Homeಮುಖಪುಟಒಂದು ರಾಷ್ಟ್ರ, ಒಂದು ಚುನಾವಣೆ ಕಲ್ಪನೆ 'ಪ್ರಜಾಪ್ರಭುತ್ವ ವಿರೋಧಿ': ಸಿಪಿಐ(ಎಂ)

ಒಂದು ರಾಷ್ಟ್ರ, ಒಂದು ಚುನಾವಣೆ ಕಲ್ಪನೆ ‘ಪ್ರಜಾಪ್ರಭುತ್ವ ವಿರೋಧಿ’: ಸಿಪಿಐ(ಎಂ)

- Advertisement -
- Advertisement -

ಒಂದು ರಾಷ್ಟ್ರ, ಒಂದು ಚುನಾವಣೆ ಕುರಿತ ಮಾಜಿ ರಾಷ್ಟ್ರಪತಿ ರಾಮ್ ನಾಥ್ ಕೋವಿಂದ್ ನೇತೃತ್ವದ ಉನ್ನತ ಮಟ್ಟದ ಸಮಿತಿಗೆ ಸಿಪಿಐ(ಎಂ) ಪ್ರಧಾನ ಕಾರ್ಯದರ್ಶಿ ಸೀತಾರಾಂ ಯೆಚೂರಿ ಅವರು ಪತ್ರ ಬರೆದಿದ್ದು, ಏಕಕಾಲಕ್ಕೆ ಚುನಾವಣೆ ನಡೆಸುವ ಕುರಿತ ಪ್ರಸ್ತಾವನೆಯು ‘ಪ್ರಜಾಪ್ರಭುತ್ವ ವಿರೋಧಿ’ ಮತ್ತು ಸಂವಿಧಾನದ ಪ್ರಕಾರ ಒಕ್ಕೂಟ ವ್ಯವಸ್ಥೆಯ ಮೂಲಭೂತ ತತ್ವಗಳನ್ನು ಉಲ್ಲಂಘಿಸುತ್ತದೆ ಎಂದು ಹೇಳಿದ್ದಾರೆ.

ಒಂದು ರಾಷ್ಟ್ರ, ಒಂದು ಚುನಾವಣೆ ಕುರಿತ ಉನ್ನತ ಮಟ್ಟದ ಸಮಿತಿಗೆ ಅವರು ಬರೆದ ಪತ್ರದಲ್ಲಿ, ಸಮಿತಿಗೆ ಸಿಪಿಐ(ಎಂ) ವಿರೋಧವನ್ನು ವ್ಯಕ್ತಪಡಿಸಿದ್ದು, ಸಮಿತಿಯ ಕಾರ್ಯಸೂಚಿ ಮತ್ತು ಉದ್ದೇಶವು ಪೂರ್ವ ನಿರ್ಧಾರಿತವಾಗಿದೆ. ಸಿಪಿಐ(ಎಂ) ಒಂದು ರಾಷ್ಟ್ರ, ಒಂದು ಚುನಾವಣೆ ಕಲ್ಪನೆ ಬಗ್ಗೆ ಪ್ರಸ್ತಾವನೆ ಸಲ್ಲಿಸಿದಾಗಿನಿಂದಲೂ ತನ್ನ ವಿರೋಧ ವ್ಯಕ್ತಪಡಿಸಿದೆ. ಒಂದು ರಾಷ್ಟ್ರ, ಒಂದು ಚುನಾವಣೆ ಪರಿಕಲ್ಪನೆಯನ್ನು ಹೇರಲು ಪ್ರಯತ್ನಿಸುತ್ತಿರುವುದಕ್ಕೆ ಪಕ್ಷದ ಬಲವಾದ ಆಕ್ಷೇಪಣೆಯನ್ನು ಉಲ್ಲೇಖಿಸಿದ ಅವರು, ಪ್ರಸ್ತಾವನೆಯು ಸಂವಿಧಾನದ ತತ್ವಗಳು ಮತ್ತು ಆತ್ಮಕ್ಕೆ ವಿರುದ್ಧವಾಗಿದೆ ಎಂದು ಯೆಚೂರಿ ಹೇಳಿದ್ದಾರೆ.

ಸಂವಿಧಾನದ ಪೀಠಿಕೆಯನ್ನು ಉಲ್ಲೇಖಿಸಿದ ಅವರು, ಚುನಾಯಿತ ಪ್ರತಿನಿಧಿಗಳು ಜನರಿಗೆ ಮತ್ತು ಕಾರ್ಯಾಂಗಕ್ಕೆ ಹೊಣೆಗಾರರಾಗಿದ್ದಾರೆ ಅಥವಾ ಚುನಾವಣೆಯ ಪರಿಣಾಮವಾಗಿ ಅಧಿಕಾರ ವಹಿಸಿಕೊಳ್ಳುವ ಸರ್ಕಾರವು ಶಾಸಕಾಂಗಕ್ಕೆ ಜವಾಬ್ದಾರರಾಗಿರುತ್ತಾರೆ. ನಮ್ಮ ಸಂವಿಧಾನದ ಈ ಅಂಶಗಳನ್ನು ತಿರುಚಲಾಗುವುದಿಲ್ಲ, ದುರ್ಬಲಗೊಳಿಸುವುದನ್ನು ಬಿಟ್ಟುಬಿಡುವುದಿಲ್ಲ ಎಂದು ನಾವು ನಂಬುತ್ತೇವೆ. ಅಂತಹ ಪ್ರಸ್ತಾಪವು ಅಂತರ್ಗತವಾಗಿ ಪ್ರಜಾಪ್ರಭುತ್ವ ವಿರೋಧಿಯಾಗಿದೆ ಮತ್ತು ನಮ್ಮ ಒಕ್ಕೂಟ ವ್ಯವಸ್ಥೆಯ ಮೂಲಭೂತ ತತ್ವಗಳನ್ನು ಉಲ್ಲಂಘಿಸುತ್ತದೆ ಎಂದು ಹೇಳಿದ ಅವರು, 2018ರಲ್ಲಿ ಕಾನೂನು ಆಯೋಗಕ್ಕೆ ಸಲ್ಲಿಸಿದ ಟಿಪ್ಪಣಿಯನ್ನು ಉಲ್ಲೇಖಿಸಿದ್ದಾರೆ.

ಸಮಿತಿಯ ಅಕ್ಟೋಬರ್ 18, 2023ರ ಪತ್ರವು ಏಕಕಾಲದಲ್ಲಿ ಚುನಾವಣೆಗಳನ್ನು ಆಯೋಜಿಸಲು ಸೂಕ್ತವಾದ ಕಾನೂನು ತಿದ್ದುಪಡಿ ಮತ್ತು ಆಡಳಿತಾತ್ಮಕ ಚೌಕಟ್ಟನ್ನು ನಿರ್ಮಿಸಲು ಶಿಫಾರಸುಗಳನ್ನು ಮಾಡುವುದು ಸಮಿತಿಯ ಕಾರ್ಯವಾಗಿದೆ ಎಂದು ಹೇಳಿದೆ. ಇದರಿಂದ ಏಕಕಾಲಿಕ ಚುನಾವಣೆಯ ಬಗ್ಗೆ ನಿರ್ಧಾರವನ್ನು ಈಗಾಗಲೇ ತೆಗೆದುಕೊಳ್ಳಲಾಗಿದೆ ಮತ್ತು ಈಗ ಅದರ ಅನುಷ್ಠಾನದ ಪ್ರಶ್ನೆಯಾಗಿದೆ ಎಂಬುವುದು ತಿಳಿದು ಬರುತ್ತದೆ ಎಂದು ಹೇಳಿದ್ದಾರೆ.

ಲೋಕಸಭೆ ಮತ್ತು ರಾಜ್ಯ ವಿಧಾನಸಭೆ ಚುನಾವಣೆಗಳನ್ನು ಒಟ್ಟಿಗೆ ನಡೆಸಲು ಸಂವಿಧಾನಕ್ಕೆ ತಿದ್ದುಪಡಿ ಮಾಡಬೇಕಾಗುತ್ತದೆ. ಸಂವಿಧಾನದ ಅಡಿಯಲ್ಲಿ, ಒಂದು ಸರ್ಕಾರವು ಅವಿಶ್ವಾಸ ನಿರ್ಣಯದ ವೇಳೆ ಶಾಸಕಾಂಗದ ವಿಶ್ವಾಸವನ್ನು ಕಳೆದುಕೊಂಡರೆ ರಾಜೀನಾಮೆ ನೀಡಬೇಕು. ಪರ್ಯಾಯ ಸರ್ಕಾರ ರಚಿಸಲಾಗದಿದ್ದರೆ, ಸದನವನ್ನು ವಿಸರ್ಜಿಸಿ ಮಧ್ಯಂತರ ಚುನಾವಣೆಗೆ ಹೋಗಬೇಕಿದೆ. ಲೋಕಸಭೆ ಅಥವಾ ಶಾಸಕಾಂಗದ ಜೀವಿತಾವಧಿಯನ್ನು ವಿಸ್ತರಿಸುವ ಯಾವುದೇ ಪ್ರಯತ್ನವು ಸಂವಿಧಾನ ವಿರೋಧಿ ಮಾತ್ರವಲ್ಲದೆ ಪ್ರಜಾಪ್ರಭುತ್ವ ವಿರೋಧಿಯೂ ಆಗಿರುತ್ತದೆ ಎಂದು ಸಿಪಿಐ(ಎಂ) ಹೇಳಿದೆ.

ಒಂದು ರಾಷ್ಟ್ರ, ಒಂದು ಚುನಾವಣೆ ಕುರಿತು ಸಂವಿಧಾನದ ಅಡಿಯಲ್ಲಿ ಅಸ್ತಿತ್ವದಲ್ಲಿರುವ ಚೌಕಟ್ಟನ್ನು ಗಮನದಲ್ಲಿಟ್ಟುಕೊಂಡು ಲೋಕಸಭೆ, ರಾಜ್ಯ ವಿಧಾನಸಭೆಗಳು, ಪುರಸಭೆಗಳು ಮತ್ತು ಪಂಚಾಯತ್‌ಗಳಿಗೆ ಏಕಕಾಲದಲ್ಲಿ ಚುನಾವಣೆಗಳನ್ನು ನಡೆಸುವ ಕುರಿತು ಪರಿಶೀಲಿಸಿ ಶಿಫಾರಸುಗಳನ್ನು  ಮಾಡಲು ಮಾಜಿ ರಾಷ್ಟ್ರಪತಿ ಕೋವಿಂದ್‌ ನೇತೃತ್ವದಲ್ಲಿ ಸಮಿತಿ ರಚಿಸಲಾಗಿತ್ತು. ಸಂವಿಧಾನ, ಜನಪ್ರತಿನಿಧಿ ಕಾಯಿದೆ-1950 ಮತ್ತು ಅದರ ಅಡಿಯಲ್ಲಿ ರಚಿಸಲಾದ ನಿಯಮಗಳು ಮತ್ತು ಇತರ ಕಾನೂನುಗಳಿಗೆ ನಿರ್ದಿಷ್ಟ ತಿದ್ದುಪಡಿಗಳನ್ನು ಪರಿಶೀಲಿಸಲು ಮತ್ತು ತಿದ್ದುಪಡಿ ಕುರಿತ ಶಿಫಾರಸ್ಸಿಗೆ ಸಮಿತಿ ರಚಿಸಲಾಗಿದೆ.

ಸೆ.1ರಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಮತ್ತು ರಾಜ್ಯ ಸಚಿವ ಅರ್ಜುನ್ ರಾಮ್ ಮೇಘವಾಲ್ ಅವರು  ಮಾಜಿ ರಾಷ್ಟ್ರಪತಿ ಕೋವಿಂದ್ ಅವರ ಜೊತೆ ನಡೆಸಿದ ಸಭೆಯ ಬಳಿಕ ಏಕಕಾಲದಲ್ಲಿ ಸಂಸತ್ತಿಗೆ ಮತ್ತು ವಿಧಾನಸಭೆ ಚುನಾವಣೆಗಳನ್ನು ನಡೆಸುವ ಬಗ್ಗೆ ಪರಿಶೀಲಿಸಲು ಕೋವಿಂದ್ ಅವರ ನೇತೃತ್ವದ ಸಮಿತಿ ರಚಿಸಿದ್ದರು.

ಸರ್ಕಾರದ ಸೆ.1ರ ಅಧಿಸೂಚನೆಯಲ್ಲಿ ಕೋವಿಂದ್ ಅವರನ್ನು ಹೊರತುಪಡಿಸಿ, ಸಮಿತಿಯಲ್ಲಿ ಅಮಿತ್‌ ಶಾ, ವಿರೋಧ ಪಕ್ಷದ ನಾಯಕ ಅಧೀರ್ ರಂಜನ್ ಚೌಧರಿ ಮತ್ತು ಮಾಜಿ ಕಾಂಗ್ರೆಸ್ ನಾಯಕ ಗುಲಾಂ ನಬಿ ಆಜಾದ್, ಹಣಕಾಸು ಆಯೋಗದ ಮಾಜಿ ಅಧ್ಯಕ್ಷ ಎನ್.ಕೆ. ಸಿಂಗ್, ಹಿರಿಯ ವಕೀಲ ಹರೀಶ್ ಸಾಳ್ವೆ, ಲೋಕಸಭೆಯ ಮಾಜಿ ಪ್ರಧಾನ ಕಾರ್ಯದರ್ಶಿ ಸುಭಾಷ್ ಕಶ್ಯಪ್ ಮತ್ತು ಮಾಜಿ ಮುಖ್ಯ ವಿಜಿಲೆನ್ಸ್ ಕಮಿಷನರ್ ಸಂಜಯ್ ಕೊಠಾರಿ ಇತರ ಸದಸ್ಯರಾಗಿದ್ದರು. ಅಧೀರ್ ರಂಜನ್ ಚೌದರಿ ಸಮಿತಿಯ ಭಾಗವಾಗಲು ನಿರಾಕರಿಸಿದ್ದರು.

ಇದನ್ನು ಓದಿ: ಬಿಲ್ಕಿಸ್ ಬಾನು ಸಾಮೂಹಿಕ ಅತ್ಯಾಚಾರ ಪ್ರಕರಣ: ಅಪರಾಧಿಗಳನ್ನು ಬಿಡುಗಡೆ ಮಾಡಿದ್ದ ಗುಜರಾತ್‌ ಸರಕಾರದ ಆದೇಶ ರದ್ದುಗೊಳಿಸಿದ ಸುಪ್ರೀಂಕೋರ್ಟ್‌

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...