Homeಮುಖಪುಟರಾಮ ಮಂದಿರ ಉದ್ಘಾಟನಾ ಸಮಾರಂಭದ ಆಹ್ವಾನ ತಿರಸ್ಕರಿಸಿದ ಸಿಪಿಐ(ಎಂ)

ರಾಮ ಮಂದಿರ ಉದ್ಘಾಟನಾ ಸಮಾರಂಭದ ಆಹ್ವಾನ ತಿರಸ್ಕರಿಸಿದ ಸಿಪಿಐ(ಎಂ)

- Advertisement -
- Advertisement -

ಅಯೋಧ್ಯೆಯಲ್ಲಿ ರಾಮ ಮಂದಿರದ ಉದ್ಘಾಟನಾ ಸಮಾರಂಭದಲ್ಲಿ ಪಾಲ್ಗೊಳ್ಳಲು ನೀಡಿರುವ ಆಹ್ವಾನವನ್ನು ಸಿಪಿಐ(ಎಂ) ಪಕ್ಷವು ತಿರಸ್ಕರಿಸಿದ್ದು, ಪಕ್ಷವು ತಮ್ಮ ಆಯ್ಕೆಯ ಯಾವುದೇ ಧರ್ಮವನ್ನು ನಂಬುವ ಮತ್ತು ಆಚರಿಸುವ ಪ್ರತಿಯೊಬ್ಬರ ಹಕ್ಕನ್ನು ಗೌರವಿಸುತ್ತದೆ ಎಂದು ಸಿಪಿಐ(ಎಂ) ಪ್ರಧಾನ ಕಾರ್ಯದರ್ಶಿ ಸೀತಾರಾಮ್ ಯೆಚೂರಿ ಹೇಳಿದ್ದಾರೆ.

ಸಿಪಿಐ(ಎಂ) ನೀತಿಯು, ಧಾರ್ಮಿಕ ಭಾವನೆಗಳನ್ನು ಗೌರವಿಸುವುದು ಮತ್ತು ಪ್ರತಿಯೊಬ್ಬ ವ್ಯಕ್ತಿಗೆ ಅವರ ನಂಬಿಕೆಯನ್ನು ಆಚರಿಸುವ ಹಕ್ಕನ್ನು ಕಾಪಾಡುವ ಗುರಿಯನ್ನು ಹೊಂದಿದೆ. ಧರ್ಮವು ವೈಯಕ್ತಿಕ ಆಯ್ಕೆಯಾಗಿದೆ ಮತ್ತು ಅದನ್ನು ರಾಜಕೀಯ ಲಾಭದ ಸಾಧನವಾಗಿ ಪರಿವರ್ತಿಸಬಾರದು ಎಂದು ಪಕ್ಷವು ನಂಬುತ್ತದೆ. ಆದ್ದರಿಂದ ನಾವು ಈ ಸಮಾರಂಭದಲ್ಲಿ ಭಾಗವಹಿಸುವುದಿಲ್ಲ ಎಂದು ಸಿಪಿಐ(ಎಂ) ಪಕ್ಷವು ಪ್ರಕಟಣೆಯಲ್ಲಿ ತಿಳಿಸಿದೆ.

ಬಿಜೆಪಿ ಮತ್ತು ಆರೆಸ್ಸೆಸ್ ಧಾರ್ಮಿಕ ಕಾರ್ಯಕ್ರಮವನ್ನು ಹೇಗೆ ಸರಕಾರ ಪ್ರಾಯೋಜಿತ ಕಾರ್ಯಕ್ರಮವಾಗಿ  ಪರಿವರ್ತಿಸಿದೆ ಎಂಬುದನ್ನು ಪ್ರಕಟಣೆಯಲ್ಲಿ ಹೇಳಲಾಗಿದೆ. ಬಿಜೆಪಿ ಮತ್ತು ಆರೆಸ್ಸೆಸ್‌ ಈ ಧಾರ್ಮಿಕ ಸಮಾರಂಭವನ್ನು ಪ್ರಧಾನಮಂತ್ರಿ, ಯುಪಿ ಮುಖ್ಯಮಂತ್ರಿ ಮತ್ತು ಇತರ ಸರ್ಕಾರಿ ಅಧಿಕಾರಿಗಳನ್ನು ನೇರವಾಗಿ ಒಳಗೊಂಡ ಸರಕಾರದ ಕಾರ್ಯಕ್ರಮವನ್ನಾಗಿ ಪರಿವರ್ತಿಸಿರುವುದು ಅತ್ಯಂತ ದುರದೃಷ್ಟಕರ. ಸರಕಾರಕ್ಕೆ ಯಾವುದೇ ಧಾರ್ಮಿಕ ಒಲವುಗಳು ಇರಬಾರದು. ಇದು ಸಂವಿಧಾನ ಬಾಹಿರವಾಗಿದೆ. ಕಾರ್ಯಕ್ರಮದ ಆಯೋಜನೆ ವೇಳೆ ಈ ನಿಯಮವನ್ನು ಉಲ್ಲಂಘಿಸಲಾಗಿದೆ ಎಂದು ಸಿಪಿಐಎಂ ಹೇಳಿದೆ.

1528ರಲ್ಲಿ ಮೊಘಲ್ ಚಕ್ರವರ್ತಿ ಬಾಬರನ ಕಮಾಂಡರ್ ಮೀರ್ ಬಾಕಿ ನಿರ್ಮಿಸಿದ ಬಾಬರಿ ಮಸೀದಿಯನ್ನು  1992ರ ಡಿ.6ರಂದು ಅಡ್ವಾಣಿ, ಜೋಷಿ ನೇತೃತ್ವದ ಕರಸೇವಕರು ಕೆಡವಿದರು. ಮಸೀದಿಯ ಧ್ವಂಸವು ಕೋಮುಗಲಭೆಗೆ ಕಾರಣವಾಯಿತು. ಈ ವೇಳೆ 2,000ಕ್ಕೂ ಹೆಚ್ಚು ಜನರು ಕೊಲ್ಲಲ್ಪಟ್ಟರು. 1947ರಲ್ಲಿ ಸ್ವಾತಂತ್ರ್ಯದ ನಂತರ ಭಾರತವು ಕಂಡ ಅತ್ಯಂತ ಭೀಕರವಾದ ಗಲಭೆಗಳಲ್ಲಿ ಇದು ಒಂದಾಗಿತ್ತು.

2020ರಲ್ಲಿ ಲಕ್ನೋ ವಿಶೇಷ ಸಿಬಿಐ ಕೋರ್ಟ್ ನ್ಯಾಯಾಧೀಶ ಎಸ್.ಕೆ.ಯಾದವ್ ನೇತೃತ್ವದ ನ್ಯಾಯಪೀಠ ತನ್ನ ತೀರ್ಪಿನಲ್ಲಿ ಬಾಬರಿ ಮಸೀದಿ ಧ್ವಂಸ ಪ್ರಕರಣವು ಪೂರ್ವ ನಿಯೋಜಿತವಲ್ಲ ಎಂದು ಮಾಜಿ ಉಪ ಪ್ರಧಾನಿ ಎಲ್.ಕೆ. ಅಡ್ವಾಣಿ, ಬಿಜೆಪಿಯ ಹಿರಿಯ ನಾಯಕ ಮುರಳಿ ಮನೋಹರ ಜೋಶಿ, ಉತ್ತರ ಪ್ರದೇಶದ ಮಾಜಿ ಮುಖ್ಯಮಂತ್ರಿ ಕಲ್ಯಾಣ್ ಸಿಂಗ್, ಮಧ್ಯ ಪ್ರದೇಶದ ಮಾಜಿ ಮುಖ್ಯಮಂತ್ರಿ ಉಮಾ ಭಾರತಿ, ಬಜರಂಗ ದಳ ಸಂಸ್ಥಾಪಕ ವಿನಯ್ ಕಟಿಯಾರ್ ಸೇರಿದಂತೆ 32 ಆರೋಪಿಗಳನ್ನು ಖುಲಾಸೆಗೊಳಿಸಿತ್ತು.

2019ರಲ್ಲಿ ಅಂದಿನ ಮುಖ್ಯನ್ಯಾಯಮೂರ್ತಿ ರಂಜನ್‌ ಗೊಗೊಯಿ ಹಾಗೂ ನ್ಯಾಯಮೂರ್ತಿಗಳಾದ ಎಸ್‌.ಎ ಬೊಬ್ಡೆ, ಡಿ.ವೈ. ಚಂದ್ರಚೂಡ್‌, ಅಶೋಕ್‌ ಭೂಷಣ್‌ ಹಾಗೂ ಅಬ್ದುಲ್ ನಜೀರ್‌ ಅವರನ್ನೊಳಗೊಂಡ ಪೀಠ ಅಯೋಧ್ಯೆ ಭೂ ವಿವಾದದ ಕುರಿತು ತೀರ್ಪು ನೀಡಿತ್ತು. 2.77 ಎಕರೆ ವಿವಾದಿತ ಭೂಮಿಯನ್ನು ರಾಮ ಮಂದಿರ ನಿರ್ಮಾಣಕ್ಕೆ ನೀಡಿತು ಮತ್ತು ಮಸೀದಿ ನಿರ್ಮಿಸಲು ಮುಸ್ಲಿಮರಿಗೆ ಐದು ಎಕರೆ ಭೂಮಿಯನ್ನು ಮಂಜೂರು ಮಾಡುವಂತೆ ಉತ್ತರ ಪ್ರದೇಶ ಸರ್ಕಾರಕ್ಕೆ ನಿರ್ದೇಶನ ನೀಡಿತು. ವಿವಾದಿತ ಸ್ಥಳದಲ್ಲಿ ರಾಮಮಂದಿರ ನಿರ್ಮಾಣಕ್ಕೆ ಗ್ರೀನ್ ಸಿಗ್ನಲ್‌ ನೀಡಿತ್ತು.

ಇದನ್ನು ಓದಿ: ಪ್ಯಾಲೆಸ್ತೀನ್‌ ಹಿರಿಯ ಸಂಸದೆ ಖಾಲಿದಾ ಜರಾರ್‌ನ್ನು ಬಂಧಿಸಿದ ಇಸ್ರೇಲ್‌ ಪಡೆ

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಟಿಎಂಸಿ ಪಕ್ಷದ ಹೆಸರು, ಚಿಹ್ನೆ ಫ್ರೀಝ್ : ಚು. ಆಯೋಗದ ಆದೇಶ ಪ್ರಶ್ನಿಸಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಮಮತಾ ಬ್ಯಾನರ್ಜಿ

ತೃಣಮೂಲಕ ಕಾಂಗ್ರೆಸ್ (ಟಿಎಂಸಿ) ಪಕ್ಷದ ಚಿಹ್ನೆ ಮತ್ತು ಹೆಸರನ್ನು ಭಾರತೀಯ ಚುನಾವಣಾ ಆಯೋಗ ಫ್ರೀಝ್ ಮಾಡಿರುವುದನ್ನು ಪ್ರಶ್ನಿಸಿ, ಪಕ್ಷದ ಸಂಸ್ಥಾಪಕಿ ಹಾಗೂ ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸುಪ್ರೀಂ ಕೋರ್ಟ್‌...

ನಂದಿಗ್ರಾಮದ ಬೆನ್ನಲ್ಲೇ ರೆಜಿನಗರ ಅಭ್ಯರ್ಥಿಯಿಂದಲೂ ನಾಮಪತ್ರ ವಾಪಸ್ : ಬಂಗಾಳ ಉಪ ಚುನಾವಣೆ ಕಣದಲ್ಲಿ ಮಮತಾ ಬ್ಯಾನರ್ಜಿ ಬಣಕ್ಕೆ ಮತ್ತೊಂದು ಹಿನ್ನಡೆ

ಪಶ್ಚಿಮ ಬಂಗಾಳದ ಉಪಚುನಾವಣಾ ಕಣದಲ್ಲಿ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರಿಗೆ ಮತ್ತೊಂದು ಹಿನ್ನಡೆಯಾಗಿದೆ. ನಂದಿಗ್ರಾಮದ ಬಳಿಕ ರೆಜಿನಗರ ವಿಧಾನಸಭಾ ಕ್ಷೇತ್ರದಲ್ಲೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಅಭ್ಯರ್ಥಿ ತನ್ನ ನಾಮಪತ್ರವನ್ನು ವಾಪಸ್ ಪಡೆದಿದ್ದಾರೆ...

ಅಮಾನವೀಯ ಕೃತ್ಯ : ಮಹಿಳೆಗೆ ಥಳಿಸಿ, ಕೂದಲು ಹಿಡಿದು ಎಳೆದೊಯ್ದ ಪೊಲೀಸ್ ಸಿಬ್ಬಂದಿ

ತೆಲಂಗಾಣದ ಹಫೀಝ್‌ಪೇಟ್ ರೈಲ್ವೆ ನಿಲ್ದಾಣದಲ್ಲಿ ಪೊಲೀಸ್ ಸಿಬ್ಬಂದಿಯೊಬ್ಬರು ಮಹಿಳೆಗೆ ಥಳಿಸಿ, ಆಕೆಯ ತಲೆಕೂದಲು ಹಿಡಿದು ಎಳೆದೊಯ್ದಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ತೀವ್ರ ಆಕ್ರೋಶ ವ್ಯಕ್ತವಾಗಿದೆ. ಶುಕ್ರವಾರ (ಸೆ.18) ರಾತ್ರಿ ರೈಲ್ವೆ...

ರಾಮಮಂದಿರ ದೇಣಿಗೆ ಕಳವು ಪ್ರಕರಣ: ಆರೋಪಿಗಳ ನ್ಯಾಯಾಂಗ ಬಂಧನ ಅವಧಿ ವಿಸ್ತರಣೆ

ರಾಮಮಂದಿರದಲ್ಲಿ ದೇಣಿಗೆ ಹಣ ಕಳವು ಮಾಡಿದ ಆರೋಪದ ಮೇಲೆ ಬಂಧಿಸಲಾಗಿರುವ ಎಲ್ಲಾ ಎಂಟು ಆರೋಪಿಗಳ ನ್ಯಾಯಾಂಗ ಬಂಧನವನ್ನು ಸೆಪ್ಟೆಂಬರ್ 21ರವರೆಗೆ ವಿಸ್ತರಿಸಲಾಗಿದೆ ಎಂದು ಅವರ ವಕೀಲರು (ಸೆ.18) ತಿಳಿಸಿದ್ದಾರೆ. ಅಯೋಧ್ಯೆಯ ಭ್ರಷ್ಟಾಚಾರ ನಿಗ್ರಹ ನ್ಯಾಯಾಲಯದ...

ಬಂಗಾಳದಲ್ಲಿ ಬಿಜೆಪಿ ದ್ವೇಷ ರಾಜಕಾರಣ: ಮಾಮತಾ ಬ್ಯಾನರ್ಜಿ ಬೆಂಬಲ ಘೋಷಿಸಿದ ಬೆನ್ನಲ್ಲೇ ನಂದಿಗ್ರಾಮ ಕಾಂಗ್ರೆಸ್ ಅಭ್ಯರ್ಥಿ ಬಂಧನ

ಪಶ್ಚಿಮ ಬಂಗಾಳದ ಪೂರ್ವ ಮೇದಿನಿಪುರ ಜಿಲ್ಲೆಯ ನಂದಿಗ್ರಾಮ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿ ಮಿಲನ್ ಪ್ರಧಾನ್ ಅವರನ್ನು ಹಳೆಯ ಪ್ರಕರಣವೊಂದರಲ್ಲಿ ಶುಕ್ರವಾರ (ಸೆ.18) ಬಂಧಿಸಲಾಗಿದೆ ಎಂದು ಪೂರ್ವ ಮೇದಿನಿಪುರ ಜಿಲ್ಲಾ ಪೊಲೀಸ್...

‘ವೆಟ್ಟುವಂ’ ಪಾ.ರಂಜಿತ್ ಅವರ ಅದ್ಭುತ ಅಪೋಕಲಿಪ್ಟಿಕ್ ಆಕ್ಷನ್ ಸಿನಿಮಾ: ರಂಗನಾಥ್ ಆರ್. ವಿ

ತಮಿಳಿನ ಖ್ಯಾತ ನಿರ್ದೇಶಕ ಪಾ.ರಂಜಿತ್ ಅವರ ನಿರ್ದೇಶನದಲ್ಲಿ ಮೂಡಿಬರುತ್ತಿರುವ 'ವೆಟ್ಟುವಂ' ಚಿತ್ರವನ್ನು 'ಲರ್ನ್ ಆಂಡ್ ಟೀಚ್ ಪ್ರೊಡಕ್ಷನ್' ಸಂಸ್ಥೆಯ ಸಹಯೋಗದೊಂದಿಗೆ, ಪಾ.ರಂಜಿತ್ ಅವರ 'ನೀಲಂ ಪ್ರೊಡಕ್ಷನ್ಸ್' ನಿರ್ಮಿಸಿದೆ. ಈ ಚಿತ್ರದ ಜಗತ್ತನ್ನು ಪರಿಚಯಿಸುವ...

SIR ಮೋಸ: ಅಗತ್ಯಬಿದ್ದರೆ ಕಾಂಗ್ರೆಸ್‌ನಿಂದ ಕಾನೂನು ಹೋರಾಟ ಬಿ.ಕೆ. ಹರಿಪ್ರಸಾದ್ ಎಚ್ಚರಿಕೆ

ಕರ್ನಾಟಕದಲ್ಲಿ ಪ್ರಸ್ತುತ ನಡೆಯುತ್ತಿರುವ 2026ರ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಭಾರಿ ಪ್ರಮಾಣದ ತಾಂತ್ರಿಕ ಲೋಪಗಳು, ಅಂಕಿಅಂಶಗಳ ವ್ಯತ್ಯಾಸ ಹಾಗೂ ಮತದಾರರ ಪಟ್ಟಿಗೆ ಸಂಬಂಧಿಸಿದಂತೆ ಸ್ಪಷ್ಟತೆಯ ಕೊರತೆ ಎದ್ದುಕಾಣುತ್ತಿದೆ ಎಂದು...

ವಿಚಾರಣೆಯಿಲ್ಲದೆ ಆರು ವರ್ಷ ಜೈಲುವಾಸ: ಉಮರ್ ಖಾಲಿದ್ ಹೋರಾಟದ ಹಾದಿ

ಸೆಪ್ಟೆಂಬರ್ 13, 2020 ರಂದು, ಮಾನವ ಹಕ್ಕುಗಳ ಯುವ ಕಾರ್ಯಕರ್ತ ಉಮರ್ ಖಾಲಿದ್ ಅವರನ್ನು ದೇಶದ ರಾಜಧಾನಿಯಲ್ಲಿ ಗುರಿಯಾಗಿಸಿಕೊಳ್ಳಲಾಯಿತು. ವಿಚಾರಣೆಯೇ ಇಲ್ಲದೆ ಅವರು ಜೈಲಿನಲ್ಲಿ ಆರು ವರ್ಷಗಳನ್ನು ಪೂರೈಸಿದ್ದಾರೆ. ಸರ್ಕಾರದ ವಿರುದ್ಧದ ರಾಜಕೀಯ...

ಕನ್ವರ್ ಯಾತ್ರೆ ವೇಳೆ 18 ದ್ವೇಷ ಘಟನೆಗಳು: ಮುಸ್ಲಿಮರು, ಅವರ ವ್ಯಾಪಾರಗಳನ್ನು ಗುರಿಯಾಗಿಸಿಕೊಂಡ ಪ್ರಕರಣಗಳೇ ಹೆಚ್ಚು; APCR ವರದಿ

ನವದೆಹಲಿ: 2026ರ ಕನ್ವರ್ ಯಾತ್ರೆಯ 13 ದಿನಗಳ ಅವಧಿಯಲ್ಲಿ ಹಿಂಸಾಚಾರ, ಬಲವಂತ, ತಾರತಮ್ಯ, ಆರ್ಥಿಕ ಬಹಿಷ್ಕಾರ ಹಾಗೂ ಸಾರ್ವಜನಿಕ ಅಶ್ಲೀಲ ವರ್ತನೆಗೆ ಸಂಬಂಧಿಸಿದ ಕನಿಷ್ಠ 18 ಘಟನೆಗಳು ವರದಿಯಾಗಿವೆ ಎಂದು ನಾಗರಿಕ ಹಕ್ಕುಗಳ...

ಸಿಐಟಿಯು ಕಾನೂನು ಹೋರಾಟಕ್ಕೆ ಮೊದಲ ಜಯ: ಕನಿಷ್ಠ ವೇತನ ತಡೆಹಿಡಿದಿದ್ದ ಸರ್ಕಾರದ ಮೂರು ಸುತ್ತೋಲೆಗಳಿಗೆ ಹೈಕೋರ್ಟ್ ತಡೆ

ಸರ್ಕಾರಿ ಇಲಾಖೆಗಳು ಮತ್ತು ಸ್ಥಳೀಯ ಸಂಸ್ಥೆಗಳಲ್ಲಿ ಕೆಲಸ ಮಾಡುವ ಲಕ್ಷಾಂತರ ಕಾರ್ಮಿಕರ ಹೊಸ ಕನಿಷ್ಠ ವೇತನವನ್ನು ತಡೆಹಿಡಿದಿದ್ದ ಸರ್ಕಾರದ ನಿರ್ಧಾರಕ್ಕೆ ಹೈಕೋರ್ಟ್ ಬ್ರೇಕ್ ಹಾಕಿದೆ. ಹೊಸ ವೇತನ ನೀಡುವುದನ್ನು ಅಮಾನತಿನಲ್ಲಿಟ್ಟಿದ್ದ ಸರ್ಕಾರದ ಮೂರು...