Homeಮುಖಪುಟಸಿಪಿಐ(ಎಂ) ಸಂಸದರಿಗೆ 'ಫ್ಯಾಸಿಸಂ ವಿರೋಧಿ' ಸಭೆಗೆ ತೆರಳಲು ಅನುಮತಿ ನಿರಾಕರಿಸಿದ ಕೇಂದ್ರ ಸರ್ಕಾರ!

ಸಿಪಿಐ(ಎಂ) ಸಂಸದರಿಗೆ ‘ಫ್ಯಾಸಿಸಂ ವಿರೋಧಿ’ ಸಭೆಗೆ ತೆರಳಲು ಅನುಮತಿ ನಿರಾಕರಿಸಿದ ಕೇಂದ್ರ ಸರ್ಕಾರ!

- Advertisement -
- Advertisement -

ದಕ್ಷಿಣ ಅಮೆರಿಕ ಖಂಡದ ವೆನಿಜುವೆಲಾ ದೇಶದ ಸರ್ಕಾರ ಆಯೋಜಿಸಿದ್ದ ‘ಫ್ಯಾಸಿಸಂ ವಿರೋಧಿ ವಿಶ್ವ ಸಂಸದೀಯ ವೇದಿಕೆ’ಯಲ್ಲಿ ಪಾಲ್ಗೊಳ್ಳಲು ಸಿಪಿಐ(ಎಂ) ರಾಜ್ಯಸಭಾ ಸಂಸದ ವಿ. ಶಿವದಾಸನ್‌ಗೆ ವಿದೇಶಾಂಗ ವ್ಯವಹಾರಗಳ ಸಚಿವಾಲಯ (MEA) ಅನುಮತಿ ನಿರಾಕರಿಸಿದೆ. ನವೆಂಬರ್ 4 ಮತ್ತು 5 ರಂದು ಕ್ಯಾರಕಾಸ್‌ನಲ್ಲಿ ನಡೆಯಲಿರುವ ‘ಫ್ಯಾಸಿಸಂ ವಿರೋಧಿ ವಿಶ್ವ ಸಂಸದೀಯ ವೇದಿಕೆ’ಯಲ್ಲಿ ವಿಶ್ವದಾದ್ಯಂತ 300 ಸಂಸದರು ಭಾಗವಹಿಸುವ ನಿರೀಕ್ಷೆಯಿದೆ.

ವಿದೇಶಿ ಕೊಡುಗೆ ನಿಯಂತ್ರಣ ಕಾಯ್ದೆ (ಎಫ್‌ಸಿಆರ್‌ಎ) ಅನುಮತಿಯ ನಂತರ ಗೃಹ ಸಚಿವಾಲಯ (ಎಂಎಚ್‌ಎ) ಒಪ್ಪಿಗೆ ನೀಡಿದ ಹೊರತಾಗಿಯೂ ವಿದೇಶಾಂಗ ಸಚಿವಾಲಯ ಅನುಮತಿ ನಿರಾಕರಿಸಲಾಗಿದೆ ಎಂದು ವರದಿಯಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ಈ ಬಗ್ಗೆ ಆಕ್ರೋಶ ವ್ಯಕ್ತಪಡಿಸಿದರುವ ಸಂಸದ ಶಿವದಾಸನ್, “ಎಫ್‌ಸಿಆರ್‌ಎ ಅನುಮತಿ ನೀಡಿದ್ದು ಇದರಿಂದ ಸರ್ಕಾರಕ್ಕೆ ಬೇರೆ ಯಾವುದೂ ಸಮಸ್ಯೆ ಇಲ್ಲ ಎಂದು ತೋರಿಸುತ್ತದೆ. ಆದರೂ, ಯಾವುದೇ ಕಾರಣ ಉಲ್ಲೇಖಿಸದೆ, ವಿದೇಶಾಂಗ ಸಚಿವಾಲಯ ತನ್ನ ಅನುಮತಿ ನಿರಾಕರಣೆ ಪತ್ರದಲ್ಲಿ ‘ರಾಜಕೀಯ ದೃಷ್ಟಿ ಕೋನದಿಂದ ಅನುಮತಿ ನಿರಾಕರಿಸಲಾಗಿದೆ’ ಎಂದು ಹೇಳಿದೆ” ಎಂದು ಹೇಳಿದ್ದಾರೆ.

ಕಳೆದ ತಿಂಗಳು ವಿದೇಶಾಂಗ ಸಚಿವಾಲಯಕ್ಕೆ ಕಳುಹಿಸಲಾದ ಆಮಂತ್ರಣ ಪತ್ರದಲ್ಲಿ ವೆನಿಜುವೆಲಾದ ಉಪಾಧ್ಯಕ್ಷ ಪೆಡ್ರೊ ಇನ್‌ಫಾಂಟೆ ಅವರು ಕಾರ್ಯಕ್ರಮಕ್ಕಾಗಿ ಸಂಸದ ವಿ. ಶಿವದಾಸನ್‌ಗೆ ಪ್ರಯಾಣಿಸಲು ಅನುಕೂಲ ಮಾಡಿಕೊಟ್ಟ ಭಾರತ ಸರ್ಕಾರಕ್ಕೆ ಕೃತಜ್ಞತೆ ಸಲ್ಲಿಸಿದ್ದರು. ಸಿಪಿಐ(ಎಂ)

ಸಚಿವಾಲಯದ ಈ ಕ್ರಮದ ವಿರುದ್ಧ ತಮ್ಮ ಪ್ರತಿಭಟನೆಯನ್ನು ದಾಖಲಿಸಿರುವ ಶಿವದಾಸನ್, ವಿದೇಶಾಂಗ ವ್ಯವಹಾರಗಳ ಸಚಿವ ಎಸ್ ಜೈಶಂಕರ್ ಅವರಿಗೆ ಪತ್ರ ಬರೆದಿದ್ದಾರೆ. ಪತ್ರದಲ್ಲಿ ಅವರು, ಫ್ಯಾಸಿಸಂ ವಿರುದ್ಧದ ಸಂಸದೀಯ ವೇದಿಕೆಯಲ್ಲಿ ಭಾಗವಹಿಸಲು ನಿರಾಕರಿಸಿರುವ ಬಗ್ಗೆ ಅಘಾತ ವ್ಯಕ್ತಪಡಿಸಿದ್ದು, ಇದು ತನ್ನ ಹಕ್ಕುಗಳ ಮೇಲಿನ ದಾಳಿ ಎಂದು ಪ್ರತಿಪಾದಿಸಿದ್ದಾರೆ.

ಭಾರತ ಮತ್ತು ವೆನಿಜುವೆಲಾ ದೇಶದ ನಡುವೆ ಉತ್ತಮ ಸಂಬಂಧವಿದೆ. ಭಾರತದಲ್ಲಿ ಇತ್ತೀಚೆಗೆ ರೂಪುಗೊಂಡ ಅಂತರರಾಷ್ಟ್ರೀಯ ಸೌರ ಒಕ್ಕೂಟ ಸೇರಿದಂತೆ ಅನೇಕ ಬಹು-ಪಕ್ಷೀಯ ವೇದಿಕೆಗಳಲ್ಲಿ ವೆನಿಜುವೆಲಾ ದೇಶ ಭಾಗವಹಿಸಿದೆ. ಪರಿಸ್ಥಿತಿ ಹೀಗಿರುವಾಗ ವಿದೇಶಾಂಗ ವ್ಯವಹಾರಗಳ ಸಚಿವಾಲಯವು ಕಾರ್ಯಕ್ರಮಕ್ಕೆ ಹಾಜರಾಗಲು ಅನುಮತಿ ನಿರಾಕರಿಸಿದ್ದು ಆಶ್ಚರ್ಯಕರವಾಗಿದೆ ಎಂದು ಅವರು ಪತ್ರದಲ್ಲಿ ಹೇಳಿದ್ದಾರೆ. ಅಷ್ಟೆ ಅಲ್ಲದೆ, ಭಾರತದಂತೆ ವೆನಿಜುವೆಲಾ ಕೂಡ ಅಲಿಪ್ತ ಚಳವಳಿಯ ಸದಸ್ಯ ರಾಷ್ಟ್ರವಾಗಿದೆ ಎಂದು ಅವರು ಹೇಳಿದ್ದಾರೆ.

“ಈ ಕಾರ್ಯಕ್ರಮವು ವಿವಿಧ ದೇಶಗಳ ಸಂಸದರ ಸಭೆಯಾಗಿದೆ. ಪ್ರಸ್ತುತ ಜಾಗತಿಕ ರಾಜಕೀಯ ಪರಿಸ್ಥಿತಿಯಲ್ಲಿನ ಪ್ರಮುಖ ಬೆದರಿಕೆಗಳ ಬಗ್ಗೆ ತಮ್ಮ ಅಭಿಪ್ರಾಯಗಳನ್ನು ಹಂಚಿಕೊಳ್ಳಲು ವೆನಿಜುವೆಲಾದ ಸಂಸತ್ತು ಆಹ್ವಾನಿಸಿದೆ” ಎಂದು ಸಂಸದ ಶಿವದಾಸನ್ ಹೇಳಿದ್ದಾರೆ.

“ಪ್ರಪಂಚದಾದ್ಯಂತ ಬಲಪಂಥೀಯ ಮತ್ತು ನವ-ಫ್ಯಾಸಿಸ್ಟ್ ಪಕ್ಷಗಳ ಬೆಳವಣಿಗೆಯನ್ನು ಅನೇಕ ಪ್ರಜಾಪ್ರಭುತ್ವಗಳು ಸಾಮಾಜಿಕ ರಚನೆಗೆ ಬೆದರಿಕೆ ಎಂದು ಗುರುತಿಸಿವೆ. ಪ್ರಜಾಪ್ರಭುತ್ವದ ಬಗ್ಗೆ ಕಾಳಜಿ ಹೊಂದಿರುವ ಅನೇಕ ಸರ್ಕಾರಗಳು ಮತ್ತು ಪಕ್ಷಗಳು ಈ ಬೆದರಿಕೆಯನ್ನು ಎದುರಿಸಲು ಒಗ್ಗೂಡುತ್ತಿವೆ. ನಾನು ಈ ಪ್ರಯತ್ನಗಳಿಗೆ ಸೇರಲು ಮತ್ತು ಅಂತಹ ಉಪಕ್ರಮವನ್ನು ಬಲಪಡಿಸಲು ಬಯಸುತ್ತೇನೆ” ಎಂದು ಅವರು ಹೇಳಿದ್ದಾರೆ.

“ಎಡ ರಾಜಕೀಯ ಚಿಂತನೆ ಮತ್ತು ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ (ಮಾರ್ಕ್ಸ್‌ವಾದಿ) ಪಕ್ಷವನ್ನು ಪ್ರತಿನಿಧಿಸುವ ನಾನು ಈ ವಿಷಯದ ಬಗ್ಗೆ ನನ್ನ ಅಭಿಪ್ರಾಯಗಳನ್ನು ಮುಂದಿಡಲು ಮತ್ತು ಬಲಪಂಥೀಯ, ನವ-ಫ್ಯಾಸಿಸ್ಟ್ ಬೆದರಿಕೆಯ ವಿರುದ್ಧ ಹೋರಾಟವನ್ನು ಬಲಪಡಿಸಲು ಇದು ನನಗೆ ಒಂದು ಅವಕಾಶವಾಗಿದೆ” ಎಂದು ಅವರು ಹೇಳಿದ್ದಾರೆ.

ಅಕ್ಟೋಬರ್ 25 ರಂದು, ವೆನಿಜುವೆಲಾದ ಕಾರ್ಯನಿರ್ವಾಹಕ ಉಪಾಧ್ಯಕ್ಷ ಡೆಲ್ಸಿ ರೋಡ್ರಿಗಸ್ ಅವರು ಭಾರತಕ್ಕೆ ಭೇಟಿ ನೀಡಿದ್ದರು. ಅವರ ಈ ಭೇಟಿಯ ಸಮಯದಲ್ಲಿ, ರೋಡ್ರಿಗಸ್ ಅವರು ಹಣಕಾಸು ಸಚಿವರು, ವಿದೇಶಾಂಗ ಸಚಿವರು ಮತ್ತು ಇಂಧನ ಸಚಿವರು ಸೇರಿದಂತೆ ಪ್ರಮುಖ ಭಾರತೀಯ ಅಧಿಕಾರಿಗಳೊಂದಿಗೆ ಚರ್ಚೆ ನಡೆಸಿದ್ದರು.

ಇದನ್ನೂ ಓದಿ: ವಕ್ಫ್ ಸ್ವತ್ತುಗಳನ್ನು ರಾಷ್ಟ್ರೀಕರಣಗೊಳಿಸಲು ಪ್ರಧಾನಿಗೆ ಪತ್ರ ಬರೆದ ಶಾಸಕ ಯತ್ನಾಳ್‌

ವಕ್ಫ್ ಸ್ವತ್ತುಗಳನ್ನು ರಾಷ್ಟ್ರೀಕರಣಗೊಳಿಸಲು ಪ್ರಧಾನಿಗೆ ಪತ್ರ ಬರೆದ ಶಾಸಕ ಯತ್ನಾಳ್‌

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೂತುಕುಡಿ ಸಾತನ್‌ಕುಳಂ ತಂದೆ-ಮಗನ ಕಸ್ಟಡಿ ಸಾವು ಪ್ರಕರಣ : ಅಪರಾಧಿಗಳಾದ ಎಲ್ಲಾ 9 ಪೊಲೀಸರಿಗೆ ಮರಣದಂಡನೆ ವಿಧಿಸಿದ ನ್ಯಾಯಾಲಯ

ತಮಿಳುನಾಡಿನ ತೂತುಕುಡಿ ಜಿಲ್ಲೆಯ ಸಾತನ್‌ಕುಳಂ ಪೊಲೀಸ್ ಠಾಣೆಯಲ್ಲಿ ಕೋವಿಡ್-19 ಲಾಕ್‌ಡೌನ್ ಸಮಯದಲ್ಲಿ ಸಂಭವಿಸಿದ, ವ್ಯಾಪಾರಿ ಪಿ. ಜಯರಾಜ್ (58) ಮತ್ತು ಅವರ ಮಗ ಜೆ. ಬೆನಿಕ್ಸ್ (31) ಅವರ ಕಸ್ಟಡಿ ಸಾವು ಪ್ರಕರಣದ...

ದಾವಣಗೆರೆ ದಕ್ಷಿಣ ಉಪ-ಸಮರ: ಶಾಮನೂರು ಸಾಮ್ರಾಜ್ಯದಲ್ಲಿ ಅಹಿಂದ ಬಂಡಾಯ!

ತುಂಗಭದ್ರಾ ನದಿ ಪರ‍್ವಕ್ಕೆ ಎತ್ತರದ ಪ್ರದೇಶದಲ್ಲಿರುವ ದಾವಣಗೆರೆ ಮಧ್ಯ ಕರ್ನಾಟಕದ ಪ್ರಮುಖ ವಾಣಿಜ್ಯ ನಗರಿ. ಬೆಣ್ಣೆ ದೋಸೆಯ ಘಮಲಿನ ದಾವಣಗೆರೆಯ ರಾಜಕಾರಣ ಮಾತ್ರ ಮಿರ್ಚಿ-ಮಂಡಕ್ಕಿಯ ಖಡಕ್ ಖಾರಾ ಕುರುಕುಲಿನಂತೆ! ದಾವಣಗೆರೆ ಮತ್ತದರ ಸುತಮುತ್ತಲಿನ...

‘Dr. Nimo Yadav’, ‘Nehr Who’ ಎಕ್ಸ್‌ ಖಾತೆಗಳನ್ನು ತಕ್ಷಣ ಮರುಸ್ಥಾಪಿಸಲು ದೆಹಲಿ ಹೈಕೋರ್ಟ್ ಆದೇಶ

'Dr. Nimo Yadav' ಮತ್ತು 'Nehr Who' ಎಂಬ ಎರಡು ಪರೋಡಿ ಎಕ್ಸ್‌ ಖಾತೆಗಳನ್ನು ತಕ್ಷಣ ಮರು ಸ್ಥಾಪಿಸುವಂತೆ ದೆಹಲಿ ಹೈಕೋರ್ಟ್ ಸೋಮವಾರ (ಏ.6) ಎಕ್ಸ್ ಸಂಸ್ಥೆಗೆ (X Corp) ಆದೇಶಿಸಿದೆ. 'Dr....

ಬಂಗಾಳ| ಮತದಾರರ ಪಟ್ಟಿಯಿಂದ ಹೆಸರು ತೆಗೆದ ಬಳಿಕ ಸಾವಿಗೆ ಶರಣಾದ ಮುಸ್ಲಿಂ ವ್ಯಕ್ತಿ

ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಯ ನಂತರ ಪಶ್ಚಿಮ ಬಂಗಾಳದಲ್ಲಿ ಮತದಾರರ ಪಟ್ಟಿಯಿಂದ ತನ್ನ ಹೆಸರನ್ನು ತೆಗೆದುಹಾಕಿದ್ದರಿಂದ ಮನನೊಂದ ಮುಸ್ಲಿಂ ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಪೊಲೀಸರು ಸೋಮವಾರ ತಿಳಿಸಿದ್ದಾರೆ. ಮೃತನನ್ನು ಬಿರ್ಭುಮ್...

‘ಯೋಜನೆಯು ಕೇರಳಕ್ಕೆ ಜೀವನಾಡಿಯಾಗಲಿದೆ’: ವಯನಾಡ್ ಸುರಂಗ ಮಾರ್ಗ ವಿರುದ್ದದ ಅರ್ಜಿ ವಜಾಗೊಳಿಸಿದ ಸುಪ್ರೀಂ ಕೋರ್ಟ್

ಕೇರಳದ ಕೋಝಿಕ್ಕೋಡ್-ವಯನಾಡ್ ಸುರಂಗ ಮಾರ್ಗ ನಿರ್ಮಾಣಕ್ಕೆ ನೀಡಲಾದ ಪರಿಸರ ಅನುಮತಿ (ಇಸಿ) ಪ್ರಶ್ನಿಸಿ ಸಲ್ಲಿಸಲಾದ ಅರ್ಜಿಯನ್ನು ಸುಪ್ರೀಂ ಕೋರ್ಟ್ ಸೋಮವಾರ (ಏ.6) ವಜಾಗೊಳಿಸಿದೆ. ಸುರಂಗ ನಿರ್ಮಾಣದ ಸಮಯದಲ್ಲಿ ಪರಿಸರ ಅನುಮತಿಯ ಷರತ್ತುಗಳ ಉಲ್ಲಂಘನೆಯಾದರೆ, ಅರ್ಜಿದಾರರು...

651 ಕೋಟಿ ರೂ. ಮೌಲ್ಯದ ನಗದು, ಮದ್ಯ, ಮಾದಕ ವಸ್ತು ವಶಪಡಿಸಿಕೊಂಡ ಚುನಾವಣಾ ಆಯೋಗ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದಲ್ಲಿ ನಡೆಯುತ್ತಿರುವ ವಿಧಾನಸಭಾ ಚುನಾವಣೆಗೆ ಸಂಬಂಧಿಸಿದಂತೆ ಅಧಿಕಾರಿಗಳು 651.51 ಕೋಟಿ ರೂ.ಗೂ ಹೆಚ್ಚು ಮೌಲ್ಯದ ನಗದು, ಮದ್ಯ, ಮಾದಕ ವಸ್ತುಗಳು ಮತ್ತು ಇತರ ಉಚಿತ ವಸ್ತುಗಳನ್ನು...

ಪೇರಳೆ ಹಣ್ಣು ಕದ್ದಿದ್ದಾಳೆಂದು ಆರೋಪಿಸಿ ಬಾಲಕಿಯನ್ನು ಸರಪಳಿಯಿಂದ ಕಟ್ಟಿ ಥಳಿಸಿದ ಮಾಜಿ ಸೇನಾಧಿಕಾರಿ

ಪೇರಳೆ ಹಣ್ಣು ಕದ್ದಿದ್ದಾಳೆಂದು ಆರೋಪಿಸಿ ನಾಲ್ಕು ವರ್ಷದ ಬಾಲಕಿಯನ್ನು ನಿವೃತ್ತ ಸೇನಾಧಿಕಾರಿಯೊಬ್ಬರು ಸರಪಳಿಯಿಂದ ಕಟ್ಟಿಹಾಕಿ ಕ್ರೂರವಾಗಿ ಥಳಿಸಿರುವ ಆಘಾತಕಾರಿ ಘಟನೆ ಹಿಮಾಚಲ ಪ್ರದೇಶದ ಉನಾ ಜಿಲ್ಲೆಯ ಬೆಹಡಾಲ ಗ್ರಾಮದಲ್ಲಿ ನಡೆದಿದೆ. ಬಾಲಕಿಯು ನಿವೃತ್ತ ಸೇನಾಧಿಕಾರಿಯ ತೋಟದ...

ಆಂಧ್ರ ವಿಧಾನಸಭಾ ಸ್ಪೀಕರ್ ಅಯ್ಯಣ್ಣ ಪಾತ್ರುಡು ಅವರಿಂದ ದಲಿತ ವ್ಯಕ್ತಿಗೆ ಕಪಾಳಮೋಕ್ಷ: ವೈಎಸ್‌ಆರ್‌ಸಿಪಿ ವಾಗ್ದಾಳಿ

ಏಪ್ರಿಲ್ 3 ರ ಗುರುವಾರ ನರಸಿಪಟ್ಟಣದಲ್ಲಿ ದಲಿತ ವ್ಯಕ್ತಿಯೊಬ್ಬರಿಗೆ ಕಪಾಳಮೋಕ್ಷ ಮಾಡಿದ್ದಕ್ಕಾಗಿ ಆಂಧ್ರಪ್ರದೇಶ ವಿಧಾನಸಭಾ ಸ್ಪೀಕರ್ ಮತ್ತು ತೆಲುಗು ದೇಶಂ ಪಕ್ಷದ (ಟಿಡಿಪಿ) ನಾಯಕ ಅಯ್ಯಣ್ಣ ಪಾತ್ರುಡು ಅವರ ವಿರುದ್ಧ ವೈಎಸ್‌ಆರ್ ಕಾಂಗ್ರೆಸ್...

ಪ. ಬಂಗಾಳ | ಬಿಜೆಪಿ ಪ್ರಚಾರ ಸಾಮಗ್ರಿ ಸಜ್ಜುಗೊಳಿಸಿದ ವಿಡಿಯೋ ವೈರಲ್ : ಚುನಾವಣಾ ಕರ್ತವ್ಯದಲ್ಲಿದ್ದ ಅಧಿಕಾರಿ ಅಮಾನತು

ಬಿಜೆಪಿ ಪ್ರಚಾರ ಸಾಮಗ್ರಿಗಳನ್ನು ತಯಾರಿಸಲು ಸಹಾಯ ಮಾಡಿದ ಆರೋಪದ ಮೇಲೆ ಪಶ್ಚಿಮ ಬಂಗಾಳದ ಉತ್ತರ 24 ಪರಗಣ ಜಿಲ್ಲೆಯ ಪಾಣಿಹಟಿ ವಿಧಾನಸಭಾ ಕ್ಷೇತ್ರದ ಅಧಿಕಾರಿಯೊಬ್ಬರನ್ನು ಚುನಾವಣಾ ಆಯೋಗ ಅಮಾನತುಗೊಳಿಸಿದೆ ಎಂದು ದಿ ಇಂಡಿಯನ್...

ಮುಸ್ಲಿಮರ ವಿರುದ್ಧ ದ್ವೇಷ ಕಾರುವ ಅಸ್ಸಾಂ ಸಿಎಂ ಪತ್ನಿ ಬಳಿ 2 ಮುಸ್ಲಿಂ ದೇಶಗಳ ಪಾಸ್‌ಪೋರ್ಟ್ ಇದೆ : ಕಾಂಗ್ರೆಸ್ ಆರೋಪ

ಮತದಾನಕ್ಕೆ ಇನ್ನೇನು ಮೂರು ದಿನಗಳು ಬಾಕಿ ಇರುವಾಗ, ಅಸ್ಸಾಂನಲ್ಲಿ ಕಾಂಗ್ರೆಸ್‌-ಬಿಜೆಪಿ ನಡುವೆ ವೈಯಕ್ತಿಕ ವಿಚಾರಗಳ ಕುರಿತ ವಾಗ್ಯುದ್ಧ ತಾರಕಕ್ಕೇರಿದೆ. ಸಿಎಂ ಹಿಮಂತ ಬಿಸ್ವಾ ಶರ್ಮಾ ಮತ್ತು ಅವರ ಪತ್ನಿ ರಿನಿಕಿ ಭುಯಾನ್ ಶರ್ಮಾ...