Homeಮುಖಪುಟವಾಟ್ಸಾಪ್ ಪೋಲ್ ರಚಿಸಬಹುದು: ಹೇಗೆಂದು ಇಲ್ಲಿ ತಿಳಿಯಿರಿ

ವಾಟ್ಸಾಪ್ ಪೋಲ್ ರಚಿಸಬಹುದು: ಹೇಗೆಂದು ಇಲ್ಲಿ ತಿಳಿಯಿರಿ

- Advertisement -
- Advertisement -

ಅತಿ ಹೆಚ್ಚು ಜನರು ಬಳಸುವ, ಬಳಕೆದಾರರ ಸ್ನೇಹಿ ಮೇಜೆಂಜರ್ ಆಪ್ ಆದ ವಾಟ್ಸಾಪ್ ಹೊಸ ಹೊಸ ಪ್ರಯೋಗಗಳಿಗೆ ಮುಂದಾಗುತ್ತಿದೆ. ಇತ್ತೀಚೆಗೆ ತಾನೇ ವಾಟ್ಸಾಪ್ ಕಮ್ಯೂನಿಟಿಯನ್ನು ಪರಿಚಯಿಸಿದ್ದ ಮೆಟಾ ಕಂಪನಿಯು ಈಗ ವಾಟ್ಸಾಪ್ ಪೋಲ್ ರಚಿಸುವ ಅವಕಾಶವನ್ನು ಸಹ ನೀಡಿದೆ. ಆಂಡ್ರಾಯ್ಡ್ ಮತ್ತು iOS ಎರಡೂ ಫ್ಲಾಟ್‌ಫಾರಂಗಳಲ್ಲಿ ವಾಟ್ಸಾಪ್ ಪೋಲ್ ರಚಿಸಬಹುದಾಗಿದೆ. ಆದರೆ ವಾಟ್ಸಾಪ್ ವೆಬ್‌ನಲ್ಲಿ ಈ ಅವಕಾಶ ಇನ್ನೂ ಬಳಕೆಗೆ ಬಂದಿಲ್ಲ. ಅಲ್ಲಿ ಪೋಲ್ ಕ್ರಿಯೇಟ್ ಮಾಡಲಾಗದಿದ್ದರೂ ಮತ ಚಲಾಯಿಸಬಹುದಾಗಿದೆ.

ಪೋಲ್ ರಚಿಸುವುದು ಹೇಗೆ?

ಇತ್ತೀಚಿನ ವಾಟ್ಸಾಪ್ ಅಪ್ಟೇಡ್ ಆದ ಮೊಬೈಲ್‌ಗಳಲ್ಲಿ ಈ ಅವಕಾಶವಿದೆ. ಗುಂಪುಗಳಲ್ಲಿ ಮತ್ತು ವಯಕ್ತಿಕ ಚಾಟ್ ಎರಡೂ ಕಡೆ ಪೋಲ್ ಕ್ರಿಯೇಟ್ ಮಾಡಬಹುದು. ಯಾವುದೇ ಗುಂಪಿನಲ್ಲಿ ನಾವು ಫೈಲ್ ಆಡ್ ಮಾಡುವ ಬಟನ್ ಕ್ಲಿಕ್ ಮಾಡಿದರೆ ಕೊನೆಯ ಆಯ್ಕೆಯಾಗಿ ಪೋಲ್ ಆಪ್ಶನ್ ತೆರೆದುಕೊಳ್ಳುತ್ತದೆ. ಅದರ ಮೇಲೆ ಕ್ಲಿಕ್ ಮಾಡಿದರೆ ನೀವು ಪ್ರಶ್ನೆ ಬರೆದು ಅದಕ್ಕೆ 12 ಆಯ್ಕೆಗಳನ್ನು ನೀಡಬಹುದು.

ಒಂದೇ ಆಯ್ಕೆಯನ್ನು ನೀವು ಎರಡು ಬಾರಿ ನೀಡಿದರೆ ವಾಟ್ಸಾಪ್ ಅಲರ್ಟ್ ಮೆಸೇಜ್ ತೋರಿಸುತ್ತದೆ. ನಿಮಗೆ ಬೇಕಾದಷ್ಟು ಆಯ್ಕೆ ನೀಡಿ ಮುಂದಕ್ಕೆ ಮಾರ್ಕ್ ಒತ್ತಿದ್ದರೆ ಪೋಲ್ ಕ್ರಿಯೇಟ್ ಆಗುತ್ತದೆ.

ಮತ ಚಲಾಯಿಸುವುದು

ಒಮ್ಮೆ ಪೋಲ್ ಕ್ರಿಯೇಟ್ ಆದ ನಂತರ ಗುಂಪಿನಲ್ಲಿರುವ ಎಲ್ಲರೂ ತಮಗಿಷ್ಟ ಆಯ್ಕೆಯ ಮೇಲೆ ಕ್ಲಿಕ್ ಮಾಡುವು ಮೂಲಕ ಮತ ಚಲಾಯಿಸಬಹುದು. ಅದರ ಕೆಳಗೆ ವ್ಯೂವ್ ವೋಟ್ಸ್ ಎಂಬ ಆಯ್ಕೆಯ ಮೇಲೆ ಕ್ಲಿಕ್ ಮಾಡಿದರೆ ಯಾರು ಯಾವ ಆಯ್ಕೆ ಮಾಡಿದ್ದಾರೆ ಎಂಬುದರ ವಿವರ ದೊರೆಯುತ್ತದೆ. ಕೈತಪ್ಪಿನಿಂದ ತಪ್ಪು ಆಯ್ಕೆ ಮಾಡಿದರೆ ಅದರ ಮೇಲೆ ಮತ್ತೆ ಕ್ಲಿಕ್ ಮಾಡುವ ಮೂಲಕ ಮತ ವಾಪಸ್ ಪಡೆಯಬಹುದಾಗಿದೆ.

ಕೊರತೆ

ಇದರಲ್ಲಿ ಬಹುಮುಖ್ಯ ಕೊರತೆಯೆಂದರೆ ಮತ ಚಲಾಯಿಸುವವರು ಒಂದು ಆಯ್ಕೆ ಮಾತ್ರವಲ್ಲದೆ ಎಷ್ಟು ಬೇಕಾದರೂ ಆಯ್ಕೆ ಮಾಡಿಕೊಳ್ಳುವ ಅವಕಾಶವಿದೆ. ಇದರಿಂದಾಗಿ ಹೌದು ಮತ್ತು ಇಲ್ಲ ಎಂಬ ಎರಡೂ ಆಯ್ಕೆಯನ್ನು ಮಾಡಿಕೊಳ್ಳುವುದರಿಂದ ಅವರ ನಿರ್ಧಿಷ್ಟ ಮತ ಯಾವುದಕ್ಕೆ ಎಂಬುದಕ್ಕೆ ತಿಳಿಯುವುದು ಕಷ್ಟ.

ಒಟ್ಟಿನಲ್ಲಿ ವಾಟ್ಸಾಪ್‌ನ ಈ ಪೋಲ್ ಅವಕಾಶವನ್ನು ಜನರು ಹೇಗೆ ಬಳಸಿಕೊಳ್ಳುತ್ತಾರೆ ಎಂಬುದು ಕುತೂಹಲಕಾರಿಯಾಗಿದೆ.

ಇದನ್ನೂ ಓದಿ: ವಾಟ್ಸ್‌ಅಪ್‌‌ ಕಮ್ಯುನಿಟಿ’ ರಚಿಸುವುದು ಹೇಗೆ? ಏನಿದರ ವಿಶೇಷ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು ಬಿಸಿಯೂಟ ಯೋಜನೆಯಿಂದ ಹೊರಕ್ಕೆ : ಸಂಸತ್ತಿಗೆ ತಿಳಿಸಿದ ಕೇಂದ್ರ

ಕಳೆದ ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು 'ಪ್ರಧಾನಮಂತ್ರಿ ಪೋಷಣ್ ಯೋಜನೆ'ಯಿಂದ (ಮಧ್ಯಾಹ್ನದ ಬಿಸಿಯೂಟ) ಹೊರ ಬಿದ್ದಿವೆ. 2020-21ರಲ್ಲಿ 11.19 ಲಕ್ಷ ಇದ್ದ ಶಾಲೆಗಳ ಸಂಖ್ಯೆ 2024-25ರಲ್ಲಿ 10.35ಕ್ಕೆ ಕುಸಿದಿದೆ ಎಂದು...

ಭೀಮಾ ಕೋರೆಗಾಂವ್ ಪ್ರಕರಣ: ಗೌತಮ್ ನವಲಖಾಗೆ ಜಾಮೀನಿನ ಮೇಲೆ ದೆಹಲಿಗೆ ತೆರಳಲು ಅನುಮತಿ ನೀಡಿದ ಬಾಂಬೆ ಹೈಕೋರ್ಟ್

ಭೀಮಾ ಕೋರೆಗಾಂವ್ ಯುಎಪಿಎ ಪ್ರಕರಣದಲ್ಲಿ ಜಾಮೀನಿನ ಮೇಲೆ ಹೊರಗಿರುವ ಮಾನವ ಹಕ್ಕುಗಳ ಕಾರ್ಯಕರ್ತ ಗೌತಮ್ ನವಲಖಾ ಅವರಿಗೆ ಪ್ರಕರಣದ ವಿಚಾರಣೆ ನಡೆಯುತ್ತಿರುವಾಗ ನವದೆಹಲಿಯಲ್ಲಿ ವಾಸಿಸಲು ಬಾಂಬೆ ಹೈಕೋರ್ಟ್ ಬುಧವಾರ ಅನುಮತಿ ನೀಡಿದೆ. ಆದಾಗಲೂ, ಮಾನವ...

ಕಾರವಾರ ನೌಕಾ ಪ್ರದೇಶದ ಸುತ್ತಮುತ್ತ ಆತಂಕ ಮೂಡಿಸಿದ ‘ಸೀಗಲ್‌’ ಪಕ್ಷಿ; ಚೀನಾ ನಿರ್ಮಿತ ಜಿಪಿಎಸ್ ಸಾಧನ ಪತ್ತೆ

ಉತ್ತರ ಕನ್ನಡ ಜಿಲ್ಲೆಯ ಕಾರವಾರದ ಕರಾವಳಿ ಪ್ರದೇಶದ ಬಳಿ, ಸೂಕ್ಷ್ಮ ನೌಕಾ ವಲಯದ ಬಳಿ ಚೀನಾ ನಿರ್ಮಿತ ಜಿಪಿಎಸ್ ಟ್ರ್ಯಾಕಿಂಗ್ ಸಾಧನವೊಂದು 'ಸೀಗಲ್' (ಸಮುದ್ರಹಕ್ಕಿ) ಪಕ್ಷಿಗೆ ಅಳವಡಿಸಿರುವುದು ಕಂಡುಬಂದ ನಂತರ ಭದ್ರತಾ ಸಂಸ್ಥೆಗಳು...

ಅಣು ಶಕ್ತಿಯ ಖಾಸಗೀಕರಣ : ‘ಶಾಂತಿ’ ಮಸೂದೆಗೆ ಲೋಕಸಭೆ ಅಸ್ತು

ಭಾರತದ ಅಣು ವಿದ್ಯುತ್ ಕ್ಷೇತ್ರದಲ್ಲಿ ಖಾಸಗಿ ವಲಯದ ಪ್ರವೇಶಕ್ಕೆ ದಾರಿ ಮಾಡಿಕೊಡುವ, 'ಭಾರತದ ಪ್ರಗತಿಗಾಗಿ ಅಣು ಶಕ್ತಿಯ ಸುಸ್ಥಿರ ಉತ್ಪಾದನೆ (ಎಸ್‌ಎಚ್‌ಎಎನ್‌ಟಿಐ– ಶಾಂತಿ ಮಸೂದೆ) ಮಸೂದೆಯನ್ನು ಲೋಕಸಭೆ ಬುಧವಾರ (ಡಿ.17) ಅಂಗೀಕರಿಸಿತು. ವಿಪಕ್ಷಗಳ ಸದಸ್ಯರು...

ಮಾದಕ ದ್ರವ್ಯ ಸೇವನೆ, ಲೈಂಗಿಕ ಕಿರುಕುಳಕ್ಕೆ 3 ಲಕ್ಷ ರೂ. ದಂಡ ವಸೂಲಿ: ಬೆಂಗಳೂರಿನ ಅಪಾರ್ಟ್‌ಮೆಂಟ್ ಅಸೋಸಿಯೇಷನ್ ​​ವಿರುದ್ಧ ಪ್ರಕರಣ ದಾಖಲು

ಬೆಂಗಳೂರು: ಪಶ್ಚಿಮ ಬೆಂಗಳೂರಿನ ದೊಡ್ಡಬೆಲೆ ಬಳಿಯ ವಸತಿ ಸಂಕೀರ್ಣವೊಂದರ ಅಪಾರ್ಟ್‌ಮೆಂಟ್ ಮಾಲೀಕರ ಸಂಘದ ವಿರುದ್ಧ ಅಪರಾಧ ಚಟುವಟಿಕೆಗಳಲ್ಲಿ ತೊಡಗಿರುವ ನಿವಾಸಿಗಳಿಂದ ದಂಡ ವಸೂಲಿ ಮಾಡಿದ ಮತ್ತು ಅಪರಾಧಗಳನ್ನು ಮುಚ್ಚಿಟ್ಟ ಆರೋಪದ ಮೇಲೆ ಕುಂಬಳಗೋಡು...

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...