ಮುಂಬೈನಲ್ಲಿ 5 ದಿನ ಮತ್ತು ಚೆನ್ನೈನಲ್ಲಿ 15 ದಿನ ಮಾತ್ರ ಗಾಳಿಯು ಶುದ್ಧವಾಗಿತ್ತು. ವಾಯುಮಾಲಿನ್ಯದ ಬಗ್ಗೆ ಮಾತನಾಡುವಾಗಲೆಲ್ಲಾ ಪಂಜಾಬ್‌ನ ರೈತರು ಹುಲ್ಲು ಸುಡುವುದು ಇದಕ್ಕೆ ಕಾರಣ ಎಂದು ಹೇಳಲಾಗುತ್ತದೆ. ಪಂಜಾಬ್‌ನ ಯಾವುದೇ ರೈತರು ಹುಲ್ಲು ಸುಡಲು ಬಯಸುವುದಿಲ್ಲ ಮತ್ತು ಸರಕಾರ ಅವರಿಗೆ ಆರ್ಥಿಕ ನೆರವನ್ನು ನೀಡಬೇಕು ಎಂದು ಸಂತ ಬಲ್ಬೀರ್ ಸಿಂಗ್ ಅವರು ಹೇಳಿದ್ದಾರೆ.

ಇದನ್ನು ಓದಿ: 3 ರಾಜ್ಯಗಳಲ್ಲಿ ಒಂದೇ ಒಂದು ಖಾತೆ ತೆರೆಯದ ಎಎಪಿ: ನೋಟಾಗಿಂತಲೂ ಅಲ್ಪ ಮತ

 

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದೆಹಲಿ: ‘ಮಾಳವೀಯ ನಗರ’ ಅಗ್ನಿ ದುರಂತಕ್ಕೆ 21 ಜನರು ಬಲಿ: ವ್ಯವಸ್ಥೆಯ ವೈಫಲ್ಯದ ವಿರುದ್ಧ ಆಕ್ರೋಶ ವ್ಯಕ್ತಪಡಿಸುತ್ತಿರುವ ನಾಗರೀಕರು 

ದೆಹಲಿಯ ಅತ್ಯಂತ ಜನನಿಬಿಡ ಮತ್ತು ವಾಣಿಜ್ಯ ಪ್ರದೇಶವಾದ ಮಾಳವೀಯ ನಗರದಲ್ಲಿ 2026 ಜೂನ್ 3, ಬುಧವಾರ ನಸುಕಿನ ಜಾವ ಸಂಭವಿಸಿದ ಭೀಕರ ಅಗ್ನಿ ದುರಂತವು ಇಡೀ ದೇಶವನ್ನು ಬೆಚ್ಚಿಬೀಳಿಸಿದೆ. 'ಫ್ಲೋರಿಶ್ ಸ್ಟೇ ಬಿ...

“ವಿಷ ಕಾರದೆ ಮಾತನಾಡಿ”: ಕಲ್ಲಡ್ಕ ಪ್ರಭಾಕರ ಭಟ್‌ಗೆ ಹೈಕೋರ್ಟ್ ತಾಕೀತು

ಹೆಚ್ಚು ಮಕ್ಕಳನ್ನು ಹೆರುವ ಮುಸ್ಲಿಂ ಮಹಿಳೆಯರನ್ನು ಲೇವಡಿ ಮಾಡುವ ಮೂಲಕ ಕೋಮು ದ್ವೇಷ ಹರಡಿದ್ದಾರೆ ಎಂಬ ಆರೋಪ ಎದುರಿಸುತ್ತಿರುವ ಹಿಂದುತ್ವ ಮುಖಂಡ ಕಲ್ಲಡ್ಕ ಪ್ರಭಾಕರ್ ಭಟ್ ಕಲ್ಲಡ್ಕ ಅವರಿಗೆ ತಮ್ಮ ಮುಂದಿನ ಭಾಷಣಗಳಲ್ಲಿ...

ಪತ್ರಕರ್ತ- ಚಿತ್ರ ನಿರ್ಮಾಪಕ ಸೇರಿದಂತೆ ಹಲವು ಕ್ಷೇತ್ರಗಳ ಪ್ರಮುಖರನ್ನು ವಕ್ತಾರರನ್ನಾಗಿ ನೇಮಿಸಿದ ಸಿಜೆಪಿ

ಆನ್‌ಲೈನ್ ಸೆನ್ಸೇಷನ್ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ)ಯು ಶಿಕ್ಷಣ ವ್ಯವಸ್ಥೆಯಲ್ಲಿನ ವೈಫಲ್ಯಗಳ ವಿರುದ್ಧ ಪ್ರಸ್ತಾಪಿಸಿದ ಪ್ರತಿಭಟನೆಗೆ ಮುಂಚಿತವಾಗಿ ತನ್ನ ವ್ಯಾಪ್ತಿಯನ್ನು ವಿಸ್ತರಿಸುವ ಸಲುವಾಗಿ ಮೂವರು ವಕ್ತಾರರ ಹೆಸರನ್ನು ಘೋಷಿಸಿದೆ. ಎಕ್ಸ್‌ನಲ್ಲಿನ ಪೋಸ್ಟ್‌ ಮಾಡಿರುವ ಅಭಿಜೀತ್...

CBSE ಪರೀಕ್ಷೆಯಲ್ಲಿ OSM ವಿವಾದ | ಸಂಸದೀಯ ಸಮಿತಿಯ ಮುಂದೆ ಹಾಜರಾದ ವಿದ್ಯಾರ್ಥಿ ಸಾರ್ಥಕ್ ಸಿದ್ಧಾಂತ್

ಸೆಂಟ್ರಲ್ ಬೋರ್ಡ್ ಆಫ್ ಸೆಕೆಂಡರಿ ಎಜುಕೇಶನ್ (ಸಿಬಿಎಸ್‌ಸಿ) ಆನ್-ಸ್ಕ್ರೀನ್ ಮಾರ್ಕಿಂಗ್ (ಒಎಸ್‌ಎಂ) ಮೌಲ್ಯಮಾಪನ ವ್ಯವಸ್ಥೆಯಲ್ಲಿನ ಗಂಭೀರ ಲೋಪಗಳ ಕುರಿತು ವಿವಾದ ಭುಗಿಲೆದ್ದಿರುವ ನಡುವೆ, 17 ವರ್ಷದ ವಿದ್ಯಾರ್ಥಿ ಸಾರ್ಥಕ್ ಸಿದ್ಧಾಂತ್ ನವದೆಹಲಿಯ ಸಂಸತ್ ಭವನದಲ್ಲಿ...

ಬಿಜೆಪಿ ತೊರೆದು ಪ್ರಾದೇಶಿಕ ಪಕ್ಷದತ್ತ ಅಣ್ಣಾಮಲೈ : ದ್ರಾವಿಡ ಮಣ್ಣಿನಲ್ಲಿ ವಿಫಲವಾದ ಹಿಂದುತ್ವ ರಾಜಕೀಯ

ಮಾಜಿ ಐಪಿಎಸ್‌ ಅಧಿಕಾರಿ ಹಾಗೂ ಬಿಜೆಪಿ ತಮಿಳುನಾಡು ರಾಜ್ಯ ಘಟಕದ ಮಾಜಿ ಅಧ್ಯಕ್ಷ ಕೆ. ಅಣ್ಣಾಮಲೈ ಬಿಜೆಪಿ ತೊರೆದಿದ್ದು, ಹೊಸ ಪ್ರಾದೇಶಿಕ ಪಕ್ಷ ಕಟ್ಟಲು ಮುಂದಾಗಿದ್ದಾರೆ ಎಂದು ವರದಿಯಾಗಿದೆ. ಮಂಗಳವಾರ...

45 ಲೀಟರ್ ಟ್ಯಾಂಕಿಗೆ 52 ಲೀಟರ್ ಬಿಲ್ ಕೊಟ್ಟ ಚತುರ ಕಳ್ಳರು: ಕಾನ್ಪುರದಲ್ಲಿ ಪೆಟ್ರೋಲ್ ಬಂಕ್ ವಂಚನೆ ಪತ್ತೆ

ಉತ್ತರ ಪ್ರದೇಶದ ಕಾನ್ಪುರದಲ್ಲಿ ಹೊಸ ಕಾರು ಖರೀದಿಸಿದ ಮಾಲೀಕರೊಬ್ಬರು ಸ್ಥಳೀಯ ಪೆಟ್ರೋಲ್ ಬಂಕ್‌ಗೆ ಹೋದಾಗ ಅವರಿಗೆ ಒಂದು ಶಾಕಿಂಗ್ ಅನುಭವವಾಗಿದೆ. ಅವರ ಕಾರಿನ ಗರಿಷ್ಠ ಇಂಧನ ಟ್ಯಾಂಕ್ ಸಾಮರ್ಥ್ಯ ಕೇವಲ 45 ಲೀಟರ್...

ಆರು ಮಕ್ಕಳಿದ್ದರೆ ನೀವು ಮತದಾನದ ಹಕ್ಕನ್ನು ಕಳೆದುಕೊಳ್ಳಬಹುದು: ಮತದಾರರ ಪಟ್ಟಿ ‘ಕ್ಲೀನ್’ ಮಾಡಲು ECI ಹೊಸ ಪ್ಲಾನ್!

ಭಾರತದಲ್ಲಿ 'ಆರು ಅಥವಾ ಅದಕ್ಕಿಂತ ಹೆಚ್ಚು ಮಕ್ಕಳನ್ನು ಹೊಂದಿದ್ದಾರೆ' ಎಂಬ ಕಾರಣಕ್ಕೆ ಯಾರಾದರೂ ಮತದಾನದ ಹಕ್ಕನ್ನು ಕಳೆದುಕೊಳ್ಳಲು ಸಾಧ್ಯವೇ? ಮೇಲ್ನೋಟಕ್ಕೆ ಹೌದು ಎನ್ನುವಂತಿದೆ ಉತ್ತರ ಪ್ರದೇಶದ ವಾರಾಣಸಿಯ ಕ್ಯಾಂಟೋನ್ಮೆಂಟ್ ಕ್ಷೇತ್ರದ ಮತದಾರ ಸೋನು...

ಕದನ ವಿರಾಮವೆಂಬ ಕಳ್ಳಾಟ : ಗಾಝಾದಿಂದ ಸಿರಿಯಾವರೆಗೆ ಮುಂದುವರಿದ ಇಸ್ರೇಲ್ ನರಮೇಧ

ಬರೋಬ್ಬರಿ ಎಪ್ಪತ್ತು ಸಾವಿರದಷ್ಟು (ವರದಿಗಳ ಪ್ರಕಾರ 67, 900) ಜನರನ್ನು ಹತ್ಯೆಗೈದು, ಶೇಕಡ 90ರಷ್ಟು ಜನರನ್ನು ನಿರಾಶ್ರಿತರನ್ನಾಗಿ ಮಾಡಿದ ಬಳಿಕ, ಅಕ್ಟೋಬರ್ 10, 2025ರಂದು ಗಾಝಾ ಮೇಲಿನ ಆಕ್ರಮಣಕ್ಕೆ ಸಂಬಂಧಿಸಿದಂತೆ ಇಸ್ರೇಲ್ ಕದನ...

ಚುನಾವಣಾ ಆಯೋಗಕ್ಕೆ ಪೌರತ್ವ ನಿರ್ಧಾರ ಮಾಡುವ ಹಕ್ಕಿದೆಯೇ? SIR ತೀರ್ಪಿನ ಬಗ್ಗೆ ಸುಪ್ರೀಂ ಕೋರ್ಟ್ ಹೇಳಿದ್ದೇನು?

ಮೇ 27 ರಂದು 'ಅಸೋಸಿಯೇಷನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ ಮತ್ತು ಭಾರತೀಯ ಚುನಾವಣಾ ಆಯೋಗ (ECI)' ನಡುವಿನ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದೆ. ಚುನಾವಣಾ ಪಟ್ಟಿಗಳ 'ವಿಶೇಷ ತೀವ್ರ ಪರಿಷ್ಕರಣೆ'...

ಮಹಾರಾಷ್ಟ್ರ: 80 ಲಕ್ಷ ಮಹಿಳೆಯರು ‘ಲಡ್ಕಿ ಬಹಿನ್’ ಯೋಜನೆಗೆ ಅನರ್ಹ: ಆರ್ಥಿಕ ಬಿಕ್ಕಟ್ಟಿಗೆ ಸಾಕ್ಷಿ ಎಂದು ವಿಪಕ್ಷಗಳ ಆರೋಪ

ಮುಂಬೈ: ಮಹಾರಾಷ್ಟ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾಗಿದ್ದ 'ಮುಖ್ಯಮಂತ್ರಿ ಮಾಝಿ ಲಡ್ಕಿ ಬಹಿನ್' ಇ-ಕೆವೈಸಿ (e-KYC) ಪ್ರಕ್ರಿಯೆ ಪೂರ್ಣಗೊಳಿಸಲು ನೀಡಿದ್ದ ಗಡುವು ಮುಗಿದಿದ್ದು, ಸುಮಾರು 80 ಲಕ್ಷ ಮಹಿಳೆಯರು ಯೋಜನೆಯಿಂದ ಅನರ್ಹರಾಗಿದ್ದಾರೆ. ರಾಜ್ಯ ಸರ್ಕಾರವು...