Homeಕರ್ನಾಟಕ‘ಮತಾಂತರ ನಿಷೇಧ’ ಮಸೂದೆ ವಾಪಸಾತಿಗೆ ಸಿಪಿಐ(ಎಂ) ರಾಜ್ಯ ಸಮ್ಮೇಳನ ಒತ್ತಾಯ

‘ಮತಾಂತರ ನಿಷೇಧ’ ಮಸೂದೆ ವಾಪಸಾತಿಗೆ ಸಿಪಿಐ(ಎಂ) ರಾಜ್ಯ ಸಮ್ಮೇಳನ ಒತ್ತಾಯ

ಜನವರಿ 17 ರಿಂದ ರಾಜ್ಯದಾದ್ಯಂತ ಜಿಲ್ಲಾ ಹಾಗೂ ತಾಲ್ಲೂಕು ಕೇಂದ್ರಗಳಲ್ಲಿ ಪ್ರತಿಭಟನೆ ನಡೆಸುವಂತೆ ಪಕ್ಷವು ಕರೆ ನೀಡಿದೆ

- Advertisement -
- Advertisement -

ಬಿಜೆಪಿ ನೇತೃತ್ವದ ರಾಜ್ಯ ಸರಕಾರವು ಅಂಗೀಕರಿಸಿರುವ ‘ಕರ್ನಾಟಕ ಧಾರ್ಮಿಕ ಸ್ವಾತಂತ್ರ್ಯ ಹಕ್ಕು ಸಂರಕ್ಷಣಾ ಕಾಯ್ದೆ, 2021’ ಮಸೂದೆಯು ಭಾರತೀಯರಿಗೆ ಸಂವಿಧಾನವು ಕೊಡ ಮಾಡುವ ಧಾರ್ಮಿಕ ಸ್ವಾತಂತ್ರ್ಯದ ಮೂಲಭೂತ ಹಕ್ಕನ್ನು ಕಸಿಯುವ ಸಂವಿಧಾನ ವಿರೋಧಿ ಕ್ರಮವಾಗಿದೆ ಎಂದು ಭಾರತ ಕಮ್ಯೂನಿಸ್ಟ್ ಪಕ್ಷ(ಮಾರ್ಕ್ಸ್‌ವಾದಿ) ಪ್ರತಿಪಾದಿಸಿದೆ. ಕೊಪ್ಪಳ ಜಿಲ್ಲೆಯ ಗಂಗಾವತಿಯಲ್ಲಿ ನಡೆಯುತ್ತಿರುವ ಪಕ್ಷದ 23ನೇ ರಾಜ್ಯ ಸಮ್ಮೇಳನವು ವಿವಾದಿತ ಕಾಯ್ದೆಯನ್ನು ತೀವ್ರವಾಗಿ ಖಂಡಿಸಿದ್ದು, ಕಾಯ್ದೆ ಹಿಂಪಡೆಯಲು ಆಗ್ರಹಿಸಿ ನಿರ್ಣಯ ತೆಗೆದುಕೊಂಡಿದೆ.

ಕರ್ನಾಟಕ ವಿಧಾನ ಸಭೆಯಲ್ಲಿ ತರಾತುರಿಯಲ್ಲಿ ಅಂಗೀಕರಿಸಲ್ಪಟ್ಟ ಈ ಮಸೂದೆಯನ್ನು ವಿಧಾನಪರಿಷತ್ತಿನಲ್ಲಿ ತಿರಸ್ಕಾರಕ್ಕೆ ಒಳಗಾಗಬಹುದೆಂಬ ಆತಂಕದಿಂದ ಸುಗ್ರೀವಾಜ್ಞೆ ಹೊರಡಿಸಿ ಜಾರಿಗೆ ತರಲು ಹೊರಟಿರುವುದನ್ನು ಸಮ್ಮೇಳನವು ತೀವ್ರವಾಗಿ ವಿರೋಧಿಸಿದೆ. ರಾಜ್ಯಪಾಲರು ಇದಕ್ಕೆ ಅನುಮತಿಯನ್ನು ನೀಡಬಾರದು ಎಂದು ಸಿಪಿಐ(ಎಂ) ಆಗ್ರಹಿಸಿದೆ.

ಇದನ್ನೂ ಓದಿ:ಹಿಂದುತ್ವ ಮತ್ತು ಕಾರ್ಪೋರೇಟ್‌ ಮೈತ್ರಿಯಿಂದಾಗಿ ದೇಶದಲ್ಲಿ ನಿರುದ್ಯೋಗ, ಹಸಿವು, ಬಡತನ ಹೆಚ್ಚುತ್ತಿದೆ: ಸಿಪಿಐ(ಎಂ) ಪಾಲಿಟ್‌‌ಬ್ಯೂರೊ ಸದಸ್ಯ ಪ್ರಕಾಶ್‌ ಕಾರಟ್‌‌

“ಭಾರತದ ಸಂವಿಧಾನದ 25 ನೇ ಅನುಚ್ಛೇಧವು ದೇಶದ ಪ್ರತಿಯೊಬ್ಬ ಪ್ರಜೆಗೂ ಧಾರ್ಮಿಕ ಸ್ವಾತಂತ್ರ್ಯವನ್ನು ಖಾತ್ರಿ ಪಡಿಸುತ್ತದೆ. ಧಾರ್ಮಿಕ ಸ್ವಾತಂತ್ರ್ಯ ಎಂದರೆ ದೇಶದ ಯಾವುದೇ ಪ್ರಜೆಯು ತನಗೆ ಇಷ್ಟ ಬಂದ ಮತಧರ್ಮವನ್ನು ಅನುಸರಿಸಬಹುದು. ಯಾವುದೇ ಧರ್ಮದ ವಿಚಾರಗಳನ್ನು ಪ್ರಚಾರ ಮಾಡಬಹುದು. ಹಾಗೆಯೇ ಯಾವುದೇ ವ್ಯಕ್ತಿಗೆ ಯಾವುದೇ ಮತಧರ್ಮವನ್ನು ಅನುಸರಿಸುವ, ಇಲ್ಲವೆ ಅನುಸರಿಸದೇ ಇರುವ ಸ್ವಾತಂತ್ರ್ಯ ಸಹ ಇರುತ್ತದೆ. ಇದು ಧಾರ್ಮಿಕ ಸ್ವಾತಂತ್ರ್ಯವಾಗಿದ್ದು ಈ ಧಾರ್ಮಿಕ ಹಕ್ಕು ದೇಶದ ಪ್ರತಿಪ್ರಜೆಯ ಮೂಲಭೂತ ಹಕ್ಕಾಗಿದೆ” ಎಂದು ಸಮ್ಮೇಳನದ ನಿರ್ಣಯ ವಿಶ್ಲೇಷಣೆ ಮಾಡಿದೆ‌.

“ರಾಜ್ಯ ಸರ್ಕಾರ ತಂದಿರುವ ಮಸುದೆಯೂ ಜನರ ಸಂವಿಧಾನಬದ್ಧ ಹಕ್ಕನ್ನು ಕಿತ್ತುಕೊಳ್ಳುವ ಒಂದು ದೌರ್ಜನ್ಯಕಾರಿ, ಸರ್ವಾಧಿಕಾರದ ಕ್ರಮವಾಗಿದೆ. ಬಲವಂತ, ಅನುಚಿತ ಪ್ರಭಾವ, ಒತ್ತಾಯ, ಆಮಿಷಗಳ ಮೂಲಕ ಅಥವಾ ಯಾವುದೇ ವಂಚನೆಯ ವಿಧಾನಗಳ ಮೂಲಕ ಒಂದು ಧರ್ಮದಿಂದ ಮತ್ತೊಂದು ಧರ್ಮಕ್ಕೆ ಮತಾಂತರ ಆಗುವುದನ್ನು ತಡೆಯುವ ಉದ್ದೇಶದಿಂದ ಈ ಕಾಯ್ದೆಯನ್ನು ತರಲಾಗಿದೆ ಎಂದು ಸರಕಾರ ಹೇಳಿಕೊಂಡಿದೆ. ಆದರೆ ಈಗಾಗಲೇ ಸಂವಿಧಾನದಲ್ಲಿ ಬಲವಂತದ ಮತಾಂತರವನ್ನು ತಡೆಯುವ ಮತ್ತು ಶಿಕ್ಷಿಸುವ ಅವಕಾಶ ಇರುವಾಗ ಮತ್ತೊಂದು ಕಾಯ್ದೆಯನ್ನು ತರುವುದರ ಔಚಿತ್ಯವಾದರೂ ಏನಿದೆ” ಎಂದು ರಾಜ್ಯ ಸಮ್ಮೇಳನವು ಪ್ರಶ್ನಿಸಿದೆ.

ಇದನ್ನೂ ಓದಿ:ಏರ್‌ ಇಂಡಿಯಾ ಮಾರಾಟವು ಟಾಟಾ ಕಂಪೆನಿಗೆ ನೀಡುತ್ತಿರುವ ಗಿಫ್ಟ್‌‌: ಸಿಪಿಐ(ಎಂ) ಆಕ್ರೋಶ

“ಯಾವುದೇ ವ್ಯಕ್ತಿಯು ಮದುವೆಯ ನಂತರ ಮತ್ತು ಮದುವೆಯ ಮುಂಚೆ ಸಹ ಮದುವೆಯ ಕಾರಣಕ್ಕಾಗಿ ಮತಾಂತರ ಆಗುವುದನ್ನು ಸಹ ಈ ಕಾಯ್ದೆಯು ನಿರ್ಬಂಧಿಸುತ್ತದೆ. ಮದುವೆ ಮತ್ತು ಮತಧರ್ಮ ಪಾಲನೆಯು ಯಾವುದೇ ವ್ಯಕ್ತಿಯ ವೈಯುಕ್ತಿಕ ಹಕ್ಕಾಗಿದ್ದು, ಆಳುವ ಸರಕಾರಗಳಿಗೆ ಈ ವಿಷಯದಲ್ಲಿ ಹಸ್ತಕ್ಷೇಪ ಮಾಡಲು ಅವಕಾಶ ಕೊಡುವುದು ಎಂದರೆ ಸಾತಂತ್ರ್ಯ ಮತ್ತು ಪ್ರಜಾಪ್ರಭುತ್ವದ ಮೂಲತತ್ವಗಳನ್ನು ಮಣ್ಣುಪಾಲು ಮಾಡುವುದು ಎಂದೇ ಆಗುತ್ತದೆ. ವಯಸ್ಕ ಯುವಕ-ಯುವತಿಯರು ತಮ್ಮ ಆಯ್ಕೆಯಂತೆ ಮದುವೆ ಆಗುವುದನ್ನು ಮತ್ತು ಅಂತರ್ ಧರ್ಮೀಯ ಪ್ರೇಮ ವಿವಾಹಗಳಾಗುವುದನ್ನು ತಡೆಯುವ ದುರುದ್ದೇಶ ಈ ಕಾಯ್ದೆಯಲ್ಲಿ ಅಡಗಿದೆ

ಇದಲ್ಲದೇ ಮತಾಂತರದ ನೆಪದಲ್ಲಿ ಈ ವಿಷಯಕ್ಕೆ ಸಂಬಂಧವಿಲ್ಲದ ವ್ಯಕ್ತಿಗಳು ಸಹ ಮತ್ತೊಬ್ಬರ ಖಾಸಗಿ ವಿಷಯಗಳಲ್ಲಿ ತಲೆಹಾಕಲು ಮತ್ತು ದೂರುಕೊಡಲು ಈ ಕಾಯ್ದೆಯು ಅವಕಾಶ ಮಾಡಿಕೊಡುತ್ತದೆ. ಮತಾಂತರದ ಆರೋಪ ಹೊರಿಸಿ ಶಿಕ್ಷಣ ಸಂಸ್ಥೆಗಳು ಸೇರಿದಂತೆ, ಯಾವುದೇ ಅಲ್ಪಸಂಖ್ಯಾತ ಸಂಘ-ಸಂಸ್ಥೆಗಳಿಗೆ ಕಿರುಕುಳ ನೀಡಲು ಮತ್ತು ಸರಕಾರದ ಅನುದಾನವನ್ನು ತಡೆಹಿಡಿಯಲು ಬೇಕಾದಂತೆ ಕಾಯ್ದೆಯಲ್ಲಿ ಅವಕಾಶವನ್ನು ಸೃಷ್ಟಿಸಿಕೊಳ್ಳಲಾಗಿದೆ” ಎಂದು ಸಮ್ಮೇಳನವು ಟೀಕಿಸಿದೆ.

“ಸುಮಾರು ಎರಡು ಸಾವಿರ ವರ್ಷಗಳ ಹಿಂದೆಯೇ ಗೌತಮ ಬುದ್ಧ ಮತ್ತು ಮಹಾವೀರರು ತಾವಿದ್ದ ಮತಧರ್ಮವನ್ನು ತಿರಸ್ಕರಿಸಿ ಹೊಸ ಮೌಲ್ಯಗಳ ಆಧಾರದ ಹೊಸ ಮತಧರ್ಮಗಳನ್ನು ಬೋಧಿಸಿದರು. ಗುರುನಾನಕರು ಸ್ಥಾಪಿಸಿದ ಸಿಖ್ ಧರ್ಮ ಸಹ ಜನರು ತಾವು ಇದ್ದ ಧರ್ಮವನ್ನು ತೊರೆದು ಹೊಸ ಧರ್ಮವನ್ನು ಸೇರಿದ್ದರಿಂದಲೇ ವ್ಯಾಪಕವಾಗಿ ಬೆಳೆದದ್ದು. ಹನ್ನೆರಡನೇ ಶತಮಾನದ ಶರಣರು ನೇರವಾಗಿ ಮತ್ತು ಸ್ಪಷ್ಟವಾಗಿ ಸಂಘಟಿತವಾಗಿ ಮತ್ತು ಸಾಮೂಹಿಕವಾಗಿ ಅಸಮಾನತೆಯ ವೈದಿಕ ಮತಧರ್ಮವನ್ನು ಖಂಡಿಸಿ ಹೊಸ ಧರ್ಮದ ಪ್ರತಿಪಾದಕರಾದರು. ಈಗ ಬಿಜೆಪಿ ತರುತ್ತಿರುವ ಕಾನೂನಿನ ಕಣ್ಣಲ್ಲಿ ಬುದ್ಧ-ಮಹಾವೀರ-ಗುರುನಾನಕರು-ಬಸವಣ್ಣನವರನ್ನು ಮತಾಂತರಿಗಳು ಎಂದು ದೂರುವುದು ಗಂಭೀರವಾದ ಪ್ರಮಾದವಾಗುತ್ತದೆ” ಎಂದು ರಾಜ್ಯ ಸಮ್ಮೇಳನ ಅಭಿಪ್ರಾಯ ವ್ಯಕ್ತಪಡಿಸಿದೆ.

ಇದನ್ನೂ ಓದಿ:ತ್ರಿಪುರ: ಹಲವು ಪತ್ರಿಕಾ ಕಚೇರಿಗಳ ಮೇಲೆ ಬಿಜೆಪಿ ಕಾರ್ಯಕರ್ತರ ದಾಳಿ- ಸಿಪಿಎಂ ಕಚೇರಿಗೆ ಬೆಂಕಿ

“ಹುಟ್ಟಿನಿಂದ ಬರುವ ಮತಧರ್ಮವು ಯಾವುದೇ ವ್ಯಕ್ತಿಯ ಸ್ವಂತ ಆಯ್ಕೆಯಲ್ಲ. ವ್ಯಕ್ತಿಗಳು ಬೆಳೆದು ವಯಸ್ಕರರಾದಾಗ ತಮಗೆ ಸರಿಕಂಡ ಮತಧರ್ಮವನ್ನು ಆರಿಸಿಕೊಳ್ಳುವ ಹಕ್ಕು ಅಥವಾ ಯಾವುದೇ ಮತಧರ್ಮವನ್ನು ಅನುಸರಿಸದಿರುವ ಹಕ್ಕು ಯಾವುದೇ ವ್ಯಕ್ತಿಗೆ ಇದ್ದೇ ಇದೆ. ಎಲ್ಲ ಆಧುನಿಕ ಪ್ರಜಾಪ್ರಭುತ್ವ ರಾಷ್ಟ್ರಗಳೂ ಮೂಲಭೂತ ಈ ಮಾನವ ಹಕ್ಕನ್ನು ಮಾನ್ಯ ಮಾಡಿವೆ ಮತ್ತು ಮಾನ್ಯ ಮಾಡಬೇಕಾಗುತ್ತದೆ.

ಅಲ್ಲದೇ ಯಾವುದೇ ಒಂದು ಧರ್ಮದಿಂದ ಜನರು ಮತ್ತೊಂದು ಧರ್ಮಕ್ಕೆ ಬದಲಾಗುತ್ತಾರೆ ಎಂದಾದರೆ ಆ ಧರ್ಮದ ಧಾರ್ಮಿಕ ಮುಖಂಡರು ಮತ್ತು ಧಾರ್ಮಿಕ ಪ್ರತಿಪಾದಕರು ತಮ್ಮ ಮತ ಧರ್ಮದಲ್ಲಿರುವ ದೋಷ, ಸಮಸ್ಯೆಗಳ ಕಡೆಗೆ ಗಮನ ನೀಡಿ ಅವುಗಳನ್ನು ನಿವಾರಿಸಬೇಕು. ಧಾರ್ಮಿಕ ಸುಧಾರಣೆಗಳನ್ನು ತಂದು ಜನರ ವಿಶ್ವಾಸವನ್ನು ಗಳಿಸಿಕೊಳ್ಳಬೇಕೆ ಹೊರತು ಸರ್ವಾಧಿಕಾರಿ ಕಾನೂನುಗಳ ಮೂಲಕ ಅದನ್ನು ತರುವುದು ನ್ಯಾಯವಲ್ಲ. ಈ ಒಟ್ಟು ಹಿನ್ನೆಲೆಯಲ್ಲಿ ಈ ಬಲವಂತದ ಮತಾಂತರ ನಿಷೇಧದ ಹೆಸರಿನ ಈ ‘ಕರ್ನಾಟಕ ಧಾರ್ಮಿಕ ಸ್ವಾತಂತ್ರ್ಯ ಹಕ್ಕು ಸಂರಕ್ಷಣಾ ವಿಧೇಯಕ, 2021’ ಕಾಯ್ದೆಯನ್ನು ವಾಪಸ್ ಪಡೆಯಬೇಕು. ರಾಜ್ಯಪಾಲರು ಇದಕ್ಕೆ ಅವಕಾಶವನ್ನು ನೀಡಕೂಡದು” ಎಂದು ಸಿಪಿಐ(ಎಂ) ರಾಜ್ಯ ಸಮ್ಮೇಳನವು ಆಗ್ರಹಿಸಿದೆ.

ಜೊತೆಗೆ, ಬಿಜೆಪಿ-ಸಂಘಪರಿವಾರದ ಹುನ್ನಾರಗಳನ್ನು ವಿರೋಧಿಸಿ ಜನವರಿ 17 ರಿಂದ ರಾಜ್ಯದಾದ್ಯಂತ ಜಿಲ್ಲಾ ಹಾಗೂ ತಾಲ್ಲೂಕು ಕೇಂದ್ರಗಳಲ್ಲಿ ಪ್ರತಿಭಟನೆ ನಡೆಸುವಂತೆ ಸಿಪಿಐ(ಎಂ) ಕರೆ ನೀಡಿದೆ.

ಇದನ್ನೂ ಓದಿ:ಧರ್ಮ ಆಚರಿಸಿ, ದ್ವೇಷ ಭಾಷಣವನ್ನಲ್ಲ: ಉಪರಾಷ್ಟ್ರಪತಿ ವೆಂಕಯ್ಯ ನಾಯ್ಡು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಎಸ್‌ಐಆರ್‌ನಲ್ಲಿ ಮತದಾನದ ಹಕ್ಕು ಹೋಯ್ತು..ಈಗ ಸರ್ಕಾರಿ ಸೌಲಭ್ಯದ ಸರದಿ..ಮುಂದೆ ನಾಗರಿಕತ್ವ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುವುದು ಚುನಾವಣಾ ಆಯೋಗ ಭಾರತದ ಕೋಟ್ಯಾಂತರ ನಾಗರಿಕ ಅಮೂಲ್ಯವಾದ ಮತದಾನದ ಹಕ್ಕನ್ನು ಕಿತ್ತುಕೊಂಡ ಒಂದು ವ್ಯವಸ್ಥಿತ ಸಂಚು ಎನ್ನಬಹುದು. ಬಿಹಾರ, ಪಶ್ಚಿಮ ಬಂಗಾಳ, ತಮಿಳುನಾಡು,...

ಜೋಸೆಫ್ ವಿಜಯ್‌ ಅವರ ಐತಿಹಾಸಿಕ ಗೆಲುವು: ರಾಜ್ಯಪಾಲರ ಸೋಲು ಮತ್ತು ದ್ರಾವಿಡ ನೆಲದ ರಾಜಕೀಯ: ಒಂದು ವಿಶ್ಲೇಷಣೆ

ತಮಿಳಗ ವೆಟ್ರಿ ಕಝಗಂ (TVK) ಪಕ್ಷವು ತಮಿಳುನಾಡು ವಿಧಾನಸಭೆಯಲ್ಲಿ ಬಹುಮತ ಸಾಬೀತುಪಡಿಸಿ ಸರ್ಕಾರ ರಚಿಸುವ ಜವಾಬ್ದಾರಿ ತೆಗೆದುಕೊಂಡಿದೆ. ಮೇ 13, 2026ರ ಬುಧವಾರ ನಡೆದ ನಾಟಕೀಯ ವಿಶ್ವಾಸ ಮತಯಾಚನೆಯಲ್ಲಿ 144 ಮತಗಳ ಬೆಂಬಲ...

FACT CHECK: ಟಿವಿಕೆ ಪಕ್ಷ ಅಧಿಕಾರಕ್ಕೆ ಬರುತ್ತಿದಂತೆ ಹಿಂದಿ ಹೇರಿಕೆ ವಿರುದ್ದ ಪ್ರತಿಭಟನೆ ಎಂದು ಹಳೆಯ ವಿಡಿಯೋ ಹಂಚಿಕೆ

ಹಿಂದಿ ಹೇರಿಕೆ ವಿರುದ್ದದ ಹೋರಾಟವು ತಮಿಳುನಾಡಿಗೆ ಹೊಸದೇನು ಅಲ್ಲ. ಆದರೆ ಚೆನ್ನೈನ ಜವಾಹರಲಾಲ್ ನೆಹರು ಒಳಾಂಗಣ ಕ್ರೀಡಾಂಗಣದಲ್ಲಿ ವಿಜಯ್ ನೇತೃತ್ವದ ತಮಿಳಗ ವೆಟ್ರಿ ಕಳಗಂ (ಟಿವಿಕೆ) ಪಕ್ಷ ಅಧಿಕಾರ ವಹಿಸಿಕೊಂಡ ನಂತರ ...

ನೀಟ್: ಪ್ರಶ್ನೆಪತ್ರಿಕೆ ಸೋರಿಕೆಯ ಆತಂಕ ಮತ್ತು ಪ್ರಾದೇಶಿಕ ಹಿತಾಸಕ್ತಿಗಳ ಬಲಿ

ಪ್ರಶ್ನೆ ಪತ್ರಿಕೆ ಸೋರಿಕೆಯಾಗಿರುವ ಆರೋಪದ ಮೇಲೆ ಮೇ 3 ರಂದು ನಡೆಸಲಾದ ನೀಟ್ (ಯುಜಿ) 2026 ಅನ್ನು ರದ್ದುಗೊಳಿಸುವುದಾಗಿ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ) ಮಂಗಳವಾರ (ಮೇ 12) ಘೋಷಿಸಿದೆ. ಪ್ರತ್ಯೇಕವಾಗಿ ತಿಳಿಸಲಾಗುವ...

ಕೇಂದ್ರ ಸಚಿವ ಬಂಡಿ ಸಂಜಯ್ ಮಗನ ವಿರುದ್ಧ ಪೋಕ್ಸೋ ಕೇಸ್ : ಕ್ರಮ ಕೈಗೊಳ್ಳದೆ ಕಥೆ ಹೇಳುತ್ತಿರುವ ಪೊಲೀಸರು, ಅಂತರ ಕಾಯ್ದುಕೊಂಡ ಬಿಜೆಪಿ

ಕೇಂದ್ರ ಗೃಹ ವ್ಯವಹಾರಗಳ ರಾಜ್ಯ ಸಚಿವ, ತೆಲಂಗಾಣದ ಪ್ರಮುಖ ಬಿಜೆಪಿ ನಾಯಕ ಬಂಡಿ ಸಂಜಯ್ ಕುಮಾರ್ ಅವರ ಮಗ ಬಂಡಿ ಸಾಯಿ ಭಗೀರತ್ ವಿರುದ್ಧ 17 ವರ್ಷದ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಲ್ಲಿ ಪೋಕ್ಸೋ...

ಶಾಲೆ, ಪೂಜಾ ಸ್ಥಳ, ಬಸ್ ನಿಲ್ದಾಣಗಳ ಬಳಿ ಇರುವ 717 ಮದ್ಯದಂಗಡಿಗಳನ್ನು ಮುಚ್ಚಲು ತಮಿಳುನಾಡು ಸಿಎಂ ಜೋಸೆಫ್ ವಿಜಯ್ ಆದೇಶ 

ಅಧಿಕಾರ ವಹಿಸಿಕೊಂಡ ನಂತರ ತಮ್ಮ ಮೊದಲ ಪ್ರಮುಖ ಆಡಳಿತಾತ್ಮಕ ನಿರ್ದೇಶನದಲ್ಲಿ, ಸಿ. ಜೋಸೆಫ್ ವಿಜಯ್ ಸೋಮವಾರ, ತಮಿಳುನಾಡು ಸರ್ಕಾರವು ಪೂಜಾ ಸ್ಥಳಗಳು, ಶಿಕ್ಷಣ ಸಂಸ್ಥೆಗಳು ಮತ್ತು ಬಸ್ ನಿಲ್ದಾಣಗಳಿಂದ 500 ಮೀಟರ್ ಒಳಗೆ...

FACT CHECK: ಭಾರತೀಯರು ಚಿನ್ನ ಖರೀದಿಸಬೇಡಿ ಎಂದು 1967ರಲ್ಲೇ ಇಂದಿರಾ ಗಾಂಧಿ ಹೇಳಿದ್ರಾ?

ಪ್ರಧಾನಿ ನರೇಂದ್ರ ಮೋದಿಯವರು ಇತ್ತೀಚೆಗೆ ತೆಲಂಗಾಣದ ಸಿಕಂದರಾಬಾದ್ ರ‍್ಯಾಲಿಯಲ್ಲಿ ಮಾತನಾಡುತ್ತಾ, ಆರ್ಥಿಕ ಬಿಕ್ಕಟ್ಟು ತಪ್ಪಿಸಲು "ಒಂದು ವರ್ಷ ಚಿನ್ನ ಖರೀದಿಸಬೇಡಿ" ಎಂದು ಜನರಲ್ಲಿ ಮನವಿ ಮಾಡಿದ್ದರು. ಇದರ ಬೆನ್ನಲ್ಲೇ, 1967ರಲ್ಲಿ ಅಂದಿನ ಪ್ರಧಾನಿ...

ಪಶ್ಚಿಮ ಬಂಗಾಳ| ಧ್ವನಿವರ್ಧಕಗಳ ನಿಯಂತ್ರಣಕ್ಕೆ ಆದೇಶಿಸಿದ ನೂತನ ಸಿಎಂ ಅಧಿಕಾರಿ; ಧಾರ್ಮಿಕ ಸಭೆ ನೆಪದಲ್ಲಿ ರಸ್ತೆ ತಡೆಗೆ ನಿಷೇಧ

ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ನೇತೃತ್ವದ ಸರ್ಕಾರವು ಧಾರ್ಮಿಕ ಸ್ಥಳಗಳಲ್ಲಿ ಧ್ವನಿವರ್ಧಕಗಳ ಬಳಕೆಯನ್ನು ನಿಯಂತ್ರಿಸಲು ಮತ್ತು ಪ್ರಾರ್ಥನೆ ಅಥವಾ ಧಾರ್ಮಿಕ ಸಭೆ ನೆಪದಲ್ಲಿ ಸಾರ್ವಜನಿಕ ರಸ್ತೆಗಳನ್ನು ನಿರ್ಬಂಧಿಸದಂತೆ ನೋಡಿಕೊಳ್ಳಲು ಪೊಲೀಸ್ ಅಧಿಕಾರಿಗಳಿಗೆ ಹೊಸ ಸೂಚನೆಗಳನ್ನು...

ರಾಜಸ್ಥಾನದಲ್ಲಿ ನೀಟ್‌-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ; ಸಿಬಿಐ ತನಿಖೆಗೆ ಆದೇಶಿಸಿದ ಸರ್ಕಾರ

ಮೇ 3 ರಂದು ನಡೆಸಲಾದ ನೀಟ್ (ಯುಜಿ) 2026 ಅನ್ನು ರದ್ದುಗೊಳಿಸುವುದಾಗಿ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ) ಮಂಗಳವಾರ (ಮೇ 12) ಘೋಷಿಸಿದೆ. ಪ್ರತ್ಯೇಕವಾಗಿ ತಿಳಿಸಲಾಗುವ ದಿನಾಂಕಗಳಲ್ಲಿ ಮರು ಪರೀಕ್ಷೆಯನ್ನು ನಡೆಸಲಾಗುವುದು, ಪರೀಕ್ಷೆಗೆ...

ಇತ್ಯರ್ಥವಾಗದ ಚುನಾವಣಾ ತಕರಾರು : ಮತ ಹಾಕಿದ ಜನರಿಗೆ ದಿನಕ್ಕೊಬ್ಬ ಶಾಸಕ

ರಾಜ್ಯದಲ್ಲಿ ಪ್ರಸ್ತುತ ಆಡಳಿತ ನಡೆಸುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಮೂರು ವರ್ಷಗಳನ್ನು ಪೂರೈಸಿದೆ. ಚುನಾವಣೆ ನಡೆಯಲು ಇನ್ನು ಎರಡು ವರ್ಷಗಳು ಬಾಕಿಯಿದೆ. ಅಂದರೆ, ಸರ್ಕಾರದ ಐದು ವರ್ಷಗಳ ಅವಧಿಯಲ್ಲಿ ಮುಕ್ಕಾಲು...