Homeಮುಖಪುಟಲೈಂಗಿಕ ಕಳ್ಳಸಾಗಣೆ ಸಂತ್ರಸ್ತರಿಗೆ ಪುನರ್ವಸತಿ ಚೌಕಟ್ಟನ್ನು ರಚಿಸಿ: ಕೇಂದ್ರಕ್ಕೆ ಸುಪ್ರೀಂಕೋರ್ಟ್

ಲೈಂಗಿಕ ಕಳ್ಳಸಾಗಣೆ ಸಂತ್ರಸ್ತರಿಗೆ ಪುನರ್ವಸತಿ ಚೌಕಟ್ಟನ್ನು ರಚಿಸಿ: ಕೇಂದ್ರಕ್ಕೆ ಸುಪ್ರೀಂಕೋರ್ಟ್

- Advertisement -
- Advertisement -

ಲೈಂಗಿಕ ಕಳ್ಳಸಾಗಣೆಯ ಸಂತ್ರಸ್ತರಿಗೆ ಸಮಗ್ರ ಪುನರ್ವಸತಿ ಚೌಕಟ್ಟನ್ನು ಸ್ಥಾಪಿಸಲು ಸುಪ್ರಿಂಕೋರ್ಟ್ ಕೇಂದ್ರ ಸರ್ಕಾರಕ್ಕೆ ಹೇಳಿದ್ದು, ಈ ವಿಚಾರವನ್ನು ಪರಿಗಣಿಸಿ ಅಫಿಡವಿಟ್ ಸಲ್ಲಿಸುವಂತೆ ಶುಕ್ರವಾರ ಸೂಚಿಸಿದೆ. ಇಂತಹ ಅಪರಾಧಗಳ ಬಲಿಪಶುಗಳು ತಮ್ಮ ಕಳ್ಳಸಾಗಣೆದಾರರಿಂದ ಹೆಚ್ಚಾಗಿ ದೌರ್ಜನ್ಯಕ್ಕೊಳಗಾಗುತ್ತಾರೆ ಮತ್ತು ಅವರ ಮೇಲೆ ಹೇರಲಾಗುವ ದೈಹಿಕ ಮತ್ತು ಮಾನಸಿಕ ಹಿಂಸೆಯನ್ನು ಸಹಿಸಿಕೊಳ್ಳಬೇಕಾಗುತ್ತದೆ ಎಂದು ಸುಪ್ರೀಂ ಕೋರ್ಟ್ ಹೇಳಿದೆ. ಲೈಂಗಿಕ ಕಳ್ಳಸಾಗಣೆ

“ಮಾನವ ಮತ್ತು ಲೈಂಗಿಕ ಕಳ್ಳಸಾಗಾಣಿಕೆಯು ಬಲಿಪಶುವನ್ನು ಅಮಾನವೀಯಗೊಳಿಸುವ ಅಪರಾಧಗಳಾಗಿವೆ.ಇದು ಸಂತ್ರಸ್ತರ ಜೀವನ, ಸ್ವಾತಂತ್ರ್ಯ ಮತ್ತು ವೈಯಕ್ತಿಕ ಭದ್ರತೆಯ ಹಕ್ಕುಗಳನ್ನು ಉಲ್ಲಂಘಿಸುತ್ತದೆ. ಸಮಾಜದ ದುರ್ಬಲ ವರ್ಗಗಳು, ವಿಶೇಷವಾಗಿ ಮಹಿಳೆಯರು ಮತ್ತು ಮಕ್ಕಳು ಇಂತಹ ಅಪರಾಧಗಳಿಗೆ ಬಲಿಯಾಗುತ್ತಾರೆ” ಎಂದು ನ್ಯಾಯಮೂರ್ತಿಗಳಾದ ಜೆ ಬಿ ಪರ್ದಿವಾಲಾ ಮತ್ತು ಪಂಕಜ್ ಮಿಥಾಲ್ ಅವರ ನ್ಯಾಯಪೀಠ ಹೇಳಿದೆ. ಲೈಂಗಿಕ ಕಳ್ಳಸಾಗಣೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

“ಅವರು ಹಲವಾರು ಮಾರಣಾಂತಿಕ ಗಾಯಗಳಿಗೆ ಒಳಗಾಗುವ ಮತ್ತು ಲೈಂಗಿಕವಾಗಿ ಹರಡುವ ರೋಗಗಳು ಸೇರಿದಂತೆ ಸೋಂಕುಗಳು ಮತ್ತು ಅನಾರೋಗ್ಯಗಳಿಗೆ ಒಳಗಾಗುವ ಅಪಾಯವನ್ನು ಎದುರಿಸುತ್ತಾರೆ. ಅಷ್ಟೆ ಅಲ್ಲದೆ, ಮಾನಸಿಕ ಅನಾರೋಗ್ಯದ ಕಾರಣಕ್ಕೆ, ಭಯ, ಪೋಸ್ಟ್ ಟ್ರಾಮಾಟಿಕ್ ಸ್ಟ್ರೆಸ್ ಡಿಸಾರ್ಡರ್ (PTSD), ಖಿನ್ನತೆ ಮತ್ತು ಮಾದಕ ವ್ಯಸನಗಳಿಗೆ ದಾಸರಾಗುವ ಆತಂಕ ಇರುತ್ತದೆ” ಎಂದು ಪೀಠ ಹೇಳಿದೆ.

“ಸಮಾಜದ ಮುಖ್ಯವಾಹಿನಿಯಿಂದ ದೂರವಾಗುವುದು ಮತ್ತು ಅವರನ್ನು ಬಹಿಷ್ಕರಿಸುವುದು ಕೂಡಾ ಅಂತಹ ಅಪರಾಧಗಳೊಂದಿಗೆ ಸಂಬಂಧ ಹೊಂದಿದೆ. ಕಳ್ಳಸಾಗಣೆಗೆ ಒಳಗಾದ ವ್ಯಕ್ತಿಗಳು ಅಪರಾಧಿ ಮನೋಭಾವನೆಯಿಂದ ಮತ್ತು ಅವಮಾನಪಡಬೇಕಾದ ಕಾರಣದಿಂದಾಗಿ ಸಾಮಾಜಿಕವಾಗಿ ಥಟ್ಟನೆ ದೂರವಾಗುತ್ತಾರೆ” ಎಂದು ಪೀಠ ಹೇಳಿದೆ.

“ಈ ಅಪರಾಧದ ಕಾರಣಕ್ಕಾಗಿ ಅವರು ಸಮಾಜದಿಂದ ಮತ್ತಷ್ಟು ಪ್ರತ್ಯೇಕಿಸಲ್ಪಟ್ಟು, ಏಕಾಂತ ಅನುಭವಿಸುವ ದುರದೃಷ್ಟಕರ ಸಂಭವವಿರುತ್ತದೆ. ಈ ಅಪರಾಧವು ಅಂತಹ ಸ್ವಭಾವವನ್ನು ಹೊಂದಿದ್ದು ಅದು ಅವರ ಮುಂದಿನ ಶಿಕ್ಷಣ ಮತ್ತು ಕಲಿಕೆಯನ್ನು ಗಂಭೀರವಾಗಿ ಅಡ್ಡಿಪಡಿಸುತ್ತದೆ” ಎಂದು ಪೀಠವು ಹೇಳಿದೆ. ಲೈಂಗಿಕ ದೌರ್ಜನ್ಯಕ್ಕೆ ಒಳಗಾದವರ ಮೇಲಿನ 2015 ರ ತೀರ್ಪಿನ ಅನುಸರಣೆ ಕೋರಿ ಸಲ್ಲಿಸಲಾದ ಮನವಿಯನ್ನು ಸುಪ್ರೀಂ ಕೋರ್ಟ್ ವಿಚಾರಣೆ ನಡೆಸುತ್ತಿದೆ.

ಇದನ್ನೂ ಓದಿ: ”ಇದು ಯುಪಿ ಅಲ್ಲ” | ಆದಿತ್ಯನಾಥ್ ವಿರುದ್ಧ ಮಹಾರಾಷ್ಟ್ರ ಉಪ ಮುಖ್ಯಮಂತ್ರಿ ಅಜಿತ್ ಪವಾರ್ ಹೇಳಿಕೆ

”ಇದು ಯುಪಿ ಅಲ್ಲ” | ಆದಿತ್ಯನಾಥ್ ವಿರುದ್ಧ ಮಹಾರಾಷ್ಟ್ರ ಉಪ ಮುಖ್ಯಮಂತ್ರಿ ಅಜಿತ್ ಪವಾರ್ ಹೇಳಿಕೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಆರು ಮಕ್ಕಳಿದ್ದರೆ ನೀವು ಮತದಾನದ ಹಕ್ಕನ್ನು ಕಳೆದುಕೊಳ್ಳಬಹುದು: ಮತದಾರರ ಪಟ್ಟಿ ‘ಕ್ಲೀನ್’ ಮಾಡಲು ECI ಹೊಸ ಪ್ಲಾನ್!

ಭಾರತದಲ್ಲಿ 'ಆರು ಅಥವಾ ಅದಕ್ಕಿಂತ ಹೆಚ್ಚು ಮಕ್ಕಳನ್ನು ಹೊಂದಿದ್ದಾರೆ' ಎಂಬ ಕಾರಣಕ್ಕೆ ಯಾರಾದರೂ ಮತದಾನದ ಹಕ್ಕನ್ನು ಕಳೆದುಕೊಳ್ಳಲು ಸಾಧ್ಯವೇ? ಮೇಲ್ನೋಟಕ್ಕೆ ಹೌದು ಎನ್ನುವಂತಿದೆ ಉತ್ತರ ಪ್ರದೇಶದ ವಾರಾಣಸಿಯ ಕ್ಯಾಂಟೋನ್ಮೆಂಟ್ ಕ್ಷೇತ್ರದ ಮತದಾರ ಸೋನು...

ಕದನ ವಿರಾಮವೆಂಬ ಕಳ್ಳಾಟ : ಗಾಝಾದಿಂದ ಸಿರಿಯಾವರೆಗೆ ಮುಂದುವರಿದ ಇಸ್ರೇಲ್ ನರಮೇಧ

ಬರೋಬ್ಬರಿ ಎಪ್ಪತ್ತು ಸಾವಿರದಷ್ಟು (ವರದಿಗಳ ಪ್ರಕಾರ 67, 900) ಜನರನ್ನು ಹತ್ಯೆಗೈದು, ಶೇಕಡ 90ರಷ್ಟು ಜನರನ್ನು ನಿರಾಶ್ರಿತರನ್ನಾಗಿ ಮಾಡಿದ ಬಳಿಕ, ಅಕ್ಟೋಬರ್ 10, 2025ರಂದು ಗಾಝಾ ಮೇಲಿನ ಆಕ್ರಮಣಕ್ಕೆ ಸಂಬಂಧಿಸಿದಂತೆ ಇಸ್ರೇಲ್ ಕದನ...

ಚುನಾವಣಾ ಆಯೋಗಕ್ಕೆ ಪೌರತ್ವ ನಿರ್ಧಾರ ಮಾಡುವ ಹಕ್ಕಿದೆಯೇ? SIR ತೀರ್ಪಿನ ಬಗ್ಗೆ ಸುಪ್ರೀಂ ಕೋರ್ಟ್ ಹೇಳಿದ್ದೇನು?

ಮೇ 27 ರಂದು 'ಅಸೋಸಿಯೇಷನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ ಮತ್ತು ಭಾರತೀಯ ಚುನಾವಣಾ ಆಯೋಗ (ECI)' ನಡುವಿನ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದೆ. ಚುನಾವಣಾ ಪಟ್ಟಿಗಳ 'ವಿಶೇಷ ತೀವ್ರ ಪರಿಷ್ಕರಣೆ'...

ಮಹಾರಾಷ್ಟ್ರ: 80 ಲಕ್ಷ ಮಹಿಳೆಯರು ‘ಲಡ್ಕಿ ಬಹಿನ್’ ಯೋಜನೆಗೆ ಅನರ್ಹ: ಆರ್ಥಿಕ ಬಿಕ್ಕಟ್ಟಿಗೆ ಸಾಕ್ಷಿ ಎಂದು ವಿಪಕ್ಷಗಳ ಆರೋಪ

ಮುಂಬೈ: ಮಹಾರಾಷ್ಟ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾಗಿದ್ದ 'ಮುಖ್ಯಮಂತ್ರಿ ಮಾಝಿ ಲಡ್ಕಿ ಬಹಿನ್' ಇ-ಕೆವೈಸಿ (e-KYC) ಪ್ರಕ್ರಿಯೆ ಪೂರ್ಣಗೊಳಿಸಲು ನೀಡಿದ್ದ ಗಡುವು ಮುಗಿದಿದ್ದು, ಸುಮಾರು 80 ಲಕ್ಷ ಮಹಿಳೆಯರು ಯೋಜನೆಯಿಂದ ಅನರ್ಹರಾಗಿದ್ದಾರೆ. ರಾಜ್ಯ ಸರ್ಕಾರವು...

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...