Homeಕರ್ನಾಟಕಮಂಗಳೂರಿನಲ್ಲಿ ವಲಸೆ ಕಾರ್ಮಿಕನ ಗುಂಪು ಹತ್ಯೆ; ಎಸ್‌ಐಟಿ ತನಿಖೆಗೆ ಸಿಪಿಐಎಂ ಆಗ್ರಹ

ಮಂಗಳೂರಿನಲ್ಲಿ ವಲಸೆ ಕಾರ್ಮಿಕನ ಗುಂಪು ಹತ್ಯೆ; ಎಸ್‌ಐಟಿ ತನಿಖೆಗೆ ಸಿಪಿಐಎಂ ಆಗ್ರಹ

- Advertisement -
- Advertisement -

ಮಂಗಳೂರು ನಗರದ ಹೊರವಲಯದ ಕುಡುಪು ಎಂಬಲ್ಲಿ ನಿನ್ನೆ ಎಪ್ರಿಲ್ 27 ರಂದು ಕ್ರಿಕೆಟ್ ಆಡುತ್ತಿದ್ದ ಗುಂಪೊಂದು ಅಲ್ಲಿದ್ದ ವಲಸೆ ಕಾರ್ಮಿಕನೋರ್ವನನ್ನು ಥಳಿಸಿ ಹತ್ಯೆ ಗೈದಿರುವ ಆತಂಕಕಾರಿ ಕೃತ್ಯ ಬೆಳಕಿಗೆ ಬಂದಿದೆ. ಪ್ರಕರಣದ ಕುರಿತು ವಿಶೇಷ ತನಿಖಾ ತಂಡ (ಎಸ್‌ಐಟಿ) ತನಿಖೆ ನಡೆಸಬೇಕು ಎಂದು ಸಿಪಿಐಎಂ ಆಗ್ರಹಿಸಿದೆ.

“ಘಟನೆ ನಡೆದು ಒಂದು ದಿನ ಕಳೆದಿದ್ದರೂ ಪೊಲೀಸ್ ಇಲಾಖೆ ಈ ಕುರಿತು ಯಾವುದೇ ಅಧಿಕೃತ ಮಾಹಿತಿ ನೀಡುತ್ತಿಲ್ಲ. ಇದು ಹಲವು ಅನುಮಾನಗಳಿಗೆ ಕಾರಣವಾಗುತ್ತಿದೆ. ಗುಂಪು ಹಲ್ಲೆ, ಹತ್ಯೆಯಲ್ಲಿ ಭಾಗಿಯಾಗಿರುವ ರಾಜಕಿಯ ಹಿನ್ನಲೆಯ ಕೆಲವು ಪ್ರಭಾವಿಗಳನ್ನು ರಕ್ಷಿಸುವ, ಪ್ರಕರಣದ ತೀವ್ರತೆಯನ್ನು ತಗ್ಗಿಸುವ, ಪ್ರಕರಣವನ್ನು ದುರ್ಬಲಗೊಳಿಸುವ ಯತ್ನವೂ ಪ್ರಭಾವಿ ರಾಜಕಾರಣಿಗಳಿಂದ, ಸ್ಥಳೀಯ ಜನಪ್ರತಿನಿಧಿಗಳಿಂದ ನಡೆಯುತ್ತಿರುವ ಕುರಿತು ಅನುಮಾನಗಳು ಸಾರ್ವಜನಿಕ ವಲಯದಿಂದ ವ್ಯಕ್ತವಾಗುತ್ತಿದೆ. ರಾಜ್ಯ ಸರಕಾರ ಈ ಕುರಿತು ಗಮನ ಹರಿಸಬೇಕು, ಖುದ್ದು ಮುಖ್ಯಮಂತ್ರಿಗಳು ಈ ಗುಂಪು ಹಲ್ಲೆ, ಹತ್ಯೆ ಪ್ರಕರಣವನ್ನು ಗಂಭೀರಾವಗಿ ಪರಿಗಣಿಸಿ ಉತ್ತಮ ಹಿನ್ನಲೆಯ ಅಧಿಕಾರಿಗಳ ತಂಡವನ್ನು ತನಿಖೆಗೆ ನೇಮಿಸಬೇಕು” ಎಂದು ಸಿಪಿಐಎಂ ದಕ್ಷಿಣ ಕನ್ನಡ ಜಿಲ್ಲಾ ಸಮಿತಿ ಒತ್ತಾಯಿಸಿದೆ.

ಕುಡುಪು ಮೈದಾನದ ಸಮೀಪ ಬಂದಿದ್ದ ವಲಸೆ ಕಾರ್ಮಿಕನನ್ನು ಆತನ ಧರ್ಮದ ಗುರುತಿನ ಕಾರಣಕ್ಕೆ ಕಲ್ಲು, ದೊಣ್ಣೆ, ಬ್ಯಾಟುಗಳಿಂದ ಅಲ್ಲಿದ್ದ ಗುಂಪು ಹಲ್ಲೆ ನಡೆಸಿ ಕೊಂದು ಹಾಕಿದೆ ಎಂದು ಎಲ್ಲೆಡೆ ಪುಕಾರು ಹಬ್ಬಿದೆ. ನತದೃಷ್ಟ ವಲಸೆ ಕಾರ್ಮಿಕ ದೇಶ ವಿರೋಧಿ ಘೋಷಣೆ ಕೂಗಿದ್ದಾನೆ ಎಂಬ ವದಂತಿಯನ್ನೂ ದುಷ್ಕರ್ಮಿಗಳ ಗುಂಪು ಹರಿಯಬಿಟ್ಟಿದೆ. ಆ ಮೂಲಕ ತಮ್ಮ ಗಂಭೀರ ದುಷ್ಕೃತ್ಯವನ್ನು ದೇಶ ಪ್ರೇಮದ ಲೇಬಲ್ ಅಂಟಿಸಿ ಸಮರ್ಥಿಸಿಕೊಳ್ಳುವ ಹೀನ ಯತ್ನವೂ ನಡೆಯುತ್ತಿದೆ ಎಂದು ಸ್ಥಳೀಯ ಹೋರಾಟಗಾರರು ಆರೋಪಿಸಿದ್ದಾರೆ.

ಮಾಜಿ ಕಾರ್ಪೊರೇಟರ್ ಓರ್ವರ ಪತಿ ಈ ಗುಂಪನ್ನು ಹಲ್ಲೆ ನಡೆಸಲು ಪ್ರಚೋದಿಸಿದ್ದಾರೆ ಎಂಬ ಕುರಿತೂ ಸ್ಥಳೀಯರು ಮಾತಾಡಿಕೊಳ್ಳುತ್ತಿದ್ದಾರೆ. ಹತ್ಯೆಯ ತರುವಾಯ ಸ್ಥಳೀಯ ಜನಪ್ರತಿನಿಧಿಗಳೂ ಮಧ್ಯಪ್ರವೇಶಿಸಿ ಪ್ರಕರಣದ ತೀವ್ರತೆಯನ್ನು ತಗ್ಗಿಸುವ, ಕೆಲವರನ್ನು ಬಚಾವ್ ಮಾಡುವ ಯತ್ನ ನಡೆಸುತ್ತಿರುವ ಆರೋಪಗಳೂ ಕೇಳಿಬರುತ್ತಿದೆ. ಮಂಗಳೂರು ಪೊಲೀಸರು ಯಾವುದೇ ಅಧಿಕೃತ ಮಾಹಿತಿಯನ್ನು ಘಟನೆ ನಡೆದು ಒಂದು ದಿನ ಕಳೆದರೂ ನೀಡದಿರುವುದು ಪ್ರಕರಣದ ಕುರಿತು ಅನುಮಾನಗಳನ್ನು ಹೆಚ್ಚಿಸಿದೆ.

ಮಂಗಳೂರು ನಗರದಲ್ಲಿ ಈ ರೀತಿ ಗುಂಪು ಹಲ್ಲೆ, ಹತ್ಯೆ ನಡೆಯುವುದು ಕರಾವಳಿ ಜಿಲ್ಲೆಗಳು ಅಪಾಯದ ಗಡಿದಾಟುತ್ತಿರುವುದರ ಸಂಕೇತ, ಪೆಹಲ್ಗಾಮ್ ದುರಂತದ ಬೆನ್ನಲ್ಲೆ ಈ ಘಟನೆ ನಡೆದಿರುವುದು ಆಘಾತಕಾರಿ ವಿದ್ಯಾಮಾನ‌. ವಲಸೆ ಕಾರ್ಮಿಕರು, ಅವರ ಧರ್ಮದ ಹಾಗೂ ವಿವಿಧ ಗುರುತಿನ ಕಾರಣಕ್ಕೆ ‘ದೇಶಪ್ರೇಮ’ದ ಲೇಬಲ್ ಅಡಿ ದುಷ್ಕರ್ಮಿಗಳು ಬಹಿರಂಗವಾಗಿ ಹೊಡೆದು ಹಾಕುವುದು ಅನಾಗರಿಕತೆಯ ಪರಮಾವಧಿ. ಇದರ ಸಾಮಾಜಿಕ ಪರಿಣಾಮಗಳು ಸರಿಪಡಿಸಲಾಗಷ್ಟು ಗಂಭೀರವಾಗಿರುತ್ತದೆ ಎಂದು ಸಿಪಿಐಎಂ ಸಿಪಿಐಎಂ ಘಟನೆಯನ್ನು ಖಂಡಿಸಿದೆ.

‘ಮುಸ್ಲಿಂ’ ಎಂಬ ಕಾರಣಕ್ಕೆ ವಲಸೆ ಕಾರ್ಮಿಕನ ಗುಂಪು ಹತ್ಯೆ ಖಚಿತ

ಕುಡುಪುವಿನಲ್ಲಿ ಅಪರಿಚಿತ ಯುವಕನ ಮೃತದೇಹ ಪತ್ತೆಯಾದ ಘಟನೆ ತಿರುವು ಪಡೆದುಕೊಂಡಿದ್ದು, ಗುಂಪಿನಿಂದ ಹಲ್ಲೆಗೊಳಗಾಗಿ ಹತ್ಯೆಯಾಗಿರುವುದನ್ನು ಪೊಲೀಸರು ಖಚಿತಪಡಿಸಿಕೊಂಡಿರುವುದಾಗಿ ಈದಿನ.ಕಾಂ ವರದಿ ಮಾಡಿದೆ.

ಇದೀಗ ಈ ಘಟನೆಗೆ ಸಂಬಂಧಿಸಿದಂತೆ ಗುಂಪು ಹತ್ಯೆಯಲ್ಲಿ ಭಾಗಿಯಾಗಿದ್ದ ಆರೋಪದಲ್ಲಿ ಸುಮಾರು 15 ಮಂದಿ ಆರೋಪಿಗಳನ್ನು ತಡರಾತ್ರಿ ಬಂಧಿಸಿರುವುದಾಗಿ ವರದಿಯಾಗಿದೆ. ಆದರೆ, ಈ ಬಗ್ಗೆ ಇನ್ನೂ ಕೂಡ ಮಂಗಳೂರು ನಗರ ಪೊಲೀಸರು ಅಧಿಕೃತ ಮಾಹಿತಿ ನೀಡಿಲ್ಲ. ವಶಕ್ಕೆ ತೆಗೆದುಕೊಂಡ ಆರೋಪಿಗಳಿಂದ ಘಟನೆಯ ಬಗ್ಗೆ ಮಾಹಿತಿ ಕಲೆ ಹಾಕುತ್ತಿರುವುದಾಗಿ ತಿಳಿದು ಬಂದಿದೆ. ಅಲ್ಲದೇ, ‘ಮುಸ್ಲಿಂ’ ಎಂಬ ಕಾರಣಕ್ಕಾಗಿಯೇ ವಲಸೆ ಕಾರ್ಮಿಕನ ಮೇಲೆ ಹಲ್ಲೆ ಮಾಡಿ, ಹತ್ಯೆಗೈದಿರುವುದಾಗಿ ಪೊಲೀಸರ ತನಿಖೆಯ ವೇಳೆ ಖಚಿತವಾಗಿದೆ ಎಂದು ತಿಳಿದು ಬಂದಿದೆ.

ಘಟನೆಯ ಬಗ್ಗೆ ಹೆಚ್ಚು ಮಾಹಿತಿ ನೀಡಲು ಮಂಗಳವಾರ ಮಧ್ಯಾಹ್ನ 12 ಗಂಟೆಗೆ ಮಂಗಳೂರು ನಗರ ಪೊಲೀಸ್ ಕಮಿಷನರ್ ಅನುಪಮ್ ಅಗರ್ವಾಲ್ ಸುದ್ದಿಗೋಷ್ಠಿ ನಡೆಸಿ ಮಾಹಿತಿ ನೀಡಲಿರುವುದಾಗಿ ತಿಳಿದು ಬಂದಿದೆ.

ಧರ್ಮದ ಆಧಾರದ ಮೇಲೆ ಚಿಕಿತ್ಸೆ ನಿರಾಕರಿಸುವ ಪೋಸ್ಟ್ ಹಂಚಿಕೊಂಡ ವೈದ್ಯೆ; ವಿರೋಧದ ಬಳಿಕ ಡಿಲೀಟ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಮಮತಾ ಬ್ಯಾನರ್ಜಿಗೆ ಬಿಗ್ ಶಾಕ್: ನೇಮಕಗೊಂಡ ತಿಂಗಳಲ್ಲೇ ಟಿಎಂಸಿ ರಾಜ್ಯಾಧ್ಯಕ್ಷೆ ಚಂದ್ರಿಮಾ ಭಟ್ಟಾಚಾರ್ಯ ರಾಜೀನಾಮೆ

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಹೀನಾಯ ಸೋಲಿನ ಹಿನ್ನೆಲೆಯಲ್ಲಿ, ಅತ್ಯಂತ ನಿರ್ಣಾಯಕವಾದ ಸಾಂಸ್ಥಿಕ ಜವಾಬ್ದಾರಿಗೆ ನೇಮಕಗೊಂಡ ಕೇವಲ ಒಂದು ತಿಂಗಳ ಒಳಗಾಗಿಯೇ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ರಾಜ್ಯ ಘಟಕದ ಅಧ್ಯಕ್ಷೆ ಚಂದ್ರಿಮಾ...

ಜಿಲ್ಲಾ ನ್ಯಾಯಾಧೀಶೆ ತಬಸ್ಸುಮ್ ಖಾನ್‌ಗೆ ಬಲಪಂಥೀಯರಿಂದ ಬೆದರಿಕೆ : ಗಂಭೀರವಾಗಿ ಪರಿಗಣಿಸಿದ ಹೈಕೋರ್ಟ್

ನರ್ಮದಾಪುರಂ ಜಿಲ್ಲಾ ನ್ಯಾಯಾಧೀಶರಾದ ತಬಸ್ಸುಮ್ ಖಾನ್ ಅವರು ತಮ್ಮ ಕರ್ತವ್ಯ ನಿರ್ವಹಣೆಯ ಕಾರಣಕ್ಕಾಗಿ ಬೆದರಿಕೆ ಮತ್ತು ನಿಂದನೆಗೆ ಒಳಗಾಗಿರುವುದನ್ನು ಗಂಭೀರವಾಗಿ ಪರಿಗಣಿಸಿರುವ ಮಧ್ಯಪ್ರದೇಶ ಹೈಕೋರ್ಟ್, ಅವರಿಗೆ ಸೂಕ್ತ ರಕ್ಷಣೆ ನೀಡುವಂತೆ ಮತ್ತು ಅಪರಾಧಿಗಳನ್ನು ಪತ್ತೆಹಚ್ಚಲು ಕೈಗೊಂಡಿರುವ...

ಎಸ್ಐಆರ್ ಪ್ರಕ್ರಿಯೆಯಲ್ಲಿ ಚುನಾವಣಾ ಆಯೋಗದ ಪಕ್ಷಪಾತದ ಬಗ್ಗೆ ಸಿಜೆಐಗೆ ಪ್ರತಿಪಕ್ಷಗಳಿಂದ ಪತ್ರ: ‘ಪ್ರಜಾಪ್ರಭುತ್ವ ಅಪಾಯದಲ್ಲಿದೆ’ ಎಂದು ಆರೋಪ

ದೇಶದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಭಾರತೀಯ ಚುನಾವಣಾ ಆಯೋಗವು (ECI) ಪಕ್ಷಪಾತ ಧೋರಣೆ ತಳೆದಿದೆ ಎಂದು ಆರೋಪಿಸಿ, 24 ವಿರೋಧ ಪಕ್ಷಗಳ ನಾಯಕರು ಹಾಗೂ ಒಬ್ಬರು ಸ್ವತಂತ್ರ...

ಬೆಂಗಳೂರು| ಕೆ.ಆರ್. ವೃತ್ತದ ಬಳಿ ಬಿಎಂಟಿಸಿ ಬಸ್‌ಗಳ ನಡುವೆ ಅಪಘಾತ; ಹಲವರಿಗೆ ಗಾಯ

ಇಂದು ಬೆಳಿಗ್ಗೆ ವಿಧಾನಸೌಧದಿಂದ ಸ್ವಲ್ಪ ದೂರದಲ್ಲಿರುವ ಜನನಿಬಿಡ ಕೆ.ಆರ್. ವೃತ್ತ ಜಂಕ್ಷನ್ ಬಳಿ ಎರಡು ಬಿಎಂಟಿಸಿ ಬಸ್‌ಗಳು ಡಿಕ್ಕಿ ಹೊಡೆದ ಪರಿಣಾಮ ಹಲವಾರು ಪ್ರಯಾಣಿಕರು ಗಾಯಗೊಂಡರು. ಡಿಕ್ಕಿಯ ಪರಿಣಾಮ ಬಸ್ಸಿನೊಳಗೆ ಹಲವಾರು ಪ್ರಯಾಣಿಕರು...

ಎಸ್‌ಐಆರ್ ಪ್ರಕ್ರಿಯೆಯಲ್ಲಿ ಲೋಪ ಆರೋಪ; ಕೋಲಾರ-ಮೈಸೂರಿನ ಅಧಿಕಾರಿಗಳಿಗೆ ನೋಟಿಸ್ ಜಾರಿ

ರಾಜ್ಯದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್)ಗೆ ಸಂಬಂಧಿಸಿದಂತೆ, ಕೋಲಾರ ಮತ್ತು ಮೈಸೂರಿನಲ್ಲಿ ನಡೆದ ಕಾರ್ಯವಿಧಾನದಲ್ಲಿ ನಿಯಮ ಉಲ್ಲಂಘನೆ ಆರೋಪ ಕೇಳಿಬಂದೆ. ಕೋಲಾರದಲ್ಲಿ, ಪರಿಷ್ಕರಣಾ ಕಾರ್ಯದ ಸಮಯದಲ್ಲಿ ಕರ್ತವ್ಯ...

ಸೂರತ್ ಧ್ವಂಸ ಕಾರ್ಯಾಚರಣೆ ಸಂಪೂರ್ಣ ‘ಕಾನೂನುಬಾಹಿರ’: 100 ನಿರಾಶ್ರಿತ ಕುಟುಂಬಗಳ ಪುನರ್ವಸತಿಗೆ ಗುಜರಾತ್ ಹೈಕೋರ್ಟ್ ಆದೇಶ

ಅಹಮದಾಬಾದ್: ಗುಜರಾತ್‌ನ ಸೂರತ್‌ನ ನಾಸಿರ್ ನಗರದಲ್ಲಿ ನಡೆದ ಮನೆಗಳ ಧ್ವಂಸ ಕಾರ್ಯಾಚರಣೆಯನ್ನು ತೀವ್ರವಾಗಿ ಖಂಡಿಸಿರುವ ಗುಜರಾತ್ ಹೈಕೋರ್ಟ್, ಇದನ್ನು "ಸಂಪೂರ್ಣ ಕಾನೂನುಬಾಹಿರ" ಎಂದು ಕರೆದಿದೆ. ಮೇ 30 ರಂದು ನಡೆದ ಈ "ಅನಧಿಕೃತ"...

ವಿದ್ಯುತ್ ಖಾಸಗೀಕರಣ ವಿರುದ್ದದ ಹೋರಾಟಕ್ಕೆ ಗೆಲುವು: ಅರ್ಜಿ ಹಿಂಪಡೆದ ಟಾಟಾ ಪವರ್ ಕಂಪನಿ

ರಾಜ್ಯದಲ್ಲಿ ವಿದ್ಯುತ್ ಕ್ಷೇತ್ರದಲ್ಲಿ ಖಾಸಗೀಕರಣದ ಹೆಜ್ಜೆ ಇಡಲು ಮುಂದಾಗಿದ್ದ ಟಾಟಾ ಪವರ್ ಕಂಪನಿಗೆ ಭಾರಿ ಹಿನ್ನಡೆಯಾಗಿದೆ. ಕರ್ನಾಟಕ ವಿದ್ಯುತ್ ನಿಯಂತ್ರಣ ಆಯೋಗದ (KERC) ಮುಂದೆ ರಾಜ್ಯದ 19 ಕಂದಾಯ ಜಿಲ್ಲೆಗಳಿಗೆ ಸಂಬಂಧಿಸಿದಂತೆ ತಾನು...

SIR: ಮತದಾರರ ಮನೆಗೆ ಹೋಗದೆ ಕಚೇರಿಯಲ್ಲೇ ಕುಳಿತು ಫಾರ್ಮ್ ವಿತರಣೆ ಆರೋಪ, BLO ಗಳಿಗೆ ಎಚ್ಚರಿಕೆ ನೀಡಿದ ಆಯೋಗ

ರಾಜ್ಯದಲ್ಲಿ ಪ್ರಸ್ತುತ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಸಾರ್ವಜನಿಕರಿಂದ ವ್ಯಾಪಕ ದೂರುಗಳು ಕೇಳಿಬಂದ ಬೆನ್ನಲ್ಲೇ, ರಾಜ್ಯ ಚುನಾವಣಾ ಆಯೋಗವು ತೀವ್ರ ಆಕ್ಷೇಪ ವ್ಯಕ್ತಪಡಿಸಿದೆ. ಮತದಾರರ ಮನೆ-ಮನೆಗೆ ಭೇಟಿ...

ಅಳುವ ಕಂದಮ್ಮಗಳನ್ನು ವಾಷಿಂಗ್ ಮೆಷಿನ್‌ನಲ್ಲಿ ಕೂಡಿಹಾಕ್ತಿದ್ದ ಇಬ್ಬರು ಕೇರ್‌ಟೇಕರ್ ಅರೆಸ್ಟ್

ಸಿಲಿಕಾನ್ ಸಿಟಿಯ ಬ್ರೂಕ್‌ಫೀಲ್ಡ್‌ನಲ್ಲಿರುವ ಪ್ರಮುಖ ಐಟಿ ಸಂಸ್ಥೆ 'ಕ್ಯಾಪ್‌ಜೆಮಿನಿ' ಕ್ಯಾಂಪಸ್‌ನ ಡೇ-ಕೇರ್ ಸೆಂಟರ್‌ನಲ್ಲಿ ಪುಟ್ಟ ಕಂದಮ್ಮಗಳನ್ನು ಬಾತ್‌ರೂಮ್ ಹಾಗೂ ವಾಷಿಂಗ್ ಮೆಷಿನ್‌ಗಳಲ್ಲಿ ಕೂಡಿಹಾಕಿ ವಿಕೃತಿ ಮೆರೆದಿದ್ದ ಪ್ರಕರಣದಲ್ಲಿ ಪೊಲೀಸರು ಭರ್ಜರಿ ಬೇಟೆಯಾಡಿದ್ದಾರೆ. ಪ್ರಕರಣದ...

“ನಾಗರಿಕರು ಸರ್ಕಾರದ ಗುಲಾಮರಲ್ಲ”: ಸಿಎಎ, ಜ್ಞಾನವಾಪಿ ವಿರೋಧಿ ಪ್ರತಿಭಟನೆ ಸಂಬಂಧ ಎಸ್‌ಡಿಪಿಐ ನಾಯಕನ ಗಡಿಪಾರು ಪ್ರಶ್ನಿಸಿದ ಬಾಂಬೆ ಹೈಕೋರ್ಟ್

“ದೇಶದ ನಾಗರಿಕರು ಸರ್ಕಾರದ ಗುಲಾಮರಲ್ಲ. ಕೇವಲ ಸರ್ಕಾರದ ನಿರ್ಧಾರಗಳನ್ನು ವಿರೋಧಿಸುವುದು ಅಥವಾ ಆಡಳಿತ ವ್ಯವಸ್ಥೆಯ ವಿರುದ್ಧ ಘೋಷಣೆಗಳನ್ನು ಕೂಗುವುದು ಒಬ್ಬ ನಾಗರಿಕನನ್ನು ಗಡಿಪಾರು ಮಾಡಲು ಕಾನೂನಾತ್ಮಕ ಕಾರಣವಾಗಲಾರದು,” ಎಂದು ಬಾಂಬೆ ಹೈಕೋರ್ಟ್‌ ಐತಿಹಾಸಿಕ...