Homeಮುಖಪುಟಪಟಾಕಿ ಬ್ಯಾನ್: 4 ರಾಜ್ಯದ ಮುಖ್ಯಮಂತ್ರಿಗಳಿಗೆ ಪತ್ರ ಬರೆದ ತಮಿಳುನಾಡು ಸಿಎಂ ಸ್ಟಾಲಿನ್

ಪಟಾಕಿ ಬ್ಯಾನ್: 4 ರಾಜ್ಯದ ಮುಖ್ಯಮಂತ್ರಿಗಳಿಗೆ ಪತ್ರ ಬರೆದ ತಮಿಳುನಾಡು ಸಿಎಂ ಸ್ಟಾಲಿನ್

- Advertisement -
- Advertisement -

ದೆಹಲಿ, ಒಡಿಶಾ, ರಾಜಸ್ಥಾನ ಮತ್ತು ಹರಿಯಾಣದ ಮುಖ್ಯಮಂತ್ರಿಗಳಿಗೆ ಪತ್ರ ಬರೆದಿರುವ ತಮಿಳುನಾಡು ಸಿಎಂ ಎಂ.ಕೆ ಸ್ಟಾಲಿನ್, ಈ ರಾಜ್ಯಗಳು ಜಾರಿಗೆ ತಂದಿರುವ ಪಟಾಕಿ ನಿಷೇಧದ ನಿರ್ಧಾರವನ್ನು ಮರುಪರಿಶೀಲಿಸುವಂತೆ ಮನವಿ ಮಾಡಿದ್ದಾರೆ. ಸುಪ್ರೀಂ ಕೋರ್ಟ್ ಮತ್ತು ರಾಷ್ಟ್ರೀಯ ಹಸಿರು ನ್ಯಾಯಮಂಡಳಿ (ಎನ್‌ಜಿಟಿ) ಸೂಚಿಸಿರುವ ನಿರ್ದೇಶನಗಳಿಗೆ ಅನುಸಾರವಾಗಿ ಪಟಾಕಿ ಮಾರಾಟಕ್ಕೆ ಅನುಮತಿ ನೀಡುವಂತೆ ಸ್ಟಾಲಿನ್ ಕೇಳಿಕೊಂಡಿದ್ದಾರೆ.

ಸಣ್ಣ, ಅತಿ ಸಣ್ಣ ಮತ್ತು ಮಧ್ಯಮ ಉದ್ಯಮಗಳ (ಎಂಎಸ್‌ಎಂಇ) ವಲಯದ ಮೇಲೆ ಕೋವಿಡ್ -19 ಸಾಂಕ್ರಾಮಿಕ ಬೀರಿರುವ ಕೆಟ್ಟ ಪರಿಣಾಮದ ಬಗ್ಗೆ ತನ್ನ ಕಳವಳವನ್ನು ವ್ಯಕ್ತಪಡಿಸಿದ ಸ್ಟಾಲಿನ್, ಪಟಾಕಿ ಉದ್ಯಮವನ್ನು ಅವಲಂಬಿಸಿರುವ ಸುಮಾರು ಎಂಟು ಲಕ್ಷ ಕಾರ್ಮಿಕರ ಜೀವನವು ಪಟಾಕಿ ನಿಷೇಧದಿಂದಾಗಿ ಸಂಕಷ್ಟದಲ್ಲಿದೆ ಎಂದಿದ್ದಾರೆ.

ಪಟಾಕಿ ಬ್ಯಾನ್ ಮಾಡಿರುವ ದೆಹಲಿ, ಒಡಿಶಾ, ರಾಜಸ್ಥಾನ ಮತ್ತು ಹರಿಯಾಣ ರಾಜ್ಯಗಳ ವಾಯುಮಾಲಿನ್ಯದ ಕಾಳಜಿ ನನಗೆ ಅರ್ಥವಾಗುತ್ತದೆ. ಮಾನ್ಯ ಸುಪ್ರೀಂ ಕೋರ್ಟ್ ಈಗಾಗಲೇ ಕೆಲವು ವರ್ಗಗಳ ಮಾಲಿನ್ಯಕಾರಕ ಪಟಾಕಿಗಳನ್ನು ನಿಷೇಧಿಸಿದೆ. ಹಾಗಾಗಿ ಈಗ, ಕಡಿಮೆ ಪ್ರಮಾಣದ ಹೊರಸೂಸುವಿಕೆಯ ಹಸಿರು ಪಟಾಕಿಗಳನ್ನು ತಯಾರಿಸಲಾಗುತ್ತಿದೆ ಎಂಬುದನ್ನು ನಿಮ್ಮ ಗಮನಕ್ಕೆ ತರಲು ಬಯಸುತ್ತೇನೆ. ಆದ್ದರಿಂದ ಪಟಾಕಿಗಳ ಮೇಲಿನ ಸಂಪೂರ್ಣ ನಿಷೇಧವು ಸಮಂಜಸವಲ್ಲ ಎಂದು ಸ್ಟಾಲಿನ್ ಬರೆದಿದ್ದಾರೆ.

ಇದೇ ರೀತಿಯಾಗಿ ಉಳಿದ ರಾಜ್ಯಗಳು ಸಹ ಬ್ಯಾನ್ ಮಾಡಿದರೆ ಇಡೀ ಉದ್ಯಮವನ್ನೆ ಮುಚ್ಚಬೇಕಾದ ಪರಿಸ್ಥಿತಿ ಬರುತ್ತದೆ. ಇದರಿಂದ ಸುಮಾರು 8 ಲಕ್ಷ ಜನರ ಜೀವನೋಪಾಯ ಅಪಾಯಕ್ಕೆ ಸಿಲುಕಲಿದೆ. ಪಟಾಕಿಗಳನ್ನು ಸಿಡಿಸುವುದು ಭಾರತೀಯ ಹಬ್ಬಗಳ, ವಿಶೇಷವಾಗಿ ದೀಪಾವಳಿಯ ಅವಿಭಾಜ್ಯ ಅಂಗವಾಗಿದೆ ಎಂದು ನೀವು ಕೂಡ ಒಪ್ಪುತ್ತೀರಿ. ಪರಿಸರ, ಜೀವನೋಪಾಯ ಮತ್ತು ಸಾರ್ವಜನಿಕ ಆರೋಗ್ಯಕ್ಕೆ ಸಮರ್ಪಕ ಗೌರವ ನೀಡುವ ಸಮತೋಲಿತ ವಿಧಾನವು ಸಾಧ್ಯವಿದೆ ಮತ್ತು ಅಗತ್ಯವಾಗಿದೆ ಎಂದು ಸ್ಟಾಲಿನ್ ಪ್ರತಿಪಾದಿಸಿದ್ದಾರೆ.

ನಗರಗಳಲ್ಲಿ ಕೋವಿಡ್ -19 ಕಾರಣಕ್ಕೆ ಎಲ್ಲಾ ಪಟಾಕಿಗಳ ಸಂಪೂರ್ಣ ನಿಷೇಧಿಸಿರುವ ಎನ್‌ಜಿಟಿಯ ನಿಲುವು ಪ್ರಶ್ನಿಸಿ ಸಲ್ಲಿಸಲಾದ ಅರ್ಜಿಯನ್ನು ಸುಪ್ರೀಂ ಕೋರ್ಟ್ ಜುಲೈನಲ್ಲಿ ವಜಾಗೊಳಿಸಿತ್ತು. ಜೊತೆಗೆ ಆಯಾ ನಗರಗಳಲ್ಲಿ ಗಾಳಿಯ ಗುಣಮಟ್ಟದ ಸೂಚ್ಯಂಕದ (AQI) ವರ್ಗವನ್ನು ಆಧರಿಸಿ ಪಟಾಕಿಗಳ ಮಾರಾಟ ಮತ್ತು ಬಳಕೆಗೆ ಅಧಿಕಾರಿಗಳು ಅವಕಾಶ ನೀಡಬಹುದು ಎಂದು ಹೇಳಿತ್ತು. ಆದರೂ ಪಟಾಕಿ ಉತ್ಪಾದನೆಗೆ ಅನುಮತಿ ನೀಡಲಾಗಿದೆ ಎಂದು ಸುಪ್ರೀಂ ಕೋರ್ಟ್ ಹೇಳಿದೆ. ಪಟಾಕಿ ಸಿಡಿಸುವ ಮೂಲಕ ಆಚರಿಸಲು ಬಯಸುವ ಜನರು AQI ಆಧರಿಸಿ ಅಧಿಕಾರಿಗಳ ಅನುಮತಿಯೊಂದಿಗೆ ಸಿಡಿಸಬಹುದು ಎಂದು ನ್ಯಾಯಾಲಯ ಹೇಳಿದೆ.

ತಮಿಳುನಾಡಿನ ಶಿವಕಾಶಿ ನಗರವು ಅತಿ ಹೆಚ್ಚು ಪಟಾಕಿ ತಯಾರಿಸುವ ಕಾರ್ಖಾನೆಗಳನ್ನು ಹೊಂದಿದೆ. ಇಲ್ಲಿ ತಯಾರಾಗುವ ಪಟಾಕಿಗಳು ದೇಶದ ಹಲವು ರಾಜ್ಯಗಳಿಗೆ ರಫ್ತಾಗುತ್ತವೆ.


ಇದನ್ನೂ ಓದಿ: ಹಸಿರು ಪಟಾಕಿಗಳು ಎಂದರೇನು..? ಅವು ಮಾಲಿನ್ಯಕಾರಕವಲ್ಲವೇ..?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಒಳಮೀಸಲಾತಿ ಇಲ್ಲದೆ 56 ಸಾವಿರ ಹುದ್ದೆಗಳ ನೇಮಕಾತಿ ಇಲ್ಲ: ಸಚಿವ ಮುನಿಯಪ್ಪ

“ಒಳಮೀಸಲಾತಿ ಇಲ್ಲದೆ ಒಂದೇ ಒಂದು ಹುದ್ದೆಯನ್ನೂ ನೇಮಕ ಮಾಡಲು ಬಿಡುವುದಿಲ್ಲ, ಮುಖ್ಯಮಂತ್ರಿಗಳು ಈ ಬಗ್ಗೆ ಒಪ್ಪಿಕೊಂಡಿದ್ದಾರೆ. 27ರಂದು ನಡೆಯುವ ಸಚಿವ ಸಂಪುಟ ಸಭೆ ನಮಗೆ ಚಾರಿತ್ರಿಕವಾಗಲಿದೆ. ಮುಖ್ಯಮಂತ್ರಿಗಳ ಮೇಲೆ ವಿಶ್ವಾಸ ಇರಲಿ” ಎಂದು...

ಪಶ್ಚಿಮ ಏಷ್ಯಾ ಸಂಘರ್ಷ| ‘ಈ ಯುದ್ಧವನ್ನು ಕೊನೆಗೊಳಿಸಲು ಒಂದೇ ಮಾರ್ಗ…’: ಮೂರು ಷರತ್ತುಗಳನ್ನು ಮುಂದಿಟ್ಟ ಇರಾನ್

ಇರಾನ್ ಅಧ್ಯಕ್ಷ ಮಸೌದ್ ಪೆಜೆಶ್ಕಿಯಾನ್ ಅವರು ಅಮೆರಿಕ ಮತ್ತು ಇಸ್ರೇಲ್ ಜೊತೆಗಿನ ನಡೆಯುತ್ತಿರುವ ಸಂಘರ್ಷವನ್ನು ಕೊನೆಗೊಳಿಸಲು ಮೂರು ಷರತ್ತುಗಳನ್ನು ನಿಗದಿಪಡಿಸಿದ್ದಾರೆ. ಇದರಲ್ಲಿ ದೇಶವು ಭವಿಷ್ಯದ ದಾಳಿಗಳನ್ನು ಎದುರಿಸುವುದಿಲ್ಲ ಎಂಬ ಖಾತರಿಗಳು ಸೇರಿವೆ. ಬುಧವಾರ ತಮ್ಮ...

ಖಾಸಗಿ ಜಾಗದ ನಮಾಝ್‌ಗೆ ಅಧಿಕಾರಿಗಳಿಂದ ಅಡ್ಡಿ : ಮುಸ್ಲಿಂ ವ್ಯಕ್ತಿಗೆ ಭದ್ರತೆ ಒದಗಿಸಲು ಕೋರ್ಟ್ ಆದೇಶ

ಉತ್ತರ ಪ್ರದೇಶದ ಬರೇಲಿ ಜಿಲ್ಲೆಯ ಮುಸ್ಲಿಂ ವ್ಯಕ್ತಿಯೊಬ್ಬರು ತಮ್ಮ ಖಾಸಗಿ ಜಾಗದಲ್ಲಿ ಇತರರೊಂದಿಗೆ ನಮಾಝ್ ಮಾಡುವುದಕ್ಕೆ ಅಡ್ಡಿಪಡಿಸಲಾಗಿದೆ ಎಂದು ಆರೋಪಿಸಿದ ಹಿನ್ನೆಲೆ, ಅವರಿಗೆ ದಿನದ 24 ಗಂಟೆಯೂ ರಕ್ಷಣೆ ನೀಡಲು ಇಬ್ಬರು ಭದ್ರತಾ...

‘ಒಳಮೀಸಲಾತಿ ಜಾರಿಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಬಿಡುತ್ತಿಲ್ಲ’: ಮಂದಕೃಷ್ಣ ಮಾದಿಗ ಆರೋಪ

‘ಒಳಮೀಸಲಾತಿ ಜಾರಿಗೆ ತರುತ್ತೇವೆಂದು ಹೇಳಿದ್ದ ಕಾಂಗ್ರೆಸ್, ಈಗ ಒಳಮೀಸಲಾತಿ ಅನುಷ್ಠಾನದಲ್ಲಿ ಮೀನಾಮೇಷ ಎಣಿಸುತ್ತಿದೆ. ಕಾಂಗ್ರೆಸ್ ನ ಹೈಕಮಾಂಡ್ ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಹಾಗೂ ಪ್ರಿಯಾಂಕಾ ಗಾಂಧಿ. ಈ ಮೂವರನ್ನು ನಿಯಂತ್ರಿಸುವವರು ಕಾಂಗ್ರೆಸ್...

ಸಾವರ್ಕರ್ ಕುರಿತು ಹೇಳಿಕೆ : ರಾಹುಲ್ ಗಾಂಧಿ ವಿರುದ್ಧದ ಮಾನನಷ್ಟ ಮೊಕದ್ದಮೆ ರದ್ದು

ಭಾರತ್ ಜೋಡೋ ಯಾತ್ರೆಯ ಸಂದರ್ಭದಲ್ಲಿ (2022ರಲ್ಲಿ) ಹಿಂದುತ್ವ ಸಿದ್ಧಾಂತವಾದಿ ವಿನಾಯಕ ದಾಮೋದರ್ ಸಾವರ್ಕರ್ ಕುರಿತು ನೀಡಿದ್ದ ಹೇಳಿಕೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿದ್ದ ಮಾನನಷ್ಟ ಮೊಕದ್ದಮೆಯನ್ನು...

‘ಒಳಮೀಸಲಾತಿ ಜಾರಿಯಲ್ಲಿ ಸರ್ಕಾರ ನಿರ್ಲಕ್ಷ್ಯ ಧೋರಣೆ ತೋರಿದರೆ ಹೋರಾಟ ವಿಧಾನಸೌಧಕ್ಕೆ ಸ್ಥಳಾಂತರವಾಗುತ್ತದೆ’: ಮಾದರ ಚೆನ್ನಯ್ಯ ಸ್ವಾಮೀಜಿ

ಕಳೆದ 35 ವರ್ಷಗಳಿಂದ ಹಲವಾರು ಹೋರಾಟಗಾರರು ತಮ್ಮ ಜೀವ-ಜೀವನವನ್ನು ಅರ್ಪಿಸಿ, ಮನೆ-ಮಠವನ್ನು ಬಿಟ್ಟು ಒಳಮೀಸಲಾತಿ ಹೋರಾಟವನ್ನು ಅಂತಿಮ ಘಟ್ಟಕ್ಕೆ ತಂದಿದ್ದಾರೆ. ಅನೇಕರು ಬದುಕನ್ನು ಮಾತ್ರವಲ್ಲ, ಪ್ರಾಣವನ್ನೂ ಕಳೆದುಕೊಂಡಿದ್ದಾರೆ. ಇದು 2ನೇ ಸ್ವಾತಂತ್ರ್ಯ ಹೋರಾಟವಾಗಿದೆ....

ಎಸ್‌ಎನ್‌ಡಿಪಿ ಪ್ರಧಾನ ಕಾರ್ಯದರ್ಶಿ ಹುದ್ದೆಯಿಂದ ವೆಳ್ಳಾಪ್ಪಳ್ಳಿ ನಟೇಶನ್ ಅನರ್ಹ

ಶ್ರೀ ನಾರಾಯಣ ಧರ್ಮ ಪರಿಪಾಲನ ಯೋಗಂ (ಎಸ್‌ಎನ್‌ಡಿಪಿ ಯೋಗಂ) ನ ಪ್ರಧಾನ ಕಾರ್ಯದರ್ಶಿ ಮತ್ತು ಮತ್ತು ಎಸ್‌ಎನ್ ಟ್ರಸ್ಟ್‌ನ ಕಾರ್ಯದರ್ಶಿ ಸ್ಥಾನದಿಂದ ವೆಳ್ಳಾಪ್ಪಳ್ಳಿ ನಟೇಶನ್ ಅವರನ್ನು ಕೇರಳ ಹೈಕೋರ್ಟ್ ಗುರುವಾರ (ಮಾ.12) ಅನರ್ಹಗೊಳಿಸಿದ್ದು,...

‘ಫಾರೂಕ್ ಅಬ್ದುಲ್ಲಾರನ್ನು ಕೊಲ್ಲುವುದು ಸರ್ಕಾರದ ಉದ್ದೇಶವೇ?’..ರಾಜ್ಯ ಸಭೆಯಲ್ಲಿ ಖರ್ಗೆ ಪ್ರಶ್ನೆ

ಜಮ್ಮು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಹಾಗೂ ನ್ಯಾಷನಲ್ ಕಾನ್ಫರೆನ್ಸ್ (ಎನ್‌ಸಿ) ಪಕ್ಷದ ಮುಖ್ಯಸ್ಥ ಫಾರೂಕ್ ಅಬ್ದುಲ್ಲಾ ಅವರ ಹತ್ಯೆ ಯತ್ನ ವಿಚಾರವನ್ನು ವಿಪಕ್ಷ ಸದಸ್ಯರು ಗುರುವಾರ (ಮಾ.12) ರಾಜ್ಯಸಭೆಯಲ್ಲಿ ಪ್ರಸ್ತಾಪಿಸಿದರು. ಘಟನೆ ಬಗ್ಗೆ...

56 ಸಾವಿರ ಹುದ್ದೆಗಳ ನೇಮಕಾತಿಯಲ್ಲಿ ಒಳಮೀಸಲಾತಿ ಅನ್ವಯಕ್ಕೆ ಆಗ್ರಹಿಸಿ ಎಡಗೈ ಸಮುದಾಯದಿಂದ ಬೃಹತ್ ಪ್ರತಿಭಟನೆ 

ಸರ್ಕಾರವು ಒಳ ಮೀಸಲಾತಿಯನ್ನು ತಪ್ಪಿಸುವ ಹುನ್ನಾರದಿಂದ ತರಾತುರಿಯಲ್ಲಿ 56,432 ಹುದ್ದೆಗಳ ನೇಮಕಾತಿಗೆ ಆದೇಶ ಹೊರಡಿಸಿದೆ. ನೇಮಕಾತಿಯಲ್ಲಿ ಒಳಮೀಸಲಾತಿ ಅಳವಡಿಸದೆ, ಎಡಗೈ ಸಮುದಾಯಗಳಿಗೆ ಸರ್ಕಾರ ಮತ್ತೆ ವಂಚಿಸುತ್ತಿದೆ ಎಂದು ‘ಒಳಮೀಸಲಾತಿ ಹೋರಾಟ ಸಮಿತಿ’ ಆರೋಪಿಸಿದೆ....

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧದ ಅವಿಶ್ವಾಸ ನಿರ್ಣಯಕ್ಕೆ ಸೋಲು

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧ ವಿರೋಧ ಪಕ್ಷಗಳು ಮಂಡಿಸಿದ್ದ ಅವಿಶ್ವಾಸ ನಿರ್ಣಯವು ಬುಧವಾರ (ಮಾ.11) ಧ್ವನಿ ಮತದ ಮೂಲಕ ತಿರಸ್ಕಾರಗೊಂಡಿದೆ. ಸದನದಲ್ಲಿ ವಿರೋಧ ಪಕ್ಷಗಳ ತೀವ್ರ ಗದ್ದಲ ಮತ್ತು ಘೋಷಣೆಗಳ ನಡುವೆಯೇ ಸ್ಪೀಕರ್...