Homeಕರ್ನಾಟಕಮಂಗಳೂರಿನಲ್ಲಿ ವಲಸೆ ಕಾರ್ಮಿಕನ ಗುಂಪು ಹತ್ಯೆ; ಎಸ್‌ಐಟಿ ತನಿಖೆಗೆ ಸಿಪಿಐಎಂ ಆಗ್ರಹ

ಮಂಗಳೂರಿನಲ್ಲಿ ವಲಸೆ ಕಾರ್ಮಿಕನ ಗುಂಪು ಹತ್ಯೆ; ಎಸ್‌ಐಟಿ ತನಿಖೆಗೆ ಸಿಪಿಐಎಂ ಆಗ್ರಹ

- Advertisement -
- Advertisement -

ಮಂಗಳೂರು ನಗರದ ಹೊರವಲಯದ ಕುಡುಪು ಎಂಬಲ್ಲಿ ನಿನ್ನೆ ಎಪ್ರಿಲ್ 27 ರಂದು ಕ್ರಿಕೆಟ್ ಆಡುತ್ತಿದ್ದ ಗುಂಪೊಂದು ಅಲ್ಲಿದ್ದ ವಲಸೆ ಕಾರ್ಮಿಕನೋರ್ವನನ್ನು ಥಳಿಸಿ ಹತ್ಯೆ ಗೈದಿರುವ ಆತಂಕಕಾರಿ ಕೃತ್ಯ ಬೆಳಕಿಗೆ ಬಂದಿದೆ. ಪ್ರಕರಣದ ಕುರಿತು ವಿಶೇಷ ತನಿಖಾ ತಂಡ (ಎಸ್‌ಐಟಿ) ತನಿಖೆ ನಡೆಸಬೇಕು ಎಂದು ಸಿಪಿಐಎಂ ಆಗ್ರಹಿಸಿದೆ.

“ಘಟನೆ ನಡೆದು ಒಂದು ದಿನ ಕಳೆದಿದ್ದರೂ ಪೊಲೀಸ್ ಇಲಾಖೆ ಈ ಕುರಿತು ಯಾವುದೇ ಅಧಿಕೃತ ಮಾಹಿತಿ ನೀಡುತ್ತಿಲ್ಲ. ಇದು ಹಲವು ಅನುಮಾನಗಳಿಗೆ ಕಾರಣವಾಗುತ್ತಿದೆ. ಗುಂಪು ಹಲ್ಲೆ, ಹತ್ಯೆಯಲ್ಲಿ ಭಾಗಿಯಾಗಿರುವ ರಾಜಕಿಯ ಹಿನ್ನಲೆಯ ಕೆಲವು ಪ್ರಭಾವಿಗಳನ್ನು ರಕ್ಷಿಸುವ, ಪ್ರಕರಣದ ತೀವ್ರತೆಯನ್ನು ತಗ್ಗಿಸುವ, ಪ್ರಕರಣವನ್ನು ದುರ್ಬಲಗೊಳಿಸುವ ಯತ್ನವೂ ಪ್ರಭಾವಿ ರಾಜಕಾರಣಿಗಳಿಂದ, ಸ್ಥಳೀಯ ಜನಪ್ರತಿನಿಧಿಗಳಿಂದ ನಡೆಯುತ್ತಿರುವ ಕುರಿತು ಅನುಮಾನಗಳು ಸಾರ್ವಜನಿಕ ವಲಯದಿಂದ ವ್ಯಕ್ತವಾಗುತ್ತಿದೆ. ರಾಜ್ಯ ಸರಕಾರ ಈ ಕುರಿತು ಗಮನ ಹರಿಸಬೇಕು, ಖುದ್ದು ಮುಖ್ಯಮಂತ್ರಿಗಳು ಈ ಗುಂಪು ಹಲ್ಲೆ, ಹತ್ಯೆ ಪ್ರಕರಣವನ್ನು ಗಂಭೀರಾವಗಿ ಪರಿಗಣಿಸಿ ಉತ್ತಮ ಹಿನ್ನಲೆಯ ಅಧಿಕಾರಿಗಳ ತಂಡವನ್ನು ತನಿಖೆಗೆ ನೇಮಿಸಬೇಕು” ಎಂದು ಸಿಪಿಐಎಂ ದಕ್ಷಿಣ ಕನ್ನಡ ಜಿಲ್ಲಾ ಸಮಿತಿ ಒತ್ತಾಯಿಸಿದೆ.

ಕುಡುಪು ಮೈದಾನದ ಸಮೀಪ ಬಂದಿದ್ದ ವಲಸೆ ಕಾರ್ಮಿಕನನ್ನು ಆತನ ಧರ್ಮದ ಗುರುತಿನ ಕಾರಣಕ್ಕೆ ಕಲ್ಲು, ದೊಣ್ಣೆ, ಬ್ಯಾಟುಗಳಿಂದ ಅಲ್ಲಿದ್ದ ಗುಂಪು ಹಲ್ಲೆ ನಡೆಸಿ ಕೊಂದು ಹಾಕಿದೆ ಎಂದು ಎಲ್ಲೆಡೆ ಪುಕಾರು ಹಬ್ಬಿದೆ. ನತದೃಷ್ಟ ವಲಸೆ ಕಾರ್ಮಿಕ ದೇಶ ವಿರೋಧಿ ಘೋಷಣೆ ಕೂಗಿದ್ದಾನೆ ಎಂಬ ವದಂತಿಯನ್ನೂ ದುಷ್ಕರ್ಮಿಗಳ ಗುಂಪು ಹರಿಯಬಿಟ್ಟಿದೆ. ಆ ಮೂಲಕ ತಮ್ಮ ಗಂಭೀರ ದುಷ್ಕೃತ್ಯವನ್ನು ದೇಶ ಪ್ರೇಮದ ಲೇಬಲ್ ಅಂಟಿಸಿ ಸಮರ್ಥಿಸಿಕೊಳ್ಳುವ ಹೀನ ಯತ್ನವೂ ನಡೆಯುತ್ತಿದೆ ಎಂದು ಸ್ಥಳೀಯ ಹೋರಾಟಗಾರರು ಆರೋಪಿಸಿದ್ದಾರೆ.

ಮಾಜಿ ಕಾರ್ಪೊರೇಟರ್ ಓರ್ವರ ಪತಿ ಈ ಗುಂಪನ್ನು ಹಲ್ಲೆ ನಡೆಸಲು ಪ್ರಚೋದಿಸಿದ್ದಾರೆ ಎಂಬ ಕುರಿತೂ ಸ್ಥಳೀಯರು ಮಾತಾಡಿಕೊಳ್ಳುತ್ತಿದ್ದಾರೆ. ಹತ್ಯೆಯ ತರುವಾಯ ಸ್ಥಳೀಯ ಜನಪ್ರತಿನಿಧಿಗಳೂ ಮಧ್ಯಪ್ರವೇಶಿಸಿ ಪ್ರಕರಣದ ತೀವ್ರತೆಯನ್ನು ತಗ್ಗಿಸುವ, ಕೆಲವರನ್ನು ಬಚಾವ್ ಮಾಡುವ ಯತ್ನ ನಡೆಸುತ್ತಿರುವ ಆರೋಪಗಳೂ ಕೇಳಿಬರುತ್ತಿದೆ. ಮಂಗಳೂರು ಪೊಲೀಸರು ಯಾವುದೇ ಅಧಿಕೃತ ಮಾಹಿತಿಯನ್ನು ಘಟನೆ ನಡೆದು ಒಂದು ದಿನ ಕಳೆದರೂ ನೀಡದಿರುವುದು ಪ್ರಕರಣದ ಕುರಿತು ಅನುಮಾನಗಳನ್ನು ಹೆಚ್ಚಿಸಿದೆ.

ಮಂಗಳೂರು ನಗರದಲ್ಲಿ ಈ ರೀತಿ ಗುಂಪು ಹಲ್ಲೆ, ಹತ್ಯೆ ನಡೆಯುವುದು ಕರಾವಳಿ ಜಿಲ್ಲೆಗಳು ಅಪಾಯದ ಗಡಿದಾಟುತ್ತಿರುವುದರ ಸಂಕೇತ, ಪೆಹಲ್ಗಾಮ್ ದುರಂತದ ಬೆನ್ನಲ್ಲೆ ಈ ಘಟನೆ ನಡೆದಿರುವುದು ಆಘಾತಕಾರಿ ವಿದ್ಯಾಮಾನ‌. ವಲಸೆ ಕಾರ್ಮಿಕರು, ಅವರ ಧರ್ಮದ ಹಾಗೂ ವಿವಿಧ ಗುರುತಿನ ಕಾರಣಕ್ಕೆ ‘ದೇಶಪ್ರೇಮ’ದ ಲೇಬಲ್ ಅಡಿ ದುಷ್ಕರ್ಮಿಗಳು ಬಹಿರಂಗವಾಗಿ ಹೊಡೆದು ಹಾಕುವುದು ಅನಾಗರಿಕತೆಯ ಪರಮಾವಧಿ. ಇದರ ಸಾಮಾಜಿಕ ಪರಿಣಾಮಗಳು ಸರಿಪಡಿಸಲಾಗಷ್ಟು ಗಂಭೀರವಾಗಿರುತ್ತದೆ ಎಂದು ಸಿಪಿಐಎಂ ಸಿಪಿಐಎಂ ಘಟನೆಯನ್ನು ಖಂಡಿಸಿದೆ.

‘ಮುಸ್ಲಿಂ’ ಎಂಬ ಕಾರಣಕ್ಕೆ ವಲಸೆ ಕಾರ್ಮಿಕನ ಗುಂಪು ಹತ್ಯೆ ಖಚಿತ

ಕುಡುಪುವಿನಲ್ಲಿ ಅಪರಿಚಿತ ಯುವಕನ ಮೃತದೇಹ ಪತ್ತೆಯಾದ ಘಟನೆ ತಿರುವು ಪಡೆದುಕೊಂಡಿದ್ದು, ಗುಂಪಿನಿಂದ ಹಲ್ಲೆಗೊಳಗಾಗಿ ಹತ್ಯೆಯಾಗಿರುವುದನ್ನು ಪೊಲೀಸರು ಖಚಿತಪಡಿಸಿಕೊಂಡಿರುವುದಾಗಿ ಈದಿನ.ಕಾಂ ವರದಿ ಮಾಡಿದೆ.

ಇದೀಗ ಈ ಘಟನೆಗೆ ಸಂಬಂಧಿಸಿದಂತೆ ಗುಂಪು ಹತ್ಯೆಯಲ್ಲಿ ಭಾಗಿಯಾಗಿದ್ದ ಆರೋಪದಲ್ಲಿ ಸುಮಾರು 15 ಮಂದಿ ಆರೋಪಿಗಳನ್ನು ತಡರಾತ್ರಿ ಬಂಧಿಸಿರುವುದಾಗಿ ವರದಿಯಾಗಿದೆ. ಆದರೆ, ಈ ಬಗ್ಗೆ ಇನ್ನೂ ಕೂಡ ಮಂಗಳೂರು ನಗರ ಪೊಲೀಸರು ಅಧಿಕೃತ ಮಾಹಿತಿ ನೀಡಿಲ್ಲ. ವಶಕ್ಕೆ ತೆಗೆದುಕೊಂಡ ಆರೋಪಿಗಳಿಂದ ಘಟನೆಯ ಬಗ್ಗೆ ಮಾಹಿತಿ ಕಲೆ ಹಾಕುತ್ತಿರುವುದಾಗಿ ತಿಳಿದು ಬಂದಿದೆ. ಅಲ್ಲದೇ, ‘ಮುಸ್ಲಿಂ’ ಎಂಬ ಕಾರಣಕ್ಕಾಗಿಯೇ ವಲಸೆ ಕಾರ್ಮಿಕನ ಮೇಲೆ ಹಲ್ಲೆ ಮಾಡಿ, ಹತ್ಯೆಗೈದಿರುವುದಾಗಿ ಪೊಲೀಸರ ತನಿಖೆಯ ವೇಳೆ ಖಚಿತವಾಗಿದೆ ಎಂದು ತಿಳಿದು ಬಂದಿದೆ.

ಘಟನೆಯ ಬಗ್ಗೆ ಹೆಚ್ಚು ಮಾಹಿತಿ ನೀಡಲು ಮಂಗಳವಾರ ಮಧ್ಯಾಹ್ನ 12 ಗಂಟೆಗೆ ಮಂಗಳೂರು ನಗರ ಪೊಲೀಸ್ ಕಮಿಷನರ್ ಅನುಪಮ್ ಅಗರ್ವಾಲ್ ಸುದ್ದಿಗೋಷ್ಠಿ ನಡೆಸಿ ಮಾಹಿತಿ ನೀಡಲಿರುವುದಾಗಿ ತಿಳಿದು ಬಂದಿದೆ.

ಧರ್ಮದ ಆಧಾರದ ಮೇಲೆ ಚಿಕಿತ್ಸೆ ನಿರಾಕರಿಸುವ ಪೋಸ್ಟ್ ಹಂಚಿಕೊಂಡ ವೈದ್ಯೆ; ವಿರೋಧದ ಬಳಿಕ ಡಿಲೀಟ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಕೇವಲ ಪ್ರತಿಭಟಿಸಿದ್ದಕ್ಕೆ ವಿದ್ಯಾರ್ಥಿಗಳು ಜೈಲುಪಾಲು; ಗಂಗೆಯ ದೋಣಿಯಲ್ಲಿ ಬಿರಿಯಾನಿ ತಿಂದವರಿಗೂ ಸಿಗುತ್ತಿಲ್ಲ ಜಾಮೀನು : ನ್ಯಾಯಮೂರ್ತಿ ಉಜ್ಜಲ್ ಭುಯಾನ್ ಕಳವಳ

ಭಾರತದಲ್ಲಿ ಭಿನ್ನಾಭಿಪ್ರಾಯಗಳನ್ನು ಗೌರವಿಸುವ ಮತ್ತು ಅವುಗಳಿಗೆ ಅವಕಾಶ ನೀಡುವ ಸಾರ್ವಜನಿಕ ಸ್ಥಳಗಳು ಎಷ್ಟು ಕಡಿಮೆಯಾಗುತ್ತಿವೆ ಎಂದರೆ, ತಮ್ಮ ಹಕ್ಕುಗಳಿಗಾಗಿ ಪ್ರತಿಭಟಿಸುವ ವಿದ್ಯಾರ್ಥಿಗಳನ್ನು ಬಂಧಿಸಿ ಅವರಿಗೆ ಜಾಮೀನು ನಿರಾಕರಿಸಲಾಗುತ್ತಿದೆ ಎಂದು ಸುಪ್ರೀಂ ಕೋರ್ಟ್‌ನ ನ್ಯಾಯಮೂರ್ತಿ...

ಪ.ಬಂಗಾಳ: ನೂತನ ‘ಗೂಂಡಾ ಕಾಯ್ದೆ’ ಅಡಿ NEET ಪ್ರತಿಭಟನೆಯಲ್ಲಿ ಭಾಗಿಯಾದ 10 ಮುಸ್ಲಿಂ ಯುವಕರು ಸೇರಿದಂತೆ 11 ಜನರ ಬಂಧನ 

ಕೋಲ್ಕತ್ತಾ: ಕೇಂದ್ರದ ನರೇಂದ್ರ ಮೋದಿ ಸರ್ಕಾರದ ಶಿಕ್ಷಣ ಕ್ಷೇತ್ರದ ವೈಫಲ್ಯಗಳು ಹಾಗೂ ನೀಟ್-ಯುಜಿ (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣವನ್ನು ಖಂಡಿಸಿ ಶುಕ್ರವಾರ ಕೋಲ್ಕತ್ತಾದಲ್ಲಿ ನಡೆದ ಬೃಹತ್ ವಿದ್ಯಾರ್ಥಿ ಪ್ರತಿಭಟನೆಯು ತೀವ್ರ ರಾಜಕೀಯ...

ಪೊಲೀಸರ ಅನುಮತಿ ಪಡೆದಿದ್ದರೂ ನೀಟ್ ಪ್ರತಿಭಟನೆಗೆ ವಾಟ್ಸಾಪ್ ಗ್ರೂಪ್ ರಚಿಸಿದ್ದಕ್ಕಾಗಿ ಅಸ್ಸಾಂನಲ್ಲಿ ಮೂವರು ಮುಸ್ಲಿಂ ವಿದ್ಯಾರ್ಥಿಗಳ ಬಂಧನ

ಅಸ್ಸಾಂನಲ್ಲಿ ಬಿಜೆಪಿ ಸರ್ಕಾರದ ಕೋಮುವಾದಿ ಧೋರಣೆ ಮತ್ತು ಪ್ರಜಾಸತ್ತಾತ್ಮಕ ಹಕ್ಕುಗಳ ದಮನದ ದಾರುಣ ಚಿತ್ರಣವೊಂದು ಮತ್ತೆ ಮುನ್ನೆಲೆಗೆ ಬಂದಿದೆ. ದೇಶಾದ್ಯಂತ ಸದ್ದು ಮಾಡಿದ್ದ 'ನೀಟ್' (NEET) ಅಕ್ರಮಗಳ ವಿರುದ್ಧ ಧ್ವನಿ ಎತ್ತಲು ಮತ್ತು...

‘ವಿದ್ಯಾರ್ಥಿಗಳ ಮೇಲಿನ ವಿಕೃತ ದಾಳಿಗೆ ನಿಮ್ಮ ಸಮ್ಮತಿ ಇತ್ತೇ?’: ಪತ್ರದ ಮೂಲಕ ಅಮಿತ್ ಶಾಗೆ ರಾಹುಲ್ ಗಾಂಧಿ ಪ್ರಶ್ನೆ

ನವದೆಹಲಿ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಕಾರಣವಾದ ದೇಶವ್ಯಾಪಿ ವಿದ್ಯಾರ್ಥಿ ಆಂದೋಲನದ ವೇಳೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯ ಮತ್ತು ಮಿತಿಮೀರಿದ ಬಲಪ್ರಯೋಗದ ವಿರುದ್ಧ ಲೋಕಸಭೆಯ ವಿರೋಧ...

‘ಮಗ ಬೇಗನೆ ಮನೆಗೆ ಬರಲಿ..’; ಭಾವುಕರಾದ ಅಭಿಜೀತ್ ದಿಪ್ಕೆ ಅವರ ಪೋಷಕರು

ಸಿಜೆಪಿ ಸಂಸ್ಥಾಪಕ ಅಭಿಜೀತ್ ದಿಪ್ಕೆ ನೇತೃತ್ವದಲ್ಲಿ ನಡೆದ ಅಸಾಧಾರಣ ಹೋರಾಟವು ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜಿನಾಮೆಯಲ್ಲಿ ಅಂತಿಮವಾಗಿದೆ. ಈ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಅವರ ಪೋಷಕರು ಭಾವುಕರಾಗಿದ್ದಾರೆ. "ಮಗ ಬೇಗನೆ ಮನೆಗೆ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆ: ಕಾಕ್ರೋಚ್‌ಗಳಿಗೆ ಅಭಿನಂದಿಸಿದ ಸೋನಮ್ ವಾಂಗ್‌ಚುಕ್ – ಪ್ರಕಾಶ್‌ ರಾಜ್

ದೇಶದ ಯುವಜನರ ಹಲವು ದಿನಗಳ ಹೋರಾಟದ ಬಳಿಕ ಮೋದಿ ನೇತೃತ್ವದ ಕೇಂದ್ರ ಸರ್ಕಾರ ವಿದ್ಯಾರ್ಥಿಗಳ ಮುಂದೆ ಮಂಡಿಯೂರಿದೆ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ್ದಾರೆ. ಈ ಗೆಲುವಿಗೆ ಕಾಕ್ರೋಚ್ ಜನತಾ ಪಕ್ಷದ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಜಿರಳೆಗಳ ಹರ್ಷೋದ್ಗಾರ: ದೆಹಲಿ ಪೊಲೀಸರಿಂದ ಸಾರ್ವಜನಿಕ ಕ್ಷಮೆಯಾಚನೆಗೆ ಆಗ್ರಹ

ದೇಶಾದ್ಯಂತ ನಡೆಯುತ್ತಿರುವ ಸಿಜೆಪಿ ಪ್ರತಿಭಟನೆಗಳ ನಡುವೆ ನೀಟ್ ಪತ್ರಿಕೆ ಸೋರಿಕೆಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ರಾಜೀನಾಮೆ ನೀಡಿದ್ದು, ದೆಹಲಿಯ ಜಂತರ್‌ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವ ಕಾಕ್ರೋಚ್‌ ಜನತಾ...

ಕಾಕ್ರೋಚ್‌ಗಳಿಗೆ ಮಣಿದ ಮೋದಿ ಸರ್ಕಾರ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ದೇಶಾದ್ಯಂತ ನಡೆಯುತ್ತಿರುವ ಪ್ರತಿಭಟನೆಗಳ ಮಧ್ಯೆ, ನೀಟ್ ಅಕ್ರಮಗಳಿಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ಇಂದು (ಜುಲೈ 25) ಪ್ರಧಾನ ಮಂತ್ರಿಗಳಿಗೆ ತಮ್ಮ...

ಅಭಿಜೀತ್ ದಿಪ್ಕೆಗೆ ಟೈಫಾಯ್ಡ್; ಪ್ರತಿಭಟನೆ ಮುಂದುವರಿಯಲಿದೆ ಎಂದ ಸಿಜೆಪಿ ಸಂಸ್ಥಾಪಕ

ತನಗೆ ಟೈಫಾಯ್ಡ್ ಇರುವುದು ಪತ್ತೆಯಾಗಿದೆ ಎಂದು ಕಾಕ್ರೋಚ್‌ ಜನತಾ ಪಕ್ಷದ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದಿಪ್ಕೆ ಅವರು ಇಂದು ಹೇಳಿದ್ದಾರೆ. "ನನ್ನ ಅನಾರೋಗ್ಯವು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ...

ಮುಸ್ಲಿಮರ ಬಗ್ಗೆ ನಿಂದನಾತ್ಮಕ, ಪ್ರಚೋದನಕಾರಿ ಹೇಳಿಕೆ : ಸಿ.ಟಿ ರವಿ ವಿರುದ್ಧ FIR

ಮುಸ್ಲಿಮರ ವಿರುದ್ಧ ನಿಂದನಾತ್ಮಕ ಹಾಗೂ ಪ್ರಚೋದನಕಾರಿ ಹೇಳಿಕೆ ನೀಡಿದ ವಿಧಾನಪರಿಷತ್ ಸದಸ್ಯ ಸಿ.ಟಿ ರವಿ ವಿರುದ್ಧ ಚಿಕ್ಕಮಗಳೂರು ನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ನಗರದ ಜಾಮಿಯಾ ಮಸೀದಿಯ ಅಧ್ಯಕ್ಷ ಮುದಸ್ಸಿರ್ ಪಾಷಾ ಅವರು...