Homeಕರ್ನಾಟಕಬಿಜೆಪಿ-ಜೆಡಿಎಸ್ ಮೈತ್ರಿಯಲ್ಲಿ ಬಿರುಕು: ಜೆಡಿಎಸ್ ನಾಯಕರಿಂದ ಅಸಮಾಧಾನ ಸ್ಪೋಟ

ಬಿಜೆಪಿ-ಜೆಡಿಎಸ್ ಮೈತ್ರಿಯಲ್ಲಿ ಬಿರುಕು: ಜೆಡಿಎಸ್ ನಾಯಕರಿಂದ ಅಸಮಾಧಾನ ಸ್ಪೋಟ

- Advertisement -
- Advertisement -

ಇಪ್ಪತ್ತು ಲೋಕಸಭೆ ಕ್ಷೇತ್ರಗಳಿಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಣೆ ಮಾಡುವಾಗ ಜೆಡಿಎಸ್‌ ನಾಯಕರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳದಿರುವುದು ಮತ್ತು ಕೋಲಾರ ಕ್ಷೇತ್ರವನ್ನು ಜೆಡಿಎಸ್ ಪಕ್ಷಕ್ಕೆ ಬಿಟ್ಟು ಕೊಡಲು ಬಿಜೆಪಿ ವರಿಷ್ಠರು ಮೀನಾಮೇಷ ಎಣಿಸುತ್ತಿರುವ ಬಗ್ಗೆ ಜೆಡಿಎಸ್‌ ನಾಯಕರು ತೀವ್ರ ಅಸಮಾಧಾನ ಹೊರಹಾಕಿದ್ದಾರೆ ಎಂದು ತಿಳಿದು ಬಂದಿದೆ.

ಬೆಂಗಳೂರಿನ ಪಕ್ಷದ ರಾಜ್ಯ ಕಚೇರಿ ಜೆಪಿ ಭವನದಲ್ಲಿ ನಡೆದ ಕೋರ್ ಕಮಿಟಿ ಸದಸ್ಯರು ಹಾಗೂ ಚುನಾವಣಾ ಉಸ್ತುವಾರಿ, ಸಹ ಉಸ್ತುವಾರಿಗಳ ಸಭೆಯಲ್ಲಿ ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷ ಹೆಚ್. ಡಿ ದೇವೆಗೌಡರು ಹಾಗೂ  ಪಕ್ಷದ ರಾಜ್ಯಾಧ್ಯಕ್ಷ ಹೆಚ್.ಡಿ ಕುಮಾರಸ್ವಾಮಿ ಅವರ ಸಮಕ್ಷಮದಲ್ಲಿ ನಾಯಕರು ಅತೃಪ್ತಿ ವ್ಯಕ್ತಪಡಿಸಿದ್ದಾರೆ ಎನ್ನಲಾಗಿದೆ.

ಸಭೆಯಲ್ಲಿ ಒಬ್ಬೊಬ್ಬರಾಗಿಯೇ ತಮ್ಮ ಅಭಿಪ್ರಾಯವನ್ನು ಹೇಳಿದ ಮುಖಂಡರು;ಆರಂಭದಲ್ಲಿಯೇ ನಮ್ಮನ್ನು, ನಮ್ಮ ಪಕ್ಷವನ್ನು ಬಿಜೆಪಿ ನಿರ್ಲಕ್ಷ್ಯ ಮಾಡುತ್ತಿದೆ. ಚುನಾವಣಾ ಸಭೆ, ಪ್ರಚಾರವನ್ನು ನಮ್ಮನ್ನು ಬಿಟ್ಟು ಮಾಡುತ್ತಿದೆ. ಯಾವ ಸಭೆಗೂ ನಮ್ಮನ್ನು ಬಿಜೆಪಿಯವರು ಕರೆಯುತ್ತಿಲ್ಲ. ಇಪ್ಪತ್ತು ಕ್ಷೇತ್ರಗಳ ಅಭ್ಯರ್ಥಿಗಳನ್ನು ಆಯ್ಕೆ ಮಾಡಿದ ಬಿಜೆಪಿ, ಈ ಬಗ್ಗೆ ಜೆಡಿಎಸ್ ವರಿಷ್ಠರನ್ನು ವಿಶ್ವಾಸಕ್ಕೆ ತೆಗೆದುಕೊಂಡಿಲ್ಲ ಎಂದು ತಮ್ಮ ಬೇಸರವನ್ನು ತೋಡಿಕೊಂಡಿದ್ದಾರೆ ಎಂಬ ಮಾಹಿತಿ ದೊರೆತಿದೆ.

ಆರಂಭದಲ್ಲಿಯೇ ಹೀಗಾದರೆ ಮುಂದೇನು?

ಆರಂಭದಲ್ಲಿಯೇ ಹೀಗಾದರೆ ಮುಂದೇನು? ಇದು ಪಕ್ಷಕ್ಕೆ ಮಾರಕ. ರಾಜ್ಯದ 18 ಲೋಕಸಭೆ ಕ್ಷೇತ್ರಗಳಲ್ಲಿ ಬಿಜೆಪಿ ಅಭ್ಯರ್ಥಿಗಳನ್ನು ಗೆಲ್ಲಿಸುವ ಶಕ್ತಿ ಜೆಡಿಎಸ್ ಪಕ್ಷಕ್ಕೆ ಇದೆ. ಶೇ.3 ರಿಂದ 4ರಷ್ಟು ಜೆಡಿಎಸ್ ಮತಗಳು ಮೈತ್ರಿ ಅಭ್ಯರ್ಥಿಗೆ ಬಂದರೆ 28 ಕ್ಷೇತ್ರಗಳ ಪೈಕಿ 18 ಕ್ಷೇತ್ರಗಳಲ್ಲಿ ಬಿಜೆಪಿ ನಿರಾಯಾಸವಾಗಿ ಗೆಲ್ಲುತ್ತದೆ ಎಂದು ಅಂಕಿ ಅಂಶ ಇಟ್ಟುಕೊಂಡು ವರಿಷ್ಠರ ಮೇಲೆ ಮುಖಂಡರು ಒತ್ತಡ ಹೇರಿದ್ದಾರೆ.

ರಾಜ್ಯಕ್ಕೆ ಪ್ರಧಾನಿ ಬರುತ್ತಿದ್ದಾರೆ. ಭಾಷಣ ಮಾಡಿಕೊಂಡು ಹೋಗುತ್ತಿದ್ದಾರೆ. ನಮ್ಮ ಪಕ್ಷವನ್ನು ಸ್ಥಳೀಯ ಬಿಜೆಪಿ ವಿಶ್ವಾಸಕ್ಕೆ ತೆಗೆದುಕೊಳ್ಳುತ್ತಿಲ್ಲ. ಪ್ರಧಾನಿಗಳ ಸಭೆಗಳಿಗೆ ದೇವೇಗೌಡರು ಹಾಗೂ ಕುಮಾರಸ್ವಾಮಿ ಅವರನ್ನು ಕರೆಯಬೇಕಲ್ಲವೇ? ಕಲಬುರಗಿ ಸಭೆಗೂ ಜೆಡಿಎಸ್ ಸ್ಥಳೀಯ ಮುಖಂಡರನ್ನು ಕರೆದಿಲ್ಲ, ಅವರೇ ಮಾಡಿಕೊಂಡಿದ್ದಾರೆ. ಹೈದರಾಬಾದ್ ಕರ್ನಾಟಕ ಭಾಗದ ಜೆಡಿಎಸ್ ಶಾಸಕರು, ಮಾಜಿ ಶಾಸಕರಿಗೆ ಮಾಹಿತಿ ಕೊಟ್ಟಿಲ್ಲ. ಶಿವಮೊಗ್ಗ ಸಭೆಗೂ ದೇವೇಗೌಡರು, ಕುಮಾರಸ್ವಾಮಿ ಅವರನ್ನು ಕರೆಯಬಹುದಿತ್ತು. ಶಿವಮೊಗ್ಗ ಸಭೆಗೂ ನಮ್ಮ ನಾಯಕರನ್ನು ಕರೆದಿಲ್ಲ ಎಂದು ಮುಖಂಡರು ಸಿಟ್ಟು ತೋಡಿಕೊಂಡಿದ್ದಾರೆ.

ಎರಡು ಸೀಟಿಗಾಗಿ ಬಿಜೆಪಿ ಜೊತೆ ಮೈತ್ರಿ ಮಾಡಿಕೊಳ್ಳಬೇಕಿತ್ತಾ?

ನಮ್ಮ ಪಕ್ಷವನ್ನು ಒತ್ತೆ ಇಟ್ಟು ಮೈತ್ರಿ ಮಾಡಿಕೊಳ್ಳುವ ಅಗತ್ಯವಿಲ್ಲ. ನಮಗೆ ಮೋದಿಯವರ ಬಗ್ಗೆ ಅಪಾರ ಗೌರವ ಇದೆ. ಆ ಬಗ್ಗೆ ಎರಡನೇ ಮಾತೇ ಇಲ್ಲ. ಬಿಜೆಪಿಯಿಂದ ಇಂಥ ನಡವಳಿಕೆ ನಿರೀಕ್ಷೆ ಮಾಡಿರಲಿಲ್ಲ. ಕೋಲಾರ ಕ್ಷೇತ್ರ ಬಿಟ್ಟುಕೊಡುವ ಬಗ್ಗೆ ಬಿಜೆಪಿ ಮೀನಾಮೇಷ ಎಣಿಸುತ್ತಿದೆ. ಕೇವಲ ಎರಡು ಸೀಟಿಗಾಗಿ ನಾವು ಬಿಜೆಪಿ ಜೊತೆ ಮೈತ್ರಿ ಮಾಡಿಕೊಳ್ಳಬೇಕಿತ್ತಾ? ಇವತ್ತೇ ಕೋಲಾರ ಅಭ್ಯರ್ಥಿಯನ್ನು ಘೋಷಣೆ ಮಾಡಿ. ಇಂಥ ಅನಿಶ್ಚಿತತೆಯಿಂದ ಪಕ್ಷಕ್ಕೆ ನಷ್ಟ ಆಗುತ್ತದೆ ಎಂದು ಮುಖಂಡರು ತಮ್ಮ ಕಳವಳ ವ್ಯಕ್ತಪಡಿಸಿದ್ದಾರೆ.

ಕೋಲಾರ ಜೆಡಿಎಸ್ ಪಾಲಿನ ಕ್ಷೇತ್ರ ಎಂದು ಮೊದಲಿನಿಂದ ಹೇಳಿದ್ದೀರಿ ನೀವು. ಕೋಲಾರ, ಹಾಸನ, ಮಂಡ್ಯ ಸೇರಿದಂತೆ 5 ಕ್ಷೇತ್ರಗಳು ಜೆಡಿಎಸ್‌ಗೆ ಬರುತ್ತವೆ ಎಂದು ನೀವು ಹೇಳಿದ್ದಿರಿ. ಆದರೆ, ಈಗ ನೋಡಿದರೆ ಬಿಜೆಪಿ ಎರಡು ಸೀಟಿಗೆ ಬಂದು ನಿಂತಿದೆ ಎಂದು ಕುಮಾರಸ್ವಾಮಿ ಅವರನ್ನು ನಾಯಕರು ಪ್ರಶ್ನಿಸಿದ್ದಾರೆ ಎಂದು ಹೇಳಲಾಗ್ತಿದೆ.

ಮುಖಂಡರ ಮಾತುಗಳನ್ನು ಶಾಂತ ಚಿತ್ತದಿಂದ ಆಲಿಸಿದ ದೇವೇಗೌಡರು ಮತ್ತು ಕುಮಾರಸ್ವಾಮಿ ಅಸಮಾಧಾನಿತ ಮುಖಂಡರಿಗೆ ಸಮಾಧಾನ ಹೇಳಿದರು. ಅಮಿತ್ ಶಾ, ನಡ್ಡಾ  ಜೊತೆ ಮಾತನಾಡುವಂತೆ ಕುಮಾರಸ್ವಾಮಿಗೆ ಸೂಚನೆ ನೀಡಿದ ದೇವೇಗೌಡರು; ಇಲ್ಲವಾದರೆ ನಾನೇ ದೆಹಲಿಗೆ ಹೋಗಿ ಬರುತ್ತೇನೆ ಇದೇ ವೇಳೆ ಹೇಳಿದ್ದಾರೆ ಎನ್ನಲಾಗಿದೆ.

ಕೋಲಾರ ಕ್ಷೇತ್ರದ ಒಳ್ಳೆಯ ನಿರ್ಧಾರ ತೆಗೆದುಕೊಳ್ಳೋಣ ಎಂದು ಅಮಿತ್ ಶಾ ಅವರೇ ಹೇಳಿದ್ದಾರೆ ಎಂದು ಸಭೆಗೆ ತಿಳಿಸಿದ ಕುಮಾರಸ್ವಾಮಿ, “ಯಾವುದೇ ಕಾರಣಕ್ಕೂ ಪಕ್ಷದ ಹಿತಕ್ಕೆ ವಿರುದ್ಧವಾಗಿ ಹೆಜ್ಜೆ ಇಡುವುದಿಲ್ಲ. ಇದು ಬಿಜೆಪಿ ನಾಯಕರಿಗೂ ಗೊತ್ತಿದೆ” ಎಂದು ತಿಳಿಸಿದ್ದಾರೆ.

ರಾಜ್ಯ ಕೋರ್ ಕಮಿಟಿ ಅಧ್ಯಕ್ಷ ಜಿ.ಟಿ.ದೇವೇಗೌಡ, ಮಾಜಿ ಸಚಿವರಾದ ಹೆಚ್.ಡಿ.ರೇವಣ್ಣ, ಲೀಲಾದೇವಿ ಆರ್ ಪ್ರಸಾದ್, ಬಂಡೆಪ್ಪ ಕಾಷೆಂಪೂರ್, ವೆಂಕಟರಾವ್ ನಾಡಗೌಡ, ಯುವ ಜನತಾದಳದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ, ಸಂಸದ ಪ್ರಜ್ವಲ್ ರೇವಣ್ಣ, ಶಾಸಕ ಜಿ.ಕೆ.ವೆಂಕಟ ಶಿವಾರೆಡ್ಡಿ, ಬಿ.ಸುರೇಶ್ ಬಾಬು, ಕರೆಮ್ಮ ನಾಯಕ್, ನೇಮಿರಾಜ್ ನಾಯಕ್, ಸ್ವರೂಪ್ ಪ್ರಕಾಶ್, ರಾಜೂಗೌಡ, ಬಿ.ಎಂ. ಫಾರೂಕ್, ಎಂ.ಟಿ.ಕೃಷ್ಣಪ್ಪ, ಕೆ.ಎ.ತಿಪ್ಪೇಸ್ವಾಮಿ, ಟಿ ಎ ಶರವಣ, ಮಂಜೇಗೌಡ, ಮಾಜಿ ಶಾಸಕರಾದ ರಾಜಾ ವೆಂಕಟಪ್ಪ ನಾಯಕ ದೊರೆ, ಕೆಎಂ.ಕೃಷ್ಣಾರೆಡ್ಡಿ, ಡಿ.ನಾಗರಾಜಯ್ಯ, ಡಾ.ಕೆ.ಅನ್ನದಾನಿ, ದೊಡ್ಡನಗೌಡ ಪಾಟೀಲ್, ಸಿ.ಎಸ್.ಪುಟ್ಟರಾಜು, ಸುರೇಶ್ ಗೌಡ, ಶ್ರೀಕಂಠೇಗೌಡ, ಸುರೇಶ್ ಗೌಡ, ರವೀಂದ್ರ ಶ್ರೀಕಂಠಯ್ಯ, ಕೆ.ಪಿ.ಬಚ್ಚೇಗೌಡ, ದೇವಾನಂದ ಚೌಹಾಣ್, ಶಿವಶಂಕರ್, ಚೌಡರೆಡ್ಡಿ ತೂಪಲ್ಲಿ ಸೇರಿದಂತೆ ಪಕ್ಷದ ಹಲವಾರು ಮುಖಂಡರು, ಕೋರ್ ಕಮಿಟಿ ಸದಸ್ಯರು ಹಾಗೂ ಎಲ್ಲಾ ಲೋಕಸಭೆ ಕ್ಷೇತ್ರಗಳ ಚುನಾವಣೆ ಉಸ್ತುವಾರಿಗಳು ಉಪಸ್ಥಿತರಿದ್ದರು.

ಇದನ್ನೂ ಓದಿ : ಟಿಕೆಟ್ ಹಂಚಿಕೆ: ಬಿಜೆಪಿಗೆ ಬಂಡಾಯದ ಬಿಸಿ, ಜೆಡಿಎಸ್‌ನಲ್ಲಿ ಅತೃಪ್ತಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಂಗಾಳ SIR : ನ್ಯಾಯಮಂಡಳಿಗಳಿಂದ ಪರಿಹಾರ ಪಡೆದವರು ಕೇವಲ 0.01% ಜನ

ಪಶ್ಚಿಮ ಬಂಗಾಳದಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಲ್ಲಿ ಉಂಟಾದ ವಿವಾದಗಳನ್ನು ಬಗೆಹರಿಸಲು ಮೇಲ್ಮನವಿ ನ್ಯಾಯಮಂಡಳಿಗಳನ್ನು ಸ್ಥಾಪಿಸಲಾಗಿದೆ. ಎಸ್‌ಐಆರ್ ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದರ ಅಥವಾ...

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...