Homeಕರ್ನಾಟಕಬಿಜೆಪಿ-ಜೆಡಿಎಸ್ ಮೈತ್ರಿಯಲ್ಲಿ ಬಿರುಕು: ಜೆಡಿಎಸ್ ನಾಯಕರಿಂದ ಅಸಮಾಧಾನ ಸ್ಪೋಟ

ಬಿಜೆಪಿ-ಜೆಡಿಎಸ್ ಮೈತ್ರಿಯಲ್ಲಿ ಬಿರುಕು: ಜೆಡಿಎಸ್ ನಾಯಕರಿಂದ ಅಸಮಾಧಾನ ಸ್ಪೋಟ

- Advertisement -
- Advertisement -

ಇಪ್ಪತ್ತು ಲೋಕಸಭೆ ಕ್ಷೇತ್ರಗಳಿಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಣೆ ಮಾಡುವಾಗ ಜೆಡಿಎಸ್‌ ನಾಯಕರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳದಿರುವುದು ಮತ್ತು ಕೋಲಾರ ಕ್ಷೇತ್ರವನ್ನು ಜೆಡಿಎಸ್ ಪಕ್ಷಕ್ಕೆ ಬಿಟ್ಟು ಕೊಡಲು ಬಿಜೆಪಿ ವರಿಷ್ಠರು ಮೀನಾಮೇಷ ಎಣಿಸುತ್ತಿರುವ ಬಗ್ಗೆ ಜೆಡಿಎಸ್‌ ನಾಯಕರು ತೀವ್ರ ಅಸಮಾಧಾನ ಹೊರಹಾಕಿದ್ದಾರೆ ಎಂದು ತಿಳಿದು ಬಂದಿದೆ.

ಬೆಂಗಳೂರಿನ ಪಕ್ಷದ ರಾಜ್ಯ ಕಚೇರಿ ಜೆಪಿ ಭವನದಲ್ಲಿ ನಡೆದ ಕೋರ್ ಕಮಿಟಿ ಸದಸ್ಯರು ಹಾಗೂ ಚುನಾವಣಾ ಉಸ್ತುವಾರಿ, ಸಹ ಉಸ್ತುವಾರಿಗಳ ಸಭೆಯಲ್ಲಿ ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷ ಹೆಚ್. ಡಿ ದೇವೆಗೌಡರು ಹಾಗೂ  ಪಕ್ಷದ ರಾಜ್ಯಾಧ್ಯಕ್ಷ ಹೆಚ್.ಡಿ ಕುಮಾರಸ್ವಾಮಿ ಅವರ ಸಮಕ್ಷಮದಲ್ಲಿ ನಾಯಕರು ಅತೃಪ್ತಿ ವ್ಯಕ್ತಪಡಿಸಿದ್ದಾರೆ ಎನ್ನಲಾಗಿದೆ.

ಸಭೆಯಲ್ಲಿ ಒಬ್ಬೊಬ್ಬರಾಗಿಯೇ ತಮ್ಮ ಅಭಿಪ್ರಾಯವನ್ನು ಹೇಳಿದ ಮುಖಂಡರು;ಆರಂಭದಲ್ಲಿಯೇ ನಮ್ಮನ್ನು, ನಮ್ಮ ಪಕ್ಷವನ್ನು ಬಿಜೆಪಿ ನಿರ್ಲಕ್ಷ್ಯ ಮಾಡುತ್ತಿದೆ. ಚುನಾವಣಾ ಸಭೆ, ಪ್ರಚಾರವನ್ನು ನಮ್ಮನ್ನು ಬಿಟ್ಟು ಮಾಡುತ್ತಿದೆ. ಯಾವ ಸಭೆಗೂ ನಮ್ಮನ್ನು ಬಿಜೆಪಿಯವರು ಕರೆಯುತ್ತಿಲ್ಲ. ಇಪ್ಪತ್ತು ಕ್ಷೇತ್ರಗಳ ಅಭ್ಯರ್ಥಿಗಳನ್ನು ಆಯ್ಕೆ ಮಾಡಿದ ಬಿಜೆಪಿ, ಈ ಬಗ್ಗೆ ಜೆಡಿಎಸ್ ವರಿಷ್ಠರನ್ನು ವಿಶ್ವಾಸಕ್ಕೆ ತೆಗೆದುಕೊಂಡಿಲ್ಲ ಎಂದು ತಮ್ಮ ಬೇಸರವನ್ನು ತೋಡಿಕೊಂಡಿದ್ದಾರೆ ಎಂಬ ಮಾಹಿತಿ ದೊರೆತಿದೆ.

ಆರಂಭದಲ್ಲಿಯೇ ಹೀಗಾದರೆ ಮುಂದೇನು?

ಆರಂಭದಲ್ಲಿಯೇ ಹೀಗಾದರೆ ಮುಂದೇನು? ಇದು ಪಕ್ಷಕ್ಕೆ ಮಾರಕ. ರಾಜ್ಯದ 18 ಲೋಕಸಭೆ ಕ್ಷೇತ್ರಗಳಲ್ಲಿ ಬಿಜೆಪಿ ಅಭ್ಯರ್ಥಿಗಳನ್ನು ಗೆಲ್ಲಿಸುವ ಶಕ್ತಿ ಜೆಡಿಎಸ್ ಪಕ್ಷಕ್ಕೆ ಇದೆ. ಶೇ.3 ರಿಂದ 4ರಷ್ಟು ಜೆಡಿಎಸ್ ಮತಗಳು ಮೈತ್ರಿ ಅಭ್ಯರ್ಥಿಗೆ ಬಂದರೆ 28 ಕ್ಷೇತ್ರಗಳ ಪೈಕಿ 18 ಕ್ಷೇತ್ರಗಳಲ್ಲಿ ಬಿಜೆಪಿ ನಿರಾಯಾಸವಾಗಿ ಗೆಲ್ಲುತ್ತದೆ ಎಂದು ಅಂಕಿ ಅಂಶ ಇಟ್ಟುಕೊಂಡು ವರಿಷ್ಠರ ಮೇಲೆ ಮುಖಂಡರು ಒತ್ತಡ ಹೇರಿದ್ದಾರೆ.

ರಾಜ್ಯಕ್ಕೆ ಪ್ರಧಾನಿ ಬರುತ್ತಿದ್ದಾರೆ. ಭಾಷಣ ಮಾಡಿಕೊಂಡು ಹೋಗುತ್ತಿದ್ದಾರೆ. ನಮ್ಮ ಪಕ್ಷವನ್ನು ಸ್ಥಳೀಯ ಬಿಜೆಪಿ ವಿಶ್ವಾಸಕ್ಕೆ ತೆಗೆದುಕೊಳ್ಳುತ್ತಿಲ್ಲ. ಪ್ರಧಾನಿಗಳ ಸಭೆಗಳಿಗೆ ದೇವೇಗೌಡರು ಹಾಗೂ ಕುಮಾರಸ್ವಾಮಿ ಅವರನ್ನು ಕರೆಯಬೇಕಲ್ಲವೇ? ಕಲಬುರಗಿ ಸಭೆಗೂ ಜೆಡಿಎಸ್ ಸ್ಥಳೀಯ ಮುಖಂಡರನ್ನು ಕರೆದಿಲ್ಲ, ಅವರೇ ಮಾಡಿಕೊಂಡಿದ್ದಾರೆ. ಹೈದರಾಬಾದ್ ಕರ್ನಾಟಕ ಭಾಗದ ಜೆಡಿಎಸ್ ಶಾಸಕರು, ಮಾಜಿ ಶಾಸಕರಿಗೆ ಮಾಹಿತಿ ಕೊಟ್ಟಿಲ್ಲ. ಶಿವಮೊಗ್ಗ ಸಭೆಗೂ ದೇವೇಗೌಡರು, ಕುಮಾರಸ್ವಾಮಿ ಅವರನ್ನು ಕರೆಯಬಹುದಿತ್ತು. ಶಿವಮೊಗ್ಗ ಸಭೆಗೂ ನಮ್ಮ ನಾಯಕರನ್ನು ಕರೆದಿಲ್ಲ ಎಂದು ಮುಖಂಡರು ಸಿಟ್ಟು ತೋಡಿಕೊಂಡಿದ್ದಾರೆ.

ಎರಡು ಸೀಟಿಗಾಗಿ ಬಿಜೆಪಿ ಜೊತೆ ಮೈತ್ರಿ ಮಾಡಿಕೊಳ್ಳಬೇಕಿತ್ತಾ?

ನಮ್ಮ ಪಕ್ಷವನ್ನು ಒತ್ತೆ ಇಟ್ಟು ಮೈತ್ರಿ ಮಾಡಿಕೊಳ್ಳುವ ಅಗತ್ಯವಿಲ್ಲ. ನಮಗೆ ಮೋದಿಯವರ ಬಗ್ಗೆ ಅಪಾರ ಗೌರವ ಇದೆ. ಆ ಬಗ್ಗೆ ಎರಡನೇ ಮಾತೇ ಇಲ್ಲ. ಬಿಜೆಪಿಯಿಂದ ಇಂಥ ನಡವಳಿಕೆ ನಿರೀಕ್ಷೆ ಮಾಡಿರಲಿಲ್ಲ. ಕೋಲಾರ ಕ್ಷೇತ್ರ ಬಿಟ್ಟುಕೊಡುವ ಬಗ್ಗೆ ಬಿಜೆಪಿ ಮೀನಾಮೇಷ ಎಣಿಸುತ್ತಿದೆ. ಕೇವಲ ಎರಡು ಸೀಟಿಗಾಗಿ ನಾವು ಬಿಜೆಪಿ ಜೊತೆ ಮೈತ್ರಿ ಮಾಡಿಕೊಳ್ಳಬೇಕಿತ್ತಾ? ಇವತ್ತೇ ಕೋಲಾರ ಅಭ್ಯರ್ಥಿಯನ್ನು ಘೋಷಣೆ ಮಾಡಿ. ಇಂಥ ಅನಿಶ್ಚಿತತೆಯಿಂದ ಪಕ್ಷಕ್ಕೆ ನಷ್ಟ ಆಗುತ್ತದೆ ಎಂದು ಮುಖಂಡರು ತಮ್ಮ ಕಳವಳ ವ್ಯಕ್ತಪಡಿಸಿದ್ದಾರೆ.

ಕೋಲಾರ ಜೆಡಿಎಸ್ ಪಾಲಿನ ಕ್ಷೇತ್ರ ಎಂದು ಮೊದಲಿನಿಂದ ಹೇಳಿದ್ದೀರಿ ನೀವು. ಕೋಲಾರ, ಹಾಸನ, ಮಂಡ್ಯ ಸೇರಿದಂತೆ 5 ಕ್ಷೇತ್ರಗಳು ಜೆಡಿಎಸ್‌ಗೆ ಬರುತ್ತವೆ ಎಂದು ನೀವು ಹೇಳಿದ್ದಿರಿ. ಆದರೆ, ಈಗ ನೋಡಿದರೆ ಬಿಜೆಪಿ ಎರಡು ಸೀಟಿಗೆ ಬಂದು ನಿಂತಿದೆ ಎಂದು ಕುಮಾರಸ್ವಾಮಿ ಅವರನ್ನು ನಾಯಕರು ಪ್ರಶ್ನಿಸಿದ್ದಾರೆ ಎಂದು ಹೇಳಲಾಗ್ತಿದೆ.

ಮುಖಂಡರ ಮಾತುಗಳನ್ನು ಶಾಂತ ಚಿತ್ತದಿಂದ ಆಲಿಸಿದ ದೇವೇಗೌಡರು ಮತ್ತು ಕುಮಾರಸ್ವಾಮಿ ಅಸಮಾಧಾನಿತ ಮುಖಂಡರಿಗೆ ಸಮಾಧಾನ ಹೇಳಿದರು. ಅಮಿತ್ ಶಾ, ನಡ್ಡಾ  ಜೊತೆ ಮಾತನಾಡುವಂತೆ ಕುಮಾರಸ್ವಾಮಿಗೆ ಸೂಚನೆ ನೀಡಿದ ದೇವೇಗೌಡರು; ಇಲ್ಲವಾದರೆ ನಾನೇ ದೆಹಲಿಗೆ ಹೋಗಿ ಬರುತ್ತೇನೆ ಇದೇ ವೇಳೆ ಹೇಳಿದ್ದಾರೆ ಎನ್ನಲಾಗಿದೆ.

ಕೋಲಾರ ಕ್ಷೇತ್ರದ ಒಳ್ಳೆಯ ನಿರ್ಧಾರ ತೆಗೆದುಕೊಳ್ಳೋಣ ಎಂದು ಅಮಿತ್ ಶಾ ಅವರೇ ಹೇಳಿದ್ದಾರೆ ಎಂದು ಸಭೆಗೆ ತಿಳಿಸಿದ ಕುಮಾರಸ್ವಾಮಿ, “ಯಾವುದೇ ಕಾರಣಕ್ಕೂ ಪಕ್ಷದ ಹಿತಕ್ಕೆ ವಿರುದ್ಧವಾಗಿ ಹೆಜ್ಜೆ ಇಡುವುದಿಲ್ಲ. ಇದು ಬಿಜೆಪಿ ನಾಯಕರಿಗೂ ಗೊತ್ತಿದೆ” ಎಂದು ತಿಳಿಸಿದ್ದಾರೆ.

ರಾಜ್ಯ ಕೋರ್ ಕಮಿಟಿ ಅಧ್ಯಕ್ಷ ಜಿ.ಟಿ.ದೇವೇಗೌಡ, ಮಾಜಿ ಸಚಿವರಾದ ಹೆಚ್.ಡಿ.ರೇವಣ್ಣ, ಲೀಲಾದೇವಿ ಆರ್ ಪ್ರಸಾದ್, ಬಂಡೆಪ್ಪ ಕಾಷೆಂಪೂರ್, ವೆಂಕಟರಾವ್ ನಾಡಗೌಡ, ಯುವ ಜನತಾದಳದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ, ಸಂಸದ ಪ್ರಜ್ವಲ್ ರೇವಣ್ಣ, ಶಾಸಕ ಜಿ.ಕೆ.ವೆಂಕಟ ಶಿವಾರೆಡ್ಡಿ, ಬಿ.ಸುರೇಶ್ ಬಾಬು, ಕರೆಮ್ಮ ನಾಯಕ್, ನೇಮಿರಾಜ್ ನಾಯಕ್, ಸ್ವರೂಪ್ ಪ್ರಕಾಶ್, ರಾಜೂಗೌಡ, ಬಿ.ಎಂ. ಫಾರೂಕ್, ಎಂ.ಟಿ.ಕೃಷ್ಣಪ್ಪ, ಕೆ.ಎ.ತಿಪ್ಪೇಸ್ವಾಮಿ, ಟಿ ಎ ಶರವಣ, ಮಂಜೇಗೌಡ, ಮಾಜಿ ಶಾಸಕರಾದ ರಾಜಾ ವೆಂಕಟಪ್ಪ ನಾಯಕ ದೊರೆ, ಕೆಎಂ.ಕೃಷ್ಣಾರೆಡ್ಡಿ, ಡಿ.ನಾಗರಾಜಯ್ಯ, ಡಾ.ಕೆ.ಅನ್ನದಾನಿ, ದೊಡ್ಡನಗೌಡ ಪಾಟೀಲ್, ಸಿ.ಎಸ್.ಪುಟ್ಟರಾಜು, ಸುರೇಶ್ ಗೌಡ, ಶ್ರೀಕಂಠೇಗೌಡ, ಸುರೇಶ್ ಗೌಡ, ರವೀಂದ್ರ ಶ್ರೀಕಂಠಯ್ಯ, ಕೆ.ಪಿ.ಬಚ್ಚೇಗೌಡ, ದೇವಾನಂದ ಚೌಹಾಣ್, ಶಿವಶಂಕರ್, ಚೌಡರೆಡ್ಡಿ ತೂಪಲ್ಲಿ ಸೇರಿದಂತೆ ಪಕ್ಷದ ಹಲವಾರು ಮುಖಂಡರು, ಕೋರ್ ಕಮಿಟಿ ಸದಸ್ಯರು ಹಾಗೂ ಎಲ್ಲಾ ಲೋಕಸಭೆ ಕ್ಷೇತ್ರಗಳ ಚುನಾವಣೆ ಉಸ್ತುವಾರಿಗಳು ಉಪಸ್ಥಿತರಿದ್ದರು.

ಇದನ್ನೂ ಓದಿ : ಟಿಕೆಟ್ ಹಂಚಿಕೆ: ಬಿಜೆಪಿಗೆ ಬಂಡಾಯದ ಬಿಸಿ, ಜೆಡಿಎಸ್‌ನಲ್ಲಿ ಅತೃಪ್ತಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ನಾಲ್ವರು ಬಾಲಕರಿಂದ ಬಾಲಕಿಗೆ ಕಿರುಕುಳ ಆರೋಪ : ‘ಉತ್ತಮ ಸಂಸ್ಕಾರ ಕಲಿಸಿಲ್ಲ’ ಎಂದು ತಾಯಂದಿರನ್ನು ಬಂಧಿಸಿದ ಪೊಲೀಸರು!

ಉತ್ತರ ಪ್ರದೇಶದ ಬದೌನ್ ಜಿಲ್ಲೆಯಲ್ಲಿ ನಾಲ್ವರು ಬಾಲಕರ ವಿರುದ್ಧ ಬಾಲಕಿಗೆ ಕಿರುಕುಳ ನೀಡಿದ ಆರೋಪ ಕೇಳಿ ಬಂದಿದ್ದು, ಪೊಲೀಸರು ಬಾಲಕರ ತಾಯಂದಿರನ್ನು 'ಪ್ರಿವೆಂಟಿವ್ ಅರೆಸ್ಟ್' ಮಾಡಿದ್ದಾರೆ ಎಂದು indianexpress.com ಶನಿವಾರ (ಡಿ.20) ವರದಿ...

ಎಸ್‌ಐಆರ್‌: ಸ್ಟಾಲಿನ್ ಅವರ ಕೊಳತ್ತೂರು ಕ್ಷೇತ್ರದಲ್ಲಿ 1 ಲಕ್ಷ ಮತದಾರ ಹೆಸರು ಕರಡು ಮತದಾರರ ಪಟ್ಟಿಯಲ್ಲಿ ಡಿಲೀಟ್

ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರ ಕೊಳತ್ತೂರು ಕ್ಷೇತ್ರದಿಂದ 1,03,812 ಕ್ಕೂ ಹೆಚ್ಚು ಮತದಾರರ ಹೆಸರು ತೆಗೆದುಹಾಕಲಾಗಿದೆ. ಇದು ತಮಿಳುನಾಡಿನಲ್ಲಿ ರಾಜ್ಯಾದ್ಯಂತ ನಡೆದ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಮತದಾರರ ಪಟ್ಟಿಯಲ್ಲಿನ ಅತಿದೊಡ್ಡ ಮತದಾರರ...

ಅಸ್ಸಾಂ : 15 ಮಂದಿಗೆ 24 ಗಂಟೆಯೊಳಗೆ ದೇಶ ತೊರೆಯಲು ಆದೇಶ : ಮಾಧ್ಯಮಗಳ ಮೂಲಕ ವಿಷಯ ತಿಳಿದುಕೊಂಡ ಕುಟುಂಬಸ್ಥರು

ಅಸ್ಸಾಂನ ನಾಗಾಂವ್ ಜಿಲ್ಲಾಡಳಿತವು 15 ಘೋಷಿತ ವಿದೇಶಿಯರಿಗೆ 24 ಗಂಟೆಗಳ ಒಳಗೆ ರಾಜ್ಯ ತೊರೆಯುವಂತೆ ಆದೇಶಿಸಿದ ಬಗ್ಗೆ ವರದಿಯಾಗಿದೆ. ಬುಧವಾರ (ಡಿ.17) ಜಿಲ್ಲಾಡಳಿತ ಈ ಆದೇಶ ನೀಡಿತ್ತು. ಆದರೆ, ಇದುವರೆಗೆ (ಡಿ.20) ಈ 15...

ಸಿರಿಯಾದ ಐಸಿಸ್ ಅಡಗುತಾಣಗಳ ಮೇಲೆ ಅಮೆರಿಕ ವಾಯುದಾಳಿ

ಕಳೆದ ವಾರ ಅಮೆರಿಕದ ಸಿಬ್ಬಂದಿ ಮೇಲೆ ನಡೆದ ಮಾರಕ ದಾಳಿಗೆ ಪ್ರತೀಕಾರವಾಗಿ ಅಮೆರಿಕವು ಮಧ್ಯ ಸಿರಿಯಾದಾದ್ಯಂತ ಡಜನ್‌ಗಟ್ಟಲೆ ಇಸ್ಲಾಮಿಕ್ ಸ್ಟೇಟ್ (ಐಎಸ್) ನೆಲೆಗಳ ಮೇಲೆ ವಾಯುದಾಳಿ ನಡೆಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. 'ಆಪರೇಷನ್ ಹಾಕೈ...

16 ಲಕ್ಷಕ್ಕೂ ಹೆಚ್ಚು ಕಾರ್ಮಿಕರನ್ನು ‘ಮನರೇಗಾ’ ಪಟ್ಟಿಯಿಂದ ಕೈಬಿಟ್ಟ ಕೇಂದ್ರ ಸರ್ಕಾರ: ವರದಿ

ಯುಪಿಎ ಸರ್ಕಾರದ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ (ಮನರೇಗಾ) ಹೆಸರನ್ನು ಬದಲಿಸಲು ಪ್ರಯತ್ನಿಸುವ 'ವಿಕ್ಷಿತ್ ಭಾರತ್ - ಗ್ಯಾರಂಟಿ ಫಾರ್ ರೋಜ್‌ಗಾರ್ ಮತ್ತು ಅಜೀವಿಕಾ ಮಿಷನ್ (ಗ್ರಾಮೀಣ) (ವಿಬಿ–ಜಿ...

ಅಮೆರಿಕದ ಬಹು ನಿರೀಕ್ಷಿತ ‘ಎಪ್‌ಸ್ಟೀನ್ ಫೈಲ್ಸ್’ ಬಿಡುಗಡೆ : ಬಿಲ್ ಕ್ಲಿಂಟನ್, ಮೈಕಲ್ ಜಾಕ್ಸನ್ ಸೇರಿದಂತೆ ಪ್ರಮುಖರ ಫೋಟೋಗಳು ಬಹಿರಂಗ

ಅಮೆರಿಕದ ಸಂಸತ್ತು ಅಂಗೀಕರಿಸಿದ ಎಪ್‌ಸ್ಟೀನ್ ಫೈಲ್ಸ್ ಟ್ರಾನ್ಸ್‌ಪೆರೆನ್ಸಿ ಆಕ್ಟ್ (Epstein Files Transparency Act) ನಿಯಮದಂತೆ ಅಮೆರಿಕದ ನ್ಯಾಯ ಇಲಾಖೆ(ಡಿಒಜಿ) ಲೈಂಗಿಕ ದೌರ್ಜನ್ಯ ಪ್ರಕರಣದ ಅಪರಾಧಿ ಜೆಫ್ರಿ ಎಪ್‌ಸ್ಟೀನ್‌ಗೆ ಸಂಬಂಧಿಸಿದ ಕೆಲ ದಾಖಲೆಗಳನ್ನು...

ಕೋಮು ಸಾಮರಸ್ಯಕ್ಕಾಗಿ ಭಾರತದ ಮುಸ್ಲಿಮರು ಸಾಮೂಹಿಕ ಪ್ರಯತ್ನಗಳೊಂದಿಗೆ ಮುಂದೆ ಬರಬೇಕು: ಜಮಾಅತ್ ಅಧ್ಯಕ್ಷ

'ಭಾರತದ ಮುಸ್ಲಿಮರು, ದೇಶದಲ್ಲಿ ಕೋಮು ಸಾಮರಸ್ಯಕ್ಕಾಗಿ ವೈಯಕ್ತಿಕ ಮತ್ತು ಸಾಮೂಹಿಕ ಪ್ರಯತ್ನಗಳೊಂದಿಗೆ ಮುಂದೆ ಬರಬೇಕು' ಎಂದು ಜಮಾಅತೆ-ಇ-ಇಸ್ಲಾಮಿ ಹಿಂದ್ ಅಧ್ಯಕ್ಷ ಸೈಯದ್ ಸಾದತುಲ್ಲಾ ಹುಸೈನಿ ಅವರು ಒತ್ತಾಯಿಸಿದರು. ಕೋಮು ಸಾಮರಸ್ಯ ಇಲಾಖೆಯು ಆಯೋಜಿಸಿದ್ದ 'ಅಖಿಲ...

3 ವರ್ಷಗಳಲ್ಲಿ ರಷ್ಯಾ ಸೇನೆ ಸೇರಿದ 200 ಕ್ಕೂ ಹೆಚ್ಚು ಭಾರತೀಯರು; 26 ಮಂದಿ ಸಾವು: ವಿದೇಶಾಂಗ ಸಚಿವಾಲಯ

2022 ರಿಂದ ಕನಿಷ್ಠ 202 ಭಾರತೀಯ ಪ್ರಜೆಗಳು ರಷ್ಯಾದ ಸಶಸ್ತ್ರ ಪಡೆಗಳಿಗೆ ಸೇರಿದ್ದಾರೆ ಎಂದು ವರದಿಯಾಗಿದೆ. ಇದರಲ್ಲಿ 26 ಮಂದಿ ಸಾವನ್ನಪ್ಪಿದ್ದು, ಇಬ್ಬರನ್ನು ರಷ್ಯಾದಲ್ಲಿ ಅಂತ್ಯಕ್ರಿಯೆ ಮಾಡಲಾಗಿದೆ ಎಂದು ವಿದೇಶಾಂಗ ಸಚಿವಾಲಯ (ಎಂಇಎ)...

ಎಸ್‌ಐಆರ್‌ ಬಳಿಕ ಕರಡು ಮತದಾರರ ಪಟ್ಟಿ ಪ್ರಕಟ : ತಮಿಳುನಾಡಿನಲ್ಲಿ 97 ಲಕ್ಷ, ಗುಜರಾತ್‌ನಲ್ಲಿ 73 ಲಕ್ಷ ಹೆಸರು ಡಿಲೀಟ್

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಬಳಿಕ ತಮಿಳುನಾಡು ಮತ್ತು ಗುಜರಾತ್‌ನ ಕರಡು ಮತದಾರರ ಪಟ್ಟಿಯನ್ನು ಭಾರತೀಯ ಚುನಾವಣಾ ಆಯೋಗ (ಇಸಿಐ) ಪ್ರಕಟಿಸಿದ್ದು, ಕ್ರಮವಾಗಿ 97.3 ಮತ್ತು 73.7 ಲಕ್ಷ ಮತದಾರರ...

ಅಸ್ಸಾಂ | ರಾಜಧಾನಿ ಎಕ್ಸ್ ಪ್ರೆಸ್ ರೈಲು ಢಿಕ್ಕಿ : 8 ಆನೆಗಳು ಸಾವು

ಶನಿವಾರ (ಡಿಸೆಂಬರ್ 20, 2025) ಬೆಳಗಿನ ಜಾವ ಅಸ್ಸಾಂನ ಹೊಜೈ ಜಿಲ್ಲೆಯಲ್ಲಿ ಸಾಯಿರಂಗ್-ನವದೆಹಲಿ ರಾಜಧಾನಿ ಎಕ್ಸ್‌ಪ್ರೆಸ್‌ ರೈಲು ಡಿಕ್ಕಿ ಹೊಡೆದ ಪರಿಣಾಮ ಎಂಟು ಆನೆಗಳು ಸಾವನ್ನಪ್ಪಿದ್ದು, ಒಂದು ಗಾಯಗೊಂಡಿದೆ ಎಂದು ವರದಿಯಾಗಿದೆ. ಘಟನೆಯಲ್ಲಿ ಐದು...