Homeಕರ್ನಾಟಕಹುಲಿಹೈದರ್‌‌ ಗ್ರಾಮದ ಜಾತಿ ಹಿಂಸಾಚಾರ ಖಂಡಿಸಿ ಸಿಪಿಐ(ಎಂಎಲ್‌) ಪ್ರತಿಭಟನೆ

ಹುಲಿಹೈದರ್‌‌ ಗ್ರಾಮದ ಜಾತಿ ಹಿಂಸಾಚಾರ ಖಂಡಿಸಿ ಸಿಪಿಐ(ಎಂಎಲ್‌) ಪ್ರತಿಭಟನೆ

ಸಿಪಿಐಎಂಎಲ್ ಲಿಬರೇಷನ್‌ನ ಕೊಪ್ಪಳ ಜಿಲ್ಲಾ ಕಾರ್ಯದರ್ಶಿ ಸಣ್ಣ ಹನುಮಂತಪ್ಪ ಅವರ ಬಿಡುಗಡೆಗೆ ಆಗ್ರಹಿಸಿ ವಿವಿಧ ಜಿಲ್ಲೆಗಳಲ್ಲಿ ಪ್ರತಿಭಟನೆ ನಡೆಸಲಾಗಿದೆ.

- Advertisement -
- Advertisement -

ಕೊಪ್ಪಳ ಜಿಲ್ಲೆ ಹುಲಿಹೈದರ್‌ನಲ್ಲಿ ನಡೆದ ಹಿಂಸಾಚಾರ, ಕೊಲೆ ಘಟನೆ ಖಂಡಿಸಿ ಹಾಗೂ ಹೋರಾಟಗಾರ ಸಣ್ಣ ಹನುಮಂತಪ್ಪ ಅವರನ್ನು ತಕ್ಷಣ ಬಿಡುಗಡೆಗೊಳಿಸಲು ಆಗ್ರಹಿಸಿ ರಾಜ್ಯಾದ್ಯಂತ ಸಿಪಿಐ(ಎಂಎಲ್) ಲಿಬರೇಷನ್ ಪ್ರತಿಭಟನೆ ನಡೆಸಿದೆ.

ಕೊಪ್ಪಳ ಜಿಲ್ಲೆ ಕನಕಗಿರಿ ತಾಲೂಕಿನ ಹುಲಿಹೈದರ್ ಗ್ರಾಮದಲ್ಲಿ ಆ.11ರಂದು ಹಿಂಸಾಚಾರ ನಡೆದು ಇಬ್ಬರು ಕೊಲೆಯಾಗಿದ್ದಾರೆ. ಯುವಕನೊಬ್ಬ ಜೀವನ್ಮರಣದ ಸ್ಥಿತಿಯಲ್ಲಿದ್ದು, ಈ ದುಷ್ಕೃತ್ಯಕ್ಕೆ ಕಾರಣರಾದ ತಪ್ಪಿತಸ್ಥರನ್ನು ಬಂಧಿಸಬೇಕು. ಪ್ರಕರಣವನ್ನು ಸಮಗ್ರ ನ್ಯಾಯಾಂಗ ತನಿಖೆಗೆ ಒಳಪಡಿಸಬೇಕೆಂದು ಆಗ್ರಹಿಸಿ, ಸಿಪಿಐಎಂಎಲ್ ಲಿಬರೇಷನ್‌ ವತಿಯಿಂದ ಪ್ರತಿಭಟನೆ ನಡೆಸಲಾಗಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಬೆಂಗಳೂರು, ಮೈಸೂರು, ಕೊಪ್ಪಳ ಜಿಲ್ಲೆ ಗಂಗಾವತಿ, ಕನಕಗಿರಿ, ವಿಜಯನಗರ ಜಿಲ್ಲೆ ಹರಪನಹಳ್ಳಿ, ಕೋಲಾರ, ರಾಯಚೂರು ಜಿಲ್ಲೆ ಸಿಂಧನೂರು ಪ್ರತಿಭಟನೆ ನಡೆಸಿ ಜಿಲ್ಲಾಧಿಕಾರಿ,‌ ತಹಸೀಲ್ದಾರ್ ಮೂಲಕ ಮುಖ್ಯಮಂತ್ರಿಗಳಿಗೆ ಹಾಗೂ ಗೃಹ ಸಚಿವರಿಗೆ ಮನವಿಯನ್ನು ರವಾನಿಸಲಾಗಿದೆ.

ಸಿಪಿಐಎಂಎಲ್ ಲಿಬರೇಷನ್ ಕೊಪ್ಪಳ ಜಿಲ್ಲಾ ಕಾರ್ಯದರ್ಶಿ ಸಣ್ಣ ಹನುಮಂತಪ್ಪ ಮತ್ತು ಇತರರ ವಿರುದ್ಧ ದಾಖಲಿಸಿರುವ ಸುಳ್ಳು ಪ್ರಕರಣವನ್ನು ಹಿಂಪಡೆದು ತಕ್ಷಣವೇ ಬಿಡುಗಡೆಗೊಳಿಸಬೇಕು. ಇಡೀ ಗಲಭೆ ಪ್ರಕರಣಕ್ಕೆ ಕಾರಣಕರ್ತರಾದ ಹನುಮೇಶ್ ನಾಯಕ ಮತ್ತು ರಮೇಶ ನಾಯಕರನ್ನು ತಕ್ಷಣವೇ ಬಂಧಿಸಿ ಸೂಕ್ತ ತನಿಖೆ ನಡೆಸಬೇಕು ಎಂದು ಆಗ್ರಹಿಸಲಾಗಿದೆ.

ಹುಲಿಹೈದರ್ ಗ್ರಾಮದಲ್ಲಿ ಶಾಂತಿ ಮತ್ತು ಸಾಮರಸ್ಯವನ್ನು ಖಚಿತಪಡಿಸಲು ಶಾಂತಿ ಸಭೆಯನ್ನು ಕರೆಯಬೇಕು, ಗಲಭೆ ಪ್ರಕರಣದಲ್ಲಿ ಕೊಲೆಗೀಡಾದ ಕುಟುಂಬಗಳಿಗೆ ತಲಾ 50 ಲಕ್ಷ ರೂಪಾಯಿ ಪರಿಹಾರ ಮತ್ತು ಕುಟುಂಬದ ಒಬ್ಬರಿಗೆ ಸರ್ಕಾರಿ ಉದ್ಯೋಗವನ್ನು ನೀಡಬೇಕು. ಈ ಪ್ರಕರಣದ ತನಿಖೆಯನ್ನು ನ್ಯಾಯಾಂಗದ ಮೇಲ್ವಿಚಾರಣೆಯಲ್ಲಿ ನಡೆಸಬೇಕು. ಮುಂದೆ ಇಂತಹ ಪ್ರಕರಣಗಳು ನಡೆಯದಂತೆ ಸೂಕ್ತ ಕಾನೂನು ಕ್ರಮಗಳನ್ನು ಕೈಗೊಳ್ಳಬೇಕು. ಕರ್ತವ್ಯಲೋಪವೆಸಗಿದ ಪೊಲೀಸ್ ಇಲಾಖೆ ಅಧಿಕಾರಿಗಳನ್ನು ಕೂಡಲೇ ಅಮಾನತುಗೊಳಿಸಿ, ವಿಚಾರಣೆಗೆ ಒಳಪಡಿಸಬೇಕು ಎಂದು ಸರ್ಕಾರವನ್ನು ಒತ್ತಾಯಿಸಲಾಯಿತು.

ಏನಿದು ಘಟನೆ?

ಕೊಪ್ಪಳ ಜಿಲ್ಲೆಯ ಕನಕಗಿರಿ ತಾಲ್ಲೂಕಿನ ಹುಲಿಹೈದರ್ ಗ್ರಾಮದಲ್ಲಿ ಜಾತಿ ಘರ್ಷಣೆ ನಡೆದಿತ್ತು. ಎರಡು ಗುಂಪುಗಳ ನಡುವಿನ ಮಾರಾಮಾರಿಗೆ ಇಬ್ಬರು ಮೃತಪಟ್ಟಿದ್ದು, ಅನೇಕರು ಗಾಯಗೊಂಡಿದ್ದಾರೆ.

ಗ್ರಾಮದಲ್ಲಿ ಗ್ರಾಮಪಂಚಾಯ್ತಿ ಪಕ್ಕದ ಜಾಗದಲ್ಲಿ ವಾಲ್ಮೀಕಿ ಪ್ರತಿಮೆ ಇಟ್ಟು ಬೋರ್ಡ್ ಹಾಕಲು ನಾಯಕ (ಎಸ್‌ಟಿ) ಸಮುದಾಯದವರು ಮುಂದಾಗಿದ್ದರು. ಆದರೆ ಇದಕ್ಕೆ ಅದೇ ಗ್ರಾಮದ ದಲಿತ ಮುಖಂಡ ಸಣ್ಣ ಹನುಮಂತರವರು ವಿರೋಧ ವ್ಯಕ್ತಪಡಿಸಿದ್ದರು. ಗ್ರಾಮದಲ್ಲಿ ಜಾತಿಗೊಂದು ಪ್ರತಿಮೆ ಮಾಡಲು ಬದಲು ಬುದ್ಧ, ಬಸವ ಮತ್ತು ಅಂಬೇಡ್ಕರ್‌ರವರ ಪ್ರತಿಮೆ ಇಟ್ಟು ವಿಶ್ವ ಮಾನವ ಸಂದೇಶ ಸಾರೋಣ ಎಂದು ಕೊಪ್ಪಳ ಜಿಲ್ಲಾಧಿಕಾರಿಗಳಿಗೆ ಪತ್ರ ಬರೆದಿದ್ದರು. ಇದಕ್ಕೆ ಅಲ್ಲಿನ ಮುಸ್ಲಿಂ ಸಮುದಾಯದವರು ಸಹ ಬೆಂಬಲಿಸಿದ್ದರು.

ಇದನ್ನೂ ಓದಿರಿ: ಸಂತ ಸೇವಾಲಾಲ್‌ರ ಜನ್ಮಸ್ಥಳದಲ್ಲಿ ಆರ್‌ಎಸ್‌ಎಸ್‌ ಶಿಬಿರ ಆಯೋಜನೆ: ಬಂಜಾರ ಮುಖಂಡರ ಆಕ್ರೋಶ

ಇದು ಅಲ್ಲಿನ ನಾಯಕ ಸಮುದಾಯಕ್ಕೆ ಸಿಟ್ಟು ತಂದಿತ್ತು. ಅವರು ದಲಿತ ಮುಖಂಡ ಸಿಪಿಐ -ಎಂಎಲ್‌ ಲಿಬರೇಷನ್ ಪಕ್ಷದಲ್ಲಿ ಕೆಲಸ ಮಾಡುತ್ತಿರುವ ಸಣ್ಣ ಹನುಮಂತ ಮೇಲೆ ಸಿಡಿಮಿಡಿಗೊಂಡಿದ್ದರು ಎನ್ನಲಾಗಿದೆ. ಅದೇ ಸಂದರ್ಭದಲ್ಲಿ ವಾಲ್ಮೀಕಿ ಸಮುದಾಯದ ಯುವಕನೊಬ್ಬ ಮುಸ್ಲಿಂ ಯುವತಿಯನ್ನು ಪ್ರೀತಿಸಿ ಮದುವೆಯಾಗಿ ಗ್ರಾಮ ತೊರೆದಿದ್ದರು. ಈ ವಿಚಾರದಲ್ಲಿ ನಾಯಕ ಸಮುದಾಯದವರು ಮುಸ್ಲಿಮರ ಮೇಲೆ ಕೋಪಗೊಂಡಿದ್ದರು ಎನ್ನಲಾಗಿದೆ.

ಮೊಹರಂ ಹಬ್ಬದ ಮೂರನೇ ದಿನದಂದು ಹೂ ತರಲು ಹೋಗಿದ್ದ ಭಾಷಾ ಸಾಬ್ ಎಂಬ ಮುಸ್ಲಿಂ ಯುವಕನೊಂದಿಗೆ ಜಗಳವಾಗಿ ಹೊಡೆದಾಟವಾಗಿತ್ತು. ವಾಲ್ಮೀಕಿ ಸಮುದಾಯದವರು ಹಲವು ಮುಸ್ಲಿಂ ಯುವಕರಿಗೆ ಹಲ್ಲೆ ಮಾಡಿದ್ದರು. ಇದರಿಂದ ರೊಚ್ಚಿಗೆದ್ದ ಮುಸ್ಲಿಮರು ದಲಿತರ ಜೊತೆಗೂಡಿ ಹೊಡೆದಾಟಕ್ಕೆ ಧುಮುಕಿದರು. ಇದರಿಂದಾಗಿ ಭಾಷಾ ಸಾಬ್ (27) ಮತ್ತು ನಾಯಕ ಸಮುದಾಯದ ಯಂಕಪ್ಪ ತಳವಾರ (60) ಹತ್ಯೆಯಾದರು. 10ಕ್ಕೂ ಹೆಚ್ಚು ಜನರಿಗೆ ಪೆಟ್ಟು ತಗುಲಿದೆ. ದಲಿತ ಸಮುದಾಯದ ಧರ್ಮಣ್ಣ ಹರಿಜನ ಎಂಬ ಯುವಕನಿಗೆ ಗಂಭೀರ ಗಾಯಗಳಾಗಿದ್ದು ಹೆಚ್ಚಿನ ಚಿಕಿತ್ಸೆಗಾಗಿ ಹುಬ್ಬಳ್ಳಿ ಆಸ್ಪತ್ರೆಗೆ ಸೇರಿಸಲಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜಂತರ್ ಮಂತರ್ ಉಪವಾಸ ಸತ್ಯಾಗ್ರಹ ಸ್ಥಳಕ್ಕೆ ಕೇಜ್ರಿವಾಲ್ ಭೇಟಿ

ದೇಶಾದ್ಯಂತ ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿರುವ ನೀಟ್ (NEET) ಪರೀಕ್ಷಾ ಅಕ್ರಮ ಹಾಗೂ ಪ್ರಶ್ನೆ ಪತ್ರಿಕೆ ಸೋರಿಕೆ ಖಂಡಿಸಿ ಜಂತರ್ ಮಂತರ್‌ನಲ್ಲಿ ಆಮರಣಾಂತ ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ಖ್ಯಾತ ಶಿಕ್ಷಣ ತಜ್ಞ ಹಾಗೂ ಪರಿಸರ...

E20 ಪೆಟ್ರೋಲ್ ಪ್ರಕರಣ : ‘ಗ್ರ್ಯಾಂಡ್ ವಿಟಾರಾ’ ಕಾರು ಬದಲಾಯಿಸಿ ಕೊಡಲು ಮಾರುತಿ ಸುಝುಕಿಗೆ ಗ್ರಾಹಕ ನ್ಯಾಯಾಲಯ ಆದೇಶ

ಛತ್ತೀಸ್‌ಗಢದ ರಾಯ್‌ಪುರದ ಜಿಲ್ಲಾ ಗ್ರಾಹಕ ವಿವಾದಗಳ ಪರಿಹಾರ ಆಯೋಗವು (ಡಿಸಿಡಿಆರ್‌ಸಿ), E20 ಇಂಧನ (ಪೆಟ್ರೋಲ್) ಬಳಕೆಯಿಂದಾಗಿ ಕಾರು ಕೆಟ್ಟುಹೋಗಿದೆ ಎಂದು ಆರೋಪಿಸಿದ ವ್ಯಕ್ತಿಗೆ ಹೊಸ 'ಗ್ರಾಂಡ್ ವಿಟಾರಾ' ಕಾರನ್ನು ನೀಡುವಂತೆ ಕಾರು ತಯಾರಿಕಾ...

ಸಿಜೆಪಿ ಶಾಂತಿಯುತ ಪ್ರತಿಭಟನೆಗೆ ನಿರಂತರ ಪೊಲೀಸ್ ಕಣ್ಗಾವಲು ಪ್ರಶ್ನಿಸಿ ದೆಹಲಿ ಹೈಕೋರ್ಟ್‌ಗೆ ಅರ್ಜಿ

ರಾಷ್ಟ್ರ ರಾಜಧಾನಿ ದೆಹಲಿಯ ಜಂತರ್ ಮಂತರ್‌ನಲ್ಲಿ ಜಿರಳೆ ಜನತಾ ಪಕ್ಷ (ಸಿಜೆಪಿ) ಆಯೋಜಿಸಿರುವ ಶಾಂತಿಯುತ ಧರಣಿ ಮತ್ತು ಉಪವಾಸ ಸತ್ಯಾಗ್ರಹದಲ್ಲಿ ಭಾಗವಹಿಸುವ ನಾಗರಿಕರ ಮೇಲೆ ದೆಹಲಿ ಪೊಲೀಸರು ನಿರಂತರ ಮತ್ತು ವ್ಯಾಪಕ ಕಣ್ಗಾವಲು...

IAS ಆಗುವ ಮುನ್ನ ‘ಪರಿಪೂರ್ಣ ತಾಯಿ’ಯಾಗಿ ಎಂದ ರಾಜ್ಯಪಾಲರ ಸಲಹೆ ಪುರುಷ ಪ್ರಾಧ್ಯಾನ್ಯತೆಯ ಮುಂದುವರೆದ ಆಚರಣೆ ಅಲ್ಲವೆ?

ಇತ್ತೀಚೆಗೆ ಉತ್ತರ ಪ್ರದೇಶದ ರಾಜ್ಯಪಾಲರಾದ ಆನಂದಿಬೆನ್ ಪಟೇಲ್ ಅವರು, "ಮಹಿಳೆಯರು IAS ಅಧಿಕಾರಿ ಅಥವಾ ಶಿಕ್ಷಕಿಯಾಗುವ ಕನಸು ಕಾಣುವ ಮೊದಲು 'ಪರಿಣಿತ ತಾಯಿ' ಆಗುವುದನ್ನು ಕಲಿಯಬೇಕು ಎಂದು ಸಲಹೆ ನೀಡಿದ್ದರು. ಕಾನ್ಪುರದ ಛತ್ರಪತಿ...

ಹಿಂದಿನ ಮದುವೆ, ಮಗು ವಿಚಾರ ಮುಚ್ಚಿಟ್ಟಿದ್ದಕ್ಕೆ ಸಹೋದರನೊಂದಿಗಿನ ಸಂಬಂಧ ಮುರಿದುಕೊಂಡಿದ್ದ ಕಾನೂನು ವಿದ್ಯಾರ್ಥಿನಿಯನ್ನು ಇರಿದು ಕೊಂದ ತಮ್ಮ

ಬೆಂಗಳೂರು: ಮೊದಲ ಮದುವೆ ಹಾಗೂ ಮಗುವಿದ್ದ ವಿಷಯವನ್ನು ಮುಚ್ಚಿಟ್ಟು ವಂಚಿಸಿದ್ದ ಪ್ರಿಯಕರನೊಂದಿಗಿನ ಸಂಬಂಧವನ್ನು ಮುರಿದುಕೊಂಡ ಕಾರಣಕ್ಕೆ, ಆತನ ಸಹೋದರನಿಂದಲೇ ಚಾಕು ಇರಿತಕ್ಕೊಳಗಾಗಿದ್ದ ಕಾನೂನು ವಿದ್ಯಾರ್ಥಿನಿಯೊಬ್ಬಳು ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿರುವ ಘಟನೆ ಸಿಲಿಕಾನ್ ಸಿಟಿಯಲ್ಲಿ...

ಮಕ್ಕಳ ಕ್ಯಾನ್ಸರ್ ಆಸ್ಪತ್ರೆಯ ಮೇಲೆ ಅಮೆರಿಕ ದಾಳಿಗೆ ಇರಾನ್‌ನಿಂದ ಪ್ರತೀಕಾರ

ಕಳೆದ ಗುರುವಾರ (ಜು.16) ಖುಜೆಸ್ತಾನ್ ಪ್ರಾಂತ್ಯದಲ್ಲಿರುವ ಮಕ್ಕಳ ಕ್ಯಾನ್ಸರ್ ಆಸ್ಪತ್ರೆಯ ಮೇಲೆ ನಡೆದ ದಾಳಿಗೆ ಪ್ರತೀಕಾರವಾಗಿ, ಕುವೈತ್ ಮತ್ತು ಬಹ್ರೇನ್ ಸೇರಿದಂತೆ ಗಲ್ಫ್ ರಾಷ್ಟ್ರಗಳಲ್ಲಿರುವ ಅಮೆರಿಕದ ವಾಯು ನೆಲೆಗಳ ಮೇಲೆ ಇರಾನ್ ಪ್ರತಿದಾಳಿ...

Lazarus To World Leaks : ಆತಂಕ ಸೃಷ್ಟಿಸಿದ ಕೂಡಂಕುಳಂ ಸೈಬರ್ ದಾಳಿಗಳು

ಭಾರತದ ಅತಿ ದೊಡ್ಡ ಪರಮಾಣು ವಿದ್ಯುತ್ ಕೇಂದ್ರವಾದ ತಮಿಳುನಾಡಿನ  ತಿರುನೆಲ್ವೇಲಿಯ ಕೂಡಂಕುಳಂ, ಕಳೆದ ಏಳು ವರ್ಷಗಳ ಅವಧಿಯಲ್ಲಿ ಎರಡು ಬಾರಿ ಪ್ರಮುಖ ಸೈಬರ್ ಭದ್ರತಾ ಆತಂಕಗಳಿಗೆ ಕೇಂದ್ರ ಬಿಂದುವಾಗಿದೆ. 2019ರ ಮೊದಲ ಘಟನೆಯು...

ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ: ಪ್ರಶ್ನೆಗಳನ್ನು ಖರೀದಿಸಲು 5 ಲಕ್ಷ ರೂ. ಪಾವತಿಸಿದ್ದ ಲಾತೂರ್ ಕೋಚಿಂಗ್ ಮಾಲೀಕ: ನ್ಯಾಯಾಲಯಕ್ಕೆ ಸಿಬಿಐ ಮಾಹಿತಿ

ದೇಶಾದ್ಯಂತ ಕೋಟ್ಯಂತರ ವಿದ್ಯಾರ್ಥಿಗಳ ಭವಿಷ್ಯವನ್ನು ಕತ್ತಲಿಗೆ ತಳ್ಳಿದ ನೀಟ್ (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣದಲ್ಲಿ ದಿನಕ್ಕೊಂದು ಆಘಾತಕಾರಿ ಸತ್ಯಗಳು ಹೊರಬರುತ್ತಿದ್ದು, ಇಡೀ ಶಿಕ್ಷಣ ವ್ಯವಸ್ಥೆಯನ್ನು ಜರ್ಜರಿತಗೊಳಿಸಿರುವ ಈ ದಂಧೆಯ ಆಳ ಎಷ್ಟು...

ನಾನು ಸತ್ತರೂ ಪರ್ವಾಗಿಲ್ಲ, ಉಪವಾಸ ಹಿಂಪಡೆಯಲ್ಲ: ಜುಲೈ 20ರ ಸಂಸತ್ ಚಲೋಗೆ ವಾಂಗ್‌ಚುಕ್ ಕರೆ

ದೇಶದ ಶಿಕ್ಷಣ ವ್ಯವಸ್ಥೆಯಲ್ಲಿನ ಸರಣಿ ಪರೀಕ್ಷಾ ಅಕ್ರಮ ಹಾಗೂ ನೀಟ್ (NEET) ಹಗರಣದ ವಿರುದ್ಧ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸಿ ನಡೆಯುತ್ತಿರುವ ಆಮರಣಾಂತ ಉಪವಾಸ ಸತ್ಯಾಗ್ರಹವನ್ನು ತಕ್ಷಣವೇ...

ಉತ್ತರ ಪ್ರದೇಶ : ಮೊಹಮ್ಮದ್ ಅಲಿ ಜೌಹರ್ ವಿವಿಯ 38 ಕಟ್ಟಡಗಳನ್ನು ಕೆಡವಲು ಮುಂದಾದ ಸರ್ಕಾರ!

ಸಮಾಜವಾದಿ ಪಕ್ಷದ (ಎಸ್‌ಪಿ) ಮುಖಂಡ ಆಝಂ ಖಾನ್ ಅವರಿಗೆ ಸೇರಿದ ಮೊಹಮ್ಮದ್ ಅಲಿ ಜೌಹರ್ ವಿಶ್ವವಿದ್ಯಾಲಯದ 38 ಕಟ್ಟಡಗಳನ್ನು ಕೆಡವಲು ಉತ್ತರ ಪ್ರದೇಶದ ರಾಂಪುರ ನಗರಾಭಿವೃದ್ಧಿ ಪ್ರಾಧಿಕಾರ (ಆರ್‌ಡಿಎ) ಆದೇಶಿಸಿದೆ ಎಂದು ಬುಧವಾರ...