Homeಮುಖಪುಟ'ಬಾಂಬೆ ಹೈಕೋರ್ಟ್‌ನಿಂದ ಸಂವಿಧಾನ ವಿರೋಧಿ ಟಿಪ್ಪಣಿ': ಸಿಪಿಐ(ಎಂ) ಪಾಲಿಟ್ ಬ್ಯೂರೋ ಖಂಡನೆ

‘ಬಾಂಬೆ ಹೈಕೋರ್ಟ್‌ನಿಂದ ಸಂವಿಧಾನ ವಿರೋಧಿ ಟಿಪ್ಪಣಿ’: ಸಿಪಿಐ(ಎಂ) ಪಾಲಿಟ್ ಬ್ಯೂರೋ ಖಂಡನೆ

- Advertisement -
- Advertisement -

ಗಾಝಾ ಪರ ಪ್ರತಿಭಟನೆಗೆ ಅವಕಾಶ ಕೋರಿ ಸಲ್ಲಿಸಿದ್ದ ಅರ್ಜಿಯನ್ನು ತಿರಸ್ಕರಿಸುವ ವೇಳೆ ಬಾಂಬೆ ಹೈಕೋರ್ಟ್ ಮಾಡಿರುವ ಟಿಪ್ಪಣಿಯನ್ನು ಸಂವಿಧಾನ ವಿರೋಧಿ ಎಂದಿರುವ ಕಮ್ಯೂನಿಸ್ಟ್ ಪಾರ್ಟಿ ಆಫ್ ಇಂಡಿಯಾ ಸಿಪಿಐ(ಎಂ) ಪಾಲಿಟ್ ಬ್ಯೂರೋ, ಖಂಡನೆ ವ್ಯಕ್ತಪಡಿಸಿದೆ.

ಈ ಸಂಬಂಧ ಶುಕ್ರವಾರ (ಜುಲೈ 25) ಪತ್ರಿಕಾ ಪ್ರಕಟಣೆ ಹೊರಡಿಸಿರುವ ಪಾಲಿಟ್ ಬ್ಯೂರೋ, “ನ್ಯಾಯ ಪೀಠದ ಟಿಪ್ಪಣಿಯು ಕೇಂದ್ರ ಸರ್ಕಾರಕ್ಕೆ ಅನುಗುಣವಾಗಿ ಸ್ಪಷ್ಟವಾದ ರಾಜಕೀಯ ಪಕ್ಷಪಾತವನ್ನು ತೋರಿಸುತ್ತದೆ” ಎಂದಿದೆ.

“ನ್ಯಾಯಾಲಯವು ನಮ್ಮ ಪಕ್ಷದ ದೇಶಭಕ್ತಿಯನ್ನು ಪ್ರಶ್ನಿಸುವ ಹಂತಕ್ಕೆ ಹೋಗಿದೆ. ವಿಪರ್ಯಾಸವೆಂದರೆ ರಾಜಕೀಯ ಪಕ್ಷದ ಹಕ್ಕುಗಳನ್ನು ಪ್ರತಿಪಾದಿಸುವ ಸಂವಿಧಾನದ ನಿಬಂಧನೆಗಳ ಬಗ್ಗೆಯಾಗಲಿ, ನಮ್ಮ ದೇಶದ ಇತಿಹಾಸ ಮತ್ತು ಪ್ಯಾಲೆಸ್ತೀನಿಯರೊಂದಿಗಿನ ನಮ್ಮ ಜನರ ಒಗ್ಗಟ್ಟು ಹಾಗೂ ತಾಯ್ನಾಡಿನ ಅವರ ಕಾನೂನು ಬದ್ದ ಹಕ್ಕಿನ ಬಗ್ಗೆಯಾಗಲಿ ನ್ಯಾಯಪೀಠಕ್ಕೆ ತಿಳಿದಿಲ್ಲದಂತಿದೆ” ಎಂದು ಹೇಳಿದೆ.

“ಪ್ಯಾಲೆಸ್ತೀನ್ ಅಥವಾ ಇಸ್ರೇಲ್ ಪರ ವಹಿಸುವುದು ಯಾವ ರೀತಿ ದೂಳೆಬ್ಬಿಸಬಹುದು (ಪರಿಣಾಮ ಬೀರಬಹುದು) ಎಂದು ನಿಮಗೆ ಗೊತ್ತಿಲ್ಲ. ನೀವು ಏಕೆ ಈ ರೀತಿ ಮಾಡುತ್ತೀರಿ? ನೀವು ಪ್ರತಿನಿಧಿಸುವ ಪಕ್ಷವನ್ನು ನೋಡಿದರೆ, ಇದು ನಮ್ಮ ದೇಶದ ವಿದೇಶಾಂಗ ವ್ಯವಹಾರಗಳ ಮೇಲೆ ಯಾವ ಪರಿಣಾಮ ಬೀರುತ್ತದೆ ಎಂದು ನಿಮಗೆ ಅರ್ಥವಾಗುತ್ತಿಲ್ಲ ಎಂಬುದು ಸ್ಪಷ್ಟವಾಗುತ್ತದೆ” ಎಂದು ಪೀಠ ಹೇಳಿದೆ.

ಮುಂದುವರೆದು “ನೀವು ಭಾರತದಲ್ಲಿ ನೋಂದಣಿಯಾದ ಒಂದು ಸಂಘಟನೆ. ನೀವು ತ್ಯಾಜ್ಯ ನಿರ್ವಹಣೆ, ಪರಿಸರ ಮಾಲಿನ್ಯ, ಚರಂಡಿ ವ್ಯವಸ್ಥೆ, ನೆರೆ ಮುಂತಾದ ವಿಷಯಗಳನ್ನು ಎತ್ತಿಕೊಳ್ಳಬಹುದಿತ್ತು. ನಾವು ಉದಾಹರಣೆಗಳನ್ನು ಕೊಡುತ್ತಿದ್ದೇವಷ್ಟೇ. ನೀವು ಅವುಗಳ ಬಗ್ಗೆ ಪ್ರತಿಭಟಿಸುತ್ತಿಲ್ಲ, ಬದಲಿಗೆ ನಮ್ಮ ದೇಶದಿಂದ ಸಾವಿರಾರು ಮೈಲಿಗಳಾಚೆ ಏನೋ ನಡೆಯುತ್ತಿದ್ದರೆ ಅದನ್ನು ಪ್ರತಿಭಟಿಸುತ್ತಿದ್ದೀರಿ” ಎಂಬುವುದಾಗಿ ನ್ಯಾಯಾಲಯ ಟಿಪ್ಪಣಿ ಮಾಡಿದೆ ಎಂದಿದೆ.

ನ್ಯಾಯಾಲಯದ ಈ ಟಿಪ್ಪಣಿ, ಕಳೆದ ಶತಮಾನದ 40ರ ದಶಕದಲ್ಲಿ ಮಹಾತ್ಮ ಗಾಂಧಿ, ರಾಷ್ಟ್ರೀಯ ಆಂದೋಲನ ಮತ್ತು ನಂತರ ಸ್ವತಂತ್ರ ಭಾರತದ ವಿದೇಶಾಂಗ ನೀತಿ ಪ್ಯಾಲೆಸ್ತೀನ್‍ ಜನತೆಯ ಸ್ವಾತಂತ್ರ್ಯ ಮತ್ತು ತಾಯ್ನಾಡಿನ ಹಕ್ಕನ್ನು ಬೆಂಬಲಿಸುವಲ್ಲಿ ಎಂದೂ ಹಿಂಜರಿದಿಲ್ಲ ಎಂಬ ಸಂಗತಿಯನ್ನು ನಿರ್ಲಕ್ಷಿಸುತ್ತವೆ ಎಂದು ಸಿಪಿಐ(ಎಂ) ಪಾಲಿಟ್ ಬ್ಯೂರೋ ಖಂಡಿಸಿದೆ.

ಅಲ್ಲದೆ ನ್ಯಾಯಪೀಠ, “ಇಸ್ರೇಲಿ ಆಕ್ರಮಣಕ್ಕೆ ಜಾಗತಿಕವಾಗಿ ವ್ಯಕ್ತವಾಗಿರುವ ನಿಸ್ಸಂದಿಗ್ಧ ಖಂಡನೆಯನ್ನು ಮತ್ತು ವಿಶ್ವಸಂಸ್ಥೆಯ ಸಂಘಟನೆಗಳ ಮತ್ತು ಅಂತಾರಾಷ್ಟ್ರೀಯ ನ್ಯಾಯಾಲಯದ ನಿಲುವುಗಳನ್ನು ಅರಿತಿಲ್ಲ ಎಂಬ ಸಂಗತಿಯನ್ನು ಕೂಡ ಬಯಲು ಮಾಡಿದೆ” ಎಂದಿದೆ.

ಇಂತಹ ಖಂಡನೀಯ ಮನೋಭಾವವನ್ನು ಸ್ಪಷ್ಟವಾಗಿ ತಿರಸ್ಕರಿಸುವಲ್ಲಿ ನಮ್ಮೊಂದಿಗೆ ಕೈ ಜೋಡಿಸಲು ದೇಶದ ಸ್ವಾತಂತ್ರ್ಯ ಮತ್ತು ಪ್ರಜಾಪ್ರಭುತ್ವವನ್ನು ಪ್ರೀತಿಸುವ ಜನರಲ್ಲಿ ನಾವು ಮನವಿ ಮಾಡುತ್ತೇವೆ ಎಂದು ಪಾಲಿಟ್ ಬ್ಯೂರೋ ಹೇಳಿದೆ.

ಗಾಝಾದಲ್ಲಿ ಇಸ್ರೇಲ್ ನಡೆಸುತ್ತಿರುವ ‘ಜನಾಂಗೀಯ ಹತ್ಯೆ’ಯನ್ನು ಪ್ರತಿಭಟಿಸಲು ಮುಂಬೈ ಪೊಲೀಸರು ಅವಕಾಶ ನಿರಾಕರಿಸಿದ್ದನ್ನು ಪ್ರಶ್ನಿಸಿ ಸಿಪಿಐ(ಎಂ) ಸಲ್ಲಿಸಿದ್ದ ಅರ್ಜಿಯನ್ನು ಬಾಂಬೆ ಹೈಕೋರ್ಟ್ ಶುಕ್ರವಾರ ತಿರಸ್ಕರಿಸಿದೆ. “ಮೊದಲು ನಮ್ಮ ದೇಶದ ವಿಷಯಗಳನ್ನು ಕೈಗೆತ್ತಿಕೊಳ್ಳಿ, ನಮ್ಮ ದೇಶದ ನಾಗರಿಕರಿಗೆ ದೇಶಭಕ್ತಿಯನ್ನು ತೋರಿಸಿ” ಎಂದಿದೆ.

“ಭಾರತದಲ್ಲಿ ಈಗಾಗಲೇ ಹಲವಾರು ಸಮಸ್ಯೆಗಳಿವೆ, ಅವುಗಳನ್ನು ಪರಿಹರಿಸಬೇಕಿದೆ. ಹೀಗಿರುವಾಗ ಅರ್ಜಿದಾರರು ಭಾರತದ ನಾಗರಿಕರ ಮೇಲೆ ಪರಿಣಾಮ ಬೀರದ ಸಮಸ್ಯೆಗಳನ್ನು ಕೈಗೆತ್ತಿಕೊಳ್ಳುವುದನ್ನು ತಪ್ಪಿಸಬೇಕು” ಎಂದು ನ್ಯಾಯಮೂರ್ತಿಗಳಾದ ರವೀಂದ್ರ ಘುಗೆ ಮತ್ತು ಗೌತಮ್ ಅಂಕಡ್ ಅವರ ವಿಭಾಗೀಯ ಪೀಠ ಹೇಳಿದೆ.

ಜೈಲಿನಿಂದ ತಪ್ಪಿಸಿಕೊಂಡಿದ್ದ ಅಪರಾಧಿ ಬಾವಿಯಲ್ಲಿ ಪತ್ತೆ: ನಾಲ್ವರು ಅಧಿಕಾರಿಗಳು ಅಮಾನತು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ: ಆರು ಜನ ಹಿರಿಯರು ಸೇರಿದಂತೆ 41 ಜನ ನಕ್ಸಲ್ ಕಾರ್ಯಕರ್ತರು ಪೊಲೀಸರಿಗೆ ಶರಣು

ದೇಶದಲ್ಲಿ ಮಾವೋವಾದಿ ವಿರೋಧಿ ಕಾರ್ಯಾಚರಣೆಗಳಲ್ಲಿ ಪ್ರಮುಖ ಬೆಳವಣಿಗೆಯಲ್ಲಿ, ಆರು ಜನ ಹಿರಿಯರು ಸೇರಿದಂತೆ 41 ಜನ ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ (ಮಾವೋವಾದಿ) ಕಾರ್ಯಕರ್ತರು ತೆಲಂಗಾಣ ಪೊಲೀಸರ ಮುಂದೆ ಇಂದು ಶರಣಾಗಿದ್ದಾರೆ. ಶರಣಾಗತಿ ಪ್ರಕ್ರಿಯೆಯ...

‘ವೀಸಾ ಅವಧಿ ಮುಗಿಯುವ ಮೊದಲು ಪಾಕ್ ಮಹಿಳೆಯ ಪೌರತ್ವ ಅರ್ಜಿ ಪರಿಗಣಿಸಿ..’; ಕೇಂದ್ರ ಸರ್ಕಾರಕ್ಕೆ ಕರ್ನಾಟಕ ಹೈಕೋರ್ಟ್‌ ಸೂಚನೆ

ಭಾರತದಲ್ಲಿ ವಾಸಿಸುತ್ತಿರುವ ಪಾಕಿಸ್ತಾನಿ ಪ್ರಜೆಯ ಹೊಸ ಪೌರತ್ವ ಅರ್ಜಿಯನ್ನು ಸಕ್ರಿಯವಾಗಿ ಪರಿಗಣಿಸುವ ಜೊತೆಗೆ ಅವರ ದೀರ್ಘಾವಧಿಯ ವೀಸಾ ಅವಧಿ ಮುಗಿಯುವ ಮೊದಲೇ ಪ್ರಕ್ರಿಯೆಯನ್ನು ಪೂರ್ಣಗೊಳಿಸಬೇಕು ಎಂದು, ವಿದೇಶಾಂಗ ಸಚಿವಾಲಯ, ಗೃಹ ಸಚಿವಾಲಯ ಮತ್ತು...

ಎಚ್‌ಐವಿ ಪಾಸಿಟಿವ್ ಎಂದು ವಜಾಗೊಳಿಸಲಾದ ಬಿಎಸ್‌ಎಫ್ ಯೋಧನನ್ನು ಮತ್ತೆ ನೇಮಿಸುವಂತೆ ಹೈಕೋರ್ಟ್ ಆದೇಶ

ಜುಲೈ 2017 ರಲ್ಲಿ ಎಚ್‌ಐವಿ ಪಾಸಿಟಿವ್ ಎಂಬ ಕಾರಣಕ್ಕೆ ಸೇವೆಯಿಂದ ವಜಾಗೊಳಿಸಲಾದ ಗಡಿ ಭದ್ರತಾ ಪಡೆಯ ಕಾನ್‌ಸ್ಟೆಬಲ್‌ ಒಬ್ಬರನ್ನು ಮರುನೇಮಕ ಮಾಡುವಂತೆ ದೆಹಲಿ ಹೈಕೋರ್ಟ್ ಆದೇಶಿಸಿದೆ.  ನ್ಯಾಯಮೂರ್ತಿಗಳಾದ ಸಿ ಹರಿಶಂಕರ್ ಮತ್ತು ಓಂ ಪ್ರಕಾಶ್...

ವೈದ್ಯೆ ಬುರ್ಖಾ ಎಳೆದ ನಿತೀಶ್‌ಕುಮಾರ್: ಶ್ರೀನಗರದಲ್ಲಿ ದೂರು ದಾಖಲಿಸಿದ ಇಲ್ತಿಜಾ ಮುಫ್ತಿ

ಪಾಟ್ನಾದಲ್ಲಿ ನಡೆದ ಸರ್ಕಾರಿ ಕಾರ್ಯಕ್ರಮದ ಸಂದರ್ಭದಲ್ಲಿ ಮುಸ್ಲಿಂ ಮಹಿಳಾ ವೈದ್ಯರ ನಿಖಾಬ್ (ಬುರ್ಖಾ) ಎಳೆಯುತ್ತಿರುವುದನ್ನು ತೋರಿಸುವ ವೈರಲ್ ವೀಡಿಯೊದ ಕುರಿತು ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ವಿರುದ್ಧ ಎಫ್ಐಆರ್ ದಾಖಲಿಸಲು ಪೀಪಲ್ಸ್ ಡೆಮಾಕ್ರಟಿಕ್...

ಪ್ರಶ್ನೆಗಾಗಿ ಕಾಸು ಪ್ರಕರಣ: ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್‌ ಸಲ್ಲಿಸಲು ಅನುಮತಿಸಿದ್ದ ಲೋಕಪಾಲ್ ಆದೇಶ ರದ್ದು ಪಡಿಸಿದ ದೆಹಲಿ ಹೈಕೋರ್ಟ್

‘ಪ್ರಶ್ನೆಗಾಗಿ ಕಾಸು’ ಪ್ರಕರಣದಲ್ಲಿ ತೃಣಮೂಲ ಕಾಂಗ್ರೆಸ್(ಟಿಎಂಸಿ) ಸಂಸದೆ ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್ ಸಲ್ಲಿಸಲು ಸಿಬಿಐಗೆ ಅನುಮತಿ ನೀಡಿದ್ದ ಲೋಕಪಾಲ್ ಆದೇಶವನ್ನು ದೆಹಲಿ ಹೈಕೋರ್ಟ್ ಶುಕ್ರವಾರ ರದ್ದುಗೊಳಿಸಿದೆ. ಇದರಿಂದಾಗಿ ಮೊಯಿತ್ರಾ ಅವರಿಗೆ ಈ...

ಜಮ್ಮು-ಕಾಶ್ಮೀರ: ಪತ್ರಕರ್ತನ ಮೊಬೈಲ್ ಫೋನ್ ವಶಪಡಿಸಿಕೊಂಡ ಪೊಲೀಸರು

ಕಿಶ್ತ್ವಾರ್‌ನಲ್ಲಿನ ವಿದ್ಯುತ್ ಯೋಜನೆಯಲ್ಲಿ ಸ್ವಜನಪಕ್ಷಪಾತ ಮತ್ತು ಭ್ರಷ್ಟಾಚಾರದ ಆರೋಪಗಳ ಕುರಿತು ವರದಿ ಮಾಡುತ್ತಿದ್ದಾಗ, ದಿ ವೈರ್ ಸುದ್ದಿ ಪೋರ್ಟಲ್‌ನ ಪತ್ರಕರ್ತ ಜೆಹಾಂಗೀರ್ ಅಲಿ ಅವರ ಮೊಬೈಲ್ ಫೋನ್ ಅನ್ನು ಬುಧವಾರ (ಡಿಸೆಂಬರ್ 17)...

ಕೇರಳದಲ್ಲಿ ಗುಂಪುಹತ್ಯೆ: ಛತ್ತೀಸ್‌ಗಢ ವಲಸೆ ಕಾರ್ಮಿಕನನ್ನು ‘ಕಳ್ಳ’ ಎಂದು ಥಳಿಸಿ ಕೊಂದ ಗುಂಪು 

ಕೇರಳದ ಪಾಲಕ್ಕಾಡ್ ಜಿಲ್ಲೆಯಲ್ಲಿ ಗುರುವಾರ ಛತ್ತೀಸ್‌ಗಢದಿಂದ ಬಂದ ವಲಸೆ ಕಾರ್ಮಿಕನೊಬ್ಬನನ್ನು ಕಳ್ಳನೆಂದು ಶಂಕಿಸಿ ಗುಂಪೊಂದು ಥಳಿಸಿ ಕೊಂದಿದೆ. ಕೊಲೆಯಾದ ವ್ಯಕ್ತಿಯನ್ನು ರಾಮನಾರಾಯಣ್ ಭಯಾರ್ (31) ಎಂದು ಗುರುತಿಸಲಾಗಿದ್ದು, ಕಳೆದ ಒಂದು ತಿಂಗಳಿನಿಂದ ಪಾಲಕ್ಕಾಡ್‌ನ ಕಾಂಜಿಕೋಡ್‌ನಲ್ಲಿರುವ...

ನೋಯ್ಡಾ ಪೊಲೀಸ್ ಠಾಣೆಯೊಳಗೆ ವಕೀಲೆ ಮೇಲೆ ಲೈಂಗಿಕ ದೌರ್ಜನ್ಯ ಆರೋಪ; ಸಿಸಿಟಿವಿ ದೃಶ್ಯಾವಳಿ ಕೇಳಿದ ಸುಪ್ರೀಂ ಕೋರ್ಟ್

ಮಹಿಳಾ ವಕೀಲೆಯೊಬ್ಬರನ್ನು 14 ಗಂಟೆಗಳ ಕಾಲ ಅಕ್ರಮವಾಗಿ ಬಂಧಿಸಿ ಪೊಲೀಸರು ಲೈಂಗಿಕ ದೌರ್ಜನ್ಯ esgi, ಕಸ್ಟಡಿಯಲ್ಲಿ ಚಿತ್ರಹಿಂಸೆ ನೀಡಿದ ಆರೋಪದ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಸುಪ್ರೀಂ ಕೋಡರ್ಟ್, ಮುಚ್ಚಿದ ಕವರ್‌ನಲ್ಲಿ ಸಿಸಿಟಿವಿ ದೃಶ್ಯಾವಳಿಗಳನ್ನು...

ಹಾಲು ಉತ್ಪಾದಕರಿಗೆ 1 ಲೀಟರ್ ಹಾಲಿನ ಪ್ರೋತ್ಸಾಹಧನ 5 ರಿಂದ 7 ರೂಗೆ ಏರಿಕೆ: ಅಧಿವೇಶನದಲ್ಲಿ ಸಿದ್ದರಾಮಯ್ಯ ಘೋಷಣೆ

ರೈತರ ಹಿತದೃಷ್ಠಿಯಿಂದ 1 ಲೀಟರ್ ಹಾಲಿಗೆ ಪ್ರೋತ್ಸಾಹಧನವನ್ನು 7 ರೂಪಾಯಿಗೆ ಏರಿಕೆ ಮಾಡುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ. ಡಿಸೆಂಬರ್ 19ರಂದು ಬೆಳಗಾವಿ ಅಧಿವೇಶನದ ಕೊನೆಯ ದಿನ ಮಾತನಾಡಿದ ಅವರು, ರೈತರಿಗೆ ಹಸುಗಳನ್ನು ಸಾಕಿ...

ಬಾಂಗ್ಲಾ ದಂಗೆ: ಮಾಧ್ಯಮ ಸಂಸ್ಥೆಗಳಿಗೆ ಬೆಂಕಿ ಹಚ್ಚಿದ ಪ್ರತಿಭಟನಾಕಾರರು, ಉರಿಯುತ್ತಿದ್ದ ಕಚೇರಿಗಳಿಂದ 25 ಕ್ಕೂ ಹೆಚ್ಚು ಪತ್ರಕರ್ತರ ರಕ್ಷಣೆ

ಜುಲೈ ದಂಗೆಯ ನಾಯಕ ಷರೀಫ್ ಉಸ್ಮಾನ್ ಹಾದಿ ಅವರ ನಿಧನದ ಸುದ್ದಿ ಕೇಳಿದ ಬೆನ್ನಲ್ಲೇ ಶುಕ್ರವಾರ ಬಾಂಗ್ಲಾದೇಶದ ವಿವಿಧ ಭಾಗಗಳಲ್ಲಿ ತೀವ್ರ ಪ್ರತಿಭಟನೆಗಳು ಆರಂಭವಾಗಿದ್ದು ಹಿಂಸಾಚಾರಕ್ಕೆ ನಾಂದಿ ಹಾಡಿವೆ. ಅನೇಕ ಪ್ರತಿಭಟನಾಕಾರರು ಬೀದಿಗಿಳಿದಿದ್ದು,...