Homeಕರ್ನಾಟಕಮಂಗಳೂರಿನಲ್ಲಿ ವಲಸೆ ಕಾರ್ಮಿಕನ ಗುಂಪು ಹತ್ಯೆ; ಎಸ್‌ಐಟಿ ತನಿಖೆಗೆ ಸಿಪಿಐಎಂ ಆಗ್ರಹ

ಮಂಗಳೂರಿನಲ್ಲಿ ವಲಸೆ ಕಾರ್ಮಿಕನ ಗುಂಪು ಹತ್ಯೆ; ಎಸ್‌ಐಟಿ ತನಿಖೆಗೆ ಸಿಪಿಐಎಂ ಆಗ್ರಹ

- Advertisement -
- Advertisement -

ಮಂಗಳೂರು ನಗರದ ಹೊರವಲಯದ ಕುಡುಪು ಎಂಬಲ್ಲಿ ನಿನ್ನೆ ಎಪ್ರಿಲ್ 27 ರಂದು ಕ್ರಿಕೆಟ್ ಆಡುತ್ತಿದ್ದ ಗುಂಪೊಂದು ಅಲ್ಲಿದ್ದ ವಲಸೆ ಕಾರ್ಮಿಕನೋರ್ವನನ್ನು ಥಳಿಸಿ ಹತ್ಯೆ ಗೈದಿರುವ ಆತಂಕಕಾರಿ ಕೃತ್ಯ ಬೆಳಕಿಗೆ ಬಂದಿದೆ. ಪ್ರಕರಣದ ಕುರಿತು ವಿಶೇಷ ತನಿಖಾ ತಂಡ (ಎಸ್‌ಐಟಿ) ತನಿಖೆ ನಡೆಸಬೇಕು ಎಂದು ಸಿಪಿಐಎಂ ಆಗ್ರಹಿಸಿದೆ.

“ಘಟನೆ ನಡೆದು ಒಂದು ದಿನ ಕಳೆದಿದ್ದರೂ ಪೊಲೀಸ್ ಇಲಾಖೆ ಈ ಕುರಿತು ಯಾವುದೇ ಅಧಿಕೃತ ಮಾಹಿತಿ ನೀಡುತ್ತಿಲ್ಲ. ಇದು ಹಲವು ಅನುಮಾನಗಳಿಗೆ ಕಾರಣವಾಗುತ್ತಿದೆ. ಗುಂಪು ಹಲ್ಲೆ, ಹತ್ಯೆಯಲ್ಲಿ ಭಾಗಿಯಾಗಿರುವ ರಾಜಕಿಯ ಹಿನ್ನಲೆಯ ಕೆಲವು ಪ್ರಭಾವಿಗಳನ್ನು ರಕ್ಷಿಸುವ, ಪ್ರಕರಣದ ತೀವ್ರತೆಯನ್ನು ತಗ್ಗಿಸುವ, ಪ್ರಕರಣವನ್ನು ದುರ್ಬಲಗೊಳಿಸುವ ಯತ್ನವೂ ಪ್ರಭಾವಿ ರಾಜಕಾರಣಿಗಳಿಂದ, ಸ್ಥಳೀಯ ಜನಪ್ರತಿನಿಧಿಗಳಿಂದ ನಡೆಯುತ್ತಿರುವ ಕುರಿತು ಅನುಮಾನಗಳು ಸಾರ್ವಜನಿಕ ವಲಯದಿಂದ ವ್ಯಕ್ತವಾಗುತ್ತಿದೆ. ರಾಜ್ಯ ಸರಕಾರ ಈ ಕುರಿತು ಗಮನ ಹರಿಸಬೇಕು, ಖುದ್ದು ಮುಖ್ಯಮಂತ್ರಿಗಳು ಈ ಗುಂಪು ಹಲ್ಲೆ, ಹತ್ಯೆ ಪ್ರಕರಣವನ್ನು ಗಂಭೀರಾವಗಿ ಪರಿಗಣಿಸಿ ಉತ್ತಮ ಹಿನ್ನಲೆಯ ಅಧಿಕಾರಿಗಳ ತಂಡವನ್ನು ತನಿಖೆಗೆ ನೇಮಿಸಬೇಕು” ಎಂದು ಸಿಪಿಐಎಂ ದಕ್ಷಿಣ ಕನ್ನಡ ಜಿಲ್ಲಾ ಸಮಿತಿ ಒತ್ತಾಯಿಸಿದೆ.

ಕುಡುಪು ಮೈದಾನದ ಸಮೀಪ ಬಂದಿದ್ದ ವಲಸೆ ಕಾರ್ಮಿಕನನ್ನು ಆತನ ಧರ್ಮದ ಗುರುತಿನ ಕಾರಣಕ್ಕೆ ಕಲ್ಲು, ದೊಣ್ಣೆ, ಬ್ಯಾಟುಗಳಿಂದ ಅಲ್ಲಿದ್ದ ಗುಂಪು ಹಲ್ಲೆ ನಡೆಸಿ ಕೊಂದು ಹಾಕಿದೆ ಎಂದು ಎಲ್ಲೆಡೆ ಪುಕಾರು ಹಬ್ಬಿದೆ. ನತದೃಷ್ಟ ವಲಸೆ ಕಾರ್ಮಿಕ ದೇಶ ವಿರೋಧಿ ಘೋಷಣೆ ಕೂಗಿದ್ದಾನೆ ಎಂಬ ವದಂತಿಯನ್ನೂ ದುಷ್ಕರ್ಮಿಗಳ ಗುಂಪು ಹರಿಯಬಿಟ್ಟಿದೆ. ಆ ಮೂಲಕ ತಮ್ಮ ಗಂಭೀರ ದುಷ್ಕೃತ್ಯವನ್ನು ದೇಶ ಪ್ರೇಮದ ಲೇಬಲ್ ಅಂಟಿಸಿ ಸಮರ್ಥಿಸಿಕೊಳ್ಳುವ ಹೀನ ಯತ್ನವೂ ನಡೆಯುತ್ತಿದೆ ಎಂದು ಸ್ಥಳೀಯ ಹೋರಾಟಗಾರರು ಆರೋಪಿಸಿದ್ದಾರೆ.

ಮಾಜಿ ಕಾರ್ಪೊರೇಟರ್ ಓರ್ವರ ಪತಿ ಈ ಗುಂಪನ್ನು ಹಲ್ಲೆ ನಡೆಸಲು ಪ್ರಚೋದಿಸಿದ್ದಾರೆ ಎಂಬ ಕುರಿತೂ ಸ್ಥಳೀಯರು ಮಾತಾಡಿಕೊಳ್ಳುತ್ತಿದ್ದಾರೆ. ಹತ್ಯೆಯ ತರುವಾಯ ಸ್ಥಳೀಯ ಜನಪ್ರತಿನಿಧಿಗಳೂ ಮಧ್ಯಪ್ರವೇಶಿಸಿ ಪ್ರಕರಣದ ತೀವ್ರತೆಯನ್ನು ತಗ್ಗಿಸುವ, ಕೆಲವರನ್ನು ಬಚಾವ್ ಮಾಡುವ ಯತ್ನ ನಡೆಸುತ್ತಿರುವ ಆರೋಪಗಳೂ ಕೇಳಿಬರುತ್ತಿದೆ. ಮಂಗಳೂರು ಪೊಲೀಸರು ಯಾವುದೇ ಅಧಿಕೃತ ಮಾಹಿತಿಯನ್ನು ಘಟನೆ ನಡೆದು ಒಂದು ದಿನ ಕಳೆದರೂ ನೀಡದಿರುವುದು ಪ್ರಕರಣದ ಕುರಿತು ಅನುಮಾನಗಳನ್ನು ಹೆಚ್ಚಿಸಿದೆ.

ಮಂಗಳೂರು ನಗರದಲ್ಲಿ ಈ ರೀತಿ ಗುಂಪು ಹಲ್ಲೆ, ಹತ್ಯೆ ನಡೆಯುವುದು ಕರಾವಳಿ ಜಿಲ್ಲೆಗಳು ಅಪಾಯದ ಗಡಿದಾಟುತ್ತಿರುವುದರ ಸಂಕೇತ, ಪೆಹಲ್ಗಾಮ್ ದುರಂತದ ಬೆನ್ನಲ್ಲೆ ಈ ಘಟನೆ ನಡೆದಿರುವುದು ಆಘಾತಕಾರಿ ವಿದ್ಯಾಮಾನ‌. ವಲಸೆ ಕಾರ್ಮಿಕರು, ಅವರ ಧರ್ಮದ ಹಾಗೂ ವಿವಿಧ ಗುರುತಿನ ಕಾರಣಕ್ಕೆ ‘ದೇಶಪ್ರೇಮ’ದ ಲೇಬಲ್ ಅಡಿ ದುಷ್ಕರ್ಮಿಗಳು ಬಹಿರಂಗವಾಗಿ ಹೊಡೆದು ಹಾಕುವುದು ಅನಾಗರಿಕತೆಯ ಪರಮಾವಧಿ. ಇದರ ಸಾಮಾಜಿಕ ಪರಿಣಾಮಗಳು ಸರಿಪಡಿಸಲಾಗಷ್ಟು ಗಂಭೀರವಾಗಿರುತ್ತದೆ ಎಂದು ಸಿಪಿಐಎಂ ಸಿಪಿಐಎಂ ಘಟನೆಯನ್ನು ಖಂಡಿಸಿದೆ.

‘ಮುಸ್ಲಿಂ’ ಎಂಬ ಕಾರಣಕ್ಕೆ ವಲಸೆ ಕಾರ್ಮಿಕನ ಗುಂಪು ಹತ್ಯೆ ಖಚಿತ

ಕುಡುಪುವಿನಲ್ಲಿ ಅಪರಿಚಿತ ಯುವಕನ ಮೃತದೇಹ ಪತ್ತೆಯಾದ ಘಟನೆ ತಿರುವು ಪಡೆದುಕೊಂಡಿದ್ದು, ಗುಂಪಿನಿಂದ ಹಲ್ಲೆಗೊಳಗಾಗಿ ಹತ್ಯೆಯಾಗಿರುವುದನ್ನು ಪೊಲೀಸರು ಖಚಿತಪಡಿಸಿಕೊಂಡಿರುವುದಾಗಿ ಈದಿನ.ಕಾಂ ವರದಿ ಮಾಡಿದೆ.

ಇದೀಗ ಈ ಘಟನೆಗೆ ಸಂಬಂಧಿಸಿದಂತೆ ಗುಂಪು ಹತ್ಯೆಯಲ್ಲಿ ಭಾಗಿಯಾಗಿದ್ದ ಆರೋಪದಲ್ಲಿ ಸುಮಾರು 15 ಮಂದಿ ಆರೋಪಿಗಳನ್ನು ತಡರಾತ್ರಿ ಬಂಧಿಸಿರುವುದಾಗಿ ವರದಿಯಾಗಿದೆ. ಆದರೆ, ಈ ಬಗ್ಗೆ ಇನ್ನೂ ಕೂಡ ಮಂಗಳೂರು ನಗರ ಪೊಲೀಸರು ಅಧಿಕೃತ ಮಾಹಿತಿ ನೀಡಿಲ್ಲ. ವಶಕ್ಕೆ ತೆಗೆದುಕೊಂಡ ಆರೋಪಿಗಳಿಂದ ಘಟನೆಯ ಬಗ್ಗೆ ಮಾಹಿತಿ ಕಲೆ ಹಾಕುತ್ತಿರುವುದಾಗಿ ತಿಳಿದು ಬಂದಿದೆ. ಅಲ್ಲದೇ, ‘ಮುಸ್ಲಿಂ’ ಎಂಬ ಕಾರಣಕ್ಕಾಗಿಯೇ ವಲಸೆ ಕಾರ್ಮಿಕನ ಮೇಲೆ ಹಲ್ಲೆ ಮಾಡಿ, ಹತ್ಯೆಗೈದಿರುವುದಾಗಿ ಪೊಲೀಸರ ತನಿಖೆಯ ವೇಳೆ ಖಚಿತವಾಗಿದೆ ಎಂದು ತಿಳಿದು ಬಂದಿದೆ.

ಘಟನೆಯ ಬಗ್ಗೆ ಹೆಚ್ಚು ಮಾಹಿತಿ ನೀಡಲು ಮಂಗಳವಾರ ಮಧ್ಯಾಹ್ನ 12 ಗಂಟೆಗೆ ಮಂಗಳೂರು ನಗರ ಪೊಲೀಸ್ ಕಮಿಷನರ್ ಅನುಪಮ್ ಅಗರ್ವಾಲ್ ಸುದ್ದಿಗೋಷ್ಠಿ ನಡೆಸಿ ಮಾಹಿತಿ ನೀಡಲಿರುವುದಾಗಿ ತಿಳಿದು ಬಂದಿದೆ.

ಧರ್ಮದ ಆಧಾರದ ಮೇಲೆ ಚಿಕಿತ್ಸೆ ನಿರಾಕರಿಸುವ ಪೋಸ್ಟ್ ಹಂಚಿಕೊಂಡ ವೈದ್ಯೆ; ವಿರೋಧದ ಬಳಿಕ ಡಿಲೀಟ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

‘ನನ್ನ ಮನೆ ಮೇಲೆ ದಾಳಿ ಮಾಡಿ… ಹೇಗೆ ಎದುರಿಸಬೇಕೆಂದು ಗೊತ್ತಿದೆ..’; ಬಿಜೆಪಿಗೆ ಮಮತಾ ಬ್ಯಾನರ್ಜಿ ಸವಾಲು

"ತಮ್ಮ ನಿವಾಸ ಮತ್ತು ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ನಾಯಕರ ನಿವಾಸವನ್ನು ಗುರಿಯಾಗಿಸಿಕೊಳ್ಳುವಂತೆ" ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸೋಮವಾರ ಬಿಜೆಪಿಗೆ ಸವಾಲು ಹಾಕಿದರು. ರಾಜ್ಯದಲ್ಲಿ, ಟಿಎಂಸಿ ನಾಯಕರ ಮೇಲಿನ ದಾಳಿಗೆ...

ಬೆಂಗಳೂರು: ವಿಶೇಷ ಪೂಜೆ ಹೆಸರಿನಲ್ಲಿ ಐಟಿ ಅಧಿಕಾರಿಗೆ 35 ಲಕ್ಷ ವಂಚನೆ: 59 ವರ್ಷದ ‘ಗಿಳಿ ಶಾಸ್ತ್ರ’ ಹೇಳುವ ವ್ಯಕ್ತಿ ಬಂಧನ

ಬೆಂಗಳೂರು: ವಿಶೇಷ ಪೂಜೆ ಮಾಡುವುದಾಗಿ ಹೇಳಿಕೊಂಡು ಆದಾಯ ತೆರಿಗೆ ಅಧಿಕಾರಿಗೆ 35 ಲಕ್ಷ ರೂಪಾಯಿ ವಂಚಿಸಿದ ಆರೋಪದ ಮೇಲೆ ತಮಿಳುನಾಡು ಮೂಲದ 59 ವರ್ಷದ ವ್ಯಕ್ತಿಯನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಥೇಣಿಯ ಶೇಖರ್...

ಬಿಹಾರ| ರಾಜ್ಯಸಭಾ ಚುನಾವಣೆ ಮತದಾನದಿಂದ ಹೊರಗುಳಿದ ನಾಲ್ವರು ಶಾಸಕರು; ಮಹಾಘಟಬಂಧನ್‌ಗೆ ಹಿನ್ನಡೆ

ಸೋಮವಾರ ಸಂಜೆ 4 ಗಂಟೆಗೆ ಮುಕ್ತಾಯಗೊಂಡ ರಾಜ್ಯಸಭಾ ಚುನಾವಣೆಯಲ್ಲಿ ನಾಲ್ವರು ಶಾಸಕರು ಮತದಾನದಿಂದ ಹೊರಗುಳಿಯುವ ಮೂಲಕ ಬಿಹಾರದ ಮಹಾಘಟಬಂಧನ್‌ಗೆ ಭಾರಿ ಹಿನ್ನಡೆಯಾಗಿದೆ. ಐದನೇ ಸ್ಥಾನಕ್ಕಾಗಿ ನಡೆಯುವ ಸ್ಪರ್ಧೆಯಲ್ಲಿ ವಿರೋಧ ಮೈತ್ರಿಕೂಟದ ನಿರೀಕ್ಷೆಗೆ ಭಾರಿ...

ರಾಜ್ಯಸಭೆಯಲ್ಲಿ LPG ಕೊರತೆ ಪ್ರಸ್ತಾಪಿಸಿದ ಮಲ್ಲಿಕಾರ್ಜುನ ಖರ್ಗೆ; ಪ್ರತಿಪಕ್ಷ ಅರಾಜಕತೆ ಸೃಷ್ಟಿಸಲು ಯತ್ನಿಸುತ್ತಿದೆ ಎಂದ ಸರ್ಕಾರ !

ನವದೆಹಲಿ: ರಾಜ್ಯಸಭೆಯಲ್ಲಿ ಸೋಮವಾರ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಎಲ್‌ಪಿಜಿ ಕೊರತೆಯ ವಿಷಯವನ್ನು ಪ್ರಸ್ತಾಪಿಸಿದರು ಮತ್ತು ಅಡುಗೆ ಅನಿಲದ ಬಿಕ್ಕಟ್ಟು ಮತ್ತು ಕಾಳಸಂತೆಕೋರತನವನ್ನು ತಡೆಯಲು ಸರ್ಕಾರ ಮುನ್ನೆಚ್ಚರಿಕೆ ಕ್ರಮಗಳನ್ನು ತೆಗೆದುಕೊಂಡಿಲ್ಲ ಎಂದು...

ಬೆಂಗಳೂರು| ಹಣ ನೀಡಲು ನಿರಾಕರಿಸಿದ ವ್ಯಕ್ತಿಯನ್ನು ಮಕ್ಕಳ ಮುಂದೆಯೇ ಥಳಿಸಿ ಕೊಂದ ಗುಂಪು

ಹಣ ನೀಡಲು ನಿರಾಕರಿಸಿದ ತಂದೆಯನ್ನು ಮಕ್ಕಳ ಮುಂದೆಯೇ ಗುಂಪೊಂದು ಥಳಿಸಿ ಕೊಂದಿರುವ ಘಟನೆ ಬೆಂಗಳೂರಿನ ವಿಲ್ಸನ್ ಗಾರ್ಡನ್‌ನಲ್ಲಿ ಭಾನುವಾರ ರಾತ್ರಿ ನಡೆದಿದೆ. ವಿಲ್ಸನ್ ಗಾರ್ಡನ್‌ನ ಬಡಾ ಮಕನ್ ರಸ್ತೆ ಬಳಿ ರಶೀದ್ ಪಾಷಾ ಎಂದು...

ಅಬಕಾರಿ ನೀತಿ ಪ್ರಕರಣದಲ್ಲಿ ಖುಲಾಸೆ ಪ್ರಶ್ನಿಸಿ ಸಿಬಿಐ ಅರ್ಜಿ; ಪ್ರತಿಕ್ರಿಯಿಸಲು ಕೇಜ್ರಿವಾಲ್-ಸಿಸೋಡಿಯಾಗೆ ಸಮಯ ನೀಡಿದ ದೆಹಲಿ ಹೈಕೋರ್ಟ್

ದೆಹಲಿ ಅಬಕಾರಿ ನೀತಿ ಪ್ರಕರಣದಲ್ಲಿ ಮಾಜಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್, ಮಾಜಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಮತ್ತು ಇತರ 21 ಜನರ ತಮ್ಮ ಬಿಡುಗಡೆಯನ್ನು ಪ್ರಶ್ನಿಸಿ ಸಿಬಿಐ ಅರ್ಜಿಗೆ ಪ್ರತಿಕ್ರಿಯೆಗಳನ್ನು ಸಲ್ಲಿಸಲು ದೆಹಲಿ...

ಪ್ರಶ್ನೆಗಳಿಗೆ ಉತ್ತರಿಸದ ಸಚಿವರು: ಸದನ ಮುಂದೂಡಿದ ಸ್ಪೀಕರ್ ಯು.ಟಿ ಖಾದರ್

ಶಾಸಕರು ಕೇಳುವ ಪ್ರಶ್ನೆಗಳಿಗೆ ಉತ್ತರ ಒದಗಿಸದ ಸಚಿವರು ಮತ್ತು ಅಧಿಕಾರಿಗಳ ವಿರುದ್ದ ಸೋಮವಾರ (ಮಾ.16) ತೀವ್ರ ಅಸಮಾಧಾನ ವ್ಯಕ್ತಪಡಿಸಿದ ವಿಧಾನಸಭೆಯ ಸ್ಪೀಕರ್ ಯು.ಟಿ ಖಾದರ್, ಸದನವನ್ನು ಮುಂದೂಡಿಕೆ ಮಾಡಿ ಸರ್ಕಾರಕ್ಕೆ ಬಿಸಿ ಮುಟ್ಟಿಸಿದರು. ವಿಧಾನಸಭೆಯಲ್ಲಿ...

‘ಆಪರೇಷನ್ ಸಿಂಧೂರ್’ ಕುರಿತ ಪೋಸ್ಟ್: ಪ್ರೊಫೆಸರ್ ಅಲಿ ಖಾನ್ ಮಹ್ಮದಾಬಾದ್ ವಿರುದ್ಧದ ಪ್ರಕರಣಗಳನ್ನು ಕೈಬಿಟ್ಟ ಹರಿಯಾಣ ಸರ್ಕಾರ

'ಆಪರೇಷನ್ ಸಿಂಧೂರ್' ಕುರಿತು ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್ ಮಾಡಿದ್ದಕ್ಕಾಗಿ ಅಶೋಕ ವಿಶ್ವವಿದ್ಯಾಲಯದ ಪ್ರಾಧ್ಯಾಪಕ ಅಲಿ ಖಾನ್ ಮಹ್ಮದಾಬಾದ್ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಪ್ರಕರಣ ದಾಖಲಾಗಿತ್ತು. ಅವರ ವಿರುದ್ಧದ ಈ ಪ್ರಕರಣಗಳನ್ನು ಕೈಬಿಟ್ಟಿರುವುದಾಗಿ ಹರಿಯಾಣ...

ಎಲ್‌ಪಿಜಿ ಬಿಕ್ಕಟ್ಟಿನ ನಡುವೆ ಆಧಾರ್ ಮೂಲಕ ‘ಇ-ಕೆವೈಸಿ’ ಮಾಡಿಸಿಕೊಳ್ಳುವಂತೆ ಸರ್ಕಾರದ ಸೂಚನೆ

ದ್ರವೀಕೃತ ಪೆಟ್ರೋಲಿಯಂ ಅನಿಲ (ಎಲ್‌ಪಿಜಿ) ಬಳಸುವ 330 ಮಿಲಿಯನ್‌ಗಿಂತಲೂ ಹೆಚ್ಚು ಗ್ರಾಹಕರು ತಮ್ಮ ಎಲೆಕ್ಟ್ರಾನಿಕ್ ನೋ ಯುವರ್ ಕಸ್ಟಮರ್ (ಇ-ಕೆವೈಸಿ) ಅನ್ನು ಬಯೋಮೆಟ್ರಿಕ್ ಆಧಾರ್ ದೃಢೀಕರಣ ವ್ಯವಸ್ಥೆಯ ಮೂಲಕ ಮಾಡಿಸಿಕೊಳ್ಳಬೇಕು ಎಂದು ಸರ್ಕಾರ...

ಚುನಾವಣೆ ಘೋಷಣೆಯಾದ ಬೆನ್ನಲ್ಲೇ ಪಶ್ಚಿಮ ಬಂಗಾಳದ ಮುಖ್ಯ ಕಾರ್ಯದರ್ಶಿ, ಗೃಹ ಕಾರ್ಯದರ್ಶಿ, ಉನ್ನತ ಪೊಲೀಸ್ ಅಧಿಕಾರಿಗಳನ್ನು ಬದಲಾಯಿಸಿದ ಚು. ಆಯೋಗ

ನಿರೀಕ್ಷೆಯಂತೆ ಚುನಾವಣೆ ಘೋಷಣೆಯಾದ ಬೆನ್ನಲ್ಲೇ ಚುನಾವಣಾ ಆಯೋಗ ಪಶ್ಚಿಮ ಬಂಗಾಳದಲ್ಲಿ ತನ್ನ ಆಟ ಶುರು ಮಾಡಿದೆ. ರಾಜ್ಯದ ಸರ್ಕಾದ ಮುಖ್ಯ ಕಾರ್ಯದರ್ಶಿ, ಗೃಹ ಕಾರ್ಯದರ್ಶಿ ಮತ್ತು ಉನ್ನತ ಪೊಲೀಸ್ ಅಧಿಕಾರಿಗಳನ್ನು ಬದಲಾಯಿಸಿದೆ. ಪಶ್ಚಿಮ ಬಂಗಾಳ...