Homeಕರ್ನಾಟಕಮಂಗಳೂರಿನಲ್ಲಿ ವಲಸೆ ಕಾರ್ಮಿಕನ ಗುಂಪು ಹತ್ಯೆ; ಎಸ್‌ಐಟಿ ತನಿಖೆಗೆ ಸಿಪಿಐಎಂ ಆಗ್ರಹ

ಮಂಗಳೂರಿನಲ್ಲಿ ವಲಸೆ ಕಾರ್ಮಿಕನ ಗುಂಪು ಹತ್ಯೆ; ಎಸ್‌ಐಟಿ ತನಿಖೆಗೆ ಸಿಪಿಐಎಂ ಆಗ್ರಹ

- Advertisement -
- Advertisement -

ಮಂಗಳೂರು ನಗರದ ಹೊರವಲಯದ ಕುಡುಪು ಎಂಬಲ್ಲಿ ನಿನ್ನೆ ಎಪ್ರಿಲ್ 27 ರಂದು ಕ್ರಿಕೆಟ್ ಆಡುತ್ತಿದ್ದ ಗುಂಪೊಂದು ಅಲ್ಲಿದ್ದ ವಲಸೆ ಕಾರ್ಮಿಕನೋರ್ವನನ್ನು ಥಳಿಸಿ ಹತ್ಯೆ ಗೈದಿರುವ ಆತಂಕಕಾರಿ ಕೃತ್ಯ ಬೆಳಕಿಗೆ ಬಂದಿದೆ. ಪ್ರಕರಣದ ಕುರಿತು ವಿಶೇಷ ತನಿಖಾ ತಂಡ (ಎಸ್‌ಐಟಿ) ತನಿಖೆ ನಡೆಸಬೇಕು ಎಂದು ಸಿಪಿಐಎಂ ಆಗ್ರಹಿಸಿದೆ.

“ಘಟನೆ ನಡೆದು ಒಂದು ದಿನ ಕಳೆದಿದ್ದರೂ ಪೊಲೀಸ್ ಇಲಾಖೆ ಈ ಕುರಿತು ಯಾವುದೇ ಅಧಿಕೃತ ಮಾಹಿತಿ ನೀಡುತ್ತಿಲ್ಲ. ಇದು ಹಲವು ಅನುಮಾನಗಳಿಗೆ ಕಾರಣವಾಗುತ್ತಿದೆ. ಗುಂಪು ಹಲ್ಲೆ, ಹತ್ಯೆಯಲ್ಲಿ ಭಾಗಿಯಾಗಿರುವ ರಾಜಕಿಯ ಹಿನ್ನಲೆಯ ಕೆಲವು ಪ್ರಭಾವಿಗಳನ್ನು ರಕ್ಷಿಸುವ, ಪ್ರಕರಣದ ತೀವ್ರತೆಯನ್ನು ತಗ್ಗಿಸುವ, ಪ್ರಕರಣವನ್ನು ದುರ್ಬಲಗೊಳಿಸುವ ಯತ್ನವೂ ಪ್ರಭಾವಿ ರಾಜಕಾರಣಿಗಳಿಂದ, ಸ್ಥಳೀಯ ಜನಪ್ರತಿನಿಧಿಗಳಿಂದ ನಡೆಯುತ್ತಿರುವ ಕುರಿತು ಅನುಮಾನಗಳು ಸಾರ್ವಜನಿಕ ವಲಯದಿಂದ ವ್ಯಕ್ತವಾಗುತ್ತಿದೆ. ರಾಜ್ಯ ಸರಕಾರ ಈ ಕುರಿತು ಗಮನ ಹರಿಸಬೇಕು, ಖುದ್ದು ಮುಖ್ಯಮಂತ್ರಿಗಳು ಈ ಗುಂಪು ಹಲ್ಲೆ, ಹತ್ಯೆ ಪ್ರಕರಣವನ್ನು ಗಂಭೀರಾವಗಿ ಪರಿಗಣಿಸಿ ಉತ್ತಮ ಹಿನ್ನಲೆಯ ಅಧಿಕಾರಿಗಳ ತಂಡವನ್ನು ತನಿಖೆಗೆ ನೇಮಿಸಬೇಕು” ಎಂದು ಸಿಪಿಐಎಂ ದಕ್ಷಿಣ ಕನ್ನಡ ಜಿಲ್ಲಾ ಸಮಿತಿ ಒತ್ತಾಯಿಸಿದೆ.

ಕುಡುಪು ಮೈದಾನದ ಸಮೀಪ ಬಂದಿದ್ದ ವಲಸೆ ಕಾರ್ಮಿಕನನ್ನು ಆತನ ಧರ್ಮದ ಗುರುತಿನ ಕಾರಣಕ್ಕೆ ಕಲ್ಲು, ದೊಣ್ಣೆ, ಬ್ಯಾಟುಗಳಿಂದ ಅಲ್ಲಿದ್ದ ಗುಂಪು ಹಲ್ಲೆ ನಡೆಸಿ ಕೊಂದು ಹಾಕಿದೆ ಎಂದು ಎಲ್ಲೆಡೆ ಪುಕಾರು ಹಬ್ಬಿದೆ. ನತದೃಷ್ಟ ವಲಸೆ ಕಾರ್ಮಿಕ ದೇಶ ವಿರೋಧಿ ಘೋಷಣೆ ಕೂಗಿದ್ದಾನೆ ಎಂಬ ವದಂತಿಯನ್ನೂ ದುಷ್ಕರ್ಮಿಗಳ ಗುಂಪು ಹರಿಯಬಿಟ್ಟಿದೆ. ಆ ಮೂಲಕ ತಮ್ಮ ಗಂಭೀರ ದುಷ್ಕೃತ್ಯವನ್ನು ದೇಶ ಪ್ರೇಮದ ಲೇಬಲ್ ಅಂಟಿಸಿ ಸಮರ್ಥಿಸಿಕೊಳ್ಳುವ ಹೀನ ಯತ್ನವೂ ನಡೆಯುತ್ತಿದೆ ಎಂದು ಸ್ಥಳೀಯ ಹೋರಾಟಗಾರರು ಆರೋಪಿಸಿದ್ದಾರೆ.

ಮಾಜಿ ಕಾರ್ಪೊರೇಟರ್ ಓರ್ವರ ಪತಿ ಈ ಗುಂಪನ್ನು ಹಲ್ಲೆ ನಡೆಸಲು ಪ್ರಚೋದಿಸಿದ್ದಾರೆ ಎಂಬ ಕುರಿತೂ ಸ್ಥಳೀಯರು ಮಾತಾಡಿಕೊಳ್ಳುತ್ತಿದ್ದಾರೆ. ಹತ್ಯೆಯ ತರುವಾಯ ಸ್ಥಳೀಯ ಜನಪ್ರತಿನಿಧಿಗಳೂ ಮಧ್ಯಪ್ರವೇಶಿಸಿ ಪ್ರಕರಣದ ತೀವ್ರತೆಯನ್ನು ತಗ್ಗಿಸುವ, ಕೆಲವರನ್ನು ಬಚಾವ್ ಮಾಡುವ ಯತ್ನ ನಡೆಸುತ್ತಿರುವ ಆರೋಪಗಳೂ ಕೇಳಿಬರುತ್ತಿದೆ. ಮಂಗಳೂರು ಪೊಲೀಸರು ಯಾವುದೇ ಅಧಿಕೃತ ಮಾಹಿತಿಯನ್ನು ಘಟನೆ ನಡೆದು ಒಂದು ದಿನ ಕಳೆದರೂ ನೀಡದಿರುವುದು ಪ್ರಕರಣದ ಕುರಿತು ಅನುಮಾನಗಳನ್ನು ಹೆಚ್ಚಿಸಿದೆ.

ಮಂಗಳೂರು ನಗರದಲ್ಲಿ ಈ ರೀತಿ ಗುಂಪು ಹಲ್ಲೆ, ಹತ್ಯೆ ನಡೆಯುವುದು ಕರಾವಳಿ ಜಿಲ್ಲೆಗಳು ಅಪಾಯದ ಗಡಿದಾಟುತ್ತಿರುವುದರ ಸಂಕೇತ, ಪೆಹಲ್ಗಾಮ್ ದುರಂತದ ಬೆನ್ನಲ್ಲೆ ಈ ಘಟನೆ ನಡೆದಿರುವುದು ಆಘಾತಕಾರಿ ವಿದ್ಯಾಮಾನ‌. ವಲಸೆ ಕಾರ್ಮಿಕರು, ಅವರ ಧರ್ಮದ ಹಾಗೂ ವಿವಿಧ ಗುರುತಿನ ಕಾರಣಕ್ಕೆ ‘ದೇಶಪ್ರೇಮ’ದ ಲೇಬಲ್ ಅಡಿ ದುಷ್ಕರ್ಮಿಗಳು ಬಹಿರಂಗವಾಗಿ ಹೊಡೆದು ಹಾಕುವುದು ಅನಾಗರಿಕತೆಯ ಪರಮಾವಧಿ. ಇದರ ಸಾಮಾಜಿಕ ಪರಿಣಾಮಗಳು ಸರಿಪಡಿಸಲಾಗಷ್ಟು ಗಂಭೀರವಾಗಿರುತ್ತದೆ ಎಂದು ಸಿಪಿಐಎಂ ಸಿಪಿಐಎಂ ಘಟನೆಯನ್ನು ಖಂಡಿಸಿದೆ.

‘ಮುಸ್ಲಿಂ’ ಎಂಬ ಕಾರಣಕ್ಕೆ ವಲಸೆ ಕಾರ್ಮಿಕನ ಗುಂಪು ಹತ್ಯೆ ಖಚಿತ

ಕುಡುಪುವಿನಲ್ಲಿ ಅಪರಿಚಿತ ಯುವಕನ ಮೃತದೇಹ ಪತ್ತೆಯಾದ ಘಟನೆ ತಿರುವು ಪಡೆದುಕೊಂಡಿದ್ದು, ಗುಂಪಿನಿಂದ ಹಲ್ಲೆಗೊಳಗಾಗಿ ಹತ್ಯೆಯಾಗಿರುವುದನ್ನು ಪೊಲೀಸರು ಖಚಿತಪಡಿಸಿಕೊಂಡಿರುವುದಾಗಿ ಈದಿನ.ಕಾಂ ವರದಿ ಮಾಡಿದೆ.

ಇದೀಗ ಈ ಘಟನೆಗೆ ಸಂಬಂಧಿಸಿದಂತೆ ಗುಂಪು ಹತ್ಯೆಯಲ್ಲಿ ಭಾಗಿಯಾಗಿದ್ದ ಆರೋಪದಲ್ಲಿ ಸುಮಾರು 15 ಮಂದಿ ಆರೋಪಿಗಳನ್ನು ತಡರಾತ್ರಿ ಬಂಧಿಸಿರುವುದಾಗಿ ವರದಿಯಾಗಿದೆ. ಆದರೆ, ಈ ಬಗ್ಗೆ ಇನ್ನೂ ಕೂಡ ಮಂಗಳೂರು ನಗರ ಪೊಲೀಸರು ಅಧಿಕೃತ ಮಾಹಿತಿ ನೀಡಿಲ್ಲ. ವಶಕ್ಕೆ ತೆಗೆದುಕೊಂಡ ಆರೋಪಿಗಳಿಂದ ಘಟನೆಯ ಬಗ್ಗೆ ಮಾಹಿತಿ ಕಲೆ ಹಾಕುತ್ತಿರುವುದಾಗಿ ತಿಳಿದು ಬಂದಿದೆ. ಅಲ್ಲದೇ, ‘ಮುಸ್ಲಿಂ’ ಎಂಬ ಕಾರಣಕ್ಕಾಗಿಯೇ ವಲಸೆ ಕಾರ್ಮಿಕನ ಮೇಲೆ ಹಲ್ಲೆ ಮಾಡಿ, ಹತ್ಯೆಗೈದಿರುವುದಾಗಿ ಪೊಲೀಸರ ತನಿಖೆಯ ವೇಳೆ ಖಚಿತವಾಗಿದೆ ಎಂದು ತಿಳಿದು ಬಂದಿದೆ.

ಘಟನೆಯ ಬಗ್ಗೆ ಹೆಚ್ಚು ಮಾಹಿತಿ ನೀಡಲು ಮಂಗಳವಾರ ಮಧ್ಯಾಹ್ನ 12 ಗಂಟೆಗೆ ಮಂಗಳೂರು ನಗರ ಪೊಲೀಸ್ ಕಮಿಷನರ್ ಅನುಪಮ್ ಅಗರ್ವಾಲ್ ಸುದ್ದಿಗೋಷ್ಠಿ ನಡೆಸಿ ಮಾಹಿತಿ ನೀಡಲಿರುವುದಾಗಿ ತಿಳಿದು ಬಂದಿದೆ.

ಧರ್ಮದ ಆಧಾರದ ಮೇಲೆ ಚಿಕಿತ್ಸೆ ನಿರಾಕರಿಸುವ ಪೋಸ್ಟ್ ಹಂಚಿಕೊಂಡ ವೈದ್ಯೆ; ವಿರೋಧದ ಬಳಿಕ ಡಿಲೀಟ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಬಾಗಲಕೋಟೆಯ ವಿವಿಧ ಪ್ರದೇಶಗಳಲ್ಲಿ ಎಸ್‌ಐಆರ್‌ ವಿರುದ್ಧ ಜನಜಾಗೃತಿ ಜಾಥಾ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ವಿರುದ್ಧ ಬಾಗಲಕೋಟೆ ನಗರದ ವಿವಿಧ ಭಾಗಗಳಲ್ಲಿ ಭಾನುವಾರ (ಜೂ.14) ಜಾಗೃತಿ ಜಾಥಾ ನಡೆಯಿತು. ನವನಗರದ ವಿದ್ಯಾಗಿರಿ ಬಸವೇಶ್ವರ ಇಂಜಿನಿಯರಿಂಗ್ ಕಾಲೇಜು ಸರ್ಕಲ್‌ನಿಂದ ಪ್ರಾರಂಭವಾದ ಜಾಥಾ...

SIR ವಿರೋಧಿ ಜನಜಾಗೃತಿ ಜಾಥಾ: ಕಾಫಿ ನಾಡು ಚಿಕ್ಕಮಗಳೂರಲ್ಲಿ ಅದ್ದೂರಿ ಸ್ವಾಗತ

ಚಿಕ್ಕಮಗಳೂರು: ರಾಜ್ಯಾದ್ಯಂತ ಐದು ವಿಭಾಗಗಳಲ್ಲಿ ಸಂಚರಿಸುತ್ತಿರುವ 'SIR ವಿರೋಧಿ ಜನಜಾಗೃತಿ ಜಾಥಾ'ದ 3ನೇ ಮಾರ್ಗದ ತಂಡಕ್ಕೆ ಕಾಫಿ ನಾಡು ಚಿಕ್ಕಮಗಳೂರಿನಲ್ಲಿ ಅದ್ದೂರಿ ಸ್ವಾಗತ ದೊರೆಯಿತು. ಭಾನುವಾರ ಬೆಳಗ್ಗೆ ಜಿಲ್ಲೆಯ ಕೊಪ್ಪ ತಾಲ್ಲೂಕಿಗೆ ಆಗಮಿಸಿದ ಜಾಥಾ...

ಚಿಕ್ಕಮಗಳೂರಿನಲ್ಲಿ ಎಸ್‌ಐಆರ್ (SIR) ವಿರೋಧಿ ಜಾಥಾ: ಮತದಾರರ ಹಕ್ಕು ಕಸಿಯುವ ಹುನ್ನಾರದ ವಿರುದ್ಧ ಆಕ್ರೋಶ

ಭಾರತ ಚುನಾವಣಾ ಆಯೋಗವು ಜಾರಿಗೆ ತಂದಿರುವ ವಿಶೇಷ ತೀವ್ರ ಪರಿಷ್ಕರಣೆ (SIR - Special Intensive Revision) ಪ್ರಕ್ರಿಯೆಯಲ್ಲಿ ಯಾವುದೇ ಅರ್ಹ ಮತದಾರರು ಪಟ್ಟಿಯಿಂದ ಹೊರಗುಳಿಯದಂತೆ ಜಾಗ್ರತೆ ವಹಿಸಬೇಕಾದ ಜವಾಬ್ದಾರಿ ನಮ್ಮೆಲ್ಲರ ಮೇಲಿದೆ....

ಮಂಗಳೂರು: ಚುನಾವಣಾ ಆಯೋಗ ಕೇಂದ್ರ ಸರ್ಕಾರದ ಮುಖವಾಣಿಯಾಗಿ ಕಾರ್ಯನಿರ್ವಹಿಸುತ್ತಿದೆ: ವಿ.ಎಸ್. ಶ್ರೀಧರ್ 

ರಾಜ್ಯದ ಆರು ಜಿಲ್ಲೆಗಳಲ್ಲಿ ಪ್ರಗತಿಪರ ಸಂಘಟನೆಗಳು, ಎದ್ದೇಳು ಕರ್ನಾಟಕ ಹಾಗೂ ಜಾತ್ಯತೀತ ಪಕ್ಷಗಳ ಒಕ್ಕೂಟವಾದ ‘ಎಸ್‌ಐಆರ್ ವಿರೋಧಿ ಕರ್ನಾಟಕ’ ನೇತೃತ್ವದಲ್ಲಿ ಹಮ್ಮಿಕೊಳ್ಳಲಾಗಿರುವ ಎಸ್‌ಐಆರ್ ಜನಜಾಗೃತಿ ಜಾಥಾದ ಭಾಗವಾಗಿ ಇಂದು (ಜೂನ್-14) ಮಂಗಳೂರಿನಲ್ಲಿ ಸಭೆ...

ಬಿಸಿಲ ನಾಡು ಕಲಬುರಗಿಯಲ್ಲಿ ಮೊಳಗಿದ SIR ವಿರೋಧಿ ಘೋಷಣೆ.

ಕೇಂದ್ರ ಚುನಾವಣಾ ಆಯೋಗ ಜಾರಿಗೆ ತಂದಿರುವ ವಿಶೇಷ ತೀವ್ರ ಮತ ಪರಿಷ್ಕರಣೆ SIR ಅನ್ನು ಕರ್ನಾಟಕದಲ್ಲಿ ಜಾರಿ ಮಾಡಬಾರದು ಎಂದು ಆಗ್ರಹಿಸಿ ಕರ್ನಾಟಕದಾದ್ಯಂತ ಎದ್ದೇಳು ಕರ್ನಾಟಕ ಹಾಗಾ SIR ವಿರೋಧಿ ಕರ್ನಾಟಕ ವೇದಿಕೆಯು...

ವಿಜಯಪುರ : ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾಗೆ ಚಾಲನೆ

ರಾಜ್ಯದ ಆರು ಜಿಲ್ಲೆಗಳಲ್ಲಿ ನಡೆಯಲಿರುವ ಎಸ್‌ಐಆರ್‌ ವಿರೋಧಿ ಜನಜಾಗೃತಿ ಜಾಥಾಗೆ ವಿಜಯಪುರದ ಅಂಬೇಡ್ಕರ್ ವೃತ್ತದಲ್ಲಿ ಶನಿವಾರ (ಜೂ.13) ಸಂಜೆ ಚಾಲನೆ ದೊರೆಯಿತು. ಜಾಥಾವನ್ನು ಉದ್ಘಾಟಿಸಿ ಮಾತನಾಡಿದ ಅಹಿಂದ ಮುಖಂಡ ಎಸ್ ಎಂ ಪಾಟೀಲ...

ಬಸವಣ್ಣನ ಕಲ್ಯಾಣದಲ್ಲಿ SIR ವಿರೋಧಿ ಜಾಥಾ.

ಬಸವಕಲ್ಯಾಣSIR ವಿರೋಧಿಸಿ ಕರ್ನಾಟಕದಾದ್ಯಂತ ನಡೆಯುತ್ತಿರುವ ಜಾಗೃತಿ ಜಾತಾವು ಬಸವಕಲ್ಯಾಣಕ್ಕೆ ತಲುಪಿತು. ಬಸವಕಲ್ಯಾಣದ ಅಂಬೇಡ್ಕರ್ ವೃತ್ತದಲ್ಲಿ ನೂರಾರು ಸಂಖ್ಯೆಯಲ್ಲಿ ಸೇರಿದ ಜನರು ಜನವಿರೋಧಿ SIR ನ್ನೂ ವಿರೋಧಿಸಿ ನಿರ್ಣಯ ಕೈಗೊಂಡರು. ಸಭೆಯಲ್ಲಿ ಮಾತನಾಡಿದ ಜಾಥಾದ ಮುಖ್ಯಸ್ಥ...

ಸಂಸದ ಬಿ.ವೈ ರಾಘವೇಂದ್ರ ನಡೆಸುತ್ತಿದ್ದ ಸಾರ್ವಜನಿಕ ಕುಂದುಕೊರತೆ ಸಭೆಯಲ್ಲಿ SIR ವಿರೋಧಿ ಜನಜಾಗೃತಿ ಜಾಥಾ ಕರಪತ್ರ ಹಂಚಿದ ಕಾರ್ಯಕರ್ತರು

ಶಿವಮೊಗ್ಗ : ಬಿಜೆಪಿ ಸಂಸದ ಬಿ.ವೈ.ರಾಘವೇಂದ್ರ ಅವರು ಜಿಲ್ಲೆಯ ಸಾಗರ ತಾಲ್ಲೂಕಿನ ರೈಲು ನಿಲ್ದಾಣದಲ್ಲಿ ಕುಂದುಕೊರತೆಗಳ ಸಭೆ ನಡೆಸುತ್ತಿದ್ದ ವೇಳೆ ಎಸ್‌ಐಆರ್ ವಿರುದ್ಧ ’ಎದ್ದೇಳು ಕರ್ನಾಟಕ’ ಮತ್ತು ’ಎಸ್‌ಐಆರ್ ವಿರೋಧಿ ಒಕ್ಕೂಟ’ದ ಮುಖಂಡರು...

ಬೀದರ್‌ ನಿಂದ ಶುರವಾದ SIR ವಿರೋಧಿ ಜನಜಾಗೃತಿ ಜಾಥಾ

SIR ವಿರೋಧಿ ಕರ್ನಾಟಕ ಹಾಗೂ ಎದ್ದೇಳು ಕರ್ನಾಟಕವು ಕರ್ನಾಟಕದಲ್ಲಿ SIR ಜಾರಿಯನ್ನು ವಿರೋಧಿಸಿ ರಾಜ್ಯದ 5 ಸ್ಥಳಗಳಿಂದ ಜನಜಾಗೃತಿ ಜಾಥಾ ಆಯೋಜಿಸಿದೆ. ಇಂದು ಬೀದರ್‌ ನ ಅಂಬೇಡ್ಕರ್‌ ಸರ್ಕಲ್‌ ನಿಂದ ಆರಂಭವಾದ ಜಾಥಾವು...

ಒಬ್ಬರೇ ಒಬ್ಬ ಅರ್ಹ ಮತದಾರರ ಹೊರಗಿಡುವುದನ್ನು ಒಪ್ಪುವುದಿಲ್ಲ : ಯೂಸುಫ್ ಕನ್ನಿ

ಮತದಾರರ ಪಟ್ಟಿಯ ಪರಿಷ್ಕರಣೆ ಮಾಡಲಿ, ಆದರೆ, ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಬೇಡವೇ ಬೇಡ. ಎಸ್‌ಐಆರ್‌ ಮೂಲಕ ಒಬ್ಬರೇ ಒಬ್ಬರು ಅರ್ಹ ಮತದಾರರನ್ನೂ ಪಟ್ಟಿಯಿಂದ ಹೊರಗಿಡುವುದನ್ನು ನಾವು ಒಪ್ಪುವುದಿಲ್ಲ ಎಂದು ಜಮಾಅತೆ ಇಸ್ಲಾಮಿ...