Homeಕರ್ನಾಟಕ‘ಮತಾಂತರ ನಿಷೇಧ’ ಮಸೂದೆ ವಾಪಸಾತಿಗೆ ಸಿಪಿಐ(ಎಂ) ರಾಜ್ಯ ಸಮ್ಮೇಳನ ಒತ್ತಾಯ

‘ಮತಾಂತರ ನಿಷೇಧ’ ಮಸೂದೆ ವಾಪಸಾತಿಗೆ ಸಿಪಿಐ(ಎಂ) ರಾಜ್ಯ ಸಮ್ಮೇಳನ ಒತ್ತಾಯ

ಜನವರಿ 17 ರಿಂದ ರಾಜ್ಯದಾದ್ಯಂತ ಜಿಲ್ಲಾ ಹಾಗೂ ತಾಲ್ಲೂಕು ಕೇಂದ್ರಗಳಲ್ಲಿ ಪ್ರತಿಭಟನೆ ನಡೆಸುವಂತೆ ಪಕ್ಷವು ಕರೆ ನೀಡಿದೆ

- Advertisement -
- Advertisement -

ಬಿಜೆಪಿ ನೇತೃತ್ವದ ರಾಜ್ಯ ಸರಕಾರವು ಅಂಗೀಕರಿಸಿರುವ ‘ಕರ್ನಾಟಕ ಧಾರ್ಮಿಕ ಸ್ವಾತಂತ್ರ್ಯ ಹಕ್ಕು ಸಂರಕ್ಷಣಾ ಕಾಯ್ದೆ, 2021’ ಮಸೂದೆಯು ಭಾರತೀಯರಿಗೆ ಸಂವಿಧಾನವು ಕೊಡ ಮಾಡುವ ಧಾರ್ಮಿಕ ಸ್ವಾತಂತ್ರ್ಯದ ಮೂಲಭೂತ ಹಕ್ಕನ್ನು ಕಸಿಯುವ ಸಂವಿಧಾನ ವಿರೋಧಿ ಕ್ರಮವಾಗಿದೆ ಎಂದು ಭಾರತ ಕಮ್ಯೂನಿಸ್ಟ್ ಪಕ್ಷ(ಮಾರ್ಕ್ಸ್‌ವಾದಿ) ಪ್ರತಿಪಾದಿಸಿದೆ. ಕೊಪ್ಪಳ ಜಿಲ್ಲೆಯ ಗಂಗಾವತಿಯಲ್ಲಿ ನಡೆಯುತ್ತಿರುವ ಪಕ್ಷದ 23ನೇ ರಾಜ್ಯ ಸಮ್ಮೇಳನವು ವಿವಾದಿತ ಕಾಯ್ದೆಯನ್ನು ತೀವ್ರವಾಗಿ ಖಂಡಿಸಿದ್ದು, ಕಾಯ್ದೆ ಹಿಂಪಡೆಯಲು ಆಗ್ರಹಿಸಿ ನಿರ್ಣಯ ತೆಗೆದುಕೊಂಡಿದೆ.

ಕರ್ನಾಟಕ ವಿಧಾನ ಸಭೆಯಲ್ಲಿ ತರಾತುರಿಯಲ್ಲಿ ಅಂಗೀಕರಿಸಲ್ಪಟ್ಟ ಈ ಮಸೂದೆಯನ್ನು ವಿಧಾನಪರಿಷತ್ತಿನಲ್ಲಿ ತಿರಸ್ಕಾರಕ್ಕೆ ಒಳಗಾಗಬಹುದೆಂಬ ಆತಂಕದಿಂದ ಸುಗ್ರೀವಾಜ್ಞೆ ಹೊರಡಿಸಿ ಜಾರಿಗೆ ತರಲು ಹೊರಟಿರುವುದನ್ನು ಸಮ್ಮೇಳನವು ತೀವ್ರವಾಗಿ ವಿರೋಧಿಸಿದೆ. ರಾಜ್ಯಪಾಲರು ಇದಕ್ಕೆ ಅನುಮತಿಯನ್ನು ನೀಡಬಾರದು ಎಂದು ಸಿಪಿಐ(ಎಂ) ಆಗ್ರಹಿಸಿದೆ.

ಇದನ್ನೂ ಓದಿ:ಹಿಂದುತ್ವ ಮತ್ತು ಕಾರ್ಪೋರೇಟ್‌ ಮೈತ್ರಿಯಿಂದಾಗಿ ದೇಶದಲ್ಲಿ ನಿರುದ್ಯೋಗ, ಹಸಿವು, ಬಡತನ ಹೆಚ್ಚುತ್ತಿದೆ: ಸಿಪಿಐ(ಎಂ) ಪಾಲಿಟ್‌‌ಬ್ಯೂರೊ ಸದಸ್ಯ ಪ್ರಕಾಶ್‌ ಕಾರಟ್‌‌

“ಭಾರತದ ಸಂವಿಧಾನದ 25 ನೇ ಅನುಚ್ಛೇಧವು ದೇಶದ ಪ್ರತಿಯೊಬ್ಬ ಪ್ರಜೆಗೂ ಧಾರ್ಮಿಕ ಸ್ವಾತಂತ್ರ್ಯವನ್ನು ಖಾತ್ರಿ ಪಡಿಸುತ್ತದೆ. ಧಾರ್ಮಿಕ ಸ್ವಾತಂತ್ರ್ಯ ಎಂದರೆ ದೇಶದ ಯಾವುದೇ ಪ್ರಜೆಯು ತನಗೆ ಇಷ್ಟ ಬಂದ ಮತಧರ್ಮವನ್ನು ಅನುಸರಿಸಬಹುದು. ಯಾವುದೇ ಧರ್ಮದ ವಿಚಾರಗಳನ್ನು ಪ್ರಚಾರ ಮಾಡಬಹುದು. ಹಾಗೆಯೇ ಯಾವುದೇ ವ್ಯಕ್ತಿಗೆ ಯಾವುದೇ ಮತಧರ್ಮವನ್ನು ಅನುಸರಿಸುವ, ಇಲ್ಲವೆ ಅನುಸರಿಸದೇ ಇರುವ ಸ್ವಾತಂತ್ರ್ಯ ಸಹ ಇರುತ್ತದೆ. ಇದು ಧಾರ್ಮಿಕ ಸ್ವಾತಂತ್ರ್ಯವಾಗಿದ್ದು ಈ ಧಾರ್ಮಿಕ ಹಕ್ಕು ದೇಶದ ಪ್ರತಿಪ್ರಜೆಯ ಮೂಲಭೂತ ಹಕ್ಕಾಗಿದೆ” ಎಂದು ಸಮ್ಮೇಳನದ ನಿರ್ಣಯ ವಿಶ್ಲೇಷಣೆ ಮಾಡಿದೆ‌.

“ರಾಜ್ಯ ಸರ್ಕಾರ ತಂದಿರುವ ಮಸುದೆಯೂ ಜನರ ಸಂವಿಧಾನಬದ್ಧ ಹಕ್ಕನ್ನು ಕಿತ್ತುಕೊಳ್ಳುವ ಒಂದು ದೌರ್ಜನ್ಯಕಾರಿ, ಸರ್ವಾಧಿಕಾರದ ಕ್ರಮವಾಗಿದೆ. ಬಲವಂತ, ಅನುಚಿತ ಪ್ರಭಾವ, ಒತ್ತಾಯ, ಆಮಿಷಗಳ ಮೂಲಕ ಅಥವಾ ಯಾವುದೇ ವಂಚನೆಯ ವಿಧಾನಗಳ ಮೂಲಕ ಒಂದು ಧರ್ಮದಿಂದ ಮತ್ತೊಂದು ಧರ್ಮಕ್ಕೆ ಮತಾಂತರ ಆಗುವುದನ್ನು ತಡೆಯುವ ಉದ್ದೇಶದಿಂದ ಈ ಕಾಯ್ದೆಯನ್ನು ತರಲಾಗಿದೆ ಎಂದು ಸರಕಾರ ಹೇಳಿಕೊಂಡಿದೆ. ಆದರೆ ಈಗಾಗಲೇ ಸಂವಿಧಾನದಲ್ಲಿ ಬಲವಂತದ ಮತಾಂತರವನ್ನು ತಡೆಯುವ ಮತ್ತು ಶಿಕ್ಷಿಸುವ ಅವಕಾಶ ಇರುವಾಗ ಮತ್ತೊಂದು ಕಾಯ್ದೆಯನ್ನು ತರುವುದರ ಔಚಿತ್ಯವಾದರೂ ಏನಿದೆ” ಎಂದು ರಾಜ್ಯ ಸಮ್ಮೇಳನವು ಪ್ರಶ್ನಿಸಿದೆ.

ಇದನ್ನೂ ಓದಿ:ಏರ್‌ ಇಂಡಿಯಾ ಮಾರಾಟವು ಟಾಟಾ ಕಂಪೆನಿಗೆ ನೀಡುತ್ತಿರುವ ಗಿಫ್ಟ್‌‌: ಸಿಪಿಐ(ಎಂ) ಆಕ್ರೋಶ

“ಯಾವುದೇ ವ್ಯಕ್ತಿಯು ಮದುವೆಯ ನಂತರ ಮತ್ತು ಮದುವೆಯ ಮುಂಚೆ ಸಹ ಮದುವೆಯ ಕಾರಣಕ್ಕಾಗಿ ಮತಾಂತರ ಆಗುವುದನ್ನು ಸಹ ಈ ಕಾಯ್ದೆಯು ನಿರ್ಬಂಧಿಸುತ್ತದೆ. ಮದುವೆ ಮತ್ತು ಮತಧರ್ಮ ಪಾಲನೆಯು ಯಾವುದೇ ವ್ಯಕ್ತಿಯ ವೈಯುಕ್ತಿಕ ಹಕ್ಕಾಗಿದ್ದು, ಆಳುವ ಸರಕಾರಗಳಿಗೆ ಈ ವಿಷಯದಲ್ಲಿ ಹಸ್ತಕ್ಷೇಪ ಮಾಡಲು ಅವಕಾಶ ಕೊಡುವುದು ಎಂದರೆ ಸಾತಂತ್ರ್ಯ ಮತ್ತು ಪ್ರಜಾಪ್ರಭುತ್ವದ ಮೂಲತತ್ವಗಳನ್ನು ಮಣ್ಣುಪಾಲು ಮಾಡುವುದು ಎಂದೇ ಆಗುತ್ತದೆ. ವಯಸ್ಕ ಯುವಕ-ಯುವತಿಯರು ತಮ್ಮ ಆಯ್ಕೆಯಂತೆ ಮದುವೆ ಆಗುವುದನ್ನು ಮತ್ತು ಅಂತರ್ ಧರ್ಮೀಯ ಪ್ರೇಮ ವಿವಾಹಗಳಾಗುವುದನ್ನು ತಡೆಯುವ ದುರುದ್ದೇಶ ಈ ಕಾಯ್ದೆಯಲ್ಲಿ ಅಡಗಿದೆ

ಇದಲ್ಲದೇ ಮತಾಂತರದ ನೆಪದಲ್ಲಿ ಈ ವಿಷಯಕ್ಕೆ ಸಂಬಂಧವಿಲ್ಲದ ವ್ಯಕ್ತಿಗಳು ಸಹ ಮತ್ತೊಬ್ಬರ ಖಾಸಗಿ ವಿಷಯಗಳಲ್ಲಿ ತಲೆಹಾಕಲು ಮತ್ತು ದೂರುಕೊಡಲು ಈ ಕಾಯ್ದೆಯು ಅವಕಾಶ ಮಾಡಿಕೊಡುತ್ತದೆ. ಮತಾಂತರದ ಆರೋಪ ಹೊರಿಸಿ ಶಿಕ್ಷಣ ಸಂಸ್ಥೆಗಳು ಸೇರಿದಂತೆ, ಯಾವುದೇ ಅಲ್ಪಸಂಖ್ಯಾತ ಸಂಘ-ಸಂಸ್ಥೆಗಳಿಗೆ ಕಿರುಕುಳ ನೀಡಲು ಮತ್ತು ಸರಕಾರದ ಅನುದಾನವನ್ನು ತಡೆಹಿಡಿಯಲು ಬೇಕಾದಂತೆ ಕಾಯ್ದೆಯಲ್ಲಿ ಅವಕಾಶವನ್ನು ಸೃಷ್ಟಿಸಿಕೊಳ್ಳಲಾಗಿದೆ” ಎಂದು ಸಮ್ಮೇಳನವು ಟೀಕಿಸಿದೆ.

“ಸುಮಾರು ಎರಡು ಸಾವಿರ ವರ್ಷಗಳ ಹಿಂದೆಯೇ ಗೌತಮ ಬುದ್ಧ ಮತ್ತು ಮಹಾವೀರರು ತಾವಿದ್ದ ಮತಧರ್ಮವನ್ನು ತಿರಸ್ಕರಿಸಿ ಹೊಸ ಮೌಲ್ಯಗಳ ಆಧಾರದ ಹೊಸ ಮತಧರ್ಮಗಳನ್ನು ಬೋಧಿಸಿದರು. ಗುರುನಾನಕರು ಸ್ಥಾಪಿಸಿದ ಸಿಖ್ ಧರ್ಮ ಸಹ ಜನರು ತಾವು ಇದ್ದ ಧರ್ಮವನ್ನು ತೊರೆದು ಹೊಸ ಧರ್ಮವನ್ನು ಸೇರಿದ್ದರಿಂದಲೇ ವ್ಯಾಪಕವಾಗಿ ಬೆಳೆದದ್ದು. ಹನ್ನೆರಡನೇ ಶತಮಾನದ ಶರಣರು ನೇರವಾಗಿ ಮತ್ತು ಸ್ಪಷ್ಟವಾಗಿ ಸಂಘಟಿತವಾಗಿ ಮತ್ತು ಸಾಮೂಹಿಕವಾಗಿ ಅಸಮಾನತೆಯ ವೈದಿಕ ಮತಧರ್ಮವನ್ನು ಖಂಡಿಸಿ ಹೊಸ ಧರ್ಮದ ಪ್ರತಿಪಾದಕರಾದರು. ಈಗ ಬಿಜೆಪಿ ತರುತ್ತಿರುವ ಕಾನೂನಿನ ಕಣ್ಣಲ್ಲಿ ಬುದ್ಧ-ಮಹಾವೀರ-ಗುರುನಾನಕರು-ಬಸವಣ್ಣನವರನ್ನು ಮತಾಂತರಿಗಳು ಎಂದು ದೂರುವುದು ಗಂಭೀರವಾದ ಪ್ರಮಾದವಾಗುತ್ತದೆ” ಎಂದು ರಾಜ್ಯ ಸಮ್ಮೇಳನ ಅಭಿಪ್ರಾಯ ವ್ಯಕ್ತಪಡಿಸಿದೆ.

ಇದನ್ನೂ ಓದಿ:ತ್ರಿಪುರ: ಹಲವು ಪತ್ರಿಕಾ ಕಚೇರಿಗಳ ಮೇಲೆ ಬಿಜೆಪಿ ಕಾರ್ಯಕರ್ತರ ದಾಳಿ- ಸಿಪಿಎಂ ಕಚೇರಿಗೆ ಬೆಂಕಿ

“ಹುಟ್ಟಿನಿಂದ ಬರುವ ಮತಧರ್ಮವು ಯಾವುದೇ ವ್ಯಕ್ತಿಯ ಸ್ವಂತ ಆಯ್ಕೆಯಲ್ಲ. ವ್ಯಕ್ತಿಗಳು ಬೆಳೆದು ವಯಸ್ಕರರಾದಾಗ ತಮಗೆ ಸರಿಕಂಡ ಮತಧರ್ಮವನ್ನು ಆರಿಸಿಕೊಳ್ಳುವ ಹಕ್ಕು ಅಥವಾ ಯಾವುದೇ ಮತಧರ್ಮವನ್ನು ಅನುಸರಿಸದಿರುವ ಹಕ್ಕು ಯಾವುದೇ ವ್ಯಕ್ತಿಗೆ ಇದ್ದೇ ಇದೆ. ಎಲ್ಲ ಆಧುನಿಕ ಪ್ರಜಾಪ್ರಭುತ್ವ ರಾಷ್ಟ್ರಗಳೂ ಮೂಲಭೂತ ಈ ಮಾನವ ಹಕ್ಕನ್ನು ಮಾನ್ಯ ಮಾಡಿವೆ ಮತ್ತು ಮಾನ್ಯ ಮಾಡಬೇಕಾಗುತ್ತದೆ.

ಅಲ್ಲದೇ ಯಾವುದೇ ಒಂದು ಧರ್ಮದಿಂದ ಜನರು ಮತ್ತೊಂದು ಧರ್ಮಕ್ಕೆ ಬದಲಾಗುತ್ತಾರೆ ಎಂದಾದರೆ ಆ ಧರ್ಮದ ಧಾರ್ಮಿಕ ಮುಖಂಡರು ಮತ್ತು ಧಾರ್ಮಿಕ ಪ್ರತಿಪಾದಕರು ತಮ್ಮ ಮತ ಧರ್ಮದಲ್ಲಿರುವ ದೋಷ, ಸಮಸ್ಯೆಗಳ ಕಡೆಗೆ ಗಮನ ನೀಡಿ ಅವುಗಳನ್ನು ನಿವಾರಿಸಬೇಕು. ಧಾರ್ಮಿಕ ಸುಧಾರಣೆಗಳನ್ನು ತಂದು ಜನರ ವಿಶ್ವಾಸವನ್ನು ಗಳಿಸಿಕೊಳ್ಳಬೇಕೆ ಹೊರತು ಸರ್ವಾಧಿಕಾರಿ ಕಾನೂನುಗಳ ಮೂಲಕ ಅದನ್ನು ತರುವುದು ನ್ಯಾಯವಲ್ಲ. ಈ ಒಟ್ಟು ಹಿನ್ನೆಲೆಯಲ್ಲಿ ಈ ಬಲವಂತದ ಮತಾಂತರ ನಿಷೇಧದ ಹೆಸರಿನ ಈ ‘ಕರ್ನಾಟಕ ಧಾರ್ಮಿಕ ಸ್ವಾತಂತ್ರ್ಯ ಹಕ್ಕು ಸಂರಕ್ಷಣಾ ವಿಧೇಯಕ, 2021’ ಕಾಯ್ದೆಯನ್ನು ವಾಪಸ್ ಪಡೆಯಬೇಕು. ರಾಜ್ಯಪಾಲರು ಇದಕ್ಕೆ ಅವಕಾಶವನ್ನು ನೀಡಕೂಡದು” ಎಂದು ಸಿಪಿಐ(ಎಂ) ರಾಜ್ಯ ಸಮ್ಮೇಳನವು ಆಗ್ರಹಿಸಿದೆ.

ಜೊತೆಗೆ, ಬಿಜೆಪಿ-ಸಂಘಪರಿವಾರದ ಹುನ್ನಾರಗಳನ್ನು ವಿರೋಧಿಸಿ ಜನವರಿ 17 ರಿಂದ ರಾಜ್ಯದಾದ್ಯಂತ ಜಿಲ್ಲಾ ಹಾಗೂ ತಾಲ್ಲೂಕು ಕೇಂದ್ರಗಳಲ್ಲಿ ಪ್ರತಿಭಟನೆ ನಡೆಸುವಂತೆ ಸಿಪಿಐ(ಎಂ) ಕರೆ ನೀಡಿದೆ.

ಇದನ್ನೂ ಓದಿ:ಧರ್ಮ ಆಚರಿಸಿ, ದ್ವೇಷ ಭಾಷಣವನ್ನಲ್ಲ: ಉಪರಾಷ್ಟ್ರಪತಿ ವೆಂಕಯ್ಯ ನಾಯ್ಡು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಏಷ್ಯಾ ಸಂಘರ್ಷ| ‘ಈ ಯುದ್ಧವನ್ನು ಕೊನೆಗೊಳಿಸಲು ಒಂದೇ ಮಾರ್ಗ…’: ಮೂರು ಷರತ್ತುಗಳನ್ನು ಮುಂದಿಟ್ಟ ಇರಾನ್

ಇರಾನ್ ಅಧ್ಯಕ್ಷ ಮಸೌದ್ ಪೆಜೆಶ್ಕಿಯಾನ್ ಅವರು ಅಮೆರಿಕ ಮತ್ತು ಇಸ್ರೇಲ್ ಜೊತೆಗಿನ ನಡೆಯುತ್ತಿರುವ ಸಂಘರ್ಷವನ್ನು ಕೊನೆಗೊಳಿಸಲು ಮೂರು ಷರತ್ತುಗಳನ್ನು ನಿಗದಿಪಡಿಸಿದ್ದಾರೆ. ಇದರಲ್ಲಿ ದೇಶವು ಭವಿಷ್ಯದ ದಾಳಿಗಳನ್ನು ಎದುರಿಸುವುದಿಲ್ಲ ಎಂಬ ಖಾತರಿಗಳು ಸೇರಿವೆ. ಬುಧವಾರ ತಮ್ಮ...

ಖಾಸಗಿ ಜಾಗದ ನಮಾಝ್‌ಗೆ ಅಧಿಕಾರಿಗಳಿಂದ ಅಡ್ಡಿ : ಮುಸ್ಲಿಂ ವ್ಯಕ್ತಿಗೆ ಭದ್ರತೆ ಒದಗಿಸಲು ಕೋರ್ಟ್ ಆದೇಶ

ಉತ್ತರ ಪ್ರದೇಶದ ಬರೇಲಿ ಜಿಲ್ಲೆಯ ಮುಸ್ಲಿಂ ವ್ಯಕ್ತಿಯೊಬ್ಬರು ತಮ್ಮ ಖಾಸಗಿ ಜಾಗದಲ್ಲಿ ಇತರರೊಂದಿಗೆ ನಮಾಝ್ ಮಾಡುವುದಕ್ಕೆ ಅಡ್ಡಿಪಡಿಸಲಾಗಿದೆ ಎಂದು ಆರೋಪಿಸಿದ ಹಿನ್ನೆಲೆ, ಅವರಿಗೆ ದಿನದ 24 ಗಂಟೆಯೂ ರಕ್ಷಣೆ ನೀಡಲು ಇಬ್ಬರು ಭದ್ರತಾ...

‘ಒಳಮೀಸಲಾತಿ ಜಾರಿಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಬಿಡುತ್ತಿಲ್ಲ’: ಮಂದಕೃಷ್ಣ ಮಾದಿಗ ಆರೋಪ

‘ಒಳಮೀಸಲಾತಿ ಜಾರಿಗೆ ತರುತ್ತೇವೆಂದು ಹೇಳಿದ್ದ ಕಾಂಗ್ರೆಸ್, ಈಗ ಒಳಮೀಸಲಾತಿ ಅನುಷ್ಠಾನದಲ್ಲಿ ಮೀನಾಮೇಷ ಎಣಿಸುತ್ತಿದೆ. ಕಾಂಗ್ರೆಸ್ ನ ಹೈಕಮಾಂಡ್ ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಹಾಗೂ ಪ್ರಿಯಾಂಕಾ ಗಾಂಧಿ. ಈ ಮೂವರನ್ನು ನಿಯಂತ್ರಿಸುವವರು ಕಾಂಗ್ರೆಸ್...

ಸಾವರ್ಕರ್ ಕುರಿತು ಹೇಳಿಕೆ : ರಾಹುಲ್ ಗಾಂಧಿ ವಿರುದ್ಧದ ಮಾನನಷ್ಟ ಮೊಕದ್ದಮೆ ರದ್ದು

ಭಾರತ್ ಜೋಡೋ ಯಾತ್ರೆಯ ಸಂದರ್ಭದಲ್ಲಿ (2022ರಲ್ಲಿ) ಹಿಂದುತ್ವ ಸಿದ್ಧಾಂತವಾದಿ ವಿನಾಯಕ ದಾಮೋದರ್ ಸಾವರ್ಕರ್ ಕುರಿತು ನೀಡಿದ್ದ ಹೇಳಿಕೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿದ್ದ ಮಾನನಷ್ಟ ಮೊಕದ್ದಮೆಯನ್ನು...

‘ಒಳಮೀಸಲಾತಿ ಜಾರಿಯಲ್ಲಿ ಸರ್ಕಾರ ನಿರ್ಲಕ್ಷ್ಯ ಧೋರಣೆ ತೋರಿದರೆ ಹೋರಾಟ ವಿಧಾನಸೌಧಕ್ಕೆ ಸ್ಥಳಾಂತರವಾಗುತ್ತದೆ’: ಮಾದರ ಚೆನ್ನಯ್ಯ ಸ್ವಾಮೀಜಿ

ಕಳೆದ 35 ವರ್ಷಗಳಿಂದ ಹಲವಾರು ಹೋರಾಟಗಾರರು ತಮ್ಮ ಜೀವ-ಜೀವನವನ್ನು ಅರ್ಪಿಸಿ, ಮನೆ-ಮಠವನ್ನು ಬಿಟ್ಟು ಒಳಮೀಸಲಾತಿ ಹೋರಾಟವನ್ನು ಅಂತಿಮ ಘಟ್ಟಕ್ಕೆ ತಂದಿದ್ದಾರೆ. ಅನೇಕರು ಬದುಕನ್ನು ಮಾತ್ರವಲ್ಲ, ಪ್ರಾಣವನ್ನೂ ಕಳೆದುಕೊಂಡಿದ್ದಾರೆ. ಇದು 2ನೇ ಸ್ವಾತಂತ್ರ್ಯ ಹೋರಾಟವಾಗಿದೆ....

ಎಸ್‌ಎನ್‌ಡಿಪಿ ಪ್ರಧಾನ ಕಾರ್ಯದರ್ಶಿ ಹುದ್ದೆಯಿಂದ ವೆಳ್ಳಾಪ್ಪಳ್ಳಿ ನಟೇಶನ್ ಅನರ್ಹ

ಶ್ರೀ ನಾರಾಯಣ ಧರ್ಮ ಪರಿಪಾಲನ ಯೋಗಂ (ಎಸ್‌ಎನ್‌ಡಿಪಿ ಯೋಗಂ) ನ ಪ್ರಧಾನ ಕಾರ್ಯದರ್ಶಿ ಮತ್ತು ಮತ್ತು ಎಸ್‌ಎನ್ ಟ್ರಸ್ಟ್‌ನ ಕಾರ್ಯದರ್ಶಿ ಸ್ಥಾನದಿಂದ ವೆಳ್ಳಾಪ್ಪಳ್ಳಿ ನಟೇಶನ್ ಅವರನ್ನು ಕೇರಳ ಹೈಕೋರ್ಟ್ ಗುರುವಾರ (ಮಾ.12) ಅನರ್ಹಗೊಳಿಸಿದ್ದು,...

‘ಫಾರೂಕ್ ಅಬ್ದುಲ್ಲಾರನ್ನು ಕೊಲ್ಲುವುದು ಸರ್ಕಾರದ ಉದ್ದೇಶವೇ?’..ರಾಜ್ಯ ಸಭೆಯಲ್ಲಿ ಖರ್ಗೆ ಪ್ರಶ್ನೆ

ಜಮ್ಮು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಹಾಗೂ ನ್ಯಾಷನಲ್ ಕಾನ್ಫರೆನ್ಸ್ (ಎನ್‌ಸಿ) ಪಕ್ಷದ ಮುಖ್ಯಸ್ಥ ಫಾರೂಕ್ ಅಬ್ದುಲ್ಲಾ ಅವರ ಹತ್ಯೆ ಯತ್ನ ವಿಚಾರವನ್ನು ವಿಪಕ್ಷ ಸದಸ್ಯರು ಗುರುವಾರ (ಮಾ.12) ರಾಜ್ಯಸಭೆಯಲ್ಲಿ ಪ್ರಸ್ತಾಪಿಸಿದರು. ಘಟನೆ ಬಗ್ಗೆ...

56 ಸಾವಿರ ಹುದ್ದೆಗಳ ನೇಮಕಾತಿಯಲ್ಲಿ ಒಳಮೀಸಲಾತಿ ಅನ್ವಯಕ್ಕೆ ಆಗ್ರಹಿಸಿ ಎಡಗೈ ಸಮುದಾಯದಿಂದ ಬೃಹತ್ ಪ್ರತಿಭಟನೆ 

ಸರ್ಕಾರವು ಒಳ ಮೀಸಲಾತಿಯನ್ನು ತಪ್ಪಿಸುವ ಹುನ್ನಾರದಿಂದ ತರಾತುರಿಯಲ್ಲಿ 56,432 ಹುದ್ದೆಗಳ ನೇಮಕಾತಿಗೆ ಆದೇಶ ಹೊರಡಿಸಿದೆ. ನೇಮಕಾತಿಯಲ್ಲಿ ಒಳಮೀಸಲಾತಿ ಅಳವಡಿಸದೆ, ಎಡಗೈ ಸಮುದಾಯಗಳಿಗೆ ಸರ್ಕಾರ ಮತ್ತೆ ವಂಚಿಸುತ್ತಿದೆ ಎಂದು ‘ಒಳಮೀಸಲಾತಿ ಹೋರಾಟ ಸಮಿತಿ’ ಆರೋಪಿಸಿದೆ....

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧದ ಅವಿಶ್ವಾಸ ನಿರ್ಣಯಕ್ಕೆ ಸೋಲು

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧ ವಿರೋಧ ಪಕ್ಷಗಳು ಮಂಡಿಸಿದ್ದ ಅವಿಶ್ವಾಸ ನಿರ್ಣಯವು ಬುಧವಾರ (ಮಾ.11) ಧ್ವನಿ ಮತದ ಮೂಲಕ ತಿರಸ್ಕಾರಗೊಂಡಿದೆ. ಸದನದಲ್ಲಿ ವಿರೋಧ ಪಕ್ಷಗಳ ತೀವ್ರ ಗದ್ದಲ ಮತ್ತು ಘೋಷಣೆಗಳ ನಡುವೆಯೇ ಸ್ಪೀಕರ್...

ಉತ್ತರ ಪ್ರದೇಶ| ರಸ್ತೆ ಗುಂಡಿಗೆ ಇಳಿದ ಆಂಬ್ಯುಲೆನ್ಸ್; ಮರುಜೀವ ಪಡೆದ ಮೆದುಳು ನಿಷ್ಕ್ರಿಯಗೊಂಡಿದ್ದ ಮಹಿಳೆ!

ಉತ್ತರ ಪ್ರದೇಶದ ಬರೇಲಿಯ ಖಾಸಗಿ ಆಸ್ಪತ್ರೆಯೊಂದರ ವೈದ್ಯರು ಮೆದುಳು ನಿಷ್ಕ್ರಿಯ ಎಂದು ಘೋಷಿಸಿದ್ದು, ಮಹಿಳೆಯೊಬ್ಬರ ಮೃತದೇಹವನ್ನು ಅಂತ್ಯಕ್ರಿಯೆಗಾಗಿ ಮನೆಗೆ ಸಾಗಿಸುತ್ತಿದ್ದಾಗ ಆಂಬ್ಯುಲೆನ್ಸ್ ರಸ್ತೆಯ ಗುಂಡಿಗೆ ಇಳಿದ ನಂತರ ಆಕೆ ಜೀವಂತವಾಗಿರುವ ಲಕ್ಷಣಗಳು ಕಂಡುಬಂದು...