Homeಮುಖಪುಟಸಿಪಿಐ(ಎಂ) 24ನೇ ಮಹಾ ಅಧಿವೇಶನ ಆರಂಭ | ಎಡಪಕ್ಷಗಳಷ್ಟೆ ಹಿಂದುತ್ವದ ವಿರುದ್ಧ ನಿರಂತರ ಹೋರಾಡಬಲ್ಲವು: ಪ್ರಕಾಶ್...

ಸಿಪಿಐ(ಎಂ) 24ನೇ ಮಹಾ ಅಧಿವೇಶನ ಆರಂಭ | ಎಡಪಕ್ಷಗಳಷ್ಟೆ ಹಿಂದುತ್ವದ ವಿರುದ್ಧ ನಿರಂತರ ಹೋರಾಡಬಲ್ಲವು: ಪ್ರಕಾಶ್ ಕಾರಟ್

- Advertisement -
- Advertisement -

ಹಿಂದುತ್ವ ನವ ಫ್ಯಾಸಿಸಂ ವಿರುದ್ಧ ಹೋರಾಡಲು ಮತ್ತು ಅದನ್ನು ಎದುರಿಸಲು ಶಕ್ತಿ ಮತ್ತು ದೃಢಸಂಕಲ್ಪ ಇರುವುದು ಎಡಪಕ್ಷಗಳಿಗೆ ಮಾತ್ರವಾಗಿದೆ ಎಂದು ಸಿಪಿಐ(ಎಂ) ಹಿರಿಯ ನಾಯಕ, ಪಕ್ಷದ ಸಂಚಾಲಕ ಪ್ರಕಾಶ್ ಕಾರಟ್ ಬುಧವಾರ ಹೇಳಿದ್ದಾರೆ. “ದೇಶದ ಮೇಲಿನ ಸಾಮ್ರಾಜ್ಯಶಾಹಿ ಉದ್ದೇಶಗಳ ವಿರುದ್ಧ ಹೋರಾಟವನ್ನು ಮುನ್ನಡೆಸಬಲ್ಲವರು ಎಡಪಕ್ಷಗಳು ಮಾತ್ರ” ಎಂದು ಅವರು ತಮಿಳುನಾಡಿನ ಮಧುರೈನಲ್ಲಿ ನಡೆಯುತ್ತಿರುವ ಪಕ್ಷದ 24ನೇ ರಾಷ್ಟ್ರೀಯ ಮಹಾ ಅಧಿವೇಶನದ ತಮ್ಮ ಉದ್ಘಾಟನಾ ಭಾಷಣದಲ್ಲಿ ಹೇಳಿದ್ದಾರೆ. ರಾಷ್ಟ್ರೀಯ ಮಹಾಅಧಿವೇಶನವು ಏಪ್ರಿಲ್ 2 ರಿಂದ 6 ರವರೆಗೆ ನಡೆಯಲಿದೆ. ಎಡಪಕ್ಷಗಳಷ್ಟೆ ಹಿಂದುತ್ವದ

ಪ್ರತಿಗಾಮಿ ಶಕ್ತಿಗಳನ್ನು ಹಿಮ್ಮೆಟ್ಟಿಸಲು ಎಲ್ಲಾ ಎಡ, ಪ್ರಜಾಪ್ರಭುತ್ವ ಮತ್ತು ಜಾತ್ಯತೀತ ಶಕ್ತಿಗಳ ಒಗ್ಗಟ್ಟಿಗೆ ಕರೆ ನೀಡಿದ ಅವರು, “ಈ ಕರೆ ಜೋರಾಗಿ ಮತ್ತು ಸ್ಪಷ್ಟವಾಗಿ ಹೋಗಲಿ: ಜಾತ್ಯತೀತ, ಪ್ರಜಾಪ್ರಭುತ್ವ ಮತ್ತು ಪ್ರಗತಿಪರ ಮಾರ್ಗಗಳಲ್ಲಿ ನವ ಭಾರತವನ್ನು ನಿರ್ಮಿಸಲು ನಾವು ಒಟ್ಟಾಗಿ ಕೆಲಸ ಮಾಡೋಣ. ಪ್ರಜಾಪ್ರಭುತ್ವ ಮತ್ತು ಸಮಾಜವಾದದ ಕಡೆಗೆ…” ಎಂದು ಕಾರಟ್ ಹೇಳಿದ್ದಾರೆ. ಎಡಪಕ್ಷಗಳಷ್ಟೆ ಹಿಂದುತ್ವದ

ಬಿಜೆಪಿ ವಿರುದ್ಧ ಎಲ್ಲಾ ಜಾತ್ಯತೀತ ಶಕ್ತಿಗಳ ವಿಶಾಲವಾದ ವೇದಿಕೆಗೆ ಪಕ್ಷವು ಶ್ರಮಿಸುತ್ತಿದ್ದರೂ, ಎಡಪಕ್ಷಗಳೆ ಸ್ಥಿರವಾದ ಶಕ್ತಿ ಎಡಪಕ್ಷಗಳೆ ಆಗಿದೆ. ನವ-ಉದಾರವಾದಿ ನೀತಿಗಳ ಬಗ್ಗೆ ಎಡಪಕ್ಷಗಳು ರಾಜಿಯಾಗದ ನಿಲುವಿನಿಂದಾಗಿ ಹಿಂದುತ್ವ ಮತ್ತು ಬಹುಸಂಖ್ಯಾತ ಕೋಮುವಾದದ ಎಲ್ಲಾ ಅಭಿವ್ಯಕ್ತಿಗಳ ವಿರುದ್ಧ ದೃಢವಾಗಿ ಮತ್ತು ರಾಜಿಯಾಗದಂತೆ ಹೋರಾಡಬಲ್ಲವು ಎಂಬುದನ್ನು ಮನಸ್ಸಿನಲ್ಲಿಟ್ಟುಕೊಳ್ಳಬೇಕು ಎಂದು ಕಾರಟ್ ಸ್ಪಷ್ಟಪಡಿಸಿದ್ದಾರೆ.

ಭಾರತದಲ್ಲಿ ಸಾಮಾಜಿಕ ಸಂಬಂಧಗಳ ಮೂಲ ಚೌಕಟ್ಟಾಗಿ ಜಾತಿ ವ್ಯವಸ್ಥೆಯನ್ನು ಕಾಯ್ದುಕೊಳ್ಳಲು ಬಿಜೆಪಿ-ಆರ್‌ಎಸ್‌ಎಸ್ ಒಕ್ಕೂಟವು ಉಪ-ಜಾತಿ ಗುರುತುಗಳನ್ನು ಮೋಸದಿಂದ ಬಳಸುತ್ತಿದೆ ಎಂದು ಆರೋಪಿಸಿದ ಅವರು, ಮನುವಾದಿ ಮೌಲ್ಯಗಳನ್ನು ಸಾಮಾಜಿಕ ಮತ್ತು ಸಾಂಸ್ಕೃತಿಕ ಕ್ಷೇತ್ರಗಳಲ್ಲಿ ಕುತಂತ್ರದಿಂದ ತುಂಬಿಸಲಾಗುತ್ತಿದೆ ಎಂದು ಆರೋಪಿಸಿದದಾರೆ.

“ಮಹಿಳೆಯರು, ದಲಿತರು ಮತ್ತು ಆದಿವಾಸಿಗಳ ಹಕ್ಕುಗಳ ಮೇಲೆ ದಾಳಿ ಮಾಡುವ ಮನುವಾದಿ-ಪಿತೃಪ್ರಭುತ್ವ ವ್ಯವಸ್ಥೆಯ ವಿರುದ್ಧದ ಹೋರಾಟವು ಹಿಂದುತ್ವ ಶಕ್ತಿಗಳ ವಿರುದ್ಧದ ಹೋರಾಟದ ಅವಿಭಾಜ್ಯ ಅಂಗವಾಗಿದೆ” ಎಂದು ಅವರು ಹೇಳಿದ್ದಾರೆ. ಪಕ್ಷದ ಮಾಜಿ ಪ್ರಧಾನ ಕಾರ್ಯದರ್ಶಿಯಾಗಿದ್ದ ಕಾರಟ್ ಅವರು ಸೀತಾರಾಮ್ ಯಚೂರಿ ಅವರ ನಿಧನದ ನಂತರ ಮಧ್ಯಂತರವಾಗಿ ಪಕ್ಷದ ಸಂಚಾಲಕರಾಗಿ ಆಯ್ಕೆಯಾಗಿದ್ದರು.

ತಮ್ಮ ಪಕ್ಷ ಮತ್ತು ಎಡಪಂಥೀಯರು ಅನೇಕ ಹೋರಾಟಗಳನ್ನು ನಡೆಸುತ್ತಿದ್ದರೂ, ಆ ಹೋರಾಟಗಳಲ್ಲಿ ಭಾಗವಹಿಸುವ ಜನಸಾಮಾನ್ಯರಿಗೆ ಪ್ರತಿಗಾಮಿ ಮತ್ತು ವಿಭಜಕ ಹಿಂದುತ್ವ ಕೋಮುವಾದದ ವಿರುದ್ಧ ತಿಳಿಸಿದರೆ ಮಾತ್ರ ಅವರು ರಾಜಕೀಯೀಕರಣಗೊಳ್ಳುತ್ತಾರೆ ಎಂದು ಅವರು ಹೇಳಿದ್ದಾರೆ.

ಡೊನಾಲ್ಡ್ ಟ್ರಂಪ್ ನೇತೃತ್ವದಲ್ಲಿ ಅಮೆರಿಕದ ಸಾಮ್ರಾಜ್ಯಶಾಹಿಯು ಆರ್ಥಿಕ ಮತ್ತು ವ್ಯಾಪಾರಿ ಯುದ್ಧಗಳು ಮತ್ತು ಮಿಲಿಟರಿ ಹಸ್ತಕ್ಷೇಪಗಳ ಮೂಲಕ ಪ್ರಪಂಚದಾದ್ಯಂತದ ದೇಶಗಳ ಮೇಲೆ ಹೊಸ ದಾಳಿಗಳನ್ನು ನಡೆಸಲಿದೆ ಎಂದು ಅವರು ಹೇಳಿದ್ದಾರೆ. “ಸಿಪಿಐ(ಎಂ) ಮತ್ತು ಎಡಪಂಥೀಯರು ಸಾಮ್ರಾಜ್ಯಶಾಹಿ ವಿರೋಧಿ ಹೋರಾಟಗಳನ್ನು ಸಕ್ರಿಯವಾಗಿ ಮುನ್ನಡೆಸಲು ಮತ್ತು ಮೋದಿ ಸರ್ಕಾರದ ಸಾಮ್ರಾಜ್ಯಶಾಹಿ ಪರ ನೀತಿಗಳನ್ನು ಬಹಿರಂಗಪಡಿಸಲು ಇದು ಸುಸಮಯ” ಎಂದು ಅವರು ಹೇಳಿದ್ದಾರೆ.

ಸಿಪಿಐ(ಎಂ)ನ ಸ್ವತಂತ್ರ ಬಲವನ್ನು ಹೇಗೆ ಹೆಚ್ಚಿಸುವುದು ಎಂಬ ಪ್ರಮುಖ ವಿಷಯವನ್ನು ಪಕ್ಷದ ಅಧಿವೇಶನವು ಚರ್ಚಿಸುತ್ತದೆ ಎಂದು ಕಾರಟ್ ಹೇಳಿದ್ದಾರೆ. “ಇಡೀ ದೇಶವನ್ನು ತೆಗೆದುಕೊಂಡರೆ, ಪಕ್ಷವನ್ನು ತಳಮಟ್ಟದಲ್ಲಿ ನಿರ್ಮಿಸಲು ಮತ್ತು ಪಕ್ಷದ ಸಂಘಟನೆಯ ಕಾರ್ಯನಿರ್ವಹಣೆಯನ್ನು ಸುಗಮಗೊಳಿಸಲು ವರ್ಗ ಮತ್ತು ಸಾಮೂಹಿಕ ವಿಷಯಗಳ ಕುರಿತು ಸ್ಥಳೀಯ ಹೋರಾಟಗಳನ್ನು ಪ್ರಾರಂಭಿಸಲು ಯೋಜಿತ ಪ್ರಯತ್ನ ಇರಬೇಕು” ಎಂದು ಅವರು ಹೇಳಿದ್ದಾರೆ.

ಇಲ್ಲಿ ಕ್ಲಿಕ್ ಮಾಡಿ

ಇದನ್ನೂಓದಿ:  ಮಹಾರಾಷ್ಟ್ರ ಸರಕಾರದ ಸಾಲ ಮನ್ನಾ ಭರವಸೆ ಉಲ್ಲಂಘನೆ: 90,000ಕ್ಕೆ ಯಕೃತ್ತು, 75,000ಕ್ಕೆ ಕಿಡ್ನಿ ಮಾರಾಟಕ್ಕಿಟ್ಟು ರೈತನ ಪ್ರತಿಭಟನೆ

ಮಹಾರಾಷ್ಟ್ರ ಸರಕಾರದ ಸಾಲ ಮನ್ನಾ ಭರವಸೆ ಉಲ್ಲಂಘನೆ: 90,000ಕ್ಕೆ ಯಕೃತ್ತು, 75,000ಕ್ಕೆ ಕಿಡ್ನಿ ಮಾರಾಟಕ್ಕಿಟ್ಟು ರೈತನ ಪ್ರತಿಭಟನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...