Homeಮುಖಪುಟರಾಮ ಮಂದಿರ ಉದ್ಘಾಟನಾ ಸಮಾರಂಭದ ಆಹ್ವಾನ ತಿರಸ್ಕರಿಸಿದ ಸಿಪಿಐ(ಎಂ)

ರಾಮ ಮಂದಿರ ಉದ್ಘಾಟನಾ ಸಮಾರಂಭದ ಆಹ್ವಾನ ತಿರಸ್ಕರಿಸಿದ ಸಿಪಿಐ(ಎಂ)

- Advertisement -
- Advertisement -

ಅಯೋಧ್ಯೆಯಲ್ಲಿ ರಾಮ ಮಂದಿರದ ಉದ್ಘಾಟನಾ ಸಮಾರಂಭದಲ್ಲಿ ಪಾಲ್ಗೊಳ್ಳಲು ನೀಡಿರುವ ಆಹ್ವಾನವನ್ನು ಸಿಪಿಐ(ಎಂ) ಪಕ್ಷವು ತಿರಸ್ಕರಿಸಿದ್ದು, ಪಕ್ಷವು ತಮ್ಮ ಆಯ್ಕೆಯ ಯಾವುದೇ ಧರ್ಮವನ್ನು ನಂಬುವ ಮತ್ತು ಆಚರಿಸುವ ಪ್ರತಿಯೊಬ್ಬರ ಹಕ್ಕನ್ನು ಗೌರವಿಸುತ್ತದೆ ಎಂದು ಸಿಪಿಐ(ಎಂ) ಪ್ರಧಾನ ಕಾರ್ಯದರ್ಶಿ ಸೀತಾರಾಮ್ ಯೆಚೂರಿ ಹೇಳಿದ್ದಾರೆ.

ಸಿಪಿಐ(ಎಂ) ನೀತಿಯು, ಧಾರ್ಮಿಕ ಭಾವನೆಗಳನ್ನು ಗೌರವಿಸುವುದು ಮತ್ತು ಪ್ರತಿಯೊಬ್ಬ ವ್ಯಕ್ತಿಗೆ ಅವರ ನಂಬಿಕೆಯನ್ನು ಆಚರಿಸುವ ಹಕ್ಕನ್ನು ಕಾಪಾಡುವ ಗುರಿಯನ್ನು ಹೊಂದಿದೆ. ಧರ್ಮವು ವೈಯಕ್ತಿಕ ಆಯ್ಕೆಯಾಗಿದೆ ಮತ್ತು ಅದನ್ನು ರಾಜಕೀಯ ಲಾಭದ ಸಾಧನವಾಗಿ ಪರಿವರ್ತಿಸಬಾರದು ಎಂದು ಪಕ್ಷವು ನಂಬುತ್ತದೆ. ಆದ್ದರಿಂದ ನಾವು ಈ ಸಮಾರಂಭದಲ್ಲಿ ಭಾಗವಹಿಸುವುದಿಲ್ಲ ಎಂದು ಸಿಪಿಐ(ಎಂ) ಪಕ್ಷವು ಪ್ರಕಟಣೆಯಲ್ಲಿ ತಿಳಿಸಿದೆ.

ಬಿಜೆಪಿ ಮತ್ತು ಆರೆಸ್ಸೆಸ್ ಧಾರ್ಮಿಕ ಕಾರ್ಯಕ್ರಮವನ್ನು ಹೇಗೆ ಸರಕಾರ ಪ್ರಾಯೋಜಿತ ಕಾರ್ಯಕ್ರಮವಾಗಿ  ಪರಿವರ್ತಿಸಿದೆ ಎಂಬುದನ್ನು ಪ್ರಕಟಣೆಯಲ್ಲಿ ಹೇಳಲಾಗಿದೆ. ಬಿಜೆಪಿ ಮತ್ತು ಆರೆಸ್ಸೆಸ್‌ ಈ ಧಾರ್ಮಿಕ ಸಮಾರಂಭವನ್ನು ಪ್ರಧಾನಮಂತ್ರಿ, ಯುಪಿ ಮುಖ್ಯಮಂತ್ರಿ ಮತ್ತು ಇತರ ಸರ್ಕಾರಿ ಅಧಿಕಾರಿಗಳನ್ನು ನೇರವಾಗಿ ಒಳಗೊಂಡ ಸರಕಾರದ ಕಾರ್ಯಕ್ರಮವನ್ನಾಗಿ ಪರಿವರ್ತಿಸಿರುವುದು ಅತ್ಯಂತ ದುರದೃಷ್ಟಕರ. ಸರಕಾರಕ್ಕೆ ಯಾವುದೇ ಧಾರ್ಮಿಕ ಒಲವುಗಳು ಇರಬಾರದು. ಇದು ಸಂವಿಧಾನ ಬಾಹಿರವಾಗಿದೆ. ಕಾರ್ಯಕ್ರಮದ ಆಯೋಜನೆ ವೇಳೆ ಈ ನಿಯಮವನ್ನು ಉಲ್ಲಂಘಿಸಲಾಗಿದೆ ಎಂದು ಸಿಪಿಐಎಂ ಹೇಳಿದೆ.

1528ರಲ್ಲಿ ಮೊಘಲ್ ಚಕ್ರವರ್ತಿ ಬಾಬರನ ಕಮಾಂಡರ್ ಮೀರ್ ಬಾಕಿ ನಿರ್ಮಿಸಿದ ಬಾಬರಿ ಮಸೀದಿಯನ್ನು  1992ರ ಡಿ.6ರಂದು ಅಡ್ವಾಣಿ, ಜೋಷಿ ನೇತೃತ್ವದ ಕರಸೇವಕರು ಕೆಡವಿದರು. ಮಸೀದಿಯ ಧ್ವಂಸವು ಕೋಮುಗಲಭೆಗೆ ಕಾರಣವಾಯಿತು. ಈ ವೇಳೆ 2,000ಕ್ಕೂ ಹೆಚ್ಚು ಜನರು ಕೊಲ್ಲಲ್ಪಟ್ಟರು. 1947ರಲ್ಲಿ ಸ್ವಾತಂತ್ರ್ಯದ ನಂತರ ಭಾರತವು ಕಂಡ ಅತ್ಯಂತ ಭೀಕರವಾದ ಗಲಭೆಗಳಲ್ಲಿ ಇದು ಒಂದಾಗಿತ್ತು.

2020ರಲ್ಲಿ ಲಕ್ನೋ ವಿಶೇಷ ಸಿಬಿಐ ಕೋರ್ಟ್ ನ್ಯಾಯಾಧೀಶ ಎಸ್.ಕೆ.ಯಾದವ್ ನೇತೃತ್ವದ ನ್ಯಾಯಪೀಠ ತನ್ನ ತೀರ್ಪಿನಲ್ಲಿ ಬಾಬರಿ ಮಸೀದಿ ಧ್ವಂಸ ಪ್ರಕರಣವು ಪೂರ್ವ ನಿಯೋಜಿತವಲ್ಲ ಎಂದು ಮಾಜಿ ಉಪ ಪ್ರಧಾನಿ ಎಲ್.ಕೆ. ಅಡ್ವಾಣಿ, ಬಿಜೆಪಿಯ ಹಿರಿಯ ನಾಯಕ ಮುರಳಿ ಮನೋಹರ ಜೋಶಿ, ಉತ್ತರ ಪ್ರದೇಶದ ಮಾಜಿ ಮುಖ್ಯಮಂತ್ರಿ ಕಲ್ಯಾಣ್ ಸಿಂಗ್, ಮಧ್ಯ ಪ್ರದೇಶದ ಮಾಜಿ ಮುಖ್ಯಮಂತ್ರಿ ಉಮಾ ಭಾರತಿ, ಬಜರಂಗ ದಳ ಸಂಸ್ಥಾಪಕ ವಿನಯ್ ಕಟಿಯಾರ್ ಸೇರಿದಂತೆ 32 ಆರೋಪಿಗಳನ್ನು ಖುಲಾಸೆಗೊಳಿಸಿತ್ತು.

2019ರಲ್ಲಿ ಅಂದಿನ ಮುಖ್ಯನ್ಯಾಯಮೂರ್ತಿ ರಂಜನ್‌ ಗೊಗೊಯಿ ಹಾಗೂ ನ್ಯಾಯಮೂರ್ತಿಗಳಾದ ಎಸ್‌.ಎ ಬೊಬ್ಡೆ, ಡಿ.ವೈ. ಚಂದ್ರಚೂಡ್‌, ಅಶೋಕ್‌ ಭೂಷಣ್‌ ಹಾಗೂ ಅಬ್ದುಲ್ ನಜೀರ್‌ ಅವರನ್ನೊಳಗೊಂಡ ಪೀಠ ಅಯೋಧ್ಯೆ ಭೂ ವಿವಾದದ ಕುರಿತು ತೀರ್ಪು ನೀಡಿತ್ತು. 2.77 ಎಕರೆ ವಿವಾದಿತ ಭೂಮಿಯನ್ನು ರಾಮ ಮಂದಿರ ನಿರ್ಮಾಣಕ್ಕೆ ನೀಡಿತು ಮತ್ತು ಮಸೀದಿ ನಿರ್ಮಿಸಲು ಮುಸ್ಲಿಮರಿಗೆ ಐದು ಎಕರೆ ಭೂಮಿಯನ್ನು ಮಂಜೂರು ಮಾಡುವಂತೆ ಉತ್ತರ ಪ್ರದೇಶ ಸರ್ಕಾರಕ್ಕೆ ನಿರ್ದೇಶನ ನೀಡಿತು. ವಿವಾದಿತ ಸ್ಥಳದಲ್ಲಿ ರಾಮಮಂದಿರ ನಿರ್ಮಾಣಕ್ಕೆ ಗ್ರೀನ್ ಸಿಗ್ನಲ್‌ ನೀಡಿತ್ತು.

ಇದನ್ನು ಓದಿ: ಪ್ಯಾಲೆಸ್ತೀನ್‌ ಹಿರಿಯ ಸಂಸದೆ ಖಾಲಿದಾ ಜರಾರ್‌ನ್ನು ಬಂಧಿಸಿದ ಇಸ್ರೇಲ್‌ ಪಡೆ

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕಾಂಗ್ರೆಸ್ ಜೊತೆ ವಿಲೀನ? ಅದೆಲ್ಲ ಬರೀ ಸುಳ್ಳು ಎಂದ ಟಿಎಂಸಿ

ಕಾಂಗ್ರೆಸ್ ಪಕ್ಷದೊಂದಿಗೆ ತೃಣಮೂಲ ಕಾಂಗ್ರೆಸ್ (ಟಿಎಂಸಿ) ವಿಲೀನವಾಗಬಹುದು ಎಂಬ ವರದಿಗಳನ್ನು ಟಿಎಂಸಿ ಉನ್ನತ ಮೂಲಗಳು ಬುಧವಾರ (ಇಂದು) ಸಂಪೂರ್ಣವಾಗಿ ತಳ್ಳಿಹಾಕಿವೆ. "ನಮ್ಮ ಪಕ್ಷಕ್ಕೆ ಈ ಬಗ್ಗೆ ಯಾವುದೇ ಮಾಹಿತಿ ಇಲ್ಲ ಮತ್ತು ವಿಲೀನಕ್ಕೆ...

ಮೀನಾಕ್ಷಿ ನಟರಾಜನ್ ನಾಮಪತ್ರ ತಿರಸ್ಕಾರ : ಬಿಜೆಪಿಯ ಸೀಟ್ ಚೋರಿ?

ರಾಜ್ಯಸಭಾ ಚುನಾವಣೆಗೆ ಮಧ್ಯಪ್ರದೇಶದಿಂದ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾಗಿದ್ದ ಮೀನಾಕ್ಷಿ ನಟರಾಜನ್ ಅವರ ನಾಮಪತ್ರವನ್ನು ಚುನಾವಣಾ ಆಯೋಗ ತಿರಸ್ಕರಿಸಿರುವುದು ದೇಶದಲ್ಲಿ ದೊಡ್ಡ ರಾಜಕೀಯ ಜಟಾಪಟಿಗೆ ಕಾರಣವಾಗಿದೆ. ಕಾಂಗ್ರೆಸ್ ಈ ವಿಚಾರವನ್ನು ಬಹಳ ಗಂಭೀರವಾಗಿ ಪರಿಗಣಿಸಿ ಬುಧವಾರ (ಜೂ. 10)...

ಒಳಮೀಸಲಾತಿ ನಾಡು ಕಂಡ ಸುದೀರ್ಘ ಹೋರಾಟದ ಕಥೆ

ಇದು ಬೆವರು ನಿಟ್ಟುಸಿರುಗಳ ಚಳವಳಿ. ತಮ್ಮ ಅನ್ನದ ಬಟ್ಟಲಿಗಾಗಿ ದಶಕಗಳ ಕಾಲ ಹಸಿವು, ಬಾಯಾರಿಕೆ, ನಿದ್ರೆ ಎಲ್ಲವನ್ನೂ ಬಿಟ್ಟು ನಡೆಸಿದ ಅಭೂತಪೂರ್ವ ಚಳವಳಿ. ರಾಜಕೀಯ ಚಕ್ರವ್ಯೂಹಗಳನ್ನು ಬೇಧಿಸಿ, ಸಾಂವಿಧಾನಿಕ ಹಕ್ಕನ್ನು ತಮ್ಮದಾಗಿಸಿಕೊಂಡ ಚಳವಳಿ....

‘ಗೋಮಾಂಸ’ ತಂದ ನೆಪ: ಅಸ್ಸಾಂನಲ್ಲಿ ಐವರು ಮುಸ್ಲಿಂ ವಿದ್ಯಾರ್ಥಿಗಳ ವಿರುದ್ಧ ಕ್ರಮ; ಸುಳ್ಳು ಪ್ರಕರಣದಡಿ ಒಂಟಿ ತಾಯಿ ಮತ್ತು ಅಪ್ರಾಪ್ತ ಮಗನ ಬಂಧನ

ಧಾರ್ಮಿಕ ಭಾವನೆಗೆ ಧಕ್ಕೆ ಎಂಬ ಹೆಸರಿನಲ್ಲಿ ಶಾಲಾ ಆವರಣಗಳೂ ಸಹ ಕೋಮು ರಾಜಕಾರಣದ ಪ್ರಯೋಗಶಾಲೆಗಳಾಗುತ್ತಿರುವುದಕ್ಕೆ ಅಸ್ಸಾಂನಿಂದ ಮತ್ತೊಂದು ಆಘಾತಕಾರಿ ಘಟನೆ ವರದಿಯಾಗಿದೆ. ಅಸ್ಸಾಂನ ಗೋಲ್‌ಪಾರ ಜಿಲ್ಲೆಯ ಸರ್ಕಾರಿ ಹೈಯರ್ ಸೆಕೆಂಡರಿ ಶಾಲೆಯೊಂದರಲ್ಲಿ ಮುಸ್ಲಿಂ...

ಪ್ರಧಾನಿ ನರೇಂದ್ರ ಮೋದಿಯ 12 ವರ್ಷದ ಸಾಧನೆ ಏನು? ಅವರು ಮುರಿದ ದಾಖಲೆಯಾದರೂ ಯಾವುದು?

ಭಾರತದ ಪ್ರಧಾನಿ ನರೇಂದ್ರ ಮೋದಿ ಅವರು 2014ರಿಂದ ಸತತ 12ವರ್ಷಗಳು (4,399 ದಿನಗಳು) ಪ್ರಧಾನಿ ಹುದ್ದೆ ಅಲಂಕರಿಸುವ ಮೂಲಕ ದಾಖಲೆ ನಿರ್ಮಿಸಿದ್ದಾರೆ. ಮೋದಿ ನೇತೃತ್ವದ ಸರ್ಕಾರಕ್ಕೆ 12 ವರ್ಷ ತುಂಬಿದ ಹಿನ್ನೆಲೆ ಬಿಜೆಪಿ...

ಉತ್ತರಾಖಂಡ: ಮೇಲ್ಜಾತಿ ಯುವತಿ ಜೊತೆ ಸ್ನೇಹ ಬೆಳೆಸಿದ 18 ವರ್ಷದ ದಲಿತ ಯುವಕನ ಹತ್ಯೆ, ಸ್ನೇಹಿತನ ಮೇಲೂ ಮಾರಣಾಂತಿಕ ಹಲ್ಲೆ 

ದೇಶದಲ್ಲಿ ಜಾತಿ ವ್ಯವಸ್ಥೆಯ ಕರಾಳ ಮುಖ ಮತ್ತೊಮ್ಮೆ ಅನಾವರಣಗೊಂಡಿದೆ. ಉತ್ತರಾಖಂಡದ ನ್ಯೂ ತೆಹ್ರಿ ಜಿಲ್ಲೆಯ ಪ್ರತಾಪ್ ನಗರ ಬ್ಲಾಕ್ ವ್ಯಾಪ್ತಿಯಲ್ಲಿ ಮೇಲ್ಜಾತಿಯ ಅಪ್ರಾಪ್ತ ಯುವತಿಯೊಂದಿಗೆ ಸ್ನೇಹ ಬೆಳೆಸಿದ್ದಕ್ಕಾಗಿ 18 ವರ್ಷದ ದಲಿತ ಹದಿಹರೆಯದ...

ಟಿಎಂಸಿ ಬಂಡಾಯ : 20 ಸಂಸದರು ಪಕ್ಷ ತೊರೆದರೂ ಅನರ್ಹತೆ ತಪ್ಪಿದ್ದಲ್ಲ

ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಸುಮಾರು 20 ಲೋಕಸಭಾ ಸಂಸದರು ಪಕ್ಷದಿಂದ ಬೇರ್ಪಟ್ಟು ಪ್ರತ್ಯೇಕ ಗುಂಪು ರಚಿಸಲು ಸಜ್ಜಾಗಿದ್ದಾರೆ ಎಂಬ ವರದಿಗಳ ನಡುವೆ, ಕೇವಲ ಮೂರನೇ ಎರಡರಷ್ಟು ಸಂಸದರ ಬೆಂಬಲ ಹೊಂದಿರುವುದರಿಂದ ಮಾತ್ರ...

ಕಚ್ಚಿದ ಸೇಬನ್ನು ಅಭಿಮಾನಿಗಳತ್ತ ಎಸೆದ ಸಿಎಂ ಡಿ.ಕೆ. ಶಿವಕುಮಾರ್: ವಿಡಿಯೋ ವೈರಲ್

ರಾಜಕೀಯ ನಾಯಕರು ತಮಗೆ ಸಿಕ್ಕ ಹಾರ, ತುರಾಯಿ ಅಥವಾ ಹಣ್ಣುಗಳನ್ನು ಅಭಿಮಾನಿಗಳಿಗೆ ಹಂಚುವುದು ಹೊಸದೇನಲ್ಲ. ಆದರೆ, ತಾನು ಕಚ್ಚಿದ ಹಣ್ಣನ್ನು ಸಾರ್ವಜನಿಕವಾಗಿ ಜನರತ್ತ ಎಸೆಯುವುದು ಯಾವ ರೀತಿಯ ಸಂಸ್ಕೃತಿ ಎಂಬ ಪ್ರಶ್ನೆ ಮೂಡುತ್ತದೆ....

ವೈಜಾಗ್ ಸ್ಟೀಲ್ ಅಪಘಾತಕ್ಕೆ 8 ಮಂದಿ ಬಲಿ: ಸಿಬ್ಬಂದಿ ಕೊರತೆಯ ಬಗ್ಗೆ ಕಾರ್ಮಿಕ ಸಂಘಗಳ ಆರೋಪ: ಸಾವಿನ ಅಂಚಿನಲ್ಲೂ ಕುಟುಂಬಕ್ಕಾಗಿ ಮಿಡಿದ ಕಾರ್ಮಿಕ

ಆಂಧ್ರಪ್ರದೇಶದ ವಿಶಾಖಪಟ್ಟಣದಲ್ಲಿರುವ ಪ್ರಸಿದ್ಧ ರಾಷ್ಟ್ರೀಯ ಇಸ್ಪತ್ ನಿಗಮ್ ಲಿಮಿಟೆಡ್ (RINL) ಉಕ್ಕು ಸ್ಥಾವರದಲ್ಲಿ ಸೋಮವಾರ (ಜೂನ್ 8, 2026) ಸಂಜೆ ಭೀಕರ ಕೈಗಾರಿಕಾ ದುರಂತವೊಂದು ಸಂಭವಿಸಿದೆ. ಸ್ಥಾವರದ ಸ್ಟೀಲ್ ಮೆಲ್ಟ್ ಶಾಪ್-1 (SMS-1)...

ಅಂದು ಪಿಣರಾಯಿ ಮನೆ ಮೇಲೆ ದಾಳಿ; ಈಗ ವೀಣಾ ವಿಜಯನ್‌ಗೆ ಸಮನ್ಸ್‌: ಹಿರಿಯ ಕಮ್ಯುನಿಸ್ಟ್‌ ನಾಯಕನ ಕುಟುಂಬದ ಮೇಲೆ ಇಡಿ ಕಣ್ಣು

ಹಣ ಅಕ್ರಮ ವರ್ಗಾವಣೆ ಪ್ರಕರಣದಲ್ಲಿ ಕೇರಳದ ಮಾಜಿ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರ ಮನೆ ಮೇಲೆ ಕಳೆದ ತಿಂಗಳು ಜಾರಿ ನಿರ್ದೇಶನಾಲಯ ದಾಳಿ ಮಾಡಿತ್ತು. ಕೊನೆಗೆ ಅಲ್ಲಿ ಏನೂ ಸಿಗದೆ ಬರಿಗೈನಲ್ಲಿ ಅಧಿಕಾರಿಗಳು...