Homeಮುಖಪುಟಲೈಂಗಿಕ ಕಳ್ಳಸಾಗಣೆ ಸಂತ್ರಸ್ತರಿಗೆ ಪುನರ್ವಸತಿ ಚೌಕಟ್ಟನ್ನು ರಚಿಸಿ: ಕೇಂದ್ರಕ್ಕೆ ಸುಪ್ರೀಂಕೋರ್ಟ್

ಲೈಂಗಿಕ ಕಳ್ಳಸಾಗಣೆ ಸಂತ್ರಸ್ತರಿಗೆ ಪುನರ್ವಸತಿ ಚೌಕಟ್ಟನ್ನು ರಚಿಸಿ: ಕೇಂದ್ರಕ್ಕೆ ಸುಪ್ರೀಂಕೋರ್ಟ್

- Advertisement -
- Advertisement -

ಲೈಂಗಿಕ ಕಳ್ಳಸಾಗಣೆಯ ಸಂತ್ರಸ್ತರಿಗೆ ಸಮಗ್ರ ಪುನರ್ವಸತಿ ಚೌಕಟ್ಟನ್ನು ಸ್ಥಾಪಿಸಲು ಸುಪ್ರಿಂಕೋರ್ಟ್ ಕೇಂದ್ರ ಸರ್ಕಾರಕ್ಕೆ ಹೇಳಿದ್ದು, ಈ ವಿಚಾರವನ್ನು ಪರಿಗಣಿಸಿ ಅಫಿಡವಿಟ್ ಸಲ್ಲಿಸುವಂತೆ ಶುಕ್ರವಾರ ಸೂಚಿಸಿದೆ. ಇಂತಹ ಅಪರಾಧಗಳ ಬಲಿಪಶುಗಳು ತಮ್ಮ ಕಳ್ಳಸಾಗಣೆದಾರರಿಂದ ಹೆಚ್ಚಾಗಿ ದೌರ್ಜನ್ಯಕ್ಕೊಳಗಾಗುತ್ತಾರೆ ಮತ್ತು ಅವರ ಮೇಲೆ ಹೇರಲಾಗುವ ದೈಹಿಕ ಮತ್ತು ಮಾನಸಿಕ ಹಿಂಸೆಯನ್ನು ಸಹಿಸಿಕೊಳ್ಳಬೇಕಾಗುತ್ತದೆ ಎಂದು ಸುಪ್ರೀಂ ಕೋರ್ಟ್ ಹೇಳಿದೆ. ಲೈಂಗಿಕ ಕಳ್ಳಸಾಗಣೆ

“ಮಾನವ ಮತ್ತು ಲೈಂಗಿಕ ಕಳ್ಳಸಾಗಾಣಿಕೆಯು ಬಲಿಪಶುವನ್ನು ಅಮಾನವೀಯಗೊಳಿಸುವ ಅಪರಾಧಗಳಾಗಿವೆ.ಇದು ಸಂತ್ರಸ್ತರ ಜೀವನ, ಸ್ವಾತಂತ್ರ್ಯ ಮತ್ತು ವೈಯಕ್ತಿಕ ಭದ್ರತೆಯ ಹಕ್ಕುಗಳನ್ನು ಉಲ್ಲಂಘಿಸುತ್ತದೆ. ಸಮಾಜದ ದುರ್ಬಲ ವರ್ಗಗಳು, ವಿಶೇಷವಾಗಿ ಮಹಿಳೆಯರು ಮತ್ತು ಮಕ್ಕಳು ಇಂತಹ ಅಪರಾಧಗಳಿಗೆ ಬಲಿಯಾಗುತ್ತಾರೆ” ಎಂದು ನ್ಯಾಯಮೂರ್ತಿಗಳಾದ ಜೆ ಬಿ ಪರ್ದಿವಾಲಾ ಮತ್ತು ಪಂಕಜ್ ಮಿಥಾಲ್ ಅವರ ನ್ಯಾಯಪೀಠ ಹೇಳಿದೆ. ಲೈಂಗಿಕ ಕಳ್ಳಸಾಗಣೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

“ಅವರು ಹಲವಾರು ಮಾರಣಾಂತಿಕ ಗಾಯಗಳಿಗೆ ಒಳಗಾಗುವ ಮತ್ತು ಲೈಂಗಿಕವಾಗಿ ಹರಡುವ ರೋಗಗಳು ಸೇರಿದಂತೆ ಸೋಂಕುಗಳು ಮತ್ತು ಅನಾರೋಗ್ಯಗಳಿಗೆ ಒಳಗಾಗುವ ಅಪಾಯವನ್ನು ಎದುರಿಸುತ್ತಾರೆ. ಅಷ್ಟೆ ಅಲ್ಲದೆ, ಮಾನಸಿಕ ಅನಾರೋಗ್ಯದ ಕಾರಣಕ್ಕೆ, ಭಯ, ಪೋಸ್ಟ್ ಟ್ರಾಮಾಟಿಕ್ ಸ್ಟ್ರೆಸ್ ಡಿಸಾರ್ಡರ್ (PTSD), ಖಿನ್ನತೆ ಮತ್ತು ಮಾದಕ ವ್ಯಸನಗಳಿಗೆ ದಾಸರಾಗುವ ಆತಂಕ ಇರುತ್ತದೆ” ಎಂದು ಪೀಠ ಹೇಳಿದೆ.

“ಸಮಾಜದ ಮುಖ್ಯವಾಹಿನಿಯಿಂದ ದೂರವಾಗುವುದು ಮತ್ತು ಅವರನ್ನು ಬಹಿಷ್ಕರಿಸುವುದು ಕೂಡಾ ಅಂತಹ ಅಪರಾಧಗಳೊಂದಿಗೆ ಸಂಬಂಧ ಹೊಂದಿದೆ. ಕಳ್ಳಸಾಗಣೆಗೆ ಒಳಗಾದ ವ್ಯಕ್ತಿಗಳು ಅಪರಾಧಿ ಮನೋಭಾವನೆಯಿಂದ ಮತ್ತು ಅವಮಾನಪಡಬೇಕಾದ ಕಾರಣದಿಂದಾಗಿ ಸಾಮಾಜಿಕವಾಗಿ ಥಟ್ಟನೆ ದೂರವಾಗುತ್ತಾರೆ” ಎಂದು ಪೀಠ ಹೇಳಿದೆ.

“ಈ ಅಪರಾಧದ ಕಾರಣಕ್ಕಾಗಿ ಅವರು ಸಮಾಜದಿಂದ ಮತ್ತಷ್ಟು ಪ್ರತ್ಯೇಕಿಸಲ್ಪಟ್ಟು, ಏಕಾಂತ ಅನುಭವಿಸುವ ದುರದೃಷ್ಟಕರ ಸಂಭವವಿರುತ್ತದೆ. ಈ ಅಪರಾಧವು ಅಂತಹ ಸ್ವಭಾವವನ್ನು ಹೊಂದಿದ್ದು ಅದು ಅವರ ಮುಂದಿನ ಶಿಕ್ಷಣ ಮತ್ತು ಕಲಿಕೆಯನ್ನು ಗಂಭೀರವಾಗಿ ಅಡ್ಡಿಪಡಿಸುತ್ತದೆ” ಎಂದು ಪೀಠವು ಹೇಳಿದೆ. ಲೈಂಗಿಕ ದೌರ್ಜನ್ಯಕ್ಕೆ ಒಳಗಾದವರ ಮೇಲಿನ 2015 ರ ತೀರ್ಪಿನ ಅನುಸರಣೆ ಕೋರಿ ಸಲ್ಲಿಸಲಾದ ಮನವಿಯನ್ನು ಸುಪ್ರೀಂ ಕೋರ್ಟ್ ವಿಚಾರಣೆ ನಡೆಸುತ್ತಿದೆ.

ಇದನ್ನೂ ಓದಿ: ”ಇದು ಯುಪಿ ಅಲ್ಲ” | ಆದಿತ್ಯನಾಥ್ ವಿರುದ್ಧ ಮಹಾರಾಷ್ಟ್ರ ಉಪ ಮುಖ್ಯಮಂತ್ರಿ ಅಜಿತ್ ಪವಾರ್ ಹೇಳಿಕೆ

”ಇದು ಯುಪಿ ಅಲ್ಲ” | ಆದಿತ್ಯನಾಥ್ ವಿರುದ್ಧ ಮಹಾರಾಷ್ಟ್ರ ಉಪ ಮುಖ್ಯಮಂತ್ರಿ ಅಜಿತ್ ಪವಾರ್ ಹೇಳಿಕೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರ ಬಜೆಟ್ 2026: ‘ಇದು ನನ್ನ ರಾಜಕೀಯ ಜೀವನದ ಅತ್ಯಂತ ನಿರಾಶಾದಾಯಕ ಬಜೆಟ್’: ಸಿಎಂ ಸಿದ್ದರಾಮಯ್ಯ

‘ಮೋದಿ ಸರ್ಕಾರ ಆರ್ಥಿಕ ದೂರದೃಷ್ಟಿಕೋನಗಳಿಲ್ಲದೆ, ದೇಶವನ್ನು ಯಾವ ದಿಕ್ಕಿನತ್ತ ಮುನ್ನಡೆಸಬೇಕು ಎನ್ನುವುದರ ಬಗ್ಗೆ ಸ್ಪಷ್ಟತೆ ಇಲ್ಲದೆ ದಣಿದಿದೆ ಎಂಬುದರ ಸಂಕೇತ ಈ 2026 ಬಜೆಟ್’ ಎಂದು ಸಿಎಂ ಸಿದ್ದರಾಮಯ್ಯ ಕಿಡಿ ಕಾರಿದ್ದಾರೆ.  ಕಲಬುರಗಿ ವಿಮಾನ...

ಕೇಂದ್ರ ಬಜೆಟ್ 2026: ಅಪರೂಪದ ಭೂಮಿಯ ಕಾರಿಡಾರ್‌ನಿಂದ ಹೈಸ್ಪೀಡ್ ರೈಲಿನವರೆಗೆ: ಚುನಾವಣೆ ನಡೆಯಲಿರುವ ರಾಜ್ಯಗಳಿಗೆ ಕೇಂದ್ರ ಬಜೆಟ್ ನಲ್ಲಿ ಸಿಕ್ಕಿದ್ದೇನು?

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ ಲೋಕಸಭೆಯಲ್ಲಿ ತಮ್ಮ ಸತತ 9 ನೇ ಬಜೆಟ್ ಅನ್ನು ಮಂಡಿಸಿದ್ದಾರೆ. ಈ ಬಜೆಟ್ ನಲ್ಲಿ ಕೇರಳ, ತಮಿಳುನಾಡು, ಪಶ್ಚಿಮ ಬಂಗಾಳ ಮತ್ತು ಅಸ್ಸಾಂನಂತಹ ಚುನಾವಣೆ...

ಬಲೂಚಿಸ್ತಾನ: ಭದ್ರತಾ ಕಾರ್ಯಾಚರಣೆಯಲ್ಲಿ 15 ಪಾಕ್ ಸೈನಿಕರು, 92 ಭಯೋತ್ಪಾದಕರು ಸಾವು

ಬಲೂಚಿಸ್ತಾನ ಪ್ರಾಂತ್ಯದ ಸುಮಾರು 12 ಸ್ಥಳಗಳಲ್ಲಿ ನಡೆದ ಭಯೋತ್ಪಾದನಾ ನಿಗ್ರಹ ಕಾರ್ಯಾಚರಣೆಗಳಲ್ಲಿ ಕನಿಷ್ಠ 15 ಪಾಕಿಸ್ತಾನಿ ಸೈನಿಕರು ಮತ್ತು 92 ಭಯೋತ್ಪಾದಕರನ್ನು ಹತ್ಯೆ ಮಾಡಲಾಗಿದೆ ಎಂದು ಪಾಕಿಸ್ತಾನಿ ಸೇನೆ ತಿಳಿಸಿರುವುದಾಗಿ ಪಿಟಿಐ ವರದಿ...

ಕೇಂದ್ರ ಬಜೆಟ್ 2026 | ಯಾವುದು ಅಗ್ಗ ಮತ್ತು ಯಾವುದು ದುಬಾರಿ..? 

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ (ಫೆಬ್ರವರಿ 1, 2026) ತಮ್ಮ ಒಂಬತ್ತನೇ ಬಜೆಟ್ ಮಂಡಿಸಿದ್ದಾರೆ. ಈ ವರ್ಷದ (2026-27 ಹಣಕಾಸು) ಬಜೆಟ್ ತೀವ್ರಗೊಳ್ಳುತ್ತಿರುವ ಜಾಗತಿಕ ವ್ಯಾಪಾರ ಉದ್ವಿಗ್ನತೆ, ರೂಪಾಯಿ ಮೌಲ್ಯದಲ್ಲಿ...

ಕೇಂದ್ರ ಬಜೆಟ್ 2026| ರಕ್ಷಣಾ ಇಲಾಖೆಗೆ 7.85 ಲಕ್ಷ ಕೋಟಿ ರೂ. ಮೀಸಲು

ಕೇಂದ್ರ ಸರ್ಕಾರದ ಬಜೆಟ್ 2026 ರಲ್ಲಿ ರಕ್ಷಣಾ ವೆಚ್ಚವನ್ನು ಗಣನೀಯವಾಗಿ ಹೆಚ್ಚಿಸಲಾಗಿದೆ. ಈ ವಲಯಕ್ಕೆ 7.85 ಲಕ್ಷ ಕೋಟಿ ರೂ.ಗಳನ್ನು ಮೀಸಲಿಟ್ಟಿದೆ. ಇದು ಕಳೆದ ವರ್ಷದ 6.81 ಲಕ್ಷ ಕೋಟಿ ರೂ.ಗಳಿಗಿಂತ ಗಮನಾರ್ಹ...

‘ಭಾರತ ವೆನೆಜುವೆಲಾದ ತೈಲ ಖರೀದಿಸಲಿದೆ’ ಎಂದ ಟ್ರಂಪ್: ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ಕಾಂಗ್ರೆಸ್

ನವದೆಹಲಿ: ಭಾರತ ಇರಾನ್ ಬದಲು ವೆನೆಜುವೆಲಾದಿಂದ ತೈಲ ಖರೀದಿಸಲಿದೆ ಎಂಬ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಹೇಳಿಕೆಗೆ ಸಂಬಂಧಿಸಿದಂತೆ ಕಾಂಗ್ರೆಸ್ ಭಾನುವಾರ ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದೆ. ಅಮೆರಿಕದ ನಾಯಕ "ನಮ್ಮ...

ಕೇಂದ್ರ ಬಜೆಟ್ 2026: ಕ್ಯಾನ್ಸರ್ ಸೇರಿದಂತೆ ಇತರ 7 ಕಾಯಿಲೆಗಳ ಔಷಧಿ ಬೆಲೆಯಲ್ಲಿ ಇಳಿಕೆ

ಗಂಭೀರ ಖಾಯಿಲೆಗಳಿಂದ ಬಳುತ್ತಿರುವ ರೋಗಿಗಳಿಗೆ ಗಮನಾರ್ಹ ಪರಿಹಾರವಾಗಿ, ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ 2026 ರ ಬಜೆಟ್‌ನಲ್ಲಿ 17 ವಿಧದ ಕ್ಯಾನ್ಸರ್ ಮತ್ತು ಇತರ ಏಳು ಗಂಭೀರ ಕಾಯಿಲೆಗಳ ಚಿಕಿತ್ಸೆಗೆ ಬಳಸುವ ಔಷಧಿಗಳನ್ನು...

ಕೇಂದ್ರ ಬಜೆಟ್ 2026: ಹೊಸ ಆದಾಯ ತೆರಿಗೆ ಕಾಯ್ದೆ ಜಾರಿಗೆ; ವಿದೇಶಿ ಪ್ರವಾಸದ ಟಿಸಿಎಸ್ ದರ ಶೇ.2ಕ್ಕೆ ಇಳಿಕೆ

ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ ಕೇಂದ್ರ ಬಜೆಟ್ 2026 ಅನ್ನು ಮಂಡಿಸಿದರು. "2025ರ ಏಪ್ರಿಲ್ 1 ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿಗೆ ಬರಲಿದೆ, ಪ್ರಸ್ತುತ ಶೇ.5 ಮತ್ತು ಶೇ.20...

ಗಾಜಾದಲ್ಲಿ ಇಸ್ರೇಲ್ ನಡೆಸಿದ ಹೊಸ ಕದನ ವಿರಾಮ ಉಲ್ಲಂಘನೆಯಲ್ಲಿ ಮಕ್ಕಳು ಸೇರಿದಂತೆ 31 ಮಂದಿ ಸಾವು

ಮೇ 2024ರ ನಂತರ ಇಸ್ರೇಲ್ ಮೊದಲ ಬಾರಿಗೆ ಈಜಿಪ್ಟ್‌ನೊಂದಿಗೆ ರಫಾ ಕ್ರಾಸಿಂಗ್ ಅನ್ನು ಮತ್ತೆ ತೆರೆಯಲು ಸಜ್ಜಾಗುತ್ತಿರುವ ಒಂದು ದಿನ ಮೊದಲು, ಅಲ್ ಜಜೀರಾ ಜೊತೆ ಮಾತನಾಡಿದ ವೈದ್ಯಕೀಯ ಮೂಲಗಳು, ಬೆಳಗಿನ ಜಾವದಿಂದ...

ಶಬರಿಮಲೆ ಚಿನ್ನ ಕಳವು ಪ್ರಕರಣ: ಎರಡನೇ ಪ್ರಕರಣದಲ್ಲೂ ಜಾಮೀನು ಕೋರಿ ಅರ್ಜಿ ಸಲ್ಲಿಸಿದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ

ಕೊಲ್ಲಂ (ಕೇರಳ): ಶಬರಿಮಲೆ ಚಿನ್ನ ಕಳವು ಪ್ರಕರಣದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ, ತಮ್ಮ ವಿರುದ್ಧ ದಾಖಲಾಗಿರುವ ಎರಡನೇ ಪ್ರಕರಣದಲ್ಲಿ ಶಾಸನಬದ್ಧ ಜಾಮೀನು ಕೋರಿ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದಾರೆ. ದ್ವಾರಪಾಲಕ (ರಕ್ಷಕ ದೇವತೆ) ವಿಗ್ರಹ...