Homeಕರ್ನಾಟಕಹುಲಿಹೈದರ್‌‌ ಗ್ರಾಮದ ಜಾತಿ ಹಿಂಸಾಚಾರ ಖಂಡಿಸಿ ಸಿಪಿಐ(ಎಂಎಲ್‌) ಪ್ರತಿಭಟನೆ

ಹುಲಿಹೈದರ್‌‌ ಗ್ರಾಮದ ಜಾತಿ ಹಿಂಸಾಚಾರ ಖಂಡಿಸಿ ಸಿಪಿಐ(ಎಂಎಲ್‌) ಪ್ರತಿಭಟನೆ

ಸಿಪಿಐಎಂಎಲ್ ಲಿಬರೇಷನ್‌ನ ಕೊಪ್ಪಳ ಜಿಲ್ಲಾ ಕಾರ್ಯದರ್ಶಿ ಸಣ್ಣ ಹನುಮಂತಪ್ಪ ಅವರ ಬಿಡುಗಡೆಗೆ ಆಗ್ರಹಿಸಿ ವಿವಿಧ ಜಿಲ್ಲೆಗಳಲ್ಲಿ ಪ್ರತಿಭಟನೆ ನಡೆಸಲಾಗಿದೆ.

- Advertisement -
- Advertisement -

ಕೊಪ್ಪಳ ಜಿಲ್ಲೆ ಹುಲಿಹೈದರ್‌ನಲ್ಲಿ ನಡೆದ ಹಿಂಸಾಚಾರ, ಕೊಲೆ ಘಟನೆ ಖಂಡಿಸಿ ಹಾಗೂ ಹೋರಾಟಗಾರ ಸಣ್ಣ ಹನುಮಂತಪ್ಪ ಅವರನ್ನು ತಕ್ಷಣ ಬಿಡುಗಡೆಗೊಳಿಸಲು ಆಗ್ರಹಿಸಿ ರಾಜ್ಯಾದ್ಯಂತ ಸಿಪಿಐ(ಎಂಎಲ್) ಲಿಬರೇಷನ್ ಪ್ರತಿಭಟನೆ ನಡೆಸಿದೆ.

ಕೊಪ್ಪಳ ಜಿಲ್ಲೆ ಕನಕಗಿರಿ ತಾಲೂಕಿನ ಹುಲಿಹೈದರ್ ಗ್ರಾಮದಲ್ಲಿ ಆ.11ರಂದು ಹಿಂಸಾಚಾರ ನಡೆದು ಇಬ್ಬರು ಕೊಲೆಯಾಗಿದ್ದಾರೆ. ಯುವಕನೊಬ್ಬ ಜೀವನ್ಮರಣದ ಸ್ಥಿತಿಯಲ್ಲಿದ್ದು, ಈ ದುಷ್ಕೃತ್ಯಕ್ಕೆ ಕಾರಣರಾದ ತಪ್ಪಿತಸ್ಥರನ್ನು ಬಂಧಿಸಬೇಕು. ಪ್ರಕರಣವನ್ನು ಸಮಗ್ರ ನ್ಯಾಯಾಂಗ ತನಿಖೆಗೆ ಒಳಪಡಿಸಬೇಕೆಂದು ಆಗ್ರಹಿಸಿ, ಸಿಪಿಐಎಂಎಲ್ ಲಿಬರೇಷನ್‌ ವತಿಯಿಂದ ಪ್ರತಿಭಟನೆ ನಡೆಸಲಾಗಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಬೆಂಗಳೂರು, ಮೈಸೂರು, ಕೊಪ್ಪಳ ಜಿಲ್ಲೆ ಗಂಗಾವತಿ, ಕನಕಗಿರಿ, ವಿಜಯನಗರ ಜಿಲ್ಲೆ ಹರಪನಹಳ್ಳಿ, ಕೋಲಾರ, ರಾಯಚೂರು ಜಿಲ್ಲೆ ಸಿಂಧನೂರು ಪ್ರತಿಭಟನೆ ನಡೆಸಿ ಜಿಲ್ಲಾಧಿಕಾರಿ,‌ ತಹಸೀಲ್ದಾರ್ ಮೂಲಕ ಮುಖ್ಯಮಂತ್ರಿಗಳಿಗೆ ಹಾಗೂ ಗೃಹ ಸಚಿವರಿಗೆ ಮನವಿಯನ್ನು ರವಾನಿಸಲಾಗಿದೆ.

ಸಿಪಿಐಎಂಎಲ್ ಲಿಬರೇಷನ್ ಕೊಪ್ಪಳ ಜಿಲ್ಲಾ ಕಾರ್ಯದರ್ಶಿ ಸಣ್ಣ ಹನುಮಂತಪ್ಪ ಮತ್ತು ಇತರರ ವಿರುದ್ಧ ದಾಖಲಿಸಿರುವ ಸುಳ್ಳು ಪ್ರಕರಣವನ್ನು ಹಿಂಪಡೆದು ತಕ್ಷಣವೇ ಬಿಡುಗಡೆಗೊಳಿಸಬೇಕು. ಇಡೀ ಗಲಭೆ ಪ್ರಕರಣಕ್ಕೆ ಕಾರಣಕರ್ತರಾದ ಹನುಮೇಶ್ ನಾಯಕ ಮತ್ತು ರಮೇಶ ನಾಯಕರನ್ನು ತಕ್ಷಣವೇ ಬಂಧಿಸಿ ಸೂಕ್ತ ತನಿಖೆ ನಡೆಸಬೇಕು ಎಂದು ಆಗ್ರಹಿಸಲಾಗಿದೆ.

ಹುಲಿಹೈದರ್ ಗ್ರಾಮದಲ್ಲಿ ಶಾಂತಿ ಮತ್ತು ಸಾಮರಸ್ಯವನ್ನು ಖಚಿತಪಡಿಸಲು ಶಾಂತಿ ಸಭೆಯನ್ನು ಕರೆಯಬೇಕು, ಗಲಭೆ ಪ್ರಕರಣದಲ್ಲಿ ಕೊಲೆಗೀಡಾದ ಕುಟುಂಬಗಳಿಗೆ ತಲಾ 50 ಲಕ್ಷ ರೂಪಾಯಿ ಪರಿಹಾರ ಮತ್ತು ಕುಟುಂಬದ ಒಬ್ಬರಿಗೆ ಸರ್ಕಾರಿ ಉದ್ಯೋಗವನ್ನು ನೀಡಬೇಕು. ಈ ಪ್ರಕರಣದ ತನಿಖೆಯನ್ನು ನ್ಯಾಯಾಂಗದ ಮೇಲ್ವಿಚಾರಣೆಯಲ್ಲಿ ನಡೆಸಬೇಕು. ಮುಂದೆ ಇಂತಹ ಪ್ರಕರಣಗಳು ನಡೆಯದಂತೆ ಸೂಕ್ತ ಕಾನೂನು ಕ್ರಮಗಳನ್ನು ಕೈಗೊಳ್ಳಬೇಕು. ಕರ್ತವ್ಯಲೋಪವೆಸಗಿದ ಪೊಲೀಸ್ ಇಲಾಖೆ ಅಧಿಕಾರಿಗಳನ್ನು ಕೂಡಲೇ ಅಮಾನತುಗೊಳಿಸಿ, ವಿಚಾರಣೆಗೆ ಒಳಪಡಿಸಬೇಕು ಎಂದು ಸರ್ಕಾರವನ್ನು ಒತ್ತಾಯಿಸಲಾಯಿತು.

ಏನಿದು ಘಟನೆ?

ಕೊಪ್ಪಳ ಜಿಲ್ಲೆಯ ಕನಕಗಿರಿ ತಾಲ್ಲೂಕಿನ ಹುಲಿಹೈದರ್ ಗ್ರಾಮದಲ್ಲಿ ಜಾತಿ ಘರ್ಷಣೆ ನಡೆದಿತ್ತು. ಎರಡು ಗುಂಪುಗಳ ನಡುವಿನ ಮಾರಾಮಾರಿಗೆ ಇಬ್ಬರು ಮೃತಪಟ್ಟಿದ್ದು, ಅನೇಕರು ಗಾಯಗೊಂಡಿದ್ದಾರೆ.

ಗ್ರಾಮದಲ್ಲಿ ಗ್ರಾಮಪಂಚಾಯ್ತಿ ಪಕ್ಕದ ಜಾಗದಲ್ಲಿ ವಾಲ್ಮೀಕಿ ಪ್ರತಿಮೆ ಇಟ್ಟು ಬೋರ್ಡ್ ಹಾಕಲು ನಾಯಕ (ಎಸ್‌ಟಿ) ಸಮುದಾಯದವರು ಮುಂದಾಗಿದ್ದರು. ಆದರೆ ಇದಕ್ಕೆ ಅದೇ ಗ್ರಾಮದ ದಲಿತ ಮುಖಂಡ ಸಣ್ಣ ಹನುಮಂತರವರು ವಿರೋಧ ವ್ಯಕ್ತಪಡಿಸಿದ್ದರು. ಗ್ರಾಮದಲ್ಲಿ ಜಾತಿಗೊಂದು ಪ್ರತಿಮೆ ಮಾಡಲು ಬದಲು ಬುದ್ಧ, ಬಸವ ಮತ್ತು ಅಂಬೇಡ್ಕರ್‌ರವರ ಪ್ರತಿಮೆ ಇಟ್ಟು ವಿಶ್ವ ಮಾನವ ಸಂದೇಶ ಸಾರೋಣ ಎಂದು ಕೊಪ್ಪಳ ಜಿಲ್ಲಾಧಿಕಾರಿಗಳಿಗೆ ಪತ್ರ ಬರೆದಿದ್ದರು. ಇದಕ್ಕೆ ಅಲ್ಲಿನ ಮುಸ್ಲಿಂ ಸಮುದಾಯದವರು ಸಹ ಬೆಂಬಲಿಸಿದ್ದರು.

ಇದನ್ನೂ ಓದಿರಿ: ಸಂತ ಸೇವಾಲಾಲ್‌ರ ಜನ್ಮಸ್ಥಳದಲ್ಲಿ ಆರ್‌ಎಸ್‌ಎಸ್‌ ಶಿಬಿರ ಆಯೋಜನೆ: ಬಂಜಾರ ಮುಖಂಡರ ಆಕ್ರೋಶ

ಇದು ಅಲ್ಲಿನ ನಾಯಕ ಸಮುದಾಯಕ್ಕೆ ಸಿಟ್ಟು ತಂದಿತ್ತು. ಅವರು ದಲಿತ ಮುಖಂಡ ಸಿಪಿಐ -ಎಂಎಲ್‌ ಲಿಬರೇಷನ್ ಪಕ್ಷದಲ್ಲಿ ಕೆಲಸ ಮಾಡುತ್ತಿರುವ ಸಣ್ಣ ಹನುಮಂತ ಮೇಲೆ ಸಿಡಿಮಿಡಿಗೊಂಡಿದ್ದರು ಎನ್ನಲಾಗಿದೆ. ಅದೇ ಸಂದರ್ಭದಲ್ಲಿ ವಾಲ್ಮೀಕಿ ಸಮುದಾಯದ ಯುವಕನೊಬ್ಬ ಮುಸ್ಲಿಂ ಯುವತಿಯನ್ನು ಪ್ರೀತಿಸಿ ಮದುವೆಯಾಗಿ ಗ್ರಾಮ ತೊರೆದಿದ್ದರು. ಈ ವಿಚಾರದಲ್ಲಿ ನಾಯಕ ಸಮುದಾಯದವರು ಮುಸ್ಲಿಮರ ಮೇಲೆ ಕೋಪಗೊಂಡಿದ್ದರು ಎನ್ನಲಾಗಿದೆ.

ಮೊಹರಂ ಹಬ್ಬದ ಮೂರನೇ ದಿನದಂದು ಹೂ ತರಲು ಹೋಗಿದ್ದ ಭಾಷಾ ಸಾಬ್ ಎಂಬ ಮುಸ್ಲಿಂ ಯುವಕನೊಂದಿಗೆ ಜಗಳವಾಗಿ ಹೊಡೆದಾಟವಾಗಿತ್ತು. ವಾಲ್ಮೀಕಿ ಸಮುದಾಯದವರು ಹಲವು ಮುಸ್ಲಿಂ ಯುವಕರಿಗೆ ಹಲ್ಲೆ ಮಾಡಿದ್ದರು. ಇದರಿಂದ ರೊಚ್ಚಿಗೆದ್ದ ಮುಸ್ಲಿಮರು ದಲಿತರ ಜೊತೆಗೂಡಿ ಹೊಡೆದಾಟಕ್ಕೆ ಧುಮುಕಿದರು. ಇದರಿಂದಾಗಿ ಭಾಷಾ ಸಾಬ್ (27) ಮತ್ತು ನಾಯಕ ಸಮುದಾಯದ ಯಂಕಪ್ಪ ತಳವಾರ (60) ಹತ್ಯೆಯಾದರು. 10ಕ್ಕೂ ಹೆಚ್ಚು ಜನರಿಗೆ ಪೆಟ್ಟು ತಗುಲಿದೆ. ದಲಿತ ಸಮುದಾಯದ ಧರ್ಮಣ್ಣ ಹರಿಜನ ಎಂಬ ಯುವಕನಿಗೆ ಗಂಭೀರ ಗಾಯಗಳಾಗಿದ್ದು ಹೆಚ್ಚಿನ ಚಿಕಿತ್ಸೆಗಾಗಿ ಹುಬ್ಬಳ್ಳಿ ಆಸ್ಪತ್ರೆಗೆ ಸೇರಿಸಲಾಗಿದೆ.

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಮಣಿಪುರ ಬೆತ್ತಲೆ ಮೆರವಣಿಗೆ: ಗಲಭೆಕೋರರ ಗುಂಪಿಗೆ ಮಹಿಳೆಯರನ್ನು ಒಪ್ಪಿಸಿದ್ದ ಪೊಲೀಸರು, ಚಾರ್ಜ್‌ಶೀಟ್‌ನಲ್ಲಿ ಮಹತ್ವದ ಅಂಶಗಳು...

0
ಮಣಿಪುರ ಹಿಂಸಾಚಾರದ ಸಮಯದಲ್ಲಿ ನಡೆದಿದ್ದ ಇಬ್ಬರು ಮಹಿಳೆಯರ ಬೆತ್ತಲೆ ಮೆರವಣಿಗೆ, ಸಾಮೂಹಿಕ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿ ಸಿಬಿಐ ಚಾರ್ಜ್‌ಶೀಟ್‌ನಲ್ಲಿ ಮಹತ್ವದ ಅಂಶಗಳ ಉಲ್ಲೇಖವಾಗಿದ್ದು, ಮಹಿಳೆಯರನ್ನು ಗಲಭೆಕೋರರ ಗುಂಪಿಗೆ ಪೊಲೀಸರೇ ಒಪ್ಪಿಸಿದ್ದಾರೆ ಎಂದು ತಿಳಿಸಿದೆ. ಪೊಲೀಸರ...