Homeರಾಜಕೀಯಸಿಪಿಐ(ಎಂ) ನಾಯಕನ ಹತ್ಯೆ: 11 ಮಂದಿ ಆರೆಸ್ಸೆಸ್‌‌ ದುಷ್ಕರ್ಮಿಗಳು ತಪ್ಪಿತಸ್ಥರೆಂದು ತೀರ್ಪು

ಸಿಪಿಐ(ಎಂ) ನಾಯಕನ ಹತ್ಯೆ: 11 ಮಂದಿ ಆರೆಸ್ಸೆಸ್‌‌ ದುಷ್ಕರ್ಮಿಗಳು ತಪ್ಪಿತಸ್ಥರೆಂದು ತೀರ್ಪು

- Advertisement -
- Advertisement -

ತಿರುವನಂದಪುರಂ ಜಿಲ್ಲೆಯ ಅನವೂರಿನಲ್ಲಿ ನಡೆದ ಸಿಪಿಐ(ಎಂ) ನಾಯಕ ಅನವೂರ್ ನಾರಾಯಣನ್ ನಾಯರ್ ಹತ್ಯೆ ಪ್ರಕರಣದಲ್ಲಿ 11 ಮಂದಿ ಆರೆಸ್ಸೆಸ್‌ ದುಷ್ಕರ್ಮಿಗಳು ತಪ್ಪಿತಸ್ಥರೆಂದು ಕೇರಳದ ನೆಯ್ಯಟ್ಟಿಂಕರ ಹೆಚ್ಚುವರಿ ಸೆಷನ್ಸ್ ನ್ಯಾಯಾಲಯ ತೀರ್ಪು ನೀಡಿದ್ದು, ಶಿಕ್ಷೆ ಸೋಮವಾರ ಪ್ರಕಟವಾಗಲಿದೆ. ತಪ್ಪಿತಸ್ಥರಲ್ಲಿ ಬಿಜೆಪಿ ಬೆಂಬಲಿತ ಕಾರ್ಮಿಕ ಸಂಘಟನೆ ಬಿಎಂಎಸ್ (ಕೆಎಸ್‌ಆರ್‌ಟಿಸಿ ನೌಕರರ ಸಂಘ) ನ ರಾಜ್ಯ ಮಟ್ಟದ ನಾಯಕ ಕೂಡ ಸೇರಿದ್ದಾನೆ.

ಸಿಪಿಎಂ ಅನವೂರು ಶಾಖೆಯ ಕಾರ್ಯದರ್ಶಿ ಮತ್ತು ಮುನ್ಸಿಪಲ್ ಕಾರ್ಪೊರೇಷನ್ ಸ್ಟಾಫ್ ಯೂನಿಯನ್ ರಾಜ್ಯ ಸಮಿತಿಯ ಸದಸ್ಯರಾಗಿದ್ದ ನಾರಾಯಣನ್ ಅವರನ್ನು 2013 ರ ನವೆಂಬರ್ 4 ರಂದು ಅವರ ಮನೆಗೆ ನುಗ್ಗಿದ ಶಸ್ತ್ರಧಾರಿ ಆರೆಸ್ಸೆಸ್‌‌ ದುಷ್ಕರ್ಮಿಗಳ ಗುಂಪು ಹತ್ಯೆ ಮಾಡಿತ್ತು.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ನಾರಾಯಣನ್‌ ಅವರನ್ನು, ಅವರ ಪತ್ನಿ ಮತ್ತು ಇಬ್ಬರು ಪುತ್ರರ ಎದುರೇ ಕೊಚ್ಚಿ ಕೊಲೆ ಮಾಡಲಾಗಿತ್ತು. ಘಟನೆಯಲ್ಲಿ ನಾರಾಯಣನ್‌ ಅವರ ಮಕ್ಕಳಾದ ಶಿವಪ್ರಸಾದ್ ಹಾಗೂ ಮತ್ತೊಬ್ಬ ಪುತ್ರ ತೀವ್ರವಾಗಿ ಗಾಯಗೊಂಡಿದ್ದರು.

ಇದನ್ನೂ ಓದಿ: ಬೀದರ್: ಮೊರಾರ್ಜಿ ಶಾಲೆಗಳಲ್ಲಿ RSS ಶಿಬಿರ ವಿರೋಧಿಸಿ ದಲಿತ ಸಂಘಟನೆಗಳ ಪ್ರತಿಭಟನೆ

ದಾಳಿಕೋರರ ಪ್ರಮುಖ ಗುರಿ ನಾರಾಯಣನ್ ಅವರ ಮಗ ಶಿವಪ್ರಸಾದ್ ಆಗಿದ್ದರು. ವಿದ್ಯಾರ್ಥಿ ಸಂಘಟನೆಯಾಗಿದ್ದ ಎಸ್‌ಎಫ್‌ಐನ ವೆಳ್ಳಾರಡ ಪ್ರದೇಶ ಕಾರ್ಯದರ್ಶಿಯಾಗಿದ್ದ ಅವರನ್ನು ಕೊಲ್ಲಲು ಆರೆಸ್ಸೆಸ್‌ನ ದುಷ್ಕರ್ಮಿಗಳು ಅವರ ಮನೆಗೆ ಬಂದಿದ್ದರು.

ತನ್ನ ಮಗನನ್ನು ಉಳಿಸಲು ಯತ್ನಿಸಿದಾಗ ನಾರಾಯಣನ್ ಅವರನ್ನು ಕಡಿದು ಹತ್ಯೆ ಮಾಡಲಾಗಿತ್ತು. ಈ ಹತ್ಯೆಗೂ ಮುನ್ನ ಎಸ್‌ಎಫ್‌ಐ ಸದಸ್ಯರು ಬಿಜೆಪಿ ಬೆಂಬಲಿತ ಕಾರ್ಮಿಕ ಸಂಘಟನೆಯ ಬಿಎಂಎಸ್‌‌‌ನ ಕಾರ್ಯಕರ್ತನಾಗಿದ್ದ ಬಸ್ ಚಾಲಕನೊಂದಿಗೆ ಘರ್ಷಣೆ ನಡೆಸಿದ್ದರು.

ಇದರ ಪ್ರತೀಕಾರವಾಗಿ, ಶಿವಪ್ರಸಾದ್ ಅವರನ್ನು ಗುರಿಯಾಗಿಸಿಕೊಂಡು ನಾರಾಯಣನ್ ಮನೆಗೆ ಆರೆಸ್ಸೆಸ್‌ ದುಷ್ಕರ್ಮಿಗಳ ಗುಂಪು ನುಗ್ಗಿತ್ತು. ಆದರೆ ಅವರನ್ನು ನಾರಾಯಣನ್ ತಡೆದಿದ್ದು, ಈ ವೇಳೆ ಹರಿತವಾದ ಆಯುಧಗಳಿಂದ ಅವರ ಮೇಲೆ ಹಲ್ಲೆ ನಡೆಸಲಾಗಿತ್ತು.

ಇದನ್ನೂ ಓದಿ: 10% ಮೀಸಲಾತಿ: ಆರ್‌‌ಎಸ್‌ಎಸ್‌ ಮಂದಿ ಹಬ್ಬಿಸಿರುವ 100% ಸುಳ್ಳುಗಳು!

ಕೆಎಸ್‌ಆರ್‌ಟಿಸಿ ನೌಕರರ ಸಂಘದ (ಬಿಎಂಎಸ್) ರಾಜ್ಯ ಕಾರ್ಯದರ್ಶಿ ವೆಲ್ಲಂಕೊಲ್ಲಿ ರಾಜೇಶ್ ಮತ್ತು ಆರ್‌ಎಸ್‌ಎಸ್ ಪ್ರಚಾರಕ ಅನಿಲ್ ಕೂಡಾ ತಪ್ಪಿತಸ್ಥರಲ್ಲಿ ಸೇರಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಇರಾನ್‌ನ 140 ಸ್ಥಳಗಳನ್ನು ಗುರಿಯಾಗಿಸಿ ಅಮೆರಿಕದಿಂದ ದಾಳಿ : ಬಹ್ರೇನ್, ಕತಾರ್, ಯುಎಇ ಮೇಲೆ ಇರಾನ್‌ನಿಂದ ಪ್ರತಿದಾಳಿ

ಹಾರ್ಮುಝ್ ಜಲಸಂಧಿಯಲ್ಲಿ ಇರಾನ್ ನಡೆಸಿದ ದಾಳಿಯಿಂದಾಗಿ ಸರಕು ಸಾಗಣೆ ಹಡಗೊಂದು ಹೊತ್ತಿ ಉರಿದು, ಅದರಲ್ಲಿದ್ದ ಸಿಬ್ಬಂದಿ ಹಡಗು ಬಿಟ್ಟು ಹೊರಡುವಂತಾಗಿತ್ತು. ಈ ಘಟನೆಯನ್ನು ಖಂಡಿಸಿ ಅಮೆರಿಕ ಭಾನುವಾರ (ಜು.12) ಮುಂಜಾನೆ ಇರಾನ್ ಮೇಲೆ...

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...