Homeಮುಖಪುಟ'ಬಾಂಬೆ ಹೈಕೋರ್ಟ್‌ನಿಂದ ಸಂವಿಧಾನ ವಿರೋಧಿ ಟಿಪ್ಪಣಿ': ಸಿಪಿಐ(ಎಂ) ಪಾಲಿಟ್ ಬ್ಯೂರೋ ಖಂಡನೆ

‘ಬಾಂಬೆ ಹೈಕೋರ್ಟ್‌ನಿಂದ ಸಂವಿಧಾನ ವಿರೋಧಿ ಟಿಪ್ಪಣಿ’: ಸಿಪಿಐ(ಎಂ) ಪಾಲಿಟ್ ಬ್ಯೂರೋ ಖಂಡನೆ

- Advertisement -
- Advertisement -

ಗಾಝಾ ಪರ ಪ್ರತಿಭಟನೆಗೆ ಅವಕಾಶ ಕೋರಿ ಸಲ್ಲಿಸಿದ್ದ ಅರ್ಜಿಯನ್ನು ತಿರಸ್ಕರಿಸುವ ವೇಳೆ ಬಾಂಬೆ ಹೈಕೋರ್ಟ್ ಮಾಡಿರುವ ಟಿಪ್ಪಣಿಯನ್ನು ಸಂವಿಧಾನ ವಿರೋಧಿ ಎಂದಿರುವ ಕಮ್ಯೂನಿಸ್ಟ್ ಪಾರ್ಟಿ ಆಫ್ ಇಂಡಿಯಾ ಸಿಪಿಐ(ಎಂ) ಪಾಲಿಟ್ ಬ್ಯೂರೋ, ಖಂಡನೆ ವ್ಯಕ್ತಪಡಿಸಿದೆ.

ಈ ಸಂಬಂಧ ಶುಕ್ರವಾರ (ಜುಲೈ 25) ಪತ್ರಿಕಾ ಪ್ರಕಟಣೆ ಹೊರಡಿಸಿರುವ ಪಾಲಿಟ್ ಬ್ಯೂರೋ, “ನ್ಯಾಯ ಪೀಠದ ಟಿಪ್ಪಣಿಯು ಕೇಂದ್ರ ಸರ್ಕಾರಕ್ಕೆ ಅನುಗುಣವಾಗಿ ಸ್ಪಷ್ಟವಾದ ರಾಜಕೀಯ ಪಕ್ಷಪಾತವನ್ನು ತೋರಿಸುತ್ತದೆ” ಎಂದಿದೆ.

“ನ್ಯಾಯಾಲಯವು ನಮ್ಮ ಪಕ್ಷದ ದೇಶಭಕ್ತಿಯನ್ನು ಪ್ರಶ್ನಿಸುವ ಹಂತಕ್ಕೆ ಹೋಗಿದೆ. ವಿಪರ್ಯಾಸವೆಂದರೆ ರಾಜಕೀಯ ಪಕ್ಷದ ಹಕ್ಕುಗಳನ್ನು ಪ್ರತಿಪಾದಿಸುವ ಸಂವಿಧಾನದ ನಿಬಂಧನೆಗಳ ಬಗ್ಗೆಯಾಗಲಿ, ನಮ್ಮ ದೇಶದ ಇತಿಹಾಸ ಮತ್ತು ಪ್ಯಾಲೆಸ್ತೀನಿಯರೊಂದಿಗಿನ ನಮ್ಮ ಜನರ ಒಗ್ಗಟ್ಟು ಹಾಗೂ ತಾಯ್ನಾಡಿನ ಅವರ ಕಾನೂನು ಬದ್ದ ಹಕ್ಕಿನ ಬಗ್ಗೆಯಾಗಲಿ ನ್ಯಾಯಪೀಠಕ್ಕೆ ತಿಳಿದಿಲ್ಲದಂತಿದೆ” ಎಂದು ಹೇಳಿದೆ.

“ಪ್ಯಾಲೆಸ್ತೀನ್ ಅಥವಾ ಇಸ್ರೇಲ್ ಪರ ವಹಿಸುವುದು ಯಾವ ರೀತಿ ದೂಳೆಬ್ಬಿಸಬಹುದು (ಪರಿಣಾಮ ಬೀರಬಹುದು) ಎಂದು ನಿಮಗೆ ಗೊತ್ತಿಲ್ಲ. ನೀವು ಏಕೆ ಈ ರೀತಿ ಮಾಡುತ್ತೀರಿ? ನೀವು ಪ್ರತಿನಿಧಿಸುವ ಪಕ್ಷವನ್ನು ನೋಡಿದರೆ, ಇದು ನಮ್ಮ ದೇಶದ ವಿದೇಶಾಂಗ ವ್ಯವಹಾರಗಳ ಮೇಲೆ ಯಾವ ಪರಿಣಾಮ ಬೀರುತ್ತದೆ ಎಂದು ನಿಮಗೆ ಅರ್ಥವಾಗುತ್ತಿಲ್ಲ ಎಂಬುದು ಸ್ಪಷ್ಟವಾಗುತ್ತದೆ” ಎಂದು ಪೀಠ ಹೇಳಿದೆ.

ಮುಂದುವರೆದು “ನೀವು ಭಾರತದಲ್ಲಿ ನೋಂದಣಿಯಾದ ಒಂದು ಸಂಘಟನೆ. ನೀವು ತ್ಯಾಜ್ಯ ನಿರ್ವಹಣೆ, ಪರಿಸರ ಮಾಲಿನ್ಯ, ಚರಂಡಿ ವ್ಯವಸ್ಥೆ, ನೆರೆ ಮುಂತಾದ ವಿಷಯಗಳನ್ನು ಎತ್ತಿಕೊಳ್ಳಬಹುದಿತ್ತು. ನಾವು ಉದಾಹರಣೆಗಳನ್ನು ಕೊಡುತ್ತಿದ್ದೇವಷ್ಟೇ. ನೀವು ಅವುಗಳ ಬಗ್ಗೆ ಪ್ರತಿಭಟಿಸುತ್ತಿಲ್ಲ, ಬದಲಿಗೆ ನಮ್ಮ ದೇಶದಿಂದ ಸಾವಿರಾರು ಮೈಲಿಗಳಾಚೆ ಏನೋ ನಡೆಯುತ್ತಿದ್ದರೆ ಅದನ್ನು ಪ್ರತಿಭಟಿಸುತ್ತಿದ್ದೀರಿ” ಎಂಬುವುದಾಗಿ ನ್ಯಾಯಾಲಯ ಟಿಪ್ಪಣಿ ಮಾಡಿದೆ ಎಂದಿದೆ.

ನ್ಯಾಯಾಲಯದ ಈ ಟಿಪ್ಪಣಿ, ಕಳೆದ ಶತಮಾನದ 40ರ ದಶಕದಲ್ಲಿ ಮಹಾತ್ಮ ಗಾಂಧಿ, ರಾಷ್ಟ್ರೀಯ ಆಂದೋಲನ ಮತ್ತು ನಂತರ ಸ್ವತಂತ್ರ ಭಾರತದ ವಿದೇಶಾಂಗ ನೀತಿ ಪ್ಯಾಲೆಸ್ತೀನ್‍ ಜನತೆಯ ಸ್ವಾತಂತ್ರ್ಯ ಮತ್ತು ತಾಯ್ನಾಡಿನ ಹಕ್ಕನ್ನು ಬೆಂಬಲಿಸುವಲ್ಲಿ ಎಂದೂ ಹಿಂಜರಿದಿಲ್ಲ ಎಂಬ ಸಂಗತಿಯನ್ನು ನಿರ್ಲಕ್ಷಿಸುತ್ತವೆ ಎಂದು ಸಿಪಿಐ(ಎಂ) ಪಾಲಿಟ್ ಬ್ಯೂರೋ ಖಂಡಿಸಿದೆ.

ಅಲ್ಲದೆ ನ್ಯಾಯಪೀಠ, “ಇಸ್ರೇಲಿ ಆಕ್ರಮಣಕ್ಕೆ ಜಾಗತಿಕವಾಗಿ ವ್ಯಕ್ತವಾಗಿರುವ ನಿಸ್ಸಂದಿಗ್ಧ ಖಂಡನೆಯನ್ನು ಮತ್ತು ವಿಶ್ವಸಂಸ್ಥೆಯ ಸಂಘಟನೆಗಳ ಮತ್ತು ಅಂತಾರಾಷ್ಟ್ರೀಯ ನ್ಯಾಯಾಲಯದ ನಿಲುವುಗಳನ್ನು ಅರಿತಿಲ್ಲ ಎಂಬ ಸಂಗತಿಯನ್ನು ಕೂಡ ಬಯಲು ಮಾಡಿದೆ” ಎಂದಿದೆ.

ಇಂತಹ ಖಂಡನೀಯ ಮನೋಭಾವವನ್ನು ಸ್ಪಷ್ಟವಾಗಿ ತಿರಸ್ಕರಿಸುವಲ್ಲಿ ನಮ್ಮೊಂದಿಗೆ ಕೈ ಜೋಡಿಸಲು ದೇಶದ ಸ್ವಾತಂತ್ರ್ಯ ಮತ್ತು ಪ್ರಜಾಪ್ರಭುತ್ವವನ್ನು ಪ್ರೀತಿಸುವ ಜನರಲ್ಲಿ ನಾವು ಮನವಿ ಮಾಡುತ್ತೇವೆ ಎಂದು ಪಾಲಿಟ್ ಬ್ಯೂರೋ ಹೇಳಿದೆ.

ಗಾಝಾದಲ್ಲಿ ಇಸ್ರೇಲ್ ನಡೆಸುತ್ತಿರುವ ‘ಜನಾಂಗೀಯ ಹತ್ಯೆ’ಯನ್ನು ಪ್ರತಿಭಟಿಸಲು ಮುಂಬೈ ಪೊಲೀಸರು ಅವಕಾಶ ನಿರಾಕರಿಸಿದ್ದನ್ನು ಪ್ರಶ್ನಿಸಿ ಸಿಪಿಐ(ಎಂ) ಸಲ್ಲಿಸಿದ್ದ ಅರ್ಜಿಯನ್ನು ಬಾಂಬೆ ಹೈಕೋರ್ಟ್ ಶುಕ್ರವಾರ ತಿರಸ್ಕರಿಸಿದೆ. “ಮೊದಲು ನಮ್ಮ ದೇಶದ ವಿಷಯಗಳನ್ನು ಕೈಗೆತ್ತಿಕೊಳ್ಳಿ, ನಮ್ಮ ದೇಶದ ನಾಗರಿಕರಿಗೆ ದೇಶಭಕ್ತಿಯನ್ನು ತೋರಿಸಿ” ಎಂದಿದೆ.

“ಭಾರತದಲ್ಲಿ ಈಗಾಗಲೇ ಹಲವಾರು ಸಮಸ್ಯೆಗಳಿವೆ, ಅವುಗಳನ್ನು ಪರಿಹರಿಸಬೇಕಿದೆ. ಹೀಗಿರುವಾಗ ಅರ್ಜಿದಾರರು ಭಾರತದ ನಾಗರಿಕರ ಮೇಲೆ ಪರಿಣಾಮ ಬೀರದ ಸಮಸ್ಯೆಗಳನ್ನು ಕೈಗೆತ್ತಿಕೊಳ್ಳುವುದನ್ನು ತಪ್ಪಿಸಬೇಕು” ಎಂದು ನ್ಯಾಯಮೂರ್ತಿಗಳಾದ ರವೀಂದ್ರ ಘುಗೆ ಮತ್ತು ಗೌತಮ್ ಅಂಕಡ್ ಅವರ ವಿಭಾಗೀಯ ಪೀಠ ಹೇಳಿದೆ.

ಜೈಲಿನಿಂದ ತಪ್ಪಿಸಿಕೊಂಡಿದ್ದ ಅಪರಾಧಿ ಬಾವಿಯಲ್ಲಿ ಪತ್ತೆ: ನಾಲ್ವರು ಅಧಿಕಾರಿಗಳು ಅಮಾನತು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ರಾಜಭವನ’ಗಳನ್ನು ‘ಲೋಕಭವನ’ಗಳೆಂದು ಮರುನಾಮಕರಣ; ಇದು ಒಕ್ಕೂಟ ವ್ಯವಸ್ಥೆ ಮತ್ತು ಭಾಷಾ ಸಮಾನತೆಯ ಮೇಲಿನ ಆಕ್ರಮಣ: ಜಾಗೃತ ಕರ್ನಾಟಕ

ದೇಶಾದಾದ್ಯಂತ ಇರುವ ರಾಜಭವನಗಳ ಹೆಸರನ್ನು ಲೋಕಭವನ ಎಂದು ಮರುನಾಮಕರಣ ಮಾಡುವುದಾಗಿ ಕೇಂದ್ರ ಗೃಹಸಚಿವಾಲಯ ತೀರ್ಮಾನಿಸಿದೆ. ಕೇಂದ್ರದ  ಈ ನೀತಿಯನ್ನು ವಿರೋಧಿಸಿರುವ ಜಾಗೃತ ಕರ್ನಾಟಕ ದೇಶದ ಎಲ್ಲಾ ಹಿಂದಿಯೇತರ ರಾಜ್ಯಗಳ ಮುಖ್ಯಮಂತ್ರಿಗಳಿಗೆ ಪತ್ರ ಬರೆದಿದೆ....

ಯುಜಿಸಿ ಈಕ್ವಿಟಿ ನಿಯಮಗಳ ಮೇಲಿನ ಸುಪ್ರೀಂ ಕೋರ್ಟ್ ತಡೆಗೆ ವಿದ್ಯಾರ್ಥಿಗಳ ಪ್ರತಿಭಟನೆ, ರೋಹಿತ್ ಕಾಯ್ದೆಗೆ ಒತ್ತಾಯ

ಯುಜಿಸಿ ಇಕ್ವಿಟಿ ನಿಯಮಗಳಿಗೆ ಸುಪ್ರೀಂ ಕೋರ್ಟ್ ನೀಡಿದ ತಡೆಯಾಜ್ಞೆಯ ವಿರುದ್ಧ ಮತ್ತು ವಿಶ್ವವಿದ್ಯಾಲಯಗಳಲ್ಲಿ ಜಾತಿ ತಾರತಮ್ಯವನ್ನು ಎದುರಿಸಲು ಶಾಸನಬದ್ಧ ರೋಹಿತ್ ಕಾಯ್ದೆಯನ್ನು ಜಾರಿಗೆ ತರುವಂತೆ ಒತ್ತಾಯಿಸಿ ಅಖಿಲ ಭಾರತ ವಿದ್ಯಾರ್ಥಿ ಸಂಘ (ಎಐಎಸ್ಎ)...

ನರವಾಣೆ ಅಪ್ರಕಟಿತ ಪುಸ್ತಕ ಗದ್ದಲ | ಸತ್ಯ ಹೊರಬಂದರೆ ಮೋದಿ, ರಾಜನಾಥ್ ಸಿಂಗ್ ಮುಖವಾಡ ಬಯಲಾಗಲಿದೆ : ರಾಹುಲ್ ಗಾಂಧಿ

ಮಾಜಿ ಸೇನಾ ಮುಖ್ಯಸ್ಥ ಜನರಲ್ ಮನೋಜ್ ಮುಕುಂದ್ ನರವಾಣೆ ಅವರ ಅಪ್ರಕಟಿತ ಆತ್ಮಚರಿತ್ರೆ ಕುರಿತು ರಾಹುಲ್ ಗಾಂಧಿ ಸೋಮವಾರ (ಫೆ.2) ಲೋಕಸಭೆಯಲ್ಲಿ ಉಲ್ಲೇಖಿಸಿದ್ದು, ಈ ವೇಳೆ ಆಡಳಿತ ಮತ್ತು ಪ್ರತಿಪಕ್ಷಗಳ ನಡುವೆ ತೀವ್ರ...

ದಲಿತ ಕುಟುಂಬದ ಮದುವೆ ಮೆರವಣಿಗೆ ವೇಳೆ ಘರ್ಷಣೆ : ಮೂವರ ಬಂಧನ

ಗುಜರಾತ್‌ನ ಪಠಾಣ್ ತಾಲೂಕಿನ ಚದ್ರುಮಣ ಗ್ರಾಮದಲ್ಲಿ ದಲಿತ ಕುಟುಂಬದ ಮದುವೆ ಮೆರವಣಿಗೆ ವೇಳೆ ನಡೆದ ಗಲಾಟೆಗೆ ಸಂಬಂಧಿಸಿದಂತೆ ಮೂವರನ್ನು ಪೊಲೀಸರು ಬಂಧಿಸಿದ್ದು, ಇನ್ನೂ ಐವರ ಬಂಧನಕ್ಕೆ ಬಲೆ ಬೀಸಿದ್ದಾರೆ. ಆರೋಪಿಗಳ ವಿರುದ್ದ ಎಸ್‌ಸಿ/ಎಸ್‌ಟಿ...

ಲೋಕಸಭೆಯಲ್ಲಿ ಲಡಾಖ್ ಬಿಕ್ಕಟ್ಟಿನ ಬಗ್ಗೆ ಮಾಜಿ ಸೇನಾ ಮುಖ್ಯಸ್ಥರ ಅಪ್ರಕಟಿತ ಆತ್ಮಚರಿತ್ರೆ ಉಲ್ಲೇಖಿಸಿದ ರಾಹುಲ್ ಗಾಂಧಿ: ಸಭೆಯಲ್ಲಿ ತೀವ್ರ ಗದ್ದಲ

ಸೋಮವಾರ ಲೋಕಸಭೆಯಲ್ಲಿ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರು ಮಾಜಿ ಸೇನಾ ಮುಖ್ಯಸ್ಥ ಎಂಎಂ ನರವಾಣೆ ಅವರ ಆತ್ಮಚರಿತ್ರೆಯಿಂದ ಉಲ್ಲೇಖಿಸಲು ಪ್ರಯತ್ನಿಸಿದ ನಂತರ ಗದ್ದಲ ಭುಗಿಲೆದ್ದಿತು. ರಾಹುಲ್ ಮಾತನಾಡಲು ಪ್ರಾರಂಭಿಸುತ್ತಿದ್ದಂತೆ, ರಕ್ಷಣಾ ಸಚಿವ...

ಪಂಜಾಬ್ ನಿರೀಕ್ಷೆಗಳನ್ನು ಪೂರೈಸುವಲ್ಲಿ ಕೇಂದ್ರ ಬಜೆಟ್ ಮತ್ತೊಮ್ಮೆ ವಿಫಲವಾಗಿದೆ: ಸಿಎಂ ಭಗವಂತ್ ಮಾನ್

ಕೇಂದ್ರ ಬಜೆಟ್ ಮತ್ತೊಮ್ಮೆ ಪಂಜಾಬ್‌ನ ನಿರೀಕ್ಷೆಗಳನ್ನು ಪೂರೈಸುವಲ್ಲಿ ವಿಫಲವಾಗಿದೆ ಎಂದು ಪಂಜಾಬ್ ಮುಖ್ಯಮಂತ್ರಿ ಭಗವಂತ್ ಮಾನ್ ಮತ್ತು ಆಡಳಿತಾರೂಢ ಆಮ್ ಆದ್ಮಿ ಪಕ್ಷದ (ಎಎಪಿ) ಸರ್ಕಾರದ ಸಚಿವರು ಭಾನುವಾರ ಅಭಿಪ್ರಾಯಪಟ್ಟಿದ್ದಾರೆ. ಬಜೆಟ್ ರೈತರಿಗೆ ಯಾವುದೇ...

ರಾಜ್ಯಪಾಲರು ಪೂರ್ಣ ಭಾಷಣ ಓದಿಲ್ಲ, ‘ಜೈ ಸಂವಿಧಾನ’ ಎನ್ನುವುದನ್ನು ಉಲ್ಲೇಖಿಸದೆ ಹೋದರು : ಸಿಎಂ ಸಿದ್ದರಾಮಯ್ಯ

ರಾಜ್ಯಪಾಲರು ಪೂರ್ತಿ ಭಾಷಣ ಓದದೆ ತರಾತುರಿಯಲ್ಲಿ ಹೋದರು. ಭಾಷಣದಲ್ಲಿದ್ದ "ಜೈ ಸಂವಿಧಾನ" ಎನ್ನುವುದನ್ನೂ ಉಲ್ಲೇಖಿಸದೆ ತೆರಳಿದರು. ರಾಷ್ಟ್ರಗೀತೆ ಮುಗಿಯುವವರೆಗೂ ಕಾಯದೆ ಹೋಗಿಬಿಟ್ಟರು. ಇದು ಸರಿಯಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ಬಿಜೆಪಿ ಶಾಸಕ...

ಉತ್ತರಾಖಂಡ| ಹಿಂದುತ್ವ ಗುಂಪಿನ ಕಿರುಕುಳದಿಂದ ಮುಸ್ಲಿಂ ಅಂಗಡಿ ಮಾಲೀಕನನ್ನು ರಕ್ಷಿಸಿದ ದೀಪಕ್ ಕುಮಾರ್

ಸ್ಥಳೀಯ ಮುಸ್ಲಿಂ ಅಂಗಡಿ ಮಾಲೀಕನ ವಿರುದ್ಧ ಬಜರಂಗದಳ ಸದಸ್ಯರು ನೀಡುತ್ತಿದ್ದ ಕಿರುಕುಳವನ್ನು ಜಿಮ್ ಮಾಲೀಕ ದೀಪಕ್ ಕುಮಾರ್ ಸ್ಥಳದಲ್ಲೇ ಎದುರಿಸಿದ್ದಾರೆ. ಆಕ್ರೋಶಿತರಾದ ಹಿಂದುತ್ವ ಗುಂಪಿನ ಸದಸ್ಯರು ದೀಪಕ್ ವಿರುದ್ಧವೇ ಪ್ರತಿಭಟನೆ ನಡೆಸಿದ್ದು, ಹಲವಾರ...

ಎಸ್‌ಐಆರ್ ವಿರುದ್ಧ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ರಾಜ್ಯದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ನಡೆಸುವ ಭಾರತೀಯ ಚುನಾವಣಾ ಆಯೋಗದ (ಇಸಿಐ) ನಿರ್ಧಾರವನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್‌ನಲ್ಲಿ ಸಾರ್ವಜನಿಕ ಹಿತಾಸಕ್ತಿ...

ದಕ್ಷಿಣ ಪಿನಾಕಿನಿ ಜಲವಿವಾದ : ನ್ಯಾಯಮಂಡಳಿ ಸ್ಥಾಪಿಸಲು ಸುಪ್ರೀಂ ಕೋರ್ಟ್ ಆದೇಶ

ದಕ್ಷಿಣ ಪಿನಾಕಿನಿ (ಪೆನ್ನೈಯಾರ್) ನದಿ ನೀರಿನ ಹಂಚಿಕೆಗೆ ಸಂಬಂಧಿಸಿದಂತೆ ತಮಿಳುನಾಡು ಮತ್ತು ಕರ್ನಾಟಕ ರಾಜ್ಯಗಳ ನಡುವೆ ಬಾಕಿ ಇರುವ ವಿವಾದಗಳನ್ನು ಪರಿಹರಿಸಲು ನ್ಯಾಯಮಂಡಳಿ ಸ್ಥಾಪಿಸುವಂತೆ ಸುಪ್ರೀಂ ಕೋರ್ಟ್ ಸೋಮವಾರ (ಫೆ.2) ನಿರ್ದೇಶನ ನೀಡಿದೆ. ಕೇಂದ್ರ...