Homeಮುಖಪುಟಸಿಪಿಐ(ಎಂ) 24ನೇ ಮಹಾ ಅಧಿವೇಶನ ಆರಂಭ | ಎಡಪಕ್ಷಗಳಷ್ಟೆ ಹಿಂದುತ್ವದ ವಿರುದ್ಧ ನಿರಂತರ ಹೋರಾಡಬಲ್ಲವು: ಪ್ರಕಾಶ್...

ಸಿಪಿಐ(ಎಂ) 24ನೇ ಮಹಾ ಅಧಿವೇಶನ ಆರಂಭ | ಎಡಪಕ್ಷಗಳಷ್ಟೆ ಹಿಂದುತ್ವದ ವಿರುದ್ಧ ನಿರಂತರ ಹೋರಾಡಬಲ್ಲವು: ಪ್ರಕಾಶ್ ಕಾರಟ್

- Advertisement -
- Advertisement -

ಹಿಂದುತ್ವ ನವ ಫ್ಯಾಸಿಸಂ ವಿರುದ್ಧ ಹೋರಾಡಲು ಮತ್ತು ಅದನ್ನು ಎದುರಿಸಲು ಶಕ್ತಿ ಮತ್ತು ದೃಢಸಂಕಲ್ಪ ಇರುವುದು ಎಡಪಕ್ಷಗಳಿಗೆ ಮಾತ್ರವಾಗಿದೆ ಎಂದು ಸಿಪಿಐ(ಎಂ) ಹಿರಿಯ ನಾಯಕ, ಪಕ್ಷದ ಸಂಚಾಲಕ ಪ್ರಕಾಶ್ ಕಾರಟ್ ಬುಧವಾರ ಹೇಳಿದ್ದಾರೆ. “ದೇಶದ ಮೇಲಿನ ಸಾಮ್ರಾಜ್ಯಶಾಹಿ ಉದ್ದೇಶಗಳ ವಿರುದ್ಧ ಹೋರಾಟವನ್ನು ಮುನ್ನಡೆಸಬಲ್ಲವರು ಎಡಪಕ್ಷಗಳು ಮಾತ್ರ” ಎಂದು ಅವರು ತಮಿಳುನಾಡಿನ ಮಧುರೈನಲ್ಲಿ ನಡೆಯುತ್ತಿರುವ ಪಕ್ಷದ 24ನೇ ರಾಷ್ಟ್ರೀಯ ಮಹಾ ಅಧಿವೇಶನದ ತಮ್ಮ ಉದ್ಘಾಟನಾ ಭಾಷಣದಲ್ಲಿ ಹೇಳಿದ್ದಾರೆ. ರಾಷ್ಟ್ರೀಯ ಮಹಾಅಧಿವೇಶನವು ಏಪ್ರಿಲ್ 2 ರಿಂದ 6 ರವರೆಗೆ ನಡೆಯಲಿದೆ. ಎಡಪಕ್ಷಗಳಷ್ಟೆ ಹಿಂದುತ್ವದ

ಪ್ರತಿಗಾಮಿ ಶಕ್ತಿಗಳನ್ನು ಹಿಮ್ಮೆಟ್ಟಿಸಲು ಎಲ್ಲಾ ಎಡ, ಪ್ರಜಾಪ್ರಭುತ್ವ ಮತ್ತು ಜಾತ್ಯತೀತ ಶಕ್ತಿಗಳ ಒಗ್ಗಟ್ಟಿಗೆ ಕರೆ ನೀಡಿದ ಅವರು, “ಈ ಕರೆ ಜೋರಾಗಿ ಮತ್ತು ಸ್ಪಷ್ಟವಾಗಿ ಹೋಗಲಿ: ಜಾತ್ಯತೀತ, ಪ್ರಜಾಪ್ರಭುತ್ವ ಮತ್ತು ಪ್ರಗತಿಪರ ಮಾರ್ಗಗಳಲ್ಲಿ ನವ ಭಾರತವನ್ನು ನಿರ್ಮಿಸಲು ನಾವು ಒಟ್ಟಾಗಿ ಕೆಲಸ ಮಾಡೋಣ. ಪ್ರಜಾಪ್ರಭುತ್ವ ಮತ್ತು ಸಮಾಜವಾದದ ಕಡೆಗೆ…” ಎಂದು ಕಾರಟ್ ಹೇಳಿದ್ದಾರೆ. ಎಡಪಕ್ಷಗಳಷ್ಟೆ ಹಿಂದುತ್ವದ

ಬಿಜೆಪಿ ವಿರುದ್ಧ ಎಲ್ಲಾ ಜಾತ್ಯತೀತ ಶಕ್ತಿಗಳ ವಿಶಾಲವಾದ ವೇದಿಕೆಗೆ ಪಕ್ಷವು ಶ್ರಮಿಸುತ್ತಿದ್ದರೂ, ಎಡಪಕ್ಷಗಳೆ ಸ್ಥಿರವಾದ ಶಕ್ತಿ ಎಡಪಕ್ಷಗಳೆ ಆಗಿದೆ. ನವ-ಉದಾರವಾದಿ ನೀತಿಗಳ ಬಗ್ಗೆ ಎಡಪಕ್ಷಗಳು ರಾಜಿಯಾಗದ ನಿಲುವಿನಿಂದಾಗಿ ಹಿಂದುತ್ವ ಮತ್ತು ಬಹುಸಂಖ್ಯಾತ ಕೋಮುವಾದದ ಎಲ್ಲಾ ಅಭಿವ್ಯಕ್ತಿಗಳ ವಿರುದ್ಧ ದೃಢವಾಗಿ ಮತ್ತು ರಾಜಿಯಾಗದಂತೆ ಹೋರಾಡಬಲ್ಲವು ಎಂಬುದನ್ನು ಮನಸ್ಸಿನಲ್ಲಿಟ್ಟುಕೊಳ್ಳಬೇಕು ಎಂದು ಕಾರಟ್ ಸ್ಪಷ್ಟಪಡಿಸಿದ್ದಾರೆ.

ಭಾರತದಲ್ಲಿ ಸಾಮಾಜಿಕ ಸಂಬಂಧಗಳ ಮೂಲ ಚೌಕಟ್ಟಾಗಿ ಜಾತಿ ವ್ಯವಸ್ಥೆಯನ್ನು ಕಾಯ್ದುಕೊಳ್ಳಲು ಬಿಜೆಪಿ-ಆರ್‌ಎಸ್‌ಎಸ್ ಒಕ್ಕೂಟವು ಉಪ-ಜಾತಿ ಗುರುತುಗಳನ್ನು ಮೋಸದಿಂದ ಬಳಸುತ್ತಿದೆ ಎಂದು ಆರೋಪಿಸಿದ ಅವರು, ಮನುವಾದಿ ಮೌಲ್ಯಗಳನ್ನು ಸಾಮಾಜಿಕ ಮತ್ತು ಸಾಂಸ್ಕೃತಿಕ ಕ್ಷೇತ್ರಗಳಲ್ಲಿ ಕುತಂತ್ರದಿಂದ ತುಂಬಿಸಲಾಗುತ್ತಿದೆ ಎಂದು ಆರೋಪಿಸಿದದಾರೆ.

“ಮಹಿಳೆಯರು, ದಲಿತರು ಮತ್ತು ಆದಿವಾಸಿಗಳ ಹಕ್ಕುಗಳ ಮೇಲೆ ದಾಳಿ ಮಾಡುವ ಮನುವಾದಿ-ಪಿತೃಪ್ರಭುತ್ವ ವ್ಯವಸ್ಥೆಯ ವಿರುದ್ಧದ ಹೋರಾಟವು ಹಿಂದುತ್ವ ಶಕ್ತಿಗಳ ವಿರುದ್ಧದ ಹೋರಾಟದ ಅವಿಭಾಜ್ಯ ಅಂಗವಾಗಿದೆ” ಎಂದು ಅವರು ಹೇಳಿದ್ದಾರೆ. ಪಕ್ಷದ ಮಾಜಿ ಪ್ರಧಾನ ಕಾರ್ಯದರ್ಶಿಯಾಗಿದ್ದ ಕಾರಟ್ ಅವರು ಸೀತಾರಾಮ್ ಯಚೂರಿ ಅವರ ನಿಧನದ ನಂತರ ಮಧ್ಯಂತರವಾಗಿ ಪಕ್ಷದ ಸಂಚಾಲಕರಾಗಿ ಆಯ್ಕೆಯಾಗಿದ್ದರು.

ತಮ್ಮ ಪಕ್ಷ ಮತ್ತು ಎಡಪಂಥೀಯರು ಅನೇಕ ಹೋರಾಟಗಳನ್ನು ನಡೆಸುತ್ತಿದ್ದರೂ, ಆ ಹೋರಾಟಗಳಲ್ಲಿ ಭಾಗವಹಿಸುವ ಜನಸಾಮಾನ್ಯರಿಗೆ ಪ್ರತಿಗಾಮಿ ಮತ್ತು ವಿಭಜಕ ಹಿಂದುತ್ವ ಕೋಮುವಾದದ ವಿರುದ್ಧ ತಿಳಿಸಿದರೆ ಮಾತ್ರ ಅವರು ರಾಜಕೀಯೀಕರಣಗೊಳ್ಳುತ್ತಾರೆ ಎಂದು ಅವರು ಹೇಳಿದ್ದಾರೆ.

ಡೊನಾಲ್ಡ್ ಟ್ರಂಪ್ ನೇತೃತ್ವದಲ್ಲಿ ಅಮೆರಿಕದ ಸಾಮ್ರಾಜ್ಯಶಾಹಿಯು ಆರ್ಥಿಕ ಮತ್ತು ವ್ಯಾಪಾರಿ ಯುದ್ಧಗಳು ಮತ್ತು ಮಿಲಿಟರಿ ಹಸ್ತಕ್ಷೇಪಗಳ ಮೂಲಕ ಪ್ರಪಂಚದಾದ್ಯಂತದ ದೇಶಗಳ ಮೇಲೆ ಹೊಸ ದಾಳಿಗಳನ್ನು ನಡೆಸಲಿದೆ ಎಂದು ಅವರು ಹೇಳಿದ್ದಾರೆ. “ಸಿಪಿಐ(ಎಂ) ಮತ್ತು ಎಡಪಂಥೀಯರು ಸಾಮ್ರಾಜ್ಯಶಾಹಿ ವಿರೋಧಿ ಹೋರಾಟಗಳನ್ನು ಸಕ್ರಿಯವಾಗಿ ಮುನ್ನಡೆಸಲು ಮತ್ತು ಮೋದಿ ಸರ್ಕಾರದ ಸಾಮ್ರಾಜ್ಯಶಾಹಿ ಪರ ನೀತಿಗಳನ್ನು ಬಹಿರಂಗಪಡಿಸಲು ಇದು ಸುಸಮಯ” ಎಂದು ಅವರು ಹೇಳಿದ್ದಾರೆ.

ಸಿಪಿಐ(ಎಂ)ನ ಸ್ವತಂತ್ರ ಬಲವನ್ನು ಹೇಗೆ ಹೆಚ್ಚಿಸುವುದು ಎಂಬ ಪ್ರಮುಖ ವಿಷಯವನ್ನು ಪಕ್ಷದ ಅಧಿವೇಶನವು ಚರ್ಚಿಸುತ್ತದೆ ಎಂದು ಕಾರಟ್ ಹೇಳಿದ್ದಾರೆ. “ಇಡೀ ದೇಶವನ್ನು ತೆಗೆದುಕೊಂಡರೆ, ಪಕ್ಷವನ್ನು ತಳಮಟ್ಟದಲ್ಲಿ ನಿರ್ಮಿಸಲು ಮತ್ತು ಪಕ್ಷದ ಸಂಘಟನೆಯ ಕಾರ್ಯನಿರ್ವಹಣೆಯನ್ನು ಸುಗಮಗೊಳಿಸಲು ವರ್ಗ ಮತ್ತು ಸಾಮೂಹಿಕ ವಿಷಯಗಳ ಕುರಿತು ಸ್ಥಳೀಯ ಹೋರಾಟಗಳನ್ನು ಪ್ರಾರಂಭಿಸಲು ಯೋಜಿತ ಪ್ರಯತ್ನ ಇರಬೇಕು” ಎಂದು ಅವರು ಹೇಳಿದ್ದಾರೆ.

ಇಲ್ಲಿ ಕ್ಲಿಕ್ ಮಾಡಿ

ಇದನ್ನೂಓದಿ:  ಮಹಾರಾಷ್ಟ್ರ ಸರಕಾರದ ಸಾಲ ಮನ್ನಾ ಭರವಸೆ ಉಲ್ಲಂಘನೆ: 90,000ಕ್ಕೆ ಯಕೃತ್ತು, 75,000ಕ್ಕೆ ಕಿಡ್ನಿ ಮಾರಾಟಕ್ಕಿಟ್ಟು ರೈತನ ಪ್ರತಿಭಟನೆ

ಮಹಾರಾಷ್ಟ್ರ ಸರಕಾರದ ಸಾಲ ಮನ್ನಾ ಭರವಸೆ ಉಲ್ಲಂಘನೆ: 90,000ಕ್ಕೆ ಯಕೃತ್ತು, 75,000ಕ್ಕೆ ಕಿಡ್ನಿ ಮಾರಾಟಕ್ಕಿಟ್ಟು ರೈತನ ಪ್ರತಿಭಟನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...