Homeಮುಖಪುಟವಾಟ್ಸಾಪ್ ಪೋಲ್ ರಚಿಸಬಹುದು: ಹೇಗೆಂದು ಇಲ್ಲಿ ತಿಳಿಯಿರಿ

ವಾಟ್ಸಾಪ್ ಪೋಲ್ ರಚಿಸಬಹುದು: ಹೇಗೆಂದು ಇಲ್ಲಿ ತಿಳಿಯಿರಿ

- Advertisement -
- Advertisement -

ಅತಿ ಹೆಚ್ಚು ಜನರು ಬಳಸುವ, ಬಳಕೆದಾರರ ಸ್ನೇಹಿ ಮೇಜೆಂಜರ್ ಆಪ್ ಆದ ವಾಟ್ಸಾಪ್ ಹೊಸ ಹೊಸ ಪ್ರಯೋಗಗಳಿಗೆ ಮುಂದಾಗುತ್ತಿದೆ. ಇತ್ತೀಚೆಗೆ ತಾನೇ ವಾಟ್ಸಾಪ್ ಕಮ್ಯೂನಿಟಿಯನ್ನು ಪರಿಚಯಿಸಿದ್ದ ಮೆಟಾ ಕಂಪನಿಯು ಈಗ ವಾಟ್ಸಾಪ್ ಪೋಲ್ ರಚಿಸುವ ಅವಕಾಶವನ್ನು ಸಹ ನೀಡಿದೆ. ಆಂಡ್ರಾಯ್ಡ್ ಮತ್ತು iOS ಎರಡೂ ಫ್ಲಾಟ್‌ಫಾರಂಗಳಲ್ಲಿ ವಾಟ್ಸಾಪ್ ಪೋಲ್ ರಚಿಸಬಹುದಾಗಿದೆ. ಆದರೆ ವಾಟ್ಸಾಪ್ ವೆಬ್‌ನಲ್ಲಿ ಈ ಅವಕಾಶ ಇನ್ನೂ ಬಳಕೆಗೆ ಬಂದಿಲ್ಲ. ಅಲ್ಲಿ ಪೋಲ್ ಕ್ರಿಯೇಟ್ ಮಾಡಲಾಗದಿದ್ದರೂ ಮತ ಚಲಾಯಿಸಬಹುದಾಗಿದೆ.

ಪೋಲ್ ರಚಿಸುವುದು ಹೇಗೆ?

ಇತ್ತೀಚಿನ ವಾಟ್ಸಾಪ್ ಅಪ್ಟೇಡ್ ಆದ ಮೊಬೈಲ್‌ಗಳಲ್ಲಿ ಈ ಅವಕಾಶವಿದೆ. ಗುಂಪುಗಳಲ್ಲಿ ಮತ್ತು ವಯಕ್ತಿಕ ಚಾಟ್ ಎರಡೂ ಕಡೆ ಪೋಲ್ ಕ್ರಿಯೇಟ್ ಮಾಡಬಹುದು. ಯಾವುದೇ ಗುಂಪಿನಲ್ಲಿ ನಾವು ಫೈಲ್ ಆಡ್ ಮಾಡುವ ಬಟನ್ ಕ್ಲಿಕ್ ಮಾಡಿದರೆ ಕೊನೆಯ ಆಯ್ಕೆಯಾಗಿ ಪೋಲ್ ಆಪ್ಶನ್ ತೆರೆದುಕೊಳ್ಳುತ್ತದೆ. ಅದರ ಮೇಲೆ ಕ್ಲಿಕ್ ಮಾಡಿದರೆ ನೀವು ಪ್ರಶ್ನೆ ಬರೆದು ಅದಕ್ಕೆ 12 ಆಯ್ಕೆಗಳನ್ನು ನೀಡಬಹುದು.

ಒಂದೇ ಆಯ್ಕೆಯನ್ನು ನೀವು ಎರಡು ಬಾರಿ ನೀಡಿದರೆ ವಾಟ್ಸಾಪ್ ಅಲರ್ಟ್ ಮೆಸೇಜ್ ತೋರಿಸುತ್ತದೆ. ನಿಮಗೆ ಬೇಕಾದಷ್ಟು ಆಯ್ಕೆ ನೀಡಿ ಮುಂದಕ್ಕೆ ಮಾರ್ಕ್ ಒತ್ತಿದ್ದರೆ ಪೋಲ್ ಕ್ರಿಯೇಟ್ ಆಗುತ್ತದೆ.

ಮತ ಚಲಾಯಿಸುವುದು

ಒಮ್ಮೆ ಪೋಲ್ ಕ್ರಿಯೇಟ್ ಆದ ನಂತರ ಗುಂಪಿನಲ್ಲಿರುವ ಎಲ್ಲರೂ ತಮಗಿಷ್ಟ ಆಯ್ಕೆಯ ಮೇಲೆ ಕ್ಲಿಕ್ ಮಾಡುವು ಮೂಲಕ ಮತ ಚಲಾಯಿಸಬಹುದು. ಅದರ ಕೆಳಗೆ ವ್ಯೂವ್ ವೋಟ್ಸ್ ಎಂಬ ಆಯ್ಕೆಯ ಮೇಲೆ ಕ್ಲಿಕ್ ಮಾಡಿದರೆ ಯಾರು ಯಾವ ಆಯ್ಕೆ ಮಾಡಿದ್ದಾರೆ ಎಂಬುದರ ವಿವರ ದೊರೆಯುತ್ತದೆ. ಕೈತಪ್ಪಿನಿಂದ ತಪ್ಪು ಆಯ್ಕೆ ಮಾಡಿದರೆ ಅದರ ಮೇಲೆ ಮತ್ತೆ ಕ್ಲಿಕ್ ಮಾಡುವ ಮೂಲಕ ಮತ ವಾಪಸ್ ಪಡೆಯಬಹುದಾಗಿದೆ.

ಕೊರತೆ

ಇದರಲ್ಲಿ ಬಹುಮುಖ್ಯ ಕೊರತೆಯೆಂದರೆ ಮತ ಚಲಾಯಿಸುವವರು ಒಂದು ಆಯ್ಕೆ ಮಾತ್ರವಲ್ಲದೆ ಎಷ್ಟು ಬೇಕಾದರೂ ಆಯ್ಕೆ ಮಾಡಿಕೊಳ್ಳುವ ಅವಕಾಶವಿದೆ. ಇದರಿಂದಾಗಿ ಹೌದು ಮತ್ತು ಇಲ್ಲ ಎಂಬ ಎರಡೂ ಆಯ್ಕೆಯನ್ನು ಮಾಡಿಕೊಳ್ಳುವುದರಿಂದ ಅವರ ನಿರ್ಧಿಷ್ಟ ಮತ ಯಾವುದಕ್ಕೆ ಎಂಬುದಕ್ಕೆ ತಿಳಿಯುವುದು ಕಷ್ಟ.

ಒಟ್ಟಿನಲ್ಲಿ ವಾಟ್ಸಾಪ್‌ನ ಈ ಪೋಲ್ ಅವಕಾಶವನ್ನು ಜನರು ಹೇಗೆ ಬಳಸಿಕೊಳ್ಳುತ್ತಾರೆ ಎಂಬುದು ಕುತೂಹಲಕಾರಿಯಾಗಿದೆ.

ಇದನ್ನೂ ಓದಿ: ವಾಟ್ಸ್‌ಅಪ್‌‌ ಕಮ್ಯುನಿಟಿ’ ರಚಿಸುವುದು ಹೇಗೆ? ಏನಿದರ ವಿಶೇಷ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಾವರ್ಕರ್ ಕುರಿತು ಹೇಳಿಕೆ : ರಾಹುಲ್ ಗಾಂಧಿ ವಿರುದ್ಧದ ಮಾನನಷ್ಟ ಮೊಕದ್ದಮೆ ರದ್ದು

ಭಾರತ್ ಜೋಡೋ ಯಾತ್ರೆಯ ಸಂದರ್ಭದಲ್ಲಿ (2022ರಲ್ಲಿ) ಹಿಂದುತ್ವ ಸಿದ್ಧಾಂತವಾದಿ ವಿನಾಯಕ ದಾಮೋದರ್ ಸಾವರ್ಕರ್ ಕುರಿತು ನೀಡಿದ್ದ ಹೇಳಿಕೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿದ್ದ ಮಾನನಷ್ಟ ಮೊಕದ್ದಮೆಯನ್ನು...

‘ಒಳಮೀಸಲಾತಿ ಜಾರಿಯಲ್ಲಿ ಸರ್ಕಾರ ನಿರ್ಲಕ್ಷ್ಯ ಧೋರಣೆ ತೋರಿದರೆ ಹೋರಾಟ ವಿಧಾನಸೌಧಕ್ಕೆ ಸ್ಥಳಾಂತರವಾಗುತ್ತದೆ’: ಮಾದರ ಚೆನ್ನಯ್ಯ ಸ್ವಾಮೀಜಿ

ಕಳೆದ 35 ವರ್ಷಗಳಿಂದ ಹಲವಾರು ಹೋರಾಟಗಾರರು ತಮ್ಮ ಜೀವ-ಜೀವನವನ್ನು ಅರ್ಪಿಸಿ, ಮನೆ-ಮಠವನ್ನು ಬಿಟ್ಟು ಒಳಮೀಸಲಾತಿ ಹೋರಾಟವನ್ನು ಅಂತಿಮ ಘಟ್ಟಕ್ಕೆ ತಂದಿದ್ದಾರೆ. ಅನೇಕರು ಬದುಕನ್ನು ಮಾತ್ರವಲ್ಲ, ಪ್ರಾಣವನ್ನೂ ಕಳೆದುಕೊಂಡಿದ್ದಾರೆ. ಇದು 2ನೇ ಸ್ವಾತಂತ್ರ್ಯ ಹೋರಾಟವಾಗಿದೆ....

ಎಸ್‌ಎನ್‌ಡಿಪಿ ಪ್ರಧಾನ ಕಾರ್ಯದರ್ಶಿ ಹುದ್ದೆಯಿಂದ ವೆಳ್ಳಾಪ್ಪಳ್ಳಿ ನಟೇಶನ್ ಅನರ್ಹ

ಶ್ರೀ ನಾರಾಯಣ ಧರ್ಮ ಪರಿಪಾಲನ ಯೋಗಂ (ಎಸ್‌ಎನ್‌ಡಿಪಿ ಯೋಗಂ) ನ ಪ್ರಧಾನ ಕಾರ್ಯದರ್ಶಿ ಮತ್ತು ಮತ್ತು ಎಸ್‌ಎನ್ ಟ್ರಸ್ಟ್‌ನ ಕಾರ್ಯದರ್ಶಿ ಸ್ಥಾನದಿಂದ ವೆಳ್ಳಾಪ್ಪಳ್ಳಿ ನಟೇಶನ್ ಅವರನ್ನು ಕೇರಳ ಹೈಕೋರ್ಟ್ ಗುರುವಾರ (ಮಾ.12) ಅನರ್ಹಗೊಳಿಸಿದ್ದು,...

‘ಫಾರೂಕ್ ಅಬ್ದುಲ್ಲಾರನ್ನು ಕೊಲ್ಲುವುದು ಸರ್ಕಾರದ ಉದ್ದೇಶವೇ?’..ರಾಜ್ಯ ಸಭೆಯಲ್ಲಿ ಖರ್ಗೆ ಪ್ರಶ್ನೆ

ಜಮ್ಮು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಹಾಗೂ ನ್ಯಾಷನಲ್ ಕಾನ್ಫರೆನ್ಸ್ (ಎನ್‌ಸಿ) ಪಕ್ಷದ ಮುಖ್ಯಸ್ಥ ಫಾರೂಕ್ ಅಬ್ದುಲ್ಲಾ ಅವರ ಹತ್ಯೆ ಯತ್ನ ವಿಚಾರವನ್ನು ವಿಪಕ್ಷ ಸದಸ್ಯರು ಗುರುವಾರ (ಮಾ.12) ರಾಜ್ಯಸಭೆಯಲ್ಲಿ ಪ್ರಸ್ತಾಪಿಸಿದರು. ಘಟನೆ ಬಗ್ಗೆ...

56 ಸಾವಿರ ಹುದ್ದೆಗಳ ನೇಮಕಾತಿಯಲ್ಲಿ ಒಳಮೀಸಲಾತಿ ಅನ್ವಯಕ್ಕೆ ಆಗ್ರಹಿಸಿ ಎಡಗೈ ಸಮುದಾಯದಿಂದ ಬೃಹತ್ ಪ್ರತಿಭಟನೆ 

ಸರ್ಕಾರವು ಒಳ ಮೀಸಲಾತಿಯನ್ನು ತಪ್ಪಿಸುವ ಹುನ್ನಾರದಿಂದ ತರಾತುರಿಯಲ್ಲಿ 56,432 ಹುದ್ದೆಗಳ ನೇಮಕಾತಿಗೆ ಆದೇಶ ಹೊರಡಿಸಿದೆ. ನೇಮಕಾತಿಯಲ್ಲಿ ಒಳಮೀಸಲಾತಿ ಅಳವಡಿಸದೆ, ಎಡಗೈ ಸಮುದಾಯಗಳಿಗೆ ಸರ್ಕಾರ ಮತ್ತೆ ವಂಚಿಸುತ್ತಿದೆ ಎಂದು ‘ಒಳಮೀಸಲಾತಿ ಹೋರಾಟ ಸಮಿತಿ’ ಆರೋಪಿಸಿದೆ....

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧದ ಅವಿಶ್ವಾಸ ನಿರ್ಣಯಕ್ಕೆ ಸೋಲು

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧ ವಿರೋಧ ಪಕ್ಷಗಳು ಮಂಡಿಸಿದ್ದ ಅವಿಶ್ವಾಸ ನಿರ್ಣಯವು ಬುಧವಾರ (ಮಾ.11) ಧ್ವನಿ ಮತದ ಮೂಲಕ ತಿರಸ್ಕಾರಗೊಂಡಿದೆ. ಸದನದಲ್ಲಿ ವಿರೋಧ ಪಕ್ಷಗಳ ತೀವ್ರ ಗದ್ದಲ ಮತ್ತು ಘೋಷಣೆಗಳ ನಡುವೆಯೇ ಸ್ಪೀಕರ್...

ಉತ್ತರ ಪ್ರದೇಶ| ರಸ್ತೆ ಗುಂಡಿಗೆ ಇಳಿದ ಆಂಬ್ಯುಲೆನ್ಸ್; ಮರುಜೀವ ಪಡೆದ ಮೆದುಳು ನಿಷ್ಕ್ರಿಯಗೊಂಡಿದ್ದ ಮಹಿಳೆ!

ಉತ್ತರ ಪ್ರದೇಶದ ಬರೇಲಿಯ ಖಾಸಗಿ ಆಸ್ಪತ್ರೆಯೊಂದರ ವೈದ್ಯರು ಮೆದುಳು ನಿಷ್ಕ್ರಿಯ ಎಂದು ಘೋಷಿಸಿದ್ದು, ಮಹಿಳೆಯೊಬ್ಬರ ಮೃತದೇಹವನ್ನು ಅಂತ್ಯಕ್ರಿಯೆಗಾಗಿ ಮನೆಗೆ ಸಾಗಿಸುತ್ತಿದ್ದಾಗ ಆಂಬ್ಯುಲೆನ್ಸ್ ರಸ್ತೆಯ ಗುಂಡಿಗೆ ಇಳಿದ ನಂತರ ಆಕೆ ಜೀವಂತವಾಗಿರುವ ಲಕ್ಷಣಗಳು ಕಂಡುಬಂದು...

ಪಶ್ಚಿಮ ಏಷ್ಯಾ ಸಂಘರ್ಷ: ದುಬೈ ವಿಮಾನ ನಿಲ್ದಾಣದ ಮೇಲೆ ಇರಾನ್​ ಡ್ರೋನ್​ ದಾಳಿ; ಭಾರತೀಯ ಪ್ರಜೆ ಸೇರಿ ನಾಲ್ವರಿಗೆ ಗಾಯ

ದುಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಇರಾನಿನ ಎರಡು ಡ್ರೋಣಗಳಿಂದ ದಾಳಿ ನಡೆದಿದೆ. ಈ ದಾಳಿಯಲ್ಲಿ ಓರ್ವ ಭಾರತೀಯ ಸೇರಿದಂತೆ ನಾಲ್ವರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಲ್ಲಿನ ಸರ್ಕಾರದ ಪರವಾಗಿ ಪ್ರಕಟಣೆ ಹೊರಡಿಸಿರುವ...

ಜಾರ್ಖಂಡ್| ಆಂಬ್ಯುಲೆನ್ಸ್ ನಿರಾಕರಿಸಿದ ಆಸ್ಪತ್ರೆ ಸಿಬ್ಬಂದಿ; ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿದ ತಂದೆ

ಆಸ್ಪತ್ರೆ ಸಿಬ್ಬಂದಿ ಆಂಬ್ಯುಲೆನ್ಸ್ ನಿರಾಕರಿಸಿದ್ದರಿಂದ ಕೂಲಿಕಾರ ತಂದೆಯೊಬ್ಬ ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿರುವ ಹೃದಯವಿದ್ರಾವಕ ಘಟನೆಯೊಂದು ಜಾರ್ಖಂಡ್‌ನ ಪಶ್ಚಿಮ ಸಿಂಗ್ಭೂಮ್ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ಕಳೆದ ಶನಿವಾರ ನಡೆದಿದೆ ಎನ್ನಲಾದ...

ಮಧುರಾಂತಕಂ ಬಳಿ 14 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ: ಪೋಕ್ಸೋ ಪ್ರಕರಣದಡಿ ಓರ್ವ ರೌಡಿ ಶೀಟರ್ ಬಂಧನ

ಚೆನ್ನೈ (ಚೆಂಗಲ್ಪಟ್ಟು): ಸೋಮವಾರ ರಾತ್ರಿ ಮಧುರಾಂಟಕಂ ಬಳಿಯ ಜಲಮೂಲದ ದಡದಲ್ಲಿ 14 ವರ್ಷದ ಬಾಲಕಿಯ ಮೇಲೆ ರೌಡಿ ಶೀಟರ್ ಮತ್ತು ಆತನ ಸಹಚರರು ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ವರದಿಯಾಗಿದೆ. ಪ್ರಕರಣ ಸಂಬಂಧ ಪೋಕ್ಸೋ...