Homeಮುಖಪುಟಸಿಪಿಐ(ಎಂ)ನ ಲಿಂಗಸಮಾನತೆ ಪರ ರ‍್ಯಾಲಿಗೆ ಅನುಮತಿ ನಿರಾಕರಿಸಿ ಚೆನ್ನೈ ಪೊಲೀಸ್

ಸಿಪಿಐ(ಎಂ)ನ ಲಿಂಗಸಮಾನತೆ ಪರ ರ‍್ಯಾಲಿಗೆ ಅನುಮತಿ ನಿರಾಕರಿಸಿ ಚೆನ್ನೈ ಪೊಲೀಸ್

- Advertisement -
- Advertisement -

ನವೆಂಬರ್ 16ರ ಶನಿವಾರದಂದು ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ (ಮಾರ್ಕ್ಸ್‌ವಾದಿ) ಆಯೋಜಿಸಿದ್ದ ಲಿಂಗ ಸಮಾನತೆ ಪರ ಮೆರವಣಿಗೆಗೆ ಟ್ರಾಫಿಕ್ ಅಡೆತಡೆಗಳನ್ನು ಉಲ್ಲೇಖಿಸಿ ಚೆನ್ನೈ ಪೊಲೀಸರು ಅನುಮತಿ ನಿರಾಕರಿಸಿದ್ದಾರೆ. ಲಿಂಗ ತಟಸ್ಥ ಸಮಾಜದ ಮಹತ್ವವನ್ನು ಒತ್ತಿಹೇಳಲು ಸಿಪಿಐ(ಎಂ) ರಾತ್ರಿ 10 ಗಂಟೆಗೆ ಅಣ್ಣಾ ಸಲೈನಲ್ಲಿರುವ ಪೆರಿಯಾರ್ ಪ್ರತಿಮೆಯಿಂದ ಮರೀನಾ ಬೀಚ್‌ನಲ್ಲಿರುವ ಕಾರ್ಮಿಕ ಪ್ರತಿಮೆಯವರೆಗೆ ಮಧ್ಯರಾತ್ರಿ ರ್ಯಾಲಿಯನ್ನು ಆಯೋಜಿಸಿತ್ತು. 2022ರಲ್ಲಿ ಕೂಡಾ ಸಿಪಿಐ(ಎಂ) ‘ರಾತ್ರಿ ನಮ್ಮದು’ ಎಂಬ ವಿಷಯದೊಂದಿಗೆ ಇದೇ ರೀತಿಯ ರ‍್ಯಾಲಿಯನ್ನು ನಡೆಸಿತ್ತು. ಸಿಪಿಐ(ಎಂ)ನ

ನವೆಂಬರ್ 16ರ ಶನಿವಾರ, ತಮಿಳುನಾಡು ಸೆಂಟರ್ ಆಫ್ ಇಂಡಿಯನ್ ಟ್ರೇಡ್ ಯೂನಿಯನ್ಸ್ (ಸಿಐಟಿಯು) ಅಧ್ಯಕ್ಷ ಎ ಸೌಂದರಾಜನ್ ಮತ್ತು ನಟಿ ರೋಹಿಣಿ ಮೊಲ್ಲೇಟಿ ಅವರು ಪೆರಿಯಾರ್ ಪ್ರತಿಮೆಗೆ ಮಾಲಾರ್ಪಣೆ ಮಾಡುವ ಮೂಲಕ ಕಾರ್ಯಕ್ರಮವನ್ನು ಉದ್ಘಾಟಿಸಿದ್ದಾರೆ. ಸಿಪಿಐ(ಎಂ) ಸೆಂಟ್ರಲ್ ಚೆನ್ನೈ ಕಾರ್ಯದರ್ಶಿ ಜಿ. ಸೆಲ್ವಾ ಅವರು ಲಿಂಗ ಸಮಾನತೆ ನಡಿಗೆಗೆ ಅನುಮತಿ ಕೋರಿದ್ದರು, ಆದರೆ ಚೆನ್ನೈ ಪೊಲೀಸರು ಅದಕ್ಕೆ ನಿರಾಕರಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

“ಲಿಂಗ ಸಮಾನತೆ ನಡಿಗೆಗಾಗಿ ಅರ್ಜಿದಾರರು ಅನುಮತಿ ಕೋರಿರುವ ಮಾರ್ಗವು ಅನುಮೋದಿತ ಮಾರ್ಗವಲ್ಲ. ವಾಹನ ದಟ್ಟಣೆ ಹೆಚ್ಚಿರುವ ಪ್ರಮುಖ ರಸ್ತೆಯಾಗಿರುವ ಈ ಮಾರ್ಗದಲ್ಲಿ ಅರ್ಜಿದಾರರು ಕೋರಿರುವ ಲಿಂಗ ಸಮಾನತೆ ನಡಿಗೆಗೆ ಅನುಮತಿ ನೀಡಿದರೆ ವಾಹನ ಸಂಚಾರಕ್ಕೆ ಹಾಗೂ ಸಾರ್ವಜನಿಕರಿಗೆ ತೊಂದರೆಯಾಗಲಿದೆ. ರಾತ್ರಿ ವೇಳೆ ಪಾದಯಾತ್ರೆ ನಡೆಸಿದರೆ ಕಾನೂನು ಸುವ್ಯವಸ್ಥೆ ಸಮಸ್ಯೆ ಉಂಟಾಗುವ ಸಾಧ್ಯತೆ ಇದೆ ಎಂದು ಅರ್ಜಿದಾರರಿಗೆ ತಿಳಿಸಲಾಗಿದೆ” ಎಂದು ಪೊಲೀಸ್ ಆದೇಶದಲ್ಲಿ ತಿಳಿಸಲಾಗಿದೆ. ಸಿಪಿಐ(ಎಂ)ನ

ಆದಾಗ್ಯೂ, ಸಿಪಿಐಎಂ ರ‍್ಯಾಲಿಯನ್ನು ಕೈಬಿಟ್ಟು ಅಣ್ಣಾ ಸಲೈನಲ್ಲಿ ಸಭೆಯನ್ನು ನಡೆಸಿದ್ದು, ಸಭೆಯಲ್ಲಿ ನೂರಾರು ಜನರು ಸೇರಿದ್ದರು ಎಂದು ವರದಿಯಾಗಿದೆ. ಸಭೆಯಲ್ಲಿ ಕ್ರಾಂತಿಗೀತೆಗಳನ್ನು ಹಾಡಿ ಹಲವಾರು ಕಾರ್ಯಕ್ರಮಗಳನ್ನು ನಡೆಸಲಾಗಿದೆ.

ರ‍್ಯಾಲಿಗೆ ಏಕೆ ಅನುಮತಿ ನಿರಾಕರಿಸಲಾಯಿತು ಎಂಬ ಪ್ರಶ್ನೆಗೆ ತಮಿಳುನಾಡು ಸರ್ಕಾರ ಮತ್ತು ಸಂಬಂಧಪಟ್ಟ ಪೊಲೀಸ್ ಅಧಿಕಾರಿಗಳು ಉತ್ತರಿಸಬೇಕು ಎಂದು ಡೆಮಾಕ್ರಟಿಕ್ ಯೂತ್ ಫೆಡರೇಶನ್ ಆಫ್ ಇಂಡಿಯಾ (ಡಿವೈಎಫ್‌ಐ) ಸೆಂಟ್ರಲ್ ಚೆನ್ನೈ ಸದಸ್ಯ ನಿಖಿಲ್ ದೇವ್ ಹೇಳಿದ್ದಾರೆ.

“ಇದೇ ಚೆನ್ನೈನಲ್ಲಿ, ಹ್ಯಾಪಿ ಸ್ಟ್ರೀಟ್ಸ್ ಕಾರ್ಯಕ್ರಮವನ್ನು ನಡೆಸಲಾಯಿತು, ಆದರೆ ಪೊಲೀಸರು ಅದಕ್ಕೆ ಅನುಮತಿ ನಿರಾಕರಣೆ ಮಾಡಿಲ್ಲ. ರಾತ್ರಿಯಲ್ಲಿ ಸಾಕಷ್ಟು ರೆಸ್ಟೋರೆಂಟ್‌ಗಳು ತೆರೆದಿರುತ್ತವೆ, ಹಾಗಾಗಿ ಮೌಂಟ್ ರೋಡ್‌ನಲ್ಲಿ ಭಾರಿ ದಟ್ಟಣೆಯನ್ನು ಉಂಟಾಗುತ್ತದೆ. ಪೊಲೀಸರು ಆ ಬಗ್ಗೆ ತಲೆ ಕೆಡಿಸಿಕೊಳ್ಳುವುದಿಲ್ಲ, ಆದರೆ ಸಿಪಿಐ(ಎಂ) ಕಾರ್ಯಕ್ರಮ ಆಯೋಜಿಸಿದರೆ ಅದನ್ನು ನಿರಾಕರಿಸುತ್ತಾರೆ” ಎಂದು ಅವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಸರ್ಕಾರವು ಪೆರಿಯಾರ್ ಸಿದ್ಧಾಂತವನ್ನು ಅನುಸರಿಸುತ್ತಿದೆ, ಆದರೂ ಕೂಡಾ ಅನುಮತಿ ನಿರಾಕರಿಸಲಾಗಿದ್ದು ಏಕೆ ಎಂದು ನಿಖಿಲ್ ಪ್ರಶ್ನಿಸಿದ್ದಾರೆ. “ಈ ಮೆರವಣಿಗೆ ಸಾಮಾನ್ಯ ಕಾರಣಕ್ಕಾಗಿ ನಡೆಯುತ್ತಿದೆ. ಸಮಾಜದಲ್ಲಿ ಲಿಂಗ ರಾಜಕೀಯವು ಬಹಳ ಮುಖ್ಯವಾಗಿದ್ದು, ಅಲ್ಲಿ ಮಹಿಳೆಯರು ಮತ್ತು ಟ್ರಾನ್ಸ್‌ಜೆಂಡರ್‌ ವ್ಯಕ್ತಿಗಳನ್ನು ಸರಿಯಾಗಿ ನಡೆಸಿಕೊಳ್ಳಲಾಗುತ್ತಿಲ್ಲ. ಮಹಿಳೆಯರ ಮೇಲೆ ಅಪರಾಧಗಳು ಮತ್ತು ದೌರ್ಜನ್ಯಗಳು ನಡೆಯುತ್ತಿವೆ. ರಾಜಕೀಯ ಪಕ್ಷವಾಗಿ, ನಾವು ರಾತ್ರಿ ಎಲ್ಲರಿಗೂ ಎಂದು ಸಮಾಜಕ್ಕೆ ನೆನಪಿಸಲು ಬಯಸುತ್ತೇವೆ” ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ: 2019 ರಲ್ಲಿ ಅಪಘಾತ; 5 ವರ್ಷಗಳ ನಂತರ ₹31ಲಕ್ಷ ಪರಿಹಾರ ಘೋಷಿಸಿದ ಮೋಟಾರು ಅಪಘಾತ ಹಕ್ಕುಗಳ ನ್ಯಾಯಮಂಡಳಿ

ಇದನ್ನೂ ಓದಿ: 2019 ರಲ್ಲಿ ಅಪಘಾತ; 5 ವರ್ಷಗಳ ನಂತರ ₹31ಲಕ್ಷ ಪರಿಹಾರ ಘೋಷಿಸಿದ ಮೋಟಾರು ಅಪಘಾತ ಹಕ್ಕುಗಳ ನ್ಯಾಯಮಂಡಳಿ

2019 ರಲ್ಲಿ ಅಪಘಾತ; 5 ವರ್ಷಗಳ ನಂತರ ₹31ಲಕ್ಷ ಪರಿಹಾರ ಘೋಷಿಸಿದ ಮೋಟಾರು ಅಪಘಾತ ಹಕ್ಕುಗಳ ನ್ಯಾಯಮಂಡಳಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರ ಸಚಿವ ಬಂಡಿ ಸಂಜಯ್ ಮಗನ ವಿರುದ್ಧ ಪೋಕ್ಸೋ ಕೇಸ್ : ಕ್ರಮ ಕೈಗೊಳ್ಳದೆ ಕಥೆ ಹೇಳುತ್ತಿರುವ ಪೊಲೀಸರು, ಅಂತರ ಕಾಯ್ದುಕೊಂಡ ಬಿಜೆಪಿ

ಕೇಂದ್ರ ಗೃಹ ವ್ಯವಹಾರಗಳ ರಾಜ್ಯ ಸಚಿವ, ತೆಲಂಗಾಣದ ಪ್ರಮುಖ ಬಿಜೆಪಿ ನಾಯಕ ಬಂಡಿ ಸಂಜಯ್ ಕುಮಾರ್ ಅವರ ಮಗ ಬಂಡಿ ಸಾಯಿ ಭಗೀರತ್ ವಿರುದ್ಧ 17 ವರ್ಷದ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಲ್ಲಿ ಪೋಕ್ಸೋ...

ಶಾಲೆ, ಪೂಜಾ ಸ್ಥಳ, ಬಸ್ ನಿಲ್ದಾಣಗಳ ಬಳಿ ಇರುವ 717 ಮದ್ಯದಂಗಡಿಗಳನ್ನು ಮುಚ್ಚಲು ತಮಿಳುನಾಡು ಸಿಎಂ ಜೋಸೆಫ್ ವಿಜಯ್ ಆದೇಶ 

ಅಧಿಕಾರ ವಹಿಸಿಕೊಂಡ ನಂತರ ತಮ್ಮ ಮೊದಲ ಪ್ರಮುಖ ಆಡಳಿತಾತ್ಮಕ ನಿರ್ದೇಶನದಲ್ಲಿ, ಸಿ. ಜೋಸೆಫ್ ವಿಜಯ್ ಸೋಮವಾರ, ತಮಿಳುನಾಡು ಸರ್ಕಾರವು ಪೂಜಾ ಸ್ಥಳಗಳು, ಶಿಕ್ಷಣ ಸಂಸ್ಥೆಗಳು ಮತ್ತು ಬಸ್ ನಿಲ್ದಾಣಗಳಿಂದ 500 ಮೀಟರ್ ಒಳಗೆ...

FACT CHECK: ಭಾರತೀಯರು ಚಿನ್ನ ಖರೀದಿಸಬೇಡಿ ಎಂದು 1967ರಲ್ಲೇ ಇಂದಿರಾ ಗಾಂಧಿ ಹೇಳಿದ್ರಾ?

ಪ್ರಧಾನಿ ನರೇಂದ್ರ ಮೋದಿಯವರು ಇತ್ತೀಚೆಗೆ ತೆಲಂಗಾಣದ ಸಿಕಂದರಾಬಾದ್ ರ‍್ಯಾಲಿಯಲ್ಲಿ ಮಾತನಾಡುತ್ತಾ, ಆರ್ಥಿಕ ಬಿಕ್ಕಟ್ಟು ತಪ್ಪಿಸಲು "ಒಂದು ವರ್ಷ ಚಿನ್ನ ಖರೀದಿಸಬೇಡಿ" ಎಂದು ಜನರಲ್ಲಿ ಮನವಿ ಮಾಡಿದ್ದರು. ಇದರ ಬೆನ್ನಲ್ಲೇ, 1967ರಲ್ಲಿ ಅಂದಿನ ಪ್ರಧಾನಿ...

ಪಶ್ಚಿಮ ಬಂಗಾಳ| ಧ್ವನಿವರ್ಧಕಗಳ ನಿಯಂತ್ರಣಕ್ಕೆ ಆದೇಶಿಸಿದ ನೂತನ ಸಿಎಂ ಅಧಿಕಾರಿ; ಧಾರ್ಮಿಕ ಸಭೆ ನೆಪದಲ್ಲಿ ರಸ್ತೆ ತಡೆಗೆ ನಿಷೇಧ

ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ನೇತೃತ್ವದ ಸರ್ಕಾರವು ಧಾರ್ಮಿಕ ಸ್ಥಳಗಳಲ್ಲಿ ಧ್ವನಿವರ್ಧಕಗಳ ಬಳಕೆಯನ್ನು ನಿಯಂತ್ರಿಸಲು ಮತ್ತು ಪ್ರಾರ್ಥನೆ ಅಥವಾ ಧಾರ್ಮಿಕ ಸಭೆ ನೆಪದಲ್ಲಿ ಸಾರ್ವಜನಿಕ ರಸ್ತೆಗಳನ್ನು ನಿರ್ಬಂಧಿಸದಂತೆ ನೋಡಿಕೊಳ್ಳಲು ಪೊಲೀಸ್ ಅಧಿಕಾರಿಗಳಿಗೆ ಹೊಸ ಸೂಚನೆಗಳನ್ನು...

ರಾಜಸ್ಥಾನದಲ್ಲಿ ನೀಟ್‌-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ; ಸಿಬಿಐ ತನಿಖೆಗೆ ಆದೇಶಿಸಿದ ಸರ್ಕಾರ

ಮೇ 3 ರಂದು ನಡೆಸಲಾದ ನೀಟ್ (ಯುಜಿ) 2026 ಅನ್ನು ರದ್ದುಗೊಳಿಸುವುದಾಗಿ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ) ಮಂಗಳವಾರ (ಮೇ 12) ಘೋಷಿಸಿದೆ. ಪ್ರತ್ಯೇಕವಾಗಿ ತಿಳಿಸಲಾಗುವ ದಿನಾಂಕಗಳಲ್ಲಿ ಮರು ಪರೀಕ್ಷೆಯನ್ನು ನಡೆಸಲಾಗುವುದು, ಪರೀಕ್ಷೆಗೆ...

ಇತ್ಯರ್ಥವಾಗದ ಚುನಾವಣಾ ತಕರಾರು : ಮತ ಹಾಕಿದ ಜನರಿಗೆ ದಿನಕ್ಕೊಬ್ಬ ಶಾಸಕ

ರಾಜ್ಯದಲ್ಲಿ ಪ್ರಸ್ತುತ ಆಡಳಿತ ನಡೆಸುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಮೂರು ವರ್ಷಗಳನ್ನು ಪೂರೈಸಿದೆ. ಚುನಾವಣೆ ನಡೆಯಲು ಇನ್ನು ಎರಡು ವರ್ಷಗಳು ಬಾಕಿಯಿದೆ. ಅಂದರೆ, ಸರ್ಕಾರದ ಐದು ವರ್ಷಗಳ ಅವಧಿಯಲ್ಲಿ ಮುಕ್ಕಾಲು...

“ಸನಾತನವನ್ನು ನಿರ್ಮೂಲನೆ ಮಾಡಬೇಕು…”; ವಿಧಾನಸಭೆಯಲ್ಲೇ ತನ್ನ ಹಿಂದಿನ ಹೇಳಿಕೆ ಪುನರುಚ್ಚರಿಸಿದ ಉದಯನಿಧಿ ಸ್ಟಾಲಿನ್

ತಮಿಳುನಾಡು ವಿರೋಧ ಪಕ್ಷದ ನಾಯಕ ಮತ್ತು ಡಿಎಂಕೆ ನಾಯಕ ಉದಯನಿಧಿ ಸ್ಟಾಲಿನ್ ಮಂಗಳವಾರ ತಮಿಳುನಾಡು ವಿಧಾನಸಭೆಯಲ್ಲಿ ನಡೆದ ಅಧಿವೇಶನದಲ್ಲಿ, ಸನಾತನ ಧರ್ಮದ ನಿರ್ಮೂಲನೆಗೆ ಮತ್ತೊಮ್ಮೆ ಕರೆ ನೀಡಿದ್ದಾರೆ. ಸದನದಲ್ಲಿ ಮಾತನಾಡಿದ ಅವರು, "ಜನರನ್ನು ವಿಭಜಿಸುವ...

‘ಅಮೃತಕಾಲ’ದ ಸ್ವಪ್ನದಿಂದ ‘ಬಿಕ್ಕಟ್ಟಿನ ಕಾಲ’ಕ್ಕೆ: ಕಳಚಿಕೊಳ್ಳುತ್ತಿರುವ ಮೋದಿಯವರ ‘ಆತ್ಮನಿರ್ಭರ’ ಮುಖವಾಡ 

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗೂ ಮುನ್ನ ದೇಶವು ಎಲ್‌ಪಿಜಿ ಸಿಲಿಂಡರ್‌ಗಳ ಕೊರತೆಯಿಂದ ಬಳಲುತ್ತಿದ್ದಾಗ, ಬಿಜೆಪಿ ನಾಯಕರು ಮತ್ತು ಕೇಂದ್ರ ಸರ್ಕಾರದ ಮಂತ್ರಿಗಳು ಮೋದಿಯವರ ‘ದಯೆ’ಯಿಂದ ಭಾರತಕ್ಕೆ ಯಾವುದೇ...

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...