Homeಮುಖಪುಟಸಿಪಿಐ(ಎಂ) 24ನೇ ಮಹಾ ಅಧಿವೇಶನ ಆರಂಭ | ಎಡಪಕ್ಷಗಳಷ್ಟೆ ಹಿಂದುತ್ವದ ವಿರುದ್ಧ ನಿರಂತರ ಹೋರಾಡಬಲ್ಲವು: ಪ್ರಕಾಶ್...

ಸಿಪಿಐ(ಎಂ) 24ನೇ ಮಹಾ ಅಧಿವೇಶನ ಆರಂಭ | ಎಡಪಕ್ಷಗಳಷ್ಟೆ ಹಿಂದುತ್ವದ ವಿರುದ್ಧ ನಿರಂತರ ಹೋರಾಡಬಲ್ಲವು: ಪ್ರಕಾಶ್ ಕಾರಟ್

- Advertisement -
- Advertisement -

ಹಿಂದುತ್ವ ನವ ಫ್ಯಾಸಿಸಂ ವಿರುದ್ಧ ಹೋರಾಡಲು ಮತ್ತು ಅದನ್ನು ಎದುರಿಸಲು ಶಕ್ತಿ ಮತ್ತು ದೃಢಸಂಕಲ್ಪ ಇರುವುದು ಎಡಪಕ್ಷಗಳಿಗೆ ಮಾತ್ರವಾಗಿದೆ ಎಂದು ಸಿಪಿಐ(ಎಂ) ಹಿರಿಯ ನಾಯಕ, ಪಕ್ಷದ ಸಂಚಾಲಕ ಪ್ರಕಾಶ್ ಕಾರಟ್ ಬುಧವಾರ ಹೇಳಿದ್ದಾರೆ. “ದೇಶದ ಮೇಲಿನ ಸಾಮ್ರಾಜ್ಯಶಾಹಿ ಉದ್ದೇಶಗಳ ವಿರುದ್ಧ ಹೋರಾಟವನ್ನು ಮುನ್ನಡೆಸಬಲ್ಲವರು ಎಡಪಕ್ಷಗಳು ಮಾತ್ರ” ಎಂದು ಅವರು ತಮಿಳುನಾಡಿನ ಮಧುರೈನಲ್ಲಿ ನಡೆಯುತ್ತಿರುವ ಪಕ್ಷದ 24ನೇ ರಾಷ್ಟ್ರೀಯ ಮಹಾ ಅಧಿವೇಶನದ ತಮ್ಮ ಉದ್ಘಾಟನಾ ಭಾಷಣದಲ್ಲಿ ಹೇಳಿದ್ದಾರೆ. ರಾಷ್ಟ್ರೀಯ ಮಹಾಅಧಿವೇಶನವು ಏಪ್ರಿಲ್ 2 ರಿಂದ 6 ರವರೆಗೆ ನಡೆಯಲಿದೆ. ಎಡಪಕ್ಷಗಳಷ್ಟೆ ಹಿಂದುತ್ವದ

ಪ್ರತಿಗಾಮಿ ಶಕ್ತಿಗಳನ್ನು ಹಿಮ್ಮೆಟ್ಟಿಸಲು ಎಲ್ಲಾ ಎಡ, ಪ್ರಜಾಪ್ರಭುತ್ವ ಮತ್ತು ಜಾತ್ಯತೀತ ಶಕ್ತಿಗಳ ಒಗ್ಗಟ್ಟಿಗೆ ಕರೆ ನೀಡಿದ ಅವರು, “ಈ ಕರೆ ಜೋರಾಗಿ ಮತ್ತು ಸ್ಪಷ್ಟವಾಗಿ ಹೋಗಲಿ: ಜಾತ್ಯತೀತ, ಪ್ರಜಾಪ್ರಭುತ್ವ ಮತ್ತು ಪ್ರಗತಿಪರ ಮಾರ್ಗಗಳಲ್ಲಿ ನವ ಭಾರತವನ್ನು ನಿರ್ಮಿಸಲು ನಾವು ಒಟ್ಟಾಗಿ ಕೆಲಸ ಮಾಡೋಣ. ಪ್ರಜಾಪ್ರಭುತ್ವ ಮತ್ತು ಸಮಾಜವಾದದ ಕಡೆಗೆ…” ಎಂದು ಕಾರಟ್ ಹೇಳಿದ್ದಾರೆ. ಎಡಪಕ್ಷಗಳಷ್ಟೆ ಹಿಂದುತ್ವದ

ಬಿಜೆಪಿ ವಿರುದ್ಧ ಎಲ್ಲಾ ಜಾತ್ಯತೀತ ಶಕ್ತಿಗಳ ವಿಶಾಲವಾದ ವೇದಿಕೆಗೆ ಪಕ್ಷವು ಶ್ರಮಿಸುತ್ತಿದ್ದರೂ, ಎಡಪಕ್ಷಗಳೆ ಸ್ಥಿರವಾದ ಶಕ್ತಿ ಎಡಪಕ್ಷಗಳೆ ಆಗಿದೆ. ನವ-ಉದಾರವಾದಿ ನೀತಿಗಳ ಬಗ್ಗೆ ಎಡಪಕ್ಷಗಳು ರಾಜಿಯಾಗದ ನಿಲುವಿನಿಂದಾಗಿ ಹಿಂದುತ್ವ ಮತ್ತು ಬಹುಸಂಖ್ಯಾತ ಕೋಮುವಾದದ ಎಲ್ಲಾ ಅಭಿವ್ಯಕ್ತಿಗಳ ವಿರುದ್ಧ ದೃಢವಾಗಿ ಮತ್ತು ರಾಜಿಯಾಗದಂತೆ ಹೋರಾಡಬಲ್ಲವು ಎಂಬುದನ್ನು ಮನಸ್ಸಿನಲ್ಲಿಟ್ಟುಕೊಳ್ಳಬೇಕು ಎಂದು ಕಾರಟ್ ಸ್ಪಷ್ಟಪಡಿಸಿದ್ದಾರೆ.

ಭಾರತದಲ್ಲಿ ಸಾಮಾಜಿಕ ಸಂಬಂಧಗಳ ಮೂಲ ಚೌಕಟ್ಟಾಗಿ ಜಾತಿ ವ್ಯವಸ್ಥೆಯನ್ನು ಕಾಯ್ದುಕೊಳ್ಳಲು ಬಿಜೆಪಿ-ಆರ್‌ಎಸ್‌ಎಸ್ ಒಕ್ಕೂಟವು ಉಪ-ಜಾತಿ ಗುರುತುಗಳನ್ನು ಮೋಸದಿಂದ ಬಳಸುತ್ತಿದೆ ಎಂದು ಆರೋಪಿಸಿದ ಅವರು, ಮನುವಾದಿ ಮೌಲ್ಯಗಳನ್ನು ಸಾಮಾಜಿಕ ಮತ್ತು ಸಾಂಸ್ಕೃತಿಕ ಕ್ಷೇತ್ರಗಳಲ್ಲಿ ಕುತಂತ್ರದಿಂದ ತುಂಬಿಸಲಾಗುತ್ತಿದೆ ಎಂದು ಆರೋಪಿಸಿದದಾರೆ.

“ಮಹಿಳೆಯರು, ದಲಿತರು ಮತ್ತು ಆದಿವಾಸಿಗಳ ಹಕ್ಕುಗಳ ಮೇಲೆ ದಾಳಿ ಮಾಡುವ ಮನುವಾದಿ-ಪಿತೃಪ್ರಭುತ್ವ ವ್ಯವಸ್ಥೆಯ ವಿರುದ್ಧದ ಹೋರಾಟವು ಹಿಂದುತ್ವ ಶಕ್ತಿಗಳ ವಿರುದ್ಧದ ಹೋರಾಟದ ಅವಿಭಾಜ್ಯ ಅಂಗವಾಗಿದೆ” ಎಂದು ಅವರು ಹೇಳಿದ್ದಾರೆ. ಪಕ್ಷದ ಮಾಜಿ ಪ್ರಧಾನ ಕಾರ್ಯದರ್ಶಿಯಾಗಿದ್ದ ಕಾರಟ್ ಅವರು ಸೀತಾರಾಮ್ ಯಚೂರಿ ಅವರ ನಿಧನದ ನಂತರ ಮಧ್ಯಂತರವಾಗಿ ಪಕ್ಷದ ಸಂಚಾಲಕರಾಗಿ ಆಯ್ಕೆಯಾಗಿದ್ದರು.

ತಮ್ಮ ಪಕ್ಷ ಮತ್ತು ಎಡಪಂಥೀಯರು ಅನೇಕ ಹೋರಾಟಗಳನ್ನು ನಡೆಸುತ್ತಿದ್ದರೂ, ಆ ಹೋರಾಟಗಳಲ್ಲಿ ಭಾಗವಹಿಸುವ ಜನಸಾಮಾನ್ಯರಿಗೆ ಪ್ರತಿಗಾಮಿ ಮತ್ತು ವಿಭಜಕ ಹಿಂದುತ್ವ ಕೋಮುವಾದದ ವಿರುದ್ಧ ತಿಳಿಸಿದರೆ ಮಾತ್ರ ಅವರು ರಾಜಕೀಯೀಕರಣಗೊಳ್ಳುತ್ತಾರೆ ಎಂದು ಅವರು ಹೇಳಿದ್ದಾರೆ.

ಡೊನಾಲ್ಡ್ ಟ್ರಂಪ್ ನೇತೃತ್ವದಲ್ಲಿ ಅಮೆರಿಕದ ಸಾಮ್ರಾಜ್ಯಶಾಹಿಯು ಆರ್ಥಿಕ ಮತ್ತು ವ್ಯಾಪಾರಿ ಯುದ್ಧಗಳು ಮತ್ತು ಮಿಲಿಟರಿ ಹಸ್ತಕ್ಷೇಪಗಳ ಮೂಲಕ ಪ್ರಪಂಚದಾದ್ಯಂತದ ದೇಶಗಳ ಮೇಲೆ ಹೊಸ ದಾಳಿಗಳನ್ನು ನಡೆಸಲಿದೆ ಎಂದು ಅವರು ಹೇಳಿದ್ದಾರೆ. “ಸಿಪಿಐ(ಎಂ) ಮತ್ತು ಎಡಪಂಥೀಯರು ಸಾಮ್ರಾಜ್ಯಶಾಹಿ ವಿರೋಧಿ ಹೋರಾಟಗಳನ್ನು ಸಕ್ರಿಯವಾಗಿ ಮುನ್ನಡೆಸಲು ಮತ್ತು ಮೋದಿ ಸರ್ಕಾರದ ಸಾಮ್ರಾಜ್ಯಶಾಹಿ ಪರ ನೀತಿಗಳನ್ನು ಬಹಿರಂಗಪಡಿಸಲು ಇದು ಸುಸಮಯ” ಎಂದು ಅವರು ಹೇಳಿದ್ದಾರೆ.

ಸಿಪಿಐ(ಎಂ)ನ ಸ್ವತಂತ್ರ ಬಲವನ್ನು ಹೇಗೆ ಹೆಚ್ಚಿಸುವುದು ಎಂಬ ಪ್ರಮುಖ ವಿಷಯವನ್ನು ಪಕ್ಷದ ಅಧಿವೇಶನವು ಚರ್ಚಿಸುತ್ತದೆ ಎಂದು ಕಾರಟ್ ಹೇಳಿದ್ದಾರೆ. “ಇಡೀ ದೇಶವನ್ನು ತೆಗೆದುಕೊಂಡರೆ, ಪಕ್ಷವನ್ನು ತಳಮಟ್ಟದಲ್ಲಿ ನಿರ್ಮಿಸಲು ಮತ್ತು ಪಕ್ಷದ ಸಂಘಟನೆಯ ಕಾರ್ಯನಿರ್ವಹಣೆಯನ್ನು ಸುಗಮಗೊಳಿಸಲು ವರ್ಗ ಮತ್ತು ಸಾಮೂಹಿಕ ವಿಷಯಗಳ ಕುರಿತು ಸ್ಥಳೀಯ ಹೋರಾಟಗಳನ್ನು ಪ್ರಾರಂಭಿಸಲು ಯೋಜಿತ ಪ್ರಯತ್ನ ಇರಬೇಕು” ಎಂದು ಅವರು ಹೇಳಿದ್ದಾರೆ.

ಇಲ್ಲಿ ಕ್ಲಿಕ್ ಮಾಡಿ

ಇದನ್ನೂಓದಿ:  ಮಹಾರಾಷ್ಟ್ರ ಸರಕಾರದ ಸಾಲ ಮನ್ನಾ ಭರವಸೆ ಉಲ್ಲಂಘನೆ: 90,000ಕ್ಕೆ ಯಕೃತ್ತು, 75,000ಕ್ಕೆ ಕಿಡ್ನಿ ಮಾರಾಟಕ್ಕಿಟ್ಟು ರೈತನ ಪ್ರತಿಭಟನೆ

ಮಹಾರಾಷ್ಟ್ರ ಸರಕಾರದ ಸಾಲ ಮನ್ನಾ ಭರವಸೆ ಉಲ್ಲಂಘನೆ: 90,000ಕ್ಕೆ ಯಕೃತ್ತು, 75,000ಕ್ಕೆ ಕಿಡ್ನಿ ಮಾರಾಟಕ್ಕಿಟ್ಟು ರೈತನ ಪ್ರತಿಭಟನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...

Uttarakhand | ಬಜರಂಗದಳದ ಕಾರ್ಯಕರ್ತರು ಈಗ ದ್ವೇಷ ಬಿತ್ತುವ ವೃತ್ತಿಪರ ಇನ್‌ಫ್ಲ್ಯುಯೆನ್ಸರ್ಸ್!

ಈ ವರ್ಷದ ಆರಂಭದಲ್ಲಿ ಉತ್ತರಾಖಂಡದ ಕೋಟದ್ವಾರದಲ್ಲಿ ಹಿಂದುತ್ವ ಗುಂಪೊಂದು ವೃದ್ಧ ಮುಸ್ಲಿಂ ವ್ಯಕ್ತಿಯೊಬ್ಬರ ಅಂಗಡಿಗೆ ನುಗ್ಗಿ, ಅಂಗಡಿಯ ಹೆಸರಾದ ‘ಬಾಬಾ’ ಎಂಬುವುದನ್ನು ಬದಲಾಯಿಸುವಂತೆ ಒತ್ತಾಯಿಸಿತ್ತು. ‘ಬಾಬಾ’ ಎಂಬುವುದು ‘ಹಿಂದೂ’ ಹೆಸರಾಗಿದೆ ಎಂದು ಆ...

​ನಿಗಿ ನಿಗಿ ಕೆಂಡದಂತಾಗಿರುವ ಬಿಡದಿ, ಡಿಕೆಶಿಗೆ ಬಿಸಿ ತುಪ್ಪದಂತಾದ ರೈತರು

​ಬದಲಾದ ರಾಜಕೀಯ ಸಂದರ್ಭದಲ್ಲಿ ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಎಂದೇ ಬಿಂಬಿತವಾಗಿರುವ ಡಿ.ಕೆ. ಶಿವಕುಮಾರ್ ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಬಿಡದಿಯ ಟೌನ್‌ಶಿಪ್ ಯೋಜನೆಯ ವಿರುದ್ಧ ನಡೆಯುತ್ತಿರುವ ರೈತರ ಹೋರಾಟ ದಿನದಿಂದ ದಿನಕ್ಕೆ ಉಗ್ರ ರೂಪ ಪಡೆಯುತ್ತಿದೆ. ​ಭೂಸ್ವಾಧೀನದ...

ಪ್ರಜಾಪ್ರಭುತ್ವವನ್ನು ಹತ್ತಿಕ್ಕಲು ‘SIR’ ಅನ್ನೇ ಅಸ್ತ್ರವನ್ನಾಗಿಸಿಕೊಂಡ ನರೇಂದ್ರ ಮೋದಿ!

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟವಾದ ತಕ್ಷಣ (ಮೇ 4 ರಂದು), ಕಾಳೀಘಾಟ್‌ನಲ್ಲಿರುವ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅತ್ಯಂತ ಆಕ್ರೋಶದಿಂದ ಮಾತನಾಡಿದ್ದರು. ಅಷ್ಟೇ ಅಲ್ಲದೆ,...

ಕೇರಳದಲ್ಲಿ ಶಾಲಾ ಬಾಲಕಿಯರಿಗೆ ಮೂರು ದಿನ ಮುಟ್ಟಿನ ರಜೆ, ಅಸಂಘಟಿತ ವಲಯದ ಮಹಿಳೆಯರಿಗೆ ಆರು ತಿಂಗಳ ಹೆರಿಗೆ ರಜೆ ಘೋಷಣೆ 

ತಿರುವನಂತಪುರಂ: ಕೇರಳದ ವಿ.ಡಿ. ಸತೀಶನ್ ನೇತೃತ್ವದ ಕಾಂಗ್ರೆಸ್ ಸರ್ಕಾರವು ಮಹಿಳೆಯರಿಗೆ ಹಲವಾರು ಕಲ್ಯಾಣ ಕ್ರಮಗಳನ್ನು ಘೋಷಿಸಿದೆ, ಇದರಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಮೂರು ದಿನಗಳ ಮಾಸಿಕ ಮುಟ್ಟಿನ ರಜೆ, ಕೆಲಸದ ಸ್ಥಳಗಳಲ್ಲಿ ಮಹಿಳೆಯರಿಗೆ ಸಮಾನ...

ಜಿರಳೆ ಜನತಾ ಪಕ್ಷದ ಖಾತೆಗೆ ನಿರ್ಬಂಧ; ದೆಹಲಿ ಹೈಕೋರ್ಟ್‌ನಿಂದ ಕೇಂದ್ರ-ಎಕ್ಸ್‌ಗೆ ನೋಟಿಸ್

ಜಿರಳೆ ಜನತಾ ಪಕ್ಷದ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದಿಪ್ಕೆ ಅವರು ತಮ್ಮ ಸಾಮಾಜಿಕ ಮಾಧ್ಯಮ ಖಾತೆಗಳನ್ನು ನಿರ್ಬಂಧಿಸಿದ್ದನ್ನು ಪ್ರಶ್ನಿಸಿ ಅರ್ಜಿ ಸಲ್ಲಿಸಿದ್ದು, ದೆಹಲಿ ಹೈಕೋರ್ಟ್ (ಮೇ 29) ಕೇಂದ್ರ ಸರ್ಕಾರ ಮತ್ತು ಸಾಮಾಜಿಕ...

“ದಲಿತ ಮುಖ್ಯಮಂತ್ರಿ” ಅರ್ಹರು ಯಾರಿಲ್ಲಿ?

ಸದ್ಯ ಕರ್ನಾಟಕದಲ್ಲಿ ಮುಖ್ಯಮಂತ್ರಿಗಳ ಬದಲಾವಣೆಗೆ ವೇದಿಕೆ ಸಜ್ಜುಗೊಂಡಿದೆ. ಸುಧೀರ್ಘಾವಧಿ ಮುಖ್ಯಮಂತ್ರಿಯಾಗಿ ಅಧಿಕಾರ ನಡೆಸಿದ ಅಹಿಂದ ರಾಜಕಾರಣದ ಕುರಿತು ಮಾತಾಡುತ್ತಿದ್ದ, ಸಮಾಜವಾದಿ ಹಿನ್ನೆಲೆಯ ಸಿದ್ದರಾಮಯ್ಯ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಡಿ.ಕೆ. ಶಿವಕುಮಾರ್‌ ಮುಖ್ಯಮಂತ್ರಿಯಾಗಿ...

‘ನಾನು ಪ್ರೀತಿ-ವಿಶ್ವಾಸಗಳಿಗೆ ತಲೆಬಾಗುವವನೇ ಹೊರತು ಒತ್ತಡ-ಪ್ರಭಾವಗಳಿಗೆ ಒಳಗಾಗುವವನಲ್ಲ’: ವಿದಾಯ ಭಾಷಣದಲ್ಲಿ ಸಿದ್ದರಾಮಯ್ಯ

ಹೈಕಮಾಂಡ್ ಯಾವಾಗ ಸೂಚಿಸುತ್ತದೆಯೋ ಆಗ ರಾಜೀನಾಮೆ ಕೊಡುತ್ತೇನೆ ಎಂದು ಹೇಳಿದ್ದ ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ 2026 ಮೇ 28 ರಂದು ಹೈಕಮಾಂಡ್ ಸೂಚನೆ ಮೇರೆಗೆ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಈ ಮೂಲಕ...