Homeಕರ್ನಾಟಕಬಿಜೆಪಿ-ಜೆಡಿಎಸ್ ಮೈತ್ರಿಯಲ್ಲಿ ಬಿರುಕು: ಜೆಡಿಎಸ್ ನಾಯಕರಿಂದ ಅಸಮಾಧಾನ ಸ್ಪೋಟ

ಬಿಜೆಪಿ-ಜೆಡಿಎಸ್ ಮೈತ್ರಿಯಲ್ಲಿ ಬಿರುಕು: ಜೆಡಿಎಸ್ ನಾಯಕರಿಂದ ಅಸಮಾಧಾನ ಸ್ಪೋಟ

- Advertisement -
- Advertisement -

ಇಪ್ಪತ್ತು ಲೋಕಸಭೆ ಕ್ಷೇತ್ರಗಳಿಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಣೆ ಮಾಡುವಾಗ ಜೆಡಿಎಸ್‌ ನಾಯಕರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳದಿರುವುದು ಮತ್ತು ಕೋಲಾರ ಕ್ಷೇತ್ರವನ್ನು ಜೆಡಿಎಸ್ ಪಕ್ಷಕ್ಕೆ ಬಿಟ್ಟು ಕೊಡಲು ಬಿಜೆಪಿ ವರಿಷ್ಠರು ಮೀನಾಮೇಷ ಎಣಿಸುತ್ತಿರುವ ಬಗ್ಗೆ ಜೆಡಿಎಸ್‌ ನಾಯಕರು ತೀವ್ರ ಅಸಮಾಧಾನ ಹೊರಹಾಕಿದ್ದಾರೆ ಎಂದು ತಿಳಿದು ಬಂದಿದೆ.

ಬೆಂಗಳೂರಿನ ಪಕ್ಷದ ರಾಜ್ಯ ಕಚೇರಿ ಜೆಪಿ ಭವನದಲ್ಲಿ ನಡೆದ ಕೋರ್ ಕಮಿಟಿ ಸದಸ್ಯರು ಹಾಗೂ ಚುನಾವಣಾ ಉಸ್ತುವಾರಿ, ಸಹ ಉಸ್ತುವಾರಿಗಳ ಸಭೆಯಲ್ಲಿ ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷ ಹೆಚ್. ಡಿ ದೇವೆಗೌಡರು ಹಾಗೂ  ಪಕ್ಷದ ರಾಜ್ಯಾಧ್ಯಕ್ಷ ಹೆಚ್.ಡಿ ಕುಮಾರಸ್ವಾಮಿ ಅವರ ಸಮಕ್ಷಮದಲ್ಲಿ ನಾಯಕರು ಅತೃಪ್ತಿ ವ್ಯಕ್ತಪಡಿಸಿದ್ದಾರೆ ಎನ್ನಲಾಗಿದೆ.

ಸಭೆಯಲ್ಲಿ ಒಬ್ಬೊಬ್ಬರಾಗಿಯೇ ತಮ್ಮ ಅಭಿಪ್ರಾಯವನ್ನು ಹೇಳಿದ ಮುಖಂಡರು;ಆರಂಭದಲ್ಲಿಯೇ ನಮ್ಮನ್ನು, ನಮ್ಮ ಪಕ್ಷವನ್ನು ಬಿಜೆಪಿ ನಿರ್ಲಕ್ಷ್ಯ ಮಾಡುತ್ತಿದೆ. ಚುನಾವಣಾ ಸಭೆ, ಪ್ರಚಾರವನ್ನು ನಮ್ಮನ್ನು ಬಿಟ್ಟು ಮಾಡುತ್ತಿದೆ. ಯಾವ ಸಭೆಗೂ ನಮ್ಮನ್ನು ಬಿಜೆಪಿಯವರು ಕರೆಯುತ್ತಿಲ್ಲ. ಇಪ್ಪತ್ತು ಕ್ಷೇತ್ರಗಳ ಅಭ್ಯರ್ಥಿಗಳನ್ನು ಆಯ್ಕೆ ಮಾಡಿದ ಬಿಜೆಪಿ, ಈ ಬಗ್ಗೆ ಜೆಡಿಎಸ್ ವರಿಷ್ಠರನ್ನು ವಿಶ್ವಾಸಕ್ಕೆ ತೆಗೆದುಕೊಂಡಿಲ್ಲ ಎಂದು ತಮ್ಮ ಬೇಸರವನ್ನು ತೋಡಿಕೊಂಡಿದ್ದಾರೆ ಎಂಬ ಮಾಹಿತಿ ದೊರೆತಿದೆ.

ಆರಂಭದಲ್ಲಿಯೇ ಹೀಗಾದರೆ ಮುಂದೇನು?

ಆರಂಭದಲ್ಲಿಯೇ ಹೀಗಾದರೆ ಮುಂದೇನು? ಇದು ಪಕ್ಷಕ್ಕೆ ಮಾರಕ. ರಾಜ್ಯದ 18 ಲೋಕಸಭೆ ಕ್ಷೇತ್ರಗಳಲ್ಲಿ ಬಿಜೆಪಿ ಅಭ್ಯರ್ಥಿಗಳನ್ನು ಗೆಲ್ಲಿಸುವ ಶಕ್ತಿ ಜೆಡಿಎಸ್ ಪಕ್ಷಕ್ಕೆ ಇದೆ. ಶೇ.3 ರಿಂದ 4ರಷ್ಟು ಜೆಡಿಎಸ್ ಮತಗಳು ಮೈತ್ರಿ ಅಭ್ಯರ್ಥಿಗೆ ಬಂದರೆ 28 ಕ್ಷೇತ್ರಗಳ ಪೈಕಿ 18 ಕ್ಷೇತ್ರಗಳಲ್ಲಿ ಬಿಜೆಪಿ ನಿರಾಯಾಸವಾಗಿ ಗೆಲ್ಲುತ್ತದೆ ಎಂದು ಅಂಕಿ ಅಂಶ ಇಟ್ಟುಕೊಂಡು ವರಿಷ್ಠರ ಮೇಲೆ ಮುಖಂಡರು ಒತ್ತಡ ಹೇರಿದ್ದಾರೆ.

ರಾಜ್ಯಕ್ಕೆ ಪ್ರಧಾನಿ ಬರುತ್ತಿದ್ದಾರೆ. ಭಾಷಣ ಮಾಡಿಕೊಂಡು ಹೋಗುತ್ತಿದ್ದಾರೆ. ನಮ್ಮ ಪಕ್ಷವನ್ನು ಸ್ಥಳೀಯ ಬಿಜೆಪಿ ವಿಶ್ವಾಸಕ್ಕೆ ತೆಗೆದುಕೊಳ್ಳುತ್ತಿಲ್ಲ. ಪ್ರಧಾನಿಗಳ ಸಭೆಗಳಿಗೆ ದೇವೇಗೌಡರು ಹಾಗೂ ಕುಮಾರಸ್ವಾಮಿ ಅವರನ್ನು ಕರೆಯಬೇಕಲ್ಲವೇ? ಕಲಬುರಗಿ ಸಭೆಗೂ ಜೆಡಿಎಸ್ ಸ್ಥಳೀಯ ಮುಖಂಡರನ್ನು ಕರೆದಿಲ್ಲ, ಅವರೇ ಮಾಡಿಕೊಂಡಿದ್ದಾರೆ. ಹೈದರಾಬಾದ್ ಕರ್ನಾಟಕ ಭಾಗದ ಜೆಡಿಎಸ್ ಶಾಸಕರು, ಮಾಜಿ ಶಾಸಕರಿಗೆ ಮಾಹಿತಿ ಕೊಟ್ಟಿಲ್ಲ. ಶಿವಮೊಗ್ಗ ಸಭೆಗೂ ದೇವೇಗೌಡರು, ಕುಮಾರಸ್ವಾಮಿ ಅವರನ್ನು ಕರೆಯಬಹುದಿತ್ತು. ಶಿವಮೊಗ್ಗ ಸಭೆಗೂ ನಮ್ಮ ನಾಯಕರನ್ನು ಕರೆದಿಲ್ಲ ಎಂದು ಮುಖಂಡರು ಸಿಟ್ಟು ತೋಡಿಕೊಂಡಿದ್ದಾರೆ.

ಎರಡು ಸೀಟಿಗಾಗಿ ಬಿಜೆಪಿ ಜೊತೆ ಮೈತ್ರಿ ಮಾಡಿಕೊಳ್ಳಬೇಕಿತ್ತಾ?

ನಮ್ಮ ಪಕ್ಷವನ್ನು ಒತ್ತೆ ಇಟ್ಟು ಮೈತ್ರಿ ಮಾಡಿಕೊಳ್ಳುವ ಅಗತ್ಯವಿಲ್ಲ. ನಮಗೆ ಮೋದಿಯವರ ಬಗ್ಗೆ ಅಪಾರ ಗೌರವ ಇದೆ. ಆ ಬಗ್ಗೆ ಎರಡನೇ ಮಾತೇ ಇಲ್ಲ. ಬಿಜೆಪಿಯಿಂದ ಇಂಥ ನಡವಳಿಕೆ ನಿರೀಕ್ಷೆ ಮಾಡಿರಲಿಲ್ಲ. ಕೋಲಾರ ಕ್ಷೇತ್ರ ಬಿಟ್ಟುಕೊಡುವ ಬಗ್ಗೆ ಬಿಜೆಪಿ ಮೀನಾಮೇಷ ಎಣಿಸುತ್ತಿದೆ. ಕೇವಲ ಎರಡು ಸೀಟಿಗಾಗಿ ನಾವು ಬಿಜೆಪಿ ಜೊತೆ ಮೈತ್ರಿ ಮಾಡಿಕೊಳ್ಳಬೇಕಿತ್ತಾ? ಇವತ್ತೇ ಕೋಲಾರ ಅಭ್ಯರ್ಥಿಯನ್ನು ಘೋಷಣೆ ಮಾಡಿ. ಇಂಥ ಅನಿಶ್ಚಿತತೆಯಿಂದ ಪಕ್ಷಕ್ಕೆ ನಷ್ಟ ಆಗುತ್ತದೆ ಎಂದು ಮುಖಂಡರು ತಮ್ಮ ಕಳವಳ ವ್ಯಕ್ತಪಡಿಸಿದ್ದಾರೆ.

ಕೋಲಾರ ಜೆಡಿಎಸ್ ಪಾಲಿನ ಕ್ಷೇತ್ರ ಎಂದು ಮೊದಲಿನಿಂದ ಹೇಳಿದ್ದೀರಿ ನೀವು. ಕೋಲಾರ, ಹಾಸನ, ಮಂಡ್ಯ ಸೇರಿದಂತೆ 5 ಕ್ಷೇತ್ರಗಳು ಜೆಡಿಎಸ್‌ಗೆ ಬರುತ್ತವೆ ಎಂದು ನೀವು ಹೇಳಿದ್ದಿರಿ. ಆದರೆ, ಈಗ ನೋಡಿದರೆ ಬಿಜೆಪಿ ಎರಡು ಸೀಟಿಗೆ ಬಂದು ನಿಂತಿದೆ ಎಂದು ಕುಮಾರಸ್ವಾಮಿ ಅವರನ್ನು ನಾಯಕರು ಪ್ರಶ್ನಿಸಿದ್ದಾರೆ ಎಂದು ಹೇಳಲಾಗ್ತಿದೆ.

ಮುಖಂಡರ ಮಾತುಗಳನ್ನು ಶಾಂತ ಚಿತ್ತದಿಂದ ಆಲಿಸಿದ ದೇವೇಗೌಡರು ಮತ್ತು ಕುಮಾರಸ್ವಾಮಿ ಅಸಮಾಧಾನಿತ ಮುಖಂಡರಿಗೆ ಸಮಾಧಾನ ಹೇಳಿದರು. ಅಮಿತ್ ಶಾ, ನಡ್ಡಾ  ಜೊತೆ ಮಾತನಾಡುವಂತೆ ಕುಮಾರಸ್ವಾಮಿಗೆ ಸೂಚನೆ ನೀಡಿದ ದೇವೇಗೌಡರು; ಇಲ್ಲವಾದರೆ ನಾನೇ ದೆಹಲಿಗೆ ಹೋಗಿ ಬರುತ್ತೇನೆ ಇದೇ ವೇಳೆ ಹೇಳಿದ್ದಾರೆ ಎನ್ನಲಾಗಿದೆ.

ಕೋಲಾರ ಕ್ಷೇತ್ರದ ಒಳ್ಳೆಯ ನಿರ್ಧಾರ ತೆಗೆದುಕೊಳ್ಳೋಣ ಎಂದು ಅಮಿತ್ ಶಾ ಅವರೇ ಹೇಳಿದ್ದಾರೆ ಎಂದು ಸಭೆಗೆ ತಿಳಿಸಿದ ಕುಮಾರಸ್ವಾಮಿ, “ಯಾವುದೇ ಕಾರಣಕ್ಕೂ ಪಕ್ಷದ ಹಿತಕ್ಕೆ ವಿರುದ್ಧವಾಗಿ ಹೆಜ್ಜೆ ಇಡುವುದಿಲ್ಲ. ಇದು ಬಿಜೆಪಿ ನಾಯಕರಿಗೂ ಗೊತ್ತಿದೆ” ಎಂದು ತಿಳಿಸಿದ್ದಾರೆ.

ರಾಜ್ಯ ಕೋರ್ ಕಮಿಟಿ ಅಧ್ಯಕ್ಷ ಜಿ.ಟಿ.ದೇವೇಗೌಡ, ಮಾಜಿ ಸಚಿವರಾದ ಹೆಚ್.ಡಿ.ರೇವಣ್ಣ, ಲೀಲಾದೇವಿ ಆರ್ ಪ್ರಸಾದ್, ಬಂಡೆಪ್ಪ ಕಾಷೆಂಪೂರ್, ವೆಂಕಟರಾವ್ ನಾಡಗೌಡ, ಯುವ ಜನತಾದಳದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ, ಸಂಸದ ಪ್ರಜ್ವಲ್ ರೇವಣ್ಣ, ಶಾಸಕ ಜಿ.ಕೆ.ವೆಂಕಟ ಶಿವಾರೆಡ್ಡಿ, ಬಿ.ಸುರೇಶ್ ಬಾಬು, ಕರೆಮ್ಮ ನಾಯಕ್, ನೇಮಿರಾಜ್ ನಾಯಕ್, ಸ್ವರೂಪ್ ಪ್ರಕಾಶ್, ರಾಜೂಗೌಡ, ಬಿ.ಎಂ. ಫಾರೂಕ್, ಎಂ.ಟಿ.ಕೃಷ್ಣಪ್ಪ, ಕೆ.ಎ.ತಿಪ್ಪೇಸ್ವಾಮಿ, ಟಿ ಎ ಶರವಣ, ಮಂಜೇಗೌಡ, ಮಾಜಿ ಶಾಸಕರಾದ ರಾಜಾ ವೆಂಕಟಪ್ಪ ನಾಯಕ ದೊರೆ, ಕೆಎಂ.ಕೃಷ್ಣಾರೆಡ್ಡಿ, ಡಿ.ನಾಗರಾಜಯ್ಯ, ಡಾ.ಕೆ.ಅನ್ನದಾನಿ, ದೊಡ್ಡನಗೌಡ ಪಾಟೀಲ್, ಸಿ.ಎಸ್.ಪುಟ್ಟರಾಜು, ಸುರೇಶ್ ಗೌಡ, ಶ್ರೀಕಂಠೇಗೌಡ, ಸುರೇಶ್ ಗೌಡ, ರವೀಂದ್ರ ಶ್ರೀಕಂಠಯ್ಯ, ಕೆ.ಪಿ.ಬಚ್ಚೇಗೌಡ, ದೇವಾನಂದ ಚೌಹಾಣ್, ಶಿವಶಂಕರ್, ಚೌಡರೆಡ್ಡಿ ತೂಪಲ್ಲಿ ಸೇರಿದಂತೆ ಪಕ್ಷದ ಹಲವಾರು ಮುಖಂಡರು, ಕೋರ್ ಕಮಿಟಿ ಸದಸ್ಯರು ಹಾಗೂ ಎಲ್ಲಾ ಲೋಕಸಭೆ ಕ್ಷೇತ್ರಗಳ ಚುನಾವಣೆ ಉಸ್ತುವಾರಿಗಳು ಉಪಸ್ಥಿತರಿದ್ದರು.

ಇದನ್ನೂ ಓದಿ : ಟಿಕೆಟ್ ಹಂಚಿಕೆ: ಬಿಜೆಪಿಗೆ ಬಂಡಾಯದ ಬಿಸಿ, ಜೆಡಿಎಸ್‌ನಲ್ಲಿ ಅತೃಪ್ತಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಎಸ್‌ಐಆರ್‌ಗೂ ಸರ್ಕಾರಿ ಸೌಲಭ್ಯಕ್ಕೂ ಲಿಂಕ್; ಅರ್ಜಿ ವಿಚಾರಣೆಗೆ ಸುಪ್ರೀಂ ನಕಾರ : ನಿಜವಾದ ಆತಂಕ

ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳದ ಹೊಸ ಸರ್ಕಾರ ನೀಡಿರುವ ಆದೇಶಗಳ ವಿರುದ್ಧ ಸಲ್ಲಿಕೆಯಾಗಿದ್ದ ಅರ್ಜಿಯೊಂದರ ತುರ್ತು ವಿಚಾರಣೆಗೆ ಸುಪ್ರೀಂ ಕೋರ್ಟ್ 23 ಜೂನ್ 2026ರಂದು ನಿರಾಕರಿಸಿದೆ. ವಿಧಾನಸಭೆ ಚುನಾವಣೆಗೆ ಮುನ್ನ ನಡೆದ ವಿಶೇಷ...

ಒಂಬತ್ತನೇ ತರಗತಿ ಪಠ್ಯಪುಸ್ತಕದಲ್ಲಿ ತುರ್ತು ಪರಿಸ್ಥಿತಿ ಅಧ್ಯಾಯ ಸೇರಿಸಿದ ಎನ್‌ಸಿಇಆರ್‌ಟಿ

ಭಾರತದಲ್ಲಿ ತುರ್ತು ಪರಿಸ್ಥಿತಿ ಘೋಷಿಸಲ್ಪಟ್ಟ ಸುಮಾರು ಐದು ದಶಕಗಳ ನಂತರ, ರಾಷ್ಟ್ರೀಯ ಶೈಕ್ಷಣಿಕ ಸಂಶೋಧನೆ ಮತ್ತು ತರಬೇತಿ ಮಂಡಳಿ (ಎನ್‌ಸಿಇಆರ್‌ಟಿ) ಈ ವಿಷಯವನ್ನು 9 ನೇ ತರಗತಿಯ ಸಮಾಜ ವಿಜ್ಞಾನ ಪಠ್ಯಪುಸ್ತಕದಲ್ಲಿ ಮೊದಲ...

‘ಆರ್‌ಎಸ್‌ಎಸ್ ಗಲಿಬಿಲಿಗೊಂಡರೆ ಬಿಜೆಪಿ ಬುಸುಗುಡುತ್ತದೆ’: ಗೃಹ ಸಚಿವ ಪ್ರಿಯಾಂಕ್ ಖರ್ಗೆ ವಾಗ್ದಾಳಿ

ಬೆಂಗಳೂರು: ರಾಷ್ಟ್ರೀಯ ಸ್ವಯಂಸೇವಕ ಸಂಘ (RSS) ಹಾಗೂ ಆಡಳಿತಾರೂಢ ಬಿಜೆಪಿ ವಿರುದ್ಧ ಕರ್ನಾಟಕದ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಮತ್ತೊಮ್ಮೆ ತೀವ್ರ ಸ್ವರೂಪದ ಸೈದ್ಧಾಂತಿಕ ದಾಳಿ ನಡೆಸಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲಿ ಸರಣಿ ಪ್ರಶ್ನೆಗಳನ್ನು...

ಹೊಸ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ ಜಾರಿಯ ಜೊತೆಯಲ್ಲೆ ಸುಪ್ರೀಂ ಕೋರ್ಟ್‌ಗೆ ಹೋಗಲು ಕರ್ನಾಟಕ ಸಜ್ಜು

ಕೇಂದ್ರ ಸರ್ಕಾರದ ಹೊಸ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ ‘ವಿಕಸಿತ ಭಾರತ-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ)’ (VB-G RAM G) ಕಾಯ್ದೆಯ ಹಲವು ನಿಯಮಗಳಿಗೆ ತೀವ್ರ ವಿರೋಧ ವ್ಯಕ್ತಪಡಿಸಿದ್ದರೂ...

ಉತ್ತರ ಪ್ರದೇಶ: ಮದುವೆ ರಿಸೆಪ್ಷನ್‌ನಲ್ಲಿ ಗೋಮಾಂಸ ಬಡಿಸಿದ ಆರೋಪ; ವರನ ತಂದೆ ಸೇರಿ ಏಳು ಮಂದಿ ಬಂಧನ, ಮಂಟಪ ಸೀಲ್

ಶಾಮ್ಲಿ (ಉತ್ತರ ಪ್ರದೇಶ): ಉತ್ತರ ಪ್ರದೇಶದ ಶಾಮ್ಲಿ ಜಿಲ್ಲೆಯ ಕೈರಾನಾ ಪಟ್ಟಣದಲ್ಲಿ ನಡೆದ ಮದುವೆ ಆರತಕ್ಷತೆ (ವಲೀಮಾ) ಸಮಾರಂಭವೊಂದು ಈಗ ಭಾರೀ ವಿವಾದಕ್ಕೆ ಕಾರಣವಾಗಿದೆ. ಸಮಾರಂಭದಲ್ಲಿ ಅತಿಥಿಗಳಿಗೆ ಗೋಮಾಂಸವನ್ನು ಬೇಯಿಸಿ ಬಡಿಸಲಾಗಿದೆ ಎಂಬ...

ರಾಮ ಮಂದಿರ ದೇಣಿಗೆ ವಿವಾದ: ಎಫ್‌ಐಆರ್ ದಾಖಲಿಸಿ ತ್ವರಿತ ನ್ಯಾಯಾಲಯದ ವಿಚಾರಣೆಗೆ ವಿಶ್ವ ಹಿಂದೂ ಪರಿಷತ್ ಆಗ್ರಹ

ರಾಮ ದೇಣಿಗೆ ವಿವಾದ ದುರುಪಯೋಗ ಕುರಿತು ಎಸ್‌ಐಟಿ ತನ್ನ ಪ್ರಾಥಮಿಕ ವರದಿಯನ್ನು ಸಲ್ಲಿಸಿದ ಕೂಡಲೇ, ಬಲಪಂಥೀಯ ಹಿಂದುತ್ವ ಸಂಘಟನೆ ವಿಶ್ವ ಹಿಂದೂ ಪರಿಷತ್ (ವಿಎಚ್‌ಪಿ) ಪ್ರಕರಣದಲ್ಲಿ ಎಫ್‌ಐಆರ್ ದಾಖಲಿಸಬೇಕೆಂದು ಒತ್ತಾಯಿಸಿದೆ. ವಿಎಚ್‌ಪಿ ಅಂತರರಾಷ್ಟ್ರೀಯ...

ಪಾಸ್‌ಪೋರ್ಟ್ ಪೌರತ್ವದ ದಾಖಲೆಯಲ್ಲ: ವಿದೇಶಾಂಗ ಸಚಿವಾಲಯ

ಪಾಸ್‌ಪೋರ್ಟ್ ಒಂದು ಪ್ರಯಾಣದ ದಾಖಲೆಯಾಗಿದೆಯೇ ಹೊರತು, ಪೌರತ್ವದ ದಾಖಲೆಯಲ್ಲ ಎಂದು ವಿದೇಶಾಂಗ ವ್ಯವಹಾರಗಳ ಸಚಿವಾಲಯದ (ಎಂಇಎ) ಅಧಿಕಾರಿಗಳು ಬುಧವಾರ (ಜೂನ್ 24) ತಿಳಿಸಿದ್ದಾರೆ. ಈ ಮೂಲಕ ಅವರು ಭಾರತೀಯ ಪೌರತ್ವವನ್ನು ಖಚಿತವಾಗಿ ಸಾಬೀತುಪಡಿಸುವ...

90 ಪ್ರಶ್ನೆ ಪತ್ರಿಕೆ ಸೋರಿಕೆಯಾಗಿದೆ, ಲಕ್ಷಾಂತರ ವಿದ್ಯಾರ್ಥಿಗಳ ಭವಿಷ್ಯ ಹಾಳಾಗಿದೆ ಆದರೆ ಪ್ರಧಾನ್ ತಮ್ಮ ಕುರ್ಚಿಗೆ ಅಂಟಿಕೊಂಡಿದ್ದಾರೆ: ಮಲ್ಲಿಕಾರ್ಜುನ ಖರ್ಗೆ

ನವದೆಹಲಿ: ದೇಶಾದ್ಯಂತ ಭಾರಿ ಸಂಚಲನ ಮೂಡಿಸಿರುವ 'ನೀಟ್' (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರದ ವಿರುದ್ಧ ವಿರೋಧ ಪಕ್ಷಗಳು ತಮ್ಮ ಆಕ್ರೋಶವನ್ನು ಮತ್ತಷ್ಟು ತೀವ್ರಗೊಳಿಸಿವೆ. ಪರೀಕ್ಷಾ ಅಕ್ರಮಗಳನ್ನು ವಿರೋಧಿಸಿ...

2023ರಿಂದ 20 ಸಾವಿರಕ್ಕೂ ಹೆಚ್ಚು ಪ್ಯಾಲೆಸ್ತೀನ್ ಮಕ್ಕಳನ್ನು ಹತ್ಯೆಗೈದ ಇಸ್ರೇಲ್; ಉದ್ದೇಶಪೂರ್ವಕ ‘ನರಮೇಧ’ ಎಂದ ವರದಿ

ಪ್ಯಾಲೆಸ್ತೀನ್ ಮಕ್ಕಳನ್ನು ಉದ್ದೇಶಪೂರ್ವಕವಾಗಿ ಗುರಿಯಾಗಿಸಿಕೊಂಡು ಹತ್ಯೆ ಮಾಡುವ ಮೂಲಕ ಇಸ್ರೇಲ್‌ ಸೇನೆ ನರಮೇಧ ನಡೆಸಿದೆ ಎಂದು ವಿಶ್ವಸಂಸ್ಥೆಯ ಸ್ವತಂತ್ರ ಅಂತಾರಾಷ್ಟ್ರೀಯ ವಿಚಾರಣಾ ಆಯೋಗ ಮಂಗಳವಾರ (ಜೂ.23) ತಿಳಿಸಿದೆ. ಇಸ್ರೇಲ್ ಪಡೆಗಳು ಅಕ್ಟೋಬರ್ 2023ರಿಂದ ಈವರೆಗೆ...

ಮೀಸಲಾತಿ ರದ್ದುಗೊಳಿಸಲು ಬಿಜೆಪಿ ಮೂರನೇ ಎರಡರಷ್ಟು ಬಹುಮತ ಬಯಸುತ್ತಿದೆ: ಜೈರಾಮ್‌ ರಮೇಶ್‌

ಲೋಕಸಭೆಯಲ್ಲಿ ಬಿಜೆಪಿ ಮೂರನೇ ಎರಡರಷ್ಟು ಬಹುಮತಕ್ಕಾಗಿ ಶ್ರಮಿಸುತ್ತಿದೆ. ಏಕೆಂದರೆ, ಮೀಸಲಾತಿಯನ್ನು ಕೊನೆಗೊಳಿಸಲು ಸಂವಿಧಾನವನ್ನು ತಿದ್ದುಪಡಿ ಮಾಡುವುದು ಅದರ ನಿಜವಾದ ಮತ್ತು ಅಂತಿಮ ಗುರಿಯಾಗಿದೆ ಎಂದು ಕಾಂಗ್ರೆಸ್ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಜೈರಾಮ್ ರಮೇಶ್...