Homeಮುಖಪುಟಸಿಪಿಐ(ಎಂ)ನ ಲಿಂಗಸಮಾನತೆ ಪರ ರ‍್ಯಾಲಿಗೆ ಅನುಮತಿ ನಿರಾಕರಿಸಿ ಚೆನ್ನೈ ಪೊಲೀಸ್

ಸಿಪಿಐ(ಎಂ)ನ ಲಿಂಗಸಮಾನತೆ ಪರ ರ‍್ಯಾಲಿಗೆ ಅನುಮತಿ ನಿರಾಕರಿಸಿ ಚೆನ್ನೈ ಪೊಲೀಸ್

- Advertisement -
- Advertisement -

ನವೆಂಬರ್ 16ರ ಶನಿವಾರದಂದು ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ (ಮಾರ್ಕ್ಸ್‌ವಾದಿ) ಆಯೋಜಿಸಿದ್ದ ಲಿಂಗ ಸಮಾನತೆ ಪರ ಮೆರವಣಿಗೆಗೆ ಟ್ರಾಫಿಕ್ ಅಡೆತಡೆಗಳನ್ನು ಉಲ್ಲೇಖಿಸಿ ಚೆನ್ನೈ ಪೊಲೀಸರು ಅನುಮತಿ ನಿರಾಕರಿಸಿದ್ದಾರೆ. ಲಿಂಗ ತಟಸ್ಥ ಸಮಾಜದ ಮಹತ್ವವನ್ನು ಒತ್ತಿಹೇಳಲು ಸಿಪಿಐ(ಎಂ) ರಾತ್ರಿ 10 ಗಂಟೆಗೆ ಅಣ್ಣಾ ಸಲೈನಲ್ಲಿರುವ ಪೆರಿಯಾರ್ ಪ್ರತಿಮೆಯಿಂದ ಮರೀನಾ ಬೀಚ್‌ನಲ್ಲಿರುವ ಕಾರ್ಮಿಕ ಪ್ರತಿಮೆಯವರೆಗೆ ಮಧ್ಯರಾತ್ರಿ ರ್ಯಾಲಿಯನ್ನು ಆಯೋಜಿಸಿತ್ತು. 2022ರಲ್ಲಿ ಕೂಡಾ ಸಿಪಿಐ(ಎಂ) ‘ರಾತ್ರಿ ನಮ್ಮದು’ ಎಂಬ ವಿಷಯದೊಂದಿಗೆ ಇದೇ ರೀತಿಯ ರ‍್ಯಾಲಿಯನ್ನು ನಡೆಸಿತ್ತು. ಸಿಪಿಐ(ಎಂ)ನ

ನವೆಂಬರ್ 16ರ ಶನಿವಾರ, ತಮಿಳುನಾಡು ಸೆಂಟರ್ ಆಫ್ ಇಂಡಿಯನ್ ಟ್ರೇಡ್ ಯೂನಿಯನ್ಸ್ (ಸಿಐಟಿಯು) ಅಧ್ಯಕ್ಷ ಎ ಸೌಂದರಾಜನ್ ಮತ್ತು ನಟಿ ರೋಹಿಣಿ ಮೊಲ್ಲೇಟಿ ಅವರು ಪೆರಿಯಾರ್ ಪ್ರತಿಮೆಗೆ ಮಾಲಾರ್ಪಣೆ ಮಾಡುವ ಮೂಲಕ ಕಾರ್ಯಕ್ರಮವನ್ನು ಉದ್ಘಾಟಿಸಿದ್ದಾರೆ. ಸಿಪಿಐ(ಎಂ) ಸೆಂಟ್ರಲ್ ಚೆನ್ನೈ ಕಾರ್ಯದರ್ಶಿ ಜಿ. ಸೆಲ್ವಾ ಅವರು ಲಿಂಗ ಸಮಾನತೆ ನಡಿಗೆಗೆ ಅನುಮತಿ ಕೋರಿದ್ದರು, ಆದರೆ ಚೆನ್ನೈ ಪೊಲೀಸರು ಅದಕ್ಕೆ ನಿರಾಕರಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

“ಲಿಂಗ ಸಮಾನತೆ ನಡಿಗೆಗಾಗಿ ಅರ್ಜಿದಾರರು ಅನುಮತಿ ಕೋರಿರುವ ಮಾರ್ಗವು ಅನುಮೋದಿತ ಮಾರ್ಗವಲ್ಲ. ವಾಹನ ದಟ್ಟಣೆ ಹೆಚ್ಚಿರುವ ಪ್ರಮುಖ ರಸ್ತೆಯಾಗಿರುವ ಈ ಮಾರ್ಗದಲ್ಲಿ ಅರ್ಜಿದಾರರು ಕೋರಿರುವ ಲಿಂಗ ಸಮಾನತೆ ನಡಿಗೆಗೆ ಅನುಮತಿ ನೀಡಿದರೆ ವಾಹನ ಸಂಚಾರಕ್ಕೆ ಹಾಗೂ ಸಾರ್ವಜನಿಕರಿಗೆ ತೊಂದರೆಯಾಗಲಿದೆ. ರಾತ್ರಿ ವೇಳೆ ಪಾದಯಾತ್ರೆ ನಡೆಸಿದರೆ ಕಾನೂನು ಸುವ್ಯವಸ್ಥೆ ಸಮಸ್ಯೆ ಉಂಟಾಗುವ ಸಾಧ್ಯತೆ ಇದೆ ಎಂದು ಅರ್ಜಿದಾರರಿಗೆ ತಿಳಿಸಲಾಗಿದೆ” ಎಂದು ಪೊಲೀಸ್ ಆದೇಶದಲ್ಲಿ ತಿಳಿಸಲಾಗಿದೆ. ಸಿಪಿಐ(ಎಂ)ನ

ಆದಾಗ್ಯೂ, ಸಿಪಿಐಎಂ ರ‍್ಯಾಲಿಯನ್ನು ಕೈಬಿಟ್ಟು ಅಣ್ಣಾ ಸಲೈನಲ್ಲಿ ಸಭೆಯನ್ನು ನಡೆಸಿದ್ದು, ಸಭೆಯಲ್ಲಿ ನೂರಾರು ಜನರು ಸೇರಿದ್ದರು ಎಂದು ವರದಿಯಾಗಿದೆ. ಸಭೆಯಲ್ಲಿ ಕ್ರಾಂತಿಗೀತೆಗಳನ್ನು ಹಾಡಿ ಹಲವಾರು ಕಾರ್ಯಕ್ರಮಗಳನ್ನು ನಡೆಸಲಾಗಿದೆ.

ರ‍್ಯಾಲಿಗೆ ಏಕೆ ಅನುಮತಿ ನಿರಾಕರಿಸಲಾಯಿತು ಎಂಬ ಪ್ರಶ್ನೆಗೆ ತಮಿಳುನಾಡು ಸರ್ಕಾರ ಮತ್ತು ಸಂಬಂಧಪಟ್ಟ ಪೊಲೀಸ್ ಅಧಿಕಾರಿಗಳು ಉತ್ತರಿಸಬೇಕು ಎಂದು ಡೆಮಾಕ್ರಟಿಕ್ ಯೂತ್ ಫೆಡರೇಶನ್ ಆಫ್ ಇಂಡಿಯಾ (ಡಿವೈಎಫ್‌ಐ) ಸೆಂಟ್ರಲ್ ಚೆನ್ನೈ ಸದಸ್ಯ ನಿಖಿಲ್ ದೇವ್ ಹೇಳಿದ್ದಾರೆ.

“ಇದೇ ಚೆನ್ನೈನಲ್ಲಿ, ಹ್ಯಾಪಿ ಸ್ಟ್ರೀಟ್ಸ್ ಕಾರ್ಯಕ್ರಮವನ್ನು ನಡೆಸಲಾಯಿತು, ಆದರೆ ಪೊಲೀಸರು ಅದಕ್ಕೆ ಅನುಮತಿ ನಿರಾಕರಣೆ ಮಾಡಿಲ್ಲ. ರಾತ್ರಿಯಲ್ಲಿ ಸಾಕಷ್ಟು ರೆಸ್ಟೋರೆಂಟ್‌ಗಳು ತೆರೆದಿರುತ್ತವೆ, ಹಾಗಾಗಿ ಮೌಂಟ್ ರೋಡ್‌ನಲ್ಲಿ ಭಾರಿ ದಟ್ಟಣೆಯನ್ನು ಉಂಟಾಗುತ್ತದೆ. ಪೊಲೀಸರು ಆ ಬಗ್ಗೆ ತಲೆ ಕೆಡಿಸಿಕೊಳ್ಳುವುದಿಲ್ಲ, ಆದರೆ ಸಿಪಿಐ(ಎಂ) ಕಾರ್ಯಕ್ರಮ ಆಯೋಜಿಸಿದರೆ ಅದನ್ನು ನಿರಾಕರಿಸುತ್ತಾರೆ” ಎಂದು ಅವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಸರ್ಕಾರವು ಪೆರಿಯಾರ್ ಸಿದ್ಧಾಂತವನ್ನು ಅನುಸರಿಸುತ್ತಿದೆ, ಆದರೂ ಕೂಡಾ ಅನುಮತಿ ನಿರಾಕರಿಸಲಾಗಿದ್ದು ಏಕೆ ಎಂದು ನಿಖಿಲ್ ಪ್ರಶ್ನಿಸಿದ್ದಾರೆ. “ಈ ಮೆರವಣಿಗೆ ಸಾಮಾನ್ಯ ಕಾರಣಕ್ಕಾಗಿ ನಡೆಯುತ್ತಿದೆ. ಸಮಾಜದಲ್ಲಿ ಲಿಂಗ ರಾಜಕೀಯವು ಬಹಳ ಮುಖ್ಯವಾಗಿದ್ದು, ಅಲ್ಲಿ ಮಹಿಳೆಯರು ಮತ್ತು ಟ್ರಾನ್ಸ್‌ಜೆಂಡರ್‌ ವ್ಯಕ್ತಿಗಳನ್ನು ಸರಿಯಾಗಿ ನಡೆಸಿಕೊಳ್ಳಲಾಗುತ್ತಿಲ್ಲ. ಮಹಿಳೆಯರ ಮೇಲೆ ಅಪರಾಧಗಳು ಮತ್ತು ದೌರ್ಜನ್ಯಗಳು ನಡೆಯುತ್ತಿವೆ. ರಾಜಕೀಯ ಪಕ್ಷವಾಗಿ, ನಾವು ರಾತ್ರಿ ಎಲ್ಲರಿಗೂ ಎಂದು ಸಮಾಜಕ್ಕೆ ನೆನಪಿಸಲು ಬಯಸುತ್ತೇವೆ” ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ: 2019 ರಲ್ಲಿ ಅಪಘಾತ; 5 ವರ್ಷಗಳ ನಂತರ ₹31ಲಕ್ಷ ಪರಿಹಾರ ಘೋಷಿಸಿದ ಮೋಟಾರು ಅಪಘಾತ ಹಕ್ಕುಗಳ ನ್ಯಾಯಮಂಡಳಿ

ಇದನ್ನೂ ಓದಿ: 2019 ರಲ್ಲಿ ಅಪಘಾತ; 5 ವರ್ಷಗಳ ನಂತರ ₹31ಲಕ್ಷ ಪರಿಹಾರ ಘೋಷಿಸಿದ ಮೋಟಾರು ಅಪಘಾತ ಹಕ್ಕುಗಳ ನ್ಯಾಯಮಂಡಳಿ

2019 ರಲ್ಲಿ ಅಪಘಾತ; 5 ವರ್ಷಗಳ ನಂತರ ₹31ಲಕ್ಷ ಪರಿಹಾರ ಘೋಷಿಸಿದ ಮೋಟಾರು ಅಪಘಾತ ಹಕ್ಕುಗಳ ನ್ಯಾಯಮಂಡಳಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...