Homeಕರ್ನಾಟಕಬಿಜೆಪಿ-ಜೆಡಿಎಸ್ ಮೈತ್ರಿಯಲ್ಲಿ ಬಿರುಕು: ಜೆಡಿಎಸ್ ನಾಯಕರಿಂದ ಅಸಮಾಧಾನ ಸ್ಪೋಟ

ಬಿಜೆಪಿ-ಜೆಡಿಎಸ್ ಮೈತ್ರಿಯಲ್ಲಿ ಬಿರುಕು: ಜೆಡಿಎಸ್ ನಾಯಕರಿಂದ ಅಸಮಾಧಾನ ಸ್ಪೋಟ

- Advertisement -
- Advertisement -

ಇಪ್ಪತ್ತು ಲೋಕಸಭೆ ಕ್ಷೇತ್ರಗಳಿಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಣೆ ಮಾಡುವಾಗ ಜೆಡಿಎಸ್‌ ನಾಯಕರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳದಿರುವುದು ಮತ್ತು ಕೋಲಾರ ಕ್ಷೇತ್ರವನ್ನು ಜೆಡಿಎಸ್ ಪಕ್ಷಕ್ಕೆ ಬಿಟ್ಟು ಕೊಡಲು ಬಿಜೆಪಿ ವರಿಷ್ಠರು ಮೀನಾಮೇಷ ಎಣಿಸುತ್ತಿರುವ ಬಗ್ಗೆ ಜೆಡಿಎಸ್‌ ನಾಯಕರು ತೀವ್ರ ಅಸಮಾಧಾನ ಹೊರಹಾಕಿದ್ದಾರೆ ಎಂದು ತಿಳಿದು ಬಂದಿದೆ.

ಬೆಂಗಳೂರಿನ ಪಕ್ಷದ ರಾಜ್ಯ ಕಚೇರಿ ಜೆಪಿ ಭವನದಲ್ಲಿ ನಡೆದ ಕೋರ್ ಕಮಿಟಿ ಸದಸ್ಯರು ಹಾಗೂ ಚುನಾವಣಾ ಉಸ್ತುವಾರಿ, ಸಹ ಉಸ್ತುವಾರಿಗಳ ಸಭೆಯಲ್ಲಿ ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷ ಹೆಚ್. ಡಿ ದೇವೆಗೌಡರು ಹಾಗೂ  ಪಕ್ಷದ ರಾಜ್ಯಾಧ್ಯಕ್ಷ ಹೆಚ್.ಡಿ ಕುಮಾರಸ್ವಾಮಿ ಅವರ ಸಮಕ್ಷಮದಲ್ಲಿ ನಾಯಕರು ಅತೃಪ್ತಿ ವ್ಯಕ್ತಪಡಿಸಿದ್ದಾರೆ ಎನ್ನಲಾಗಿದೆ.

ಸಭೆಯಲ್ಲಿ ಒಬ್ಬೊಬ್ಬರಾಗಿಯೇ ತಮ್ಮ ಅಭಿಪ್ರಾಯವನ್ನು ಹೇಳಿದ ಮುಖಂಡರು;ಆರಂಭದಲ್ಲಿಯೇ ನಮ್ಮನ್ನು, ನಮ್ಮ ಪಕ್ಷವನ್ನು ಬಿಜೆಪಿ ನಿರ್ಲಕ್ಷ್ಯ ಮಾಡುತ್ತಿದೆ. ಚುನಾವಣಾ ಸಭೆ, ಪ್ರಚಾರವನ್ನು ನಮ್ಮನ್ನು ಬಿಟ್ಟು ಮಾಡುತ್ತಿದೆ. ಯಾವ ಸಭೆಗೂ ನಮ್ಮನ್ನು ಬಿಜೆಪಿಯವರು ಕರೆಯುತ್ತಿಲ್ಲ. ಇಪ್ಪತ್ತು ಕ್ಷೇತ್ರಗಳ ಅಭ್ಯರ್ಥಿಗಳನ್ನು ಆಯ್ಕೆ ಮಾಡಿದ ಬಿಜೆಪಿ, ಈ ಬಗ್ಗೆ ಜೆಡಿಎಸ್ ವರಿಷ್ಠರನ್ನು ವಿಶ್ವಾಸಕ್ಕೆ ತೆಗೆದುಕೊಂಡಿಲ್ಲ ಎಂದು ತಮ್ಮ ಬೇಸರವನ್ನು ತೋಡಿಕೊಂಡಿದ್ದಾರೆ ಎಂಬ ಮಾಹಿತಿ ದೊರೆತಿದೆ.

ಆರಂಭದಲ್ಲಿಯೇ ಹೀಗಾದರೆ ಮುಂದೇನು?

ಆರಂಭದಲ್ಲಿಯೇ ಹೀಗಾದರೆ ಮುಂದೇನು? ಇದು ಪಕ್ಷಕ್ಕೆ ಮಾರಕ. ರಾಜ್ಯದ 18 ಲೋಕಸಭೆ ಕ್ಷೇತ್ರಗಳಲ್ಲಿ ಬಿಜೆಪಿ ಅಭ್ಯರ್ಥಿಗಳನ್ನು ಗೆಲ್ಲಿಸುವ ಶಕ್ತಿ ಜೆಡಿಎಸ್ ಪಕ್ಷಕ್ಕೆ ಇದೆ. ಶೇ.3 ರಿಂದ 4ರಷ್ಟು ಜೆಡಿಎಸ್ ಮತಗಳು ಮೈತ್ರಿ ಅಭ್ಯರ್ಥಿಗೆ ಬಂದರೆ 28 ಕ್ಷೇತ್ರಗಳ ಪೈಕಿ 18 ಕ್ಷೇತ್ರಗಳಲ್ಲಿ ಬಿಜೆಪಿ ನಿರಾಯಾಸವಾಗಿ ಗೆಲ್ಲುತ್ತದೆ ಎಂದು ಅಂಕಿ ಅಂಶ ಇಟ್ಟುಕೊಂಡು ವರಿಷ್ಠರ ಮೇಲೆ ಮುಖಂಡರು ಒತ್ತಡ ಹೇರಿದ್ದಾರೆ.

ರಾಜ್ಯಕ್ಕೆ ಪ್ರಧಾನಿ ಬರುತ್ತಿದ್ದಾರೆ. ಭಾಷಣ ಮಾಡಿಕೊಂಡು ಹೋಗುತ್ತಿದ್ದಾರೆ. ನಮ್ಮ ಪಕ್ಷವನ್ನು ಸ್ಥಳೀಯ ಬಿಜೆಪಿ ವಿಶ್ವಾಸಕ್ಕೆ ತೆಗೆದುಕೊಳ್ಳುತ್ತಿಲ್ಲ. ಪ್ರಧಾನಿಗಳ ಸಭೆಗಳಿಗೆ ದೇವೇಗೌಡರು ಹಾಗೂ ಕುಮಾರಸ್ವಾಮಿ ಅವರನ್ನು ಕರೆಯಬೇಕಲ್ಲವೇ? ಕಲಬುರಗಿ ಸಭೆಗೂ ಜೆಡಿಎಸ್ ಸ್ಥಳೀಯ ಮುಖಂಡರನ್ನು ಕರೆದಿಲ್ಲ, ಅವರೇ ಮಾಡಿಕೊಂಡಿದ್ದಾರೆ. ಹೈದರಾಬಾದ್ ಕರ್ನಾಟಕ ಭಾಗದ ಜೆಡಿಎಸ್ ಶಾಸಕರು, ಮಾಜಿ ಶಾಸಕರಿಗೆ ಮಾಹಿತಿ ಕೊಟ್ಟಿಲ್ಲ. ಶಿವಮೊಗ್ಗ ಸಭೆಗೂ ದೇವೇಗೌಡರು, ಕುಮಾರಸ್ವಾಮಿ ಅವರನ್ನು ಕರೆಯಬಹುದಿತ್ತು. ಶಿವಮೊಗ್ಗ ಸಭೆಗೂ ನಮ್ಮ ನಾಯಕರನ್ನು ಕರೆದಿಲ್ಲ ಎಂದು ಮುಖಂಡರು ಸಿಟ್ಟು ತೋಡಿಕೊಂಡಿದ್ದಾರೆ.

ಎರಡು ಸೀಟಿಗಾಗಿ ಬಿಜೆಪಿ ಜೊತೆ ಮೈತ್ರಿ ಮಾಡಿಕೊಳ್ಳಬೇಕಿತ್ತಾ?

ನಮ್ಮ ಪಕ್ಷವನ್ನು ಒತ್ತೆ ಇಟ್ಟು ಮೈತ್ರಿ ಮಾಡಿಕೊಳ್ಳುವ ಅಗತ್ಯವಿಲ್ಲ. ನಮಗೆ ಮೋದಿಯವರ ಬಗ್ಗೆ ಅಪಾರ ಗೌರವ ಇದೆ. ಆ ಬಗ್ಗೆ ಎರಡನೇ ಮಾತೇ ಇಲ್ಲ. ಬಿಜೆಪಿಯಿಂದ ಇಂಥ ನಡವಳಿಕೆ ನಿರೀಕ್ಷೆ ಮಾಡಿರಲಿಲ್ಲ. ಕೋಲಾರ ಕ್ಷೇತ್ರ ಬಿಟ್ಟುಕೊಡುವ ಬಗ್ಗೆ ಬಿಜೆಪಿ ಮೀನಾಮೇಷ ಎಣಿಸುತ್ತಿದೆ. ಕೇವಲ ಎರಡು ಸೀಟಿಗಾಗಿ ನಾವು ಬಿಜೆಪಿ ಜೊತೆ ಮೈತ್ರಿ ಮಾಡಿಕೊಳ್ಳಬೇಕಿತ್ತಾ? ಇವತ್ತೇ ಕೋಲಾರ ಅಭ್ಯರ್ಥಿಯನ್ನು ಘೋಷಣೆ ಮಾಡಿ. ಇಂಥ ಅನಿಶ್ಚಿತತೆಯಿಂದ ಪಕ್ಷಕ್ಕೆ ನಷ್ಟ ಆಗುತ್ತದೆ ಎಂದು ಮುಖಂಡರು ತಮ್ಮ ಕಳವಳ ವ್ಯಕ್ತಪಡಿಸಿದ್ದಾರೆ.

ಕೋಲಾರ ಜೆಡಿಎಸ್ ಪಾಲಿನ ಕ್ಷೇತ್ರ ಎಂದು ಮೊದಲಿನಿಂದ ಹೇಳಿದ್ದೀರಿ ನೀವು. ಕೋಲಾರ, ಹಾಸನ, ಮಂಡ್ಯ ಸೇರಿದಂತೆ 5 ಕ್ಷೇತ್ರಗಳು ಜೆಡಿಎಸ್‌ಗೆ ಬರುತ್ತವೆ ಎಂದು ನೀವು ಹೇಳಿದ್ದಿರಿ. ಆದರೆ, ಈಗ ನೋಡಿದರೆ ಬಿಜೆಪಿ ಎರಡು ಸೀಟಿಗೆ ಬಂದು ನಿಂತಿದೆ ಎಂದು ಕುಮಾರಸ್ವಾಮಿ ಅವರನ್ನು ನಾಯಕರು ಪ್ರಶ್ನಿಸಿದ್ದಾರೆ ಎಂದು ಹೇಳಲಾಗ್ತಿದೆ.

ಮುಖಂಡರ ಮಾತುಗಳನ್ನು ಶಾಂತ ಚಿತ್ತದಿಂದ ಆಲಿಸಿದ ದೇವೇಗೌಡರು ಮತ್ತು ಕುಮಾರಸ್ವಾಮಿ ಅಸಮಾಧಾನಿತ ಮುಖಂಡರಿಗೆ ಸಮಾಧಾನ ಹೇಳಿದರು. ಅಮಿತ್ ಶಾ, ನಡ್ಡಾ  ಜೊತೆ ಮಾತನಾಡುವಂತೆ ಕುಮಾರಸ್ವಾಮಿಗೆ ಸೂಚನೆ ನೀಡಿದ ದೇವೇಗೌಡರು; ಇಲ್ಲವಾದರೆ ನಾನೇ ದೆಹಲಿಗೆ ಹೋಗಿ ಬರುತ್ತೇನೆ ಇದೇ ವೇಳೆ ಹೇಳಿದ್ದಾರೆ ಎನ್ನಲಾಗಿದೆ.

ಕೋಲಾರ ಕ್ಷೇತ್ರದ ಒಳ್ಳೆಯ ನಿರ್ಧಾರ ತೆಗೆದುಕೊಳ್ಳೋಣ ಎಂದು ಅಮಿತ್ ಶಾ ಅವರೇ ಹೇಳಿದ್ದಾರೆ ಎಂದು ಸಭೆಗೆ ತಿಳಿಸಿದ ಕುಮಾರಸ್ವಾಮಿ, “ಯಾವುದೇ ಕಾರಣಕ್ಕೂ ಪಕ್ಷದ ಹಿತಕ್ಕೆ ವಿರುದ್ಧವಾಗಿ ಹೆಜ್ಜೆ ಇಡುವುದಿಲ್ಲ. ಇದು ಬಿಜೆಪಿ ನಾಯಕರಿಗೂ ಗೊತ್ತಿದೆ” ಎಂದು ತಿಳಿಸಿದ್ದಾರೆ.

ರಾಜ್ಯ ಕೋರ್ ಕಮಿಟಿ ಅಧ್ಯಕ್ಷ ಜಿ.ಟಿ.ದೇವೇಗೌಡ, ಮಾಜಿ ಸಚಿವರಾದ ಹೆಚ್.ಡಿ.ರೇವಣ್ಣ, ಲೀಲಾದೇವಿ ಆರ್ ಪ್ರಸಾದ್, ಬಂಡೆಪ್ಪ ಕಾಷೆಂಪೂರ್, ವೆಂಕಟರಾವ್ ನಾಡಗೌಡ, ಯುವ ಜನತಾದಳದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ, ಸಂಸದ ಪ್ರಜ್ವಲ್ ರೇವಣ್ಣ, ಶಾಸಕ ಜಿ.ಕೆ.ವೆಂಕಟ ಶಿವಾರೆಡ್ಡಿ, ಬಿ.ಸುರೇಶ್ ಬಾಬು, ಕರೆಮ್ಮ ನಾಯಕ್, ನೇಮಿರಾಜ್ ನಾಯಕ್, ಸ್ವರೂಪ್ ಪ್ರಕಾಶ್, ರಾಜೂಗೌಡ, ಬಿ.ಎಂ. ಫಾರೂಕ್, ಎಂ.ಟಿ.ಕೃಷ್ಣಪ್ಪ, ಕೆ.ಎ.ತಿಪ್ಪೇಸ್ವಾಮಿ, ಟಿ ಎ ಶರವಣ, ಮಂಜೇಗೌಡ, ಮಾಜಿ ಶಾಸಕರಾದ ರಾಜಾ ವೆಂಕಟಪ್ಪ ನಾಯಕ ದೊರೆ, ಕೆಎಂ.ಕೃಷ್ಣಾರೆಡ್ಡಿ, ಡಿ.ನಾಗರಾಜಯ್ಯ, ಡಾ.ಕೆ.ಅನ್ನದಾನಿ, ದೊಡ್ಡನಗೌಡ ಪಾಟೀಲ್, ಸಿ.ಎಸ್.ಪುಟ್ಟರಾಜು, ಸುರೇಶ್ ಗೌಡ, ಶ್ರೀಕಂಠೇಗೌಡ, ಸುರೇಶ್ ಗೌಡ, ರವೀಂದ್ರ ಶ್ರೀಕಂಠಯ್ಯ, ಕೆ.ಪಿ.ಬಚ್ಚೇಗೌಡ, ದೇವಾನಂದ ಚೌಹಾಣ್, ಶಿವಶಂಕರ್, ಚೌಡರೆಡ್ಡಿ ತೂಪಲ್ಲಿ ಸೇರಿದಂತೆ ಪಕ್ಷದ ಹಲವಾರು ಮುಖಂಡರು, ಕೋರ್ ಕಮಿಟಿ ಸದಸ್ಯರು ಹಾಗೂ ಎಲ್ಲಾ ಲೋಕಸಭೆ ಕ್ಷೇತ್ರಗಳ ಚುನಾವಣೆ ಉಸ್ತುವಾರಿಗಳು ಉಪಸ್ಥಿತರಿದ್ದರು.

ಇದನ್ನೂ ಓದಿ : ಟಿಕೆಟ್ ಹಂಚಿಕೆ: ಬಿಜೆಪಿಗೆ ಬಂಡಾಯದ ಬಿಸಿ, ಜೆಡಿಎಸ್‌ನಲ್ಲಿ ಅತೃಪ್ತಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ನುಡಿಯು ಸಿರಿಯಲ್ಲ ಬದುಕು’ ಕರಾವಳಿಯಲ್ಲಿ ಮತ್ತೆ ಪ್ರತಿರೋಧದ ಧ್ವನಿ: ನವೆಂಬರ್ 28-29ಕ್ಕೆ ‘ಜನನುಡಿ-2026’

"ನವೆಂಬರ್ ಕೊನೆಯ ಶನಿವಾರ ಮತ್ತು ಭಾನುವಾರ ಮಂಗಳೂರಿನಲ್ಲಿ ಕೇವಲ ವಿಚಾರ ಸಂಕಿರಣ ಮಾತ್ರವಲ್ಲ, ಹರಟೆ, ಚರ್ಚೆ, ಸೌಹಾರ್ದತೆಯ ಮೀನೂಟ ಹಾಗೂ ಪ್ರೀತಿಯೊಂದಿಗೆ ಸಂವಿಧಾನಿಕ ಮೌಲ್ಯಗಳನ್ನು ಎತ್ತಿಹಿಡಿಯುವ ಹೊಸ ಬೆಳಕನ್ನು ಕಂಡುಕೊಳ್ಳಲಿದ್ದೇವೆ," ಎಂದು 'ಅಭಿಮತ...

‘ಟ್ರಂಪ್’ ಗಾಗಿ ಭಾರತದ ಹಿತವನ್ನು ಬಲಿ ಕೊಟ್ಟ ಕೇಂದ್ರ: E20 ಎಥೆನಾಲ್ ನೀತಿ ಹಿಂಪಡೆಯಲು ಕೇಜ್ರಿವಾಲ್ ಪಟ್ಟು

ವಾಹನಗಳ ಎಂಜಿನ್‌ಗೆ ಹಾನಿಯುಂಟುಮಾಡುತ್ತಿದೆ ಎಂದು ಆರೋಪಿಸಲಾದ ಇ20 (E20) ಎಥೆನಾಲ್ ಮಿಶ್ರಿತ ಪೆಟ್ರೋಲ್ ನೀತಿಯನ್ನು ಹಿಂಪಡೆಯುವಂತೆ ಆಗ್ರಹಿಸಿ, ದೇಶಾದ್ಯಂತ ಸಂಗ್ರಹಿಸಲಾಗಿದ್ದ 2.30 ಲಕ್ಷಕ್ಕೂ ಅಧಿಕ ಸಾರ್ವಜನಿಕ ಸಹಿಗಳ ಮನವಿ ಪತ್ರದೊಂದಿಗೆ ಪ್ರಧಾನಿ ನರೇಂದ್ರ...

ಗಾಝಾ | ಇಸ್ರೇಲ್ ನರಮೇಧಕ್ಕೆ ಬಲಿಯಾದ ಎರಡು ಕುಟುಂಬಗಳ 112 ಸದಸ್ಯರ ಸಾಮೂಹಿಕ ಅಂತ್ಯಸಂಸ್ಕಾರ: ಸಾವಿರಾರು ಜನರಿಂದ ಕಣ್ಣೀರ ವಿದಾಯ

ಇಸ್ರೇಲ್ ಬಾಂಬ್ ದಾಳಿಯಿಂದ ಧ್ವಂಸಗೊಂಡಿದ್ದ ಮನೆಗಳ ಅವಶೇಷಗಳ ಅಡಿಯಲ್ಲಿ ಇತ್ತೀಚೆಗೆ ಪತ್ತೆಯಾದ ಗಾಝಾದ ಹಸಾಯ್ನ ಮತ್ತು ಅಬು ಶರಿಯಾ ಕುಟುಂಬಗಳ 112 ಸದಸ್ಯರ ಮೃತದೇಹಗಳ ಅಂತ್ಯ ಸಂಸ್ಕಾರ ಮಂಗಳವಾರ (ಆ.4) ನಡೆಯಿತು. ಸಾವಿರಾರು...

E20 ಇಂಧನ ರಾದ್ಧಾಂತ: ನಾಗ್ಪುರದಲ್ಲಿ ಗಡ್ಕರಿ ಮನೆಗೆ ಮುತ್ತಿಗೆ ಯತ್ನ, ಯುವ ಕಾಂಗ್ರೆಸ್ ಕಾರ್ಯಕರ್ತರ ಬಂಧನ

ಎಥೆನಾಲ್ ಮಿಶ್ರಿತ ಇ20 (E20) ಇಂಧನದಿಂದ ದೇಶದ ಲಕ್ಷಾಂತರ ವಾಹನ ಮಾಲೀಕರು ಎಂಜಿನ್ ಹಾನಿ ಮತ್ತು ಮೈಲೇಜ್ ಅಭಾವ ಎದುರಿಸುತ್ತಿದ್ದಾರೆ ಎಂಬ ಆಕ್ರೋಶದ ನಡುವೆಯೇ, ನಾಗ್ಪುರದಲ್ಲಿ ಕೇಂದ್ರ ರಸ್ತೆ ಸಾರಿಗೆ ಸಚಿವ ನಿತಿನ್...

ರಾಜ್ಯದಲ್ಲಿ ‘SIR’ ಅವಾಂತರ: 1.ಕೋಟಿಗೂ ಹೆಚ್ಚು ಮತದಾರರನ್ನು ಹೊರಗಿಡಲು ಸಂಚು, ‘SIR ವಿರೋಧಿ ಕರ್ನಾಟಕ’ ಆಕ್ರೋಶ

ಕರ್ನಾಟಕದಲ್ಲಿ ಜಾರಿಯಲ್ಲಿರುವ ಬೂತ್ ಮಟ್ಟದ ಮತದಾರರ ಪಟ್ಟಿ ಸರಿಪಡಿಸುವ 'ಎಸ್‌ಐಆರ್' (SIR) ಪ್ರಕ್ರಿಯೆಯಲ್ಲಿ ಭಾರೀ ಅವ್ಯವಹಾರ ಮತ್ತು ಕಪಟತನ ನಡೆದಿದ್ದು, ರಾಜ್ಯದ ಶೇ. 20 ರಷ್ಟು (ಆಗಸ್ಟ್ 2026ರ ಹೊತ್ತಿಗೆ ಸುಮಾರು 1.10...

‘ಜನರು ಬಿಜೆಪಿಯಿಂದ ಅತೃಪ್ತರಾಗಿದ್ದಾರೆ…’: ದಾಟಿಯಾ ಉಪಚುನಾವಣೆಯಲ್ಲಿ ಗೆಲುವಿನ ನಂತರ ಆಡಳಿತ ಪಕ್ಷದ ವಿರುದ್ಧ ಘನಶ್ಯಾಮ್ ಸಿಂಗ್ ವಾಗ್ದಾಳಿ

ಭೋಪಾಲ್ (ಮಧ್ಯಪ್ರದೇಶ): ಮಧ್ಯಪ್ರದೇಶದ ದಾಟಿಯಾ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ನೂತನವಾಗಿ ಆಯ್ಕೆಯಾಗಿರುವ ಕಾಂಗ್ರೆಸ್ ಶಾಸಕ ಘನಶ್ಯಾಮ್ ಸಿಂಗ್ ಅವರು, ತಮ್ಮ ಅಭೂತಪೂರ್ವ ಗೆಲುವನ್ನು ಬಿಜೆಪಿಯ 'ಭ್ರಷ್ಟಾಚಾರ'ಕ್ಕೆ ಸಾರ್ವಜನಿಕರು ನೀಡಿದ ತಕ್ಕ ಹಾಗೂ ಸೂಕ್ತ...

ಇಂದಿನ ವಿಚಾರಣೆ ಬಳಿಕ ಉದಯನಿಧಿ ಬಿಡುಗಡೆಗೆ ಮದ್ರಾಸ್ ಹೈಕೋರ್ಟ್ ನಿರ್ದೇಶನ

ಆಕ್ಷೇಪಾರ್ಹ ಹೇಳಿಕೆ ನೀಡಿದ ಆರೋಪದ ಮೇಲೆ ಬಂಧಿತರಾದ ತಮಿಳುನಾಡು ವಿಧಾನಸಭೆಯ ವಿಪಕ್ಷ ನಾಯಕ ಉದಯನಿಧಿ ಸ್ಟಾಲಿನ್ ಅವರನ್ನು, ವಿಚಾರಣೆಯಯ ಬಳಿಕ ಸ್ಟೇಷನ್ ಬೇಲ್ (ಠಾಣಾ ಜಾಮೀನು) ಮೇಲೆ ಬಿಡುಗಡೆ ಮಾಡುವಂತೆ ಮದ್ರಾಸ್ ಹೈಕೋರ್ಟ್...

ರಾಜೀನಾಮೆ ನೀಡಿದರೆ ಕೆಲವೇ ನಿಮಿಷಗಳಲ್ಲಿ ಅಂಗೀಕರಿಸುವೆ, ಸಚಿವ ಸ್ಥಾನ ವಂಚಿತರ ಬೆದರಿಕೆಗೆ ಸಿಎಂ ಡಿ.ಕೆ. ಶಿವಕುಮಾರ್ ವಾರ್ನಿಂಗ್

ಪಕ್ಷದ ಹಿತವೇ ಎಲ್ಲಕ್ಕಿಂತ ಮುಖ್ಯ. ಸಚಿವ ಸ್ಥಾನ ಸಿಗಲಿಲ್ಲ ಎಂಬ ಕಾರಣಕ್ಕೆ ಯಾರಾದರೂ ರಾಜೀನಾಮೆ ಸಲ್ಲಿಸಿದರೆ, ಕೆಲವೇ ನಿಮಿಷಗಳಲ್ಲಿ ಅದನ್ನು ನಾನು ಅಂಗೀಕರಿಸುತ್ತೇನೆ" ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಖಡಕ್ ಎಚ್ಚರಿಕೆ ನೀಡಿದ್ದಾರೆ. ಶಾಸಕರ...

ನಮಗೆ ಚುನಾವಣಾ ರಾಜಕೀಯದ ಉದ್ದೇಶವಿಲ್ಲ, ಜನಾಂದೋಲನವೇ ನಮ್ಮ ಗುರಿ: ಸಿಜೆಪಿ ಸಂಸ್ಥಾಪಕ ಅಭಿಜೀತ್ ದೀಪ್ಕೆ

ಕಾಕ್ರೋಚ್ ಜನತಾ ಪಾರ್ಟಿ (CJP) ಚುನಾವಣಾ ರಾಜಕೀಯಕ್ಕೆ ಪ್ರವೇಶಿಸುವ ಯಾವುದೇ ಉದ್ದೇಶವನ್ನು ಹೊಂದಿಲ್ಲ, ಬದಲಾಗಿ ದೇಶದ ಪ್ರಜಾಸತ್ತಾತ್ಮಕ ಸಂಸ್ಥೆಗಳ ಮೇಲಿನ ಜನರ ನಂಬಿಕೆಯನ್ನು ಮರುಸ್ಥಾಪಿಸಲು ಬೃಹತ್ ಜನಾಂದೋಲನವನ್ನು ಕಟ್ಟುವುದೇ ನಮ್ಮ ಮೂಲ ಗುರಿ...

ನೀಟ್ ಪ್ರತಿಭಟನೆ: ಮಧ್ಯಪ್ರದೇಶ ಪೊಲೀಸರು ಧರ್ಮದ ಕಾರಣಕ್ಕೆ ನನ್ನ ಕುಟುಂಬಕ್ಕೆ ಕಿರುಕುಳ ನೀಡುತ್ತಿದ್ದಾರೆ: ಜೆಎನ್‌ಯು ವಿದ್ಯಾರ್ಥಿ ನಾಯಕಿ ಡ್ಯಾನಿಶ್ ಅಲಿ ಆರೋಪ

ದೇಶದ ಶಿಕ್ಷಣ ವ್ಯವಸ್ಥೆಯ ಜವಾಬ್ದಾರಿಯನ್ನು ಪ್ರಶ್ನಿಸಿ ನಡೆದ ನೀಟ್ (NEET) ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಪ್ರತಿಭಟನೆಯಲ್ಲಿ ಸಕ್ರಿಯವಾಗಿ ಭಾಗವಹಿಸಿದ್ದಕ್ಕಾಗಿ, ಮಧ್ಯಪ್ರದೇಶ ಪೊಲೀಸರು ತಮ್ಮ ಕುಟುಂಬಕ್ಕೆ ಕಿರುಕುಳ ನೀಡುತ್ತಿದ್ದಾರೆ ಎಂದು ಜವಾಹರಲಾಲ್ ನೆಹರು ವಿಶ್ವವಿದ್ಯಾಲಯದ...