Homeಕರ್ನಾಟಕ‘ಮತಾಂತರ ನಿಷೇಧ’ ಮಸೂದೆ ವಾಪಸಾತಿಗೆ ಸಿಪಿಐ(ಎಂ) ರಾಜ್ಯ ಸಮ್ಮೇಳನ ಒತ್ತಾಯ

‘ಮತಾಂತರ ನಿಷೇಧ’ ಮಸೂದೆ ವಾಪಸಾತಿಗೆ ಸಿಪಿಐ(ಎಂ) ರಾಜ್ಯ ಸಮ್ಮೇಳನ ಒತ್ತಾಯ

ಜನವರಿ 17 ರಿಂದ ರಾಜ್ಯದಾದ್ಯಂತ ಜಿಲ್ಲಾ ಹಾಗೂ ತಾಲ್ಲೂಕು ಕೇಂದ್ರಗಳಲ್ಲಿ ಪ್ರತಿಭಟನೆ ನಡೆಸುವಂತೆ ಪಕ್ಷವು ಕರೆ ನೀಡಿದೆ

- Advertisement -
- Advertisement -

ಬಿಜೆಪಿ ನೇತೃತ್ವದ ರಾಜ್ಯ ಸರಕಾರವು ಅಂಗೀಕರಿಸಿರುವ ‘ಕರ್ನಾಟಕ ಧಾರ್ಮಿಕ ಸ್ವಾತಂತ್ರ್ಯ ಹಕ್ಕು ಸಂರಕ್ಷಣಾ ಕಾಯ್ದೆ, 2021’ ಮಸೂದೆಯು ಭಾರತೀಯರಿಗೆ ಸಂವಿಧಾನವು ಕೊಡ ಮಾಡುವ ಧಾರ್ಮಿಕ ಸ್ವಾತಂತ್ರ್ಯದ ಮೂಲಭೂತ ಹಕ್ಕನ್ನು ಕಸಿಯುವ ಸಂವಿಧಾನ ವಿರೋಧಿ ಕ್ರಮವಾಗಿದೆ ಎಂದು ಭಾರತ ಕಮ್ಯೂನಿಸ್ಟ್ ಪಕ್ಷ(ಮಾರ್ಕ್ಸ್‌ವಾದಿ) ಪ್ರತಿಪಾದಿಸಿದೆ. ಕೊಪ್ಪಳ ಜಿಲ್ಲೆಯ ಗಂಗಾವತಿಯಲ್ಲಿ ನಡೆಯುತ್ತಿರುವ ಪಕ್ಷದ 23ನೇ ರಾಜ್ಯ ಸಮ್ಮೇಳನವು ವಿವಾದಿತ ಕಾಯ್ದೆಯನ್ನು ತೀವ್ರವಾಗಿ ಖಂಡಿಸಿದ್ದು, ಕಾಯ್ದೆ ಹಿಂಪಡೆಯಲು ಆಗ್ರಹಿಸಿ ನಿರ್ಣಯ ತೆಗೆದುಕೊಂಡಿದೆ.

ಕರ್ನಾಟಕ ವಿಧಾನ ಸಭೆಯಲ್ಲಿ ತರಾತುರಿಯಲ್ಲಿ ಅಂಗೀಕರಿಸಲ್ಪಟ್ಟ ಈ ಮಸೂದೆಯನ್ನು ವಿಧಾನಪರಿಷತ್ತಿನಲ್ಲಿ ತಿರಸ್ಕಾರಕ್ಕೆ ಒಳಗಾಗಬಹುದೆಂಬ ಆತಂಕದಿಂದ ಸುಗ್ರೀವಾಜ್ಞೆ ಹೊರಡಿಸಿ ಜಾರಿಗೆ ತರಲು ಹೊರಟಿರುವುದನ್ನು ಸಮ್ಮೇಳನವು ತೀವ್ರವಾಗಿ ವಿರೋಧಿಸಿದೆ. ರಾಜ್ಯಪಾಲರು ಇದಕ್ಕೆ ಅನುಮತಿಯನ್ನು ನೀಡಬಾರದು ಎಂದು ಸಿಪಿಐ(ಎಂ) ಆಗ್ರಹಿಸಿದೆ.

ಇದನ್ನೂ ಓದಿ:ಹಿಂದುತ್ವ ಮತ್ತು ಕಾರ್ಪೋರೇಟ್‌ ಮೈತ್ರಿಯಿಂದಾಗಿ ದೇಶದಲ್ಲಿ ನಿರುದ್ಯೋಗ, ಹಸಿವು, ಬಡತನ ಹೆಚ್ಚುತ್ತಿದೆ: ಸಿಪಿಐ(ಎಂ) ಪಾಲಿಟ್‌‌ಬ್ಯೂರೊ ಸದಸ್ಯ ಪ್ರಕಾಶ್‌ ಕಾರಟ್‌‌

“ಭಾರತದ ಸಂವಿಧಾನದ 25 ನೇ ಅನುಚ್ಛೇಧವು ದೇಶದ ಪ್ರತಿಯೊಬ್ಬ ಪ್ರಜೆಗೂ ಧಾರ್ಮಿಕ ಸ್ವಾತಂತ್ರ್ಯವನ್ನು ಖಾತ್ರಿ ಪಡಿಸುತ್ತದೆ. ಧಾರ್ಮಿಕ ಸ್ವಾತಂತ್ರ್ಯ ಎಂದರೆ ದೇಶದ ಯಾವುದೇ ಪ್ರಜೆಯು ತನಗೆ ಇಷ್ಟ ಬಂದ ಮತಧರ್ಮವನ್ನು ಅನುಸರಿಸಬಹುದು. ಯಾವುದೇ ಧರ್ಮದ ವಿಚಾರಗಳನ್ನು ಪ್ರಚಾರ ಮಾಡಬಹುದು. ಹಾಗೆಯೇ ಯಾವುದೇ ವ್ಯಕ್ತಿಗೆ ಯಾವುದೇ ಮತಧರ್ಮವನ್ನು ಅನುಸರಿಸುವ, ಇಲ್ಲವೆ ಅನುಸರಿಸದೇ ಇರುವ ಸ್ವಾತಂತ್ರ್ಯ ಸಹ ಇರುತ್ತದೆ. ಇದು ಧಾರ್ಮಿಕ ಸ್ವಾತಂತ್ರ್ಯವಾಗಿದ್ದು ಈ ಧಾರ್ಮಿಕ ಹಕ್ಕು ದೇಶದ ಪ್ರತಿಪ್ರಜೆಯ ಮೂಲಭೂತ ಹಕ್ಕಾಗಿದೆ” ಎಂದು ಸಮ್ಮೇಳನದ ನಿರ್ಣಯ ವಿಶ್ಲೇಷಣೆ ಮಾಡಿದೆ‌.

“ರಾಜ್ಯ ಸರ್ಕಾರ ತಂದಿರುವ ಮಸುದೆಯೂ ಜನರ ಸಂವಿಧಾನಬದ್ಧ ಹಕ್ಕನ್ನು ಕಿತ್ತುಕೊಳ್ಳುವ ಒಂದು ದೌರ್ಜನ್ಯಕಾರಿ, ಸರ್ವಾಧಿಕಾರದ ಕ್ರಮವಾಗಿದೆ. ಬಲವಂತ, ಅನುಚಿತ ಪ್ರಭಾವ, ಒತ್ತಾಯ, ಆಮಿಷಗಳ ಮೂಲಕ ಅಥವಾ ಯಾವುದೇ ವಂಚನೆಯ ವಿಧಾನಗಳ ಮೂಲಕ ಒಂದು ಧರ್ಮದಿಂದ ಮತ್ತೊಂದು ಧರ್ಮಕ್ಕೆ ಮತಾಂತರ ಆಗುವುದನ್ನು ತಡೆಯುವ ಉದ್ದೇಶದಿಂದ ಈ ಕಾಯ್ದೆಯನ್ನು ತರಲಾಗಿದೆ ಎಂದು ಸರಕಾರ ಹೇಳಿಕೊಂಡಿದೆ. ಆದರೆ ಈಗಾಗಲೇ ಸಂವಿಧಾನದಲ್ಲಿ ಬಲವಂತದ ಮತಾಂತರವನ್ನು ತಡೆಯುವ ಮತ್ತು ಶಿಕ್ಷಿಸುವ ಅವಕಾಶ ಇರುವಾಗ ಮತ್ತೊಂದು ಕಾಯ್ದೆಯನ್ನು ತರುವುದರ ಔಚಿತ್ಯವಾದರೂ ಏನಿದೆ” ಎಂದು ರಾಜ್ಯ ಸಮ್ಮೇಳನವು ಪ್ರಶ್ನಿಸಿದೆ.

ಇದನ್ನೂ ಓದಿ:ಏರ್‌ ಇಂಡಿಯಾ ಮಾರಾಟವು ಟಾಟಾ ಕಂಪೆನಿಗೆ ನೀಡುತ್ತಿರುವ ಗಿಫ್ಟ್‌‌: ಸಿಪಿಐ(ಎಂ) ಆಕ್ರೋಶ

“ಯಾವುದೇ ವ್ಯಕ್ತಿಯು ಮದುವೆಯ ನಂತರ ಮತ್ತು ಮದುವೆಯ ಮುಂಚೆ ಸಹ ಮದುವೆಯ ಕಾರಣಕ್ಕಾಗಿ ಮತಾಂತರ ಆಗುವುದನ್ನು ಸಹ ಈ ಕಾಯ್ದೆಯು ನಿರ್ಬಂಧಿಸುತ್ತದೆ. ಮದುವೆ ಮತ್ತು ಮತಧರ್ಮ ಪಾಲನೆಯು ಯಾವುದೇ ವ್ಯಕ್ತಿಯ ವೈಯುಕ್ತಿಕ ಹಕ್ಕಾಗಿದ್ದು, ಆಳುವ ಸರಕಾರಗಳಿಗೆ ಈ ವಿಷಯದಲ್ಲಿ ಹಸ್ತಕ್ಷೇಪ ಮಾಡಲು ಅವಕಾಶ ಕೊಡುವುದು ಎಂದರೆ ಸಾತಂತ್ರ್ಯ ಮತ್ತು ಪ್ರಜಾಪ್ರಭುತ್ವದ ಮೂಲತತ್ವಗಳನ್ನು ಮಣ್ಣುಪಾಲು ಮಾಡುವುದು ಎಂದೇ ಆಗುತ್ತದೆ. ವಯಸ್ಕ ಯುವಕ-ಯುವತಿಯರು ತಮ್ಮ ಆಯ್ಕೆಯಂತೆ ಮದುವೆ ಆಗುವುದನ್ನು ಮತ್ತು ಅಂತರ್ ಧರ್ಮೀಯ ಪ್ರೇಮ ವಿವಾಹಗಳಾಗುವುದನ್ನು ತಡೆಯುವ ದುರುದ್ದೇಶ ಈ ಕಾಯ್ದೆಯಲ್ಲಿ ಅಡಗಿದೆ

ಇದಲ್ಲದೇ ಮತಾಂತರದ ನೆಪದಲ್ಲಿ ಈ ವಿಷಯಕ್ಕೆ ಸಂಬಂಧವಿಲ್ಲದ ವ್ಯಕ್ತಿಗಳು ಸಹ ಮತ್ತೊಬ್ಬರ ಖಾಸಗಿ ವಿಷಯಗಳಲ್ಲಿ ತಲೆಹಾಕಲು ಮತ್ತು ದೂರುಕೊಡಲು ಈ ಕಾಯ್ದೆಯು ಅವಕಾಶ ಮಾಡಿಕೊಡುತ್ತದೆ. ಮತಾಂತರದ ಆರೋಪ ಹೊರಿಸಿ ಶಿಕ್ಷಣ ಸಂಸ್ಥೆಗಳು ಸೇರಿದಂತೆ, ಯಾವುದೇ ಅಲ್ಪಸಂಖ್ಯಾತ ಸಂಘ-ಸಂಸ್ಥೆಗಳಿಗೆ ಕಿರುಕುಳ ನೀಡಲು ಮತ್ತು ಸರಕಾರದ ಅನುದಾನವನ್ನು ತಡೆಹಿಡಿಯಲು ಬೇಕಾದಂತೆ ಕಾಯ್ದೆಯಲ್ಲಿ ಅವಕಾಶವನ್ನು ಸೃಷ್ಟಿಸಿಕೊಳ್ಳಲಾಗಿದೆ” ಎಂದು ಸಮ್ಮೇಳನವು ಟೀಕಿಸಿದೆ.

“ಸುಮಾರು ಎರಡು ಸಾವಿರ ವರ್ಷಗಳ ಹಿಂದೆಯೇ ಗೌತಮ ಬುದ್ಧ ಮತ್ತು ಮಹಾವೀರರು ತಾವಿದ್ದ ಮತಧರ್ಮವನ್ನು ತಿರಸ್ಕರಿಸಿ ಹೊಸ ಮೌಲ್ಯಗಳ ಆಧಾರದ ಹೊಸ ಮತಧರ್ಮಗಳನ್ನು ಬೋಧಿಸಿದರು. ಗುರುನಾನಕರು ಸ್ಥಾಪಿಸಿದ ಸಿಖ್ ಧರ್ಮ ಸಹ ಜನರು ತಾವು ಇದ್ದ ಧರ್ಮವನ್ನು ತೊರೆದು ಹೊಸ ಧರ್ಮವನ್ನು ಸೇರಿದ್ದರಿಂದಲೇ ವ್ಯಾಪಕವಾಗಿ ಬೆಳೆದದ್ದು. ಹನ್ನೆರಡನೇ ಶತಮಾನದ ಶರಣರು ನೇರವಾಗಿ ಮತ್ತು ಸ್ಪಷ್ಟವಾಗಿ ಸಂಘಟಿತವಾಗಿ ಮತ್ತು ಸಾಮೂಹಿಕವಾಗಿ ಅಸಮಾನತೆಯ ವೈದಿಕ ಮತಧರ್ಮವನ್ನು ಖಂಡಿಸಿ ಹೊಸ ಧರ್ಮದ ಪ್ರತಿಪಾದಕರಾದರು. ಈಗ ಬಿಜೆಪಿ ತರುತ್ತಿರುವ ಕಾನೂನಿನ ಕಣ್ಣಲ್ಲಿ ಬುದ್ಧ-ಮಹಾವೀರ-ಗುರುನಾನಕರು-ಬಸವಣ್ಣನವರನ್ನು ಮತಾಂತರಿಗಳು ಎಂದು ದೂರುವುದು ಗಂಭೀರವಾದ ಪ್ರಮಾದವಾಗುತ್ತದೆ” ಎಂದು ರಾಜ್ಯ ಸಮ್ಮೇಳನ ಅಭಿಪ್ರಾಯ ವ್ಯಕ್ತಪಡಿಸಿದೆ.

ಇದನ್ನೂ ಓದಿ:ತ್ರಿಪುರ: ಹಲವು ಪತ್ರಿಕಾ ಕಚೇರಿಗಳ ಮೇಲೆ ಬಿಜೆಪಿ ಕಾರ್ಯಕರ್ತರ ದಾಳಿ- ಸಿಪಿಎಂ ಕಚೇರಿಗೆ ಬೆಂಕಿ

“ಹುಟ್ಟಿನಿಂದ ಬರುವ ಮತಧರ್ಮವು ಯಾವುದೇ ವ್ಯಕ್ತಿಯ ಸ್ವಂತ ಆಯ್ಕೆಯಲ್ಲ. ವ್ಯಕ್ತಿಗಳು ಬೆಳೆದು ವಯಸ್ಕರರಾದಾಗ ತಮಗೆ ಸರಿಕಂಡ ಮತಧರ್ಮವನ್ನು ಆರಿಸಿಕೊಳ್ಳುವ ಹಕ್ಕು ಅಥವಾ ಯಾವುದೇ ಮತಧರ್ಮವನ್ನು ಅನುಸರಿಸದಿರುವ ಹಕ್ಕು ಯಾವುದೇ ವ್ಯಕ್ತಿಗೆ ಇದ್ದೇ ಇದೆ. ಎಲ್ಲ ಆಧುನಿಕ ಪ್ರಜಾಪ್ರಭುತ್ವ ರಾಷ್ಟ್ರಗಳೂ ಮೂಲಭೂತ ಈ ಮಾನವ ಹಕ್ಕನ್ನು ಮಾನ್ಯ ಮಾಡಿವೆ ಮತ್ತು ಮಾನ್ಯ ಮಾಡಬೇಕಾಗುತ್ತದೆ.

ಅಲ್ಲದೇ ಯಾವುದೇ ಒಂದು ಧರ್ಮದಿಂದ ಜನರು ಮತ್ತೊಂದು ಧರ್ಮಕ್ಕೆ ಬದಲಾಗುತ್ತಾರೆ ಎಂದಾದರೆ ಆ ಧರ್ಮದ ಧಾರ್ಮಿಕ ಮುಖಂಡರು ಮತ್ತು ಧಾರ್ಮಿಕ ಪ್ರತಿಪಾದಕರು ತಮ್ಮ ಮತ ಧರ್ಮದಲ್ಲಿರುವ ದೋಷ, ಸಮಸ್ಯೆಗಳ ಕಡೆಗೆ ಗಮನ ನೀಡಿ ಅವುಗಳನ್ನು ನಿವಾರಿಸಬೇಕು. ಧಾರ್ಮಿಕ ಸುಧಾರಣೆಗಳನ್ನು ತಂದು ಜನರ ವಿಶ್ವಾಸವನ್ನು ಗಳಿಸಿಕೊಳ್ಳಬೇಕೆ ಹೊರತು ಸರ್ವಾಧಿಕಾರಿ ಕಾನೂನುಗಳ ಮೂಲಕ ಅದನ್ನು ತರುವುದು ನ್ಯಾಯವಲ್ಲ. ಈ ಒಟ್ಟು ಹಿನ್ನೆಲೆಯಲ್ಲಿ ಈ ಬಲವಂತದ ಮತಾಂತರ ನಿಷೇಧದ ಹೆಸರಿನ ಈ ‘ಕರ್ನಾಟಕ ಧಾರ್ಮಿಕ ಸ್ವಾತಂತ್ರ್ಯ ಹಕ್ಕು ಸಂರಕ್ಷಣಾ ವಿಧೇಯಕ, 2021’ ಕಾಯ್ದೆಯನ್ನು ವಾಪಸ್ ಪಡೆಯಬೇಕು. ರಾಜ್ಯಪಾಲರು ಇದಕ್ಕೆ ಅವಕಾಶವನ್ನು ನೀಡಕೂಡದು” ಎಂದು ಸಿಪಿಐ(ಎಂ) ರಾಜ್ಯ ಸಮ್ಮೇಳನವು ಆಗ್ರಹಿಸಿದೆ.

ಜೊತೆಗೆ, ಬಿಜೆಪಿ-ಸಂಘಪರಿವಾರದ ಹುನ್ನಾರಗಳನ್ನು ವಿರೋಧಿಸಿ ಜನವರಿ 17 ರಿಂದ ರಾಜ್ಯದಾದ್ಯಂತ ಜಿಲ್ಲಾ ಹಾಗೂ ತಾಲ್ಲೂಕು ಕೇಂದ್ರಗಳಲ್ಲಿ ಪ್ರತಿಭಟನೆ ನಡೆಸುವಂತೆ ಸಿಪಿಐ(ಎಂ) ಕರೆ ನೀಡಿದೆ.

ಇದನ್ನೂ ಓದಿ:ಧರ್ಮ ಆಚರಿಸಿ, ದ್ವೇಷ ಭಾಷಣವನ್ನಲ್ಲ: ಉಪರಾಷ್ಟ್ರಪತಿ ವೆಂಕಯ್ಯ ನಾಯ್ಡು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ನೀಟ್ ಪ್ರತಿಭಟನೆ: ಮಧ್ಯಪ್ರದೇಶ ಪೊಲೀಸರು ಧರ್ಮದ ಕಾರಣಕ್ಕೆ ನನ್ನ ಕುಟುಂಬಕ್ಕೆ ಕಿರುಕುಳ ನೀಡುತ್ತಿದ್ದಾರೆ: ಜೆಎನ್‌ಯು ವಿದ್ಯಾರ್ಥಿ ನಾಯಕಿ ಡ್ಯಾನಿಶ್ ಅಲಿ ಆರೋಪ

ದೇಶದ ಶಿಕ್ಷಣ ವ್ಯವಸ್ಥೆಯ ಜವಾಬ್ದಾರಿಯನ್ನು ಪ್ರಶ್ನಿಸಿ ನಡೆದ ನೀಟ್ (NEET) ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಪ್ರತಿಭಟನೆಯಲ್ಲಿ ಸಕ್ರಿಯವಾಗಿ ಭಾಗವಹಿಸಿದ್ದಕ್ಕಾಗಿ, ಮಧ್ಯಪ್ರದೇಶ ಪೊಲೀಸರು ತಮ್ಮ ಕುಟುಂಬಕ್ಕೆ ಕಿರುಕುಳ ನೀಡುತ್ತಿದ್ದಾರೆ ಎಂದು ಜವಾಹರಲಾಲ್ ನೆಹರು ವಿಶ್ವವಿದ್ಯಾಲಯದ...

ಕಾವೇರಿ ಪ್ರತಿಭಟನೆ ವೇಳೆ ಆಕ್ಷೇಪಾರ್ಹ ಹೇಳಿಕೆ : ತಮಿಳುನಾಡಿನ ವಿಪಕ್ಷ ನಾಯಕ ಉದಯನಿಧಿ ಸ್ಟಾಲಿನ್ ಬಂಧನ

ಸೋಮವಾರ (ಆ.3) ತಂಜಾವೂರಿನಲ್ಲಿ ನಡೆದ ಕಾವೇರಿ ಪ್ರತಿಭಟನೆ ಸಂದರ್ಭದಲ್ಲಿ ವಿವಾದಾತ್ಮಕ ಹೇಳಿಕೆ ನೀಡಿದ ಆರೋಪದ ಮೇಲೆ ತಮಿಳುನಾಡಿನ ವಿರೋಧ ಪಕ್ಷದ ನಾಯಕ ಉದಯನಿಧಿ ಸ್ಟಾಲಿನ್ ಅವರನ್ನು ಬಂಧಿಸಲಾಗಿದೆ ಎಂದು ವರದಿಯಾಗಿದೆ. ಉದಯನಿಧಿ ಬಂಧನಕ್ಕೂ...

ಉಪಚುನಾವಣೆ : ಬಿಹಾರದ ಬಂಕಿಪುರದಲ್ಲಿ ಪ್ರಶಾಂತ್ ಕಿಶೋರ್‌ಗೆ ಐತಿಹಾಸಿಕ ಗೆಲುವು; ಇನ್ನೆರಡು ಕ್ಷೇತ್ರಗಳು ಕಾಂಗ್ರೆಸ್-ಬಿಜೆಪಿ ಪಾಲು

ಬಿಹಾರದ ಬಂಕಿಪುರ, ಗುಜರಾತ್‌ನ ಮಂಜಲ್‌ಪುರ ಮತ್ತು ಮಧ್ಯಪ್ರದೇಶದ ದಾಟಿಯಾ ವಿಧಾನಸಭಾ ಕ್ಷೇತ್ರಗಳಿಗೆ ಜುಲೈ 30ರಂದು ನಡೆದ ಉಪಚುನಾವಣೆಯ ಫಲಿತಾಂಶ ಸೋಮವಾರ (ಆ.3) ಹೊರಬಿದ್ದಿದ್ದಿದೆ. ಬಿಜೆಪಿಯ ಭದ್ರಕೋಟೆ ಎನಿಸಿಕೊಂಡಿದ್ದ, ಕಳೆದ 31 ವರ್ಷಗಳಿಂದ ಬಿಜೆಪಿಯೇ...

‘ಪಂಕ್ಚರ್-ತಲಾ ಬನಾನೆ ವಾಲೆಗಳೇ ಹೆಚ್ಚು’: ನೀಟ್ ಅಕ್ರಮಗಳ ವಿರುದ್ಧ ಪ್ರತಿಭಟಿಸಿದವರ ವಿರುದ್ಧ ನಾಲಿಗೆ ಹರಿಬಿಟ್ಟ ಬಿಜೆಪಿ ನಾಯಕ ರಮೇಶ್ ಬಿಧು

ದೆಹಲಿಯ ಜಂತರ್ ಮಂತರ್‌ನಲ್ಲಿ ‘ನೀಟ್’ (NEET) ಪರೀಕ್ಷೆಯ ಅಕ್ರಮಗಳ ವಿರುದ್ಧ ಧ್ವನಿಯೆತ್ತಿದ ಯುವಜನತೆ ಮತ್ತು ವಿದ್ಯಾರ್ಥಿಗಳ ಹೋರಾಟವನ್ನು ದಮನ ಮಾಡಲು ಯತ್ನಿಸುತ್ತಿರುವ ಬಿಜೆಪಿ, ಈಗ ಅವರ ವಿರುದ್ಧವೇ ಅತ್ಯಂತ ಕೀಳುಮಟ್ಟದ ಇಸ್ಲಾಮೋಫೋಬಿಕ್ ಮತ್ತು...

ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಖುಲಾಸೆ : ಇಡೀ ವ್ಯವಸ್ಥೆಯೇ ಬ್ರಿಜ್ ಭೂಷಣ್‌ರನ್ನು ರಕ್ಷಿಸಿತು ಎಂದ ವಿನೇಶ್ ಫೋಗಟ್; ಮೇಲ್ಮನವಿ ಸಲ್ಲಿಸಲು ಮಹಿಳಾ ಕುಸ್ತಿಪಟುಗಳ ನಿರ್ಧಾರ

ಮಹಿಳಾ ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪ ಎದುರಿಸುತ್ತಿದ್ದ ಭಾರತೀಯ ಕುಸ್ತಿ ಫೆಡರೇಶನ್ (WFI) ಮಾಜಿ ಅಧ್ಯಕ್ಷ ಹಾಗೂ ಬಿಜೆಪಿ ಮಾಜಿ ಸಂಸದ ಬ್ರಿಜ್ ಭೂಷಣ್ ಶರಣ್ ಸಿಂಗ್ ಅವರನ್ನು ದೆಹಲಿಯ ರೋಸ್...

ಕರ್ನಾಟಕದಲ್ಲಿ SIR ಬಿಹಾರ-ಬಂಗಾಳಕ್ಕಿಂತ ಭೀಕರ: ಆಗಸ್ಟ್ 4 ರಂದು ಜನಪರ ಸಂಘಟನೆಗಳಿಂದ ಮಹತ್ವದ ಮಾಧ್ಯಮಗೋಷ್ಠಿ

ಬೆಂಗಳೂರು: ಕರ್ನಾಟಕದಲ್ಲಿ ನಡೆಯುತ್ತಿರುವ ಎಸ್‌ಐಆರ್ (SIR) ಪ್ರಕ್ರಿಯೆಯು ಬಿಹಾರ ಮತ್ತು ಪಶ್ಚಿಮ ಬಂಗಾಳ ರಾಜ್ಯಗಳಿಗಿಂತಲೂ ಅತ್ಯಂತ ಭೀಕರ ರೂಪ ಪಡೆದುಕೊಳ್ಳುತ್ತಿದೆ ಎಂದು 'SIR ವಿರೋಧಿ ಜಾತ್ಯತೀತ ಪಕ್ಷಗಳು ಮತ್ತು ಜನಪರ ಸಂಘಟನೆಗಳ ಒಕ್ಕೂಟ'...

“ನೈರ್ಮಲ್ಯ ಕಾರ್ಮಿಕರು ಕೆಲಸ ಬಿಡಲು ಸಾಧ್ಯವಿಲ್ಲ”: ದೇಶಾದ್ಯಂತ ಪ್ರತಿಭಟನೆಗೆ DASAM ಬೆಂಬಲ, ಉದ್ಯೋಗ ಖಾಯಂಗೊಳಿಸಲು ತೀವ್ರ ಒತ್ತಾಯ

ನವದೆಹಲಿ: ಉದ್ಯೋಗ ಕ್ರಮಬದ್ಧಗೊಳಿಸುವಿಕೆ (ಖಾಯಂಗೊಳಿಸುವುದು), ನ್ಯಾಯಯುತ ವೇತನ, ಸಾಮಾಜಿಕ ಭದ್ರತೆ, ಸುರಕ್ಷಿತ ಕೆಲಸದ ವಾತಾವರಣ ಮತ್ತು ಕೆಲಸದ ಸ್ಥಳದಲ್ಲಿ ಮಾನವ ಘನತೆಯನ್ನು ಎತ್ತಿಹಿಡಿಯುವಂತೆ ಒತ್ತಾಯಿಸಿ ದೇಶದ ನಾನಾ ಭಾಗಗಳಲ್ಲಿ ನೈರ್ಮಲ್ಯ ಕಾರ್ಮಿಕರು ನಡೆಸುತ್ತಿರುವ...

ದ್ವೇಷ ಭಾಷಣ ಪ್ರಕರಣ: ಬಿಜೆಪಿ ನಾಯಕರಾದ ಅನುರಾಗ್‌ ಠಾಕೂರ್‌, ಪರ್ವೇಶ್‌ ವರ್ಮಾಗೆ ಕ್ಲೀನ್ ಚೀಟ್: ಪುನರ್ ಪರಿಶೀಲನಾ ಅರ್ಜಿ ವಜಾಗೊಳಿಸಿದ ಸುಪ್ರೀಂ

ನವದೆಹಲಿ: 2020ರ ದೆಹಲಿಯಲ್ಲಿ ನಡೆದ ಪೌರತ್ವ ತಿದ್ದುಪಡಿ ಕಾಯ್ದೆ (ಸಿಎಎ) ವಿರೋಧಿ ಪ್ರತಿಭಟನೆಗಳ ಸಂದರ್ಭದಲ್ಲಿ ಉದ್ರೇಕಕಾರಿ ಹಾಗೂ ದ್ವೇಷಪೂರಿತ ಭಾಷಣ ಮಾಡಿದ ಆರೋಪ ಹೊತ್ತಿದ್ದ ಬಿಜೆಪಿ ನಾಯಕರಾದ ಅನುರಾಗ್ ಠಾಕೂರ್ ಮತ್ತು ಪರ್ವೇಶ್‌...

ಕರ್ನಾಟಕ ಸಚಿವ ಸಂಪುಟ ವಿಸ್ತರಣೆ: ನೂತನ ಸಚಿವರ ಪಟ್ಟಿಗೆ ವರಿಷ್ಠರ ಅನುಮೋದನೆ: ಇಂದು ಸಂಜೆ 4:05 ಕ್ಕೆ ಪ್ರಮಾಣ ವಚನ

ಬಹುನಿರೀಕ್ಷಿತ ಕರ್ನಾಟಕ ರಾಜ್ಯ ಸಚಿವ ಸಂಪುಟ ವಿಸ್ತರಣೆಗೆ ಕೊನೆಗೂ ಮುಹೂರ್ತ ನಿಗದಿಯಾಗಿದ್ದು, ಕಾಂಗ್ರೆಸ್ ಹೈಕಮಾಂಡ್ ನೂತನ ಸಚಿವರ ಪಟ್ಟಿಗೆ ಅಧಿಕೃತ ಅನುಮೋದನೆ ನೀಡಿದೆ. ಇದರೊಂದಿಗೆ ಕಳೆದ ಕೆಲವು ದಿನಗಳಿಂದ ರಾಜ್ಯ ರಾಜಕಾರಣದಲ್ಲಿ ತೀವ್ರ...

ಮಹಿಳಾ ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ಪ್ರಕರಣ : WFI ಮಾಜಿ ಅಧ್ಯಕ್ಷ ಬ್ರಿಜ್ ಭೂಷಣ್‌ ಸಿಂಗ್‌ ಖುಲಾಸೆ

ದೆಹಲಿ ನ್ಯಾಯಾಲಯವು ಸೋಮವಾರ (ಆ.3) ಭಾರತೀಯ ಕುಸ್ತಿ ಫೆಡರೇಶನ್ (WFI) ಮಾಜಿ ಅಧ್ಯಕ್ಷ ಮತ್ತು ಬಿಜೆಪಿ ನಾಯಕ ಬ್ರಿಜ್ ಭೂಷಣ್ ಸಿಂಗ್ ಅವರನ್ನು ಮಹಿಳಾ ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಪ್ರಕರಣದಿಂದ...