Homeರಾಜಕೀಯಸಿಪಿಐ(ಎಂ) ನಾಯಕನ ಹತ್ಯೆ: 11 ಮಂದಿ ಆರೆಸ್ಸೆಸ್‌‌ ದುಷ್ಕರ್ಮಿಗಳು ತಪ್ಪಿತಸ್ಥರೆಂದು ತೀರ್ಪು

ಸಿಪಿಐ(ಎಂ) ನಾಯಕನ ಹತ್ಯೆ: 11 ಮಂದಿ ಆರೆಸ್ಸೆಸ್‌‌ ದುಷ್ಕರ್ಮಿಗಳು ತಪ್ಪಿತಸ್ಥರೆಂದು ತೀರ್ಪು

- Advertisement -
- Advertisement -

ತಿರುವನಂದಪುರಂ ಜಿಲ್ಲೆಯ ಅನವೂರಿನಲ್ಲಿ ನಡೆದ ಸಿಪಿಐ(ಎಂ) ನಾಯಕ ಅನವೂರ್ ನಾರಾಯಣನ್ ನಾಯರ್ ಹತ್ಯೆ ಪ್ರಕರಣದಲ್ಲಿ 11 ಮಂದಿ ಆರೆಸ್ಸೆಸ್‌ ದುಷ್ಕರ್ಮಿಗಳು ತಪ್ಪಿತಸ್ಥರೆಂದು ಕೇರಳದ ನೆಯ್ಯಟ್ಟಿಂಕರ ಹೆಚ್ಚುವರಿ ಸೆಷನ್ಸ್ ನ್ಯಾಯಾಲಯ ತೀರ್ಪು ನೀಡಿದ್ದು, ಶಿಕ್ಷೆ ಸೋಮವಾರ ಪ್ರಕಟವಾಗಲಿದೆ. ತಪ್ಪಿತಸ್ಥರಲ್ಲಿ ಬಿಜೆಪಿ ಬೆಂಬಲಿತ ಕಾರ್ಮಿಕ ಸಂಘಟನೆ ಬಿಎಂಎಸ್ (ಕೆಎಸ್‌ಆರ್‌ಟಿಸಿ ನೌಕರರ ಸಂಘ) ನ ರಾಜ್ಯ ಮಟ್ಟದ ನಾಯಕ ಕೂಡ ಸೇರಿದ್ದಾನೆ.

ಸಿಪಿಎಂ ಅನವೂರು ಶಾಖೆಯ ಕಾರ್ಯದರ್ಶಿ ಮತ್ತು ಮುನ್ಸಿಪಲ್ ಕಾರ್ಪೊರೇಷನ್ ಸ್ಟಾಫ್ ಯೂನಿಯನ್ ರಾಜ್ಯ ಸಮಿತಿಯ ಸದಸ್ಯರಾಗಿದ್ದ ನಾರಾಯಣನ್ ಅವರನ್ನು 2013 ರ ನವೆಂಬರ್ 4 ರಂದು ಅವರ ಮನೆಗೆ ನುಗ್ಗಿದ ಶಸ್ತ್ರಧಾರಿ ಆರೆಸ್ಸೆಸ್‌‌ ದುಷ್ಕರ್ಮಿಗಳ ಗುಂಪು ಹತ್ಯೆ ಮಾಡಿತ್ತು.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ನಾರಾಯಣನ್‌ ಅವರನ್ನು, ಅವರ ಪತ್ನಿ ಮತ್ತು ಇಬ್ಬರು ಪುತ್ರರ ಎದುರೇ ಕೊಚ್ಚಿ ಕೊಲೆ ಮಾಡಲಾಗಿತ್ತು. ಘಟನೆಯಲ್ಲಿ ನಾರಾಯಣನ್‌ ಅವರ ಮಕ್ಕಳಾದ ಶಿವಪ್ರಸಾದ್ ಹಾಗೂ ಮತ್ತೊಬ್ಬ ಪುತ್ರ ತೀವ್ರವಾಗಿ ಗಾಯಗೊಂಡಿದ್ದರು.

ಇದನ್ನೂ ಓದಿ: ಬೀದರ್: ಮೊರಾರ್ಜಿ ಶಾಲೆಗಳಲ್ಲಿ RSS ಶಿಬಿರ ವಿರೋಧಿಸಿ ದಲಿತ ಸಂಘಟನೆಗಳ ಪ್ರತಿಭಟನೆ

ದಾಳಿಕೋರರ ಪ್ರಮುಖ ಗುರಿ ನಾರಾಯಣನ್ ಅವರ ಮಗ ಶಿವಪ್ರಸಾದ್ ಆಗಿದ್ದರು. ವಿದ್ಯಾರ್ಥಿ ಸಂಘಟನೆಯಾಗಿದ್ದ ಎಸ್‌ಎಫ್‌ಐನ ವೆಳ್ಳಾರಡ ಪ್ರದೇಶ ಕಾರ್ಯದರ್ಶಿಯಾಗಿದ್ದ ಅವರನ್ನು ಕೊಲ್ಲಲು ಆರೆಸ್ಸೆಸ್‌ನ ದುಷ್ಕರ್ಮಿಗಳು ಅವರ ಮನೆಗೆ ಬಂದಿದ್ದರು.

ತನ್ನ ಮಗನನ್ನು ಉಳಿಸಲು ಯತ್ನಿಸಿದಾಗ ನಾರಾಯಣನ್ ಅವರನ್ನು ಕಡಿದು ಹತ್ಯೆ ಮಾಡಲಾಗಿತ್ತು. ಈ ಹತ್ಯೆಗೂ ಮುನ್ನ ಎಸ್‌ಎಫ್‌ಐ ಸದಸ್ಯರು ಬಿಜೆಪಿ ಬೆಂಬಲಿತ ಕಾರ್ಮಿಕ ಸಂಘಟನೆಯ ಬಿಎಂಎಸ್‌‌‌ನ ಕಾರ್ಯಕರ್ತನಾಗಿದ್ದ ಬಸ್ ಚಾಲಕನೊಂದಿಗೆ ಘರ್ಷಣೆ ನಡೆಸಿದ್ದರು.

ಇದರ ಪ್ರತೀಕಾರವಾಗಿ, ಶಿವಪ್ರಸಾದ್ ಅವರನ್ನು ಗುರಿಯಾಗಿಸಿಕೊಂಡು ನಾರಾಯಣನ್ ಮನೆಗೆ ಆರೆಸ್ಸೆಸ್‌ ದುಷ್ಕರ್ಮಿಗಳ ಗುಂಪು ನುಗ್ಗಿತ್ತು. ಆದರೆ ಅವರನ್ನು ನಾರಾಯಣನ್ ತಡೆದಿದ್ದು, ಈ ವೇಳೆ ಹರಿತವಾದ ಆಯುಧಗಳಿಂದ ಅವರ ಮೇಲೆ ಹಲ್ಲೆ ನಡೆಸಲಾಗಿತ್ತು.

ಇದನ್ನೂ ಓದಿ: 10% ಮೀಸಲಾತಿ: ಆರ್‌‌ಎಸ್‌ಎಸ್‌ ಮಂದಿ ಹಬ್ಬಿಸಿರುವ 100% ಸುಳ್ಳುಗಳು!

ಕೆಎಸ್‌ಆರ್‌ಟಿಸಿ ನೌಕರರ ಸಂಘದ (ಬಿಎಂಎಸ್) ರಾಜ್ಯ ಕಾರ್ಯದರ್ಶಿ ವೆಲ್ಲಂಕೊಲ್ಲಿ ರಾಜೇಶ್ ಮತ್ತು ಆರ್‌ಎಸ್‌ಎಸ್ ಪ್ರಚಾರಕ ಅನಿಲ್ ಕೂಡಾ ತಪ್ಪಿತಸ್ಥರಲ್ಲಿ ಸೇರಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಏಷ್ಯಾ ಸಂಘರ್ಷ| ‘ಈ ಯುದ್ಧವನ್ನು ಕೊನೆಗೊಳಿಸಲು ಒಂದೇ ಮಾರ್ಗ…’: ಮೂರು ಷರತ್ತುಗಳನ್ನು ಮುಂದಿಟ್ಟ ಇರಾನ್

ಇರಾನ್ ಅಧ್ಯಕ್ಷ ಮಸೌದ್ ಪೆಜೆಶ್ಕಿಯಾನ್ ಅವರು ಅಮೆರಿಕ ಮತ್ತು ಇಸ್ರೇಲ್ ಜೊತೆಗಿನ ನಡೆಯುತ್ತಿರುವ ಸಂಘರ್ಷವನ್ನು ಕೊನೆಗೊಳಿಸಲು ಮೂರು ಷರತ್ತುಗಳನ್ನು ನಿಗದಿಪಡಿಸಿದ್ದಾರೆ. ಇದರಲ್ಲಿ ದೇಶವು ಭವಿಷ್ಯದ ದಾಳಿಗಳನ್ನು ಎದುರಿಸುವುದಿಲ್ಲ ಎಂಬ ಖಾತರಿಗಳು ಸೇರಿವೆ. ಬುಧವಾರ ತಮ್ಮ...

ಖಾಸಗಿ ಜಾಗದ ನಮಾಝ್‌ಗೆ ಅಧಿಕಾರಿಗಳಿಂದ ಅಡ್ಡಿ : ಮುಸ್ಲಿಂ ವ್ಯಕ್ತಿಗೆ ಭದ್ರತೆ ಒದಗಿಸಲು ಕೋರ್ಟ್ ಆದೇಶ

ಉತ್ತರ ಪ್ರದೇಶದ ಬರೇಲಿ ಜಿಲ್ಲೆಯ ಮುಸ್ಲಿಂ ವ್ಯಕ್ತಿಯೊಬ್ಬರು ತಮ್ಮ ಖಾಸಗಿ ಜಾಗದಲ್ಲಿ ಇತರರೊಂದಿಗೆ ನಮಾಝ್ ಮಾಡುವುದಕ್ಕೆ ಅಡ್ಡಿಪಡಿಸಲಾಗಿದೆ ಎಂದು ಆರೋಪಿಸಿದ ಹಿನ್ನೆಲೆ, ಅವರಿಗೆ ದಿನದ 24 ಗಂಟೆಯೂ ರಕ್ಷಣೆ ನೀಡಲು ಇಬ್ಬರು ಭದ್ರತಾ...

‘ಒಳಮೀಸಲಾತಿ ಜಾರಿಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಬಿಡುತ್ತಿಲ್ಲ’: ಮಂದಕೃಷ್ಣ ಮಾದಿಗ ಆರೋಪ

‘ಒಳಮೀಸಲಾತಿ ಜಾರಿಗೆ ತರುತ್ತೇವೆಂದು ಹೇಳಿದ್ದ ಕಾಂಗ್ರೆಸ್, ಈಗ ಒಳಮೀಸಲಾತಿ ಅನುಷ್ಠಾನದಲ್ಲಿ ಮೀನಾಮೇಷ ಎಣಿಸುತ್ತಿದೆ. ಕಾಂಗ್ರೆಸ್ ನ ಹೈಕಮಾಂಡ್ ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಹಾಗೂ ಪ್ರಿಯಾಂಕಾ ಗಾಂಧಿ. ಈ ಮೂವರನ್ನು ನಿಯಂತ್ರಿಸುವವರು ಕಾಂಗ್ರೆಸ್...

ಸಾವರ್ಕರ್ ಕುರಿತು ಹೇಳಿಕೆ : ರಾಹುಲ್ ಗಾಂಧಿ ವಿರುದ್ಧದ ಮಾನನಷ್ಟ ಮೊಕದ್ದಮೆ ರದ್ದು

ಭಾರತ್ ಜೋಡೋ ಯಾತ್ರೆಯ ಸಂದರ್ಭದಲ್ಲಿ (2022ರಲ್ಲಿ) ಹಿಂದುತ್ವ ಸಿದ್ಧಾಂತವಾದಿ ವಿನಾಯಕ ದಾಮೋದರ್ ಸಾವರ್ಕರ್ ಕುರಿತು ನೀಡಿದ್ದ ಹೇಳಿಕೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿದ್ದ ಮಾನನಷ್ಟ ಮೊಕದ್ದಮೆಯನ್ನು...

‘ಒಳಮೀಸಲಾತಿ ಜಾರಿಯಲ್ಲಿ ಸರ್ಕಾರ ನಿರ್ಲಕ್ಷ್ಯ ಧೋರಣೆ ತೋರಿದರೆ ಹೋರಾಟ ವಿಧಾನಸೌಧಕ್ಕೆ ಸ್ಥಳಾಂತರವಾಗುತ್ತದೆ’: ಮಾದರ ಚೆನ್ನಯ್ಯ ಸ್ವಾಮೀಜಿ

ಕಳೆದ 35 ವರ್ಷಗಳಿಂದ ಹಲವಾರು ಹೋರಾಟಗಾರರು ತಮ್ಮ ಜೀವ-ಜೀವನವನ್ನು ಅರ್ಪಿಸಿ, ಮನೆ-ಮಠವನ್ನು ಬಿಟ್ಟು ಒಳಮೀಸಲಾತಿ ಹೋರಾಟವನ್ನು ಅಂತಿಮ ಘಟ್ಟಕ್ಕೆ ತಂದಿದ್ದಾರೆ. ಅನೇಕರು ಬದುಕನ್ನು ಮಾತ್ರವಲ್ಲ, ಪ್ರಾಣವನ್ನೂ ಕಳೆದುಕೊಂಡಿದ್ದಾರೆ. ಇದು 2ನೇ ಸ್ವಾತಂತ್ರ್ಯ ಹೋರಾಟವಾಗಿದೆ....

ಎಸ್‌ಎನ್‌ಡಿಪಿ ಪ್ರಧಾನ ಕಾರ್ಯದರ್ಶಿ ಹುದ್ದೆಯಿಂದ ವೆಳ್ಳಾಪ್ಪಳ್ಳಿ ನಟೇಶನ್ ಅನರ್ಹ

ಶ್ರೀ ನಾರಾಯಣ ಧರ್ಮ ಪರಿಪಾಲನ ಯೋಗಂ (ಎಸ್‌ಎನ್‌ಡಿಪಿ ಯೋಗಂ) ನ ಪ್ರಧಾನ ಕಾರ್ಯದರ್ಶಿ ಮತ್ತು ಮತ್ತು ಎಸ್‌ಎನ್ ಟ್ರಸ್ಟ್‌ನ ಕಾರ್ಯದರ್ಶಿ ಸ್ಥಾನದಿಂದ ವೆಳ್ಳಾಪ್ಪಳ್ಳಿ ನಟೇಶನ್ ಅವರನ್ನು ಕೇರಳ ಹೈಕೋರ್ಟ್ ಗುರುವಾರ (ಮಾ.12) ಅನರ್ಹಗೊಳಿಸಿದ್ದು,...

‘ಫಾರೂಕ್ ಅಬ್ದುಲ್ಲಾರನ್ನು ಕೊಲ್ಲುವುದು ಸರ್ಕಾರದ ಉದ್ದೇಶವೇ?’..ರಾಜ್ಯ ಸಭೆಯಲ್ಲಿ ಖರ್ಗೆ ಪ್ರಶ್ನೆ

ಜಮ್ಮು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಹಾಗೂ ನ್ಯಾಷನಲ್ ಕಾನ್ಫರೆನ್ಸ್ (ಎನ್‌ಸಿ) ಪಕ್ಷದ ಮುಖ್ಯಸ್ಥ ಫಾರೂಕ್ ಅಬ್ದುಲ್ಲಾ ಅವರ ಹತ್ಯೆ ಯತ್ನ ವಿಚಾರವನ್ನು ವಿಪಕ್ಷ ಸದಸ್ಯರು ಗುರುವಾರ (ಮಾ.12) ರಾಜ್ಯಸಭೆಯಲ್ಲಿ ಪ್ರಸ್ತಾಪಿಸಿದರು. ಘಟನೆ ಬಗ್ಗೆ...

56 ಸಾವಿರ ಹುದ್ದೆಗಳ ನೇಮಕಾತಿಯಲ್ಲಿ ಒಳಮೀಸಲಾತಿ ಅನ್ವಯಕ್ಕೆ ಆಗ್ರಹಿಸಿ ಎಡಗೈ ಸಮುದಾಯದಿಂದ ಬೃಹತ್ ಪ್ರತಿಭಟನೆ 

ಸರ್ಕಾರವು ಒಳ ಮೀಸಲಾತಿಯನ್ನು ತಪ್ಪಿಸುವ ಹುನ್ನಾರದಿಂದ ತರಾತುರಿಯಲ್ಲಿ 56,432 ಹುದ್ದೆಗಳ ನೇಮಕಾತಿಗೆ ಆದೇಶ ಹೊರಡಿಸಿದೆ. ನೇಮಕಾತಿಯಲ್ಲಿ ಒಳಮೀಸಲಾತಿ ಅಳವಡಿಸದೆ, ಎಡಗೈ ಸಮುದಾಯಗಳಿಗೆ ಸರ್ಕಾರ ಮತ್ತೆ ವಂಚಿಸುತ್ತಿದೆ ಎಂದು ‘ಒಳಮೀಸಲಾತಿ ಹೋರಾಟ ಸಮಿತಿ’ ಆರೋಪಿಸಿದೆ....

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧದ ಅವಿಶ್ವಾಸ ನಿರ್ಣಯಕ್ಕೆ ಸೋಲು

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧ ವಿರೋಧ ಪಕ್ಷಗಳು ಮಂಡಿಸಿದ್ದ ಅವಿಶ್ವಾಸ ನಿರ್ಣಯವು ಬುಧವಾರ (ಮಾ.11) ಧ್ವನಿ ಮತದ ಮೂಲಕ ತಿರಸ್ಕಾರಗೊಂಡಿದೆ. ಸದನದಲ್ಲಿ ವಿರೋಧ ಪಕ್ಷಗಳ ತೀವ್ರ ಗದ್ದಲ ಮತ್ತು ಘೋಷಣೆಗಳ ನಡುವೆಯೇ ಸ್ಪೀಕರ್...

ಉತ್ತರ ಪ್ರದೇಶ| ರಸ್ತೆ ಗುಂಡಿಗೆ ಇಳಿದ ಆಂಬ್ಯುಲೆನ್ಸ್; ಮರುಜೀವ ಪಡೆದ ಮೆದುಳು ನಿಷ್ಕ್ರಿಯಗೊಂಡಿದ್ದ ಮಹಿಳೆ!

ಉತ್ತರ ಪ್ರದೇಶದ ಬರೇಲಿಯ ಖಾಸಗಿ ಆಸ್ಪತ್ರೆಯೊಂದರ ವೈದ್ಯರು ಮೆದುಳು ನಿಷ್ಕ್ರಿಯ ಎಂದು ಘೋಷಿಸಿದ್ದು, ಮಹಿಳೆಯೊಬ್ಬರ ಮೃತದೇಹವನ್ನು ಅಂತ್ಯಕ್ರಿಯೆಗಾಗಿ ಮನೆಗೆ ಸಾಗಿಸುತ್ತಿದ್ದಾಗ ಆಂಬ್ಯುಲೆನ್ಸ್ ರಸ್ತೆಯ ಗುಂಡಿಗೆ ಇಳಿದ ನಂತರ ಆಕೆ ಜೀವಂತವಾಗಿರುವ ಲಕ್ಷಣಗಳು ಕಂಡುಬಂದು...