Homeಮುಖಪುಟಮಣಿಪುರ ರಾಜ್ಯಪಾಲರನ್ನು ಭೇಟಿ ಮಾಡಿದ ಸಿಪಿಐ(ಎಂ) ನಿಯೋಗ: ಪರಿಹಾರ ಶಿಬಿರಗಳಲ್ಲಿನ ಭೀಕರ ಪರಿಸ್ಥಿತಿ ಕುರಿತು ಚರ್ಚೆ

ಮಣಿಪುರ ರಾಜ್ಯಪಾಲರನ್ನು ಭೇಟಿ ಮಾಡಿದ ಸಿಪಿಐ(ಎಂ) ನಿಯೋಗ: ಪರಿಹಾರ ಶಿಬಿರಗಳಲ್ಲಿನ ಭೀಕರ ಪರಿಸ್ಥಿತಿ ಕುರಿತು ಚರ್ಚೆ

- Advertisement -
- Advertisement -

ಹಿಂಸಾಪೀಡಿತ ಮಣಿಪುರ ರಾಜ್ಯಕ್ಕೆ ಭೇಟಿ ನೀಡಿರುವ ಸೀತಾರಾಮ ಯೆಚೂರಿ ನೇತೃತ್ವದ ಸಿಪಿಐ(ಎಂ) ಪಕ್ಷದ ನಿಯೋಗವು ರಾಜ್ಯಪಾಲರಾದ ಅನುಸೂಯ ಊಕಿ ಅವರನ್ನು ಭೇಟಿ ಮಾಡಿದ್ದಾರೆ. ಈ ವೇಳೆ ರಾಜ್ಯದಲ್ಲಿ ನಡೆಯುತ್ತಿರುವ ಗಲಭೆಯಿಂದ ನಿರಾಶ್ರಿತರಾಗಿ ವಿವಿಧ ಶಿಬಿರಗಳಲ್ಲಿ ಆಶ್ರಯ ಪಡೆಯುತ್ತಿರುವವರ ಪರಿಸ್ಥಿತಿ ಬಗ್ಗೆ ಚರ್ಚೆ ನಡೆಸಿದ್ದಾರೆ. ಈ ಬಗ್ಗೆ ರಾಜ್ಯ ಭವನ ಪತ್ರಿಕಾ ಪ್ರಕಟಣೆ ಬಿಡುಗಡೆ ಮಾಡಿದೆ.

ಸೀತಾರಾಮ ಯೆಚೂರಿ ಅವರು ಟ್ವೀಟ್ ಮಾಡಿದ್ದು, ”ಸಿಪಿಐ(ಎಂ) ನಿಯೋಗವು ಮಣಿಪುರದ ಗೌರವಾನ್ವಿತ ರಾಜ್ಯಪಾಲರಾದ ಅನುಸೂಯ ಊಕಿ ಅವರನ್ನು ಭೇಟಿ ಮಾಡಿದೆ. ಅವರೊಂದಿಗೆ ಒಂದು ಗಂಟೆ ಸುದೀರ್ಘ ಚರ್ಚೆ ನಡೆಸಿದರು. ಪರಿಹಾರ ಶಿಬಿರಗಳಲ್ಲಿನ ಭೀಕರ ಪರಿಸ್ಥಿತಿಗಳನ್ನು ಸುಧಾರಿಸಲು ತಾವು ಮಧ್ಯಸ್ಥಿಕೆವಹಿಸಬೇಕು ಎಂದು ವಿನಾಂತಿಸಿದ್ದೇವೆ” ಎಂದು ತಿಳಿಸಿದ್ದಾರೆ.

ಯೆಚೂರಿ ನೇತೃತ್ವದ ತಂಡವು ಶುಕ್ರವಾರ ಚುರಚಂದಪುರ ಹಾಗೂ ಮೊಯಿರಂಗ್ ಪ್ರದೇಶದಲ್ಲಿರುವ ನಿರಾಶ್ರಿತರ ಶಿಬಿರಗಳಿಗೆ ಭೇಟಿ ನೀಡಿದ್ದು, ಅಲ್ಲಿ ರಾಜ್ಯ ಸರ್ಕಾರ ಸ್ಥಳೀಯ ಆಡಳಿತ ಮಾಡಿರುವ ವ್ಯವಸ್ಥೆ ಹಾಗೂ ಅದರ ನಿರ್ವಹಣೆ ತೃಪ್ತಿದಾಯಕವಾಗಿಲ್ಲ ಎಂದು ರಾಜ್ಯಪಾಲರ ಬಳಿ ಹೇಳಿದ್ದಾಗಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

”ಈ ನಿರಾಶ್ರಿತರ ಶಿಬಿರಗಳಲ್ಲಿ ಮಕ್ಕಳು ಹಾಗೂ ಹಾಲುಣಿಸುವ ಮಹಿಳೆಯರಿಗೆ ಪೌಷ್ಟಿಕ ಆಹಾರ ಸಿಗುತ್ತಿಲ್ಲ. ಶಿಬಿರಗಳಲ್ಲಿ ಮಕ್ಕಳ ಜನನ ಕೂಡ ಆಗುತ್ತಿವೆ” ಎನ್ನುವ ವಿಚಾರವನ್ನು ನಿಯೋಗವು ರಾಜ್ಯಪಾಲರ ಗಮನಕ್ಕೆ ತಂದಿದೆ. ಅಲ್ಲದೆ, ”ಇಂತಹ ಪರಿಸ್ಥಿತಿಯಲ್ಲಿ ಈ ನಿರಾಶ್ರಿತರು ಅಶಾಭಾವನೆಯಿಂದ ಬದುಕುವುದಾದರೂ ಹೇಗೆ?” ಎಂದು ಪ್ರಶ್ನಿಸಿದೆ.

ಮೂರು ದಿನಗಳ ಭೇಟಿಗಾಗಿ ಈ ನಿಯೋಗವು ಶುಕ್ರವಾರ ಮಣಿಪುರಕ್ಕೆ ಬಂದಿಳಿದಿದೆ. ನಿರಾಶ್ರಿತ ಶಿಭಿರಗಳಿಗೆ ಭೇಟಿ ನೀಡಿದೆ.

”ಈಗ ಇರುವ ಪರಿಸ್ಥಿತಿಗೆ ರಾಜಕೀಯ ಪರಿಹಾರ ಮಾತ್ರ ಸಾಧ್ಯ. ಪೊಲೀಸ್‌ ಠಾಣೆಗಳಿಂದ ಶಸ್ತ್ರಾಸ್ತ್ರಗಳನ್ನು ಲೂಟಿ ಮಾಡುವ ವಿಷಯ ನಿಜಕ್ಕೂ ಆಘಾತಕಾರಿ” ಎಂದು ಯೆಚೂರಿ ಹೇಳಿದ್ದಾರೆ.

”ಸದ್ಯದ ಸಂಘರ್ಷ ತಡೆಯಲು ಎಲ್ಲಾ ನಾಯಕರು ಪಕ್ಷಭೇದವಿಲ್ಲದೆ ರಾಜ್ಯ ಸರ್ಕಾರದೊಂದಿಗೆ ಸಹಕರಿಸಬೇಕು. ಹಿಂಸೆ ಎಲ್ಲದಕ್ಕೂ ಪರಿಹಾರವಲ್ಲ” ಎಂದು ಊಕಿ ಅವರು ನಿಯೋಗದೊಂದಿಗೆ ಹೇಳಿದ್ದಾರೆ.

ಅಲ್ಲದ ಮಣಿಪುರದಲ್ಲಿ ಶಾಂತಿ ನೆಲೆಸುವಂತೆ ಮಾಡಲು ತಾವು ವೈಯಕ್ತಿಕವಾಗಿ ಪ್ರಧಾನಿ ನರೇಂದ್ರ ಮೋದಿ ಹಾಗೂ ಕೇಂದ್ರ ನಾಯಕರನ್ನು ಭೇಟಿ ಮಾಡಿದ್ದಾಗಿ ರಾಜ್ಯಪಾಲರು ನಿಯೋಗಕ್ಕೆ ಹೇಳಿದ್ದಾರೆ.

ಇದನ್ನೂ ಓದಿ: ಮಣಿಪುರದಲ್ಲಿ ಮುಂದುವರೆದ ಹಿಂಸಾಚಾರ: ಕುಕಿ ಸಮುದಾಯದ ಮೂವರ ಹತ್ಯೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಐದು ರಾಜ್ಯಗಳ ವಿಧಾನಸಭೆ ಚುನಾವಣೆ ದಿನಾಂಕ ಪ್ರಕಟ; ಬಂಗಾಳದಲ್ಲಿ ಮಾತ್ರ ಎರಡು ಹಂತದ ಮತದಾನ

ಅಸ್ಸಾಂ, ಪಶ್ಚಿಮ ಬಂಗಾಳ, ತಮಿಳುನಾಡು, ಕೇರಳ ಮತ್ತು ಪುದುಚೇರಿ ವಿಧಾನಸಭಾ ಚುನಾವಣೆಗಳ ವೇಳಾಪಟ್ಟಿಯನ್ನು ಭಾರತೀಯ ಚುನಾವಣಾ ಆಯೋಗದ (ಇಸಿಐ) ಮುಖ್ಯಸ್ಥರಾದ ಜ್ಞಾನೇಶ್ ಕುಮಾರ್ ಪ್ರಕಟಿಸಿದರು. ದೆಹಲಿಯಲ್ಲಿ ಇಂದು ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಮುಖ್ಯ...

ಫ್ಲಿಪ್‌ಕಾರ್ಟ್‌ನಿಂದ 1 ರೂ.ಗೆ ಹಾಲು ಮಾರಾಟ; ಪ್ರಧಾನಿ ಮೋದಿ ಮಧ್ಯಸ್ಥಿಕೆಗೆ ಬಮುಲ್‌ ಆಗ್ರಹ

ಫ್ಲಿಪ್‌ಕಾರ್ಟ್‌ ಸಂಸ್ಥೆಯು ಆನ್‌ಲೈನ್‌ ಮೂಲಕ 1 ರೂ.ಗೆ ಲೀಟರ್‌ ಹಾಲನ್ನು ಮಾರಾಟ ಮಾಡಿರುವುದು ಭಾರಿ ಜನಾಕ್ರೋಶಕ್ಕೆ ಕಾರಣವಾಗಿದೆ. ಈ ಬಗ್ಗೆ, ಬೆಂಗಳೂರು ನಗರ, ಗ್ರಾಮೀಣ ಮತ್ತು ರಾಮನಗರ ಜಿಲ್ಲಾ ಸಹಕಾರಿ ಹಾಲು ಉತ್ಪಾದಕರ...

“ಮಕ್ಕಳ ಹಂತಕನನ್ನು ಹುಡುಕಿ ಹತ್ಯೆ ಮಾಡುತ್ತೇವೆ” : ನೆತನ್ಯಾಹು ಸುರಕ್ಷಿತವಾಗಿದ್ದಾರೆ ಎಂಬ ಇಸ್ರೇಲ್ ಸ್ಪಷ್ಟನೆ ಬೆನ್ನಲ್ಲೆ ಐಆರ್‌ಜಿಸಿ ಹೇಳಿಕೆ

ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅವರನ್ನು ಹುಡುಕಿ ಹತ್ಯೆ ಮಾಡುತ್ತೇವೆ ಎಂದು ಇರಾನ್‌ನ ಇಸ್ಲಾಮಿಕ್ ರೆವಲ್ಯೂಷನರಿ ಗಾರ್ಡ್ ಕಾರ್ಪ್ಸ್ (ಐಆರ್‌ಜಿಸಿ) ಹೇಳಿರುವುದಾಗಿ ವರದಿಯಾಗಿದೆ. ನೆತನ್ಯಾಹು ಅವರ ಹತ್ಯೆಯ ವದಂತಿಗಳನ್ನು ಇಸ್ರೇಲ್ ನಿರಾಕರಿಸಿದ ಬೆನ್ನಲ್ಲೇ, ಐಆರ್‌ಜಿಸಿ ಈ...

ಮಹಾರಾಷ್ಟ್ರ| ಇಫ್ತಾರ್ ಕೂಟಕ್ಕೆ ಸೇರಿದ್ದ ಮುಸ್ಲಿಮರ ಮೇಲೆ ಹಿಂದುತ್ವವಾದಿ ಗುಂಪಿನಿಂದ ದಾಳಿ

ರಂಜಾನ್‌ ಮಾಸದ ಉಪವಾಸ ಮುರಿಯಲು ನೆರೆದಿದ್ದ ಜನರ ಮೇಲೆ ಅಪರಿಚಿತ ವ್ಯಕ್ತಿಗಳ ಗುಂಪೊಂದು ದಾಳಿ ನಡೆಸಿರುವ ಘಟನೆ ಮಹಾರಾಷ್ಟ್ರದ ಪುಣೆಯಲ್ಲಿ ನಡೆದಿದೆ. ಇಫ್ತಾರ್ ಕೂಟಕ್ಕೆ ಸಿದ್ಧತೆ ನಡೆಸುತ್ತಿದ್ದಾಗ, ಸುಮಾರು 100 ಕ್ಕೂ ಹೆಚ್ಚು...

ಆಸ್ಕರ್‌ ಅಂತಿಮ ಪಟ್ಟಿಗೆ ಆಯ್ಕೆಯಾದ ‘ದಿ ವಾಯ್ಸ್ ಆಫ್ ಹಿಂದ್ ರಜಬ್’

ಗಾಝಾದ ಆರು ವರ್ಷದ ಬಾಲಕಿ ಹಿಂದ್ ರಜಬ್‌ ಮತ್ತು ಆಕೆಯ ಸಂಬಂಧಿಕರನ್ನು ಇಸ್ರೇಲಿ ಸೈನಿಕರು ಭೀಕರವಾಗಿ ಹತ್ಯೆ ಮಾಡಿದ ಕಥೆಯನ್ನು ಹೇಳುವ 'ದಿ ವಾಯ್ಸ್ ಆಫ್ ಹಿಂದ್ ರಜಬ್' ಚಲನಚಿತ್ರವು 2026ರ ಆಸ್ಕರ್...

ಉತ್ತರ ಪ್ರದೇಶ| ದಲಿತ ಕುಟುಂಬದ ಮದುವೆ ಮನೆಯಲ್ಲಿ ಸವರ್ಣಿಯರಿಂದ ಹಲ್ಲೆ; ಬಂದೂಕಿನಿಂದ ಬೆದರಿಕೆ

ಮಾರ್ಚ್ 10 ರಂದು ಉತ್ತರ ಪ್ರದೇಶದ ಲಖಿಂಪುರ ಖೇರಿ ಜಿಲ್ಲೆಯ ಟಿಕುನಿಯಾ ಪೊಲೀಸ್ ಠಾಣೆ ಪ್ರದೇಶದಲ್ಲಿ ಜಾತಿ ಆಧಾರಿತ ಹಿಂಸಾಚಾರದ ತೀವ್ರ ಆತಂಕಕಾರಿ ಘಟನೆ ಬೆಳಕಿಗೆ ಬಂದಿದೆ. 24 ಗಂಟೆಗಳ ಒಳಗೆ ಎಫ್‌ಐಆರ್...

’70 ಲಕ್ಷ ಬಂಗಾಳಿ ಮುಸ್ಲಿಮರನ್ನು ಹೊರದಬ್ಬಲು ಸಾಧ್ಯವಿಲ್ಲ..ಅವರೇ ದೇಶ ಬಿಡುವಂತಹ ಪರಿಸ್ಥಿತಿ ಸೃಷ್ಟಿಸುತ್ತೇವೆ’: ಅಸ್ಸಾಂ ಸಿಎಂ ಹಿಮಂತ ಬಿಸ್ವಾ ಶರ್ಮಾ

ಸುಮಾರು 70 ಲಕ್ಷ 'ಬಂಗಾಳಿ ಮುಸ್ಲಿಮರ'ನ್ನು ಭಾರತದಿಂದ ಹೊರಹಾಕುವುದು 'ಮಾನವೀಯವಾಗಿ ಸಾಧ್ಯವಿಲ್ಲ'. ಹಾಗಾಗಿ, ಅವರಾಗಿಯೇ ದೇಶ ತೊರೆಯುವಂತಹ ಪರಿಸ್ಥಿತಿಯನ್ನು ನಾವು ಸೃಷ್ಟಿಸುತ್ತೇವೆ ಎಂದು ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಹೇಳಿದ್ದಾರೆ. ಈ...

ಮೋದಿಯವರ ವಿದೇಶಾಂಗ ನೀತಿ ಸಂಪೂರ್ಣವಾಗಿ ದಿಕ್ಕು ತಪ್ಪಿದೆ, ನಗೆಪಾಟಲಿಗೆ ಈಡಾಗಿದೆ, ಅನೈತಿಕತೆಯಿಂದ ಕೂಡಿದೆ. ಇದು ಜಗಜ್ಜಾಹೀರಾಗಿದೆ – ಶ್ರೀಪಾದ್‌ ಭಟ್

ತಮ್ಮ ಸ್ಥಳೀಯ ಮತಬ್ಯಾಂಕ್ ರಾಜಕಾರಣದ ಜೊತೆಗೆ ವಿದೇಶಿ ನೀತಿಯನ್ನು ತಳುಕು ಹಾಕುವುದು. ಉದಾಹರಣೆಗೆ ಅಮೆರಿಕ-ಇಸ್ರೇಲ್ ಜಂಟಿಯಾಗಿ ನಡೆಸುತ್ತಿರುವ ಇರಾನ್ ಮೇಲಿನ ಯುದ್ಧದ ಸಮಯದಲ್ಲಿ ಮೋದಿ ನೇತೃತ್ವದ ಸರ್ಕಾರವು ತಾನು ಇರಾನ್ ಪರ ನಿಲುವು ತಾಳಿದರೆ...

ದೆಹಲಿ ಪೊಲೀಸರಿಂದ 10 ಮಂದಿ ಹೋರಾಟಗಾರರ ಅಪಹರಣ ಆರೋಪ : ಹೈಕೋರ್ಟ್‌ಗೆ ಹೇಬಿಯಸ್ ಕಾರ್ಪಸ್ ಅರ್ಜಿ

ಸಿವಿಲ್ ಸೊಸೈಟಿಯ ಹತ್ತು ಮಂದಿ ಹೋರಾಟಗಾರರನ್ನು ದೆಹಲಿ ಪೊಲೀಸರು ಅಪಹರಿಸಿದ್ದಾರೆ ಅಥವಾ ಅಕ್ರಮವಾಗಿ ಬಂಧಿಸಿದ್ದಾರೆ ಎಂದು ಮಾನವ ಹಕ್ಕುಗಳ ಗುಂಪುಗಳು ಆರೋಪಿಸಿವೆ. ಹತ್ತು ಮಂದಿಯನ್ನು ದೆಹಲಿ ಪೊಲೀಸರು ಮತ್ತು ಇತರ ರಾಜ್ಯಗಳ ಏಜೆನ್ಸಿಗಳು ಅಪಹರಿಸಿವೆ...

ಗುಜರಾತ್‌: 34 ಜಿಲ್ಲೆಗಳ ಪೈಕಿ 20 ಜಿಲ್ಲೆಗಳಲ್ಲಿ 2 ಲಕ್ಷಕ್ಕೂ ಹೆಚ್ಚು ಮಕ್ಕಳು ಅಪೌಷ್ಟಿಕತೆಯಿಂದ ಬಳಲುತ್ತಿದ್ದಾರೆ: ವಿಧಾನಸಭೆಗೆ ಮಾಹಿತಿ ನೀಡಿದ ಸರ್ಕಾರ

ಗಾಂಧಿನಗರ: ರಾಜ್ಯದ 34 ಜಿಲ್ಲೆಗಳ ಪೈಕಿ 20 ಜಿಲ್ಲೆಗಳಲ್ಲಿ 2 ಲಕ್ಷಕ್ಕೂ ಹೆಚ್ಚು ಮಕ್ಕಳು ಅಪೌಷ್ಟಿಕತೆಯಿಂದ ಬಳಲುತ್ತಿದ್ದಾರೆ ಮತ್ತು ಪರಿಸ್ಥಿತಿಯನ್ನು ಸುಧಾರಿಸಲು ವಿವಿಧ ಕ್ರಮಗಳನ್ನು ತೆಗೆದುಕೊಳ್ಳಲಾಗುತ್ತಿದೆ ಎಂದು ಗುಜರಾತ್ ಸರ್ಕಾರ ಶನಿವಾರ ವಿಧಾನಸಭೆಗೆ...