Homeಮುಖಪುಟ'ಬಾಂಬೆ ಹೈಕೋರ್ಟ್‌ನಿಂದ ಸಂವಿಧಾನ ವಿರೋಧಿ ಟಿಪ್ಪಣಿ': ಸಿಪಿಐ(ಎಂ) ಪಾಲಿಟ್ ಬ್ಯೂರೋ ಖಂಡನೆ

‘ಬಾಂಬೆ ಹೈಕೋರ್ಟ್‌ನಿಂದ ಸಂವಿಧಾನ ವಿರೋಧಿ ಟಿಪ್ಪಣಿ’: ಸಿಪಿಐ(ಎಂ) ಪಾಲಿಟ್ ಬ್ಯೂರೋ ಖಂಡನೆ

- Advertisement -
- Advertisement -

ಗಾಝಾ ಪರ ಪ್ರತಿಭಟನೆಗೆ ಅವಕಾಶ ಕೋರಿ ಸಲ್ಲಿಸಿದ್ದ ಅರ್ಜಿಯನ್ನು ತಿರಸ್ಕರಿಸುವ ವೇಳೆ ಬಾಂಬೆ ಹೈಕೋರ್ಟ್ ಮಾಡಿರುವ ಟಿಪ್ಪಣಿಯನ್ನು ಸಂವಿಧಾನ ವಿರೋಧಿ ಎಂದಿರುವ ಕಮ್ಯೂನಿಸ್ಟ್ ಪಾರ್ಟಿ ಆಫ್ ಇಂಡಿಯಾ ಸಿಪಿಐ(ಎಂ) ಪಾಲಿಟ್ ಬ್ಯೂರೋ, ಖಂಡನೆ ವ್ಯಕ್ತಪಡಿಸಿದೆ.

ಈ ಸಂಬಂಧ ಶುಕ್ರವಾರ (ಜುಲೈ 25) ಪತ್ರಿಕಾ ಪ್ರಕಟಣೆ ಹೊರಡಿಸಿರುವ ಪಾಲಿಟ್ ಬ್ಯೂರೋ, “ನ್ಯಾಯ ಪೀಠದ ಟಿಪ್ಪಣಿಯು ಕೇಂದ್ರ ಸರ್ಕಾರಕ್ಕೆ ಅನುಗುಣವಾಗಿ ಸ್ಪಷ್ಟವಾದ ರಾಜಕೀಯ ಪಕ್ಷಪಾತವನ್ನು ತೋರಿಸುತ್ತದೆ” ಎಂದಿದೆ.

“ನ್ಯಾಯಾಲಯವು ನಮ್ಮ ಪಕ್ಷದ ದೇಶಭಕ್ತಿಯನ್ನು ಪ್ರಶ್ನಿಸುವ ಹಂತಕ್ಕೆ ಹೋಗಿದೆ. ವಿಪರ್ಯಾಸವೆಂದರೆ ರಾಜಕೀಯ ಪಕ್ಷದ ಹಕ್ಕುಗಳನ್ನು ಪ್ರತಿಪಾದಿಸುವ ಸಂವಿಧಾನದ ನಿಬಂಧನೆಗಳ ಬಗ್ಗೆಯಾಗಲಿ, ನಮ್ಮ ದೇಶದ ಇತಿಹಾಸ ಮತ್ತು ಪ್ಯಾಲೆಸ್ತೀನಿಯರೊಂದಿಗಿನ ನಮ್ಮ ಜನರ ಒಗ್ಗಟ್ಟು ಹಾಗೂ ತಾಯ್ನಾಡಿನ ಅವರ ಕಾನೂನು ಬದ್ದ ಹಕ್ಕಿನ ಬಗ್ಗೆಯಾಗಲಿ ನ್ಯಾಯಪೀಠಕ್ಕೆ ತಿಳಿದಿಲ್ಲದಂತಿದೆ” ಎಂದು ಹೇಳಿದೆ.

“ಪ್ಯಾಲೆಸ್ತೀನ್ ಅಥವಾ ಇಸ್ರೇಲ್ ಪರ ವಹಿಸುವುದು ಯಾವ ರೀತಿ ದೂಳೆಬ್ಬಿಸಬಹುದು (ಪರಿಣಾಮ ಬೀರಬಹುದು) ಎಂದು ನಿಮಗೆ ಗೊತ್ತಿಲ್ಲ. ನೀವು ಏಕೆ ಈ ರೀತಿ ಮಾಡುತ್ತೀರಿ? ನೀವು ಪ್ರತಿನಿಧಿಸುವ ಪಕ್ಷವನ್ನು ನೋಡಿದರೆ, ಇದು ನಮ್ಮ ದೇಶದ ವಿದೇಶಾಂಗ ವ್ಯವಹಾರಗಳ ಮೇಲೆ ಯಾವ ಪರಿಣಾಮ ಬೀರುತ್ತದೆ ಎಂದು ನಿಮಗೆ ಅರ್ಥವಾಗುತ್ತಿಲ್ಲ ಎಂಬುದು ಸ್ಪಷ್ಟವಾಗುತ್ತದೆ” ಎಂದು ಪೀಠ ಹೇಳಿದೆ.

ಮುಂದುವರೆದು “ನೀವು ಭಾರತದಲ್ಲಿ ನೋಂದಣಿಯಾದ ಒಂದು ಸಂಘಟನೆ. ನೀವು ತ್ಯಾಜ್ಯ ನಿರ್ವಹಣೆ, ಪರಿಸರ ಮಾಲಿನ್ಯ, ಚರಂಡಿ ವ್ಯವಸ್ಥೆ, ನೆರೆ ಮುಂತಾದ ವಿಷಯಗಳನ್ನು ಎತ್ತಿಕೊಳ್ಳಬಹುದಿತ್ತು. ನಾವು ಉದಾಹರಣೆಗಳನ್ನು ಕೊಡುತ್ತಿದ್ದೇವಷ್ಟೇ. ನೀವು ಅವುಗಳ ಬಗ್ಗೆ ಪ್ರತಿಭಟಿಸುತ್ತಿಲ್ಲ, ಬದಲಿಗೆ ನಮ್ಮ ದೇಶದಿಂದ ಸಾವಿರಾರು ಮೈಲಿಗಳಾಚೆ ಏನೋ ನಡೆಯುತ್ತಿದ್ದರೆ ಅದನ್ನು ಪ್ರತಿಭಟಿಸುತ್ತಿದ್ದೀರಿ” ಎಂಬುವುದಾಗಿ ನ್ಯಾಯಾಲಯ ಟಿಪ್ಪಣಿ ಮಾಡಿದೆ ಎಂದಿದೆ.

ನ್ಯಾಯಾಲಯದ ಈ ಟಿಪ್ಪಣಿ, ಕಳೆದ ಶತಮಾನದ 40ರ ದಶಕದಲ್ಲಿ ಮಹಾತ್ಮ ಗಾಂಧಿ, ರಾಷ್ಟ್ರೀಯ ಆಂದೋಲನ ಮತ್ತು ನಂತರ ಸ್ವತಂತ್ರ ಭಾರತದ ವಿದೇಶಾಂಗ ನೀತಿ ಪ್ಯಾಲೆಸ್ತೀನ್‍ ಜನತೆಯ ಸ್ವಾತಂತ್ರ್ಯ ಮತ್ತು ತಾಯ್ನಾಡಿನ ಹಕ್ಕನ್ನು ಬೆಂಬಲಿಸುವಲ್ಲಿ ಎಂದೂ ಹಿಂಜರಿದಿಲ್ಲ ಎಂಬ ಸಂಗತಿಯನ್ನು ನಿರ್ಲಕ್ಷಿಸುತ್ತವೆ ಎಂದು ಸಿಪಿಐ(ಎಂ) ಪಾಲಿಟ್ ಬ್ಯೂರೋ ಖಂಡಿಸಿದೆ.

ಅಲ್ಲದೆ ನ್ಯಾಯಪೀಠ, “ಇಸ್ರೇಲಿ ಆಕ್ರಮಣಕ್ಕೆ ಜಾಗತಿಕವಾಗಿ ವ್ಯಕ್ತವಾಗಿರುವ ನಿಸ್ಸಂದಿಗ್ಧ ಖಂಡನೆಯನ್ನು ಮತ್ತು ವಿಶ್ವಸಂಸ್ಥೆಯ ಸಂಘಟನೆಗಳ ಮತ್ತು ಅಂತಾರಾಷ್ಟ್ರೀಯ ನ್ಯಾಯಾಲಯದ ನಿಲುವುಗಳನ್ನು ಅರಿತಿಲ್ಲ ಎಂಬ ಸಂಗತಿಯನ್ನು ಕೂಡ ಬಯಲು ಮಾಡಿದೆ” ಎಂದಿದೆ.

ಇಂತಹ ಖಂಡನೀಯ ಮನೋಭಾವವನ್ನು ಸ್ಪಷ್ಟವಾಗಿ ತಿರಸ್ಕರಿಸುವಲ್ಲಿ ನಮ್ಮೊಂದಿಗೆ ಕೈ ಜೋಡಿಸಲು ದೇಶದ ಸ್ವಾತಂತ್ರ್ಯ ಮತ್ತು ಪ್ರಜಾಪ್ರಭುತ್ವವನ್ನು ಪ್ರೀತಿಸುವ ಜನರಲ್ಲಿ ನಾವು ಮನವಿ ಮಾಡುತ್ತೇವೆ ಎಂದು ಪಾಲಿಟ್ ಬ್ಯೂರೋ ಹೇಳಿದೆ.

ಗಾಝಾದಲ್ಲಿ ಇಸ್ರೇಲ್ ನಡೆಸುತ್ತಿರುವ ‘ಜನಾಂಗೀಯ ಹತ್ಯೆ’ಯನ್ನು ಪ್ರತಿಭಟಿಸಲು ಮುಂಬೈ ಪೊಲೀಸರು ಅವಕಾಶ ನಿರಾಕರಿಸಿದ್ದನ್ನು ಪ್ರಶ್ನಿಸಿ ಸಿಪಿಐ(ಎಂ) ಸಲ್ಲಿಸಿದ್ದ ಅರ್ಜಿಯನ್ನು ಬಾಂಬೆ ಹೈಕೋರ್ಟ್ ಶುಕ್ರವಾರ ತಿರಸ್ಕರಿಸಿದೆ. “ಮೊದಲು ನಮ್ಮ ದೇಶದ ವಿಷಯಗಳನ್ನು ಕೈಗೆತ್ತಿಕೊಳ್ಳಿ, ನಮ್ಮ ದೇಶದ ನಾಗರಿಕರಿಗೆ ದೇಶಭಕ್ತಿಯನ್ನು ತೋರಿಸಿ” ಎಂದಿದೆ.

“ಭಾರತದಲ್ಲಿ ಈಗಾಗಲೇ ಹಲವಾರು ಸಮಸ್ಯೆಗಳಿವೆ, ಅವುಗಳನ್ನು ಪರಿಹರಿಸಬೇಕಿದೆ. ಹೀಗಿರುವಾಗ ಅರ್ಜಿದಾರರು ಭಾರತದ ನಾಗರಿಕರ ಮೇಲೆ ಪರಿಣಾಮ ಬೀರದ ಸಮಸ್ಯೆಗಳನ್ನು ಕೈಗೆತ್ತಿಕೊಳ್ಳುವುದನ್ನು ತಪ್ಪಿಸಬೇಕು” ಎಂದು ನ್ಯಾಯಮೂರ್ತಿಗಳಾದ ರವೀಂದ್ರ ಘುಗೆ ಮತ್ತು ಗೌತಮ್ ಅಂಕಡ್ ಅವರ ವಿಭಾಗೀಯ ಪೀಠ ಹೇಳಿದೆ.

ಜೈಲಿನಿಂದ ತಪ್ಪಿಸಿಕೊಂಡಿದ್ದ ಅಪರಾಧಿ ಬಾವಿಯಲ್ಲಿ ಪತ್ತೆ: ನಾಲ್ವರು ಅಧಿಕಾರಿಗಳು ಅಮಾನತು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...