ಕೋಲ್ಕತ್ತಾದಲ್ಲಿ ಇಂದು ನಡೆದ ಬಿಜೆಪಿ ರ್ಯಾಲಿಯಲ್ಲಿ ಘರ್ಷಣೆ ಭುಗಿಲೆದ್ದಿದೆ. ಬಿಜೆಪಿ ಕಾರ್ಯಕರ್ತರ ಮೆರವಣಿಗೆ ವೇಳೆ ಕಲ್ಲು ತೂರಾಟ ನಡೆದಿದ್ದು ಹಿಂಸಾಚಾರಕ್ಕೆ ಕಾರಣವಾಗಿದೆ. ಭಾರೀ ಪೊಲೀಸ್ ಭದ್ರತೆಯೂ ನಡುವೆಯು ಕೆಲವರು ಗೋ ಬ್ಯಾಕ್ ಘೋಷಣೆ ಕೇಳಿಬಂದಿದ್ದು ಎರಡೂ ಕಡೆಯಿಂದ ಕಲ್ಲು ತೂರಾಟ ನಡೆದಿದೆ.
ಎಎನ್ಐ ಪ್ರಕಟಿಸಿದ ವಿಡಿಯೋದಲ್ಲಿ ಕಾಣುವಂತೆ ಒಂದು ಕಡೆ ಬಿಜೆಪಿ ಕಾರ್ಯಕರ್ತರ ಮೆರವಣಿಗೆ ನಡೆಯುತ್ತಿರುವಾಗಿ ಇನ್ನೊಂದು ಕಡೆಯಿಂದ ತೃಣಮೂಲ ಕಾಂಗ್ರೆಸ್ ಬಾವುಟ ಹಿಡಿದಿರುವ ಯುವಕರು ಗೋ ಬ್ಯಾಕ್ ಬಿಜೆಪಿ ಘೋಷಣೆ ಕೂಗಿದ್ದಾರೆ. ಆಗ ಅವರ ಮೇಲೆ ಕಲ್ಲು ತೂರಾಟ ನಡೆದಿದೆ. ಕುಪಿತಗೊಂಡ ಅವರು ಆ ಕಡೆಯಿಂದ ಕಲ್ಲು ತೂರಾಟ ನಡೆಸಿ ಪರಾರಿಯಾಗಿದ್ದಾರೆ. ನಂತರ ಬಿಜೆಪಿ ಕಾರ್ಯಕರ್ತರು ಅವರನ್ನು ಅಟ್ಟಿಸಿಕೊಂಡು ಓಡುತ್ತಿರುವುದನ್ನು ವಿಡಿಯೋದಲ್ಲಿ ಕಾಣಬಹುದು.
#WATCH | West Bengal: Stones were pelted at BJP workers who were part of a rally attended by Union Minister Debasree Chaudhuri, state BJP chief Dilip Ghosh and Suvendu Adhikari in Kolkata earlier today. pic.twitter.com/hLW8NEmWeX
— ANI (@ANI) January 18, 2021
ಕೋಲ್ಕತ್ತಾದಲ್ಲಿ ಇಂದು ನಡೆದ ಬಿಜೆಪಿ ಕಾರ್ಯಕ್ರಮದಲ್ಲಿ ಕೇಂದ್ರ ಸಚಿವ ದೇಬಶ್ರೀ ಚೌಧುರಿ, ರಾಜ್ಯ ಬಿಜೆಪಿ ಅಧ್ಯಕ್ಷ ದಿಲೀಪ್ ಘೋಷ್ ಮತ್ತು ಇತ್ತೀಚೆಗೆ ಟಿಎಂಸಿ ತೊರೆದು ಬಿಜೆಪಿ ಸೇರ್ಪಡೆಯಾದ ಸುವೇಂದು ಅಧಿಕಾರಿ ಭಾಗವಹಿಸಿದ್ದರು. ಅದಕ್ಕೂ ಮುನ್ನ ಈ ಘಟನೆ ನಡೆದಿದೆ.
ಘಟನೆ ನಂತರ ದಕ್ಷಿಣ ಕೋಲ್ಕತ್ತಾದ ಮುಡಿಯಾಲಿ ಪ್ರದೇಶದ ಬಳಿ ಮಮತಾ ಬ್ಯಾನರ್ಜಿವರ ನಿವಾಸದ ಬಳಿ ಭಾರೀ ಪೊಲೀಸ್ ಬಂದೋಬಸ್ತ್ ಒದಗಿಸಲಾಗಿದೆ ಎನ್ನಲಾಗಿದೆ. ಪಶ್ಚಿಮ ಬಂಗಾಳ ಚುನಾವಣೆಯ ಕಾರಣದಿಂದ ರಾಜ್ಯದಲ್ಲಿ ಟಿಎಂಸಿ ಮತ್ತು ಬಿಜೆಪಿ ನಡುವೆ ಹಲವು ಘರ್ಷಣೆಗಳು ವರದಿಯಾಗುತ್ತಿವೆ.
ಇನ್ನೊಂದೆಡೆ ನಂದಿಗ್ರಾಮದಲ್ಲಿ ಬೃಹತ್ ರ್ಯಾಲಿ ನಡೆಸಿದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ನಂದಿಗ್ರಾಮದಿಂದಲೇ ಸ್ಪರ್ಧಿಸುವುದಾಗಿ ಘೋಷಿಸಿದ್ದಾರೆ.
ಇದನ್ನೂ ಓದಿ: ಪ.ಬಂಗಾಳ ಚುನಾವಣೆ: ನಂದಿಗ್ರಾಮದಿಂದ ಸ್ಪರ್ಧಿಸುವುದಾಗಿ ಮಮತಾ ಬ್ಯಾನರ್ಜಿ ಘೋಷಣೆ


