Homeಮುಖಪುಟಸಿಪಿಐ(ಎಂ)ನ ಲಿಂಗಸಮಾನತೆ ಪರ ರ‍್ಯಾಲಿಗೆ ಅನುಮತಿ ನಿರಾಕರಿಸಿ ಚೆನ್ನೈ ಪೊಲೀಸ್

ಸಿಪಿಐ(ಎಂ)ನ ಲಿಂಗಸಮಾನತೆ ಪರ ರ‍್ಯಾಲಿಗೆ ಅನುಮತಿ ನಿರಾಕರಿಸಿ ಚೆನ್ನೈ ಪೊಲೀಸ್

- Advertisement -
- Advertisement -

ನವೆಂಬರ್ 16ರ ಶನಿವಾರದಂದು ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ (ಮಾರ್ಕ್ಸ್‌ವಾದಿ) ಆಯೋಜಿಸಿದ್ದ ಲಿಂಗ ಸಮಾನತೆ ಪರ ಮೆರವಣಿಗೆಗೆ ಟ್ರಾಫಿಕ್ ಅಡೆತಡೆಗಳನ್ನು ಉಲ್ಲೇಖಿಸಿ ಚೆನ್ನೈ ಪೊಲೀಸರು ಅನುಮತಿ ನಿರಾಕರಿಸಿದ್ದಾರೆ. ಲಿಂಗ ತಟಸ್ಥ ಸಮಾಜದ ಮಹತ್ವವನ್ನು ಒತ್ತಿಹೇಳಲು ಸಿಪಿಐ(ಎಂ) ರಾತ್ರಿ 10 ಗಂಟೆಗೆ ಅಣ್ಣಾ ಸಲೈನಲ್ಲಿರುವ ಪೆರಿಯಾರ್ ಪ್ರತಿಮೆಯಿಂದ ಮರೀನಾ ಬೀಚ್‌ನಲ್ಲಿರುವ ಕಾರ್ಮಿಕ ಪ್ರತಿಮೆಯವರೆಗೆ ಮಧ್ಯರಾತ್ರಿ ರ್ಯಾಲಿಯನ್ನು ಆಯೋಜಿಸಿತ್ತು. 2022ರಲ್ಲಿ ಕೂಡಾ ಸಿಪಿಐ(ಎಂ) ‘ರಾತ್ರಿ ನಮ್ಮದು’ ಎಂಬ ವಿಷಯದೊಂದಿಗೆ ಇದೇ ರೀತಿಯ ರ‍್ಯಾಲಿಯನ್ನು ನಡೆಸಿತ್ತು. ಸಿಪಿಐ(ಎಂ)ನ

ನವೆಂಬರ್ 16ರ ಶನಿವಾರ, ತಮಿಳುನಾಡು ಸೆಂಟರ್ ಆಫ್ ಇಂಡಿಯನ್ ಟ್ರೇಡ್ ಯೂನಿಯನ್ಸ್ (ಸಿಐಟಿಯು) ಅಧ್ಯಕ್ಷ ಎ ಸೌಂದರಾಜನ್ ಮತ್ತು ನಟಿ ರೋಹಿಣಿ ಮೊಲ್ಲೇಟಿ ಅವರು ಪೆರಿಯಾರ್ ಪ್ರತಿಮೆಗೆ ಮಾಲಾರ್ಪಣೆ ಮಾಡುವ ಮೂಲಕ ಕಾರ್ಯಕ್ರಮವನ್ನು ಉದ್ಘಾಟಿಸಿದ್ದಾರೆ. ಸಿಪಿಐ(ಎಂ) ಸೆಂಟ್ರಲ್ ಚೆನ್ನೈ ಕಾರ್ಯದರ್ಶಿ ಜಿ. ಸೆಲ್ವಾ ಅವರು ಲಿಂಗ ಸಮಾನತೆ ನಡಿಗೆಗೆ ಅನುಮತಿ ಕೋರಿದ್ದರು, ಆದರೆ ಚೆನ್ನೈ ಪೊಲೀಸರು ಅದಕ್ಕೆ ನಿರಾಕರಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

“ಲಿಂಗ ಸಮಾನತೆ ನಡಿಗೆಗಾಗಿ ಅರ್ಜಿದಾರರು ಅನುಮತಿ ಕೋರಿರುವ ಮಾರ್ಗವು ಅನುಮೋದಿತ ಮಾರ್ಗವಲ್ಲ. ವಾಹನ ದಟ್ಟಣೆ ಹೆಚ್ಚಿರುವ ಪ್ರಮುಖ ರಸ್ತೆಯಾಗಿರುವ ಈ ಮಾರ್ಗದಲ್ಲಿ ಅರ್ಜಿದಾರರು ಕೋರಿರುವ ಲಿಂಗ ಸಮಾನತೆ ನಡಿಗೆಗೆ ಅನುಮತಿ ನೀಡಿದರೆ ವಾಹನ ಸಂಚಾರಕ್ಕೆ ಹಾಗೂ ಸಾರ್ವಜನಿಕರಿಗೆ ತೊಂದರೆಯಾಗಲಿದೆ. ರಾತ್ರಿ ವೇಳೆ ಪಾದಯಾತ್ರೆ ನಡೆಸಿದರೆ ಕಾನೂನು ಸುವ್ಯವಸ್ಥೆ ಸಮಸ್ಯೆ ಉಂಟಾಗುವ ಸಾಧ್ಯತೆ ಇದೆ ಎಂದು ಅರ್ಜಿದಾರರಿಗೆ ತಿಳಿಸಲಾಗಿದೆ” ಎಂದು ಪೊಲೀಸ್ ಆದೇಶದಲ್ಲಿ ತಿಳಿಸಲಾಗಿದೆ. ಸಿಪಿಐ(ಎಂ)ನ

ಆದಾಗ್ಯೂ, ಸಿಪಿಐಎಂ ರ‍್ಯಾಲಿಯನ್ನು ಕೈಬಿಟ್ಟು ಅಣ್ಣಾ ಸಲೈನಲ್ಲಿ ಸಭೆಯನ್ನು ನಡೆಸಿದ್ದು, ಸಭೆಯಲ್ಲಿ ನೂರಾರು ಜನರು ಸೇರಿದ್ದರು ಎಂದು ವರದಿಯಾಗಿದೆ. ಸಭೆಯಲ್ಲಿ ಕ್ರಾಂತಿಗೀತೆಗಳನ್ನು ಹಾಡಿ ಹಲವಾರು ಕಾರ್ಯಕ್ರಮಗಳನ್ನು ನಡೆಸಲಾಗಿದೆ.

ರ‍್ಯಾಲಿಗೆ ಏಕೆ ಅನುಮತಿ ನಿರಾಕರಿಸಲಾಯಿತು ಎಂಬ ಪ್ರಶ್ನೆಗೆ ತಮಿಳುನಾಡು ಸರ್ಕಾರ ಮತ್ತು ಸಂಬಂಧಪಟ್ಟ ಪೊಲೀಸ್ ಅಧಿಕಾರಿಗಳು ಉತ್ತರಿಸಬೇಕು ಎಂದು ಡೆಮಾಕ್ರಟಿಕ್ ಯೂತ್ ಫೆಡರೇಶನ್ ಆಫ್ ಇಂಡಿಯಾ (ಡಿವೈಎಫ್‌ಐ) ಸೆಂಟ್ರಲ್ ಚೆನ್ನೈ ಸದಸ್ಯ ನಿಖಿಲ್ ದೇವ್ ಹೇಳಿದ್ದಾರೆ.

“ಇದೇ ಚೆನ್ನೈನಲ್ಲಿ, ಹ್ಯಾಪಿ ಸ್ಟ್ರೀಟ್ಸ್ ಕಾರ್ಯಕ್ರಮವನ್ನು ನಡೆಸಲಾಯಿತು, ಆದರೆ ಪೊಲೀಸರು ಅದಕ್ಕೆ ಅನುಮತಿ ನಿರಾಕರಣೆ ಮಾಡಿಲ್ಲ. ರಾತ್ರಿಯಲ್ಲಿ ಸಾಕಷ್ಟು ರೆಸ್ಟೋರೆಂಟ್‌ಗಳು ತೆರೆದಿರುತ್ತವೆ, ಹಾಗಾಗಿ ಮೌಂಟ್ ರೋಡ್‌ನಲ್ಲಿ ಭಾರಿ ದಟ್ಟಣೆಯನ್ನು ಉಂಟಾಗುತ್ತದೆ. ಪೊಲೀಸರು ಆ ಬಗ್ಗೆ ತಲೆ ಕೆಡಿಸಿಕೊಳ್ಳುವುದಿಲ್ಲ, ಆದರೆ ಸಿಪಿಐ(ಎಂ) ಕಾರ್ಯಕ್ರಮ ಆಯೋಜಿಸಿದರೆ ಅದನ್ನು ನಿರಾಕರಿಸುತ್ತಾರೆ” ಎಂದು ಅವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಸರ್ಕಾರವು ಪೆರಿಯಾರ್ ಸಿದ್ಧಾಂತವನ್ನು ಅನುಸರಿಸುತ್ತಿದೆ, ಆದರೂ ಕೂಡಾ ಅನುಮತಿ ನಿರಾಕರಿಸಲಾಗಿದ್ದು ಏಕೆ ಎಂದು ನಿಖಿಲ್ ಪ್ರಶ್ನಿಸಿದ್ದಾರೆ. “ಈ ಮೆರವಣಿಗೆ ಸಾಮಾನ್ಯ ಕಾರಣಕ್ಕಾಗಿ ನಡೆಯುತ್ತಿದೆ. ಸಮಾಜದಲ್ಲಿ ಲಿಂಗ ರಾಜಕೀಯವು ಬಹಳ ಮುಖ್ಯವಾಗಿದ್ದು, ಅಲ್ಲಿ ಮಹಿಳೆಯರು ಮತ್ತು ಟ್ರಾನ್ಸ್‌ಜೆಂಡರ್‌ ವ್ಯಕ್ತಿಗಳನ್ನು ಸರಿಯಾಗಿ ನಡೆಸಿಕೊಳ್ಳಲಾಗುತ್ತಿಲ್ಲ. ಮಹಿಳೆಯರ ಮೇಲೆ ಅಪರಾಧಗಳು ಮತ್ತು ದೌರ್ಜನ್ಯಗಳು ನಡೆಯುತ್ತಿವೆ. ರಾಜಕೀಯ ಪಕ್ಷವಾಗಿ, ನಾವು ರಾತ್ರಿ ಎಲ್ಲರಿಗೂ ಎಂದು ಸಮಾಜಕ್ಕೆ ನೆನಪಿಸಲು ಬಯಸುತ್ತೇವೆ” ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ: 2019 ರಲ್ಲಿ ಅಪಘಾತ; 5 ವರ್ಷಗಳ ನಂತರ ₹31ಲಕ್ಷ ಪರಿಹಾರ ಘೋಷಿಸಿದ ಮೋಟಾರು ಅಪಘಾತ ಹಕ್ಕುಗಳ ನ್ಯಾಯಮಂಡಳಿ

ಇದನ್ನೂ ಓದಿ: 2019 ರಲ್ಲಿ ಅಪಘಾತ; 5 ವರ್ಷಗಳ ನಂತರ ₹31ಲಕ್ಷ ಪರಿಹಾರ ಘೋಷಿಸಿದ ಮೋಟಾರು ಅಪಘಾತ ಹಕ್ಕುಗಳ ನ್ಯಾಯಮಂಡಳಿ

2019 ರಲ್ಲಿ ಅಪಘಾತ; 5 ವರ್ಷಗಳ ನಂತರ ₹31ಲಕ್ಷ ಪರಿಹಾರ ಘೋಷಿಸಿದ ಮೋಟಾರು ಅಪಘಾತ ಹಕ್ಕುಗಳ ನ್ಯಾಯಮಂಡಳಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವಿಬಿ-ಜಿ ರಾಮ್ ಜಿ ಮಸೂದೆಗೆ ರಾಷ್ಟ್ರಪತಿ ಅಂಕಿತ

ಮಹಾತ್ಮ ಗಾಂಧಿ ರಾಷ್ಟ್ರೀಯ ಉದ್ಯೋಗ ಖಾತರಿ ಕಾಯ್ದೆಯ (ಎಂಜಿಎನ್‌ಆರ್‌ಇಜಿಎ) ಹೆಸರು ಮತ್ತು ನಿಬಂಧನಗೆಳನ್ನು ಬದಲಿಸುವ ವಿಕಸಿತ್ ಭಾರತ್ ಗ್ಯಾರಂಟಿ ಫಾರ್ ರೋಝ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್),2025 (ವಿಬಿ-ಜಿ ರಾಮ್‌ ಜಿ) ಮಸೂದೆಗೆ...

ಪ್ರೀತಿಸಿ ಮದುವೆಯಾಗಿ ಕೇವಲ 8 ತಿಂಗಳು : ವರದಕ್ಷಿಣೆಗಾಗಿ ಹೆಂಡತಿಯನ್ನು ಹೊಡೆದು ಕೊಂದ ಗಂಡ!

ಮದುವೆಯಾಗಿ ಎಂಟು ತಿಂಗಳಿಗೆ ಗಂಡ ಹೆಂಡತಿಯನ್ನು ಮನೆ ಅಂಗಳದಲ್ಲೇ ಹೊಡೆದು ಕೊಂದ ಹೃದಯವಿದ್ರಾವಕ ಘಟನೆ ತೆಲಂಗಾಣದ ವಿಕಾರಬಾದ್ ಜಿಲ್ಲೆಯ ತಂಡೂರ್‌ನಲ್ಲಿ ನಡೆದಿದೆ. ಅನುಷಾ (22) ಕೊಲೆಯಾದ ಹೆಣ್ಣು ಮಗಳು. ಗಂಡ ಪರಮೇಶ್ (28) ವಿರುದ್ದ...

ಬಾಂಗ್ಲಾದೇಶದ ಚಿತ್ತಗಾಂಗ್‌ನಲ್ಲಿ ಭಾರತೀಯ ವೀಸಾ ಅರ್ಜಿಗಳನ್ನು ಅನಿರ್ದಿಷ್ಟಾವಧಿಗೆ ಸ್ಥಗಿತಗೊಳಿಸಲಾಗಿದೆ

ಢಾಕಾ: ಬಾಂಗ್ಲಾದೇಶದ ಪ್ರಮುಖ ಯುವ ನಾಯಕ ಷರೀಫ್ ಉಸ್ಮಾನ್ ಹಾದಿ ಅವರ ನಿಧನದ ನಂತರ ಹೆಚ್ಚಿದ ಉದ್ವಿಗ್ನತೆಯ ಹಿನ್ನೆಲೆಯಲ್ಲಿ, ಬಾಂಗ್ಲಾದೇಶದ ಎರಡನೇ ಅತಿದೊಡ್ಡ ನಗರ ಚಿತ್ತಗಾಂಗ್‌ನಲ್ಲಿರುವ ಭಾರತೀಯ ವೀಸಾ ಅರ್ಜಿ ಕೇಂದ್ರದಲ್ಲಿ ವೀಸಾ...

ತೀವ್ರ ವಿರೋಧಗಳ ನಡುವೆ ಗಣರಾಜ್ಯೋತ್ಸವ ಆಚರಣೆಯಲ್ಲಿ ‘ವಂದೇ ಮಾತರಂ’ ಹಾಡಲು ನಿರ್ಧರಿಸಿದ ಕೇಂದ್ರ ಸರ್ಕಾರ 

ಗಣರಾಜ್ಯೋತ್ಸವದ ಸಂದರ್ಭದಲ್ಲಿ 'ವಂದೇ ಮಾತರಂ' ಗೀತೆಯನ್ನು ಪ್ರಧಾನವಾಗಿ ಹಾಡಲು ಕೇಂದ್ರ ಸರ್ಕಾರ ನಿರ್ಧರಿಸಿದ್ದು, ಯುರೋಪಿಯನ್ ಒಕ್ಕೂಟದ ನಾಯಕರಾದ ಉರ್ಸುಲಾ ವಾನ್ ಡೆರ್ ಲೇಯೆನ್ ಮತ್ತು ಆಂಟೋನಿಯೊ ಕೋಸ್ಟಾ ಮುಂದಿನ ತಿಂಗಳು ಭಾರತಕ್ಕೆ ಆಗಮಿಸುವ...

ಅಣು ವಿದ್ಯುತ್ ಯೋಜನೆ ಕುರಿತು ಯುಪಿ ಸರ್ಕಾರದೊಂದಿಗೆ ಅದಾನಿ ಗ್ರೂಪ್ ಮಾತುಕತೆ: ವರದಿ

ಭಾರತದ ಅಣು ವಿದ್ಯುತ್ ಕ್ಷೇತ್ರದಲ್ಲಿ ಖಾಸಗಿ ವಲಯದ ಪ್ರವೇಶಕ್ಕೆ ದಾರಿ ಮಾಡಿಕೊಡುವ, ‘ಭಾರತದ ಪ್ರಗತಿಗಾಗಿ ಅಣು ಶಕ್ತಿಯ ಸುಸ್ಥಿರ ಉತ್ಪಾದನೆ (ಎಸ್‌ಎಚ್‌ಎಎನ್‌ಟಿಐ– ಶಾಂತಿ ಮಸೂದೆ) ಮಸೂದೆಯನ್ನು ಲೋಕಸಭೆ ಬುಧವಾರ (ಡಿ.17) ಅಂಗೀಕರಿಸಿದೆ. ಈ ಬೆನ್ನಲ್ಲೇ...

ಅನಧಿಕೃತ ಬುದ್ಧಿಮಾಂದ್ಯ ಶಾಲೆಯಲ್ಲಿ ಬುದ್ಧಿಮಾಂದ್ಯ ಬಾಲಕನ ಮೇಲೆ ಅಮಾನವೀಯ ಹಲ್ಲೆ: ದಂಪತಿಯನ್ನು ವಶಕ್ಕೆ ಪಡೆದ ಪೊಲೀಸರು

ಬಾಗಲಕೋಟೆ: ಬಾಗಲಕೋಟೆಯ ಅನಧಿಕೃತ ದಿವ್ಯಜ್ಯೋತಿ ಬುದ್ಧಿಮಾಂದ್ಯ ಶಾಲೆಯಲ್ಲಿ ಶಿಕ್ಷಕ ದಂಪತಿ ಬುದ್ಧಿಮಾಂದ್ಯನ ಮೇಲೆ ಅಮಾನವೀಯವಾಗಿ ಹಲ್ಲೆ ನಡೆಸಿದ್ದು, ವೀಡಿಯೋ ವೈರಲ್ ಆದ ಬೆನ್ನಲ್ಲೇ ಘಟನೆಗೆ ಆಕ್ರೋಶಗಳು ವ್ಯಕ್ತವಾಗುತ್ತಿವೆ. ಮುಧೋಳ ತಾಲೂಕಿನ ಮಂಟೂರು ಗ್ರಾಮದ 16...

ಜೆಫ್ರಿ ಎಪ್‌ಸ್ಟೀನ್ ಫೈಲ್ಸ್: ನ್ಯಾಯಾಂಗ ಇಲಾಖೆಯ ವೆಬ್ ಪುಟದಿಂದ ಟ್ರಂಪ್ ಫೋಟೋ ಸೇರಿದಂತೆ 16 ದಾಖಲೆಗಳು ಕಣ್ಮರೆ 

ನ್ಯೂಯಾರ್ಕ್: ಜೆಫ್ರಿ ಎಪ್‌ಸ್ಟೀನ್ ಗೆ ಸಂಬಂಧಿಸಿದ ದಾಖಲೆಗಳಿರುವ ಅಮೆರಿಕದ ನ್ಯಾಯ ಇಲಾಖೆಯ (Justice Department) ಸಾರ್ವಜನಿಕ ವೆಬ್‌ಪುಟದಿಂದ ಅಮೆರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಫೋಟೋ ಸೇರಿದಂತೆ ಕನಿಷ್ಟ 16 ದಾಖಲೆಗಳು ನಾಪತ್ತೆಯಾಗಿರುವುದಾಗಿ ತಿಳಿದುಬಂದಿದೆ. ಅಪ್ರಾಪ್ತ...

ಬಾಂಗ್ಲಾದೇಶದಲ್ಲಿ ಮುಂದುವರಿದ ಹಿಂಸಾಚಾರ| ಬಿಎನ್‌ಪಿ ನಾಯಕನ ಮನೆಗೆ ಬೆಂಕಿ : 7 ವರ್ಷದ ಮಗಳು ಸಜೀವ ದಹನ

ವಿದ್ಯಾರ್ಥಿ ನಾಯಕ ಹಾಗೂ ಸ್ವತಂತ್ರ ರಾಜಕಾರಣಿ ಷರೀಫ್ ಉಸ್ಮಾನ್ ಹಾದಿ ಅವರ ಸಾವಿನ ಬಳಿಕ ಬಾಂಗ್ಲಾ ದೇಶದಲ್ಲಿ ಭುಗಿಲೆದ್ದಿರುವ ಹಿಂಸಾಚಾರ ತೀವ್ರ ಸ್ವರೂಪ ಪಡೆದುಕೊಂಡಿದೆ. ಹಿಂಸಾತ್ಮಕ ಪ್ರತಿಭಟನೆಯ ಮೂರನೇ ದಿನವಾದ ಶನಿವಾರ, ಪ್ರತಿಭಟನಾಕಾರರು ಬಾಂಗ್ಲಾದೇಶ್...

ದಕ್ಷಿಣ ಆಫ್ರಿಕಾದಲ್ಲಿ ಸಾರ್ವಜನಿಕರ ಮೇಲೆ ದಾಳಿಕೋರರು ನಡೆಸಿದ ಗುಂಡಿನ ದಾಳಿಯಲ್ಲಿ 9 ಜನರ ಸಾವು 

ಜೋಹಾನ್ಸ್‌ಬರ್ಗ್‌ನ ಹೊರಗಿನ ಬಾರ್‌ನಲ್ಲಿ ಭಾನುವಾರ ಮುಂಜಾನೆ ಅಪರಿಚಿತ ಬಂದೂಕುಧಾರಿಗಳು ನಡೆಸಿದ ಗುಂಡಿನ ದಾಳಿಯಲ್ಲಿ ಒಂಬತ್ತು ಜನರು ಸಾವನ್ನಪ್ಪಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಈ ತಿಂಗಳು ದಕ್ಷಿಣ ಆಫ್ರಿಕಾದಲ್ಲಿ ನಡೆದ ಎರಡನೇ ಗುಂಡಿನ ದಾಳಿ...

ಬೆಂಗಳೂರು : ಜಿಬಿಎ ಅಧಿಕಾರಿಗಳಿಂದ 200ರಷ್ಟು ಮನೆಗಳ ನೆಲಸಮ : ಬೀದಿಗೆ ಬಿದ್ದ ಬಡ ಜನರು

ಅತಿಕ್ರಮಣ ಆರೋಪದ ಮೇಲೆ ಗ್ರೇಟರ್ ಬೆಂಗಳೂರು ಪ್ರಾಧಿಕಾರದ (ಜಿಬಿಎ) ಅಧಿಕಾರಿಗಳು ಬೆಂಗಳೂರು ಉತ್ತರ ನಗರ ಪಾಲಿಕೆ ವ್ಯಾಪ್ತಿಯ ಕೋಗಿಲು ಬಂಡೆ ಬಳಿಯ 5 ಎಕರೆ ಜಾಗದಲ್ಲಿದ್ದ ಸುಮಾರು 200ರಷ್ಟು ಮನೆಗಳನ್ನು ಶನಿವಾರ (ಡಿ.20)...